Tag: ವೈದ್ಯಕೀಯ ಶಿಕ್ಷಣ

  • ತಮಿಳು ಮಾಧ್ಯಮದಲ್ಲಿ ವೈದ್ಯಕೀಯ ಶಿಕ್ಷಣ ಪ್ರಾರಂಭಿಸಿ: ತಮಿಳುನಾಡು ಸರ್ಕಾರಕ್ಕೆ ಅಮಿತ್ ಶಾ ಮನವಿ

    ತಮಿಳು ಮಾಧ್ಯಮದಲ್ಲಿ ವೈದ್ಯಕೀಯ ಶಿಕ್ಷಣ ಪ್ರಾರಂಭಿಸಿ: ತಮಿಳುನಾಡು ಸರ್ಕಾರಕ್ಕೆ ಅಮಿತ್ ಶಾ ಮನವಿ

    ಚೆನ್ನೈ: ತಮಿಳು ಮಾಧ್ಯಮದಲ್ಲೂ ವೈದ್ಯಕೀಯ ಶಿಕ್ಷಣವನ್ನು ಪ್ರಾರಂಭಿಸಿ ಎಂದು ತಮಿಳುನಾಡು (Tamil Nadu) ಸರ್ಕಾರಕ್ಕೆ ಗೃಹ ಸಚಿವ ಅಮಿತ್ ಶಾ (Amit Shah) ಮನವಿ ಮಾಡಿದರು.

    ಚೆನ್ನೈನಲ್ಲಿ (Chennai) ಮಾತನಾಡಿದ ಅವರು, ತಮಿಳು (Tamil) ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದೆ. ತಮಿಳು ವ್ಯಾಕರಣವು ವಿಶ್ವದ ಅತ್ಯಂತ ಪ್ರಾಚೀನ ವ್ಯಾಕರಣವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ಭಾಷೆಯನ್ನು ತಮಿಳುನಾಡು ಮಾತ್ರವಲ್ಲ, ರಾಷ್ಟ್ರದಲ್ಲೇ ಪ್ರಚಾರ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

    ದೇಶದ ಹಲವು ರಾಜ್ಯಗಳು ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿ ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣವನ್ನು ತಮಿಳಿನಲ್ಲಿ ಆರಂಭಿಸುವಂತೆ ನಾನು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಇದರಿಂದ ತಮಿಳು ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ವಿಷಯಗಳನ್ನು ಸುಲಭವಾಗಿ ಗ್ರಹಿಸಲು ಸಹಾಯ ಮಾಡುತ್ತದೆ. ಇದು ತಮಿಳಿನಲ್ಲಿ ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಜೊತೆಗೆ ಪ್ರಾಚೀನ ಭಾಷೆಗೆ ಉತ್ತಮ ಸೇವೆಯಾಗಿದೆ ಎಂದು ಹೇಳಿದರು.

    ತಮಿಳು ಮಾಧ್ಯಮದಲ್ಲಿ 1,350 ಸೀಟುಗಳಲ್ಲಿ ತಾಂತ್ರಿಕ ಶಿಕ್ಷಣ ನೀಡಲು ಸೂಚಿಸಲಾಗಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಇತ್ತೀಚಿಗೆ ನೀಡಿದ ಮಾಹಿತಿಯ ಪ್ರಕಾರ ತಮಿಳು ಮಾಧ್ಯಮದ ಶಿಕ್ಷಣಕ್ಕೆ 85 ಸೀಟುಗಳಲ್ಲಿ ಮಾತ್ರ ನೀಡುತ್ತಿದೆ ಎಂದ ಅವರು, ತಮಿಳುನಾಡು ಸರ್ಕಾರವು ಇನ್ನೂ ಹೆಚ್ಚು ಸೀಟನ್ನು ಒದಗಿಸುವತ್ತ ಗಮನಹರಿಸಿದರೆ ತಮಿಳು ಮಾಧ್ಯಮದಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್‍ಗಳು ತಮಿಳು ಭಾಷೆಗೆ ಉತ್ತಮ ಸೇವೆಯಾಗಲಿದೆ ಎಂದು ಅಭಿಪ್ರಾಯ ಪಟ್ಟರು. ಇದನ್ನೂ ಓದಿ: ವಿನಯ್ ಗುರೂಜಿ ವಿರುದ್ಧ ಅಪಪ್ರಚಾರ – ಪ್ರತಿಭಟನೆಗೆ ಸಜ್ಜಾದ ಭಕ್ತವೃಂದ

    ಕೆಲ ತಿಂಗಳ ಹಿಂದೆ ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿಯನ್ನು ಬೋಧನಾ ಮಾಧ್ಯಮವನ್ನಾಗಿ ಮಾಡಲು ಸಂಸದೀಯ ಸಮಿತಿಯ ಶಿಫಾರಸಿನ ವಿವಾದವಾಗಿತ್ತು. ಈ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಹಿಂದಿ ಹೇರಿಕೆಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದನ್ನೂ ಓದಿ: 150 ವರ್ಷಗಳ ಬಳಿಕ ಧಾರವಾಡಕ್ಕೆ ಭೇಟಿ ನೀಡಿದ ಕನ್ನಡ ನಿಘಂಟು ತಜ್ಞ ಕಿಟೆಲ್ ಕುಟುಂಬ

    Live Tv
    [brid partner=56869869 player=32851 video=960834 autoplay=true]

  • ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣವನ್ನು ಮಾತೃಭಾಷೆಯಲ್ಲೂ ಕಲಿಯಬಹುದು: ರವಿಕುಮಾರ್

    ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣವನ್ನು ಮಾತೃಭಾಷೆಯಲ್ಲೂ ಕಲಿಯಬಹುದು: ರವಿಕುಮಾರ್

    ಬಾಗಲಕೋಟೆ: ಪ್ರತಿಯೊಬ್ಬರು ತಮ್ಮ ಮಾತೃಭಾಷೆಯಲ್ಲಿ ಇನ್ನೂ ಒಂದೆರಡು ವರ್ಷಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣವನ್ನು ಪಡೆಯಬಹುದು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಹೇಳಿದರು.

