ಅಮರಾವತಿ: ವ್ಯಕ್ತಿಯೊಬ್ಬ ಮದ್ಯ (Alcohol) ಕೊಡಲಿಲ್ಲ ಎಂದು ವೈನ್ ಶಾಪ್ಗೇ (Wine Shop) ಬೆಂಕಿ (Fire) ಹಚ್ಚಿದ ಘಟನೆ ವಿಶಾಖಪಟ್ಟಣಂನ (Visakhapatnam) ಮಧುರ್ವಾಡ (Madurwada) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. ವೈನ್ ಶಾಪ್ಗೆ ಬೆಂಕಿ ಇಟ್ಟ ವ್ಯಕ್ತಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.
ಆರೋಪಿಯನ್ನು ಮಧು ಎಂದು ಗುರುತಿಸಲಾಗಿದೆ. ಆತ ಮಧುವಾಡ ಬಡಾವಣೆಯ ವೈನ್ ಶಾಪ್ಗೆ ತಡರಾತ್ರಿ ಬಂದಿದ್ದ. ವೈನ್ ಶಾಪ್ ಮುಚ್ಚುವ ಸಮಯವಾಗಿದ್ದರಿಂದ ಶಾಪ್ ಸಿಬ್ಬಂದಿ ಮದ್ಯ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆರೋಪಿ ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ಉಂಟಾಗಿದೆ. ಬಳಿಕ ಆತನಿಗೆ ಎಚ್ಚರಿಕೆ ನೀಡಿದ ಬಳಿಕ ಆತ ಅಲ್ಲಿಂದ ತೆರಳಿದ್ದಾನೆ.
ಎಚ್ಚರಿಕೆ ನೀಡಿದ್ದಕ್ಕೆ ಸಿಟ್ಟಾಗಿದ್ದ ಮಧು ಭಾನುವಾರ ಸಂಜೆ ಪೆಟ್ರೋಲ್ ಟ್ಯಾಂಕ್ನೊಂದಿಗೆ ವೈನ್ ಶಾಪ್ಗೆ ವಾಪಸ್ ಬಂದಿದ್ದಾನೆ. ವೈನ್ ಶಾಪ್ ಒಳಗಡೆ ಮಾತ್ರವಲ್ಲದೆ ಸಿಬ್ಬಂದಿ ಮೇಲೂ ಪೆಟ್ರೋಲ್ ಅನ್ನು ಸುರಿದು ತಕ್ಷಣ ಬೆಂಕಿ ಹಚ್ಚಿದ್ದಾನೆ. ಈ ವೇಳೆ ಸಿಬ್ಬಂದಿ ಅಂಗಡಿಯಿಂದ ಹೊರಕ್ಕೆ ಓಡಿ ಹೋಗಿ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಅಂಗಡಿ ಸುಟ್ಟು ಹೋಗಿದ್ದು, ಕಂಪ್ಯೂಟರ್, ಪ್ರಿಂಟರ್ ಸೇರಿದಂತೆ 1.5 ಲಕ್ಷಕ್ಕೂ ಹೆಚ್ಚು ಮೌಲ್ಯದ ಆಸ್ತಿ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಗ್ನಿ ಅವಘಡ – ಐಟಿ ಕಂಪನಿ ಭಾಗಶಃ ಭಸ್ಮ
