Tag: ವೈಟ್ ಟಾಪಿಂಗ್

  • ವೈಟ್ ಟಾಪಿಂಗ್ ಕಾಮಗಾರಿ- ಜೆಸಿ ರಸ್ತೆಯಲ್ಲಿ 1 ತಿಂಗಳು ವಾಹನ ಸಂಚಾರ ಸ್ಥಗಿತ

    ವೈಟ್ ಟಾಪಿಂಗ್ ಕಾಮಗಾರಿ- ಜೆಸಿ ರಸ್ತೆಯಲ್ಲಿ 1 ತಿಂಗಳು ವಾಹನ ಸಂಚಾರ ಸ್ಥಗಿತ

    ಬೆಂಗಳೂರು: ವೈಟ್ ಟಾಪಿಂಗ್ (White Topping) ಕಾಮಗಾರಿ ಹಿನ್ನೆಲೆ ಜೆ.ಸಿ. ರಸ್ತೆಯಲ್ಲಿ 1 ತಿಂಗಳು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

    ನ.7 ರಿಂದ ಡಿ.8 ವರೆಗೆ ಒಂದು ತಿಂಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇಂದಿನಿಂದ ಬಿಬಿಎಂಪಿ (BBMP) ವತಿಯಿಂದ ಜೆ.ಸಿ. ರಸ್ತೆಯ ನಾಲಾ ಜಂಕ್ಷನ್‌ನಿಂದ ಟೌನ್ ಹಾಲ್ ಜಂಕ್ಷನ್‌ವರೆಗೆ ಕಾಮಗಾರಿ ನಡೆಯಲಿದೆ. ಈ ಕಾರಣ ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಆಗಿದೆ. ಪರ್ಯಾಯ ರಸ್ತೆಗಳನ್ನ ಬಳಸುವಂತೆ ಸಂಚಾರ ಪೊಲೀಸರ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂಗೆ ಮತ್ತೆ ಸಂಕಷ್ಟ; ಲೋಕಾಯುಕ್ತ ಬಳಿಕ ಇ.ಡಿ ವಿಚಾರಣೆ ಭೀತಿ ಶುರು

    ಹೊಸೂರು ರಸ್ತೆಯಿಂದ ಜೆಸಿ ರಸ್ತೆ ಮುಖಾಂತರ ಮೆಜೆಸ್ಟಿಕ್‌ಗೆ (Mejestic) ಹೋಗಬಹುದು. ಬೆಂಗಳೂರು ಉತ್ತರ ದಿಕ್ಕಿನ ಕಡೆಗೆ ಸಂಚರಿಸುತ್ತಿದ್ದ ವಾಹನಗಳು ಲಾಲ್‌ಬಾಗ್ ಮುಖ್ಯದ್ವಾರದ ಬಳಿ ಬಲ ತಿರುವು ಪಡೆದು, ಕೆ.ಹೆಚ್ ರಸ್ತೆ, ಶಾಂತಿನಗರ, ರಿಚ್ಚಂಡ್, ಆರ್‌ಆರ್‌ಎಂಆರ್ ರಸ್ತೆ, ಜಂಕ್ಷನ್ ತಲುಪಬಹುದು. ಸೌತ್ ಎಂಡ್ ಸರ್ಕಲ್‌ನಿಂದ ಜೆಸಿ ರಸ್ತೆ ಮುಖಾಂತರ ಮೆಜೆಸ್ಟಿಕ್, ಬೆಂಗಳೂರು ಉತ್ತರ ದಿಕ್ಕಿನ ಕಡೆಗೆ ಸಂಚರಿಸುತ್ತಿದ್ದ ವಾಹನಗಳು ಮಿನರ್ವ ಸರ್ಕಲ್ ಬಳಿ ಎಡ ತಿರುವು ಪಡೆದು, ಲಾಲ್‌ಬಾಗ್ ಪೋರ್ಟ್ ರಸ್ತೆ, ಕೆ.ಆರ್ ರಸ್ತೆ ಮುಖಾಂತರ ಸಂಪರ್ಕ ಪಡೆಯಬಹುದು. ಇದನ್ನೂ ಓದಿ: Hubballi| ಜನವಸತಿ ಪ್ರದೇಶದಲ್ಲಿ ಬಾರ್ ಆರಂಭ- ಸ್ಥಳೀಯರಿಂದ ತೀವ್ರ ಪ್ರತಿಭಟನೆ

  • ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಬೆಂಗಳೂರು: ಸಿಲಿಕಾನ್ ಸಿಟಿಯ (Silicon City) ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ (BMTC Bus Stand) ಮುಖ್ಯರಸ್ತೆಗೆ ವೈಟ್ ಟಾಪಿಂಗ್ (White Topping) ಭಾಗ್ಯ ಒದಗಿ ಬಂದಿದೆ.