    ಜಿಲ್ಲೆಯ ಮುಧೋಳ ನಗರದಲ್ಲಿ ನಡೆದ ವಾಯುವ್ಯ ಪದವೀಧರರ ಶಿಕ್ಷಕರ ಚುನಾವಣೆ ನಿಮಿತ್ತ ಆಯೋಜಿಸಲಾಗಿದ್ದ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ಸರ್ಕಾರವು ನರೇಂದ್ರ ಮೋದಿಯವರ ನೇತೃತ್ವದಲ್ಲಿ ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಬದಲಾವಣೆಯನ್ನು ತರುತ್ತಿದೆ. ಈ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಶಿಕ್ಷಣವನ್ನು ಇಂಗ್ಲಿಷ್‍ನಲ್ಲಿ ಅಲ್ಲದೇ ಆಯಾ ರಾಜ್ಯದ ಪ್ರಾದೇಶಿಕ ಮಾತೃಭಾಷೆಯಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುತ್ತದೆ ಎಂದರು. ಇದನ್ನೂ ಓದಿ: ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್

    ಈ ನಿರ್ಧಾರ ಮಹತ್ವದಾಗಿದ್ದು, ಇನ್ನೂ ಹೆಚ್ಚು ಹೆಚ್ಚು ವಿದ್ಯಾರ್ಥಿಗಳಿಗೆ ತಮ್ಮ ಮಾತೃ ಭಾಷೆಯಲ್ಲಿ ಉನ್ನತ ಶಿಕ್ಷಣವನ್ನು ಪಡೆಯಬಹುದು. ಮಾತೃಭಾಷೆ ಕನ್ನಡದಲ್ಲಿ ಹೆಚ್ಚು ಪ್ರಭುತ್ವ ಮತ್ತು ವಿಸ್ತಾರವಾಗಿ ಓದಿ ಬರೆಯಬಹುದು. ಸ್ನಾತಕೋತರ ಪದವಿಯನ್ನು ಪಡೆಯಬಹುದು. ಈಗಾಗಲೇ ಕೆಲ ರಾಜ್ಯದಲ್ಲಿ ಹಿಂದಿ ಭಾಷೆಯಲ್ಲಿ ವೈದ್ಯಕೀಯ, ಇಂಗ್ಲೀಷ್ ಶಿಕ್ಷಣ ನೀಡಲಾಗುತ್ತಿದೆ. ಆದ್ದರಿಂದ ಇನ್ನೊಂದೆರಡು ಮೂರು ವರ್ಷಗಳಲ್ಲಿ ಉನ್ನತ ಶಿಕ್ಷಣವನ್ನು ಎಲ್ಲರೂ ಕಡ್ಡಾಯವಾಗಿ ಇಂಗ್ಲಿಷ್ ಹಿಂದಿಯಲ್ಲಿ ಬರೆಯಬೇಕೆಂದಿಲ್ಲ. ಅದನ್ನ ಮಾತೃಭಾಷೆ ಕನ್ನಡದಲ್ಲೂ ಕೂಡ ಓದಿ ಬರೆಯಬಹುದಾದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಎಟಿಎಂಗೆ ಹಣ ಹಾಕು ಅಂತ ಕೊಟ್ಟರೆ, ಹಣದೊಂದಿಗೆ ಎಸ್ಕೇಪ್ ಆದ ಭೂಪ

    ಬಡವ ಬಲ್ಲಿದ ಎನ್ನದೇ ಶಿಕ್ಷಣ ಎಲ್ಲರಿಗೂ ದೊರಕಬೇಕೆಂಬ ಹಿನ್ನೆಲೆಯಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರಲಾಗುತ್ತಿದೆ ಎಂದು ತಿಳಿಸಿದರು. ಈ ಸಭೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಹನಮಂತ ನಿರಾಣಿ, ಸಚಿವರಾದ ಗೋವಿಂದ್ ಕಾರಜೋಳ, ರಾಮಣ್ಣ ತಳೇವಢ ಮತ್ತಿತರರು ಹಾಜರಿದ್ದರು.

  • ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಎಸ್ಟೋನಿಯಾ ದೇಶದ ಜೊತೆ ಒಡಂಬಡಿಕೆ: ಸುಧಾಕರ್

    ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಎಸ್ಟೋನಿಯಾ ದೇಶದ ಜೊತೆ ಒಡಂಬಡಿಕೆ: ಸುಧಾಕರ್

    ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಮೂಲಕ ಸುಧಾರಣೆ ತರುವ ಪ್ರಯತ್ನಕ್ಕೆ ಆರೋಗ್ಯ ಇಲಾಖೆ ಎಸ್ಟೋನಿಯಾದ ಜೊತೆ ಹೊಸ ಒಡಂಬಡಿಕೆಯನ್ನು ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಎಸ್ಟೋನಿಯಾ ದೇಶದ ಭಾರತದ ರಾಯಭಾರಿ ಕತ್ರಿನ್ ಕಿವ್ ನೇತೃತ್ವದ ಉನ್ನತ ನಿಯೋಗ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿತು. ಎಸ್ಟೋನಿಯಾ ಚಿಕ್ಕ ದೇಶವಾದರೂ ಅತೀ ಹೆಚ್ಚು ನವೋದ್ಯಮಗಳನ್ನು ಹೊಂದಿದೆ. ಹಾಗೆಯೇ ತಂತ್ರಜ್ಞಾನಕ್ಕೆ ಹೆಸರಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿ ಸಾಧಿಸಿದೆ. ಹೀಗಾಗಿ ನಿಯೋಗದ ಭೇಟಿ ರಾಜ್ಯಕ್ಕೆ ಲಾಭವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ: ಸುಧಾಕರ್

