Tag: ವೇತನ

  • ಸುಂದರ್ ಪಿಚೈಗೆ 1,704 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ- ಜನವರಿಯಿಂದ ಹೆಚ್ಚಾಗಲಿದೆ ಸಂಬಳ

    ಸುಂದರ್ ಪಿಚೈಗೆ 1,704 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ- ಜನವರಿಯಿಂದ ಹೆಚ್ಚಾಗಲಿದೆ ಸಂಬಳ

    – ಹಾಗಾದರೆ ಸುಂದರ್ ಪಿಚೈ ಸಂಬಳ ಎಷ್ಟು?

    ನವದೆಹಲಿ: ಇತ್ತೀಚೆಗಷ್ಟೇ ಗೂಗಲ್ ಮಾತೃ ಸಂಸ್ಥೆಗೆ ಸಿಇಒ ಆಗಿ ಆಯ್ಕೆಯಾಗಿರುವ ಗೂಗಲ್ ಸಿಇಒ ಸಹ ಆಗಿರುವ ಸುಂದರ್ ಪಿಚೈ ಅವರ ವೇತನದಲ್ಲಿ ಭಾರೀ ಹೆಚ್ಚಳವಾಗಿದ್ದು, ಕಂಪನಿ ವಿಶೇಷ ಪ್ಯಾಕೇಜ್ ಘೋಷಿಸಿದೆ.

    ಈ ವಿಶೇಷ ವೇತನ ಪ್ಯಾಕೇಜ್ 2020ರಿಂದ ಅನ್ವಯವಾಗಲಿದ್ದು, ಪ್ರಸ್ತುತ ಸುಂದರ್ ಪಿಚೈ ಅವರಿಗಿರುವ ವಾರ್ಷಿಕ 14.22 ಕೋಟಿ ರೂ.(2 ಮಿಲಿಯನ್ ಡಾಲರ್) ಸಂಬಳವಲ್ಲದೆ, ಹೆಚ್ಚುವರಿಯಾಗಿ (ಸ್ಟಾಕ್ ಅವಾರ್ಡ್) 1,704 ಕೋಟಿ ರೂ.(240 ಮಿಲಿಯನ್ ಡಾಲರ್)ಗಳ ಪ್ಯಾಕೇಜ್‍ನ್ನು ಕಂಪನಿ ಘೋಷಿಸಿದೆ. ಇದರಲ್ಲಿ 640 ಕೋಟಿ ರೂ.(90 ಮಿಲಿಯನ್ ಡಾಲರ್)ಗಳು ಅಲ್ಫಾಬೆಟ್ ಕಂಪನಿಯ ಕಾರ್ಯಕ್ಷಮತೆಗೆ ಸಂಬಂಧಿಸಿದ್ದಾಗಿದೆ.

    ಜನವರಿ 1ರಿಂದ ಸುಂದರ್ ಪಿಚೈ ಅವರ ಸಂಬಳ ಗಣನೀಯವಾಗಿ ಹೆಚ್ಚಳವಾಗಲಿದ್ದು, 24 ಕೋಟಿ ಡಾಲರ್ ನಲ್ಲಿ 12 ಕೋಟಿ ಡಾಲರ್ ಸ್ಟಾಕ್ ಅವಾರ್ಡ್ ತ್ರೈಮಾಸಿಕ ಕಂತಿಗಳಲ್ಲಿ ಸಿಗಲಿದೆ. ಉಳಿದಿದ್ದು ಪಿಚೈ ತಮಗೆ ನೀಡಿರುವ ಟಾರ್ಗೆಟ್ ಪೂರ್ಣಗೊಳಿಸಿದಾಗ ಸಿಗಲಿದೆ. ಗೂಗಲ್ ಮಾತೃ ಸಂಸ್ಥೆ ಆಲ್ಫಾಬೆಟ್ ಹಾಗೂ ಗೂಗಲ್ ಸಂಸ್ಥೆಯ ಸಿಇಒ ಆಗಿದ್ದರಿಂದ ಸಂಬಳ ಹೆಚ್ಚಳ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

    2018ರಲ್ಲಿ ಸುಂದರ್ ಪಿಚೈ ಒಟ್ಟು 19 ಲಕ್ಷ ಡಾಲರ್ (135 ಕೋಟಿ ರೂ.) ಭತ್ಯೆ ಒಳಗೊಂಡಂತೆ ಸಂಬಳವನ್ನು ಪಡೆದುಕೊಂಡಿದ್ದರು. ಇದರಲ್ಲಿ 6.5 ಲಕ್ಷ ಡಾಲರ್ (4.6 ಕೋಟಿ ರೂ.) ಬೇಸಿಕ್ ಸ್ಯಾಲರಿ ಇತ್ತು. 2018ರಲ್ಲಿ ಸ್ಟಾಕ್ ಅವಾರ್ಡ್ ತೆಗೆದುಕೊಂಡಿರಲಿಲ್ಲ. ಸದ್ಯ ಸಿಗುತ್ತಿರುವ ಸಂಬಳವೇ ಹೆಚ್ಚಿದೆ, ಅದನ್ನು ತೆಗೆದುಕೊಂಡು ಏನು ಮಾಡಲಿ ಎಂದಿದ್ದರು. 1704 ಕೋಟಿ ರೂ. ಮೌಲ್ಯದ ಸ್ಟಾಕ್ ಅವಾರ್ಡ್ ಇದುವರೆಗಿನ ಹೆಚ್ಚಿನ ಮೊತ್ತದಾಗಿದೆ.

    ಇತ್ತೀಚೆಗಷ್ಟೇ ಭಾರತ ಮೂಲದ ಸುಂದರ್ ಪಿಚೈ ಜಾಗತಿಕ ಐಟಿ ದಿಗ್ಗಜ ಗೂಗಲ್ ಕಂಪನಿಯ ಮಾತೃ ಸಂಸ್ಥೆ ಅಲ್ಫಾಬೆಟ್ ಮುಖ್ಯಸ್ಥರಾಗಿ ನೇಮಕವಾಗಿದ್ದರು. ಗೂಗಲ್ ಸಹ ಸಂಸ್ಥಾಪಕರಾದ ಲ್ಯಾರಿ ಪೇಜ್ ಮತ್ತು ಸರ್ಗೆ ಬಿನ್ ಅಲ್ಫಾಬೆಟ್‍ನಿಂದ ಹೊರನಡೆದಿದ್ದು, ಆ ಸಂಸ್ಥೆಯನ್ನು ಇನ್ನು ಮುಂದೆ ಸುಂದರ್ ಪಿಚೈ ನೋಡಿಕೊಳ್ಳಲಿದ್ದಾರೆ. ಸರ್ಜಿ ಬ್ರಿನ್ ಮತ್ತು ಲ್ಯಾರಿ ಪೇಜ್ ಮಂಗಳವಾರ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