ಉಡುಪಿ: ಹೊಸವರ್ಷದ ಎರಡು ದಿನವಾದರೂ ನಮಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ಮಾಡಿಕೊಡಿ. ರಸ್ತೆ, ರಸ್ತೆಯಲ್ಲಿ ಕುಣಿತಕ್ಕೆ ಬ್ರೇಕ್ ಹಾಕಿ. ಕುಡಿತಕ್ಕೆ ಯಾಕೆ ತಡೆಯೊಡ್ಡುತ್ತೀರಿ ಎಂದು ಬಾರ್, ರೆಸ್ಟೋರೆಂಟ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ ಅವರು, ನಮ್ಮ ಆರ್ಥಿಕ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ. ನಾವು ಆರ್ಥಿಕವಾಗಿ ಸಂಪೂರ್ಣವಾಗಿ ಸೋತು ಹೋಗಿದ್ದೇವೆ. ರೆಸ್ಟೋರೆಂಟ್ ಇರುವವರು ಬಹಳ ಸಂಕಷ್ಟದಲ್ಲಿದ್ದಾರೆ. ಹೊಸವರ್ಷದ ಎರಡು ದಿನವಾದರೂ ನಮಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ಮಾಡಿಕೊಡಿ. ಎರಡು ದಿನ ದೊಡ್ಡಮಟ್ಟದ ವ್ಯಾಪಾರ ಆಗುತ್ತದೆ. ಈ ಹಿಂದೆ ಆದ ನಷ್ಟದಿಂದ ನಾವು ಸ್ವಲ್ಪವಾದರೂ ಚೇತರಿಸಿಕೊಳ್ಳುತ್ತೇವೆ ಎಂದು ಹತಾಶೆ ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಇಂಡಿಗೋ ವಿಮಾನದಲ್ಲಿ ತುಳುವಿನಲ್ಲಿ ಪ್ರಕಟಣೆ – ಕರಾವಳಿಗರ ಮನಗೆದ್ದ ಪೈಲಟ್
ರಾಜ್ಯದಲ್ಲಿ ಸುಮಾರು 5,500ಕ್ಕಿಂತಲೂ ಹೆಚ್ಚು ಮದ್ಯ ಮಾರಾಟಗಾರರ ಇದ್ದಾರೆ. ನಮ್ಮ ನಷ್ಟಕ್ಕೆ ಬ್ಯಾಂಕಿನವರು ಬರುವುದಿಲ್ಲ. ಗ್ರಾಹಕರು ಬರುವುದಿಲ್ಲ ಸರ್ಕಾರವು ಬೆಂಬಲಿಸಲ್ಲ. ಜಿಎಸ್ಟಿ ಸಂಸ್ಥೆಯವರು ನಮ್ಮ ಕಷ್ಟವನ್ನು ಕೇಳುವುದಿಲ್ಲ. ತೆರಿಗೆ ಪಾವತಿಸಲು ಎರಡು ಕಂತುಗಳನ್ನು ಅವಕಾಶ ಕೊಟ್ಟದ್ದು ಬಿಟ್ಟರೆ ಬೇರೆ ಏನು ಸಹಾಯ ವಾಗಿಲ್ಲ. ಕಟ್ಟಡ ತೆರಿಗೆ ಪಂಚಾಯತ್ ಲೈಸೆನ್ಸ್ ಇಲ್ಲೆಲ್ಲೂ ವಿನಾಯತಿಗಳನ್ನು ಸರ್ಕಾರ ಕೊಟ್ಟಿಲ್ಲ ಎಂದರು.
