Tag: ವೇದ

  • ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಅಮ್ಮನ ನೆನೆದು ಕಣ್ಣೀರಿಟ್ಟ ಶಿವರಾಜ್ ಕುಮಾರ್

    ಪಬ್ಲಿಕ್ ಟಿವಿ ಸ್ಟುಡಿಯೋದಲ್ಲಿ ಅಮ್ಮನ ನೆನೆದು ಕಣ್ಣೀರಿಟ್ಟ ಶಿವರಾಜ್ ಕುಮಾರ್

    ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ವೇದ ಸಿನಿಮಾ ರಿಲೀಸ್ ಆಗಿ  ಉತ್ತಮ ಪ್ರದರ್ಶನ ಕಾಣುತ್ತಿದೆ. ಅಲ್ಲದೇ, ಇದು ಅವರ 125ನೇ ಸಿನಿಮಾವಾಗಿದ್ದರಿಂದ ಚಿತ್ರದ ವಿಶೇಷತೆ ಕುರಿತು ಮಾತನಾಡಲು ಪಬ್ಲಿಕ್ ಟಿವಿ ಆಫೀಸಿಗೆ ಬಂದಿದ್ದರು ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾ ಶಿವರಾಜ್ ಕುಮಾರ್. ಪಬ್ಲಿಕ್ ಟಿವಿ ಮಖ್ಯಸ್ಥ ಹೆಚ್.ಆರ್. ರಂಗನಾಥ್ ಜೊತೆಗಿನ ಸಂದರ್ಶನದಲ್ಲಿ ಹಲವು ವಿಷಯಗಳನ್ನು ಅವರು ಹಂಚಿಕೊಂಡಿದ್ದು, ತಾಯಿಯ ನೆನಪಿಸಿಕೊಂಡು ಕಣ್ಣೀರಿಟ್ಟರು.

    ನಿಮ್ಮ ಮೇಲೆ ನಿಮ್ಮ ತಾಯಿ ಎಷ್ಟು ಪ್ರಭಾವ ಬೀರಿದ್ದಾರೆ ಎಂದು ಕೇಳಲಾದ ಪ್ರಶ್ನೆಗೆ ಅಕ್ಷರಶಃ ಶಿವರಾಜ್ ಕುಮಾರ್ ಮಗುವಿನಂತೆ ಅತ್ತೆ ಬಿಟ್ಟರು. ಸಣ್ಣ ಸಣ್ಣ ಸಂಗತಿಗಳಿಗೂ ನನಗೆ ಅಮ್ಮ ನೆನಪಾಗುತ್ತಾರೆ. ಪುಟ್ಟ ನೋವಾದರೂ, ಅಲ್ಲಿ ಅಮ್ಮ ಇರಬೇಕಿತ್ತು ಅಂತ ಅನಿಸುತ್ತದೆ. ಎಂದಿಗೂ ಅವರನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ ಎಂದು ತಾಯಿ ಜೊತೆಗಿನ ಬಾಂಧವ್ಯವನ್ನು ಹಂಚಿಕೊಂಡರು ಶಿವರಾಜ್ ಕುಮಾರ್. ಇದನ್ನೂ ಓದಿ:BREAKING: ಕೊನೆಗೂ ಗುಡ್ ನ್ಯೂಸ್ ಕೊಟ್ರು ನರೇಶ್, ಪವಿತ್ರಾ: ಮದುವೆ ಡೇಟ್ ಫಿಕ್ಸ್

    ಶಿವರಾಜ್ ಕುಮಾರ್ ವೃತ್ತಿ ಜೀವನದಲ್ಲಿ ಅವರ ತಾಯಿಯ ಪಾತ್ರ ದೊಡ್ಡದು. ಶಿವರಾಜ್ ಕುಮಾರ್ ಸಿನಿಮಾ ರಂಗಕ್ಕೆ ಬರುವುದರಿಂದ ಹಿಡಿದು, ಅವರ ಸಿನಿಮಾಗಳ ಕಥೆಯನ್ನು ಕೇಳುವುದು, ನಿರ್ಮಾಣ ಮಾಡುವುದು, ವಿತರಿಸುವುದು ಹೀಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ ಪಾರ್ವತಮ್ಮ ರಾಜಕುಮಾರ್. ಜೊತೆಗೆ ತಾಯಿ ಪ್ರೀತಿಯನ್ನು ಹಿಡಿಹಿಡಿಯಾಗಿ ನೀಡಿದ್ದಾರೆ. ಈ ಎಲ್ಲವನ್ನೂ ನೆನಪಿಸಿಕೊಂಡು ಶಿವರಾಜ್ ಕುಮಾರ್ ಭಾವುಕರಾದರು.

