Tag: ವೈದ್ಯಾಧಿಕಾರಿಗಳು

  • ಜಿಲ್ಲಾಧಿಕಾರಿ ಸಭೆಗೆ ಗೈರಾದ ತಾಲೂಕು ವೈದ್ಯಾಧಿಕಾರಿಗಳು ಅಮಾನತು

    ಜಿಲ್ಲಾಧಿಕಾರಿ ಸಭೆಗೆ ಗೈರಾದ ತಾಲೂಕು ವೈದ್ಯಾಧಿಕಾರಿಗಳು ಅಮಾನತು

    ರಾಯಚೂರು: ಜಿಲ್ಲೆಯಲ್ಲಿನ ಗರ್ಭಿಣಿ ತಾಯಿ ಹಾಗು ಶಿಶು ಮರಣ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾಧಿಕಾರಿಗಳು ಕರೆದಿದ್ದ ಸಭೆಗೆ ಗೈರಾದ ಇಬ್ಬರು ತಾಲೂಕು ವೈದ್ಯಾಧಿಕಾರಿಗಳು ಅಮಾನತ್ತಾಗಿದ್ದಾರೆ.

    ದೇವದುರ್ಗ ತಾಲೂಕು ವೈದ್ಯಾಧಿಕಾರಿ ಡಾ.ಬನದೇಶ್, ಸಿಂಧನೂರು ತಾಲೂಕು ವೈದ್ಯಾಧಿಕಾರಿ ಅಯ್ಯನಗೌಡ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣಗೆ ಅಮಾನತ್ತು ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಗೆ ಸಿಂಧನೂರು ಹಾಗೂ ದೇವದುರ್ಗ ಟಿಎಚ್‍ಓಗಳು ಗೈರು ಹಾಜರಾಗಿದ್ದರು. ಇದನ್ನೂ ಓದಿ: ತನ್ನ ಕಥೆಯನ್ನು ಪಠ್ಯದಿಂದ ಕೈ ಬಿಡಿ: ದೇವನೂರು ಮಹಾದೇವ 

    ತಾಯಿ ಶಿಶು ಮರಣ ಆಡಿಟ್ ಕಮಿಟಿಯಲ್ಲಿ ಕಳೆದ ಒಂದು ವರ್ಷದ ಮರಣಗಳ ಬಗ್ಗೆ ಆಡಿಟ್ ಮಾಡಬೇಕಿತ್ತು. ಆದರೆ ಅಧಿಕಾರಿಗಳ ಗೈರು ಹಾಜರಿಯಿಂದ ಕೈಗೆತ್ತಿಕೊಂಡ 16 ಪ್ರಕರಣಗಳಲ್ಲಿ ಕೇವಲ 5 ಪ್ರಕರಣಗಳ ಬಗ್ಗೆ ಮಾತ್ರ ಚರ್ಚೆ ಮಾಡಲಾಯಿತು. ಮೆಟರನಿಟಿ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಪ್ರಮುಖ ಸಭೆಗೆ ಗೈರಾಗಿದ್ದಕ್ಕೆ ಜಿಲ್ಲಾಧಿಕಾರಿಗಳು ಗರಂ ಆಗಿದ್ದು, ಅಮಾನತ್ತು ಆದೇಶ ಹೊರಡಿಸಿದ್ದಾರೆ.

    ಅಧಿಕಾರಿಗಳ ಗೈರು ಹಾಜರಿ ಬಗ್ಗೆ ಪರಿಶೀಲನಾ ವರದಿ ನೀಡುವಂತೆ ಲಿಂಗಸುಗೂರು ಹಾಗೂ ರಾಯಚೂರು ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಮುಂದೆಯೂ ಪ್ರಮುಖ ಸಭೆಗಳಿಗೆ ಗೈರಾದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಮೇ 26 ರಿಂದ ಮಸೀದಿ ಪರ ಅರ್ಜಿ ವಿಚಾರಣೆ, ಯಥಾಸ್ಥಿತಿ ಕಾಯ್ದುಕೊಳ್ಳಿ: ಕೋರ್ಟ್ ಆದೇಶ