    ಎಸ್ಟೋನಿಯಾ ದೇಶದ ಎಲ್ಲಾ ಪ್ರಜೆಗಳು ಹೆಲ್ತ್ ರಿಜಿಸ್ಟ್ರಿ ಮಾಡಿಕೊಂಡಿದ್ದಾರೆ. ಆ ದೇಶದಲ್ಲಿ ಟೆಲಿ ಮೆಡಿಸಿನ್ ವ್ಯವಸ್ಥೆ ಇದೆ. 400 ವರ್ಷಗಳ ಹಳೆಯ ವಿಶ್ವವಿದ್ಯಾನಿಲಯ ಕೂಡ ಇವೆ. ಇಂತಹ ದೇಶದ ಜೊತೆ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ Exchange Programme ಒಡಂಬಡಿಕೆಯನ್ನು ಮಾಡಿಕೊಂಡಿದೆ. ಇದರಿಂದ ಆ ದೇಶದ ಆರೋಗ್ಯ ವ್ಯವಸ್ಥೆ ಬಗ್ಗೆ ಪರಿಚಯ ಸಿಗುವುದರ ಜೊತೆಗೆ ನಮ್ಮ ದೇಶದ ಆರೋಗ್ಯ ವ್ಯವಸ್ಥೆಯ ಬಗ್ಗೆ ಅವರಿಗೂ ತಿಳಿವಳಿಕೆ ಸಿಗಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಈಶ್ವರಪ್ಪನಿಗೆ ಸೆಟಲ್ಮೆಂಟ್ ಮಾಡುತ್ತೇನೆ ಎಂದು ಮಹಾನಾಯಕ ಈ ಹಿಂದೆ ಸವಾಲು ಹಾಕಿದ್ದರು: ಬಿಜೆಪಿ

    ಎಸ್ಟೋನಿಯಾದಲ್ಲಿ ಜೆನೊಮಿಕ್ ಲ್ಯಾಬ್ ಇದೆ. ವ್ಯಕ್ತಿಯ ಡಿಎನ್‍ಎ ಮೂಲಕ ಯಾವ ವ್ಯಕ್ತಿಗೆ ಕ್ಯಾನ್ಸರ್, ಪಾರ್ಕಿನ್ಸನ್, ಸಾಂಕ್ರಾಮಿಕ ರೋಗಗಳು ಸೇರಿದಂತೆ ಯಾವ ಕಾಯಿಲೆ ಬರಬಹುದು ಅನ್ನುವುದನ್ನು ಸಂಶೋಧನೆ ಮಾಡಲಾಗುತ್ತದೆ. ಈ ಮೂಲಕ ಕಾಯಿಲೆಯನ್ನು ಬೇಗನೆ ಪತ್ತೆ ಹಚ್ಚಿ ಅದಕ್ಕೆ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನು ಹೇಗೆ ಅರ್ಥಪೂರ್ಣವಾಗಿ ಬಳಸಿಕೊಳ್ಳಬಹುದು ಅನ್ನುವ ಬಗ್ಗೆ ಮಾತುಕತೆ ನಡೆದಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಅನ್ನುವ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಮಾಹಿತಿ ಹಂಚಿಕೊಂಡರು.

  • ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ನಿಗದಿ – ಬಡ ವಿದ್ಯಾರ್ಥಿಗಳಿಗೆ ನೀಟ್ ಕೋಚಿಂಗ್

    ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಶುಲ್ಕ ನಿಗದಿ – ಬಡ ವಿದ್ಯಾರ್ಥಿಗಳಿಗೆ ನೀಟ್ ಕೋಚಿಂಗ್

    ಬೆಂಗಳೂರು: ಬಡತನದ ಕಾರಣಕ್ಕೆ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುತ್ತಿರುವ ಬಡವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು 2022-23ನೇ ಸಾಲಿನ ಬಜೆಟ್ ಮೂಲಕ ಸಿಹಿ ಸುದ್ದಿ ನೀಡಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕ್‌ಗಳಿಂದ ಶೈಕ್ಷಣಿಕ ಸಾಲ ಒದಗಿಸಲು ಸರ್ಕಾರ ನೆರವಾಗಲಿದೆ.

    ಬಡಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ ನೀಡಲಾಗುವುದು. ಖಾಸಗಿ ವೈದ್ಯಕೀಯ ಕಾಲೇಜುಗಳನ್ನು ಎ, ಬಿ, ಸಿ ಮತ್ತು ಡಿ ಎಂದು ವರ್ಗೀಕರಿಸಿ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ಬೆಳಗಾವಿಯಲ್ಲಿ ಕ್ಯಾನ್ಸರ್ ಕೇಂದ್ರ:
    ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನಲ್ಲಿ ಬೆಳಗಾವಿಯಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರವನ್ನು 50 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಸೌಕರ್ಯವನ್ನು ಒದಗಿಸಲು ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಇನ್‌ಫ್ಯೂಷನ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

    ಮೈಸೂರು ಕೆ.ಆರ್. ಆಸ್ಪತ್ರೆ ನವೀಕರಣ:
    ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು 2024ರಲ್ಲಿ ಶತಮಾನೋತ್ಸವ ಆಚರಿಸುವ ಹಿನ್ನೆಲೆಯಲ್ಲಿ ಕೆ.ಆರ್. ಆಸ್ಪತ್ರೆಯ ಕಟ್ಟಡಗಳ ನವೀಕರಣವನ್ನು ಮುಂದಿನ ಮೂರು ವರ್ಷದಲ್ಲಿ 89 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ 5 ವರ್ಷ ಗ್ರಾಮೀಣ ಸೇವೆ ಕಡ್ಡಾಯ ಮಾಡಿ- ಸಿಎಂಗೆ ಸೋಮಶೇಖರ್ ಪತ್ರ

    ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ 5 ವರ್ಷ ಗ್ರಾಮೀಣ ಸೇವೆ ಕಡ್ಡಾಯ ಮಾಡಿ- ಸಿಎಂಗೆ ಸೋಮಶೇಖರ್ ಪತ್ರ

    ಬೆಂಗಳೂರು: ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ ಗ್ರಾಮೀಣ ಸೇವೆ ಕಡ್ಡಾಯ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಎಸ್.ಟಿ.ಸೋಮಶೇಖರ್ ಪತ್ರ ಬರೆದಿದ್ದಾರೆ.

    ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ ಕನಿಷ್ಟ 5 ವರ್ಷಗಳ ಕಾಲ ಗ್ರಾಮೀಣ ಸೇವೆ ಕಡ್ಡಾಯ ಮಾಡಬೇಕು ಎಂದು ಎಸ್.ಟಿ.ಸೋಮಶೇಖರ್ ಒತ್ತಾಯಿಸಿದ್ದಾರೆ.

