Tag: ವೈದ್ಯಕೀಯ ಸಿಬ್ಬಂದಿ

  • ಪಾಟ್ನಾ AIIMSನಲ್ಲಿ ಕೊರೊನಾ ಸ್ಫೋಟ – 384 ವೈದ್ಯರಿಗೆ ಪಾಸಿಟಿವ್, ನರ್ಸಿಂಗ್ ಸಿಬ್ಬಂದಿಗೂ ಸೋಂಕು

    ಪಾಟ್ನಾ AIIMSನಲ್ಲಿ ಕೊರೊನಾ ಸ್ಫೋಟ – 384 ವೈದ್ಯರಿಗೆ ಪಾಸಿಟಿವ್, ನರ್ಸಿಂಗ್ ಸಿಬ್ಬಂದಿಗೂ ಸೋಂಕು

    ಪಾಟ್ನಾ: ಬಿಹಾರದಲ್ಲಿ ಕೊರೊನಾ ಆತಂಕದ ನಡುವೆ ಮತ್ತೊಂದು ಆಘಾತ ಎದುರಾಗಿದೆ. ಬಿಹಾರದಲ್ಲಿ ಮಂಗಳವಾರ ಮೊದಲ ಬಾರಿಗೆ 10 ಸಾವಿರ ಕೊರೊನಾ ಪ್ರಕರಣಗಳ ವರದಿಯಾಗಿವೆ. ಇದರಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿದ್ದ ಏಮ್ಸ್ ಆಸ್ಪತ್ರೆಯ 384 ವೈದ್ಯರು ಮತ್ತು ನರ್ಸಿಂಗ್ ಸಿಬ್ಬಂದಿಗೂ ಸೋಂಕು ತಗುಲಿದೆ.

    ಪಾಟ್ನಾ ಏಮ್ಸ್ ಮೆಡಿಕಲ್ ಸೂಪರಿಟೆಂಡೆಂಟ್ ಇಂದು ತಮ್ಮ ಆಸ್ಪತ್ರೆಯ 384 ವೈದ್ಯರು ಸೇರಿದಂತೆ ಅನೇಕ ನರ್ಸಿಂಗ್ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಕೊರೊನಾ ಹಿನ್ನೆಲೆ ಬಿಹಾರದ ಪಂಚಾಯತಿ ಚುನಾವಣೆಗಳನ್ನ ಮುಂದೂಡಲಾಗಿದೆ. ಚುನಾವಣೆ ಏಪ್ರಿಲ್ ಅಂತ್ಯಕ್ಕೆ ನಿಗದಿಯಾಗಿತ್ತು. 15 ದಿನಗಳ ನಂತರ ಕೊರೊನಾ ಕುರಿತ ವಾಸ್ತವತೆ ಬಗ್ಗೆ ಸಮೀಕ್ಷೆ ನಡೆಸಿ ದಿನಾಂಕ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

    ಮಂಗಳವಾರ ಬಿಹಾರದಲ್ಲಿ 10,455 ಹೊಸ ಪ್ರಕರಣಗಳು ವರದಿಯಾಗಿದ್ದು, 51 ಸೋಂಕಿತರು ಸಾವನ್ನಪ್ಪಿದ್ದಾರೆ. ಪ್ರತಿ ಗಂಟೆಗೆ ಇಬ್ಬರು ಕೊರೊನಾದಿಂದ ಬಿಹಾರದಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದವರೆಗೂ 3,42,059 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 1,841 ಜನ ಸಾವನ್ನಪ್ಪಿದ್ದಾರೆ. ಸದ್ಯ 49,527 ಸಕ್ರಿಯ ಪ್ರಕರಣಗಳಿವೆ.

  • 5ನೇ ದಿನಕ್ಕೆ ಕಾಲಿಟ್ಟ ಕಿಮ್ಸ್ ವೈದ್ಯಕೀಯ ಸಿಬ್ಬಂದಿಯ ಪ್ರತಿಭಟನೆ

    5ನೇ ದಿನಕ್ಕೆ ಕಾಲಿಟ್ಟ ಕಿಮ್ಸ್ ವೈದ್ಯಕೀಯ ಸಿಬ್ಬಂದಿಯ ಪ್ರತಿಭಟನೆ

    ಹುಬ್ಬಳ್ಳಿ: ಎನ್.ಪಿ.ಎಸ್ ಸೌಲಭ್ಯ ಸೇರಿದಂತೆ ಜ್ಯೋತಿ ಸಂಜೀವಿನಿ ಒದಗಿಸುವಂತೆ ಆಗ್ರಹಿಸಿ ಕಿಮ್ಸ್ ಶುಶ್ರೂಷಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಯಾವುದೇ ದಕ್ಕೆ ಉಂಟಾಗದಂತೆ ಪ್ರತಿಭಟನೆ ನಡೆಸಿದರು.

    ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆವರಣದ ಎದುರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯ ಕುಟುಂಬ ಕಲ್ಯಾಣ ಇಲಾಖೆಗೆ ಇದ್ದು ನಮಗೂ ನೀಡಿ ಎಂದು ಒತ್ತಾಯಿಸಿದರು.

    ವೈದ್ಯಕೀಯ ವಿದ್ಯಾಲಯದಲ್ಲಿ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ತಾರತಮ್ಯವನ್ನು ನಿಭಾಯಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಮೂಲ ವೇತನ ಶೇ.50ರಷ್ಟು ಹೆಚ್ಚುವರಿ ನೀಡಿ ಎಂದು ಸ್ಟಾಪ್ ನರ್ಸಿಂಗ್ ಸಿಬ್ಬಂದಿಯಿಂದ ಒತ್ತಾಯಸಿದ ಅವರು, ಬೇಡಿಕೆ ಈಡೇರಿರುವವರೆಗೂ ಕಪ್ಪು ಪಟ್ಟಿ ಧರಿಸಿಯೇ ಕೆಲಸ ಪ್ರಾರಂಭಿಸುತ್ತೇವೆ ಎಂದು ಪಟ್ಟು ಹಿಡಿದರು.

  • ನರಕದಿಂದ ನಮ್ಮನ್ನು ಹೊರ ತರಲು ಕಷ್ಟ ಪಡ್ತಿರೋರಿಗೆ ನಾವು ಸಹಕರಿಸೋಣ – ಗುಣಮುಖವಾಗಿ ಕಣ್ಣೀರಿಟ್ಟ

    ನರಕದಿಂದ ನಮ್ಮನ್ನು ಹೊರ ತರಲು ಕಷ್ಟ ಪಡ್ತಿರೋರಿಗೆ ನಾವು ಸಹಕರಿಸೋಣ – ಗುಣಮುಖವಾಗಿ ಕಣ್ಣೀರಿಟ್ಟ

    ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಗುಣಮುಖರಾಗಿದ್ದು ಪೊಲೀಸರು, ವೈದ್ಯರು, ನರ್ಸ್‍ಗಳಿಗೆ ನಾವು ಸಹಕರಿಸಬೇಕು ಎಂದು ಕಣ್ಣೀರಿಡುತ್ತಾ ಮನಮುಟ್ಟುವಂತೆ ಜನರಿಗೆ ಸಂದೇಶ ನೀಡಿದ್ದಾರೆ.

    ವಿಡಿಯೋವೊಂದರ ಮೂಲಕ ಇಡೀ ಸಮಾಜಕ್ಕೆ ಸಂದೇಶವನ್ನು ನೀಡಿದ್ದಾರೆ. ಕಳೆದ 3 ದಿನದ ಹಿಂದೆ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಸೋಂಕಿತ ವ್ಯಕ್ತಿ ಪೊಲೀಸರು, ವೈದ್ಯರು, ನರ್ಸ್‍ಗಳ ಕಾರ್ಯದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ನರಕದಿಂದ ನಮ್ಮನ್ನು ಹೊರ ಕರೆತರಲು ಅವರು ಬಹಳ ಕಷ್ಟಪಡುತ್ತಿದ್ದಾರೆ. ಈ ನರಕದಿಂದ ಹೊರಬರಲು ನಾವು ಅವರಿಗೆ ಸಹಕಾರ ಕೊಡಬೇಕು. ವೈದ್ಯಕೀಯ ಸಿಬ್ಬಂದಿ, ಪೊಲೀಸರಿಗೆ ನಾವು ಈ ಕೊರೊನಾ ಹೋರಾಟದಲ್ಲಿ ಹೋರಾಡಲು ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

