Tag: ವೇಳಾಪಟ್ಟಿ

  • ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ. ಪಿಡಿಎಫ್‌ಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ – 2025 SSLC and II PUC Exam-1 Press Note & Time Table_0001_0001

    ಸಾಂದರ್ಭಿಕ ಚಿತ್ರ

    ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ. ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ….

    ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ

    • ಮಾರ್ಚ್ 1- ಕನ್ನಡ, ಅರೇಬಿಕ್.
    • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು,ಸಂಸ್ಕೃತ,ಫ್ರೆಂಚ್.
    • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
    • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
    • ಮಾರ್ಚ್‌ 8- ಹಿಂದಿ.
    • ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
    • ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ,ಮೂಲ ಗಣಿತ.
    • ಮಾರ್ಚ್ 13- ಅರ್ಥಶಾಸ್ತ್ರ
    • ಮಾರ್ಚ್ 15- ಇಂಗ್ಲೀಷ್
    • ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ
    • ಮಾರ್ಚ್ 18- ಸಮಾಜಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗಣಕ ವಿಜ್ಞಾನ
    • ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್,ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.

    SSLC ಪರೀಕ್ಷೆ -1 ವೇಳಾಪಟ್ಟಿ

    • ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು
    • ಮಾರ್ಚ್ 22- ಸಮಾಜ ವಿಜ್ಞಾನ
    • ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು
    • ಮಾರ್ಚ್ 27- ಗಣಿತ
    • ಮಾರ್ಚ್ 29- ತೃತೀಯ ಭಾಷೆ ವಿಷಯಗಳು
    • ಏಪ್ರಿಲ್ 2- ವಿಜ್ಞಾನ

  • BIFFES 2023- ಬೆಂಗಳೂರು ಚಿತ್ರೋತ್ಸವ SCHEDULE : ಮಾರ್ಚ್ 24 ರಿಂದ 30ರವರೆಗೆ

    BIFFES 2023- ಬೆಂಗಳೂರು ಚಿತ್ರೋತ್ಸವ SCHEDULE : ಮಾರ್ಚ್ 24 ರಿಂದ 30ರವರೆಗೆ

    ಮಾರ್ಚ್ 23 ರಿಂದ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ (BIFFES) ಆರಂಭವಾಗಲಿದ್ದು, 23 ರಂದು ಉದ್ಘಾಟನೆ ಮತ್ತು ಉದ್ಘಾಟನಾ ಸಿನಿಮಾವಾಗಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಪ್ರದರ್ಶನವಾಗಲಿದೆ.

    (2023 ಮಾರ್ಚ್ 24)

    ಮಾರ್ಚ್ 24 ರಿಂದ 30ರವರೆಗೆ ಒಟ್ಟು ಎಂಟು ದಿನಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ. ಯಾವ ಸಿನಿಮಾಗಳು, ಯಾವ ದಿನಾಂಕ ಮತ್ತು ಸ್ಥಳದಲ್ಲಿ ನಡೆಯುತ್ತವೆ ಎನ್ನುವ ವಿವರವೂ ಈ ಪಟ್ಟಿಯಲ್ಲಿವೆ.

    (2023 ಮಾರ್ಚ್ 25)

    ಮಾರ್ಚ್ 24 ರಿಂದ ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್ ನಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ. ಚಿತ್ರ ಪ್ರದರ್ಶನ, ಗೋಷ್ಠಿಗಳು, ಸಂದರ್ಶನ, ಸಿನಿಮಾ ಸ್ಪರ್ಧೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಚಿತ್ರೋತ್ಸವದ ಭಾಗವಾಗಿ ಆಯೋಜನೆ ಮಾಡಿದ್ದಾರೆ.

    (2023 ಮಾರ್ಚ್ 26)

    ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆರ್.ಆರ್.ಆರ್ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ ಬರಲಿದ್ದಾರೆ. ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ.