    ಈ ಹಿಂದೆ ಸಹ ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಸರ್ಕಾರಿ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಮಾಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ಪದವಿ ಪಡೆಯುವವರಿಗೆ ಇಂಟರ್ನ್‍ಶಿಪ್ ಅಥವಾ ಇಂತಿಷ್ಟು ವರ್ಷಗಳ ಕಾಲ ಗ್ರಾಮೀಣ ಸೇವೆ ಕಡ್ಡಾಯ ಮಾಡಬೇಕು ಎಂದು ಹಲವರು ಧ್ವನಿ ಎತ್ತಿದ್ದರು. ಇದಕ್ಕೆ ಕೆಲವರು ವಿರೋಧ ಸಹ ವ್ಯಕ್ತಪಡಿಸಿದ್ದರು. ಇದೀಗ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಿಎಂಗೆ ಪತ್ರ ಬರೆಯುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.

    ಪತ್ರದಲ್ಲಿ ಏನಿದೆ?
    ನಮ್ಮ ರಾಜ್ಯದಲ್ಲಿ ಪ್ರತಿಭಾವಂತರಿಗೇನೂ ಕೊರತೆ ಇಲ್ಲ. ಹಾಗೇ ರಾಜ್ಯ ಸರ್ಕಾರ ಸಹ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ಹಾಗೂ ಆರ್ಥಿಕ ಸಹಕಾರವನ್ನು ನೀಡುತ್ತಾ ಬಂದಿದೆ. ಇದಕ್ಕೆ ವೈದ್ಯಕೀಯ ಶಿಕ್ಷಣ ರಂಗವೂ ಹೊರತಾಗಿಲ್ಲ. ಪ್ರತಿ ವರ್ಷ ವೈದ್ಯಕೀಯ ಶಿಕ್ಷಣಕ್ಕೆ ಸರ್ಕಾರ ಅಗಾಧವಾಗಿ ಖರ್ಚು ಮಾಡುತ್ತಾ ಬಂದಿದೆ. ಸರ್ಕಾರಿ ಕೋಟಾದಲ್ಲಿ ಓದುವ ಒಬ್ಬ ವೈದ್ಯಕೀಯ ವಿದ್ಯಾರ್ಥಿ ವಿದ್ಯಾಭ್ಯಾಸ ಅವಧಿಯನ್ನು ಮುಗಿಸುವ ಹೊತ್ತಿಗೆ ಸರ್ಕಾರದಿಂದ 40 ರಿಂದ 50 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ಸರ್ಕಾರ ಇಷ್ಟೆಲ್ಲಾ ವೆಚ್ಚ ಮಾಡಿದರೂ ನಮ್ಮ ಪ್ರತಿಭೆಗಳು ನಮಗೆ ದಕ್ಕುತ್ತಿಲ್ಲ. ಕೆಲವು ವೈದ್ಯರು ನಮ್ಮ ಸೌಲಭ್ಯವನ್ನು ಪಡೆದು, ಕಲಿತು ವಿದೇಶಗಳಿಗೆ ಹೋಗಿ ಅಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ವೈದ್ಯರ ಕೊರತೆ ಹೆಚ್ಚಾಗುತ್ತಿದೆ. ತಮ್ಮ ಕಾಲಾವಧಿಯಲ್ಲಿ ಇಂಥದ್ದೊಂದು ಪ್ರಕ್ರಿಯೆಗೆ ಕಡಿವಾಣ ಬೀಳಬೇಕಿದೆ. ನಮ್ಮ ಪ್ರತಿಭೆಗಳು ನಮ್ಮಲ್ಲಿಯೇ ಸೇವೆ ಸಲ್ಲಿಸುವಂತಾಗಬೇಕು. ಪ್ರತಿಭಾ ಪಲಾಯನ ನಿಲ್ಲುವಂತಾಗಬೇಕು.

    ಸರ್ಕಾರಿ ಕೋಟಾದಲ್ಲಿ ಕಲಿತ ವೈದ್ಯರು ಕನಿಷ್ಠ ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಈ ಮೂಲಕ ನಮ್ಮ ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ಸಹ ನುರಿತ ತಜ್ಞ ವೈದ್ಯರ ಸೇವೆ ಲಭಿಸಬೇಕು. ಇಂದು ಹಳ್ಳಿ ಎಂದರೆ ಮೂಗು ಮುರಿಯುವ ಮನೋಭಾವ ಹೆಚ್ಚಾಗುತ್ತಿದೆ. ಆದರೆ ಹಳ್ಳಿ ಸಶಕ್ತವಾಗಿದ್ದರೆ, ಆರೋಗ್ಯವಾಗಿದ್ದರೆ ದೇಶದ ಅಭಿವೃದ್ಧಿ ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡಬೇಕಿದೆ. ಹಳ್ಳಿಗಳಲ್ಲಿ ಕೆಲಸ ಮಾಡುವ ಮನೋಭಾವಕ್ಕೆ ನಾವು ಪ್ರೋತ್ಸಾಹ ನೀಡಬೇಕಿದ್ದು, ಇದಕ್ಕೊಂದು ಸೂಕ್ತ ಕಾನೂನು ಚೌಕಟ್ಟು ನಿರ್ಮಾಣ ಮಾಡುವುದು ಮುಖ್ಯವಾಗುತ್ತದೆ.