  • ಕೊರೊನಾ ರೋಗಿಗಳಿಗೆ ತಾಲೂಕು ವೈದ್ಯಾಧಿಕಾರಿಗಳಿಂದ ಪಾಯಸದೂಟ

    ಕೊರೊನಾ ರೋಗಿಗಳಿಗೆ ತಾಲೂಕು ವೈದ್ಯಾಧಿಕಾರಿಗಳಿಂದ ಪಾಯಸದೂಟ

    – ಕೊರೊನಾ ಆಸ್ಪತ್ರೆಯಲ್ಲಿ ಗಣೇಶ ಚತುರ್ಥಿ ಆಚರಣೆ

    ಉಡುಪಿ: ಕೊರೊನಾ ಪಾಸಿಟಿವ್ ರೋಗಿಗಳಿಗೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನಲ್ಲಿ ಹಬ್ಬದೂಟ ಬಡಿಸಲಾಗಿದೆ. ಸ್ವತಃ ತಾಲೂಕು ವೈದ್ಯಾಧಿಕಾರಿ ಡಾ.ನಾಗಭೂಷಣ್ ಈ ಕಾರ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

    ಗಣೇಶನ ಹಬ್ಬ ನಾಡಿನಾದ್ಯಂತ ಸರಳವಾಗಿ ಆಚರಿಸಲಾಗಿದೆ. ಗಣೇಶ ಚತುರ್ಥಿ ಸಂದರ್ಭದಲ್ಲಿ ಕೊರೊನಾ ಪಾಸಿಟಿವ್ ಬಂದವರಿಗೆ ಚೌತಿ ಆಚರಿಸುವ ಅವಕಾಶ ಸಿಗಲಿಲ್ಲ. ಉಡುಪಿಯ ಆರೋಗ್ಯ ಇಲಾಖೆ ಇಂದು ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕುಂದಾಪುರದ ಕೋವಿಡ್ ಹೋಂ ಕೇರ್ ಸೆಂಟರ್ ನಲ್ಲಿ ಇಲಾಖೆಯಿಂದಲೇ ಸೋಂಕಿತರಿಗೆ ಮಧ್ಯಾಹ್ನದ ಊಟ ವ್ಯವಸ್ಥೆ ಮಾಡಲಾಗಿತ್ತು.

    ದೈನಂದಿನ ಊಟಕ್ಕೆ ಬದಲಾಗಿ ಹಬ್ಬದ ಊಟದ ಪ್ಯಾಕೆಟ್ ಜೊತೆಗೆ ಸಿಹಿತಿಂಡಿಯನ್ನು ಕೂಡ ನೀಡಲಾಯಿತು. ತಾಲೂಕು ವೈದ್ಯಾಧಿಕಾರಿ ಡಾ. ನಾಗಭೂಷಣ ಉಡುಪ ಅವರ ಈ ವಿಶೇಷ ಕಾಳಜಿಯ ಬಗ್ಗೆ ಸೋಂಕಿತರು ಮೆಚ್ಚುಗೆ ಮಾತನಾಡಿದ್ದಾರೆ. ಕೋವಿಡ್ ಸೋಂಕಿತರು ಬೇಸರದ ನೆಡುವೆ ನಕ್ಕಿದ್ದಾರೆ. ಮನೆಯಿಂದ, ಜನರ ಮನಸ್ಸಿಂದ ದೂರಾಗಿದ್ದೇವೆ ಎಂಬ ನೋವನ್ನು ಪಾಯಸದೂಟ ಮಾಡಿ ಕೆಲಕಾಲ ಮರೆತಿದ್ದಾರೆ.

    ವೈದ್ಯಾಧಿಕಾರಿಗಳು ಕೂಡ ಹಬ್ಬವನ್ನು ರೋಗಿಗಳ ಜೊತೆ ಆಚರಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕಷ್ಟದಲ್ಲಿ ಇರುವವರಲ್ಲಿ, ನೋವಿನಲ್ಲಿರುವವರಲ್ಲಿ ನಗು ಮೂಡಿಸುವುದೇ ಒಂದು ಹಬ್ಬ. ನೆಮ್ಮದಿ ಕೊಡುವ ಕೆಲಸ ಮಾಡಿದ್ದೇನೆ ಎಂದರು.