    ಇತ್ತೀಚಿಗೆ ಬೆಂಗಳೂರಿನಲ್ಲಿ ಗುಂಡಿಗಳ ಸಮಸ್ಯೆ ಕೇಳಿ ಬರುತ್ತಿರುವುದು ಸಾಮಾನ್ಯವಾಗಿದೆ. ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಮುಖ್ಯರಸ್ತೆ ಗುಂಡಿಮಯ ಆಗಿದೆ. ಇದರಿಂದ ಜನರಿಗೆ ಓಡಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಬೃಹತ್ ಗಾತ್ರದ ಗುಂಡಿಗಳಿಂದ ವಾಹನಗಳು ಓಡಾಡುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ವೈಟ್ ಟಾಪಿಂಗ್ ಕಾಮಗಾರಿ ಮಾಡಲು ಬಿಬಿಎಂಪಿ (BBMP) ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಾ ಇದ್ದಾರೆ: ಪೇಜಾವರ ಶ್ರೀ

    ಸದ್ಯ ವೈಟ್ ಟಾಪಿಂಗ್ ಮಾಡಲು ಸಿದ್ಧವಾಗಿದ್ದು, ವೈಟ್ ಟಾಪಿಂಗ್ ಕಾಮಗಾರಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಆರಂಭ ಆಗಲಿದೆ. ರಸ್ತೆಯ ಒಂದು ಭಾಗವನ್ನು ಬಂದ್ ಮಾಡಿ ಕಾಮಗಾರಿ ಆರಂಭ ಮಾಡಲಿದ್ದು, ಮತ್ತೊಂದು ಭಾಗದಲ್ಲಿ ರಸ್ತೆ ಸಂಚಾರ ಇರಲಿದೆ. ವೈಟ್ ಟ್ಯಾಪಿಂಗ್ ಕೆಲಸದಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ.

    ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಓಡಾಟಕ್ಕೆ ಸಮಸ್ಯೆ ಆಗಲಿದೆ. ರೈಲ್ವೆ ಸ್ಟೇಷನ್, ಆನಂದ್ ರಾವ್ ಸರ್ಕಲ್, ಚಿಕ್ಕಪೇಟೆ, ಉಪ್ಪಾರಪೇಟೆ ಸೇರಿದಂತೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಲಿದೆ. ಕಾಮಗಾರಿ ಆರಂಭವಾದ ನಾಲ್ಕು ತಿಂಗಳುಗಳ ಕಾಲ ಈ ಸಮಸ್ಯೆ ಇರಲಿದೆ.

    ಮೆಜೆಸ್ಟಿಕ್‌ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮಾಡುವುದು ಒಳ್ಳೆಯ ವಿಚಾರವಾದರೆ ಕಾಮಗಾರಿ ಆರಂಭ ಮಾಡಿ ಬೇಗ ಕೆಲಸ ಮುಗಿಸುತ್ತಾರಾ ಎನ್ನುವುದೇ ಸದ್ಯದ ಕುತೂಹಲ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ: 28-10-2024

  • ಸಿಲಿಕಾನ್ ಸಿಟಿಯಲ್ಲಿ ಡೆಡ್‌ಲೈನ್ ಅಂತ್ಯ ಕಂಡರೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ

    ಸಿಲಿಕಾನ್ ಸಿಟಿಯಲ್ಲಿ ಡೆಡ್‌ಲೈನ್ ಅಂತ್ಯ ಕಂಡರೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ

    ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಳಕ್ಕೆ ಡೆಡ್‌ಲೈನ್ ಮುಗಿದಿದ್ದರೂ ವೈಟ್ ಟಾಪಿಂಗ್ (White Topping) ಕಾಮಗಾರಿ ಮುಕ್ತಾಯ ಆಗುತ್ತಿಲ್ಲ ಎಂದು ಸೌರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವೈಟ್ ಟಾಪಿಂಗ್ ಕಾಮಗಾರಿ ತಡ ಆಗುವುದಕ್ಕೆ ಪೊಲೀಸ್ ಇಲಾಖೆ, ಬೆಸ್ಕಾಂ (BESCOM), ಜಲಮಂಡಳಿ (BWSSB) ಮೇಲೆ ಬಿಬಿಎಂಪಿಯವರು (BBMP) ಗೂಬೆ ಕೂರಿಸುತ್ತಿದ್ದಾರೆ. ಈ ಕಾಮಗಾರಿ ತಡ ಆಗುವುದಕ್ಕೆ ಸಾರ್ವಜನಿಕರ ಸಮಸ್ಯೆ ಆಗುತ್ತಿದೆ. ಈ ಹಿನ್ನೆಲೆ ಇಲಾಖೆಗಳ ಜೊತೆ ಸಮನ್ವಯ ಸಾಧಿಸಲು ಮನೀಷ್ ಮೌದ್ಗಿಲ್ (Manish Mudgal) ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದು, ಮುಂದಿನ ವಾರದಲ್ಲಿ ಮತ್ತೆ ಏಳು ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭಿಸಲಿದೆ.ಇದನ್ನೂ ಓದಿ: ಪ್ರಪಂಚದಾದ್ಯಂತ ಈ ವರ್ಷ ಡೆಂಗ್ಯೂ ಪ್ರಕರಣ ಹೆಚ್ಚಳ – ಕಾರಣವೇನು? 