    ಡಿಸ್ಚಾರ್ಜ್ ಆಗಿದ್ದ ವ್ಯಕ್ತಿಯನ್ನು ಸ್ಥಳೀಯರು ಯೋಧನ ರೀತಿ ಸ್ವಾಗತಿಸಿ ಬರಮಾಡಿಕೊಂಡರು. ತಬ್ಲಿಘಿ ಸಮಾವೇಶಕ್ಕೆ ತೆರಳಿ ಕೊರೊನಾ ಪಾಸಿಟಿವ್ ಆಗಿದ್ದ ತೊಕ್ಕೊಟ್ಟಿನ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವ್ಯಕ್ತಿ ಗುಣಮುಖರಾಗಿ ಮನೆಗೆ ಬರುತ್ತಿದ್ದಾಗ ಇವರನ್ನು ಸ್ವಾಗತಿಸಲು ಸೀಲ್‍ಡೌನ್ ಆದ ತೊಕ್ಕೊಟ್ಟು ಏರಿಯಾದಲ್ಲಿ 30ಕ್ಕೂ ಹೆಚ್ಚು ಮಂದಿ ಸೇರಿದ್ದರು. ಕೊರೊನಾ ಹರಡದಂತೆ ತೊಕ್ಕೊಟ್ಟಿನಲ್ಲಿ ಬಿಗುವಾದ ಲಾಕ್‍ಡೌನ್ ಮಾಡಲಾಗಿತ್ತು.

    ಈ ವೇಳೆ ಮಾತನಾಡಿದ ವ್ಯಕ್ತಿ, ವೈದ್ಯರು ಮತ್ತು ನರ್ಸ್‍ಗಳು ಸೇವೆಯನ್ನು ಶ್ಲಾಘಿಸಿದ್ದಾರೆ. ತಮ್ಮ ಜೀವ ಪಣಕ್ಕಿಟ್ಟು ಪೊಲೀಸರು, ವೈದ್ಯರು ಮತ್ತು ನರ್ಸ್‍ಗಳು ನಮ್ಮನ್ನು ಕೊರೊನಾ ನರಕದಿಂದ ಪಾರು ಮಾಡಿದ್ದಾರೆ. ಅವರಿಗೆ ನಾವು ಸಹಕರಿಸಬೇಕು. ಆಸ್ಪತ್ರೆಯಲ್ಲಿ ತುಂಬಾ ಚೆನ್ನಾಗಿ ನಮ್ಮನ್ನು ನೋಡಿಕೊಂಡಿದ್ದಾರೆ. ಅವರಿಗೆ ಎಷ್ಟೆ ಕಷ್ಟವಾದರೂ ಜನರ ಜೀವ ಉಳಿಸಲು ವೈದ್ಯರು, ಪೊಲೀಸರು, ನರ್ಸ್‍ಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕಣ್ಣಿರಿಡುತ್ತಲೇ ಗುಖಮುಖರಾದ ಸೋಂಕಿತ ಹೇಳಿಕೊಂಡಿದ್ದಾರೆ.

    ಈ ವಿಡಿಯೋವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಹರ್ಷ ಅವರು ಟ್ವೀಟ್ ಮಾಡಿದ್ದಾರೆ.

  • ದೇಶಕ್ಕಾಗಿ ಕುಟುಂಬದಿಂದ ದೂರವಿದ್ದೇವೆ: ನರ್ಸ್ ಸುಗಂಧ

    ದೇಶಕ್ಕಾಗಿ ಕುಟುಂಬದಿಂದ ದೂರವಿದ್ದೇವೆ: ನರ್ಸ್ ಸುಗಂಧ

    – ಮಗಳನ್ನು ನೋಡಿದ ತಕ್ಷಣ ಕಷ್ಟ ಮರೆತುಹೋಯ್ತು
    – ಕೊರೊನಾ ಮುಕ್ತ ಭಾರತಕ್ಕೆ ಪಣ
    – ದಯವಿಟ್ಟು ಪರಿಸ್ಥಿತಿಯನ್ನು ಅರಿತು ಮನೆಯಲ್ಲಿರಿ

    ಬೆಳಗಾವಿ: 21 ದಿನಗಳ ಬಳಿಕ ಮಗಳನ್ನು ಸೇರಿದ ನರ್ಸ್ ಸುಗಂಧ ಅವರು ಪಬ್ಲಿಕ್ ಟಿವಿ ಜೊತೆ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಮಗಳನ್ನು ಬಿಟ್ಟಿರೋದು ಕಷ್ಟವಾಯ್ತು ಆದ್ರೆ ಕೊರೊನಾ ವಿರುದ್ಧ ಹೋರಾಡೋದು ನಮ್ಮ ಕರ್ತವ್ಯ, ದೇಶಕ್ಕಾಗಿ ಕುಟುಂಬದಿಂದ ವೈದ್ಯಕೀಯ ಸಿಬ್ಬಂದಿಯೆಲ್ಲಾ ದೂರವಿದ್ದೇವೆ ಎಂದು ಹೇಳಿದ್ದಾರೆ.