  • ಒಂದೂರಿನ ಶವ ಮತ್ತೊಂದು ಊರಲ್ಲಿ – ಮೃತದೇಹ ಕಂಡು ಗ್ರಾಮಸ್ಥರು ಗಾಬರಿ

    ಒಂದೂರಿನ ಶವ ಮತ್ತೊಂದು ಊರಲ್ಲಿ – ಮೃತದೇಹ ಕಂಡು ಗ್ರಾಮಸ್ಥರು ಗಾಬರಿ

    – ವೈದ್ಯಾಧಿಕಾರಿಗಳು ಎಡವಟ್ಟು

    ಮಂಡ್ಯ: ಮಹಾಮಾರಿ ಕೊರೊನಾದಿಂದ ಜನರು ಈಗಾಗಲೇ ಭಯಭೀತರಾಗಿದ್ದಾರೆ. ಇದೀಗ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿದ್ದಾರೆ.

    ನಾಗರಾಜು (50) ಸಾವನ್ನಪ್ಪಿರುವ ವ್ಯಕ್ತಿ. ನಾಗರಾಜು ಮೂಲತಃ ಟಿ.ನರಸಿಪುರ ತಾಲೂಕಿನ ಮುಸುಕನಕೊಪ್ಪಲು ಗ್ರಾಮದವರು. ಅನೇಕ ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹಚ್ಚಾಗುತ್ತಿದೆ. ಇದರಿಂದ ಗಾಬರಿಗೊಂಡು ನಾಗರಾಜು ಮಂಗಳವಾರ ಬೆಂಗಳೂರಿನಿಂದ ಹೊರಟ್ಟಿದ್ದಾರೆ. ಆದರೆ ತಮ್ಮ ಗ್ರಾಮಕ್ಕೆ ಹೋಗುವಷ್ಟಲ್ಲಿ ಕತ್ತಲಾಗುತ್ತದೆ ಎಂದು ತಮ್ಮ ಸಂಬಂಧಿಕರ ಮನೆಯಿದ್ದ ಹೊನಗನಹಳ್ಳಿಗೆ ಬಂದಿದ್ದರು.

    ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆಯಿಂದ ಕೊಳ್ಳೆಗಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಗರಾಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಂತರ ಸಂಬಂಧಿಕರು ನಾಗರಾಜು ಶವವನ್ನು ಮುಸುಕನಕೊಪ್ಪಲು ಗ್ರಾಮಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಇವರಿಗೆ ಕೊರೊನಾ ಪರೀಕ್ಷೆ ಮಾಡಿಸಬೇಕು. ಇಲ್ಲವಾದರೆ ಗ್ರಾಮದಲ್ಲಿ ಅಂತ್ಯಕ್ರಿಯೆ ಮಾಡಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

    ಕೊನೆಗೆ ಸಂಬಂಧಿಕರು ಹೊನಗನಹಳ್ಳಿ ಗ್ರಾಮಕ್ಕೆ ಶವ ತೆಗೆದುಕೊಂಡು ಬಂದು ಮನೆಯೊಂದರ ಮುಂಭಾಗದಲ್ಲಿ ಇಟ್ಟಿದ್ದಾರೆ. ಈ ಶವ ಕಂಡು ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಅಲ್ಲದೇ ಇವರಿಗೆ ಕೊರೊನಾ ಪರೀಕ್ಷೆ ಮಾಡಿಸದೆ ಅಂತ್ಯಸಂಸ್ಕಾರ ಮಾಡಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ನಂತರ ಸಂಬಂಧಿಕರು ವೈದ್ಯರಿಗೆ ಫೋನ್ ಮಾಡಿ ಹೇಳಿದ್ದಾರೆ. ಆದರೆ ವೈದ್ಯರು ತಡವಾಗಿ ಬಂದಿದ್ದಲ್ಲದೇ, ನಾವು ಶವಕ್ಕೆ ಕೋವಿಡ್ ಪರೀಕ್ಷೆ ಮಾಡುವುದಿಲ್ಲ. ಬೇಕಿದ್ದರೆ ಅವರ ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆ ಮಾಡುತ್ತೇವೆ ಎಂದು ಹೇಳಿ ಗ್ರಾಮದಿಂದ ಹೋಗಿದ್ದಾರೆ.

