Tag: ವೈದ್ಯಕೀಯ ತಪಾಸಣೆ

  • ತಪಾಸಣೆ ಮಾಡದೇ ಕೈಗಾ ಪ್ರವೇಶಕ್ಕೆ ಹೊರರಾಜ್ಯದವರಿಗೆ ಅನುಮತಿ – 26 ಗ್ರಾ.ಪ ಸದಸ್ಯರಿಂದ ರಾಜೀನಾಮೆ

    ತಪಾಸಣೆ ಮಾಡದೇ ಕೈಗಾ ಪ್ರವೇಶಕ್ಕೆ ಹೊರರಾಜ್ಯದವರಿಗೆ ಅನುಮತಿ – 26 ಗ್ರಾ.ಪ ಸದಸ್ಯರಿಂದ ರಾಜೀನಾಮೆ

    ಕಾರವಾರ: ಲಾಕ್‍ಡೌನ್ ನಡುವೆಯೇ ಕೈಗಾ ಅಣು ಸ್ಥಾವರಕ್ಕೆ ಹೊರರಾಜ್ಯದ ಕೆಲಸಗಾರರಿಗೆ ತಪಾಸಣೆ ಮಾಡದೇ ಕೆಲಸ ನಿರ್ವಹಿಸಲು ಪ್ರವೇಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇದನ್ನು ಖಂಡಿಸಿ ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮ ಪಂಚಾಯ್ತಿಯ 26 ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

    ಅನುಮತಿ ಇಲ್ಲದಿದ್ದರೂ ಕೈಗಾ ಅಣು ವಿದ್ಯುತ್ ಸ್ಥಾವರ ಪ್ರದೇಶಕ್ಕೆ ಉತ್ತರಾಖಂಡ್ ರಾಜ್ಯದ ಕೆಲಸಗಾರರನ್ನು ಎರಡು ವಾಹನಗಳಲ್ಲಿ ಚಾಲಕರ ಸಹಿತ ಎಂಟು ಮಂದಿಯನ್ನು ಕರೆಸಲಾಗಿತ್ತು. ಅಲ್ಲದೇ ಅವರಿಗೆ ಯಾವುದೇ ವೈದ್ಯಕೀಯ ತಪಾಸಣೆ ಮಾಡದೇ ಕೈಗಾ ಅಣು ಸ್ಥಾವರದ ಒಳಗಡೆ ಹೋಗಲು ಅವಕಾಶ ನೀಡಲಾಗಿತ್ತು. ಹೀಗಾಗಿ ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯ್ತಿ ಸದಸ್ಯರನ್ನೊಳಗೊಂಡ ಟಾಸ್ಕ್ ಪೋರ್ಸ್ ಸಮಿತಿ ಜಿಲ್ಲಾಡಳಿತಕ್ಕೆ ದೂರು ನೀಡಿ, ಹೊರ ರಾಜ್ಯದಿಂದ ಬಂದ ಕೆಲಸಗಾರರ ವೈದ್ಯಕೀಯ ತಪಾಸಣೆ ಮಾಡುವಂತೆ ಮನವಿ ಮಾಡಿತ್ತು.

    ಆದರೇ ಈ ಮನವಿಗೆ ಅಧಿಕಾರಿಗಳು ಸ್ಪಂದಿಸದೇ ಸ್ಥಳೀಯರಿಗೊಂದು ನ್ಯಾಯ ಹೊರ ರಾಜ್ಯದವರಿಗೊಂದು ನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿ, ಅಧಿಕಾರಿಗಳ ತಾರತಮ್ಯಕ್ಕೆ ಕಾರವಾರದ ಮಲ್ಲಾಪುರ ಗ್ರಾಮ ಪಂಚಾಯ್ತಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ 26 ಜನ ಗ್ರಾಮ ಪಂಚಾಯ್ತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಕಾಲೇಜಿನಲ್ಲಿ ವೈದ್ಯಕೀಯ ಪರೀಕ್ಷೆ – ಮೂವರು ಗರ್ಭಿಣಿ, ವೈದ್ಯರಿಗೆ ಶಾಕ್

    ಕಾಲೇಜಿನಲ್ಲಿ ವೈದ್ಯಕೀಯ ಪರೀಕ್ಷೆ – ಮೂವರು ಗರ್ಭಿಣಿ, ವೈದ್ಯರಿಗೆ ಶಾಕ್

    ಹೈದರಾಬಾದ್: ವೈದ್ಯಕೀಯ ಪರೀಕ್ಷೆ ವೇಳೆ ತೆಲಂಗಾಣದ ಕಾಲೇಜಿನ ಮೂರು ಮಂದಿ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.