    ಐದು ವರ್ಷಗಳ ಹಿಂದೆ 2005ರ ಅಕ್ಟೋಬರ್ 2 ರಂದು ಗೂಗಲ್, ಕ್ಯಾಲಿಕೋ, ಗೂಗಲ್ ಫೈಬರ್, ಡೀಪ್ ಮೈಂಡ್ ಸೇರಿದಂತೆ ಎಲ್ಲವನ್ನೂ ಒಗ್ಗೂಡಿಸಲು ಗೂಗಲ್ ಮಾತೃ ಸಂಸ್ಥೆ ಅಲ್ಫಾಬೆಟ್ ಸ್ಥಾಪಿಸಿ ಪೇಜ್ ಮತ್ತು ಬಿನ್ ಪ್ರಮುಖ ಸ್ಥಾನಗಳನ್ನು ಹೊಂದಿದ್ದರು.

    ಕಂಪನಿಯ ಮುಖ್ಯಸ್ಥರನ್ನಾಗಿ ಸುಂದರ್ ಪಿಚೈ ಅವರನ್ನು ನೇಮಕ ಮಾಡುವುದಕ್ಕೂ ಮುನ್ನ ಲ್ಯಾರಿ ಪೇಜ್ ಮತ್ತು ಸರ್ಗೆ ಬಿನ್ ಈ ಕುರಿತು ಪತ್ರ ಬರೆದು, ಇನ್ನು ಮುಂದೆ ಗೂಗಲ್ ಮತ್ತು ಅಲ್ಫಾಬೆಟ್ ಕಂಪನಿಗೆ ಇಬ್ಬರು ಸಿಇಒಗಳು ಇರುವುದಿಲ್ಲ. ಎರಡೂ ಕಂಪನಿಯನ್ನು ಒಬ್ಬರೇ ನೋಡಿಕೊಳ್ಳಲಿದ್ದಾರೆ. ಸುಂದರ್ ನಮ್ಮ ಜೊತೆ 15 ವರ್ಷಗಳಿಂದ ಇದ್ದು, ಈತ ತಂತ್ರಜ್ಞಾನವನ್ನು ಪ್ರೀತಿಸುವ ವ್ಯಕ್ತಿಯಾಗಿದ್ದಾನೆ. ಆತನ ಮೇಲೆ ನಮಗೆ ಪೂರ್ಣ ನಂಬಿಕೆಯಿದೆ. ಈ ಸಂಸ್ಥೆಯನ್ನು ಮುನ್ನಡೆಸಲು ಸುಂದರ್ ಅವರಿಗಿಂತ ಸಮರ್ಥ ವ್ಯಕ್ತಿ ಬೇರೆ ಇಲ್ಲ. ತಂತ್ರಜ್ಞಾನ, ಉದ್ಯಮ, ಭವಿಷ್ಯದ ಯೋಜನೆ ಕುರಿತು ಅವರಿಗೆ ಸ್ಪಷ್ಟವಾದ ಜ್ಞಾನವಿದೆ ಎಂದು ಹೇಳಿ ಸುಂದರ್ ಅವರನ್ನು ಹೊಗಳಿದ್ದರು.

    ಯಾರು ಸುಂದರ್ ಪಿಚೈ?
    ಸುಂದರ್ ಪಿಚೈ ಭಾರತೀಯ ಮೂಲದ ಅಮೆರಿಕದ ಕಂಪ್ಯೂಟರ್ ಎಂಜಿನಿಯರ್. ಸುಂದರ್ ಇಲ್ಲಿಯವರಗೆ ಗೂಗಲ್ ಕ್ರೋಮ್, ಆಂಡ್ರಾಯ್ಡ್ ಅಪ್ಲಿಕೇಶನ್ ಮತ್ತು ಗೂಗಲ್ ಡ್ರೈವ್ ವಿಭಾಗದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದರು. 2004ರಲ್ಲಿ ಗೂಗಲ್‍ಗೆ ಸೇರಿದ ಸುಂದರ್, ಖರಗ್‍ಪುರ್ ಐಐಟಿಯಿಂದ ಬಿ.ಟೆಕ್ ಪದವಿ, ಸ್ಟಾನ್‍ಫೋರ್ಡ್ ವಿಶ್ವವಿದ್ಯಾಲಯದಿಂದ ಎಂಎಸ್ ಪದವಿಗಳಿಸಿದ್ದಾರೆ. ಮೈಕ್ರೋ ಸಾಫ್ಟ್ ಸಿಇಒ ಆಗಿ ಸತ್ಯ ನಾಡೆಲ್ಲಾ ನೇಮಕವಾದ ಬಳಿಕ ಆಗಸ್ಟ್ 10, 2015ರಂದು ಪಿಚೈ ಅವರನ್ನು ಗೂಗಲ್ ಸಿಇಒ ಆಗಿ ನೇಮಕಗೊಳಿಸಿತ್ತು. ಸುಂದರ್ ಗೂಗಲ್ ಸೇರಿದ್ದು 2004ರ ಏಪ್ರಿಲ್ 1ರಂದು. ಈ ದಿನವೇ ಗೂಗಲ್ ಜಿಮೇಲ್ ಸೇವೆಯನ್ನು ಆರಂಭಿಸಿತ್ತು.

  • ವೇತನ ಹೆಚ್ಚಳದ ಕನಸು ಕಂಡಿದ್ದ ಪೊಲೀಸರ ಆಸೆಗೆ ತಣ್ಣೀರು

    ವೇತನ ಹೆಚ್ಚಳದ ಕನಸು ಕಂಡಿದ್ದ ಪೊಲೀಸರ ಆಸೆಗೆ ತಣ್ಣೀರು

    – ಔರಾದ್ಕರ್ ವರದಿ ಜಾರಿಗೆ ಮತ್ತೆ ಕಣ್ಣಾಮುಚ್ಚಾಲೆ

    ಬೆಂಗಳೂರು: ವೇತನ ಹೆಚ್ಚಳದ ಕನಸು ಕಂಡಿದ್ದ ರಾಜ್ಯ ಪೊಲೀಸರ ಆಸೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ತಣ್ಣೀರು ಎರಚಿದೆ.

    ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ನಾಡಹಬ್ಬ ದಸರಾ ವೇಳೆ ರಾಜ್ಯ ಪೊಲೀಸರಿಗೆ ವಿಶೇಷ ಉಡುಗೊರೆ ನೀಡಲಾಗುತ್ತಿದೆ. ಔರಾದ್ಕರ್ ಸಮಿತಿ ವರದಿಯನ್ನು ಮುಂದಿನ ತಿಂಗಳಿಂದ ಅನುಷ್ಠಾನಕ್ಕೆ ತರಲಾಗುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಈ ವಿಚಾರವಾಗಿ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದರು.

    ಗೃಹ ಸಚಿವರ ಹೇಳಿಕೆ ನಿಟ್ಟಿನಲ್ಲಿ ಮೂರು ದಿನಗಳ ಹಿಂದೆಯಷ್ಟೇ ವೇತನ ಪರಿಷ್ಕರಣೆಗೆ ಆದೇಶಿಸಿ ಡಿಜಿ ಐಜಿಪಿ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ಈಗ ವೇತನ ಪರಿಷ್ಕರಣೆಗೆ ಆದೇಶದ ಸುತ್ತೋಲೆಗೆ ತಡೆ ನೀಡಿ ಆಡಳಿತ ವಿಭಾಗದ ಎಡಿಜಿಪಿ ಸಲೀಂ ಅವರು ಆದೇಶ ಪ್ರಕಟಿಸಿದ್ದಾರೆ. ವೇತನ ಪರಿಷ್ಕರಣೆ ಸಂಬಂಧ ಸರ್ಕಾರದಿಂದ ಆದೇಶ ಬರುವರೆಗೂ ಯಾವುದೇ ಕ್ರಮ ಕೈಗೊಳ್ಳದಿರಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಮೂಲಕ ಪೊಲೀಸರಿಗೆ ಸರ್ಕಾರ ನಿರಾಸೆ ಮಾಡಿದೆ. ಆರ್ಥಿಕ ಇಲಾಖೆ ಕೊಕ್ಕೆ ಹಾಕಿದ ಹಿನ್ನೆಲೆಯಲ್ಲಿ ಈ ಆದೇಶ ಪ್ರಕಟವಾಗಿದೆ ಎನ್ನಲಾಗುತ್ತಿದೆ.

    ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ವೇಳೆ ಸಾವಿರಾರು ಭಕ್ತರು ದರ್ಶನಕ್ಕೆ ಆಗಮಿಸಿದ್ದರು. ಆಗ ಪೊಲೀಸರು ಭಾರೀ ಭದ್ರತೆ ಒದಗಿಸಿರುವ ಜೊತೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿದ್ದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‍ನಲ್ಲಿ ಔರಾದ್ಕರ್ ವರದಿ ಜಾರಿಗೆ ತರುವುದಾಗಿ ಭರವಸೆ ನೀಡಿದ್ದರು.

    ದೋಸ್ತಿ ಸರ್ಕಾರದ ವಿಶ್ವಾಸಮತಯಾಚನೆಗೂ ಮುನ್ನ ಅಂದಿನ ಸಿಎಂ ಕುಮಾರಸ್ವಾಮಿ ಅವರು ರಾಘವೇಂದ್ರ ಔರಾದ್ಕರ್ ಶಿಫಾರಸಿನಂತೆ ವೇತನ ಹೆಚ್ಚಳಕ್ಕೆ ಕುಮಾರಸ್ವಾಮಿ ಅಧಿಸೂಚನೆ ಹೊರಡಿಸಿದ್ದರು. ಕಳೆದ ಆಗಸ್ಟ್ 1ರಿಂದಲೇ ಅನ್ವಯವಾಗುವಂತೆ ವೇತನ ಹೆಚ್ಚಳ ಮಾಡಬೇಕು ಎಂದು ಆದೇಶ ಹೊರಡಿಸಿದ್ದರು. ಸಿಎಂ ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ ಬಳಿಕ ದೋಸ್ತಿ ಸರ್ಕಾರ ಕೊನೆ ಕ್ಷಣದಲ್ಲಿ ಹೊರಡಿಸಿದ್ದ ಎಲ್ಲ ಆದೇಶಗಳನ್ನು ರದ್ದು ಪಡಿಸಿತ್ತು. ಹೀಗಾಗಿ ಪೊಲೀಸರಿಗೆ ವೇತನ ಹೆಚ್ಚಳವಾಗಿರಲಿಲ್ಲ.

    ಎಷ್ಟು ಏರಿಕೆಯಾಗಬಹುದು?
    ಔರಾದ್ಕರ್ ವರದಿ ಅನ್ವಯ ನೂತನ ವೇತನ ಪರಿಷ್ಕಣೆಯಿಂದ ಪೊಲೀಸ್ ರಿಸರ್ವ್ ಕಾನ್‍ಸ್ಟೆಬಲ್ 23,500ರಿಂದ 47,650 ರೂ. ಆಗಲಿದೆ. ಹೆಡ್ ಕಾನ್‍ಸ್ಟೇಬಲ್‍ಗೆ 27,650ದಿಂದ 52,650 ರೂ. ಏರಿಕೆಯಾಗಲಿದೆ. ಅಸಿಸ್ಟೆಂಟ್ ಸಬ್ ಇನ್ಸ್‍ಪೆಕ್ಟರ್ ಅವರಿಗೆ 30,350 ದಿಂದ 58,250 ರೂ. ವೇತನ ಹೆಚ್ಚಲಿದೆ. ಇನ್ಸ್‍ಪೆಕ್ಟರ್ಗೆ 43,100ರಿಂದ 83,900 ರೂ., ಎಸ್‍ಪಿ (ಐಪಿಎಸ್ ಹೊರತು ಪಡಿಸಿ) 70,850ದಿಂದ 1,07,100 ರೂ. ಏರಿಕೆ ಆಗಲಿದೆ. ಈ ನೂತನ ವೇತನವು ಆಗಸ್ಟ್ 1 ರಿಂದ ಅನ್ವಯವಾಗಲಿದೆ ಎನ್ನಲಾಗಿದೆ.

    ಈಗೀನ ಪೇ ಸ್ಕೇಲ್ ಪ್ರಕಾರ ಪೊಲೀಸ್ ಕಾನ್‍ಸ್ಟೇಬಲ್, ರಿಸರ್ವ್ ಕಾನ್ಸ್ ಟೇಬಲ್‍ಗೆ 12,500ದಿಂದ 24,000 ರೂ., ಹೆಡ್ ಕಾನ್ಸ್‍ಸ್ಟೇಬಲ್‍ಗೆ 14,559ರಿಂದ 26,700 ರೂ., ಅಸಿಸ್ಟೆಂಟ್ ಸಬ್ ಇನ್ಸ್‍ಪೆಕ್ಟರ್ 16,000ದಿಂದ 29,600 ರೂ., ಇನ್ಸ್‍ಪೆಕ್ಟರ್ 22,800ರಿಂದ 43,200 ರೂ., ಹಾಗೂ ಎಸ್‍ಪಿ (ಐಪಿಎಸ್ ಹೊರತು ಪಡಿಸಿ) 38,100-55,200 ರೂ. ಇದೆ.