    ವೈದ್ಯಾಧಿಕಾರಿಗಳು ಎಡವಟ್ಟು:
    ಕೊನೆಗೆ ಮುಸುಕನಕೊಪ್ಪಲು ಗ್ರಾಮಸ್ಥರು ಊರಿನ ಹೊರಗಡೆ ಶವ ಸಂಸ್ಕಾರ ಮಾಡಲು ಒಪ್ಪಿಗೆ ನೀಡಿದ್ದಾರೆ. ಜಿಲ್ಲೆಯ ಹೊನಗನಹಳ್ಳಿಯಿಂದ ಮುಸುಕನಕೊಪ್ಪಲಿಗೆ ಶವ ರವಾನೆ ಮಾಡುವಾಗಲೂ ವೈದ್ಯಾಧಿಕಾರಿಗಳ ಮತ್ತೊಂದು ಎಡವಟ್ಟು ಮಾಡಿದ್ದಾರೆ.

    ವೈದ್ಯಾಧಿಕಾರಿಗಳು ಶವ ರವಾನೆಗೆ ಅಂಬ್ಯುಲೆನ್ಸ್ ಹಾಗೂ ಸಿಬ್ಬಂದಿಯನ್ನು ಕಳಿಸದೆ ಎಡವಟ್ಟು ಮಾಡಿದ್ದಾರೆ. ಕುಟುಂಬಸ್ಥರಿಗೆ ಎರಡು ಪಿಪಿಇ ಕಿಟ್ ನೀಡಿ ನೀವೇ ಮಾಡಿಕೊಳ್ಳಿ ಎಂದು ಹೇಳಿದ್ದಾರೆ. ಕೊನೆಗೆ ಸಂಬಂಧಿಕರು ಪಿಪಿಇ ಕಿಟ್ ಹಾಕಿಕೊಂಡು ಖಾಸಗಿ ವಾಹನದಲ್ಲಿ ಶವ ತೆಗೆದುಕೊಂಡು ಹೋಗಿದ್ದಾರೆ.

  • ಚಾಮರಾಜನಗರದ ಮೂವರು ವೈದ್ಯಾಧಿಕಾರಿಗಳಿಗೆ ಡಿಸಿ ನೋಟಿಸ್

    ಚಾಮರಾಜನಗರದ ಮೂವರು ವೈದ್ಯಾಧಿಕಾರಿಗಳಿಗೆ ಡಿಸಿ ನೋಟಿಸ್

    ಚಾಮರಾಜನಗರ: ಪ್ರಾಥಮಿಕ ಆರೋಗ್ಯ ಕೇಂದ್ರದ ಮೂವರು ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ಆರ್ ರವಿ ಅವರು ನೋಟಿಸ್ ಜಾರಿ ಮಾಡಿದ್ದಾರೆ.

    ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಿವಸ್ವಾಮಿ, ಕಬ್ಬಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವೆಂಕಟಸ್ವಾಮಿ ಹಾಗೂ ಸಂತೇಮರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೇವರಾಜು ಅವರಿಗೆ ಡಿಸಿ ಈ ನೋಟಿಸ್ ನೀಡಿದ್ದಾರೆ.

    ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲು ಈಗಾಗಲೇ ಹಲವು ಬಾರಿ ನಿರ್ದೇಶನ ಹಾಗೂ ತರಬೇತಿ ನೀಡಲಾಗಿದೆ. ಪ್ರತಿದಿನ ತಾಲೂಕು ಹಂತದಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಣೆಗೆ ಗುರಿ ನಿಗದಿಪಡಿಸಲಾಗಿದೆ. ಆದರೆ ಜುಲೈ 2ರಂದು ತಮ್ಮ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಾವುದೇ ವ್ಯಕ್ತಿಯ ಗಂಟಲು ದ್ರವ ಮಾದರಿ ಸಂಗ್ರಹಣೆ ಮಾಡದೇ ಶೂನ್ಯ ಪ್ರಗತಿ ಸಾಧಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

    ಅತ್ಯಂತ ಮಹತ್ತರವಾದ ಕೋವಿಡ್-19ರ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯತನ ತೋರಿರುವುದರಿಂದ ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ಏಕೆ ಶಿಸ್ತಿನ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ನೋಟಿಸ್ ತಲುಪಿದ 24 ಗಂಟೆಯಲ್ಲಿ ವಿವರಣೆ ಸಲ್ಲಿಸಬೇಕು. ತಪ್ಪಿದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ನೋಟಿಸಿನಲ್ಲಿ ತಿಳಿಸಲಾಗಿದೆ.

  • ಒಂದೇ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ

    ಒಂದೇ ಗ್ರಾಮದಲ್ಲಿ 10ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ

    – ಗ್ರಾಮ ತೊರೆಯುತ್ತಿರುವ ಜನರು

    ಬೆಳಗಾವಿ: ಒಂದೇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಬಂದಿರುವ ಕಾರಣ ಸೊಳ್ಳೆಗಳ ಕಾಟಕ್ಕೆ ಜನರು ಊರು ತೊರೆಯುವ ಸ್ಥಿತಿ ನಿರ್ಮಾಣವಾಗಿದೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಡೆಂಗ್ಯೂ ಬಂದಿದ್ದು, ಜನರು ಗ್ರಾಮವನ್ನು ತೊರೆಯುತ್ತಿದ್ದಾರೆ. ಜನ ಗ್ರಾಮ ಬಿಟ್ಟು ಹೋಗುತ್ತಿದ್ದರು ವೈದ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

    ಈ ಗ್ರಾಮದಲ್ಲಿ ಹೆಚ್ಚು ಬಡಕುಟುಂಬಗಳೇ ವಾಸವಿದ್ದು, ಡೆಂಗ್ಯೂ ರೋಗದಿಂದ ಖಾಸಗಿ ಆಸ್ಪತ್ರೆಗಳ ಬಿಲ್ ಪಾವತಿಸಲಾಗದೇ ಪರದಾಡುತ್ತಿದ್ದಾರೆ. ಡೆಂಗ್ಯೂ ಎಂದು ಖಚಿತ ವರದಿ ಬಂದರೂ ಅಲ್ಲಗಳೆಯುತ್ತಿರುವ ತಾಲೂಕು ವೈದ್ಯಾಧಿಕಾರಿಗಳು, ಡೆಂಗ್ಯೂ ಅಂಕಿ ಅಂಶಗಳ ದಾಖಲೆಯಲ್ಲಿ ವಿಫಲರಾಗಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರದಲ್ಲಿ ಅಧಿಕಾರಿಗಳ ಅಸಡ್ಡೆ ನೋಡಿ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ವೈದ್ಯಾಧಿಕಾರಿಗಳಿಂದ ವಸಂತನಗರ ಡರ್ಟಿ ಕಿಚನ್ ಮೇಲೆ ದಾಳಿ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆನ್‍ಲೈನ್ ಫುಡ್ ಆರ್ಡರ್ ಮಾಫಿಯಾ ಎಗ್ಗಿಲ್ಲದೇ ನಡೆಯುತ್ತಿದ್ದು, ಈ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿತ್ತು. ಈ ಡರ್ಟಿ ಕಿಚನ್‍ಗಳ ಬಗ್ಗೆ ಇಂದು ಬೆಳಗ್ಗಿನಿಂದಲೇ ವಿಸ್ತೃತವಾದ ವರದಿ ಕೂಡ ಪ್ರಸಾರ ಮಾಡಿತ್ತು. ಈ ಸುದ್ದಿ ಪ್ರಸಾರವಾದ ಬೆನ್ನಲ್ಲೇ ವಸಂತನಗರದ ವೈದ್ಯಾಧಿಕಾರಿಗಳು ಎಚ್ಚೆತ್ತು ದಾಳಿ ಮಾಡಿದ್ದಾರೆ.

