Tag: ವೇದ್

  • ಸಕ್ಸಸ್‌ಗಾಗಿ ಮತ್ತೆ ಮರಾಠಿ ಸಿನಿಮಾಗಳತ್ತ ರಿತೇಶ್ ದೇಶ್‌ಮುಖ್

    ಸಕ್ಸಸ್‌ಗಾಗಿ ಮತ್ತೆ ಮರಾಠಿ ಸಿನಿಮಾಗಳತ್ತ ರಿತೇಶ್ ದೇಶ್‌ಮುಖ್

    ಬಾಲಿವುಡ್ ನಟ ರಿತೇಶ್ ದೇಶ್‌ಮುಖ್‌ಗೆ (Riteish Deshmukh) ಮರಾಠಿ ಚಿತ್ರರಂಗ ಕೈಹಿಡಿದಿದೆ. ವೇದ್ ಚಿತ್ರದ ಮೂಲಕ ಸಕ್ಸಸ್ ರುಚಿ ಕಂಡಿರುವ ನಟ ಈಗ ಮತ್ತೊಮ್ಮೆ ಮರಾಠಿ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ತೆಲುಗಿನ ಸಿನಿಮಾವೊಂದನ್ನು ಮರಾಠಿಗೆ ರಿಮೇಕ್ ಮಾಡಲು ನಟ ಹೊರಟಿದ್ದಾರೆ.

    ಹೀರೋ ಮತ್ತು ವಿಲನ್ ಆಗಿ ರಿತೇಶ್ ಸೈ ಎನಿಸಿಕೊಂಡಿದ್ದಾರೆ. ಆದರೆ ಈಗೀಗ ಬಾಲಿವುಡ್‌ನಲ್ಲಿ ಬೇಡಿಕೆ ಕಮ್ಮಿಯಾಗಿದೆ. ಬಾಲಿವುಡ್ ಚಿತ್ರರಂಗಕ್ಕೆ ಸೌತ್ ಸಿನಿಮಾಗಳು ಠಕ್ಕರ್ ಕೊಟ್ಟು ನಿಲ್ಲುತ್ತಿವೆ. ಹಾಗಾಗಿಯೇ ರಿತೇಶ್ ಮರಾಠಿ ಸಿನಿಮಾರಂಗದಲ್ಲಿ ಗುರುತಿಸಿಕೊಳ್ತಿದ್ದಾರೆ.

    2022ರಲ್ಲಿ ರಿತೇಶ್- ಜೆನಿಲಿಯಾ (Genelia) ನಟನೆಯ ‘ವೇದ್’ ಚಿತ್ರ ಮರಾಠಿಯಲ್ಲಿ ಸಕ್ಸಸ್ ಕಂಡಿತ್ತು. ತೆಲುಗಿನ ನಾಗಚೈತನ್ಯ-ಸಮಂತಾ ನಟನೆಯ ‘ಮಜಿಲಿ’ ಚಿತ್ರವನ್ನೇ ರಿತೇಶ್ ಮರಾಠಿಗೆ ರಿಮೇಕ್ ಮಾಡಿದ್ದರು. ಚಿತ್ರಕತೆ, ಸಂಭಾಷನೆ, ನಿರ್ದೇಶನ, ನಿರ್ಮಾಣ ಎಲ್ಲದರ ಹೊಣೆಯನ್ನು ರಿತೇಶ್ ನಿಭಾಯಿಸಿದ್ದರು. ರಿಯಲ್ ಕಪಲ್ ರೀಲ್‌ನಲ್ಲಿಯೂ ಕ್ಲಿಕ್ ಆಗಿದ್ದರು. ಈಗ ಮತ್ತೊಮ್ಮೆ ತೆಲುಗಿನ ಸಿನಿಮಾವೊಂದನ್ನು ಮರಾಠಿಗೆ ತರಲು ನಟ ಯೋಚಿಸಿದ್ದಾರೆ.

    ನಾನಿ ನಟಿಸಿದ್ದ ‘ಹಾಯ್ ನಾನ್ನ’ ಚಿತ್ರವನ್ನು ರಿಮೇಕ್ ಮಾಡಲು ರಿತೇಶ್ ಮಾಡಲು ಮುಂದಾಗಿದ್ದಾರಂತೆ. ಅದಕ್ಕಾಗಿ ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಈ ಚಿತ್ರದಲ್ಲಿ ಪತಿ ಜೊತೆ ಜೆನಿಲಿಯಾ ಇರುತ್ತಾರಾ?  ಸದ್ಯದಲ್ಲೇ ಸಿನಿಮಾ ಬಗ್ಗೆ ಮಾಹಿತಿ ಸಿಗಲಿದೆ. ಇದನ್ನೂ ಓದಿ:ಮತ್ತೆ ಒಂದಾಯಿತು ಧನುಷ್ ಮತ್ತು ಪ್ರಕಾಶ್ ರೈ ಜೋಡಿ

    ರಿತೇಶ್‌ ಅವರಂತೆಯೇ ಪತ್ನಿ ಜೆನಿಲಿಯಾ ಕೂಡ ಬೇರೇ ಭಾಷೆಗಳಲ್ಲಿ ನಟಿಸುತ್ತಾ ಇದ್ದಾರೆ. ಇದೀಗ ಕನ್ನಡದ ಸಿನಿಮಾ ‘ಜ್ಯೂನಿಯರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜನಾರ್ದನ್ ರೆಡ್ಡಿ ಪುತ್ರ ಕಿರೀಟಿ ಮತ್ತು ಶ್ರೀಲೀಲಾ (Sreeleela) ನಟನೆಯ ಸಿನಿಮಾದಲ್ಲಿ ಜೆನಿಲಿಯಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಹಿಂದೆ ಕೂಡ ‘ಸತ್ಯ ಇನ್‌ ಲವ್‌’ ಚಿತ್ರದಲ್ಲಿ ಶಿವಣ್ಣ ಜೊತೆ ಜೆನಿಲಿಯಾ ನಟಿಸಿದ್ದಾರೆ.

  • ಕಾಗೆ ಮೇಲಿನ ಕಥೆಯ ಮೂಲಕ ಮತ್ತೆ ಚಿತ್ರರಂಗಕ್ಕೆ ಬಂದ ದಿಲೀಪ್

    ಕಾಗೆ ಮೇಲಿನ ಕಥೆಯ ಮೂಲಕ ಮತ್ತೆ ಚಿತ್ರರಂಗಕ್ಕೆ ಬಂದ ದಿಲೀಪ್

    ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸುತ್ತಿರುವ ಹಾಗೂ ವೇದ್ ನಿರ್ದೇಶನದ ‘ರಾವೆನ್’ (Raven) ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಶಾಸಕ ಗೋಪಾಲಯ್ಯ ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ದೇಶಕ ಎಂ.ಡಿ.ಶ್ರೀಧರ್ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