    ಇಂದು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಗಂಧ ಅವರು, ಮಗಳನ್ನು ನೋಡಿದ ತಕ್ಷಣ ಪಟ್ಟ ಕಷ್ಟವೆಲ್ಲ ಮರೆತುಹೋಯ್ತು. ಕೊರೊನಾ ಡ್ಯೂಟಿಯಲ್ಲಿದ್ದಕ್ಕೆ ವೈದ್ಯರು ಹಾಗೂ ನರ್ಸ್‍ಗಳನ್ನು ಕ್ವಾರಂಟೈನಲ್ಲಿ ಇಟ್ಟಿದ್ದರು. ಈಗ ನಾವೆಲ್ಲಾ ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ಬಂದಿದ್ದೇವೆ. ಮನೆಯವರನ್ನು ನೋಡಿ ಖುಷಿಯಾಯ್ತು. ನನ್ನ ಮಗಳು ನನ್ನನ್ನು ಹೆಚ್ಚು ಹಚ್ಚಿಕೊಂಡಿದ್ದಾಳೆ. ಅವಳನ್ನು ಹೆಚ್ಚು ನಾನೇ ನೋಡಿಕೊಳ್ಳುತ್ತಿದ್ದೆ. ಇದೇ ಮೊದಲ ಬಾರಿಗೆ ನಾನು ಇಷ್ಟು ದಿನ ಅವಳನ್ನು ಬಿಟ್ಟು ದೂರ ಇದ್ದಿದ್ದು. ಅವಳು ಕೂಡ ನಾನಿಲ್ಲದೇ ಕಷ್ಟಪಟ್ಟಿದ್ದಾಳೆ. ನನ್ನಂತೆ ಸಾಕಷ್ಟು ಮಂದಿ ನರ್ಸಗಳಿಗೆ, ವೈದ್ಯಕೀಯ ಸಿಬ್ಬಂದಿಗೆ ಚಿಕ್ಕ ಚಿಕ್ಕ ಮಕ್ಕಳಿದ್ದಾರೆ. ಆದರೆ ನಾವೆಲ್ಲಾ ಕೊರೊನಾ ಮುಕ್ತ ಭಾರತವನ್ನು ಮಾಡಲು ಪಣತೊಟ್ಟಿದ್ದೇವೆ. ಮಕ್ಕಳಿದ್ದಾರೆ ಎಂದು ಕರ್ತವ್ಯ ಬಿಟ್ಟು ಮನೆಯಲಿದ್ದರೆ ನಾವು ವೈದ್ಯಕೀಯ ಸಿಬ್ಬಂದಿ ಆಗಿರೋದಕ್ಕೆ ಅರ್ಥವಿಲ್ಲ. ದೇಶಕ್ಕಾಗಿ ವೈದ್ಯಕೀಯ ಸಿಬ್ಬಂದಿ ಹೋರಾಡುತ್ತಿದ್ದೇವೆ ಎಂದು ತಮ್ಮ ಕರ್ತವ್ಯ, ಜವಾಬ್ದಾರಿಗಳ ಬಗ್ಗೆ ಹೇಳಿದರು.

    ಕ್ವಾರಂಟೈನ್‍ನಲ್ಲಿದ್ದಾಗ ತುಂಬಾ ಕಷ್ಟವಾಗಿತ್ತು. ಅತ್ತ ಡ್ಯೂಟಿ ಕೂಡ ಮಾಡುವಂತಿರಲಿಲ್ಲ. ಇತ್ತ ಮನೆಗೂ ಹೋಗುವಂತಿರಲಿಲ್ಲ. ಮಗಳು, ಕುಟುಂಬದವರು ತುಂಬಾ ನೆನಪಾಗುತ್ತಿದ್ದರು. ಮಗಳು ನನಗೋಸ್ಕರ ಕಷ್ಟಪಡುತ್ತಿರೋದನ್ನು ತಿಳಿದು ಮನಸಲ್ಲೇ ತುಂಬಾ ದುಃಖವಾಗುತ್ತಿತ್ತು. 21 ದಿನಗಳು ಕಳೆದು ಮನೆಗೆ ಹೋಗಿ ಮಗಳನ್ನು ನೋಡಿದಾಗ ಮಾತನಾಡೋಕೆ ಆಗಲಿಲ್ಲ. ಅವಳನ್ನು ನೋಡಿದ ಖುಷಿಗೆ ಕಣ್ಣಿರು ಬಂದುಬಿಟ್ಟಿತು. ಅವಳನ್ನು ಎತ್ತಿಕೊಂಡು ಮುದ್ದಾಡಿದೆ ಎಂದು ಖುಷಿಯನ್ನು ಹಂಚಿಕೊಂಡರು.

