Tag: ವೇದಿಕೆ

  • ಮಂಡ್ಯದಲ್ಲಿ ಸೃಷ್ಟಿಯಾಯ್ತು ಒಂದೇ ಬಾರಿ ಐನೂರು ಜನ ನಿಲ್ಲಬಹುದಾದ ತೇಲುವ ವೇದಿಕೆ!

    ಮಂಡ್ಯದಲ್ಲಿ ಸೃಷ್ಟಿಯಾಯ್ತು ಒಂದೇ ಬಾರಿ ಐನೂರು ಜನ ನಿಲ್ಲಬಹುದಾದ ತೇಲುವ ವೇದಿಕೆ!

    ಮಂಡ್ಯ: ಪ್ರಸಿದ್ಧ ಪ್ರವಾಸಿ ತಾಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಕೆರೆ ತೊಣ್ಣೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ತೊಣ್ಣೂರು ಕೆರೆ ಉತ್ಸವ ನಡೆಯಲಿದ್ದು, ಉತ್ಸವಕ್ಕಾಗಿ ಕೆರೆಯ ನಡುವೆ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.

    ಇಂದು ಸಂಜೆ ಏಳು ಗಂಟೆ ಸುಮಾರಿಗೆ ತೊಣ್ಣೂರು ಕೆರೆ ಉತ್ಸವವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಉದ್ಘಾಟನೆ ಮಾಡಲಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿಎಸ್.ಪುಟ್ಟರಾಜು ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕೆರೆಯ ಸುತ್ತಮುತ್ತ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

    ಕೆರೆಯ ಸಮೀಪವೇ ಇರುವ ಬೆಟ್ಟಗುಡ್ಡಗಳೂ ಕೂಡ ವಿದ್ಯುತ್ ದೀಪಾಲಂಕಾರದಿಂದ ಕಣ್ಮನ ಸೆಳೆಯುತ್ತಿವೆ. ಕೆರೆಯ ನಡುವೆ ಹಾಕಿರುವ ವೇದಿಕೆಯಲ್ಲಿ ಏಕಕಾಲಕ್ಕೆ ಐನೂರು ಜನ ಕುಳಿತುಕೊಳ್ಳಬಹುದಾಗಿದೆ. ಮೊದಲು ಕೆರೆಗೆ ಗಂಗಾಪೂಜೆ ಸಲ್ಲಿಸಲಾಗುತ್ತದೆ.

    ಮೂರು ದಿನಗಳ ಕಾಲ ಕನ್ನಡದ ಪ್ರಖ್ಯಾತ ಗಾಯಕರು, ಸಿನೆಮಾ ನಟ, ನಟಿಯರು, ಜಾನಪದ ಕಲಾವಿದರು ಕೆರೆಯ ನಡುವೆ ನಿರ್ಮಿಸಿರುವ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವುದರ ಮೂಲಕ, ಕಲಾ ರಸಿಕರ ಮನ ತಣಿಸಲಿದ್ದಾರೆ. ಮೂರು ದಿನಗಳ ಕಾಲ ನಡೆಯುವ ಉತ್ಸವಕ್ಕಾಗಿ ಪ್ರವಾಸಿ ತಾಣ ತೊಣ್ಣೂರು ಕೆರೆ ಸರ್ವ ಅಲಂಕೃತವಾಗಿದ್ದು, ಹೊಸ ಲೋಕವೇ ಧರೆಗಿಳಿದಂತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ನೃತ್ಯ ಮಾಡುತ್ತಲೇ ವೇದಿಕೆಯಲ್ಲಿ ಕುಸಿದು ಬಿದ್ದು ಪ್ರಾಣಬಿಟ್ಟ ಕಲಾವಿದ!

    ನೃತ್ಯ ಮಾಡುತ್ತಲೇ ವೇದಿಕೆಯಲ್ಲಿ ಕುಸಿದು ಬಿದ್ದು ಪ್ರಾಣಬಿಟ್ಟ ಕಲಾವಿದ!

    ತಿರುವನಂತಪುರ: ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಮಂಗಳೂರಿನ ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ಪಾತ್ರ ನಿರ್ವಹಿಸುತ್ತಿದ್ದಾಗ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದು, ಇದೀಗ ಅಂತಹದ್ದೇ ಒಂದು ಘಟನೆ ಕೇರಳದಲ್ಲಿ ನಡೆದಿದೆ.