ಆರ್ಥಿಕವಾಗಿ ಸಂಕಷ್ಟವಾದರೆ ವ್ಯವಹಾರಸ್ಥ ಮಾನಸಿಕವಾಗಿ ಕುಗ್ಗಿ ಹೋಗುತ್ತಾನೆ. ವ್ಯಾಪಾರಿಯ ಆರೋಗ್ಯ ಸರ್ಕಾರಕ್ಕೆ ಮುಖ್ಯ ಅಲ್ಲವೇ ಎಂದು ಗೋವಿಂದರಾಜ ಹೆಗ್ಡೆ ಪ್ರಶ್ನೆ ಮಾಡಿದ್ದಾರೆ. ಆಹಾರವಿರುತ್ತದೆ ಮದ್ಯ ಸೇವಿಸಲು ಲೈಸನ್ಸ್ ಟೈಮಿಂಗ್ನಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಿ. ಡಿಸೆಂಬರ್ 31 ಮತ್ತು ಜನವರಿ 1ಕ್ಕೆ ಸರ್ಕಾರ ರೂಪಿಸಿರುವ ನಿಯಮದಲ್ಲಿ ವಿನಾಯತಿ ಕೊಡಬೇಕು. ರಸ್ತೆಗಳಲ್ಲಿ ಕುಣಿದಾಡುವುವವರಿಗೆ ಸರ್ಕಾರ ಬೇರೆಯ ನಿಯಮ ರೂಪಿಸಲಿ. ರಸ್ತೆಯಲ್ಲಿ ಕುಣಿಯೋರ ಪರವಾಗಿ ನಾನು ಮಾತನಾಡುವುದಿಲ್ಲ. ಅದಕ್ಕೆ ಕಠಿಣ ನಿರ್ಬಂಧವನ್ನು ಸರ್ಕಾರ ಹೇರಲಿ. ರೆಸ್ಟೋರೆಂಟ್ನಲ್ಲಿ ಶೇಕಡ ನೂರರಷ್ಟು ಕುಳಿತುಕೊಂಡು ಆಹಾರ ಸೇವಿಸುವ ಅವಕಾಶ ಕೊಡಬೇಕು. ಪ್ರವಾಸಿಗರಿಗೆ ಸಾರ್ವಜನಿಕರಿಗೆ ಎಲ್ಲೆಲ್ಲಿ ಎಷ್ಟೆಷ್ಟು ಅವಕಾಶ ಸರ್ಕಾರ ಕೊಟ್ಟಿದೆ ಎಂಬುದು ನಮಗೆ ಗೊತ್ತು ನಾನು ಅದನ್ನು ಪ್ರಶ್ನೆ ಮಾಡುವುದಿಲ್ಲ. ಯಾವ ವಲಯವನ್ನು ನಾನು ಗುರುತಿಸಲು ಹೋಗುವುದಿಲ್ಲ. ಇದನ್ನೂ ಓದಿ: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್
ಕುಣಿದಾಟ ಮಾಡಲು ಆರ್ಕೆಸ್ಟ್ರಾಗಳನ್ನು ನಿಯೋಜಿಸಲು ದೊಡ್ಡ ದೊಡ್ಡ ಕಾರ್ಯಕ್ರಮಗಳ ಆಯೋಜನೆ ಮಾಡುವ ಬಗ್ಗೆ ನಾವು ನಮ್ಮ ಬೇಡಿಕೆಯನ್ನು ಸಲ್ಲಿಸುತ್ತಿಲ್ಲ. ನಮ್ಮ ವ್ಯಾಪಾರದ ಬಗ್ಗೆ ನಾವು ಮಾತನಾಡುತ್ತಿದ್ದೇವೆ. ನಾವು ನಮ್ಮ ವ್ಯಾಪಾರಕ್ಕೆ ಬಂಡವಾಳ ಹಾಕಿದ್ದೇವೆ ಸರ್ಕಾರಕ್ಕೆ ತೆರಿಗೆ ಕಟ್ಟುತ್ತೇವೆ. ಹೊಸವರ್ಷವನ್ನು 10 ಗಂಟೆಗೆ ಆಚರಿಸಲು ಸಾಧ್ಯವಿಲ್ಲ. ಹೊಸವರ್ಷ ಬರುವುದೇ 12 ಗಂಟೆಗೆ. ಒಂದು ರೆಸ್ಟೋರೆಂಟ್ಗೆ ಬಂದು ಕೇಕ್ ಕಟ್ ಮಾಡುವ ಅವಕಾಶವನ್ನು ಸರ್ಕಾರ ಕೊಡುತ್ತಿಲ್ಲ ಇದು ಅನ್ಯಾಯ. ಇದನ್ನೂ ಓದಿ: ನಿಷೇಧವಿದ್ದರೂ ಎಣ್ಣೆ ಪಾರ್ಟಿ ಮಾಡಿದ ವೈದ್ಯ ಅರೆಸ್ಟ್!