    (2023 ಮಾರ್ಚ್ 27)

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಆಯೋಜಿಸಿರುವ ಈ ಚಿತ್ರೋತ್ಸವ ಮಾರ್ಚ್ 23 ರಿಂದ ಆರಂಭವಾಗಿ 30ನೇ ತಾರೀಖಿನವರೆಗೂ ನಡೆಯಲಿದೆ. ನೂರಕ್ಕೂ ಹೆಚ್ಚು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

    (2023 ಮಾರ್ಚ್ 28)

    ಈ ಚಿತ್ರೋತ್ಸವದಲ್ಲಿ ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಕನ್ನಡ ವಿಭಾಗ, ಇಂಡಿಯನ್ ವಿಭಾಗ ಹಾಗೂ ಏಷನ್ ವಿಭಾಗಗಳಲ್ಲಿ ಸ್ಪರ್ಧೆಗಳಿದ್ದು ಹತ್ತು ಲಕ್ಷ ರೂಪಾಯಿ ಬಹುಮಾನ ಕೂಡ ಇದೆ. ಚಿತ್ರೋತ್ಸವದ ಕೊನೆಯ ದಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

    (2023 ಮಾರ್ಚ್ 29)

    ಈ ಬಾರಿ ಖ್ಯಾತ ಫೋಟೋಗ್ರಾಫರ್ ಮೂರ್ತಿ ಅವರ ನೆನಪಿನಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ವಿಶೇಷವಾಗಿ ಫೋಟೋಗ್ರಫಿ ಮೇಲೆ ಕ್ಲಾಸ್ ಗಳನ್ನು ಆಯೋಜನೆ ಮಾಡಲಾಗಿದೆ. ಅಲ್ಲದೇ, ಮೂರ್ತಿ ಅವರ ಕುರಿತಾದ ಉಪನ್ಯಾಸ ಕೂಡ ಇದೆ.

    (2023 ಮಾರ್ಚ್ 30)

    ಚಿತ್ರೋತ್ಸವದ ಸಮಾರೋಪ ಸಮಾರಂಭವು ವಿಧಾನಸೌಧದಲ್ಲಿ ನಡೆಯಲಿದ್ದು, ಸಮಾರಂಭದ ಅತಿಥಿಯಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಮತ್ತು ಚಿತ್ರೋದ್ಯಮದ ಗಣ್ಯರು ಉಪಸ್ಥಿತರಿರಲಿದ್ದಾರೆ.

  • ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ- ಯಾವ ದಿನ, ಯಾವ ಪರೀಕ್ಷೆ?

    ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯ (Exam) ಅಂತಿಮ ವೇಳಾಪಟ್ಟಿ (Time Table) ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್‌ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಇದನ್ನೂ ಓದಿ: ತರಗತಿಯಲ್ಲಿ ವಿದ್ಯಾರ್ಥಿಯನ್ನ `ಟೆರರಿಸ್ಟ್’ ಎಂದ ಪ್ರೊಫೆಸರ್ ಅಮಾನತು

    ವೇಳಾಪಟ್ಟಿ ಹೀಗಿದೆ:
    ಮಾರ್ಚ್ 9- ಕನ್ನಡ, ಅರೇಬಿಕ್
    ಮಾರ್ಚ್ 11- ಗಣಿತಶಾಸ್ತ್ರ, ಶಿಕ್ಷಣ
    ಮಾರ್ಚ್ 13- ಅರ್ಥಶಾಸ್ತ್ರ
    ಮಾರ್ಚ್ 14- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
    ಮಾರ್ಚ್ 15- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು,ಸಂಸ್ಕೃತ, ಫ್ರೆಂಚ್
    ಮಾರ್ಚ್ 16- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಮಾರ್ಚ್ 17-ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
    ಮಾರ್ಚ್‌ 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮಾರ್ಚ್ 20- ಇತಿಹಾಸ ಭೌತಶಾಸ್ತ್ರ
    ಮಾರ್ಚ್ 21- ಹಿಂದಿ
    ಮಾರ್ಚ್‌ 23- ಇಂಗ್ಲಿಷ್
    ಮಾರ್ಚ್ 25- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    ಮಾರ್ಚ್ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ,ಗೃಹ ವಿಜ್ಞಾನ
    ಮಾರ್ಚ್ 29- ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

    Live Tv
    [brid partner=56869869 player=32851 video=960834 autoplay=true]