    ಒಟ್ಟು 90ಕ್ಕೂ ಹೆಚ್ಚು ರಸ್ತೆಗಳಲ್ಲಿ ಬಿಬಿಎಂಪಿ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮಾಡಲು ಮುಂದಾಗಿದೆ. ಈಗಾಗಲೇ ಚಿಕ್ಕಪೇಟೆ, ರಾಜ್‌ಕುಮಾರ್ ರಸ್ತೆ ಸೇರಿದಂತೆ ಹಲವು ಕಡೆ ವೈಟ್ ಟಾಪಿಂಗ್ ಆರಂಭ ಮಾಡಿ 100 ದಿನ ಕಳೆದರೂ ಕಾಮಗಾರಿ ಮುಕ್ತಾಯ ಆಗಿಲ್ಲ. ನೀಡಿದ್ದ ಕಾಲಾವಕಾಶ ಮುಗಿದರೂ ಇನ್ನು ಕಾಮಗಾರಿ ಕೆಲಸ ಮುಗಿದಿಲ್ಲ. ಇದರಿಂದಾಗಿ ಚಿಕ್ಕಪೇಟೆಯಲ್ಲಿ ಟ್ರಾಫಿಕ್ ಸಮಸ್ಯೆ, ವ್ಯಾಪಾರಕ್ಕೆ ಸಮಸ್ಯೆ, ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ.

    ಬಿಬಿಎಂಪಿ ಮುಖ್ಯ ಮಾತನಾಡಿ, ಆಯುಕ್ತರು ವೈಟ್ ಟಾಪಿಂಗ್ ಕಾಮಗಾರಿ ತಡ ಆಗುವುದಕ್ಕೆ ಪೊಲೀಸ್ ಇಲಾಖೆ, ಜಲಮಂಡಳಿ ಹಾಗೂ ಬೆಸ್ಕಾಂ ಕಾರಣ ಎಂದು ತಿಳಿಸಿದ್ದಾರೆ. ಪೊಲೀಸ್ ಇಲಾಖೆ ಬದಲಿ ಮಾರ್ಗ ನೀಡಲ್ಲ, ಜಲಮಂಡಳಿ ಪೈಪ್ ಮಾಹಿತಿ ನೀಡಲ್ಲ ಈ ಕಾರಣದಿಂದಾಗಿ ತಡ ಆಗುತ್ತಿದೆ. ಇಲಾಖೆಗಳ ಜೊತೆ ಸಮನ್ವಯ ಸಾದಿಸಲು ಬಿಬಿಎಂಪಿ ವಿಶೇಷ ಆಯುಕ್ತ ಮನೀಷ್ ಮೌದ್ಗಿಲ್ ನೇತೃತ್ವದಲ್ಲಿ ತಂಡ ರಚನೆ ಮಾಡಿದ್ದಾರೆ.

    ಹೆಣ್ಣೂರು ಜಂಕ್ಷನ್, ತುಮಕೂರು ರಸ್ತೆಯ (Tumkuru Road) ಎಂಇಎ ಮುಖ್ಯ ರಸ್ತೆ, ರಾಜ್‌ಕುಮಾರ್ ರಸ್ತೆಯ (Rajkumar Road) ಒಳಭಾಗದ ರಸ್ತೆಗಳು, ಮಹಾದೇವಪುರ, ಪಶ್ಚಿಮ ವಲಯದ ಹಲವು ಪ್ರದೇಶದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಆರಂಭ ಆಗಲಿದ್ದು, ಟ್ರಾಫಿಕ್ ಸಮಸ್ಯೆ ಆಗುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

    ಒಟ್ಟಾರೆ ವೈಟ್ ಟಾಪಿಂಗ್ ರಸ್ತೆ ಮಾಡುವುದು ಒಳ್ಳೆಯದೇ ಆದರೆ ಕೊಟ್ಟಿರುವ ಸಮಯದ ಒಳಗಡೆ ಮುಗಿಸಬೇಕು. ಇಲ್ಲದೇ ಇದ್ದರೆ ಸಾರ್ವಜನಿಕರಿಗೆ ಸಮಸ್ಯೆ ಆಗಲಿದೆ. ಈಗಾಗಿ ಡೆಡ್‌ಲೈನ್ (DeadLine) ಒಳಗಡೆ ವೈಟ್ ಟಾಪಿಂಗ್ ಕಾಮಗಾರಿ ಮುಗಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿ ಮಾಡಿಕೊಡುತ್ತಾರಾ ಎನ್ನುವುದು ಕಾದು ನೋಡಬೇಕಿದೆ.ಇದನ್ನೂ ಓದಿ: ಇರಾನ್‌ನಿಂದ ಕ್ಷಿಪಣಿ ದಾಳಿ – ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರು, ಟರ್ಕಿಯಲ್ಲಿ ಲ್ಯಾಂಡಿಂಗ್‌

  • ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

    ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಿಬಿಎಂಪಿ (BBMP) ವೈಟ್ ಟಾಪಿಂಗ್ ಕಾಮಗಾರಿ ಮಾಡಲು ತಯಾರಿ ನಡೆಸುತ್ತಿದೆ. 15 ಪ್ಯಾಕೇಜ್‌ಗಳಲ್ಲಿ 43 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಮಾಡಲು ಬ್ಲೂಪ್ರಿಂಟ್ ರೆಡಿ ಮಾಡಿದೆ. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಈಗಾಗಲೇ ಎಂಜಿನಿಯರ್‌ಗಳ ಜೊತೆ ಸಭೆ ಮಾಡಿದ್ದು, ಭೂಮಿ ಪೂಜೆ ಮಾಡೋದಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

    ನಗರದಲ್ಲಿ ವೈಟ್ ಟಾಪಿಂಗ್ (White Topping) ಕಾಮಗಾರಿ ಅನುಷ್ಠಾನಗೊಳಿಸುವ ಸಂಬಂಧ ಜಲಮಂಡಳಿಯ ನೀರಿನ ಹಾಗೂ ಒಳಚರಂಡಿ ಕೊಳವೆ, ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಸಂಸ್ಥೆಯ ಕೇಬಲ್‌ಗಳು, ಗೇಲ್ ಗ್ಯಾಸ್ ಪೈಪ್ ಲೈನ್‌ಗಳ ಬದಲಾವಣೆ ಸೇರಿದಂತೆ ಇನ್ನಿತರೆ ಇಲಾಖೆಗಳು ಸ್ಥಳ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: PublicTV Explainer: ರಾಜ್ಯದಲ್ಲಿ ಆತಂಕ ಮೂಡಿಸಿದ ‘ಡೇಂಜರ್ ಡೆಂಗ್ಯೂ’

    ಬೆಂಗಳೂರು ಪಶ್ಚಿಮ ವಲಯ, ಪೂರ್ವ ವಲಯ, ದಕ್ಷಿಣ ವಲಯ, ರಾಜರಾಜೇಶ್ವರಿ ನಗರ ವಲಯ ಸೇರಿದಂತೆ ಇನ್ನೂ ಕೆಲವು ವಲಯದ 43 ರಸ್ತೆಗಳನ್ನು ಗುರುತು ಮಾಡಿದ್ದು, ವೈಟ್ ಟಾಪಿಂಗ್ ಮಾಡಲು ತಯಾರಿ ನಡೆದಿದೆ. ಈ ವರ್ಷ ಅಥವಾ ಮುಂದಿನ ವರ್ಷದ ಒಳಗೆ ಕಾಮಗಾರಿ ಮುಕ್ತಾಯ ಆಗಲಿದೆ. ಇದನ್ನೂ ಓದಿ: ಹತ್ರಾಸ್‌ ಕಾಲ್ತುಳಿತ ದುರಂತ; ಹೆಣಗಳ ರಾಶಿ ಕಂಡು ಹೃದಯಾಘಾತದಿಂದ ಪೊಲೀಸ್‌ ಕಾನ್‌ಸ್ಟೇಬಲ್‌ ಸಾವು

    ವೈಟ್ ಟಾಪಿಂಗ್ ಕಾಮಗಾರಿ ನಡೆಯೋ ರಸ್ತೆಗಳು:
    ನಾಗಾವರ ಮೈನ್ ರೋಡ್ ಟು ಶಾಂಪುರ್ ರೋಡ್ ಜಂಕ್ಷನ್
    ವೆಸ್ಟಾಫ್ ಕಾರ್ಡ್ ಜಂಕ್ಷನ್ ಟು ವಿಜಯನಗರ ಟಿಟಿಎಂಸಿ
    ಮಲ್ಲೇಶ್ವರಂ 18 ಮುಖ್ಯ ರಸ್ತೆ ಟು ಚಿತ್ತಾಪುರ ಮಠ ಸರ್ಕಲ್
    ಜಕ್ಕೂರು ರೋಡ್
    100 ಫಿಟ್ ರಿಂಗ್ ರೋಡ್ ಜಾಲಹಳ್ಳಿ ಕ್ರಾಸ್ ಟು – ಟಿವಿಎಸ್ ಕ್ರಾಸ್
    ಸಿಬಿಐ ರೋಡ್ ಫ್ರಮ್ ಬಳ್ಳಾರಿ ಟು ಆರ್‌ಟಿ ನಗರ ಮೈನ್ ರೋಡ್
    ರೇಸ್ ಕೋರ್ಸ್ ರೋಡ್ ಜಂಕ್ಷನ್ ಟು ಮೌರ್ಯ ಸರ್ಕಲ್ ರೋಡ್
    ಓಲ್ಡ್ ಪೋಸ್ಟ್ ಆಫೀಸ್ ರೋಡ್ ಟು ಸಿಟಿ ಸಿವಿಲ್ ಕೋರ್ಟ್ ಟು ಮೈಸೂರು ಬ್ಯಾಂಕ್ ಸರ್ಕಲ್
    ಮಹಾತ್ಮ ಗಾಂಧಿ ರೋಡ್ ಟು ಮಹಾತ್ಮ ಗಾಂಧಿ ಸರ್ಕಲ್ ಟ್ರಿನಿಟಿ ರೋಡ್
    ರೆಸಿಡೆನ್ಸಿ ರೋಡ್ ಟು ರಿಚ್ಮಂಡ್ ಎಂಜಿ ರೋಡ್