    ದೇವರ ಕೃಪೆಯಿಂದ ಕ್ವಾರಂಟೈನಲ್ಲಿದ್ದ ಯಾವ ಸಿಬ್ಬಂದಿಗೂ ಸೋಂಕು ತಗುಲಿರಲಿಲ್ಲ. ಎಲ್ಲರಿಗೂ ತಪಾಸಣೆ ನಡೆಸಿ ವರದಿ ಬಂದ ಬಳಿಕವೇ ಎಲ್ಲರನ್ನು ಮನೆಗೆ ಕಳುಹಿಸಿದ್ದಾರೆ. ಮತ್ತೆ ಸೋಮವಾರದಿಂದ ನಾವು ಕರ್ತವ್ಯಕ್ಕೆ ತೆರೆಳಲಿದ್ದೇವೆ. ಸದ್ಯ ಜನರಲ್ ವಾರ್ಡಿಗೆ ಡ್ಯೂಟಿ ಹಾಕಿದ್ದಾರೆ. ರೊಟೆಷನಲ್ ಶಿಫ್ಟ್ ಹಾಕುತ್ತಿರುತ್ತಾರೆ. ಪದೇ ಪದೇ ಕೊರೊನಾ ವಾರ್ಡಿಗೆ ಡ್ಯೂಟಿ ಹಾಕಲ್ಲ. ಸಿಬ್ಬಂದಿ ಕಡಿಮೆ ಇದ್ದರೆ ಮಾತ್ರ ಹಾಕುತ್ತಾರೆ. ಆಗ ಮತ್ತೆ ನಮ್ಮನ್ನು ಕ್ವಾರಂಟೈನ್‍ನಲ್ಲಿ ಇಡುತ್ತಾರೆ ಎಂದು ಸುಗಂಧ ಅವರು ತಿಳಿಸಿದರು.

    ವೈದ್ಯಕೀಯ ಸಿಬ್ಬಂದಿ, ಪೊಲೀಸರು ಕಷ್ಟಪಟ್ಟು ಕೊರೊನಾವನ್ನು ತಡೆಗಟ್ಟಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಮಾಧ್ಯಮದವರು ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಇಷ್ಟೆಲ್ಲಾ ಮಾಡುತ್ತಿದ್ದರೂ ಜನರು ಅರ್ಥ ಮಾಡಿಕೊಳ್ಳುತ್ತಿಲ್ಲ. ದಯವಿಟ್ಟು ಪರಿಸ್ಥಿತಿ ಅರ್ಥ ಮಾಡಿಕೊಂಡು ಮನೆಯಲ್ಲಿಯೇ ಇರಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಸರ್ಕಾರಿ ನಿಯಮವನ್ನು ಪಾಲಿಸಿ ಸೋಂಕಿನಿಂದ ದೂರವಿದ್ದು, ಸುರಕ್ಷಿತವಾಗಿರಿ ಎಂದು ಸುಗಂಧ ಅವರು ಮನವಿ ಮಾಡಿಕೊಂಡರು.

    ಜನರು ಮಾಡುತ್ತಿರುವುದನ್ನು ನೋಡಿದರೆ ಸಿಟ್ಟು ಬರುತ್ತಿದೆ. ಪೊಲೀಸರು ಹೊಡೆಯುತ್ತಾರೆ ಎಂದು ಜನರು ದೂರುತ್ತಿದ್ದಾರೆ. ಇವರು ಹೊರಗೆ ಬಾರದೇ ಮನೆಯಲ್ಲಿದ್ದರೆ ಯಾರೂ ಅವರಿಗೆ ಹೊಡೆಯಲ್ಲ. ಅಗತ್ಯವಿದ್ದರೆ ಮಾತ್ರ ಹೊರಗೆ ಬನ್ನಿ, ಸುಮ್ಮನೆ ಬಂದು ಸೋಂಕಿಗೆ ತುತ್ತಾಗಬೇಡಿ. ನಿಮಗಾಗಿ ನಾವು ಕಷ್ಟಪಡುತ್ತಿದ್ದೇವೆ, ನಮಗಾಗಿ ನೀವು ಮನೆಯಲ್ಲಿ ಇರಿ. ಪೊಲೀಸರಿಗೆ, ವೈದ್ಯಕೀಯ ವರ್ಗಕ್ಕೆ ಸಹಕರಿಸಿ. ಈ ಕೊರೊನಾವನ್ನು ಜೊತೆಗೂಡಿ ನಿರ್ಮೂಲನೆ ಮಾಡೋಣ ಎಂದು ನರ್ಸ್ ಸುನಂದಾ ಕರೆ ನೀಡಿದ್ದಾರೆ.