    ಹೀಗಾಗಿ ನಮ್ಮ ರಾಜ್ಯದ ಸಕಲ ಸೌಕರ್ಯವನ್ನು ಪಡೆದು ವೈದ್ಯರಾಗಿ ಹೊರ ಬರುವ ಪ್ರತಿಯೊಬ್ಬರೂ ಸಹ ರಾಜ್ಯದಲ್ಲಿ 5 ವರ್ಷ ಕಡ್ಡಾಯವಾಗಿ ವೃತ್ತಿಯನ್ನು ಸಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಕಾನೂನೊಂದನ್ನು ತಾವು ರೂಪಿಸಬೇಕು. ಈಗಾಗಲೇ ಹೀಗೆ ಸೇವೆ ಮಾಡುವ ವೈದ್ಯರಿಗೆ ಅತಿ ಹೆಚ್ಚಿನ ವೇತನವನ್ನು ನೀಡುತ್ತೇವೆ. ಸೌಲಭ್ಯಗಳನ್ನು ಕೊಡುತ್ತೇವೆಂದರೂ ವೈದ್ಯರು ಮುಂದೆ ಬರುತ್ತಿಲ್ಲ. ಹೀಗಾಗಿ ಈ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುದಾನವನ್ನು ಕಲ್ಪಿಸಿಕೊಡುವ ಮೂಲಕ ಹಳ್ಳಿಗಳಿಗೂ ಉತ್ತಮ ವೈದ್ಯಕೀಯ ಸೇವೆ ಲಭಿಸುವಂತೆ ಮಾಡಬೇಕಿದೆ. ಈ ಮೂಲಕ ನಮ್ಮ ರಾಜ್ಯದ ಹಣವನ್ನು ಬಳಸಿ ವೈದ್ಯರಾದವರ ಸೇವೆಯನ್ನು ನಮ್ಮ ರಾಜ್ಯದ ನಾಗರಿಕರಿಗೇ ಲಭಿಸುವಂತಾಗಬೇಕು.

    ಈಗ ಕೊರೊನಾ ಸಂಕಷ್ಟ ಕಾಲವಾಗಿರುವುದರಿಂದ ಇಂಥದ್ದೊಂದು ನಿಲುವಿನ ಅಗತ್ಯವಿದೆ. ಜೊತೆಗೆ ಸರ್ಕಾರಿ ಸೌಲಭ್ಯ ಪಡೆಯುವ ಪ್ರತಿಯೊಬ್ಬರಲ್ಲೂ ಇಂತಹ ಮನೋಭಾವ ಬರಬೇಕಿದೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ವೈದ್ಯಕೀಯ ನೆರವು ಸಿಗಬೇಕೆಂದರೆ ಕಠಿಣವಾದ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸದನದಲ್ಲಿ ಮಂಡಿಸಿ ಜಾರಿಗೊಳಿಸಬೇಕಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಈ ಮೂಲಕ ಪ್ರತಿಭಾ ಪಲಾಯನಕ್ಕೆ ತಡೆ ಹಾಕಬೇಕಿದೆ.

    ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಕಟ್ಟುನಿಟ್ಟಿನ ನೀತಿಯನ್ನು ಸರ್ಕಾರದಿಂದ ರಚಿಸಬೇಕಿದ್ದು, ವೈದ್ಯಕೀಯ ಶಿಕ್ಷಣ ಓದಿಗೆ ಅವರು ಮುಂದಾಗುವಾಗಲೇ ಸರ್ಕಾರಿ ಕೋಟಾದ ಲಾಭ ಪಡೆಯಬೇಕೆಂದಿದ್ದರೆ, ಅವರ ಮೆರಿಟ್ ಆಧಾರದ ಜೊತೆಗೆ ರಾಜ್ಯದಲ್ಲಿ 5 ವರ್ಷ ಸೇವೆ ಸಲ್ಲಿಸುತ್ತೇವೆಂಬ ಕರಾರಿಗೆ ಮೊದಲೇ ಸಹಿ ಹಾಕಿಸಿಕೊಳ್ಳುವಂತಹ ನಿಟ್ಟಿನಲ್ಲಿ ಕಾನೂನು ರೂಪಿಸಿದರೆ ಪರಿಹಾರ ದೊರಕಬಹುದು ಎಂಬುದು ನನ್ನ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ತಾವುಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುವಂತೆ ಮತ್ತೊಮ್ಮೆ ತಮ್ಮಲ್ಲಿ ಮನವಿ ಮಾಡುತ್ತೇನೆ.

  • ನೀಟ್ ಪರೀಕ್ಷೆಯಲ್ಲಿ ಪಾಸ್ – ವೈದ್ಯನಾಗಲು ಮುಂದಾದ ’64’ರ ಯುವಕ

    ನೀಟ್ ಪರೀಕ್ಷೆಯಲ್ಲಿ ಪಾಸ್ – ವೈದ್ಯನಾಗಲು ಮುಂದಾದ ’64’ರ ಯುವಕ

    ಭುವನೇಶ್ವರ: 40 ವರ್ಷಗಳ ಜೀವನದಲ್ಲಿ ಕಠಿಣ ಕೆಲಸ ಮತ್ತು ಮಕ್ಕಳನ್ನು ಬೆಳೆಸಿದ ನಂತರ ಒಬ್ಬ ಯಶಸ್ವಿ ವ್ಯಕ್ತಿ ಬಹುಶಃ ಮೊಮ್ಮಕ್ಕಳೊಂದಿಗೆ ಸಮಯ ಕಳೆಯಲು, ತೋಟಗಾರಿಕೆ ಮಾಡಿಕೊಂಡು, ತಮ್ಮ ಸಂಬಂಧಿಗಳೊಂದಿಗೆ ಹರಟೆ ಹೊಡೆಯುತ್ತಾ ಕಾಲ ಕಳೆಯುವುದು ಸರ್ವೇಸಾಮಾನ್ಯ. ಆದರೆ ಒಡಿಶಾದ 64 ವರ್ಷದ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರು ವೈದ್ಯರಾಗಲು ಮುಂದಾಗಿದ್ದಾರೆ.

    1956 ರಲ್ಲಿ ಜನಿಸಿದ ಜೇ ಕಿಶೋರ್ ಪ್ರಧಾನ್ ಇದೀಗ ವೈದ್ಯರಾಗಲು ನೀಟ್ ಬರೆದು ತೇರ್ಗಡೆಗೊಂಡವರು. ಒಡಿಶಾದ ಪ್ರಧಾನ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಒಂದಾದ ಬುರ್ಲಾದ ವೀರ್ ಸುರೇಂದ್ರ ಸಾಯಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ (ವಿಮ್ಸಾರ್)ನಲ್ಲಿ ನಾಲ್ಕು ವರ್ಷಗಳ ಎಂಬಿಬಿಎಸ್ ಪದವಿ ತರಗತಿಗಾಗಿ ತಯಾರಾಗಿದ್ದಾರೆ.