    ವೈಟ್ ಟಾಪಿಂಗ್ ಮಾಡುತ್ತೇವೆ ಎಂದು ಬಿಬಿಎಂಪಿ ಸಿದ್ಧತೆ ಮಾಡಿಕೊಂಡರೆ ಇನ್ನೊಂದೆಡೆ ಟ್ರಾಫಿಕ್ ಸಮಸ್ಯೆ ಕೂಡ ಆಗಲಿದೆ. ಜೊತೆಗೆ ಕಾಮಗಾರಿ ಆರಂಭ ಮಾಡಿದರೆ ಟ್ರಾಫಿಕ್ ಡೈವರ್ಶನ್ ಹೇಗಿರಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಹತ್ರಾಸ್‌ ಕಾಲ್ತುಳಿತಕ್ಕೆ 116 ಮಂದಿ ಬಲಿ – ಅಂದು ಹೆಡ್‌ ಕಾನ್‌ಸ್ಟೇಬಲ್‌ ಈಗ ಸ್ವಯಂಘೋಷಿತ ಗುರು!

  • ಸಿಎಂ ಓಲೈಕೆಗೆ 29 ಕೋಟಿ ಹೊಳೆ – ಏರ್‌ಪೋರ್ಟ್ ರೋಡ್ ಟೆಂಡರ್‌ಗೆ ಆಕ್ರೋಶ

    ಸಿಎಂ ಓಲೈಕೆಗೆ 29 ಕೋಟಿ ಹೊಳೆ – ಏರ್‌ಪೋರ್ಟ್ ರೋಡ್ ಟೆಂಡರ್‌ಗೆ ಆಕ್ರೋಶ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗಳಿಗೇನು ಬರವಿಲ್ಲ. ರಸ್ತೆ ಗುಂಡಿ ಮುಚ್ಚಲು ಪಾಲಿಕೆ ಬೆಟ್ಟ ಕಿತ್ತು ಗುಂಡಿ ಕಂಡಂತೆ ಕಥೆ ಹೇಳುತ್ತಲೇ ಇರುತ್ತದೆ. ಜನರಂತೂ ನಮ್ಮ ರೋಡ್ ರೆಡಿ ಮಾಡಿ, ನಮ್ ರೋಡ್ ರೆಡಿ ಮಾಡಿ ಅಂತಲೇ ಇರ್ತಾರೆ. ಹೀಗಿರುವಾಗ ನಮ್ ಏರಿಯಾ ಬೇಡ – ನಮ್ ಏರಿಯಾಗೆ ವೈಟ್ ಟಾಪಿಂಗ್ ಬೇಡ ಎನ್ನುತ್ತಿದ್ದರೂ, ಪಾಲಿಕೆ ಮಾತ್ರ ಬಿಡ್ತಿಲ್ಲ. ರಸ್ತೆ ಹೈಟೆಕ್ ಮಾಡಿಯೇ ಮಾಡ್ತೀವಿ ಎನ್ನುತ್ತಿದೆ.

    ತರಳಬಾಳು ರಸ್ತೆ ಆರ್.ಟಿ ನಗರ ಮೂಲಕ ಬಳ್ಳಾರಿ ರಸ್ತೆಗೆ ಸಂಪರ್ಕ ನೀಡುವ ರಸ್ತೆಯಾಗಿದೆ. ವಾಹನಗಳ ಸಂಚಾರ ಯಥೇಚ್ಛವಾಗಿರುವ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ದಿಗಾಗಿ 29 ಕೋಟಿ ಖರ್ಚು ಮಾಡಲು ಪಾಲಿಕೆ ಸಜ್ಜಾಗಿ ಟೆಂಡರ್ ಕರೆದಿದೆ. ಇದು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.‌ ಇದನ್ನೂ ಓದಿ: 3 ಸಾವಿರ ಕೆಜಿ ಪ್ಲಾಸ್ಟಿಕ್‌ನಿಂದ ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಯ್ತು ರಸ್ತೆ – ಏನಿದರ ವಿಶೇಷ?