    ಬೆಂಗಳೂರಿನ ವಸಂತನಗರ ತಡ್ಕವಾಲಾ, ಬನ್ನೆರುಗಟ್ಟದ ಶುದ್ಧ್ ದೇಸಿ ಖಾನ, ಲೆಟ್ ನೈಟ್ ಕಿಚನ್‍ಗಳಿಂದ ಅರ್ಧ ಬೆಂಗಳೂರಿಗೆ ಫುಡ್ ಡೆಲಿವರಿ ಆಗುತ್ತಿತ್ತು. ಆದರೆ ಇಲ್ಲಿ ಸ್ವಚ್ಛತೆ ಅನ್ನೋದೇ ಇರಲಿಲ್ಲ. ಅದರಲ್ಲೂ ವಸಂತನಗರ ತಡ್ಕವಾಲಾ ಕಿಚನ್‍ನಲ್ಲಿ ಟಾಯ್ಲೆಟ್ ರೂಮಿನಲ್ಲಿ ಕಡಾಯಿ ಇಟ್ಟುಕೊಂಡು ಅಡುಗೆ ಮಾಡಲಾಗುತ್ತಿತ್ತು. ಇದೀಗ ಈ ಡರ್ಟಿ ಕಿಚನ್‍ನ ಮೇಲೆ ಪಾಲಿಕೆಯ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡೋ ಮುನ್ನ ಹುಷಾರ್

    ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ರೇಡ್ ಮಾಡಿ ವಸಂತನಗರದ ತಡ್ಕವಾಲಾ ಡರ್ಟಿ ಕಿಚನ್‍ಗೆ ಶಿವಾಜಿನಗರದ ಆರೋಗ್ಯ ವೈದ್ಯಾಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ವಸಂತನಗರ ಹೆಲ್ತ್ ಇನ್ಸ್ ಪೆಕ್ಟರ್ ರೇಣುಕಾಂಬ, ಹಿರಿಯ ಆರೋಗ್ಯ ಪರಿವೀಕ್ಷಕರು ಹಾಗೂ ಸಿಬ್ಬಂದಿ ಕೂಡ ಇದ್ದರು.

    ದಾಳಿ ವೇಳೆ ಕಿಚನ್‍ನಲ್ಲಿ ಸಿಕ್ಕಿದ ಪ್ಲಾಸ್ಟಿಕ್ ಹಾಗೂ ಕೊಳೆತ ವಸ್ತುಗಳು, ಅವಧಿ ಮುಗಿದ ಚಿಲ್ಲಿ, ಟೊಮೆಟೋ ಸಾಸ್ ಮೊದಲಾದವುಗಳನ್ನು ವೈದ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ವೈದ್ಯಾಧಿಕಾರಿಗಳ ದಾಳಿಯಿಂದ ಸಿಬ್ಬಂದಿ ಹೆದರಿದ್ದು, ಈ ಬಗ್ಗೆ ಮಾಹಿತಿ ತಿಳಿದರೂ ಕಿಚನ್ ಮಾಲೀಕ ಮಾತ್ರ ಸ್ಥಳಕ್ಕೆ ಬಂದಿಲ್ಲ.

  • ಪ್ರಸಾದಕ್ಕೆ 10 ಬಾಟಲ್ ವಿಷ ಬೆರೆಸಿದ್ದಾರಾ ದುಷ್ಕರ್ಮಿಗಳು?

    ಪ್ರಸಾದಕ್ಕೆ 10 ಬಾಟಲ್ ವಿಷ ಬೆರೆಸಿದ್ದಾರಾ ದುಷ್ಕರ್ಮಿಗಳು?