    ಖ್ಯಾತ ಓಟ್ಟಮ್‍ತುಳ್ಳಲ್ ಕಲಾವಿದರಾದ ಕಲಾಮಂಡಲಂ ಗೀತಾನಾಥನ್(58) ಅವರು ಪ್ರದರ್ಶನ ನೀಡುತ್ತಿರುವಾಗಲೇ ಹೃದಾಯಘಾತವಾಗಿ ಕುಸಿದು ಬಿದ್ದು ರಂಗಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

    ತ್ರಿಶೂರ್ ಜಿಲ್ಲೆಯ ಇರಿಂಙಲಕ್ಕುಡದಲ್ಲಿರುವ ಅವಿಟ್ಟತ್ತೂರ್ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ನೃತ್ಯ ಮಾಡುತ್ತಿರುವಾಗಲೇ ವೇದಿಕೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅದಾಗಲೇ ಅವರು ಮೃತ ಪಟ್ಟಿದ್ದಾರೆ ಅಂತ ವೈದ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಪ್ರೇಕ್ಷಕರು ಗೀತಾ ಅವರ ನೃತ್ಯ ನೋಡುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರು ಕೇರಳದ ಅತ್ಯಂತ ಹಿರಿಯ ಕಲಾವಿದರಾಗಿದ್ದಾರೆ. ಗೀತಾನಂದಮ್ ಅವರಿಗೆ 2000ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2010ರಲ್ಲಿ ಕಲಾಮಂದಲ್ ಅವಾರ್ಡ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಅಲ್ಲದೇ ಸುಮಾರು 30ಕ್ಕೂ ಹೆಚ್ಚು ಮಲೆಯಾಲಂ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ಗೀತಾನಂದನ್ ಅವರ ಮರಣಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.

    2017ರ ಮಾರ್ಚ್ ನಲ್ಲಿ ಕಟೀಲು ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿ (63) ಅವರು ಪಾತ್ರ ನಿರ್ವಹಿಸುತ್ತಿರುವಾಗ ವೇದಿಕೆಯಲ್ಲೇ ಕುಸಿದು ಮೃತಪಟ್ಟಿದ್ದರು.

    https://www.youtube.com/watch?v=wO4QaCYdVyM

    https://www.youtube.com/watch?v=CJyPZsfLWFY

  • ಅಕ್ರಮ ತಿಳಿದು ಕಾರ್ಯಕ್ರಮದ ವೇದಿಕೆಯಿಂದಲೇ ಸ್ವಾಮೀಜಿಯನ್ನು ಹೊರಹಾಕಿದ ಜನ!

    ಅಕ್ರಮ ತಿಳಿದು ಕಾರ್ಯಕ್ರಮದ ವೇದಿಕೆಯಿಂದಲೇ ಸ್ವಾಮೀಜಿಯನ್ನು ಹೊರಹಾಕಿದ ಜನ!

    ಬಾಗಲಕೋಟೆ: ಸ್ವಾಮೀಜಿಯೊಬ್ಬನ ಅಕ್ರಮ ಚಟುವಟಿಕೆಯ ವಿಚಾರ ತಿಳಿದು ಆತನನ್ನು ಗ್ರಾಮಸ್ಥರೇ ವೇದಿಕೆಯಿಂದ ಹೊರಹಾಕಿದ ಘಟನೆ ಹುನಗುಂದ ತಾಲೂಕಿನ ಸೂಳಿಬಾವಿ ಗ್ರಾಮದಲ್ಲಿ ನಡೆದಿದೆ.

    ಸೂಳಿಭಾವಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ನಡೆಸಲಾಗಿತ್ತು. ಶಾಲಾ ಸಿಬ್ಬಂದಿ ಘನಮಠೇಶ್ವರ ಸ್ವಾಮೀಜಿಯ ಹಿಂದಿನ ಅಕ್ರಮ ವಿಚಾರ ತಿಳಿಯದೇ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನ ವಹಿಸುವಂತೆ ಕೇಳಿಕೊಂಡು ಆಹ್ವಾನ ನೀಡಿದ್ದರು.