    ಸುಮಾರು 4.6 ಕಿಮೀ ರಸ್ತೆಗೆ ಕಳೆದ ಒಂದು ವರ್ಷ ಮೂರು ತಿಂಗಳಲ್ಲಿ ಎರಡೆರಡು ಬಾರಿ ಕಾಮಗಾರಿಗಳು ನಡೆದಿದೆ. ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ಮೇಲೆ ರಾತ್ರೋರಾತ್ರಿ ರಸ್ತೆ ಸರ್ಕಲ್ ಬ್ಯೂಟಿಫಿಕೇಶನ್ ಮಾಡಲಾಯ್ತು. ರಸ್ತೆ ಟ್ರಾಫಿಕ್ ಮಾರ್ಕಿಂಗ್, ಫುಟ್ ಪಾತ್ ಅಭಿವೃದ್ಧಿ ಶರವೇಗದಲ್ಲಿ ನಡೆಯಿತು. ಕಳೆದ ಮೂರು ತಿಂಗಳ ಹಿಂದೆ ಯೂಟಿಲಿಟಿ ಶಿಫ್ಟ್ ಎಂದು 600 ಮೀಟರ್ ಗೆ ಡಾಂಬರೀಕರಣ ಕಾಮಗಾರಿ 6 ತಿಂಗಳ ಒಳಗೆ ಮುಗಿದಿದೆ. ಆದರೂ ಈಗ ಮತ್ತೆ ವೈಟ್ ಟಾಪಿಂಗ್ ರಸ್ತೆ ಬೇಕಾ ಎಂದು ಹಲವು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಒಂದು ಗಂಟೆಯ ಹಗ್‌ಗೆ 7 ಸಾವಿರ ಸಂಭಾವನೆ ಪಡೀತಾನೆ ಈ ವ್ಯಕ್ತಿ!

    ವೈಟ್ ಟಾಪಿಂಗ್ ರಸ್ತೆ ಮಾಡಲು ಮಾನದಂಡಗಳು ಹೀಗಿದೆ:
    * ಮೇಜರ್, ಸಬ್ ಆರ್ಡಿಯಲ್ ರೋಡ್ ಗಳ ಆಯ್ಕೆ
    * ಸರ್ಕಾರ,ಸ್ಥಳೀಯ ಶಾಸಕರ ಶಿಫಾರಸು ಮೇಲೆ ಆಯ್ಕೆ

    ನಗರದಲ್ಲಿ ಪ್ರತಿ ವಾರ ಫಿಕ್ಸ್ ಮೈ ಸ್ಟ್ರೀಟ್ ಆಪ್ ಮೂಲಕ ಗುಂಡಿಗಳ ಲೆಕ್ಕ ನೋಡಿದ್ರೆ ಪ್ರತಿ ವಾರ ಒಂದೂ ಸಾವಿರ ಗುಂಡಿಗಳು ಹೆಚ್ಚುತ್ತಲೇ ಇದೆ. ಹೀಗಿರುವಾಗ ಒಂದೂ ಗುಂಡಿ ಇಲ್ಲದ ರಸ್ತೆಗೆ ವೈಟ್ ಟಾಪಿಂಗ್ ಬೇಕಾ ಎಂದರೆ ಸದ್ಯ ವಾಹನ ಸವಾರರ ದೃಷ್ಟಿಯಿಂದ ದೀರ್ಘಕಾಲಿಕ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಚೀಫ್ ಇಂಜಿನಿಯರ್ ಲೋಕೇಶ್ ಸಮರ್ಥಿಸಿಕೊಳ್ಳುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್‍ಗೆ ಮತ್ತೊಂದು ಶಾಕ್ ನೀಡಲು ಬಿಎಸ್‍ವೈ ಸಿದ್ಧತೆ!

    ಕಾಂಗ್ರೆಸ್‍ಗೆ ಮತ್ತೊಂದು ಶಾಕ್ ನೀಡಲು ಬಿಎಸ್‍ವೈ ಸಿದ್ಧತೆ!

    ಬೆಂಗಳೂರು: ಫೋನ್ ಟ್ಯಾಪಿಂಗ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದ ಬೆನ್ನಲ್ಲೇ ಕಾಂಗ್ರೆಸ್‍ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಂದು ಶಾಕ್ ಕೊಟ್ಟಿದ್ದಾರೆ.

    ಕಾಂಗ್ರೆಸ್ ಅವಧಿಯಲ್ಲಿ ನಡೆದಿದ್ದ ವೈಟ್ ಟ್ಯಾಪಿಂಗ್ ಅಕ್ರಮದ ತನಿಖೆಗೆ ಸಿಎಂ ಯಡಿಯೂರಪ್ಪ ಆದೇಶಿಸಿದ್ದಾರೆ. ಸಮಗ್ರ ತನಿಖೆ ಮಾಡಿ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿಗಳಿಗೆ ಪತ್ರದ ಮೂಲಕ ಖಡಕ್ ಆದೇಶ ಕೊಟ್ಟಿದ್ದಾರೆ.

    ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಟೆಂಡರ್ ಶ್ಯೂರ್ ಹಾಗೂ ವೈಟ್ ಟ್ಯಾಪಿಂಗ್‍ನಲ್ಲಿ 2 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ಆಗಿದೆ ಎನ್ನುವ ಆರೋಪ ಕೇಳಿ ಬಂದಿತ್ತು.  1 ಕಿ.ಮೀಗೆ 11 ಕೋಟಿ ರೂ.ಯೋಜನೆಯಲ್ಲಿ ರಸ್ತೆ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ವೈಟ್ ಟಾಪಿಂಗ್‍ನ 1 ಮತ್ತು 2 ನೇ ಹಂತದ ಕಾಮಗಾರಿ ತನಿಖೆ ಆಗಲಿದೆ. ಜೊತೆಗೆ ಮೂರನೇ ಹಂತದ ಕಾಮಗಾರಿಯನ್ನು ತಕ್ಷಣವೇ ತಡೆ ಹಿಡಿಯಲು ಸಿಎಂ ಸೂಚಿಸಿದ್ದಾರೆ.

    2016-17ನೇ ಸಾಲಿನ ಮೊಲದ ಹಂತದ ಕಾಮಗಾರಿಯ ಸುಮಾರು 29 ರಸ್ತೆಗಳ, 93.47 ಕಿಲೋಮೀಟರ್ ಉದ್ದದ ರಸ್ತೆಯ 800 ಕೋಟಿ ಮೊತ್ತದ ಕಾಮಗಾರಿ,  2017-18ನೇ ಸಾಲಿನ ಎರಡನೇ ಹಂತದ ಕಾಮಗಾರಿಯ 41 ರಸ್ತೆಗಳು. 63.26 ಕಿಲೋಮೀಟರ್ ರಸ್ತೆ, 690 ಕೋಟಿ ವೆಚ್ಚದ ಕಾಮಗಾರಿಯ ತನಿಖೆ ನಡೆಯಲಿದೆ. ಅದೇ ರೀತಿ ಟೆಂಡರ್ ಶ್ಯೂರ್ 25 ರಸ್ತೆಗಳ, 36 ಕಿಲೋಮೀಟರ್ ಉದ್ದದ ರಸ್ತೆಯ 643 ಕೋಟಿ ಕಾಮಗಾರಿಯ ತನಿಖೆಗೆ ಸಿಎಂ ಆದೇಶಿಸಿದ್ದಾರೆ.

    ಒಟ್ಟು ಮೂರು ಕಾಮಗಾರಿಗಳ ತನಿಖೆಗೆ ಆದೇಶಿದ್ದು, ಮೂರನೇ ಹಂತದ ವೈಟ್ ಟ್ಯಾಪಿಂಗ್ ಕಾಮಗಾರಿ ಸ್ಥಗಿತ ಮಾಡುವಂತೆ ಸಿಎಂ ಸೂಚಿದ್ದಾರೆ. ಒಂದು ವೇಳೆ ತನಿಖೆಯಲ್ಲಿ ಅಕ್ರಮ ಸಾಬೀತಾದರೆ ಅಂದಿನ ಸಚಿವರಾದ ಕೆ.ಜೆ.ಜಾರ್ಜ್, ಪರಮೇಶ್ವರ್ ಸೇರಿದಂತೆ ಅನೇಕ ಜನರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಬಿಜೆಪಿ ನಾಯಕರ ಫೋನ್ ಕರೆಯನ್ನು ಕದ್ದಾಲಿಸಿದ್ದಾರೆ ಎನ್ನುವ ಆರೋಪದ ಬೆನ್ನಲ್ಲೇ ಸರ್ಕಾರ ಈಗ ಎಚ್‍ಡಿಕೆಯನ್ನು ಕಟ್ಟಿ ಹಾಕಲು ಮುಂದಾಗಿದೆ. ಮೊದಲನೆಯದಾಗಿ ಜಂತಕಲ್ ಮೈನಿಂಗ್ ಪ್ರಕರಣದ ತನಿಖೆಯನ್ನು ಕಳೆದ 4 ವರ್ಷಗಳಿಂದ ವಿಶೇಷ ತನಿಖಾ ತಂಡ ನಡೆಸಿಕೊಂಡು ಬರುತ್ತಿದೆ. ತನಿಖೆ ನಡೆದು 1.5 ವರ್ಷವಾದರೂ ಇನ್ನೂ ಚಾರ್ಜ್ ಶೀಟ್ ಸಲ್ಲಿಸಿಲ್ಲ. ಈಗ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಎಸ್‍ಐಟಿ ಸಿದ್ಧತೆ ನಡೆಸುತ್ತಿದೆ.

