Tag: ವೈನಾಡು

  • ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ,  ರೆಸಾರ್ಟ್‌ಗಳಿಗೆ ನೋಟಿಸ್

    ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

    ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದ 40ಕ್ಕೂ ಹೆಚ್ಚು ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಿಗೆ ಅರಣ್ಯ ಇಲಾಖೆ ದಾಖಲೆಗಳನ್ನು ನೀಡುವಂತೆ ನೋಟಿಸ್ ನೀಡಿದೆ.

    2015 ರಿಂದ ಈಚೆಗೆ ಮಲೆನಾಡು ಭಾಗದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿ ಹೋಂ ಸ್ಟೇ, ರೆಸಾರ್ಟ್, ಮನೆ, ತೋಟ ನಿರ್ಮಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwara Khandre) ಆದೇಶಿಸಿದ್ದರು. ಅರಣ್ಯ ಸಚಿವರ ಆದೇಶದ ಬೆನ್ನಲ್ಲೇ ಚಿಕ್ಕಮಗಳೂರು ಅರಣ್ಯ ಇಲಾಖೆ 40ಕ್ಕೂ ಹೆಚ್ಚು ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಿಗೆ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಿದೆ. ಇದನ್ನೂ ಓದಿ: Hit-and-Run Case | ಬಾರ್‌ನಿಂದ ಬಂದು ಹಲವು ಕಾರುಗಳಿಗೆ ಡಿಕ್ಕಿ – ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷನ ಪುತ್ರ ಪರಾರಿ

    ಚಿಕ್ಕಮಗಳೂರು, ಮೂಡಿಗೆರೆ, ಮುತ್ತೋಡಿ, ಮುಳ್ಳಯ್ಯನಗಿರಿ ಭಾಗದ ಹೋಂ ಸ್ಟೇಗಳಿಗೆ ನೋಟಿಸ್ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಧಿಕೃತವಾಗಿ 650ಕ್ಕೂ ಹೆಚ್ಚು ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಿವೆ. ಆದರೆ ಸರ್ಕಾರದ ಅನುಮತಿ ಪಡೆಯದಂತಹ 800ಕ್ಕೂ ಅಧಿಕ ಅನಧಿಕೃತ ಹೋಂ ಸ್ಟೇಗಳಿವೆ. ಅದರಲ್ಲಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಗುಡ್ಡಗಾಡು ಪ್ರದೇಶದಂತಹ ಎತ್ತರದ ಪ್ರದೇಶ ಹಾಗೂ ಗುಡ್ಡದ ತಪ್ಪಲಿನಲ್ಲೇ ಹೆಚ್ಚಾಗಿ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳನ್ನು ನಿರ್ಮಿಸಿದ್ದಾರೆ.

    ವಯನಾಡು ದುರಂತದ ಬಳಿಕ ಮುಂಜಾಗ್ರತ ಕ್ರಮವಾಗಿ ಸಚಿವರ ಆದೇಶದನ್ವಯ ಆರಂಭಿಕವಾಗಿ ಜಿಲ್ಲೆಯಲ್ಲಿರುವ 40 ಅನಧಿಕೃತ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಿಗೆ ಆರಂಭಿಕ ಹಂತವಾಗಿ ದಾಖಲೆ ಸಲ್ಲಿಸುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಇರುವಂತಹ ಎಲ್ಲಾ ಅನಧಿಕೃತ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ. ಇದನ್ನೂ ಓದಿ: ನಿಯಂತ್ರಣಕ್ಕೆ ಬಾರದ ಹಿಂಸಾಚಾರ – ಮಣಿಪುರದ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ

  • ಕಬಿನಿ ಡ್ಯಾಂ ಭರ್ತಿ – 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

    ಕಬಿನಿ ಡ್ಯಾಂ ಭರ್ತಿ – 25 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ

    ಮೈಸೂರು: ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಕಾರಣ ಮೈಸೂರು (Mysuru) ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ (Kabini Dam) ಭರ್ತಿಯಾಗಿದೆ.

    ದಿನದಿಂದ ದಿನಕ್ಕೆ ಜಲಾಶಯದ ಒಳಹರಿವು ಹೆಚ್ಚಾಗುತ್ತಿರುವ ಕಾರಣ ಇಂದು 4 ಕ್ರಸ್ಟ್‌ ಗೇಟ್‌ ತೆರೆದು 25 ಸಾವಿರ ಕ್ಯುಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ನಿನ್ನೆ 15 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗಿದೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂಗೆ 25,000 ಕ್ಯುಸೆಕ್‌ಗೂ ಅಧಿಕ ನೀರು