    ಒಡಿಶಾದ ಬಾರ್ ಗ ಜಿಲ್ಲೆಯ ಅಟಾಬಿರಾದವರಾದ ಜೇ ಕಿಶೋರ್ ಪ್ರಧಾನ್ ಎಂಬಿಬಿಎಸ್ ಕಲಿಯಲು ಬೇಕಾದ ಎಲ್ಲಾ ತಯಾರಿ ಮುಗಿಸಿದ್ದಾರೆ. ಹಿರಿಯ ನಾಗರೀಕರಾದ ಇವರಿಗೆ ಹೃದ್ರೋಗ, ಶ್ವಾಸಕೋಶದ ಕಾಯಿಲೆ ಮತ್ತು ನೆಫ್ರಾಲಜಿ ಪರೀಕ್ಷೆಯಿಂದ ರಿಯಾಯಿತಿ ಕೊಡಲಾಗಿದ್ದು, ಅಧ್ಯಯನಕ್ಕಾಗಿ ಅವಕಾಶ ಮಾಡಿ ಕೊಡಲಾಗಿದೆ.

    2016ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉಪ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು. ನಂತರ ಇದೀಗ ಈ ನಿರ್ಧಾರವನ್ನು ಕಂಡು ಹಲವರು ಅಶ್ಚರ್ಯಗೊಂಡಿದ್ದಾರೆ. ಜೇ ಕಿಶೋರ್ ಪ್ರಧಾನ್ ಅವರು ಅನೇಕ ವರ್ಷಗಳಿಂದ ಕಂಡಿದ್ದ ಕನಸನ್ನು ನನಸು ಮಾಡಲು ಹೊರಟಿದ್ದು ಇದರ ಕುರಿತು ಹೇಳಿಕೆ ಕೊಟ್ಟಿದ್ದಾರೆ. 1970 ದಶಕದಲ್ಲಿ ನನ್ನ ಕನಸನ್ನು ಈಡೇರಿಸಲು ಆಗಿರಲಿಲ್ಲ. ನಂತರ ತಯಾರಿಯನ್ನು ನಿರಂತರ ಮುಂದುವರಿಸಿದೆ. ಬಿಎಸ್ಸಿ ಸೇರಿಕೊಂಡ ನಂತರ ಈ ಕನಸಿಗೆ ಇನ್ನಷ್ಟೂ ರೆಕ್ಕೆ ಪುಕ್ಕಗಳು ಸೇರಿದವು ಆದರೆ ಸಾಧಿಸಲು ಆಗಿರಲ್ಲ. ಈ ಪ್ರಜ್ಞೆ ನನ್ನನ್ನು ಕಾಡುತ್ತಲೇ ಇತ್ತು ಎಂದಿದ್ದಾರೆ.

    ಇದಲ್ಲದೆ ನಾನು ವೈದ್ಯಕೀಯ ವಿಜ್ಞಾನಕ್ಕೆ ಹೆಚ್ಚಿನ ಒಲವನ್ನು ತೋರಿದ್ದು 1982ರಲ್ಲಿ. ನನ್ನ ತಂದೆ ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದರು. 1987ರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಮತ್ತು ಉನ್ನತ ಚಿಕಿತ್ಸೆಗಾಗಿ ವೆಲ್ಲೂರಿಗೆ ಕರೆದೊಯ್ಯಲಾಯಿತು. ಯಶಸ್ವಿ ಚಿಕಿತ್ಸೆಯ ಪರಿಣಾಮವಾಗಿ ನನ್ನ ತಂದೆ ಜನವರಿ 2010ರ ವರೆಗೆ ಬದುಕುಳಿದರು. ಇದರಿಂದ ನನಗೆ ಇನ್ನಷ್ಟೂ ಹೆಚ್ಚಿನ ಗಮನ ವೈದ್ಯಕೀಯದತ್ತ ನೆಟ್ಟಿತು ಎಂದು ವಿವರಿಸಿದರು.

    ವೈದ್ಯಕೀಯ ಅಧ್ಯಯನದ ಹೆಚ್ಚಿನ ಆಸಕ್ತಿಯಿಂದಾಗಿ 15 ವರ್ಷಗಳ ಬ್ಯಾಕಿಂಗ್ ಸೇವೆಯ ನಂತರ ಸ್ವಯಂಪ್ರೇರಿತ ನಿವೃತ್ತಿ ಪಡೆದುಕೊಳ್ಳುವ ಹುಚ್ಚಾಟಕ್ಕೆ ಹೋಗಿದ್ದೆ, ಆದರೆ ಕೊನೆಗೆ ಕುಟುಂಬ ನಡೆಸುವ ಯೋಚನೆಯ ಪರಿಣಾಮ ಕೆಲಸ ತ್ಯಜಿಸುವ ಯೋಚನೆ ಕೈ ಬಿಟ್ಟೆ.

    ನನಗೆ ಅವಳಿ ಹೆಣ್ಣು ಮಕ್ಕಳಿದ್ದಾರೆ. ಅವರು ವೈದ್ಯಕೀಯ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಅವರ ತಯಾರಿಯಲ್ಲಿ ನಾನು ಸಹಾಯ ಮಾಡುತ್ತಿದ್ದೆ. ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಹೆಚ್ಚಿನ ಹಿಡಿತ ಹೊಂದಿದ್ದ ನನ್ನನ್ನು ಗಮನಿಸಿದ ನನ್ನ ಮಕ್ಕಳು ಕಲಿಕೆಗೆ ನನ್ನನ್ನು ಪ್ರೇರೇಪಿಸಿದರು ಎನ್ನುತ್ತಾರೆ ಕಿಶೋರ್ ಪ್ರಧಾನ್.