  • ಯುಪಿಯಲ್ಲಿ ಮದರಸಾಗಳಿಗೆ ಹೊಸ ವೇಳಾಪಟ್ಟಿ ಜಾರಿ – ನಮಾಜ್‍ಗೂ ಸಮಯಾವಕಾಶಕ್ಕೆ ಮನವಿ

    ಯುಪಿಯಲ್ಲಿ ಮದರಸಾಗಳಿಗೆ ಹೊಸ ವೇಳಾಪಟ್ಟಿ ಜಾರಿ – ನಮಾಜ್‍ಗೂ ಸಮಯಾವಕಾಶಕ್ಕೆ ಮನವಿ

    ಲಕ್ನೋ: ಉತ್ತರ ಪ್ರದೇಶ ಸರ್ಕಾರವು (Uttar Pradesh government) ರಾಜ್ಯದಲ್ಲಿನ ಮದರಸಾಗಳ (Madrassas) ಸಮಯವನ್ನು ಒಂದು ಗಂಟೆ ವಿಸ್ತರಿಸಿದೆ ಮತ್ತು ಇದರ ಪರಿಷ್ಕೃತ ಸಮಯವು ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ. ಇನ್ನು ಮುಂದೆ ಆರು ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಮದರಸಾಗಳು ಈ ನಿರ್ಧಾರವನ್ನು ಸ್ವಾಗತಿಸಿವೆ. ಆದರೆ ನಮಾಜ್ (Namaz) ಮಾಡುವ ಸಮಯ ಕುರಿತಂತೆ ಆಕ್ಷೇಪ ವ್ಯಕ್ತಪಡಿಸಿವೆ.

    ರಾಜ್ಯ ಮದರಸಾ ಶಿಕ್ಷಣ ಮಂಡಳಿಯು ಅನುದಾನಿತ ಮದರಸಾಗಳಿಗೆ ಹೊಸ ವೇಳಾಪಟ್ಟಿಯನ್ನು (New Timetable) ಹೊರಡಿಸಿದ್ದು, ಅದರ ಪ್ರಕಾರ ತರಗತಿಗಳು ಬೆಳಗ್ಗೆ 9 ಗಂಟೆಗೆ ಪ್ರಾರ್ಥನೆ ಮತ್ತು ರಾಷ್ಟ್ರಗೀತೆಯೊಂದಿಗೆ ಪ್ರಾರಂಭವಾಗುತ್ತದೆ. ತರಗತಿಗಳು ಬೆಳಗ್ಗೆ 9:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿವೆ. 30 ನಿಮಿಷಗಳ ಊಟದ ವಿರಾಮದ ನಂತರ, ತರಗತಿಗಳು 12:30 ಕ್ಕೆ ಪುನರಾರಂಭಗೊಳ್ಳುತ್ತವೆ ಮತ್ತು 3 ಗಂಟೆಯವರೆಗೆ ಇರುತ್ತದೆ. ಇದನ್ನೂ ಓದಿ: ಹಿಟ್ ಆ್ಯಂಡ್ ರನ್ ಆಕ್ಸಿಡೆಂಟ್ ಮಾಡಿ ಪರಾರಿಯಾದ ಉದ್ಯಮಿ ಮಗ

    ವಿದ್ಯಾರ್ಥಿಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಚಿಸಲಾದ ಹೊಸ ವೇಳಾಪಟ್ಟಿಯು ರಾಜ್ಯದ ಎಲ್ಲಾ 14,513 ಮಾನ್ಯತೆ ಪಡೆದ ಮದರಸಾಗಳಿಗೆ ಅನ್ವಯಿಸುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಪ್ರಾರ್ಥನೆಯೂ ಪ್ರಮುಖ ಭಾಗವಾಗಿದ್ದು, ಅದಕ್ಕಾಗಿ ಸಮಯಾವಕಾಶ ನೀಡುವಂತೆ ಲಕ್ನೋದ ಶಕುಲ್ ಆಲಂ ಸಬಾರಿಯಾ ಹಾಗೂ ಮದರಸಾದ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಯೂಟ್ಯೂಬರ್ ಭೀಕರ ಅಪಘಾತದಲ್ಲಿ ಸಾವು