  • ಗೌರಿಬಿದನೂರಿಗೆ ಮತ್ತೆ ಕೊರೊನಾ ಕಂಟಕ – ವೈದ್ಯಕೀಯ ಸಿಬ್ಬಂದಿಗೆ ಸೋಂಕು?

    ಗೌರಿಬಿದನೂರಿಗೆ ಮತ್ತೆ ಕೊರೊನಾ ಕಂಟಕ – ವೈದ್ಯಕೀಯ ಸಿಬ್ಬಂದಿಗೆ ಸೋಂಕು?

    – ಎರಡು ದಿನ ಸಂಪೂರ್ಣ ಸೀಲ್‍ಡೌನ್

    ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿಗೆ ಮತ್ತೆ ಕೊರೊನಾ ಕಂಟಕ ಎದುರಾಗಿದೆ. ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಆತಂಕ ಹೆಚ್ಚಾಗಿದೆ. ಯಾಕೆಂದರೆ ಕೋವಿಡ್ 19 ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗೆ ಕೊರೊನಾ ಸೋಂಕು ಇದೆ ಎಂಬ ಶಂಕೆ ವ್ಯಕ್ತವಾಗಿದೆ.

    ಗೌರಿಬಿದನೂರು ನಗರದ ಕರಕಲ್ಲೇಹಳ್ಳಿ ನಿವಾಸಿಯಾಗಿದ್ದು, ಈತ ಸಹಾಯವಾಣಿಯಲ್ಲಿ ಕೆಲಸ ಮಾಡುತ್ತಿದ್ದ. 25 ವರ್ಷದ ವೈದ್ಯಕೀಯ ಸಿಬ್ಬಂದಿ ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ. ಹೀಗಾಗಿ ತಾನೇ ಸ್ವಯಂಪ್ರೇರಿತವಾಗಿ ಟೆಸ್ಟ್ ಗೆ ಒಳಗಾಗಿದ್ದ. ಈಗ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ಅಲ್ಲದೇ ಸಿಬ್ಬಂದಿ ಜೊತೆ ಒಡನಾಟವಿದ್ದ ಇತರೆ ಸಿಬ್ಬಂದಿಯನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

    ಜೊತೆಗೆ ಕೊರೊನಾ ಶಂಕಿತ ಸಿಬ್ಬಂದಿ ಕುಟುಂಬದವರಿಗೂ ಕ್ವಾರಂಟೈನ್ ಮಾಡಲಾಗಿದೆ. ಈಗಾಗಲೇ ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಸದ್ಯಕ್ಕೆ ಪರೀಕ್ಷಾ ವರದಿಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕಾಯುತ್ತಿದೆ. ಪ್ರತಿದಿನ ಗೌರಿಬಿದನೂರು ನಗರದಿಂದ ಚಿಕ್ಕಬಳ್ಳಾಪುರದ ಕೋವಿಡ್ 19 ಆಸ್ಪತ್ರೆಗೆ ಆಗಮಿಸುತ್ತಿದ್ದನು. ಹೀಗಾಗಿ ಗೌರಿಬಿದನೂರು ನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಸಿಬ್ಬಂದಿ ಮನೆ ಹಾಗೂ ಅಕ್ಕಪಕ್ಕ ವೈರಾಣು ನಿವಾರಕ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ.