    ಕುಮಾರಂಭೀಮ್- ಅಸಿಫಾಬಾದ್ ಜಿಲ್ಲೆಯ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವೈದ್ಯಕೀಯ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ವೈದ್ಯಕೀಯ ತಪಾಸಣೆ ಮಾಡಿದಾಗ ವಿದ್ಯಾರ್ಥಿನಿಯರು ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ (ಡಿಸಿಪಿಒ), ಮೂವರು ವಿದ್ಯಾರ್ಥಿನಿಯರು ಕೆಲವು ದಿನಗಳ ಹಿಂದೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಹಾಗಾಗಿ ಮೂವರು ಗರ್ಭಿಣಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಪ್ರಕರಣದ ಆರೋಪಿ ಯಾರು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಮೂವರು ವಿದ್ಯಾರ್ಥಿನಿಯರಲ್ಲಿ ಇಬ್ಬರು ಮೊದಲನೇ ವರ್ಷ ಬಿಎಸ್‍ಸಿ ಓದುತ್ತಿದ್ದಾರೆ, ಮತ್ತೊಬ್ಬ ವಿದ್ಯಾರ್ಥಿನಿ ಎರಡನೇ ವರ್ಷ ಬಿಎಸ್‍ಸಿ ವ್ಯಾಸಂಗ ಮಾಡುತ್ತಿದ್ದಾರೆ.

    ನವೆಂಬರ್ 21ರಂದು ವೈದ್ಯಕೀಯ ತಪಾಸಣೆ ನಡೆದಿತ್ತು. ಆದರೆ ಶನಿವಾರ ಈ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣದ ಬಗ್ಗೆ ಸ್ಥಳೀಯ ಮಕ್ಕಳ ಹಕ್ಕುಗಳ ಕಾರ್ಯಕರ್ತ ಅಧಿಕಾರಿಗಳಿಗೆ ತಿಳಿಸಿದಾಗ ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ವಿದ್ಯಾರ್ಥಿನಿಯರ ಮನೆಗಳ ಬಳಿ ವಾಸಿಸುವ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬುದು ತಿಳಿದು ಬಂದಿದೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಯಾವುದೇ ದೂರನ್ನು ದಾಖಲಿಸಿಲ್ಲ.

  • ವ್ಹೀಲ್ ಚೇರ್ ಇಲ್ಲದೇ ರೇಪ್ ಆಗಿದ್ದ ಅಪ್ರಾಪ್ತ ಮಗಳನ್ನು ಬೆನ್ನಿನ ಮೇಲೆ ಹೊತ್ತೊಯ್ದ ತಂದೆ

    ವ್ಹೀಲ್ ಚೇರ್ ಇಲ್ಲದೇ ರೇಪ್ ಆಗಿದ್ದ ಅಪ್ರಾಪ್ತ ಮಗಳನ್ನು ಬೆನ್ನಿನ ಮೇಲೆ ಹೊತ್ತೊಯ್ದ ತಂದೆ

    ಲಕ್ನೋ: ಆಸ್ಪತ್ರೆಯಲ್ಲಿ ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸೌಲಭ್ಯವಿಲ್ಲದೇ ಅತ್ಯಾಚಾರಗೊಂಡಿದ್ದ ಅಪ್ರಾಪ್ತ ಮಗಳನ್ನು ತಂದೆಯೋರ್ವ ಬೆನ್ನಿನ ಮೇಲೆ ಹೊತ್ತೊಯ್ದ ಘಟನೆ ಉತ್ತರ ಪ್ರದೇಶದ ಮಾರ್ಹೆರಾ ಪ್ರದೇಶದಲ್ಲಿ ನಡೆದಿದೆ.