    ಈ ಕುರಿತಂತೆ ಪ್ರತಿಕ್ರಿಯಿಸಿದ ಮುಸ್ಲಿಂ ವಿದ್ವಾಂಸ ಮೌಲಾನಾ ಇಶ್ತಿಯಾಕ್ ಖಾದ್ರಿ, ಮದರಸಾ ವ್ಯವಸ್ಥೆಯಲ್ಲಿ ಆಗಿರುವ ಬದಲಾವಣೆಗಳನ್ನು ಎಲ್ಲಾ ಮದರಸಾಗಳು ಒಪ್ಪಿಕೊಂಡಿದೆ. ಆದರೆ ಪ್ರತಿ ಮದರಸಾದಲ್ಲಿ ತಮ್ಮ ಪದ್ಧತಿಗಳನ್ನು ಅನುಸರಿಸುವಂತೆ ಮದರಸಾ ಮಂಡಳಿಯು ಕಾಳಜಿ ವಹಿಸಬೇಕು. ನಮಾಜ್ ಮದರಸಾ ಶಿಕ್ಷಣದ ಪ್ರಮುಖ ಅಂಗವಾಗಿದ್ದು, ಅದನ್ನು ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

    ಆಗಸ್ಟ್‌ 12ರಿಂದ 25ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು https://pue.karnataka.gov.in ಅಂತರ್ಜಾಲದಲ್ಲಿ ವೀಕ್ಷಿಸಬಹುದು. ಇದನ್ನೂ ಓದಿ: ಬಡವರ ಉದ್ಧಾರಕ್ಕಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯೋತ್ಸವ: ಹಾಲಪ್ಪ ಕಿಡಿ

    ಪರೀಕ್ಷಾ ವೇಳಾಪಟ್ಟಿ ಹೀಗಿದೆ..
    ಕನ್ನಡ, ಅರೇಬಿಕ್ – ಆ.12
    ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ – ಆ.13
    ಹಿಂದಿ – ಆ.16
    ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ – ಆ.17
    ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ – ಆ.18
    ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ – ಆ.19
    ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ – ಆ.20
    ಇಂಗ್ಲಿಷ್‌ – ಆ.22
    ಅರ್ಥಶಾಸ್ತ್ರ, ಜೀವಶಾಸ್ತ್ರ – ಆ.23
    ಇತಿಹಾಸ, ಸಂಖ್ಯಾಶಾಸ್ತ್ರ – ಆ.24
    ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ – ಆ.25

    Live Tv
    [brid partner=56869869 player=32851 video=960834 autoplay=true]

  • 6 ವರ್ಷದ ಮಗುವಿನೊಂದಿಗೆ ವೇಳಾಪಟ್ಟಿ ಒಪ್ಪಂದ ಮಾಡಿಕೊಂಡ ಅಪ್ಪ

    6 ವರ್ಷದ ಮಗುವಿನೊಂದಿಗೆ ವೇಳಾಪಟ್ಟಿ ಒಪ್ಪಂದ ಮಾಡಿಕೊಂಡ ಅಪ್ಪ

    ನವದೆಹಲಿ: ಬಹಳಷ್ಟು ಪೋಷಕರು ತಮ್ಮ ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಬೇಕು, ರ‍್ಯಾಂಕ್ ಪಡೆದುಕೊಳ್ಳಬೇಕು ಎಂದು ಅನೇಕ ಶಿಸ್ತುಬದ್ಧ ನಿಯಮಗಳನ್ನು ವಿಧಿಸುತ್ತಾರೆ. ಆದರೆ, ಇಲ್ಲೊಬ್ಬರು ತನ್ನ 6 ವರ್ಷದ ಮಗುವಿನೊಂದಿಗೆ ವೇಳಾಪಟ್ಟಿ ಒಪ್ಪಂದ ಮಾಡಿಕೊಳ್ಳುವ ಮೂಲಕ ತಮ್ಮ ಮಗನಿಗೆ ಶಿಸ್ತು ರೂಢಿಸಲು ಮುಂದಾಗಿದ್ದಾರೆ.