ರಾಜ್ಯದಲ್ಲಿ ಸಾವಿರಾರು ವೆಜಿಟೇರಿಯನ್ ರೆಸ್ಟೋರೆಂಟ್ಸ್ ನಾನ್ ವೆಜಿಟೇರಿಯನ್ ರೆಸ್ಟೋರೆಂಟ್ಸ್ಗಳು ಇವೆ. ಇವರುಗಳ ಪಾಡು ಏನು? ಲಾಭ ಮಾಡುವ ಉದ್ದೇಶ ಅಲ್ಲದಿದ್ದರೂ ಸರ್ಕಾರ ನಷ್ಟವಾಗಲು ಬಿಡಬಾರದು. ಹಿಂದೆ ಇದ್ದ ವ್ಯಾಪಾರಕ್ಕೆ ಹೋಲಿಸಿದ್ದಾರೆ ಶೇಕಡ 36, 37% ರಷ್ಟು ಮಾತ್ರ ವ್ಯಾಪಾರವಾಗುತ್ತಿದೆ. ಸರ್ಕಾರ ಈ ನಿಯಮದಿಂದ cl2 ಮತ್ತು ವೈನ್ ಶಾಪ್ನಲ್ಲಿ ಮಾತ್ರ ವ್ಯಾಪಾರ ಹೆಚ್ಚಾಗಲಿದೆ ಎಲ್ಲರೂ ಮನೆಗೆ ಪಾರ್ಸೆಲ್ ತೆಗೆದುಕೊಂಡು ಹೋಗಿ ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ.
ಧಾರವಾಡ: ಲಾಕ್ಡೌನ್ ನಡುವೆಯೂ ಮದ್ಯದ ಮಾರಾಟ ಭರ್ಜರಿಯಾಗಿ ನಡೆಯುತ್ತಿರುವಾಗಲೇ ನಮ್ಮೂರಿಗೂ ಎಣ್ಣೆ ಅಂಗಡಿ ಮಂಜೂರಿ ಮಾಡಿಕೊಡಿ ಎಂದು ವ್ಯಕ್ತಿಯೊಬ್ಬ ಸಚಿವರಿಗೆ ಮನವಿ ಮಾಡಿಕೊಂಡಿರುವ ವಿಚಿತ್ರ ಪ್ರಸಂಗ ಧಾರವಾಡದಲ್ಲಿ ನಡೆದಿದೆ.
ಹೌದು ತಮಗೆ ಇಂತಹದೊಂದು ಮನವಿ ಬಂದಿತ್ತು ಎಂಬುದನ್ನು ಸ್ವಂತ ಸಚಿವ ಜಗದೀಶ ಶೆಟ್ಟರ್ ಅವರೇ ಹೇಳಿಕೊಂಡಿದ್ದಾರೆ. ಧಾರವಾಡದಲ್ಲಿ ಅಧಿಕಾರಿಗಳ ಸಭೆಯ ಬಳಿಕ ಮಾತನಾಡಿದ ಅವರು, ನಮ್ಮೂರಿಗೆ ಎಂಎಸ್ಐಎಲ್ ಮಳಿಗೆ ಕೊಡಿ ಎಂದು ವ್ಯಕ್ತಿಯೊಬ್ಬ ಇವತ್ತು ಬೆಳಗ್ಗೆ ನನ್ನ ಬಳಿ ಮನವಿ ಹಿಡಿದುಕೊಂಡು ಬಂದಿದ್ದ. ಏನ್ ಮಾಡೋದು ಇಂತವರು ನಮ್ಮಲ್ಲಿ ಇದಾರೆ. ನಾನು ಅವನಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಊರ ಹಿರಿಯರ ಒಪ್ಪಿಗೆ ತೆಗೆದುಕೊಂಡು ಬಾ ಎಂದು ಹೇಳಿ ಸಾಗ ಹಾಕಿದ್ದೇನೆ ಎಂದು ಹೇಳಿದ ಶೆಟ್ಟರ್ ತಿಳಿಸಿದರು.