    Live Tv
    [brid partner=56869869 player=32851 video=960834 autoplay=true]

  • ರಾಯಚೂರಿನಲ್ಲಿ ವೇದ‌ ಟೀಸರ್ ಬಿಡುಗಡೆ – ಕಿಕ್ಕಿರಿದು ಸೇರಿದ್ದ ಅಭಿಮಾನಿಗಳು

    ರಾಯಚೂರಿನಲ್ಲಿ ವೇದ‌ ಟೀಸರ್ ಬಿಡುಗಡೆ – ಕಿಕ್ಕಿರಿದು ಸೇರಿದ್ದ ಅಭಿಮಾನಿಗಳು

    ರಾಯಚೂರು: ಉತ್ತರ ಕರ್ನಾಟಕ(North Karnataka) ಭಾಗದ ಸಮಸ್ಯೆಗಳನ್ನು ಈ ಭಾಗದ ಜನ ನಮಗೆ ಹೇಳಿದರೆ ನಾವು‌‌ ಸ್ಪಂದಿಸುತ್ತೇವೆ. ಎಲ್ಲಾ ನಟರು ಬಂದು ನಿಲ್ಲುತ್ತೇವೆ ಎಂದು ನಟ ಶಿವ ರಾಜ್‌ಕುಮಾರ್(Shivaraj Kumar) ಹೇಳಿದ್ದಾರೆ.

    ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ತನ್ನ 125ನೇ ಸಿನಿಮಾ ವೇದ(Vedha) ಚಿತ್ರದ ಎರಡನೇ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ‌ ಶಿವರಾಜ್‌ ಕುಮಾರ್‌ ಮಾತನಾಡಿದರು. ಇದನ್ನೂ ಓದಿ: ಮಂಗಳಗೌರಿ ಕಾವ್ಯಶ್ರೀ ಆಟಕ್ಕೆ ಬ್ರೇಕ್ ಹಾಕಿದ ಬಿಗ್ ಬಾಸ್

    ಇಲ್ಲಿನ ಜನ ನಮ್ಮಲ್ಲಿಗೆ ಬಂದು ಸ್ವೀಟ್ ತಿನ್ನಿಸಿ ಸೆಲ್ಫಿ ತೆಗೆದುಕೊಂಡು ಹೋಗುತ್ತಾರೆ. ಆದರೆ ಸಮಸ್ಯೆ ಹೇಳುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರಾಯಚೂರಿನ ಏಮ್ಸ್ ಹೋರಾಟದ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ ಎಂದರು.

    ಸಿನಿಮಾ ಟೀಸರ್ ಬಿಡುಗಡೆ ಮಾಡಿ ಅಭಿಮಾನಿಗಳೊಂದಿಗೆ ಶಿವಣ್ಣ ಸಂಭ್ರಮಿಸಿದರು. “ಹಾಲಲ್ಲಾದರು ಹಾಕು ನೀರಲ್ಲಾದರು ಹಾಕು ರಾಘವೇಂದ್ರ” ಹಾಡನ್ನ ಹಾಡಿ ಅಭಿಮಾನಿಗಳನ್ನ ರಂಜಿಸಿದರು.

    ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಂಡ ಮೈನವಿರೇಳಿಸುವಂತ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟಿತು. 15 ಸಾವಿರಕ್ಕೂ ಹೆಚ್ಚು ಜನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಶಿವಣ್ಣನ ಮೇಲಿನ ಅಭಿಮಾನ ಮೆರೆದರು. ಶಿವಣ್ಣನಿಗೆ ಬೆಳ್ಳಿಗದೆ ನೀಡಿ ಅಭಿಮಾನಿಗಳು ಸನ್ಮಾನಿಸಿದರು.

    Live Tv
    [brid partner=56869869 player=32851 video=960834 autoplay=true]

  • ಟಾಲಿವುಡ್‌ನತ್ತ `ವೇದ’ ಚಿತ್ರದ ನಾಯಕಿ ಗಾನವಿ ಲಕ್ಷ್ಮಣ

    ಟಾಲಿವುಡ್‌ನತ್ತ `ವೇದ’ ಚಿತ್ರದ ನಾಯಕಿ ಗಾನವಿ ಲಕ್ಷ್ಮಣ

    ಸ್ಯಾಂಡಲ್‌ವುಡ್‌ಗೆ `ಹೀರೊ’ ಚಿತ್ರದ ಮೂಲಕ ನಾಯಕಿಯಾಗಿ ಎಂಟ್ರಿ ಕೊಟ್ಟ ಗಾನವಿ ಲಕ್ಷ್ಮಣ. ಇದೀಗ ಶಿವರಾಜ್‌ಕುಮಾರ್ 125ನೇ ಸಿನಿಮಾ `ವೇದ’ ಚಿತ್ರಕ್ಕೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಬಳಿಕ ಟಾಲಿವುಡ್‌ನತ್ತ ಗಾನವಿ ಮುಖ ಮಾಡಿದ್ದಾರೆ.