    ಭಾರತೀಯ ಮೂಲದ ವ್ಯಕ್ತಿಯೊಬ್ಬರು ತಮ್ಮ 6 ವರ್ಷದ ಮಗನಿಗೆ ವೇಳಾಪಟ್ಟಿ ರಚಿಸಿಕೊಟ್ಟಿದ್ದು, ಇದನ್ನು ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಳಕೆದಾರರು ಅವರು ತಮ್ಮ ಮಗ ಅಬೀರ್ ಅವರೊಂದಿಗೆ ಸಹಿ ಮಾಡಿದ ಕೈಬರಹದ ವೇಳಾಪಟ್ಟಿ ಒಪ್ಪಂದದ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

    ಏನಿದು ವೇಳಾಪಟ್ಟಿ ಒಪ್ಪಂದ?- ಈ ಒಪ್ಪಂದವು ಮಗು ದಿನನಿತ್ಯದ ಚಟುವಟಿಕೆಗಳನ್ನು ಒಳಗೊಂಡಿದೆ. ಬೆಳಿಗ್ಗೆ ಎದ್ದು ಶುಚಿಯಾಗುವುದು, ಹಾಲು ಕುಡಿಯುವುದು ಮತ್ತು ಹೋಂ ವರ್ಕ್ ಮಾಡುವುದು, ಅಳದೇ, ಕೂಗಾಡದೇ, ಗೊಣಗದೇ ಅಥವಾ ಜಗಳವಾಡದೆ ತನ್ನ ಕೆಲಸಗಳನ್ನು ಪೂರ್ಣಗೊಳಿಸಬೇಕು. ಹೀಗೆ ಮಾಡಿದರೆ, ತಂದೆ ಮಗನಿಗೆ ಪ್ರತಿದಿನ 10 ರೂ. ನೀಡುವುದಾಗಿ ಪಟ್ಟಿಯಲ್ಲಿ ಬರೆದಿದ್ದಾರೆ. ಅಲ್ಲದೆ, ಮಗು ಒಂದು ವಾರ ಪೂರ್ತಿ ಒಳ್ಳೆಯ ನಡತೆಯೊಂದಿಗೆ ಮುಂದುವರಿದರೆ, ಅವನಿಗೆ ಬೋನಸ್ ಆಗಿ 100 ರೂ. ಕೊಡುವುದಾಗಿ ಒಪ್ಪಂದ ಮಾಡಿಕೊಂಡಿದ್ದಾರೆ.

    ಇದೀಗ ಜಾಲತಾಣದಲ್ಲಿ ಈ ಒಪ್ಪಂದಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ. 32 ಸಾವಿರಕ್ಕೂ ಹೆಚ್ಚು ಮಂದಿ ಇದಕ್ಕೆ ಸ್ಪಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಗುವಿನ ತಂದೆ ನನ್ನ ಮಗು ಸುಮಾರು 2 ಸಾವಿರ ರೂ. ಸಂಪಾದಿಸಿದ್ದಾನೆ. ಶಾಲೆಗಳು ಪ್ರಾರಂಭವಾದ ಬಳಿಕ ವೇಳಾಪಟ್ಟಿ ಬದಲಾಯಿಸಲಾಯಿತು ಎಂದು ಹೇಳಿದ್ದಾರೆ.

  • ಶಾಲಾ ಮಕ್ಕಳಿಗೆ ಪೂರ್ಣ ಪ್ರಮಾಣದ ತರಗತಿ – ದಸರಾಗೆ 14 ದಿನ ರಜೆ

    ಶಾಲಾ ಮಕ್ಕಳಿಗೆ ಪೂರ್ಣ ಪ್ರಮಾಣದ ತರಗತಿ – ದಸರಾಗೆ 14 ದಿನ ರಜೆ

    ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಕೊರೊನಾದಿಂದ ಎರಡು ವರ್ಷ ಸಂಪೂರ್ಣ ತರಗತಿಗಳು ನಡೆದಿರಲಿಲ್ಲ. ಆದರೆ ಈ ವರ್ಷ ಪೂರ್ಣ ಪ್ರಮಾಣದ ತರಗತಿಗಳು ನಡೆಸಲು ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.