ಜನರ ವಿರೋಧ ಬಂದ ಕಡೆಯ ಮದ್ಯದ ಮಳಿಗೆಗಳನ್ನು ನಾವು ಬಂದ್ ಮಾಡಿಸುತ್ತಿದ್ದೇವೆ. ಇಂತಹ ಸಮಯದಲ್ಲಿ ಹೊಸ ವೈನ್ ಶಾಪ್ಗಳಿಗೆ ಅನುಮತಿ ಕೊಡುವುದಿಲ್ಲ ಎಂದರು.
ಇದೇ ವೇಳೆ ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕುರಿತಂತೆ ಮಾತನಾಡಿದ ಅವರು, ರೈತರು ಮೆಕ್ಕೆಜೋಳ ಖರೀದಿ ಕೇಂದ್ರದ ಆಸೆ ಕೈ ಬಿಡುವಂತೆ ಹೇಳಿದ್ದಾರೆ. ಕೆಎಂಎಫ್ ಮೂಲಕ ದೊಡ್ಡ ಪ್ರಮಾಣದಲ್ಲಿ ಮೆಕ್ಕೆಜೋಳ ಖರೀದಿ ಆರಂಭಿಸಲಾಗಿತ್ತು. ಆದರೆ ಅದು ಯಶಸ್ಸು ಆಗಲಿಲ್ಲ. ಹೀಗಾಗಿ ಖರೀದಿ ಕೇಂದ್ರದ ಮೂಲಕ ಪಡೆಯಲು ಆಗುವುದಿಲ್ಲ ಎಂದು ಸರ್ಕಾರ ಐದು ಸಾವಿರ ರೂಪಾಯಿ ಸಬ್ಸಿಡಿ ಘೋಷಿಸಿದೆ. ಇನ್ನು ಮುಂದೆ ರೈತರು ಖರೀದಿ ಕೇಂದ್ರದ ವಿಚಾರ ಬಿಟ್ಟು ಮಾರ್ಕೆಟ್ನಲ್ಲಿ ತಮಗೆ ಯಾರಿಗೆ ಬೇಕೋ ಅವರಿಗೆ ಕೊಡಬಹುದು ಎಂದು ಶೆಟ್ಟರ್ ಹೇಳಿದರು.
ಹುಬ್ಬಳ್ಳಿ: ವೈನ್ ಶಾಪ್ ತೆರೆಯಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿಯನ್ನ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ವರೂರು ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ್ ಬಡಿಗೇರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ಗ್ರಾಮದ ‘ಗಾಯತ್ರಿ ವೈನ್ಸ್’ ಮುಚ್ಚಿಸಲು ಮಹಿಳಾ ಸಂಘದವರು, ಗ್ರಾಮಸ್ಥರು ಅರ್ಜಿ ಕೊಟ್ಟಿದ್ದರು. ಇದನ್ನೇ ಹಣ ಪೀಕಲು ಬಳಸಿಕೊಂಡ ಪಿಡಿಒ ಬಸವರಾಜ್, ಗ್ರಾಮಸ್ಥರು ನೀಡಿರುವ ಅರ್ಜಿ ತಿರಸ್ಕಾರ ಮಾಡಿ ವೈನ್ ಶಾಪ್ ತೆರಯಲು ತೊಂದರೆ ಇಲ್ಲದಂತೆ ಮಾಡಲು 50 ಸಾವಿರ ರೂ. ನೀಡುವಂತೆ ಶಾಪ್ ಮ್ಯಾನೇಜರ್ ಬಳಿ ಬೇಡಿಕೆ ಇಟ್ಟಿದ್ದ.