    ಚಾಮರಾಜನಗರ: ಸುಳ್ವಾಡಿ ಗ್ರಾಮದ ಮಾರಮ್ಮನ ದೇವಸ್ಥಾನದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ದುಷ್ಕರ್ಮಿಗಳು 10ಕ್ಕೂ ಹೆಚ್ಚು ಬಾಟಲ್ ವಿಷ ಬೆರೆಸಿದ್ದರು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

    ಸಾವಿರಾರು ಜನರಿಗೆ ತಯಾರಿಸಿದ್ದ ಪ್ರಸಾದದಲ್ಲಿ ಒಂದು ಅಥವಾ ಎರಡು ಬಾಟಲ್ ವಿಷ ಬೆರೆಸಿದ್ದರೆ ವಾಂತಿ, ಭೇದಿ ಮಾತ್ರ ಆಗುತ್ತಿತ್ತು. ಆದರೆ ಹತ್ತಕ್ಕೂ ಹೆಚ್ಚು ಬಾಟಲ್ ಕ್ರಿಮಿನಾಶ ಅಥವಾ ವಿಷ ಬೆರೆಸಿದ್ದ ಪರಿಣಾಮ ಹೆಚ್ಚಿನ ಪ್ರಮಾಣದಲ್ಲಿ ಪ್ರಾಣಹಾನಿಯಾಗಿದೆ. ಪ್ರಸಾದದಲ್ಲಿ ವಿಷದ ಪ್ರಮಾಣ ಹೆಚ್ಚಾಗಿದ್ದರಿಂದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, 11 ಜನ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ಹೇಳಿದ್ದು, ಇಂದು ಸಾವಿನ ಸಂಖ್ಯೆ 18ಕ್ಕೆ ಏರಿದೆ. ಇದನ್ನೂ ಓದಿ: ಪ್ರಸಾದದಲ್ಲಿ ಕೀಟನಾಶಕ ಮಿಶ್ರಣ: ಕೆ.ಆರ್.ಆಸ್ಪತ್ರೆ ವೈದ್ಯರ ಶಂಕೆ

    ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಸೌಕರ್ಯಗಳ ಕೊರತೆ ಇದೆ. ಹೀಗಾಗಿ ಮೂವರನ್ನು ಮಾತ್ರ ಇರಿಸಿಕೊಂಡು ಉಳಿದ ಅಸ್ವಸ್ಥರನ್ನು ಮೈಸೂರಿನ ಕೆ.ಆರ್ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ದೇವಸ್ಥಾನದ ಸುತ್ತಮುತ್ತ ದನ ಕಾಯುತ್ತಿದ್ದ ಕೆಲವರು ಪ್ರಸಾದ ಸೇವಿಸಿದ್ದಾರೆ. ಹೀಗಾಗಿ ಅವರು ಯಾವ ಗ್ರಾಮದವರು ಅಂತ ಪತ್ತೆ, ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದರು.

    ಈ ಘಟನೆಗೆ ಸಂಬಂಧಿಸಿದಂತೆ ಸುಳ್ವಾಡಿ ಗ್ರಾಮದ ಚಿನ್ನಪ್ಪಿ ಹಾಗೂ ಮಾದೇಶ್ ಎಂಬವರನ್ನು ರಾಮಾಪುರ ಠಾಣಾ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದಾರೆ. ಆದರೆ ತನಿಖೆಯಲ್ಲಿ ಗೌಪ್ಯತೆ ಕಾಪಾಡುವ ಉದ್ದೇಶದಿಂದ ಚಿನ್ನಪ್ಪಿ ಹಾಗೂ ಮಾದೇಶ್ ವಿಷ ಬೆರೆಸಿದ್ದಾರಾ?, ಬೇರೆಯವರು ಹೇಳಿದ್ದರಿಂದ ಕೃತ್ಯ ಎಸಗಿದ್ದಾರಾ? ಎಷ್ಟು ಪ್ರಮಾಣದ ವಿಷ ಬೆರೆಸಿದ್ದರು ಎನ್ನುವ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಪತ್ನಿ ಜೀವ ಉಳಿಸಲು ಬರುವಾಗ ಪತಿ ಸಾವು – ಮುಗಿಲು ಮುಟ್ಟಿದೆ ಮಕ್ಕಳ ಗೋಳು!

    https://www.youtube.com/watch?v=31WA3fSlH-I

    https://www.youtube.com/watch?v=V_qoMhCwGNs

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಉಪ್ಪಿಟ್ಟು ತಿನ್ನುತ್ತ 3 ಸೆಂಮೀ ಸೂಜಿಯನ್ನೇ ನುಂಗಿದ್ದ ಅಜ್ಜಿ!