    ಕಬಿನಿ ಜಲಾಶಯ ಗರಿಷ್ಠ ಮಟ್ಟ 2284 ಅಡಿ ಆಗಿದ್ದು, ಇಂದಿನ ನೀರಿನ ಮಟ್ಟ 2283 ಅಡಿ ಇದೆ. ಒಳ ಹರಿವು 20,217 ಕ್ಯುಸೆಕ್‌ ಇದೆ.  25 ಸಾವಿರ  ಕ್ಯುಸೆಕ್‌ ನೀರು ಬಿಡುಗಡೆ ಮಾಡಿದ ಪರಿಣಾಮ ಹಲವು ಸಣ್ಣ ಸೇತುವೆಗಳು ಮುಳುಗಡೆಯಾಗಲಿದೆ. ಮತ್ತಷ್ಟು ಮಳೆಯಾಗಿ  50 ಸಾವಿರ ಕ್ಯುಸೆಕ್‌ ನೀರನ್ನು  ಬಿಡುಗಡೆ ಮಾಡಿದರೆ  ದೊಡ್ಡ ಸೇತುವೆಗಳು ಮುಳುಗಡೆಯಾಗಲಿದೆ.

  • ಭರಚುಕ್ಕಿಯಲ್ಲಿ ಪ್ರವಾಸಿಗರ ಹುಚ್ಚಾಟ – ಸಾವಿನ ದವಡೆಯಲ್ಲಿ ಮೋಜು-ಮಸ್ತಿ

    ಭರಚುಕ್ಕಿಯಲ್ಲಿ ಪ್ರವಾಸಿಗರ ಹುಚ್ಚಾಟ – ಸಾವಿನ ದವಡೆಯಲ್ಲಿ ಮೋಜು-ಮಸ್ತಿ

    ಚಾಮರಾಜನಗರ: ಭರಚುಕ್ಕಿ ಜಲಪಾತದ ಹಿನ್ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ ಜೋರಾಗಿದ್ದು, ಸಾವಿನ ದವಡೆಯಲ್ಲಿ ಮೋಜು-ಮಸ್ತಿ ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನ ಸಮುದ್ರ ಗ್ರಾಮದ ವೆಸ್ಲಿ ಸೇತುವೆ ಕೆಳಗೆ ಹರಿಯುವ ಕಾವೇರಿ ನದಿಗೆ ಇಳಿದು ಪ್ರವಾಸಿಗರು ಜಲಕ್ರೀಡೆ ಆಡುತ್ತಿದ್ದಾರೆ. ಅಪಾಯದ ಮಟ್ಟದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಮೈಮರೆತ್ತಿದ್ದಾರೆ. ಇದನ್ನೂ ಓದಿ: ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ 

    ವೈನಾಡು ಮತ್ತು ಮಲೆನಾಡಿನ ಪ್ರದೇಶದಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು, ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆ ಕಾವೇರಿ ನದಿಗೆ ಕಳೆದ ಆರು ದಿನಗಳಿಂದಲೂ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಯ ಬೀಡುತ್ತಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ.

    ನದಿಯಲ್ಲಿ ನೀರು ಹೆಚ್ಚಾಗಿರುವುದನ್ನು ತಿಳಿದ ಪ್ರವಾಸಿಗರು ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳನ್ನು ವೀಕ್ಷಣೆ ಮಾಡಲೂ ಒಂದು ವಾರದಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಈ ಬೆಳವಣಿಗೆಯಿಂದ ಎಚ್ಚೆತ್ತ ಜಿಲ್ಲಾಡಳಿತ ಜು.12 ರಂದು ಭರಚುಕ್ಕಿ ಜಲಪಾತ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. ನದಿಯ ಬಳಿ ತೆರಳದಂತೆ ಮೇಲಿಂದ ಮೇಲೆ ಆದೇಶದ ಸುತ್ತೊಲೆ ಹೊರಡಿಸುತ್ತಿದೆ.

    ವಿಪರ್ಯಾಸವೆಂದರೆ ಪ್ರವಾಸಿಗರು ಕಾವೇರಿ ನದಿಯಲ್ಲಿ ಇಳಿದು ಮನಬಂದಂತೆ ಆಟವಾಡುವುದು ಮತ್ತು ಈಜುವ ಹುಚ್ಚಾಟವನ್ನು ಮಾಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇನ್ನಿತರ ಕಡೆಗಳಿಂದ ತಂಡೋಪ ತಂಡವಾಗಿ ಬಂದು ನದಿಗಿಳಿಯುತ್ತಿದ್ದಾರೆ. ಭರಚುಕ್ಕಿ ಪ್ರವೇಶಕ್ಕೆ ನಿರ್ಬಂಧವಿರುವುದ್ದರಿಂದ ವೆಸ್ಲಿ ಸೇತುವೆಯಿಂದ ಬಲಗಡೆಗೆ ತೆರಳುವ ಬೂದಗಟ್ಟದೊಡ್ಡಿ ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ನುಸುಳಿ ಭರಚುಕ್ಕಿ ಜಲಪಾತ ವೀಕ್ಷಣೆಗೆ ಮುಗಿ ಬೀಳುತ್ತಿದ್ದಾರೆ.