  • ದೇಶ ರಕ್ಷಣೆಗೈದವರಿಗೆ ಮೊದಲ ಗೌರವ – ಹುತಾತ್ಮ ಯೋಧರ ಮಕ್ಕಳ ವಿದ್ಯಾರ್ಥಿ ವೇತನ ಏರಿಕೆ

    ದೇಶ ರಕ್ಷಣೆಗೈದವರಿಗೆ ಮೊದಲ ಗೌರವ – ಹುತಾತ್ಮ ಯೋಧರ ಮಕ್ಕಳ ವಿದ್ಯಾರ್ಥಿ ವೇತನ ಏರಿಕೆ

    ನವದೆಹಲಿ: ದೇಶ ರಕ್ಷಣೆಗೈದವರಿಗೆ ಪ್ರಧಾನಿ ಮೋದಿ ಸರ್ಕಾರ ತನ್ನ ಮೊದಲ ಕ್ಯಾಬಿನೆಟ್‍ನಲ್ಲಿ ಗೌರವ ಸಲ್ಲಿಸಿದೆ. ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆ(ಪಿಎಂಎಸ್‍ಎಸ್) ಮೊತ್ತವನ್ನು ಏರಿಕೆ ಮಾಡಲಾಗಿದೆ.

    ಎನ್‍ಡಿಎ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ಇಂದು ನಡೆದಿದ್ದು, ರಾಷ್ಟ್ರೀಯ ರಕ್ಷಣಾ ನಿಧಿಯಿಂದ ನೀಡಲಾಗುತ್ತಿದ್ದ ಪಿಎಂಎಸ್‍ಎಸ್ ಮೊತ್ತವನ್ನು ಏರಿಕೆ ಮಾಡಿರುವುದಾಗಿ ಸರ್ಕಾರ ತಿಳಿಸಿದೆ. ನಮ್ಮ ದೇಶವನ್ನು ಯಾರು ರಕ್ಷಣೆ ಮಾಡುತ್ತಾರೋ ಅವರಿಗೆ ಗೌರವ ಸಲ್ಲಿಸಲು ಮೊದಲ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

    ಇಲ್ಲಿಯವರೆಗೆ ಈ ವಿದ್ಯಾರ್ಥಿವೇತನ ಸೇನೆಯಲ್ಲಿ ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಯೋಧರ ಮಕ್ಕಳಿಗೆ ಮಾತ್ರ ಲಭ್ಯವಾಗುತಿತ್ತು. ಈಗ ಈ ವಿದ್ಯಾರ್ಥಿ ವೇತನವನ್ನು ರಾಜ್ಯಗಳಿಗೆ ವಿಸ್ತರಿಸಿದ್ದಾರೆ. ರಾಜ್ಯದಲ್ಲಿರುವ ಪೊಲೀಸರಿಗೆ ವಿಸ್ತರಿಸಲಾಗಿದ್ದು, ನಕ್ಸಲ್/ಉಗ್ರರ ಕಾರ್ಯಾಚರಣೆ ವೇಳೆ ಮೃತಪಟ್ಟ ಪೊಲೀಸರ ಮಕ್ಕಳಿಗೆ ಇನ್ನು ಮುಂದೆ ಈ ವಿದ್ಯಾರ್ಥಿವೇತನ ಸಿಗಲಿದೆ.

    ಎಷ್ಟು ಏರಿಕೆ?
    ಹುಡುಗರಿಗೆ ಶೇ.25 ರಷ್ಟು ಏರಿಕೆ ಆಗಿದ್ದರೆ ಹುಡುಗಿಯರಿಗೆ ಮೊತ್ತ ಶೇ.33 ರಷ್ಟು ಏರಿಕೆ ಮಾಡಲಾಗಿದೆ. ಇಲ್ಲಿಯವರಗೆ ಹುಡುಗರಿಗೆ ಪ್ರತಿ ತಿಂಗಳು 2 ಸಾವಿರ ರೂ. ವಿದ್ಯಾರ್ಥಿ ವೇತನ ಸಿಗುತ್ತಿದ್ದರೆ ಈಗ ಈ ಮೊತ್ತ 2,500ಕ್ಕೆ ಏರಿಕೆಯಾಗಿದೆ. ಹುಡುಗಿಯರಿಗೆ ಈ ಮೊದಲು 2,250 ರೂ. ವಿದ್ಯಾರ್ಥಿ ವೇತನ ಸಿಕ್ಕಿದ್ದರೆ ಈಗ 3,000 ರೂ.ಗೆ ಏರಿಕೆಯಾಗಿದೆ.

    ಈ ವಿದ್ಯಾರ್ಥಿವೇತನ ಮೆಡಿಕಲ್, ಡೆಂಟಲ್, ಪಶುವೈದ್ಯ, ಎಂಜಿನಿಯರಿಂಗ್, ಎಂಬಿಎ, ಎಂಸಿಎ ಮತ್ತು ಯುಜಿಸಿ, ಎಐಸಿಟಿಇ ಅಡಿ ಬರುವ ಪದವಿಗಳಿಗೆ ಅನ್ವಯವಾಗುತ್ತದೆ.

    ಮುಂಬೈ ದಾಳಿಯಲ್ಲಿ ಹುತಾತ್ಮರಾಗಿದ್ದ ಮುಂಬೈ ಪೊಲೀಸ್ ಅಧಿಕಾರಿ ತುಕಾರಂ ಒಂಬಳೆಯವರ ಮಕ್ಕಳು ಈ ವಿದ್ಯಾರ್ಥಿ ವೇತನದಿಂದ ವಂಚಿತರಾಗಿದ್ದರು.

  • ನಗರಸಭೆ ವಿರುದ್ಧ ಪೌರಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

    ನಗರಸಭೆ ವಿರುದ್ಧ ಪೌರಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

    ಗದಗ: ಸರಿಯಾಗಿ ಸಂಬಳ ನೀಡದ ಹಿನ್ನೆಲೆಯಲ್ಲಿ ವೇತನ ಜಾರಿಗಾಗಿ ಆಗ್ರಹಿಸಿ ಪೌರಕಾರ್ಮಿಕರು ಗದಗ-ಬೆಟಗೇರಿ ನಗರಸಭೆಯ ಮುಂಭಾಗ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಾರೆ.