    ಸಾಮಾನ್ಯವಾಗಿ ಕಾಗೆ ತಾಕಿದ್ದರೆ ಸ್ನಾನ ಮಾಡಬೇಕು. ಅದು ವಾಹನದ ಮೇಲೆ ಕೂರಬಾರದು ಮುಂತಾದ ನಂಬಿಕೆಗಳು ರೂಡಿಯಲ್ಲಿದೆ.‌ ಆದರೆ ನಮ್ಮ ಸಿನಿಮಾದಲ್ಲಿ ಕಾಗೆಯೇ ಪ್ರಮುಖ ಪಾತ್ರಧಾರಿ. ಕಾಗೆಯಿಂದ ಸಾಕಷ್ಟು ಒಳ್ಳೆಯದಾಗುತ್ತದೆ ಎಂಬುದನ್ನು ತೋರಿಸುತ್ತಿದ್ದೇವೆ. ಈ ತಿಂಗಳ 21ರಿಂದ ಚಿತ್ರೀಕರಣ ಆರಂಭವಾಗಲಿದೆ. ದಿಲೀಪ್ ಪೈ (Dilip Pai) ನಾಯಕನಾಗಿ ನಟಿಸುತ್ತಿದ್ದಾರೆ. ಸ್ವಪ್ನ ಶೆಟ್ಟಿಗಾರ್ (Swapna Shettygar), ಕುಂಕುಮ ನಾಯಕಿಯರು. ಸುಚೇಂದ್ರ ಪ್ರಸಾದ್, ಲೀಲಾ ಮೋಹನ್, ಶ್ರೇಯಾ ಆರಾಧ್ಯ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ನಾನು ಎಂ.ಡಿ.ಶ್ರೀಧರ್ ಅವರು ಸೇರಿದಂತೆ ಅನೇಕರ ಬಳಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದು ನನ್ನ ನಿರ್ದೇಶನದ ಎರಡನೇ ಚಿತ್ರ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ನಿರ್ದೇಶಕ ವೇದ್.

    ನಾನು ಕನ್ನಡಪರ ಹೋರಾಟಗಾರ ಎಂದು ಮಾತು ಆರಂಭಿಸಿದ ನಿರ್ಮಾಪಕ ವಿಶ್ವನಾಥ್, ವೇದ್ ಅವರು ಮಾಡಿಕೊಂಡಿರುವ ಕಥೆ ಇಷ್ಟವಾಯಿತು. ಹಾಗಾಗಿ ಪ್ರಬಿಕ್ ಮೊಗವೀರ್ ಅವರೊಂದಿಗೆ ಸೇರಿ ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನನ್ನ ಹುಟ್ಟುಹಬ್ಬದ ದಿನವೇ ಚಿತ್ರ ಆರಂಭವಾಗಿರುವುದು ಖುಷಿಯಾಗಿದೆ ಎಂದರು. ಮತ್ತೊಬ್ಬ ನಿರ್ಮಪಕರಾದ ಪ್ರಬಿಕ್ ಮೊಗವೀರ್ ಮಾತನಾಡುತ್ತಾ, ನಾನು ಹತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಸಾಕಷ್ಟು ಪ್ರಾಣಿಗಳ ಕುರಿತಾದ ಚಿತ್ರವನ್ನೇ ಮಾಡಿದ್ದೇನೆ. ಈ ಚಿತ್ರ ಕೂಡ ಕಾಗೆಯ ಬಗ್ಗೆ ಇದೆ‌ ಎಂದು ತಿಳಿಸಿದರು‌.

    ಬಹಳ ದಿನಗಳ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ.‌ ಒಳ್ಳೆಯ ಪಾತ್ರ. ಕಾಗೆ ಶನಿಮಹಾತ್ಮನ ವಾಹನ. ಅಂಥಹ ಕಾಗೆ ಕುರಿತಾದ ಚಿತ್ರವಿದು. ಈ ಚಿತ್ರದಲ್ಲಿ ಬರುವ ಎಲ್ಲಾ ಪಾತ್ರಗಳು ಕಾಗೆಯ ಜೊತೆ ಕನೆಕ್ಟ್ ಆಗುತ್ತದೆ ಎಂದರು ನಾಯಕ ದಿಲೀಪ್ ಪೈ. ಚಿತ್ರದ ನಾಯಕಿಯರಾದ ಸ್ವಪ್ನ ಶೆಟ್ಟಿಗಾರ್, ಕುಂಕುಮ್ , ಸಂಗೀತ ನಿರ್ದೇಶಕ ಕ್ರಿಸ್ಟಫರ್ ಹಾಗೂ ಛಾಯಾಗ್ರಾಹಕ ಆರ್ ಸಿ ಟಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]