    ಅಧ್ಯಯನಕ್ಕಾಗಿದ್ದ ವಯಸ್ಸಿನ ಮಿತಿಯನ್ನು 2019ರಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಇದೂ ನನ್ನ ಸಂಕಲ್ಪವನ್ನು ಈಡೇರಿಸಲು ದಾರಿ ಮಾಡಿ ಕೊಟ್ಟಿತ್ತು ಮತ್ತು ಎಂಬಿಬಿಎಸ್ ಕಲಿಯುವುದನ್ನು ಸವಾಲಾಗಿ ಸ್ವೀಕರಿಸಿದೆ ಎಂದರು. ನೀಟ್‍ನಲ್ಲಿ 175 ಅಂಕಗಳಿಸುವ ಮೂಲಕ 5,94,380ನೇ ರ್ಯಾಂಕ್‍ಗಳಿಸಿ ವಿಮ್ಸಾರ್‍ನಲ್ಲಿ ಎಂಬಿಬಿಎಸ್ ಪ್ರವೇಶ ಪಡೆಯಲು ಅರ್ಹತೆ ಪಡೆದಿದ್ದಾರೆ.

    ನನ್ನ ಅವಳಿ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆ ಕಳೆದ ತಿಂಗಳು ದುರದೃಷ್ಟಕರವಾಗಿ ನಿಧನ ಹೊಂದಿದ್ದರಿಂದ ಈ ಸಂಭ್ರಮವನ್ನು ಆಚರಿಸಲು ಸಾಧ್ಯವಾಗಿಲ್ಲ ಇದನ್ನು ಹೊರತು ನಾನು ಮಗಳ ನೆನಪಿಗಾಗಿ ಅಧ್ಯಯನ ಮಾಡುತ್ತೇನೆ ಎನ್ನುತ್ತಾರೆ ಕಿಶೋರ್ ಪ್ರಧಾನ್.

    ಪ್ರಧಾನ್ ಅವರು ಎಂಬಿಬಿಎಸ್ ಮುಗಿಸುವ ಹೊತ್ತಿಗೆ ಅವರಿಗೆ 69 ವರ್ಷವಾಗುತ್ತದೆ. ಅಧ್ಯಯನದ ನಂತರ ಸೇವೆ ಸೇರಲು ಸಿದ್ಧರಾಗಿದ್ದೀರ ಎಂದು ಪ್ರಶ್ನಿಸಿದಾಗ ನಾನು ಈಗಲೇ ಏನನ್ನೂ ಹೇಳಲು ಬಯಸುವುದಿಲ್ಲ. ಆದರೆ 5 ವರ್ಷಗಳ ನಂತರದ ದಿನಗಳಲ್ಲಿ ಖಾಸಗಿಯಾಗಿ ಅಭ್ಯಾಸ ಮಾಡುತ್ತಲೇ ಇರುತ್ತೇನೆಂದು ಹೇಳಿದರು.

    ಕಿಶೋರ್ ಪ್ರಧಾನ್ ಪದವಿ ಮುಗಿದ ತಕ್ಷಣ ಟೆಲಿಕಾಂ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. ನಂತರ ಕೆಲಕಾಲ ಸ್ಥಳೀಯ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅರೆಕಾಲಿಕ ಶಿಕ್ಷಕರಾಗಿ ಸೇರಿದ್ದರು. ನಂತರ 1983ರಲ್ಲಿ ಎಸ್‍ಬಿಐ ಉದ್ಯೋಗಿಯಾದರು.

    ವಿಮ್ಸಾರ್‍ನ ಡೀನ್ ಮತ್ತು ಪ್ರಾಂಶುಪಾಲರಾದ ಬ್ರಜಮೋಹನ್ ಮಿಶ್ರಾ ಮಾತನಾಡಿ, ನಾನು ಪ್ರಧಾನ್ ಅವರಿಂದ ಒಂದು ವರ್ಷ ಹಿರಿಯವನಾಗಿದ್ದು ಈ ವಯಸ್ಸಿನಲ್ಲಿ ಪ್ರಧಾನ್ ಸಾಧನೆಗೆ ಪದಗಳೇ ಸಿಗುತ್ತಿಲ್ಲ. ಸುಪ್ರೀಂ ಕೋರ್ಟ್‍ನ ಆದೇಶದಂತೆ ಅಧ್ಯಯನಕ್ಕೆ ಯಾವುದೇ ವಯಸ್ಸಿನ ಮಿತಿಯಿಲ್ಲ. ಅವರನ್ನು ವೈದ್ಯಕೀಯವಾಗಿ ಅರ್ಹರೆಂದು ಹೇಳಲಾಗಿದ್ದು ಕೆಲವು ದಾಖಲೆಗಳ ಪರಿಶೀಲನೆಗಾಗಿ ಮತ್ತು ಸಹಿ ಹಾಕಿ ಕೋರ್ಸ್‍ಗೆ ಸೇರಲು ಹೇಳಲಾಗಿದೆ ಎಂದು ಮಿಶ್ರಾ ಹೇಳಿದರು.

    ನಾನು ಅವರನ್ನು ಸಹಪಾಠಿ ಎಂದು ಪರಿಗಣಿಸುತ್ತೇನೆ. ನನಗೆ ಹೊಸ ರೀತಿಯ ಅನುಭವಾಗಿದೆ ಅವರ ಮಿದುಳುಗಳು ವೈದ್ಯಕೀಯ ಅಧ್ಯನಕ್ಕಾಗಿ ಸಿದ್ಧವಾಗಿರುವುದರಿಂದಾಗಿ ಅವರಿಗೆ ಯಾವುದೇ ಸಮಸ್ಯೆ ಕಾಡಲಾರದು ಎಂದು ಸಂತಸ ಹಂಚಿಕೊಂಡರು.

  • ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಿ- ವಲಯವಾರು ಅಧಿಕಾರಿಗಳಿಗೆ ಸಚಿವ ಸುಧಾಕರ್ ಸೂಚನೆ

    ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಿ- ವಲಯವಾರು ಅಧಿಕಾರಿಗಳಿಗೆ ಸಚಿವ ಸುಧಾಕರ್ ಸೂಚನೆ

    – ಬೂತ್ ಮಟ್ಟದ ಕಾರ್ಯಪಡೆ ರಚನೆ, ತರಬೇತಿ, ಸಮೀಕ್ಷೆಗೆ ಕಾಲಮಿತಿ ನಿಗದಿ
    – ವಾರದೊಳಗೆ ಮಾದರಿಗಳು ಬಾಕಿ ಉಳಿಯದಂತೆ ನೋಡಿಕೊಳ್ಳಿ

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿದ್ದು, ಅದರನ್ವಯ ಕಾರ್ಯ ನಿರ್ವಹಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಲಯವಾರು ಉಸ್ತುವಾರಿ ಅಧಿಕಾರಿಗಳಿಗೆ ಸೂಚಿಸಿದರು.