    ಕಿರುತೆರೆಯ ಸೂಪರ್ ಹಿಟ್ `ಮಗಳು ಜಾನಕಿ’ ಸೀರಿಯಲ್‌ನಿಂದ ಬಣ್ಣದ ಲೋಕಕ್ಕೆ ಪರಿಚಿತರಾದ ನಟಿ, `ನೆನಪಿನ ಹುಡುಗಿಯೇ’ ಅಂತಾ ಹೀರೋ ರಿಷಬ್ ಶೆಟ್ಟಿಗೆ ಹೀರೋಯಿನ್ ಆಗಿ ಗಮನ ಸೆಳೆದರು. ಈಗ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ನಾಯಕಿಯಾಗಿ ವೇದಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. `ವೇದ’ ಚಿತ್ರದ ಜೊತೆಗೆ ತೆಲುಗಿನ ಪ್ರಾಜೆಕ್ಟ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಹರ್ಷ ನಿರ್ದೇಶನದ `ವೇದ’ ಚಿತ್ರ ಇದೊಂದು 1960ರ ದಶಕದ ಕಥೆಯಾಗಿದ್ದು, ಶಿವರಾಜ್‌ಕುಮಾರ್ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. `ವೇದ’ ಚಿತ್ರದಲ್ಲಿ ನಟಿ ಗಾನವಿ ಮೃದು ಸ್ವಭಾದ ಕ್ಯಾರೆಕ್ಟರ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಹಳ್ಳಿ ಹುಡುಗಿಯ ಲುಕ್‌ನಲ್ಲಿ ಪುಷ್ಪ ಎಂಬ ಪಾತ್ರಕ್ಕೆ ಗಾನವಿ ಜೀವತುಂಬಿದ್ದಾರೆ. ಹೀರೋ ಚಿತ್ರದ ವಿರುದ್ಧ ಪಾತ್ರದಲ್ಲಿ ಚಾಲೆಂಜಿಂಗ್ ರೋಲ್‌ನಲ್ಲಿ ಈ ನಟಿ ಕಾಣಿಸಿಕೊಂಡಿದ್ದಾರೆ.

    ಚಿಕ್ಕಮಗಳೂರಿನ ಪ್ರತಿಭೆ ಗಾನವಿ ಇದೀಗ `ವೇದ’ ಚಿತ್ರದ ಜೊತೆ ಟಾಲಿವುಡ್‌ನಲ್ಲೂ ಡೆಬ್ಯೂ ಮಾಡ್ತಿದ್ದಾರೆ. ಸ್ಟಾರ್ ನಟ ಜಗಪತಿ ಬಾಬು ಸಿನಿಮಾದಲ್ಲಿ ಆಶಿಶ್ ಗಾಂಧಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರೋ ಗಾನವಿ ಜತೆಗೆ ಮಮತಾ ಮೋಹನ್ ದಾಸ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತೆಲುಗಿನ ಸಿನಿಮಾದ ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಸದ್ಯ ಚಿತ್ರದ ಕುರಿತು ಅಪ್‌ಡೇಟ್ ಸಿಗಲಿದೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

    `ವೇದ’ ಚಿತ್ರದ ಪೋಸ್ಟರ್‌ನಲ್ಲಿ ಶಿವಣ್ಣ ಲುಕ್ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿತ್ತು. `ವೇದ’ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ರಿಲೀಸ್ ಮುಂಚೆ ಸಾಕಷ್ಟು ವಿಚಾರಗಳಿಂದ ವೇದ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಾಗುತ್ತಿದೆ.ಚಿತ್ರ ರಿಲೀಸ್ ಆದಮೇಲೆ ಶಿವರಾಜ್‌ಕುಮಾರ್ ಮತ್ತು ಗಾನವಿ ಜೋಡಿ ಅದೆಷ್ಟರ ಮಟ್ಟಿಗೆ ಮೋಡಿ ಮಾಡಬಹುದು ಅಂತಾ ಕಾದು ನೋಡಬೇಕಿದೆ.

  • ಜೇಮ್ಸ್ ಅಪ್ಪು ನಟನೆಯ ಕೊನೆ ಸಿನಿಮಾವಲ್ಲ: ಜೇಮ್ಸ್ ನಂತರವೂ ಮತ್ತೊಂದು ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

    ಜೇಮ್ಸ್ ಅಪ್ಪು ನಟನೆಯ ಕೊನೆ ಸಿನಿಮಾವಲ್ಲ: ಜೇಮ್ಸ್ ನಂತರವೂ ಮತ್ತೊಂದು ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

    ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’, ಅಪ್ಪು ನಟನೆಯ ಕೊನೆಯ ಸಿನಿಮಾವಾಗಲಾರದು. ಅವರನ್ನು ಮತ್ತೆ ಮತ್ತೆ ಸಿನಿಮಾದಲ್ಲಿ ತೋರಿಸುವ ತವಕ ಸ್ಯಾಂಡಲ್ ವುಡ್ ನಿರ್ದೇಶಕರದ್ದು. ಆದರೆ, ಆಯಾ ಸಿನಿಮಾದಲ್ಲಿ ಅಪ್ಪು ಹೇಗಿರುತ್ತಾರೆ ಎನ್ನುವುದೇ ಕುತೂಹಲ. ಇದನ್ನೂ ಓದಿ : ಕಬ್ಜ ಟೀಮ್ ಸೇರಿಕೊಂಡ ಶ್ರೀಯಾ ಶರಣ್ : ಉಪೇಂದ್ರಗೆ ಶ್ರೀಯಾ ನಾಯಕಿ?

    ಅನುಮಾನವೇ ಇಲ್ಲ, ಪುನೀತ್ ರಾಜ್ ಕುಮಾರ್ ಪೂರ್ಣಪ್ರಮಾಣದಲ್ಲಿ ನಾಯಕನಾಗಿ ನಟಿಸಿರುವ ಕೊನೆಯ ಸಿನಿಮಾ ಜೇಮ್ಸ್. ಆದರೆ, ಅವರು ಮತ್ತೊಂದು ಸಿನಿಮಾದಲ್ಲಿ ಶಿವರಾಜ್ ಕುಮಾರ್ ಜತೆ ನಟಿಸಲಿದ್ದಾರೆ. ಅದು ಗ್ರಾಫಿಕ್ಸ್ ರೂಪದಲ್ಲ ಅಥವಾ ಮತ್ತ್ಯಾವ ರೂಪದಲ್ಲಿ ಇರುತ್ತಾರೆ ಎನ್ನುವುದೇ ಕುತೂಹಲಕಾರಿ ಸಂಗತಿ. ಇದನ್ನೂ ಓದಿ : ಸಂಭಾವನೆ ಹೆಚ್ಚಿಸ್ಕೊಂಡ್ರಂತೆ ಸಿಂಪಲ್ಲಾಗಿ ಒಂದ್ ಲವ್ ಸ್ಟೋರಿ ಬೆಡಗಿ

    ಸದ್ಯ ಶಿವರಾಜ್ ಕುಮಾರ್ ತಮ್ಮದೇ ಬ್ಯಾನರ್ ನ ‘ವೇದ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಪ್ಪು ಇರಲಿದ್ದಾರೆ ಎಂದು ಸ್ವತಃ ಶಿವಣ್ಣನೇ ಹೇಳಿಕೊಂಡಿದ್ದಾರೆ. ಅದು ಹೇಗೆ ಎನ್ನುವುದನ್ನು ತೆರೆಯ ಮೇಲೆ ನೋಡಿ ಎಂದಿದ್ದಾರೆ. ಇದನ್ನೂ ಓದಿ : ಭಾರತ ಗುಪ್ತಚರ ಇಲಾಖೆ ಸೇರಿಕೊಂಡ ಸನ್ನಿ ಲಿಯೋನ್

    ಪುನೀತ್ ಮತ್ತು ಶಿವರಾಜ್ ಕುಮಾರ್ ಒಟ್ಟಾಗಿ ನಟಿಸಬೇಕು ಎನ್ನುವುದು ಸ್ವತಃ ಪುನೀತ್ ಆಸೆಯಾಗಿತ್ತು. ಅದರಲ್ಲೂ ಶಿವಣ್ಣನಿಗೆ ನಿರ್ದೇಶನ ಮಾಡಬೇಕು ಎಂದು ಪುನೀತ್ ಕನಸು ಕಂಡಿದ್ದರು. ಅಪ್ಪು ಅವರ ಒಂದು ಆಸೆ ಮಾತ್ರ ಈಡೇರಿದೆ. ಮತ್ತೊಂದು ಆಸೆ ಕನಸಾಗಿಯೇ ಉಳಿದಿದೆ. ಇದನ್ನೂ ಓದಿ : ಸ್ಯಾಂಡಲ್ ವುಡ್ ಸಿಂಡ್ರೆಲಾ ಹೊಸ ನ್ಯೂಸ್ ಕೊಡ್ತಾರಾ?

    ಜೇಮ್ಸ್ ಸಿನಿಮಾದಲ್ಲೂ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ನಟಿಸಿದ್ದಾರೆ. ನಂತರ ಶಿವಣ್ಣನ ಜತೆ ಅಪ್ಪು ವೇದದಲ್ಲೂ ಇರಲಿದ್ದಾರೆ ಎನ್ನುವುದೇ ಅಭಿಮಾನಿಗಳ ಪಾಲಿಗೆ ದೊಡ್ಡ ಸುದ್ದಿ.