Tag: ವೇದಿಕ್ ಕೌಶಿಕ್

  • ‘ಮೈ ಹೀರೋ’ ಚಿತ್ರೀಕರಣಕ್ಕಾಗಿ ‘ಯು.ಎಸ್.ಎ’ಗೆ ಹಾರಲಿದೆ ಚಿತ್ರತಂಡ

    ‘ಮೈ ಹೀರೋ’ ಚಿತ್ರೀಕರಣಕ್ಕಾಗಿ ‘ಯು.ಎಸ್.ಎ’ಗೆ ಹಾರಲಿದೆ ಚಿತ್ರತಂಡ

    ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಮೈ ಹೀರೊ’ (My Hero) ಚಿತ್ರದ ದ್ವಿತೀಯ ಹಂತದ  ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ.  ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ (Jilali Rez Kallah), ಬಾಲನಟ ವೇದಿಕ್ ಕೌಶಿಕ್ (Vedik Kaushik), ದತ್ತಣ್ಣ (Duttanna), ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

    ಮುಂದಿನ ದಿನಗಳಲ್ಲಿ ಕೊನೆಯ ಹಂತದ ಚಿತ್ರೀಕರಣ ನಡೆಯಲಿದ್ದು, ಚಿತ್ರತಂಡ ಯು.ಎಸ್.ಎ ಗೆ ಹಾರಲಿದೆ.  ಇಡೀ ವಿಶ್ವದಲ್ಲೇ ಇರುವ ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು.  ಅವಿನಾಶ್ ವಿಜಯಕುಮಾರ್ (Avinash Vijayakumar) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.  ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ. ಇದನ್ನೂ ಓದಿ:ಜುಲೈನಲ್ಲಿ ಹೆರಿಗೆ : ಗುಟ್ಟು ಬಿಟ್ಟುಕೊಟ್ಟ ರಾಮ್ ಚರಣ್ ಪತ್ನಿ ಉಪಾಸನಾ

    ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ ಮೈ ಹೀರೊ ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ.

  • ಮಧ್ಯಪ್ರದೇಶದ ಕಡೆಗೆ ‘ಮೈ ಹೀರೋ’ ಪಯಣ : ಹಾಲಿವುಡ್ ನಟ ಭಾಗಿ

    ಮಧ್ಯಪ್ರದೇಶದ ಕಡೆಗೆ ‘ಮೈ ಹೀರೋ’ ಪಯಣ : ಹಾಲಿವುಡ್ ನಟ ಭಾಗಿ

    ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಮೈ ಹೀರೊ’ (My Hero) ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಹತ್ತುದಿನಗಳ  ಚಿತ್ರೀಕರಣ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ (Jilali Rej Kallah), ಬಾಲನಟ ವೇದಿಕ್ ಕೌಶಿಕ್ (Vedic Kaushik), ದತ್ತಣ್ಣ, ಪ್ರಕಾಶ್ ಬೆಳವಾಡಿ (Prakash Belawadi) , ನಿರಂಜನ್ ದೇಶಪಾಂಡೆ, ತನುಜಾ ಕೃಷ್ಣಪ್ಪ, “ಕಾಂತಾರ” ಖ್ಯಾತಿಯ ನವೀನ್ ಬೊಂದೇಲ್ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

    ಈ ತಿಂಗಳ ಕೊನೆಗೆ ದ್ವಿತೀಯ ಹಂತದ ಚಿತ್ರೀಕರಣ ಮಧ್ಯಪ್ರದೇಶದಲ್ಲಿ ಆರಂಭವಾಗಲಿದೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ ಮೂರ್ತಿ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಮತ್ತು ಜಿಮ್ ಶಿವು ಸಂಭಾಷಣೆ ಬರೆಯುತ್ತಿದ್ದಾರೆ. ಇದನ್ನೂ ಓದಿ: ಸಾಲುಮರದ ತಿಮ್ಮಕ್ಕನ ಆಶೀರ್ವಾದ ಪಡೆದ ಹಿಂದಿ ನಟಿ

    ವಿಶ್ವದಾದ್ಯಂತ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಕೇಂದ್ರವಾಗಿಟ್ಟುಕೊಂಡು ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯ ಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ.

    ಅಮೆರಿಕಾದಿಂದ ಬಂದ ಅಧಿಕಾರಿಯೊಬ್ಬರು ಭಾರತದ ಹುಡುಗನೊಬ್ಬನನ್ನು ಭೇಟಿಯಾಗುತ್ತಾರೆ‌‌. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ.  ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.