    ಆಹ್ವಾನ ನೀಡಿದ ಬಳಿಕ ಶಾಲೆಯ ಮುಖ್ಯಸ್ಥರು ಮತ್ತು ಗ್ರಾಮೀಣ ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಸಮಿತಿ ಅಧ್ಯಕ್ಷರಾಗಿರುವ ಎಸ್.ಜಿ ನಂಜಯ್ಯನಮಠ ಅವರಿಗೆ ಜಿಲ್ಲೆ ಹಿರೆಕೆರೂರು ತಾಲೂಕಿನ ಅಬಲೂರು ಗ್ರಾಮದ ಈ ಸ್ವಾಮೀಜಿ ಒಂದು ಕೋಟಿಗೂ ಹೆಚ್ಚು ಹಣ ವಂಚನೆ ಮಾಡಿದ್ದು ಅಲ್ಲದೇ ಇಬ್ಬರನ್ನು ಮದುವೆಯಾಗಿ ಮೋಸ ಮಾಡಿದ್ದಾನೆ ಎನ್ನುವ ಮಾಹಿತಿ ತಿಳಿದಿದೆ.

    ವಿಚಾರ ತಿಳಿದ ಬಳಿಕ ಎಸ್.ಜಿ ನಂಜಯ್ಯನಮಠ ಮುಜುಗರ ತಪ್ಪಿಸಿಕೊಳ್ಳಲು ಸ್ವಾಮೀಜಿಗೆ ಫೋನ್ ಮಾಡಿ ಕಾರ್ಯಕ್ರಮ ರದ್ದಾಗಿದೆ ಬರಬೇಡಿ ಎಂದರೂ, ಕಳ್ಳ ಸ್ವಾಮೀಜಿ ಕಾರ್ಯಕ್ರಮಕ್ಕೆ ಹಾಜರಾಗಿದ್ದ. ಬರಬೇಡಿ ಎಂದರೂ ಕಾರ್ಯಕ್ರಮಕ್ಕೆ ಹಾಜರಾಗಿದ್ದನ್ನು ನೋಡಿ ಗ್ರಾಮಸ್ಥರು ಹಾಗೂ ಮಾಜಿ ಶಾಸಕ ನಂಜಯನಮಠ ಈ ಸ್ವಾಮೀಜಿಯನ್ನ ವೇದಿಕೆಯಿಂದ ಹೊರ ನಡೆಯುವಂತೆ ಆಕ್ರೋಶದಿಂದ ಆಗ್ರಹಿಸಿದ್ದಾರೆ.

    ಈ ವೇಳೆ ಘನಮಠೇಶ್ವರ ಸ್ವಾಮೀಜಿ ನಾನು ಹಿಂದೂ ಧರ್ಮದ ರಕ್ಷಕ. ಧರ್ಮದ ಉಳಿವಿಗಾಗಿ ಹೋರಾಡುತ್ತಿದ್ದೇನೆ. ನಾನು ಉಗ್ರಗಾಮಿಯೇ? ನಕ್ಸಲೈಟಾ ಎಂದು ಪ್ರಶ್ನೆ ಮಾಡಿದ್ದಲ್ಲದೇ, ನಾನು ತಪ್ಪು ಮಾಡಿದರೆ ಇಲ್ಲೇ ಗಲ್ಲಿಗೇರಿಸಬೇಕು ಇಲ್ಲವೇ ಕಾರ್ಯಕ್ರಮ ನಡೆಯಲು ಬಿಡಬಾರದು ಎಂದು ರಾದ್ಧಾಂತ ಮಾಡಿದ್ದಾನೆ.

    ಈತನ ಮಾತುಗಳಿಗೆ ಕೆರಳಿದ ಗ್ರಾಮಸ್ಥರು ಇದು ಮಕ್ಕಳ ಕಾರ್ಯಕ್ರಮ ಇಲ್ಲಿ ನಿನ್ನ ಅಸಂಬದ್ಧ ಮಾತುಗಳಿಗೆ ಆಸ್ಪದವಿಲ್ಲ, ಮೊದಲು ಹೊರಹೋಗಿ ಎಂದು ಹೇಳಿ ಸ್ವಾಮೀಜಿಯನ್ನು ಹೊರದಬ್ಬಿದ್ದಾರೆ.

  • ಕೇರಳದಲ್ಲಿ ಶೃಂಗೇರಿ ಶ್ರೀಗಳಿಗೆ ಅವಮಾನ – ವೇದಿಕೆಯಿಂದ ಪೀಠ ತೆರವು ಮಾಡಿದ ಮುಜರಾಯಿ ಸಚಿವ

    ಕೇರಳದಲ್ಲಿ ಶೃಂಗೇರಿ ಶ್ರೀಗಳಿಗೆ ಅವಮಾನ – ವೇದಿಕೆಯಿಂದ ಪೀಠ ತೆರವು ಮಾಡಿದ ಮುಜರಾಯಿ ಸಚಿವ

    – ಟ್ವಿಟ್ಟರ್‍ನಲ್ಲಿ ಶೋಭಾ ಕರಂದ್ಲಾಜೆ ಆಕ್ರೋಶ

    ತಿರುವನಂತಪುರಂ: ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ಶೃಂಗೇರಿ ವಿಧುಶೇಖರ ಭಾರತಿ ಸ್ವಾಮೀಜಿಗೆ ಅವಮಾನ ಮಾಡಲಾಗಿದೆ.

    ತಿರುವನಂತಪುರಂನಲ್ಲಿರುವ ಮಹಾವಿಷ್ಣು ದೇವಸ್ಥಾನ ಕೆರೆ ಅಭಿವೃದ್ಧಿಯ ಕಾಮಗಾರಿಯ ಲೋಕಾರ್ಪಣೆಗೆ ಸ್ವಾಮೀಜಿ ಹೋಗಿದ್ದರು. ಆದ್ರೆ ಶ್ರೀಗಳಿಗೆ ಮೀಸಲಾಗಿದ್ದ ಆಸನ ತೆಗೆದು ಎಡಪಂಥೀಯ ಸರ್ಕಾರದ ಮುಜರಾಯಿ ಸಚಿವ ಕಡಕಂಪಲ್ಲಿ ಸುರೇಂದ್ರನ್, ಕಾಂಗ್ರೆಸ್ ಶಾಸಕ ಶಿವಕುಮಾರ್ ದುರಂಹಕಾರ ಪ್ರದರ್ಶಿಸಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

    ಶ್ರೀಗಳಿಗೆ ಮಾಡಲಾದ ಅವಮಾನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಕ್ಷಮೆ ಕೋರುವಂತೆ ಆಗ್ರಹಿಸಿದ್ದಾರೆ.

    https://twitter.com/ShobhaBJP/status/874521327566114816

    https://twitter.com/ShobhaBJP/status/874524051825229825

    ಇತ್ತ ತಮ್ಮ ಕ್ರಮವನ್ನು ಸಚಿವ ಕಡಕಂಪಲ್ಲಿ ಸುರೇಂದ್ರನ್ ಸಮರ್ಥಿಸಿಕೊಂಡಿದ್ದಾರೆ. ವೇದಿಕೆಯಲ್ಲಿ ಅತಿಥಿಗಳಿಗೆ ಕೂರಲು ಜಾಗ ಸಾಕಾಗುತ್ತಿರಲಿಲ್ಲ. ಈ ಬಗ್ಗೆ ತಿಳಿದು ವಿಶೇಷ ಕುರ್ಚಿಯನ್ನು ತೆಗೆಸಿದೆ. ಅಲ್ಲಿ ಮಂತ್ರಿಗಳಿಗಾಗಲಿ, ಸ್ವಾಮೀಜಿಗಳಿಗಾಗಲೀ ವಿಶೇಷ ಕುರ್ಚಿಯನ್ನು ಹಾಕೋ ಅಗತ್ಯವಿರಲಿಲ್ಲ. ಸ್ವಾಮೀಜಿಗೆ ಹಾಕಿದ್ದ ವಿಶೇಷ ಕುರ್ಚಿಯನ್ನು ಬಿಜೆಪಿ ಶಾಸಕ ಒ. ರಾಜಗೋಪಾಲ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಕುಮ್ಮನಂ ರಾಜಶೇಖರನ್ ಸಹಾಯದಿಂದ ತೆಗೆಸಿದೆ. ವೇದಿಕೆಯಲ್ಲಿ ಎಲ್ಲರಿಗೂ ಕೂರಲು ಕಷ್ಟ ಆಗ್ತಿತ್ತು ಅನ್ನೋದನ್ನು ಅವರೂ ಅರ್ಥ ಮಾಡಿಕೊಂಡಿದ್ದರು ಎಂದು ಸಚಿವರು ಸಮರ್ಥಿಸಿಕೊಂಡಿದ್ದಾರೆ.

    ವಿಶೇಷ ಪೀಠ ತೆಗೆಸಿದ್ದರ ಕಾರಣ ಕಾರ್ಯಕ್ರಮಕ್ಕೆ ಬಂದಿದ್ದ ಶೃಂಗೇರಿ ವಿಧುಶೇಖರ ಭಾರತಿ ಸ್ವಾಮೀಜಿ ವೇದಿಕೆ ಹತ್ತಲಿಲ್ಲ.