    ಡಿಸೆಂಬರ್ 14 ರಂದು ಅತ್ಯಾಚಾರವಾದ ಮಗಳನ್ನು ವೈದ್ಯಕೀಯ ತಪಾಸಣೆಗೆಂದು ಕರೆದುಕೊಂಡ ಬಂದ ತಂದೆಯೋರ್ವ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸೌಲಭ್ಯವಿಲ್ಲದೆ ತನ್ನ ಮಗಳನ್ನು ಬೆನ್ನಿನ ಮೇಲೆ ಹೋತ್ತುಕೊಂಡು ಹೋಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಡಿ.14 ರಂದು ತನ್ನ ಮನೆಯಲ್ಲಿದ್ದ 15 ವರ್ಷದ ಬಾಲಕಿಯನ್ನು ಆಕೆಯ ಮನೆಯ ಪಕ್ಕದಲ್ಲಿ ವಾಸವಿದ್ದ 19 ವರ್ಷದ ಯುವಕ ಅಂಕಿತ್ ಯಾದವ್ ಮನೆಯಿಂದ ಎಳೆದುಕೊಂಡು ಹೋಗಿ ಹಲವು ಗಂಟೆಗಳ ಕಾಲ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಬಾಲಕಿಯು ಆತನಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾಳೆ. ಆಗ ಅವಳ ಕಾಲು ಮತ್ತು ಕೈಗೆ ಗಂಭೀರವಾದ ಗಾಯವಾಗಿದ್ದು, ನಡೆಯಲು ಆಗದ ಸ್ಥಿತಿಗೆ ತಲುಪಿದ್ದಾಳೆ.

    ಇದಾದ ನಂತರ ಬಾಲಕಿಯ ತಂದೆ ದೂರು ನೀಡಲು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ದೂರು ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆ ಕರೆದುಕೊಂಡು ಬರುವಂತೆ ಹೇಳಿದ್ದಾರೆ. ಆಗ ತಂದೆ ಮತ್ತು ಬಾಲಕಿ ಹಾಗೂ ಅವರ ಜೊತೆ ಒಬ್ಬರು ಮಹಿಳಾ ಪೇದೆ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಗೆ ಬಂದ ಸಮಯದಲ್ಲಿ ನಡೆಯಲಾರದ ಮಗಳನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲು ವ್ಹೀಲ್ ಚೇರ್ ಅಥವಾ ಸ್ಟ್ರೆಚರ್ ಸಿಗದೇ ಇದ್ದಾಗ ತಂದೆ ತನ್ನ ಮಗಳನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಹೋಗಿ ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ.

    ಈ ಫೋಟೋವನ್ನು ಸ್ಥಳೀಯರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಈ ಫೋಟೋ ವೈರಲ್ ಆಗಿದೆ. ಹಾಗೆಯೇ ಈ ರೀತಿಯ ಘಟನೆಗಳು ಮತ್ತು ಅತ್ಯಾಚಾರ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಯೋಗಿ ಅದಿತ್ಯನಾಥ್ ಸರ್ಕಾರವನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ನಾವು ಡಿಸೆಂಬರ್ 14 ರಂದು ದೂರು ಪಡೆದ ನಂತರ, ಆರೋಪಿಯಾದ 19 ವರ್ಷದ ಅಂಕಿತ್ ಯಾದವ್ ನನ್ನು ಬಂಧಿಸಿದ್ದೇವೆ ಹಾಗೂ ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಈ ಬಗ್ಗೆ ಆಸ್ಪತ್ರೆಯ ಅಡಳಿತ ಮಂಡಳಿಯನ್ನು ವಿಚಾರಿಸಿದಾಗ ಹಾರಿಕೆಯ ಉತ್ತರ ನೀಡಿರುವ ಅವರು, ಈ ಆಸ್ಪತ್ರೆ ಈಗ ತಾನೇ ಆರಂಭಗೊಂಡಿದೆ. ಆದ ಕಾರಣ ಇಲ್ಲಿ ಸೌಲ್ಯಭ್ಯಗಳು ಕಮ್ಮಿ, ಈ ಕಾರಣದಿಂದಲೇ ಅವರಿಗೆ ಬಾಲಕಿಯನ್ನು ಕರೆದುಕೊಂಡು ಹೋಗಲು ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸಿಕ್ಕಿಲ್ಲ ಎಂದು ಹೇಳಿದ್ದಾರೆ.