    ಗೌರಿಬಿದನೂರಿಗೆ ಕೊರೊನಾ ಕಂಟಕ ಹಿನ್ನೆಲೆಯಲ್ಲಿ ಗೌರಿಬಿದನೂರನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದೆ. ಬೆಳಗ್ಗೆ 06 ರಿಂದ 09 ಗಂಟೆಯವರೆಗೆ ಹಾಲು, ತರಕಾರಿ ಖರೀದಿಗೆ ಅವಕಾಶ ಮಾಡಲಾಗಿದೆ. ದಿನಸಿ ಅಂಗಡಿ ಹಾಗೂ ಪೆಟ್ರೋಲ್ ಬಂಕ್ ಸಹ ಸಂಪೂರ್ಣ ಬಂದ್ ಆಗಿದೆ. ಮೆಡಿಕಲ್ ಸ್ಟೋರ್ ಹಾಗೂ ಆಸ್ಪತ್ರೆ ಹೊರತುಪಡಿಸಿ ಎಲ್ಲವೂ ಬಂದ್. ಯಾವುದೇ ವಾಹನಗಳು ರಸ್ತೆಗೆ ಇಳಿಯುವಂತಿಲ್ಲ. ಒಂದು ವೇಳೆ ರಸ್ತೆಗೆ ವಾಹನ ಬಂದರೆ ವಾಹನ ವಶಕ್ಕೆ ಪಡೆಯಲಾಗುತ್ತದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

    ಅಷ್ಟೇ ಅಲ್ಲದೇ ಗೌರಿಬಿದನೂರು ನಗರಕ್ಕೆ ಗ್ರಾಮೀಣ ಭಾಗದ ಜನರ ಪ್ರವೇಶವನ್ನು ಬಂದ್ ಮಾಡಲಾಗಿದೆ. ಅತ್ಯಗತ್ಯ ವಸ್ತುಗಳ ಅವಶ್ಯಕತೆ ಇದ್ದಲ್ಲಿ ಸಹಾಯವಾಣಿಗೆ ಕರೆ ಮಾಡಿ ತಿಳಿಸಬೇಕು. ಸದ್ಯಕ್ಕೆ ಎರಡು ದಿನಗಳ ಕಾಲ ಗೌರಿಬಿದನೂರ ನಗರವನ್ನು ಸೀಲ್‍ಡೌನ್ ಮಾಡಲಾಗಿದೆ.

    ಜಿಲ್ಲೆಯಲ್ಲಿ ಈಗಾಗಲೇ 12 ಮಂದಿಗೆ ಸೋಂಕು ದೃಢಪಟ್ಟಿದೆ. ಅದರಲ್ಲಿ ಒಬ್ಬರು ಮೃತಪಟ್ಟಿದ್ದು, 8 ಮಂದಿ ಗುಣಮುಖರಾಗಿದ್ದಾರೆ. ಉಳಿದ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಚಿಕ್ಕಬಳ್ಳಾಪುರ ನಗರದ ಹಳೇ ಜಿಲ್ಲಾಸ್ಪತ್ರೆಯ ಕೋವಿಡ್-19 ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ 04 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಡಿಸ್ಚಾರ್ಜ್ ಆದ ನಾಲ್ಕೂ ಮಂದಿಗೆ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಚಪ್ಪಾಳೆ ತಟ್ಟಿ ಹೂ ಗಿಡ ಹಾಗೂ ಹಣ್ಣು ಕೊಟ್ಟು ಬೀಳ್ಕೊಟ್ಟಿದ್ದರು.

  • ತಲೆ ಬೋಳಿಸಿಕೊಳ್ತೀರಾ- ಕೊಹ್ಲಿಗೆ ವಾರ್ನರ್ ಚಾಲೆಂಜ್

    ತಲೆ ಬೋಳಿಸಿಕೊಳ್ತೀರಾ- ಕೊಹ್ಲಿಗೆ ವಾರ್ನರ್ ಚಾಲೆಂಜ್

    ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಅವರು ವೈದ್ಯಕೀಯ ಸಿಬ್ಬಂದಿಗೆ ಬೆಂಬಲ ನೀಡಲು ತಮ್ಮ ತಲೆಯನ್ನು ತಾವೇ ಬೋಳಿಸಿಕೊಂಡಿದ್ದಾರೆ. ಜೊತೆಗೆ ನಿಮ್ಮ ತಲೆಯನ್ನು ಬೋಳಿಸಿಕೊಳ್ಳುತ್ತೀರಾ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಸ್ಟೀವ್ ಸ್ಮಿತ್ ಅವರಿಗೆ ಸವಾಲು ಹಾಕಿದ್ದಾರೆ.