    ಈ ಶೈಕ್ಷಣಿಕ ವರ್ಷದಲ್ಲಿ 270 ದಿನಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮೀಸಲು ಇಡಲಾಗಿದೆ. ಈ ವರ್ಷದ ದಸರಾಗೆ 14 ದಿನ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಇಲಾಖೆ ಈ ಬಾರಿ ಹಮ್ಮಿಕೊಂಡಿದೆ. ಸರ್.ಎಂ. ವಿಶ್ವೇಶ್ವರಯ್ಯ ದಿನಾಚರಣೆ, ಮಹಾತ್ಮ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ, ಕನಕದಾಸರ ಜಯಂತಿ, ಸಂವಿಧಾನ ದಿನ, ಸಾವಿತ್ರ ಬಾಯಿ ಫುಲೆ, ವಿವೇಕಾನಂದರು ಸೇರಿದಂತೆ ಹಲವು ದಿನಾಚರಣೆ ಮತ್ತು ದಾರ್ಶನಿಕರ ಜಯಂತಿ ಆಚರಣೆಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಂಪ್ರದಾಯಕ್ಕೆ ಬ್ರೇಕ್‌ – ಸೂರ್ಯಾಸ್ತದ ಬಳಿಕ ಕೆಂಪು ಕೋಟೆಯಲ್ಲಿ ಮೋದಿ ಭಾಷಣ

    ಶಿಕ್ಷಣ ಇಲಾಖೆ ಶೈಕ್ಷಣಿಕ ವೇಳಾಪಟ್ಟಿಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಖಾಸಗಿ ಶಾಲೆಗಳ ಸಂಘಟನೆ ಕ್ಯಾಮ್ಸ್ ನಿಂದ ವೇಳಾಪಟ್ಟಿ ವಿರೋಧ ಮಾಡಿದ್ದು, ವೇಳಾಪಟ್ಟಿಯಲ್ಲಿ ಕೆಲವು ಗೊಂದಲಗಳಿವೆ, ಅದನ್ನು ಸರಿ ಮಾಡುವಂತೆ ಒತ್ತಾಯಿಸಿದ್ದಾರೆ.

    ಅಕ್ಟೋಬರ್ ತಿಂಗಳಿನಲ್ಲಿ 22 ದಿನ ಶೈಕ್ಷಣಿಕ ಚಟುವಟಿಕೆ ಮಾಡುವಂತೆ ನಿಗಧಿ ಮಾಡಲಾಗಿದೆ. ಆದರೆ ಅಕ್ಟೋಬರ್ ತಿಂಗಳಿನಲ್ಲಿ ದಸರಾಗೆ 14 ದಿನ ರಜೆ ನೀಡಲಾಗಿದೆ. ದೀಪಾವಳಿ ರಜೆ ಸೇರಿ 14-16 ದಿನ ಅಕ್ಟೋಬರ್ ತಿಂಗಳಲ್ಲಿ ಕಡಿಮೆ ಆಗಲಿದೆ. 14 ದಿನ ರಜೆ ಕೊಟ್ಟು 22 ದಿನ ಚಟುವಟಿಕೆಗಳನ್ನು ನಡೆಸಿ ಎನ್ನುವುದು ಸರಿಯಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಬೇಕು ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಒತ್ತಾಯ ಮಾಡಿದ್ದಾರೆ. 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಹೀಗಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಬಾರುಕೋಲು ಬೀಸುತ್ತೇನೆ: ಸಿದ್ದರಾಮಯ್ಯ


    ಯಾವ ದಿನ ಏನು?