ಮೊದಲು ಈ ಬಗ್ಗೆ ಶಾಪ್ ಮ್ಯಾನೇಜರ್ ಗಮನ ನೀಡದ ಸಂದರ್ಭದಲ್ಲಿ ಪದೇ ಪದೇ ಫೋನ್ ಮಾಡಿ ಈ ಬಗ್ಗೆ ಪಿಡಿಒ ಎಚ್ಚರಿಕೆ ನೀಡಿದ್ದ. ಅಲ್ಲದೇ ನೇರ ಶಾಪ್ ಬಳಿ ತೆರಳಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ. ಈ ಸಂದರ್ಭದಲ್ಲಿ ಮ್ಯಾನೇಜರ್ ವಿಶಾಲ್ ಕಲಾಲ್ ಪಿಡಿಒ ಬಳಿ ಮನವಿ ಮಾಡಿ 40 ಸಾವಿರ ರೂ. ನೀಡುವುದಾಗಿ ಒಪ್ಪಿಸಿದ್ದರು.
ಇತ್ತ ವಿಶಾಲ್ ಕಲಾಲ್ ತಮ್ಮ ಸಮಸ್ಯೆಯನ್ನು ತಿಳಿಸಿ ಎಸಿಬಿಯ ಮೊರೆ ಹೋಗಿದ್ದರು. ಇದರಂತೆ ಇಂದು ಹಣ ಲಂಚ ಪಡೆಯುವಾಗ ಹುಬ್ಬಳ್ಳಿಯ ಕಾರವಾರ ರಸ್ತೆ ಗಣೇಶ್ ವೇ ಬ್ರಿಜ್ ಹತ್ತಿರ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಪಿಡಿಒ ಸಿಕ್ಕಿದಿದ್ದಾನೆ. ಎಸಿಬಿ ಡಿವೈಎಸ್ಪಿ ವಿಜಯಕುಮಾರ ಬಿಸ್ನಳಿ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದೆ.
ಬೆಂಗಳೂರು: ಮನೆ ಬಾಗಿಲಿಗೆ ಮದ್ಯ ಪೂರೈಕೆ ಮಾಡಲು ಚಿಂತನೆ ಮಾಡಲಾಗಿದೆ. ಕೆಲವು ಕಡೆ ಮದ್ಯದ ಅಂಗಡಿ ದೂರ ಇರುತ್ತೆ. ಕೆಲವು ಕಡೆ ಮದ್ಯದ ಅಂಗಡಿಗಳೇ ಇರಲ್ಲ. ಇಂಥಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಯೋಚನೆ ಮಾಡಲಾಗಿದ್ದು, ಮನೆ ಬಾಗಿಲಿಗೆ ಮದ್ಯ ಪೂರೈಸೋ ಚಿಂತನೆ ಕೂಡ ಇಲಾಖೆ ಮುಂದಿದೆ ಎಂದು ಅಬಕಾರಿ ಸಚಿವ ನಾಗೇಶ್ ಹೇಳಿದ್ದಾರೆ.
ಇಂದು ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಬೈಲ್ ವೈನ್ ಶಾಪ್ಗಳಿಗೆ ಸರ್ಕಾರ ಚಿಂತನೆ ಮಾಡಿದೆ. ಎಲ್ಲೆಲ್ಲಿ ವೈನ್ ಶಾಪ್ಗಳಿವೆ. ಅಲ್ಲಿ ಸಂಚಾರಿ ವೈನ್ ಶಾಪ್ಗಳ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಆದಾಯ ಬರುತ್ತೆ ಎಂಬುದು ಸರ್ಕಾರದ ಚಿಂತನೆ. ತಾಂಡಾಗಳಲ್ಲಿ ಸಂಚಾರಿ ವೈನ್ ಶಾಪ್ಗಳ ವ್ಯವಸ್ಥೆ ಮಾಡಲು ಚಿಂತನೆ ಮಾಡಲಾಗಿದೆ ಎಂದು ತಿಳಿಸಿದರು.