    ಕೊರೊನಾ ಸೋಂಕಿತರ ಪ್ರಾಣ ಉಳಿಸಲು ಶ್ರಮಿಸುತ್ತಿರುವ ವೈದ್ಯರು, ದಾದಿಯರು ಮತ್ತು ಇತರಿಗೆ ಧನ್ಯವಾದ ತಿಳಿಸಲು ವಾರ್ನರ್ ತಲೆ ಬೋಳಿಸಿಕೊಂಡಿದ್ದಾರೆ. ವಾರ್ನರ್ ತಾವು ತಲೆ ಬೋಳಿಸಿಕೊಂಡ ವಿಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದೇ ವೇಳೆ ಫೋಟೋ ಒಂದನ್ನು ಪೋಸ್ಟ್ ಮಾಡಿ, ನೀವು ಕೂಡ ತಲೆ ಬೋಳಿಸಿಕೊಂಡು ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೀರಾ ಎಂದು ಸ್ಟೀವ್ ಸ್ಮಿತ್, ಪ್ಯಾಟ್ ಕಮ್ಮಿನ್ಸ್, ಜೋ ಬನ್ರ್ಸ್, ಆಡಮ್ ಜಂಪಾ, ಮಾರ್ಕಸ್ ಸ್ಟೊಯಿನಿಸ್, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ತಮ್ಮ ತಂಡದ ಆಟಗಾರರಿಗೆ ಸವಾಲು ಹಾಕಿದ್ದಾರೆ.

    https://www.instagram.com/p/B-YVHGwJIqU/?utm_source=ig_embed

    ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮನೆಯಲ್ಲಿರುವ ಕೊಹ್ಲಿ ಈ ಸವಾಲನ್ನು ಸ್ವೀಕರಿಸುತ್ತಾರಾ? ಮತ್ತು ತಮ್ಮ ತಲೆಯನ್ನು ಬೋಳಿಸಿಕೊಳ್ಳುತ್ತಾರಾ ಮುಂದೆ ತಿಳಿಯಲಿದೆ.

    ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಪತ್ನಿ ಅನುಷ್ಕಾ ಶರ್ಮಾ ಅವರಿಂದ ಹೇರ್ ಕಟಿಂಗ್ ಮಾಡಿಸಿಕೊಂಡಿದ್ದರು. ಈ ವಿಡಿಯೋವನ್ನು ಅನುಷ್ಕಾ ಶರ್ಮಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಡೇವಿಡ್ ವಾರ್ನರ್ ಮತ್ತು ವಿರಾಟ್ ಕೊಹ್ಲಿ ಇಬ್ಬರೂ ಉತ್ತಮ ಫಾರ್ಮ್ ನಲ್ಲಿದ್ದಾರೆ. ಜೊತೆಗೆ ಉತ್ತಮ ಸ್ನೇಹಿತರು ಕೂಡ ಹೌದು. ಹೀಗಾಗಿ ವಾರ್ನರ್ ನೀಡಿದ ಸವಾಲನ್ನು ವಿರಾಟ್ ಸ್ವೀಕರಿಸುತ್ತಾರಾ ಎನ್ನುವುದೇ ಕುತೂಹಲ ಮೂಡಿಸಿದೆ.

    ಕೊರೊನಾ ವಿರುದ್ಧದ ಹೋರಾಟಕ್ಕೆ ವಿರಾಟ್ ಕೊಹ್ಲಿ, ಅನುಷ್ಕಾ ದಂಪತಿ ದೇಣಿಗೆ ನೀಡಿದ್ದಾರೆ. ಈ ಕುರಿತು ಇಬ್ಬರೂ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದು, ವಿರಾಟ್ ಹಾಗೂ ನಾನು ಪಿಎಂ-ಕೇರ್ಸ್ ಫಂಡ್ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಧನ ಸಹಾಯ ಮಾಡಿದ್ದೇವೆ. ಹಲವು ಜನರು ಬಳಲುತ್ತಿರುವುದನ್ನು ನೋಡಿ ಹೃದಯ ಬಡಿತವೇ ನಿಂತಂತಾಗುತ್ತಿದೆ. ಹೀಗಾಗಿ ನಮ್ಮ ಈ ಕೊಡುಗೆ ಪರಿಹಾರ ಕೆಲಸಕ್ಕೆ ನೆರವಾಗಲಿದೆ ಎಂದು ನಾವು ಭಾವಿಸಿದ್ದೇವೆ. ನಮ್ಮ ಪ್ರೀತಿಯ ಜನರ ನೋವು ನಿವಾರಿಸಲು ಸಹಾಯವಾಗಲಿದೆ ಎಂದು ಬರೆದುಕೊಂಡಿದ್ದರು. ಆದರೆ ಎಷ್ಟು ಹಣ ನೀಡಿದ್ದಾರೆ ಎಂದು ತಿಳಿಸಿಲ್ಲ.