    ಎರಡು ತಾಸಿಗೂ ಹೆಚ್ಚು ಕಾಲ ಅಧಿಕಾರಗಳ ಜೊತೆ ವಿಡಿಯೋ ಸಂವಾದದ ಮೂಲಕ ಚರ್ಚಿಸಿ ಮಾಹಿತಿ ಪಡೆದ ಅವರು, ನಿರ್ದಿಷ್ಟ ಹೊಣೆಗಾರಿಕೆ ವಹಿಸಿಕೊಂಡಿರುವ ಅಧಿಕಾರಿಗಳು ಇತರೆ ಸಹೋದ್ಯೋಗಿಗಳ ಜೊತೆ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು. ಲಾಕ್‍ಡೌನ್ ಅವಧಿ ಮುಕ್ತಾಯಗೊಳ್ಳುವ ಮುನ್ನ ಬೂತ್ ಮಟ್ಟದಲ್ಲಿ ಸಮಿತಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬೇಕು. ಅದಕ್ಕಾಗಿ ಸಮಿತಿಗಳ ರಚನೆ, ತರಬೇತಿ ಪ್ರಕ್ರಿಯೆಯನ್ನು ಒಂದೆರಡು ದಿನಗಳಲ್ಲಿ ಮುಗಿಸಬೇಕು. ನಂತರ ಸಮಿತಿ ಸದಸ್ಯರು ತಮಗೆ ನಿಗದಿಗೊಳಿಸಿರುವ ಬೂತ್‍ಗಳಲ್ಲಿ ಮನೆ ಮನೆ ಸಮೀಕ್ಷೆ ನಡೆಸಬೇಕು ತಿಳಿಸಿದರು.

    ಸಮೀಕ್ಷೆ ವೇಳೆ ಐಎಲ್‍ಐ ಮತ್ತು ಸಾರಿ ಪ್ರಕರಣಗಳ ತಪಾಸಣೆ ನಡೆಸಿ ರೋಗ ಲಕ್ಷಣ ಆಧರಿಸಿ ಅವರನ್ನು ಹೋಮ್ ಐಸೋಲೇಷನ್, ಕೋವಿಡ್-19 ಕೇರ್ ಸೆಂಟರ್ ಮತ್ತು ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮಾಡಬೇಕು. ಮಾರ್ಗಸೂಚಿ ಬಗ್ಗೆ ಸಮಿತಿ ಸದಸ್ಯರಿಗೆ ತರಬೇತಿ ಸಮಯದಲ್ಲೇ ಮನವರಿಕೆ ಮಾಡಿಕೊಡಬೇಕು. ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ಯಂತ್ರಗಳನ್ನು ಸದಸ್ಯರಿಗೆ ಒದಗಿಸಬೇಕು. ಅಂಬುಲೆನ್ಸ್ ಒದಗಿಸುವುದು ಸಮಿತಿಯ ಜವಾಬ್ದಾರಿ ಆಗಬೇಕು. ಸಂಪರ್ಕಿತರ ಪತ್ತೆ ಕಾರ್ಯವೂ ಮರು ಆರಂಭ ಆಗಬೇಕು ಎಂದು ತಿಳಿಸಿದರು.

    ವಲಯವಾರು ಉಸ್ತುವಾರಿ ಅಧಿಕಾರಿಗಳು ಪ್ರತಿದಿನ ಈ ಎಲ್ಲ ಕೆಲಸಗಳ ಮೇಲೆ ನಿಗಾವಹಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ಜೊತೆಗೆ ತಮ್ಮ ವ್ಯಾಪ್ತಿಗೆ ಸೇರಿರುವ ಲ್ಯಾಬ್ ಗಳ ಪರೀಕ್ಷೆ ಮತ್ತು ಕಾರ್ಯ ನಿರ್ವಹಣೆ ಮೇಲೂ ನಿಗಾ ಇಡಬೇಕು. ಇನ್ನೊಂದು ವಾರದೊಳಗೆ ಯಾವುದೇ ಸ್ಯಾಂಪಲ್ ಬಾಕಿ ಇಲ್ಲದಂತೆ ನೋಡಿಕೊಳ್ಳಬೇಕು. ಇದರ ಸಮನ್ವಯವನ್ನು ಹಿರಿಯ ಅಧಿಕಾರಿ ಶಾಲಿನಿ ರಜನೀಶ್ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

    ಕೊಳಚೆ ಪ್ರದೇಶ ಮತ್ತು ಹೋಮ್ ಕ್ವಾರಂಟೈನ್ ಸೌಲಭ್ಯಗಳಿಲ್ಲದ ಜನವಸತಿ ಪ್ರದೇಶಗಳಲ್ಲಿ ಪಾಸಿಟಿವ್ ಆದವರನ್ನು ಸರ್ಕಾರಿ ವ್ಯವಸ್ಥೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಇಡುವ ಕೆಲಸ ಆಗಬೇಕು. ಇದಕ್ಕಾಗಿ ಮುಂಬೈನ ಧಾರಾವಿಯಲ್ಲಿ ಅಳವಡಿಸಿಕೊಂಡಿರುವ ರೀತಿಯ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದರು.

    ವಲಯವಾರು ಅಗತ್ಯವಿರುವ ವಾಹನ ಮತ್ತು ಸಿಬ್ಬಂದಿ ಕೊರತೆಯನ್ನು ಬಿಬಿಎಂಪಿ ಆಯುಕ್ತರು ನಿರ್ವಹಿಸಬೇಕು. ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿ ಕೊರತೆ ನಿವಾರಿಸುವ ಕೆಲಸವನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ನೋಡಿಕೊಳ್ಳಬೇಕು ಎಂದು ಆದೇಶಿಸಿದರು.