ಗುಣಮಟ್ಟದ ಮದ್ಯ ಕೊಡಬೇಕು ಅನ್ನೋದು ನಮ್ಮ ಉದ್ದೇಶ. 2018-19 ರಲ್ಲಿ 19,750 ಸಾವಿರ ಕೋಟಿ ರೂ ಸಂಗ್ರಹ ಗುರಿ ನಿಗದಿ ಪಡಿಸಲಾಗಿತ್ತು. 19,943 ಕೋಟಿ ಗುರಿ ಸಾಧಿಸಿದ್ದೇವೆ. 2019-20 ನೇ ಸಾಲಿನಲ್ಲಿ 21 ಸಾವಿರ ಕೋಟಿ ಗುರಿ ನಿಗದಿ ಪಡಿಸಿದ್ದೇವೆ. ಪಾರ್ಟಿಗಳಲ್ಲಿ ಬೇರೆ ಕಡೆಯಿಂದ ಮದ್ಯ ತಂದು ಉಪಯೋಗಿಸುತ್ತಾರೆ. ಆಗಾಗಿ ಅಂತಹಾ ಪಾರ್ಟಿಗಳ ಮೇಲೆ ನಮ್ಮ ಅಧಿಕಾರಿಗಳು ದಾಳಿ ಮಾಡುತ್ತಾರೆ. ಗಾಂಜಾ ಮತ್ತು ಮಾದಕವಸ್ತುಗಳ ಬಳಕೆಗೆ ಕಡಿವಾಣ ಹಾಕುತ್ತೇವೆ ಎಂದು ಹೇಳಿದರು.
ಮದ್ಯಪಾನ ನಿಷೇಧದ ಬಗ್ಗೆ ಸರ್ಕಾರದ ಮುಂದೆ ಯಾವುದೇ ಚಿಂತನೆ ಇಲ್ಲ. ಈ ಹಿಂದೆ ಮಹಿಳೆಯರು ಪ್ರತಿಭಟನೆ ಮಾಡಿದ್ದು ನನಗೆ ಗೊತ್ತಿಲ್ಲ. ನಾನು ಬಹುಶಃ ಬಾಂಬೆಯಲ್ಲಿದ್ದೆ. ಆಗ ನನ್ನ ಫೋನ್ ಸ್ವಿಚ್ ಆಫ್ ಇತ್ತು ಎಂದು ಹೇಳಿದರು. ಇದೇ ವೇಲೆ ಡಿಕೆಶಿ ಬಗ್ಗೆ ಕೇಳಿದಾಗ, ಈ ಬಗ್ಗೆ ಸಿಎಂ ಆಗಲೇ ಮೂವರು ಸಚಿವರಿಗೆ ಹೇಳಿಕೆ ಕೊಡದಂತೆ ವಾರ್ನ್ ಮಾಡಿದ್ದಾರೆ. ಹೀಗಾಗಿ ಈ ಬಗ್ಗೆ ನಾನೇನು ಹೇಳಲ್ಲ ಎಂದು ತಿಳಿಸಿದರು.
ಬಳ್ಳಾರಿ: ಮದ್ಯದಂಗಡಿ ಮುಚ್ಚಬೇಕು ಎಂದು ಗ್ರಾಮಸ್ಥರು ಪ್ರತಿಭಟಿಸಿರುವ ಸುದ್ದಿ ನೀವು ಓದಿರಬಹುದು. ಆದರೆ ಬಾರ್ ಬೇಕೇ ಬೇಕು ಎಂದು ಎಣ್ಣೆ ಪ್ರಿಯರು ಪಂಚಾಯತ್ ಮುಂದೆ ಪ್ರತಿಭಟಿಸಿ ಆಗ್ರಹಿಸಿದ್ದಾರೆ.