    ನಗರಸಭೆಯ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ 7 ತಿಂಗಳು ಹಾಗೂ ಖಾಯಂ ನೌಕರರಿಗೆ 3 ತಿಂಗಳಿಂದ ವೇತನ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ವೇತನ ನೀಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

    ಸರಿಯಾದ ಸಂಬಳ ಸಿಗದ ಕಾರಣಕ್ಕೆ ತಮ್ಮ ಕುಟುಂಬಗಳು ನಿತ್ಯ ಊಟಕ್ಕೂ ಪರಿತಪಿಸುವಂತಾಗಿದೆ. ಆದರೆ ನಗರಸಭೆ ಅಧಿಕಾರಿಗಳಿಗೆ ಮಾತ್ರ ಕಾರ್ಮಿಕರ ಕಷ್ಟ ಕಾಣುತ್ತಿಲ್ಲ. ನಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ನಗರಸಭೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಪೌರ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು.

    ನಗರಸಭೆ ಗೇಟ್ ಬಂದ್ ಮಾಡಿ ಕಚೇರಿ ಎದುರು ವಾಹನಗಳನ್ನು ಇಟ್ಟು ಕಾರ್ಮಿಕರು ಅರೆಬೆತ್ತಲೆ ಸ್ಥಿತಿಯಲ್ಲಿ ಪ್ರತಿಭಟನೆ ನಡೆಸಿದರು. ವೇತನ ನೀಡಿ, ಕಾರ್ಮಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕೊಡಿ ಎಂದು ಆಗ್ರಹಿಸಿದರು. ಜೊತೆಗೆ ಕಷ್ಟ ಪಟ್ಟು ಮಾಡುವ ಕೆಲಸಕ್ಕೆ ನಮಗೆ ನೀಡಬೇಕಾದ ವೇತನ ಜಾರಿಗೊಳಿಸಲು ಅಧಿಕಾರಿಗಳು ಲಂಚದ ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದರು.

  • ತಾಯಿಯ ವೇತನ ಕೇಳಲು ಬಂದಿದ್ದ ಮಗನಿಗೆ ಬೆಂಕಿ ಇಟ್ಟು ಕೊಂದ್ರು!

    ತಾಯಿಯ ವೇತನ ಕೇಳಲು ಬಂದಿದ್ದ ಮಗನಿಗೆ ಬೆಂಕಿ ಇಟ್ಟು ಕೊಂದ್ರು!

    ರಾಂಚಿ: ತಾಯಿಯ ವೇತನ ಕೇಳಲು ಬಂದಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಅಮಾನವೀಯ ಘಟನೆ ಜಾರ್ಖಂಡ್‍ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ.

    ಪನ್ನೂಲಾಲ್ ಸಾವೋ (38) ಕೊಲೆಯಾದ ವ್ಯಕ್ತಿ. ರವೀಂದ್ರ ಕುಮಾರ್ ಮೆಹ್ತಾ ಕೊಲೆ ಮಾಡಿದ ಆರೋಪಿ. ಡುಮರಾನ್ ಗ್ರಾಮದಲ್ಲಿ ಗುರುವಾರ ಘಟನೆ ನಡೆದಿದೆ.

    ಆರೋಪಿ ರವೀಂದ್ರ ಕುಮಾರ್ ಮೆಹ್ತಾ ಒಡೆತನದ ಸಿಜುವಾ-ಹದಾರಿ ಕಲ್ಲಿನ ಕ್ರಷರ್ ಘಟಕದಲ್ಲಿ ಪನ್ನೂಲಾಲ್ ತಾಯಿ ಕೆಲಸ ಮಾಡುತ್ತಿದ್ದಳು. ಆದರೆ ಕೆಲ ದಿನಗಳಿಂದ ಕೂಲಿ ನೀಡಿರಲಿಲ್ಲ. ಹೀಗಾಗಿ ಪನ್ನೂಲಾಲ್ ಕೂಲಿಯ ಹಣವನ್ನು ಕೊಡುವಂತೆ ಕೇಳಲು ಹೋಗಿದ್ದ.

    ರವೀಂದ್ರ ಹಾಗೂ ಪನ್ನೂಲಾಲ್ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಕೋಪಗೊಂಡ ರವೀಂದ್ರ, ಪನ್ನೂಲಾಲ್ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಆತನನ್ನು ಸಮೀಪದ ಬೇಲಿಯಲ್ಲಿ ಎಸೆದಿದ್ದಾರೆ ಎಂದು ಹಜಾರಿಬಾಗ್‍ನ ಗ್ರಾಮೀಣ ಪೊಲೀಸ್ ಉಪ ಅಧೀಕ್ಷಕ ವಿವೇಕಾನಂದ್ ತಿಳಿಸಿದ್ದಾರೆ.

    ಗಂಭೀರವಾಗಿ ಗಾಯಗೊಂಡು ನರಳುತ್ತಿದ್ದ ಪನ್ನೂಲಾಲ್ ನೋಡಿದ ಕೆಲ ಸ್ಥಳೀಯರು, ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪನ್ನೂಲಾಲ್ ಮೃತಪಟ್ಟಿದ್ದಾನೆ.

    ಮೃತನ ಸಂಬಂಧಿಕರು ನೀಡಿದ ದೂರಿನಲ್ಲಿ ರವೀಂದ್ರ ಸೇರಿದಂತೆ ಮೂವರು ಪನ್ನೂಲಾಲ್‍ನನ್ನು ಕಟ್ಟಿ ಹಾಕಿ ಬಳಿಕ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಹೀಗಾಗಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಹುತಾತ್ಮ ಯೋಧನ ಕುಟುಂಬಕ್ಕೆ ಒಂದು ತಿಂಗಳ ವೇತನ ನೀಡಿದ ಪಿಎಸ್‍ಐ

    ಹುತಾತ್ಮ ಯೋಧನ ಕುಟುಂಬಕ್ಕೆ ಒಂದು ತಿಂಗಳ ವೇತನ ನೀಡಿದ ಪಿಎಸ್‍ಐ

    ರಾಯಚೂರು: ಜಿಲ್ಲೆಯ ದೇವದುರ್ಗಾ ಪೊಲೀಸ್ ಠಾಣೆಯ ಪಿಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿರುವ ಎಲ್‍ಬಿ ಅಗ್ನಿ ಅವರು ತಮ್ಮ ಒಂದು ತಿಂಗಳ ವೇತನವನ್ನು ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ ನೀಡಿದ್ದಾರೆ.