    ಉಪ್ಪಿಟ್ಟು ತಿನ್ನುತ್ತ 3 ಸೆಂಮೀ ಸೂಜಿಯನ್ನೇ ನುಂಗಿದ್ದ ಅಜ್ಜಿ!

    ಹಾವೇರಿ: ಉಪ್ಪಿಟ್ಟು ತಿನ್ನುವಾಗ ಅಜ್ಜಿಯೊಬ್ಬರು 3 ಸೆಂಮೀ ಸೂಜಿಯನ್ನೇ ನುಂಗಿದ್ದು, ವೈದ್ಯರು ಒಂದು ತಿಂಗಳ ನಂತರ ಸೂಜಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

    ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರದ ಬಳಿಯ ಬಸಾಪುರ ಗ್ರಾಮದ ಅಜ್ಜಿ ಪಾರವ್ವ ಬಾವಿಕಟ್ಟಿ (70) ಉಪ್ಪಿಟ್ಟು ತಿನ್ನುವಾಗ 3 ಸೆಂಮೀ. ಉದ್ದದ ಸೂಜಿ ಗಂಟಲಿನಲ್ಲಿ ಸಿಕ್ಕಾಕೊಂಡು ತೊಂದರೆ ಅನುಭವಿಸಿದ್ದಾಳೆ. ಕಳೆದ ಒಂದು ತಿಂಗಳ ಹಿಂದೆ ಈ ಘಟನೆ ನಡೆದಿದ್ದು ಏನೋ ಚುಚ್ಚಿರಬೇಕೆಂದು ಪಾರವ್ವ ಅದನ್ನು ನಿರ್ಲಕ್ಷ ಮಾಡಿದ್ದಾಳೆ.

    ಸ್ವಲ್ಪ ದಿನಗಳ ನಂತರ ಅಜ್ಜಿ ಪಾರವ್ವಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹಾಗಾಗಿ ಹಾವೇರಿಯ ಮಲ್ಲಾಡದ ರುದ್ರಮ್ಮ ಮೆಮೋರಿಯಲ್ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಸ್ಪತ್ರೆಯ ವೈದ್ಯ ಡಾ.ಗಿರೀಶ್ ಮಲ್ಲಾಡದ್ ಎಂಡೋಸ್ಕೋಪಿ ಚಿಕಿತ್ಸೆ ಮಾಡಿ 3 ಸೆಂಮೀ ಉದ್ದದ ಸೂಜಿಯನ್ನ ಪತ್ತೆಹಚ್ಚಿದ್ದಾರೆ. ಅಲ್ಲದೇ ಯಾವುದೇ ಶಸ್ತ್ರಚಿಕಿತ್ಸೆ ಇಲ್ಲದೇ ಯಶಸ್ವಿಯಾಗಿ ಸೂಜಿಯನ್ನು ಹೊರತೆಗೆದಿದ್ದಾರೆ.

    ಒಂದು ತಿಂಗಳ ಹಿಂದೆ ಮೂರು ಸೆಂ.ಮೀ. ಉದ್ದದ ಸೂಜಿ ಗಂಟಲಿನಲ್ಲಿ ಸಿಕ್ಕಿಕೊಂಡು ಅಜ್ಜಿ ಪಡಬಾರದ ಪಾಡು ಪಟ್ಟಿದ್ದರು. ಆದರೆ ವೈದ್ಯರು ಮಾಡಿದ ಚಮತ್ಕಾರಿ ಚಿಕಿತ್ಸೆಯಿಂದ ಪಾರವ್ವ ಗುಣಮುಖರಾಗಿ ತಮ್ಮ ಸ್ವಗ್ರಾಮಕ್ಕೆ ತೆರಳಿದಳು.