    ಐಎಂಎ ವಂಚಕ ಮನ್ಸೂರ್ ಜೊತೆ ಎಚ್‍ಡಿ ಕುಮಾರಸ್ವಾಮಿ ಗುರುತಿಸಿಕೊಂಡಿದ್ದರು. ಮನ್ಸೂರ್ ಜೊತೆ ಕುಮಾರಸ್ವಾಮಿ ಹಣವನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಈಗಾಗಲೇ ಕೇಳಿ ಬಂದಿದೆ. ಒಂದು ವೇಳೆ ಕೋರ್ಟ್ ವಿಚಾರಣೆಯ ವೇಳೆ ಮನ್ಸೂರ್ ಖಾನ್ ಕುಮಾರಸ್ವಾಮಿ ಅವರಿಗೂ ನಾನು ಹಣವನ್ನು ನೀಡಿದ್ದೇನೆ ಎಂದು ಬಾಯಿಬಿಟ್ಟರೆ ಈ ಪ್ರಕರಣವನ್ನೂ ಸಿಬಿಐಗೆ ನೀಡುವ ಸಾಧ್ಯತೆಯಿದೆ.

  • ಸಿದ್ದರಾಮಯ್ಯ ಅಲ್ಲ, ಇಡೀ ಬೆಂಗ್ಳೂರನ್ನು ಡಾನ್ ಗಳು ಆಳುತ್ತಿದ್ದಾರೆ- ಆರ್ ಅಶೋಕ್ ಗಂಭೀರ ಆರೋಪ

    ಸಿದ್ದರಾಮಯ್ಯ ಅಲ್ಲ, ಇಡೀ ಬೆಂಗ್ಳೂರನ್ನು ಡಾನ್ ಗಳು ಆಳುತ್ತಿದ್ದಾರೆ- ಆರ್ ಅಶೋಕ್ ಗಂಭೀರ ಆರೋಪ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಾನೂನೇ ಇಲ್ಲ. ಅವರು ಗೂಂಡಾಗಳ ಕೈಗೆ ಕಾನೂನು ಕೊಟ್ಟುಬಿಟ್ಟಿದ್ದಾರೆ. ಪೊಲೀಸರ ಕೈಯಲ್ಲಿ ಲಾಠಿಯಿಲ್ಲ. ಈ ಲಾಠಿಯನ್ನು ಗೂಂಡಾಗಳ ಕೈಗೆ ಕೊಟ್ಟಿದ್ದಾರೆ. ಹೀಗಾಗಿ ಇಡೀ ಬೆಂಗಳೂರನ್ನು ಡಾನ್ ಗಳು ಆಳುತ್ತಿದ್ದಾರೆ ಅಂತ ಮಾಜಿ ಡಿಸಿಎಂ ಆರ್ ಅಶೋಕ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

    ನಗರದ ದಾಸರಹಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ಪಾದಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಂಜಾ ಮಾಫಿಯಾಗಳು, ಅಂತರಾಷ್ಟ್ರೀಯ ಮಟ್ಟದ ಡಾನ್ ಗಳು ನಗರವನ್ನು ತಮ್ಮ ಹತೋಟಿಗೆ ತರುತ್ತಿದ್ದಾರೆ. ಹೀಗಾಗಿ ಸಿಎಂ ಹಾಗೂ ಪೊಲೀಸರ ಕೈಯಲ್ಲಿ ಅಧಿಕಾರವಿಲ್ಲ ಸರ್ಕಾರದ ವಿರುದ್ದ ಐಪಿಎಸ್ ಅಧಿಕಾರಿಗಳೇ ತಿರುಗಿ ಬಿದ್ದಿದ್ದಾರೆ. ಇದು ಸಿದ್ದರಾಮಯ್ಯ ಸರ್ಕಾರದ ಕೆಲಸ ತೋರಿಸುತ್ತದೆ ಅಂತ ವಾಗ್ದಾಳಿ ನಡೆಸಿದ್ದಾರೆ.

    ಸಿದ್ದರಾಮಯ್ಯ ಸರ್ಕಾರ 10% ಸರ್ಕಾರ ಅಲ್ಲ. 65% ಕಮೀಷನ್ ಸರ್ಕಾರ. ವೈಟ್ ಟ್ಯಾಪಿಂಗ್ ಕಾಮಗಾರಿಯಲ್ಲಿ 65%ರಷ್ಟು ಕಮಿಷನ್ ಹೊಡೆಯುತ್ತಿದ್ದಾರೆ. ಜನರ ಹಣವನ್ನು ಸಿಎಂ ಸಿದ್ದರಾಮಯ್ಯ ಲೂಟಿ ಹೊಡೆತಿದ್ದಾರೆ ಎಂದು ಆರೋಪಿಸಿದ್ದಾರೆ.