    ಪುಲ್ವಾಮಾ ದಾಳಿಯಲ್ಲಿ 40 ಯೋಧರು ಸಾವನ್ನಪ್ಪಿದ್ದು, ಯೋಧರ ಸಾವಿನ ಸುದ್ದಿ ಕೇಳಿ ಅಘಾತವಾಯಿತು. ನಮ್ಮ ರಾಜ್ಯ ಒಬ್ಬ ಯೋಧರು ಸಾವನ್ನಪ್ಪಿದ ತಿಳಿದ ಬಳಿಕ ಅವರ ಕುಟುಂಬಕ್ಕೆ ಸಹಾಯ ಮಾಡಲು ಯೋಚಿಸಿದೆ. ಅದರಂತೆ ನನ್ನ ಒಂದು ತಿಂಗಳ ವೇತನ 45 ಸಾವಿರ ರೂ. ಗಳನ್ನು ಅವರ ಕುಟುಂಬಕ್ಕೆ ನೀಡುತ್ತೇನೆ. ಈ ಮೂಲಕ ಯೋಧರಿಗೆ ನೈತಿಕ ಬೆಂಬಲ ನೀಡುವುದು ನನ್ನ ಉದ್ದೇಶವಷ್ಟೇ ಎಂದು ತಿಳಿಸಿದ್ದಾರೆ. ಇದರಂತೆ ಗುರು ಅವರ ತಂದೆ ಹೊನ್ನಯ್ಯ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ.  ಇದನ್ನು ಓದಿ: ಹುತಾತ್ಮ ಯೋಧನ ಕುಟುಂಬಕ್ಕೆ 1 ದಿನದ ದುಡಿಮೆ ನೀಡಿದ್ರು ಗೋಬಿ ಮಂಚೂರಿ ವ್ಯಾಪಾರಿ!

    ಇತ್ತ ಯೋಧನ ಕುಟುಂಬಕ್ಕೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ 3 ಲಕ್ಷ ರೂ. ಹಾಗೂ ಡಿಸಿಸಿ ಬ್ಯಾಂಕ್ 2 ಲಕ್ಷ ರೂ. ಹಣವನ್ನು ಸಹಾಯ ಮಾಡಿದೆ. ಇದೇ ವೇಳೆ ಗುಡಿಗೆರೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಪಕ್ಷ ವತಿಯಿಂದ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿ, ಸಂತ್ವಾನ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದಸರಾ ಹಬ್ಬಕ್ಕೆ ಸರ್ಕಾರಿ ನೌಕರರಿಗೆ ಸಮ್ಮಿಶ್ರ ಸರ್ಕಾರದಿಂದ ಗುಡ್‍ನ್ಯೂಸ್

    ದಸರಾ ಹಬ್ಬಕ್ಕೆ ಸರ್ಕಾರಿ ನೌಕರರಿಗೆ ಸಮ್ಮಿಶ್ರ ಸರ್ಕಾರದಿಂದ ಗುಡ್‍ನ್ಯೂಸ್

    ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ದಸರಾ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.

    ಸರ್ಕಾರಿ ನೌಕರರಿಗೆ ಶೇ.2 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2018ರ ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ಮೂಲ ವೇತನದ ಶೇ.1.75ರಿಂದ ಶೇ.3.75ಕ್ಕೆ ತುಟ್ಟಿ ಭತ್ಯೆ ಏರಿಕೆ ಮಾಡಿ ಹಣಕಾಸು ಇಲಾಖೆ ಇಂದು ಅಧಿಕೃತ ಆದೇಶ ಹೊರಡಿಸಿದೆ.

    ತುಟ್ಟಿ ಭತ್ಯೆ ಏರಿಕೆಯಿಂದ 8.5 ಲಕ್ಷ ಸರ್ಕಾರಿ ನೌಕರರ ಮಾಸಿಕ ವೇತನ ಹೆಚ್ಚಳವಾಗಲಿದೆ. ಕೇಂದ್ರ ಸರ್ಕಾರ ನೌಕರರ ವೇತನ ಪರಿಷ್ಕರಣೆಯ ಬಳಿಕ ತುಟ್ಟಿ ಭತ್ಯೆ ಹೆಚ್ಚಳ ಮಾಡಿತ್ತು. ಹೀಗಾಗಿ ರಾಜ್ಯ ಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು.

    ಗುರುವಾರ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜುಲೈ ತಿಂಗಳಿನಿಂದ ಬಾಕಿ ಇರುವ ತುಟ್ಟಿ ಭತ್ಯೆಯನ್ನು ಏರಿಸುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಸಿಎಂ ಪುರಸ್ಕರಿಸಿದ್ದು ಈಗ ತುಟ್ಟಿಭತ್ಯೆ ಏರಿಕೆಯಾಗಿದೆ.

     

  • ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆಯಲ್ಲೇ ನೌಕರರ ಗೋಳಾಟ!

    ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆಯಲ್ಲೇ ನೌಕರರ ಗೋಳಾಟ!

    ಗದಗ: ಇಡೀ ಏಷ್ಯಾದಲ್ಲಿಯೇ ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆ ಗದಗ್ ಆಗಿದ್ದು, ಆದ್ರೆ ಇದೇ ಜಿಲ್ಲೆಯಲ್ಲಿ ಸಹಕಾರಿ ನೌಕರರ ಗೋಳು ಕೇಳೋರು ಯಾರು ಇಲ್ಲದಂತಾಗಿದೆ. ಕನಿಷ್ಠ ವೇತನವೂ ಸಿಗ್ತಿಲ್ಲ, ಮೂಲಭೂತ ಸೌಲಭ್ಯಗಳೂ ಸಿಗ್ತಿಲ್ಲ, ಹೀಗಾಗಿ ಅವರೆಲ್ಲ ಸೇರಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

    ಹೌದು. ಗದಗ ಜಿಲ್ಲೆಯ ಗ್ರಾಮೀಣ ಹಾಗೂ ಪಟ್ಟಣದ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ಮಾಡೋ ಸಿಬ್ಬಂದಿಗೆ ಹಲವು ವರ್ಷಗಳಿಂದ ಕನಿಷ್ಠ ವೇತನವೂ ಸಿಗ್ತಿಲ್ಲ. 30 ವರ್ಷಗಳ ಹಿಂದೆ ಕೇವಲ 50 ರೂಪಾಯಿಯಿಂದ ಆರಂಭವಾದ ವೇತನ ಇದೀಗ ಕನಿಷ್ಟ 3 ಸಾವಿರದಿಂದ ಗರಿಷ್ಟ 6 ಸಾವಿರಕ್ಕೆ ತಲುಪಿದೆ. ಇದ್ರಿಂದ ಒಂದು ಕುಟುಂಬ ನಿರ್ವಹಣೆಯೂ ಅಸಾಧ್ಯ. ಹೀಗಾಗಿ ಸಿಬ್ಬಂದಿ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ.

    ಏಷ್ಯಾ ಖಂಡದಲ್ಲೇ ಮೊಟ್ಟ ಮೊದಲ ಬಾರಿಗೆ 1905ರಲ್ಲಿ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಲ್ಲಿ ಸಹಕಾರಿ ಬ್ಯಾಂಕ್ ಸ್ಥಾಪನೆಯಾಯಿತು. ಕಣಗಿನಹಾಳ ಸಿದ್ದನಗೌಡ ಪಾಟೀಲ್ ಇದರ ಸಂಸ್ಥಾಪಕರಾಗಿದ್ದರು. ಇದೀಗ ಈ ಸಹಕಾರಿ ಸಂಸ್ಥೆಯಲ್ಲಿ ಸುಮಾರು 800 ಸಿಬ್ಬಂದಿ ಕಾರ್ಯ ನಿರ್ವಹಿಸ್ತಿದ್ದಾರೆ. ಇದು ಕೇವಲ ಗದಗ ಜಿಲ್ಲೆಯ ಸಮಸ್ಯೆ ಮಾತ್ರವಲ್ಲ. ಇಡೀ ರಾಜ್ಯದ ಸಹಕಾರಿ ನೌಕರರ ಸಮಸ್ಯೆಯಾಗಿದೆ. ಇನ್ನು 30 ವರ್ಷ ಸೇವೆ ಸಲ್ಲಿಸಿದ್ರು ಸರ್ಕಾರ ಪರಿಗಣಿಸಿಲ್ಲ. ಹೀಗಾಗಿ ತಮ್ಮ ಹಕ್ಕು ಹಾಗೂ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ವಿರುದ್ಧ ಸಹಕಾರಿ ಸಂಘದ ನೌಕರ ಭೀಮಪ್ಪ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

    ಸಿ.ಎಂ ಕುಮಾರಸ್ವಾಮಿ ತಮ್ಮ ಖುರ್ಚಿ ಉಳಿಸಿಕೊಳ್ಳಲು, ಸಹಕಾರಿ ನೌಕರರನ್ನ ಸಾಯುವಂತೆ ಮಾಡ್ತಿದ್ದಾರೆ. ಸರ್ಕಾರ ಬಹುತೇಕ ಇಲಾಖೆ ಸಿಬ್ಬಂದಿಗೆ ವೇತನ ಹಾಗೂ ಹಲವಾರು ಸೌಲಭ್ಯಗಳನ್ನು ನೀಡಿದೆ. ಆದ್ರೆ ನಮಗೇಕೆ ಮಲತಾಯಿ ಧೋರಣೆ ಮಾಡ್ತಿದ್ದಾರೆ ಅನ್ನೋದು ಸಹಕಾರಿ ಇಲಾಖೆ ನೌಕರರ ಪ್ರಶ್ನೆ.

    ಹಲವು ವರ್ಷಗಳಿಂದ ಸೇವೆ ಸಲ್ಲಿಸಿದ್ರು, ಸರ್ಕಾರ ಸಹಕಾರಿ ಸಿಬ್ಬಂದಿಗೆ ಸೌಲಭ್ಯ ನೀಡದಿರುವುದು ದುರಂತವೇ ಸರಿ, ಇನ್ನಾದ್ರೂ ಸರ್ಕಾರ ಸಹಕಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿರೋ ನೌಕರರ ಬವಣೆಗೆ ಸ್ಪಂದಿಸಲಿ ಅನ್ನೋದೇ ನಮ್ಮ ಆಶಯ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗುಜರಾತ್ ಶಾಸಕರ ವೇತನ 45 ಸಾವಿರ ರೂ. ಹೆಚ್ಚಳ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

    ಗುಜರಾತ್ ಶಾಸಕರ ವೇತನ 45 ಸಾವಿರ ರೂ. ಹೆಚ್ಚಳ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

    ಗಾಂಧಿನಗರ: ಗುಜರಾತ್ ಶಾಸಕರ ತಿಂಗಳ ಸಂಬಳ 45 ಸಾವಿರ ರೂ. ಹೆಚ್ಚಳವಾಗಿದೆ. ಗುಜರಾತ್ ಶಾಸಕಾಂಗ ಸಭೆಯ ಸದಸ್ಯರು, ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಸಚಿವರು ಮತ್ತು ವಿರೋಧ ಪಕ್ಷದ ಸದಸ್ಯರ ವೇತನ ಮತ್ತು ಭತ್ಯೆ(ತಿದ್ದುಪಡಿ) ಮಸೂದೆಗೆ ಸದನದಲ್ಲಿ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ.

    ಈ ಹಿಂದೆ ಗುಜರಾತ್ ಶಾಸಕರು ಪ್ರತಿ ತಿಂಗಳು 70,727 ರೂ. ವೇತನವನ್ನು ಪಡೆಯುತ್ತಿದ್ದರು. ಈಗ ಸಂಬಳ 1,16,316 ರೂ. ಆಗಲಿದೆ. 2017ರ ಡಿಸೆಂಬರ್ 22 ರಿಂದ ಪೂರ್ವಾನ್ವಯವಾಗುಂತೆ ಸಂಬಳವನ್ನು ಏರಿಕೆ ಮಾಡಲಾಗಿದೆ.

    ಗುಜರಾತ್ ವಿಧಾನಸಭೆ ಒಟ್ಟು 182 ಸಂಖ್ಯಾಬಲವನ್ನು ಹೊಂದಿದ್ದು, ಬಿಜೆಪಿಯು 99 ಮತ್ತು ಓರ್ವ ಪಕ್ಷೇತರನ್ನು ಸೆಳೆದುಕೊಳ್ಳುವ ಸರ್ಕಾರ ರಚಿಸಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷ 81 ಸ್ಥಾನ ಪಡೆದುಕೊಂಡಿದೆ.