    ಎಚ್ಚರ ತಪ್ಪಿದ್ರೆ ಶಿವನ ಪಾದ
    ಭರಚುಕ್ಕಿ ವೀಕ್ಷಣೆಗೆ ಜಲಪಾತದ ತುದಿಗೆ ತೆರಳುತ್ತಿರುವ ಯುವಕ, ಯುವತಿಯರ ಗುಂಪು ತುತ್ತತುದಿಯಲ್ಲಿ ನಿಂತು ಫೋಟೋ, ಸೆಲ್ಫಿ ತೆಗೆದುಕೊಳ್ಳುವ ದುಸ್ಸಾಹಸ ಪ್ರಯತ್ನದಲ್ಲಿ ಮುಳುಗಿದ್ದಾರೆ. ಯುವಕ, ಯುವತಿಯರು, ವಯೋವೃದ್ಧರು, ಮಹಿಳೆಯರು, ಸಣ್ಣ-ಸಣ್ಣ ಮಕ್ಕಳು ಸೇರಿ ಜಲಪಾತ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ:  ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    ಇವೆಲ್ಲವನ್ನು ನೋಡಿದ ಪ್ರಜ್ಞಾವಂತರು ಎಲ್ಲಿಂದಲು ಇಲ್ಲಿನ ನದಿ, ಜಲಪಾತ ವೀಕ್ಷಣೆಗೆ ಬಂದು ಸಾವು-ನೋವುಗಳು ಸಂಭವಿಸಲು ಕಾರಣವಾಗುತ್ತಿರುವ ಪ್ರವಾಸಿಗರಿಗೆ ಕಡಿವಾಣ ಹಾಕಬೇಕು. ಅಕ್ರಮವಾಗಿ ತೆರಳಿ ಜಲಪಾತ ವೀಕ್ಷಣೆ ಮಾಡುವ ದಾರಿಯನ್ನು ಬಂದ್ ಮಾಡಿ ಪೊಲೀಸರ ನಿಯೋಜನೆ ಮಾಡಬೇಕು. ನದಿಯ ಬಳಿ ಯಾರು ಸುಳಿಯದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹಲವೆಡೆ ಪ್ರವಾಹ- ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

    ರಾಜ್ಯದ ಹಲವೆಡೆ ಪ್ರವಾಹ- ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

    ಬೆಂಗಳೂರು: ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಮತ್ತದವರ ಅವಾಂತರ ಮುಂದುವರಿದಿದೆ. ಕೊಡಗಿನಲ್ಲಿ ಬಿರುಗಾಳಿ ಸಮೇತ ಮಳೆಯಾಗಿದ್ದು, ಮರಗಳು-ವಿದ್ಯುತ್ ಕಂಬಗಳು ಧರೆಗುರುಳಿವೆ.

    ಮನೆ, ಕಟ್ಟಡಗಳ ಗೋಡೆ ಕುಸಿದಿವೆ. ಮೇಲ್ಛಾವಣಿ ಹಾರಿ ಹೋಗಿವೆ. ಹಳ್ಳ-ಕೊಳ್ಳ, ನದಿ ತೊರೆಗಳು ಉಕ್ಕಿ ಹರಿಯುತ್ತಿವೆ. ತಲಕಾವೇರಿ-ಭಾಗಮಂಡಲ ರಸ್ತೆ ನೀರಿನಲ್ಲಿ ಮುಳುಗಿವೆ.

    ಕೇರಳದಲ್ಲಿ ವೈನಾಡಿನಲ್ಲಿ ಬೀಳುತ್ತಿರುವ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. 20 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. ಇದರಿಂದ ಕಪಿಲೆ ತುಂಬಿ ಹರಿಯುತಿದ್ದು, ನಂಜನಗೂಡಿನ ಸ್ನಾನಘಟ್ಟಗಳು ಮುಳುಗಿವೆ. ಕೆಆರ್‍ಎಸ್ ಭರ್ತಿಗೆ ಇನ್ನು 15 ಅಡಿ ಬಾಕಿಯಿದೆ.

    ಚಿಕ್ಕಮಗಳೂರಿನಲ್ಲಿ ಭದ್ರಾನದಿ ತುಂಬಿರೋ ಕಾರಣ ಮೂಡಿಗೆರೆಯ ಹೊಳೆಕುಡಿ ಗ್ರಾಮದ ಕುಟುಂಬಗಳ ಬದುಕು ಅತಂತ್ರವಾಗಿದೆ. ಉತ್ತರ ಕನ್ನಡದ ಎಲ್ಲಾ ತಾಲೂಕುಗಳಲ್ಲಿ ದಾಖಲೆ ಮಳೆಯಾಗ್ತಿದೆ. ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ ಕೊಂಚ ತಣ್ಣಗಾಗಿದೆ. ಆದ್ರೆ, ಮಳೆ ನಡುವೆಯೂ ದಕ್ಷಿಣ ಕನ್ನಡ ಮತ್ತು ಮಡಿಕೇರಿಯ ಹಲವೆಡೆ ಮೂರು ಸಲ ಭೂಮಿ ಲಘುವಾಗಿ ಕಂಪಿಸಿದ ಅನುಭವವಾಗಿದೆ.

    ರಾಮನಗರದಲ್ಲೂ ಜೋರು ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗಿದೆ.