ಮುಂಬೈ: ಸತಾರಾದ (Satara) ಉಪಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 5 ತಿಂಗಳಿಂದ ಮಾನಸಿಕವಾಗಿ ಕಿರುಕುಳ ನೀಡಿದ್ದ ಟೆಕ್ಕಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪ್ರಶಾಂತ್ ಬಂಕರ್ ಎಂದು ಗುರುತಿಸಲಾಗಿದ್ದು, ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದರು. ಮೃತ ವೈದ್ಯೆ ಆತ್ಮಹತ್ಯೆಗೂ ಮುನ್ನ ತನ್ನ ಅಂಗೈಯಲ್ಲಿ, 5 ತಿಂಗಳಿನಿಂದ ಟೆಕ್ಕಿ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಬರೆದುಕೊಂಡಿದ್ದರು.ಇದನ್ನೂ ಓದಿ: ಪೊಲೀಸ್ ಅಧಿಕಾರಿಯಿಂದ 5 ತಿಂಗಳಲ್ಲಿ 4 ಬಾರಿ ರೇಪ್ – ಅಂಗೈನಲ್ಲಿ ಡೆತ್ ನೋಟ್ ಬರೆದು ಮಹಾರಾಷ್ಟ್ರ ವೈದ್ಯೆ ಆತ್ಮಹತ್ಯೆ
ಇನ್ನೂ ವೈದ್ಯೆಯ ಮೇಲೆ ಹಲವು ಬಾರಿ ಅತ್ಯಾಚಾರ ಮತ್ತು ಕಿರುಕುಳ ನೀಡಿದ್ದ ಆರೋಪ ಹೊತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ಗೋಪಾಲ್ ಬದ್ನೆ ತಲೆಮರೆಸಿಕೊಂಡಿದ್ದಾನೆ. ಈತನನ್ನು ಬಂಧಿಸಲು ಸತಾರ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸತಾರಾ ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ಅವರೊಂದಿಗೆ ಮಾತನಾಡಿ, ಆತ್ಮಹತ್ಯೆ ಪತ್ರದಲ್ಲಿ ಹೆಸರಿಸಲಾದ ಪೊಲೀಸ್ ಇನ್ಸ್ಪೆಕ್ಟರ್ ಅವರನ್ನು ಅಮಾನತುಗೊಳಿಸಲು ಆದೇಶಿಸಿದ್ದಾರೆ. ಇಬ್ಬರೂ ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆಯ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ತುಷಾರ್ ಸಿಎಂಗೆ ತಿಳಿಸಿದ್ದಾರೆ.
ಏನಿದು ಪ್ರಕರಣ?
ಸತಾರಾದ ಉಪ ಜಿಲ್ಲಾಸ್ಪತ್ರೆಯಲ್ಲಿ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಫಾಲ್ಟನ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯೆ ತಮ್ಮ ಅಂಗೈಯಲ್ಲಿ ತಮಗಾದ ಕಿರುಕುಳದ ಬಗ್ಗೆ ಬರೆದುಕೊಂಡಿದ್ದಾರೆ. ಎಸ್ಐ ಗೋಪಾಲ್ ಬದ್ನೆ ಹಾಗೂ ಟೆಕ್ಕಿ ಪ್ರಶಾಂತ್ ಬಂಕರ್ನಿಂದ ತನಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಹೀಗಾಗಿ ಪೊಲೀಸರ ನಿರಂತರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಎಂದು ಉಲ್ಲೇಖಿಸಿದ್ದರು.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ವೈದ್ಯೆ ಕಳೆದ ಕೆಲ ತಿಂಗಳಿನಿಂದ ಪೊಲೀಸರು ಮತ್ತು ಆರೋಗ್ಯ ಇಲಾಖೆಯ ನಡುವಿನ ವಿವಾದದಲ್ಲಿ ಸಿಲುಕಿದ್ದರು. ಇದರಿಂದ ವೈದ್ಯೆ ವಿರುದ್ಧ ಇಲಾಖಾ ಹಂತದ ವಿಚಾರಣೆ ಕೂಡ ಆರಂಭಿಸಲಾಗಿತ್ತು. ಈ ಮಧ್ಯೆ ಸಂತ್ರಸ್ತೆ ತಮ್ಮ ಹಿರಿಯ ಅಧಿಕಾರಿಯನ್ನ ಸಂಪರ್ಕಿಸಿ, ತನ್ನ ಮೇಲೆ ಅನ್ಯಾಯವಾಗುತ್ತಿದೆ. ಈ ದೌರ್ಜನ್ಯ ನಿಲ್ಲಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಆದಾಗ್ಯೂ ಕಿರುಕುಳ ಮುಂದುವರಿದ ಹಿನ್ನೆಲೆ ಅಂಗೈನಲ್ಲಿ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು.
ತನ್ನ ಅಂಗೈಯಲ್ಲಿರುವ ಡೆತ್ನೋಟ್ ಅಲ್ಲದೇ, ಸಂತ್ರಸ್ತೆ ಕಳೆದ ಜೂನ್ 19 ರಂದೇ ಫಾಲ್ಟನ್ ಉಪ-ವಿಭಾಗೀಯ ಕಚೇರಿಯ ಡಿಎಸ್ಪಿಗೆ ಬರೆದ ಪತ್ರದಲ್ಲೂ ಇದೇ ರೀತಿಯ ಆರೋಪಗಳನ್ನ ಮಾಡಿದ್ದರಂತೆ. ಫಾಲ್ಟನ್ ಗ್ರಾಮೀಣ ಪೊಲೀಸ್ ಇಲಾಖೆಯ ಎಸ್ಐ ಗೋಪಾಲ್ ಬದ್ನೆ, ಉಪ-ವಿಭಾಗೀಯ ಪೊಲೀಸ್ ಇನ್ಸ್ಪೆಕ್ಟರ್ ಪಾಟೀಲ್ ಮತ್ತು ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಲಾಡ್ಪುತ್ರೆ ವಿರುದ್ಧ ಕಿರುಕುಳದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು ಎಂದು ವರದಿಯಾಗಿದೆ.
ನನ್ನ ಸಾವಿಗೆ ಪೊಲೀಸ್ ಇನ್ಸ್ಪೆಕ್ಟರ್ ಗೋಪಾಲ್ ಬದ್ನೆ ಸೇರಿ ಮೂವರು ಕಾರಣ. ಗೋಪಾಲ್ ಬದ್ನೆ ನನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಮಾಡಿದ್ದಾರೆ. 5 ತಿಂಗಳಿಗೂ ಹೆಚ್ಚು ಕಾಲ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದಾರೆ’ ಅಂತ ಆರೋಪಿಸಿದ್ದಾರೆ.ಇದನ್ನೂ ಓದಿ: ಆಗ್ರಾ – ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಕಾರು ಅಪಘಾತ; ಕೂದಲೆಳೆ ಅಂತರದಲ್ಲಿ ಪಾರದ ಸಚಿವೆ




