    ಯಾರಿಗೆ ಎಷ್ಟು?
    ಮುಖ್ಯಮಂತ್ರಿ, ಸಚಿವರು, ಉಪಮುಖ್ಯಮಂತ್ರಿ, ಸಭಾಪತಿ, ಉಪ ಸಭಾಪತಿ, ವಿರೋಧ ಪಕ್ಷದ ನಾಯಕರ ಮೂಲ ವೇತನ 70,125 ರೂ. ದಿಂದ 98,500 ರೂ. ಹೆಚ್ಚಳವಾಗಿದೆ. ಈ ಹಿಂದೆ ಡಿಎ, ದೂರವಾಣಿ ವೆಚ್ಚ, ಪಿಎ ವೇತನ, ಅಂಚೆ ಮತ್ತು ಸ್ಟೇಷನರಿ ಸೇರಿದಂತೆ ಎಲ್ಲ ರೀತಿಯ ಭತ್ಯೆಗೆ 14,627 ರೂ. ಸಿಗುತಿತ್ತು. ಈಗ ಈ ಭತ್ಯೆ 37,516 ರೂ.ಗೆ ಏರಿಕೆಯಾಗಿದೆ. ಮೂಲ ವೇತನ ಮತ್ತು ಭತ್ಯೆ ಎಲ್ಲ ಸೇರಿ ಈ ಹಿಂದೆ 84,752 ರೂ. ಸಿಕ್ಕಿದರೆ ಈಗ 1,16,316 ರೂ.ಗೆ ಏರಿಕೆಯಾಗಿದೆ

    ಶಾಸಕರಿಗೆ ಎಷ್ಟು?
    ಮೂಲ ವೇತನ ಈ ಹಿಂದೆ 56,100 ರೂ. ಸಿಕ್ಕಿದರೆ ಈಗ ಇದು 78,800 ರೂ.ಗೆ ಏರಿಕೆಯಾಗಿದೆ. ಮೂಲ ವೇತನ ಮತ್ತು ಭತ್ಯೆ ಎಲ್ಲ ಸೇರಿ ಈ ಹಿಂದೆ 70,727 ರೂ. ಸಿಕ್ಕಿದರೆ ಈಗ 1,16,316 ರೂ. ಏರಿಕೆಯಾಗಿದೆ.

    ವಿಶೇಷ ಏನೆಂದರೆ ಮಂಗಳವಾರ ತೈಲ ಬೆಲೆ ಏರಿಕೆ ಸಂಬಂಧ ಕಾಂಗ್ರೆಸ್ ಶಾಸಕರು ಮತ್ತು ಜಿಗ್ನೇಶ್ ಮೇವಾನಿ ವಿಧಾನಸೌಧದ ಹೊರಗಡೆ ಪ್ರತಿಭಟನೆ ನಡೆಸಿದರು. ಬುಧವಾರ ಸೈಕಲ್ ಏರಿ ವಿಧಾನಸಭೆಗೆ ಆಗಮಿಸಿದ್ದರು. ಬೆಳಗ್ಗೆ ಸದನದಲ್ಲಿ ಸರ್ಕಾರ ಮಸೂದೆ ಮಂಡಿಸುತ್ತಿದ್ದಂತೆ ಎಲ್ಲ ಶಾಸಕರು ಒಪ್ಪಿಗೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆತ್ಮಹತ್ಯೆಗೆ ಶರಣಾದ ಪೌರಕಾರ್ಮಿಕನ ನಿವಾಸಕ್ಕೆ ಡಿಸಿಎಂ ಭೇಟಿ

    ಆತ್ಮಹತ್ಯೆಗೆ ಶರಣಾದ ಪೌರಕಾರ್ಮಿಕನ ನಿವಾಸಕ್ಕೆ ಡಿಸಿಎಂ ಭೇಟಿ

    ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಪೌರಕಾರ್ಮಿಕ ಸುಬ್ರಮಣಿಯವರ ಮನೆಗೆ ಇಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ನಗರದ ದತ್ತಾತ್ರೇಯ ವಾರ್ಡ್ ನ ಮುನೇಶ್ವರ ಬ್ಲಾಕ್ ನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ಪರಮೇಶ್ವರ್ ಮೃತ ಪೌರ ಕಾರ್ಮಿಕ ಕುಟುಂಬಸ್ಥರಿಗೆ ಪರಿಹಾರದ ಚೆಕ್ ವಿತರಿಸಿದರು.

    ಮಾಧ್ಯಮಗಳ ಜೊತೆ ಮಾತನಾಡಿ, ಪೌರಕಾರ್ಮಿಕ ಸುಬ್ರಮಣಿನ ಆತ್ಮಹತ್ಯೆ ವಿಷಾದದ ಸಂಗತಿ. ಬಿಬಿಎಂಪಿ ಯಲ್ಲಿ ಕೆಲಸ ಮಾಡುತ್ತಿದ್ದ ಸುಬ್ರಮಣಿ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ ನೀಡಿದ್ದೇವೆ. ಅವರು ಕಾಂಟ್ರಾಕ್ಟ್ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂದಿನ ದಿನಗಳಲ್ಲಿ ಕಾಂಟ್ರಾಕ್ಟ್ ಪದ್ಧತಿಯನ್ನು ಖಾಯಂ ಮಾಡುತ್ತೇವೆ. ಪೌರಕಾರ್ಮಿಕರಿಗೆ ನೇರವಾಗಿ ಸಂಬಳ ತಲುಪುವ ಕೆಲಸ ಆಗಬೇಕಿದೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.

    ಕಾಂಟ್ರಾಕ್ಟರ್  ಗಳು ಆರು ತಿಂಗಳ ಸಂಬಳ ಬಾಕಿ ಉಳಿಸಿಕೊಂಡಿದ್ದಾರೆ. ವಾರದೊಳಗೆ ಎಲ್ಲರ ವೇತನ ಪೂರ್ಣಗೊಳಿಸಬೇಕು ಎಂದು ನಾನೀಗಾಗಲೇ ಆದೇಶ ಹೊರಡಿಸಿದ್ದು, ಯಾರೂ ಕೂಡ ಪಾಲಿಕೆ ಮುಂದೆ ವೇತನಕ್ಕಾಗಿ ಬರಬಾರದು ಎಂದರು.

    ಸರ್ಕಾರದಲ್ಲಿ ಇಂತಿಷ್ಟೇ ಪೌರಕಾರ್ಮಿಕರ ನೇಮಕ ಮಾಡಿಕೊಳ್ಳಬೇಕೆಂಬ ನಿಯಮವಿದೆ. ಆದರೆ ಕಾಂಟ್ರಾಕ್ಟರ್‍ಗಳು ಹೆಚ್ಚು ಜನರ ನೇಮಕ ಮಾಡಿಕೊಂಡಿದ್ದು, ಸಮಸ್ಯೆಗಳಿಗೆ ಕಾರಣವಾಯ್ತು. ಹಾಗಾಗಿ ಎಲ್ಲ ಪೌರಕಾರ್ಮಿಕರ ಸಮಸ್ಯೆ ಶೀಘ್ರವೇ ಪರಿಹಾರವಾಗಲಿದೆ ಎಂದು ಪರಮೇಶ್ವರ್ ಭರವಸೆ ನೀಡಿದರು.