    ಮೇ 16 – ಶಾಲೆಗಳು ಪ್ರಾರಂಭ
    ಮೇ 16 ರಿಂದ 20 – ಶಾಲಾ ದಾಖಲಾತಿ ಪ್ರಕ್ರಿಯೆ
    ಮೇ 17 ರಿಂದ 31 – ಕಲಿಕಾ ಚೇತರಿಕೆ ಕಾರ್ಯಕ್ರಮ
    ಮೇ 28 – ಪೋಷಕರು, ತಾಯಂದಿರ ಸಭೆ
    ಜೂನ್ 1 – ಪ್ರಸಕ್ತ ಸಾಲಿನ ಪಠ್ಯ ಬೋಧನೆಗೆ ಚಾಲನೆ
    ಅಕ್ಟೋಬರ್ 3 ರಿಂದ 16 – ದಸರಾ ರಜೆ
    ಅಕ್ಟೋಬರ್ 17 ರಿಂದ 25 – ಅರ್ಧ ವಾರ್ಷಿಕ ಪರೀಕ್ಷೆಗಳು
    2023 ಫೆಬ್ರವರಿ 20 ರಿಂದ 25 – ಪೂರ್ಣ ಸಿದ್ದತಾ ಪರೀಕ್ಷೆ
    2023 ಮಾರ್ಚ್ 23 ರಿಂದ 31 – ವಾರ್ಷಿಕ ಪರೀಕ್ಷೆ

  • ದ್ವಿತೀಯ PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

    ದ್ವಿತೀಯ PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಪರಿಷ್ಕೃತ ಅಂತಿಮ ವೇಳಾಪಟ್ಟಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಏಪ್ರಿಲ್‌ 22ರಿಂದ ಮೇ 18ರವರೆಗೆ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿದೆ.

    ಪಿಯುಸಿ ಅಂತಿಮ ವೇಳಾಪಟ್ಟಿ
    ಏಪ್ರಿಲ್ 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಏಪ್ರಿಲ್ 23 – ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ
    ಏಪ್ರಿಲ್ 25 – ಅರ್ಥಶಾಸ್ತ್ರ
    ಏಪ್ರಿಲ್ 26 – ರಸಾಯನಶಾಸ್ತ್ರ ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ
    ಏಪ್ರಿಲ್ 27 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
    ಏಪ್ರಿಲ್ 28 – ಕನ್ನಡ, ಅರೇಬಿಕ್
    ಮೇ 2- ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮೇ 4- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್‌ಕೇರ್, ಆಟೋಮೊಬೈಲ್, ಬ್ಯೂಟಿ ಅಂಡ ವೆಲ್‌ನೆಸ್‌
    ಮೇ 5- ಇಂಗ್ಲಿಷ್
    ಮೇ 10- ಇತಿಹಾಸ,ಭೌತಶಾಸ್ತ್ರ
    ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
    ಮೇ 18- ಹಿಂದಿ

    ಈ ಮೊದಲು ಏಪ್ರಿಲ್ 16 ರಿಂದ ಮೇ 6 ರ ವರೆಗೆ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಜೆಇಇ ಪರೀಕ್ಷೆಗಳು ಈ ದಿನಾಂಕದಲ್ಲಿ ಇರುವ ಕಾರಣ ಪಿಯುಸಿ ಬೋರ್ಡ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ ಬದಲಾವಣೆ ಮಾಡಲಾಗಿತ್ತು. ಮತ್ತೆ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಈಗ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ. ಇದನ್ನೂ ಓದಿ: ನೀರು ಕುಡಿಯೋಕೆ ಹೊರಟ ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಯಡಿಯೂರಪ್ಪ..!

  • ಏಪ್ರಿಲ್ 16ರಿಂದ ಸೆಕೆಂಡ್ ಪಿಯು ಎಕ್ಸಾಂ- ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಏಪ್ರಿಲ್ 16ರಿಂದ ಸೆಕೆಂಡ್ ಪಿಯು ಎಕ್ಸಾಂ- ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.

    ಏಪ್ರಿಲ್ 16 ರಿಂದ ಮೇ 4 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಪಿಯು ಬೋರ್ಡ್ ನಿಂದ ವೇಳಾಪಟ್ಟಿ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1 ವರೆಗೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 17 ರಿಂದ ಮಾರ್ಚ್ 25 ವರೆಗೆ ನಡೆಸಲು ದಿನಾಂಕ ನಿಗದಿಯಾಗಿದೆ.

    ದ್ವಿತೀಯ ಪಿಯುಸಿ ಪರೀಕ್ಷೆಗೆ ಶೇ.70ರಷ್ಟು ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದೆ. ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದ್ದು, ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಶೇ.100ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪಿಯು ಬೋರ್ಡ್ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕನ್ನಡಕ್ಕೆ ಬಂದಿದೆ ಹೊಸ ಫಾಂಟ್ ಬಂಡೀಪುರ!

    ಇತ್ತ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೂ ದಿನಾಂಕ ನಿಗದಿ ಮಾಡಲಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪರೀಕ್ಷೆ ನಡೆಯಲಿದೆ. ಪ್ರಥಮ ಪಿಯುಸಿ ಪರೀಕ್ಷೆಗೆ ಶೇ.70 ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದ್ದು, ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ. ಇಲ್ಲಿಯೂ ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಶೇ.100ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ.

    ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಇಂತಿದೆ:
    ಏ.16- ಗಣಿತ, ಶಿಕ್ಷಣ, ಬೇಸಿಕ್ ಗಣಿತ.
    ಏ.18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
    ಏ.19– ಹೆಲ್ತ್ ಕೇರ್, ರೀಟೇಲ್, ಇನ್ಫಾರ್ಮೇಶನ್ ಟೆಕ್ನಾಲಜಿ.
    ಏ.20- ಇತಿಹಾಸ, ಭೌತಶಾಸ್ತ್ರ
    ಏ.21– ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್.
    ಏ.22– ಲಾಜಿಕ್, ಬ್ಯುಸಿನೆಸ್ ಸ್ಟಡೀಸ್.
    ಏ.23- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ.
    ಏ.25- ಅರ್ಥಶಾಸ್ತ್ರ
    ಏ.26- ಹಿಂದಿ.
    ಏ.28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
    ಏ.29- ಕನ್ನಡ.
    ಏ.30– ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    ಮೇ.2-ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮೇ.4- ಇಂಗ್ಲಿಷ್

  • ಇಂದಿನಿಂದ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

    ಇಂದಿನಿಂದ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

    – ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ

    ಬೆಂಗಳೂರು: ಕೊರೊನಾ ಎರಡನೇ ಅಲೆ ಮಧ್ಯೆ ಶಿಕ್ಷಣ ಇಲಾಖೆ 2021ನೇ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಾರಂಭ ಮಾಡಿದೆ. ಇಂದಿನಿಂದ ಜುಲೈ 10ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

    ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆ ನಡೆಸಲು ಕೆಇಎ ಈಗಾಗಲೇ ವೇಳಾಪಟ್ಟಿ ಪ್ರಕಟ ಮಾಡಿದೆ. ಹೀಗಾಗಿ ಇದೀಗ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಪರೀಕ್ಷೆ ಬರೆಯಲು ಆಸಕ್ತಿ ಇರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ಎಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ-ಫಾರ್ಮ್, ಕೃಷಿ ವಿಜ್ಞಾನ, ವೆಟರಿನರಿ ಕೋರ್ಸ್ ಸೀಟು ಹಂಚಿಕೆಗೆ ರಾಜ್ಯ ಸರ್ಕಾರ ಸಿಇಟಿ ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೇಳಾಪಟ್ಟಿ ಹೀಗಿದೆ.

    ಕೆಇಎ ವೇಳಾಪಟ್ಟಿ
    – ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ- ಜೂನ್ 15 ರಿಂದ ಜುಲೈ 10ವರೆಗೆ
    – ಆನ್‍ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನ- ಜುಲೈ 13
    – ವಿಶೇಷ ಪ್ರವರ್ಗಗಳ ದಾಖಲಾತಿ ಸಲ್ಲಿಕೆ- ಜುಲೈ 14 ರಿಂದ ಜುಲೈ 20
    – ಆನ್‍ಲೈನ್ ಅರ್ಜಿ ಮಾಹಿತಿ ತಿದ್ದುಪಡಿ- ಜುಲೈ 19 ರಿಂದ ಜುಲೈ 22
    – ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳುವುದು- ಆಗಸ್ಟ್ 13ರಿಂದ