ಹೂವಿನಹಡಗಲಿ ತಾಲೂಕಿನ ಸೋವೇನಹಳ್ಳಿ ಗ್ರಾಮ ಪಂಚಾಯಿತಿ ಕಛೇರಿಯ ಮುಂಭಾಗದಲ್ಲಿ ಗ್ರಾಮಸ್ಥರು ಬಾರ್ ಓಪನ್ ಮಾಡುವಂತೆ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮದಲ್ಲಿ ಹಿಂದೆ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಗ್ರಾಮದ ಮದ್ಯಪ್ರಿಯರ ಬೇಡಿಕೆಯಂತೆ ಗ್ರಾಮಕ್ಕೆ ಒಂದು ಎಂಎಸ್ಐಎಲ್ ವೈನ್ ಶಾಪ್ ಮಂಜೂರಾಗಿ, ಪ್ರಾರಂಭಕ್ಕೆ ಎಲ್ಲಾ ಸಿದ್ಧತೆಗಳು ನಡೆಯುತಿತ್ತು. ಈ ಸಂದರ್ಭದಲ್ಲಿ ಸೋವೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವರು ನಮ್ಮ ಗ್ರಾಮದಲ್ಲಿ ಮದ್ಯದ ಅಂಗಡಿ ತೆರೆಯುವುದು ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದರು.
ವಿರೋಧ ಜೋರಾದ ಕಾರಣ ವೈನ್ ಶಾಪ್ ಆರಂಭವಾಗುವುದು ತಡವಾಗಿತ್ತು. ಹೀಗಾಗಿ ಇಂದು ಗ್ರಾಮದ ಎಣ್ಣೆ ಪ್ರೀಯರು ಬಾರ್ ಕೂಡಲೇ ಓಪನ್ ಮಾಡಲೇಬೇಕೆಂದು ಆಗ್ರಹಿಸಿ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟಿಸಿದ್ದಾರೆ.
ಚಾಮರಾಜನಗರ: ವೈನ್ಶಾಪ್ನಿಂದ ಕುಡುಕರು ಮಾತ್ರವಲ್ಲದೇ ಸ್ಥಳೀಯರು ಕೂಡ ನೆಮ್ಮದಿ ಕಳೆದುಕೊಳ್ಳುತ್ತಾರೆ. ಆದರೆ ಈ ಗ್ರಾಮದಲ್ಲಿ ವೈನ್ಶಾಪ್ ಇರೋದ್ರಿಂದ ಮದುವೇನೇ ಆಗ್ತಿಲ್ಲವಂತೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಕಳೆದ 25 ವರ್ಷಗಳಿಂದ ಇರೋ ಲಕ್ಷ್ಮೀ ವೆಂಕಟೇಶ್ವರ ವೈನ್ಶಾಪ್ ಇದೆ. ಈ ವೈನ್ಶಾಪ್ನಿಂದಾಗಿ ಗ್ರಾಮಕ್ಕೆ ಕುಡುಕ ಬೊಮ್ಮಲಾಪುರ ಎಂಬ ನಾಮಧೇಯ ಕೂಡ ಬಂದಿದೆಯಂತೆ.
ವೈನ್ ಶಾಪ್ನಿಂದಾಗಿ ಗ್ರಾಮದ ವಧುಗಳನ್ನ ಮದುವೆಯಾಗುವುದಕ್ಕೂ ಯಾರೂ ಮುಂದೆ ಬರುತ್ತಿಲ್ಲ. ಜೊತೆಗೆ ವರನಿಗೆ ವಧು ಕೊಡಲು ಅಕ್ಕ ಪಕ್ಕದ ಊರಿನ ಗ್ರಾಮಗಳಿಂದ ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ನೂರಾರು ವಯಸ್ಕ ಹೆಣ್ಣು ಮತ್ತು ಗಂಡು ಮಕ್ಕಳು ಮದುವೆಯಾಗದೇ ಹಾಗೆಯೇ ಮನೆಯಲ್ಲಿದ್ದಾರೆ ಎಂದು ಗ್ರಾಮಸ್ಥೆ ಶೋಭಾ ಹೇಳುತ್ತಾರೆ.
ಬೊಮ್ಮಲಾಪುರ, ಕೊಡಸೋಗೆ, ಶೀಲವಂತಪುರ, ಸೋಮಪುರ ಸೇರಿದಂತೆ 10 ಹಳ್ಳಿಗಳಿಗೆ ಇದೊಂದೆ ವೈನ್ ಶಾಪ್. ಪ್ರತಿನಿತ್ಯ ಸಾವಿರಾರು ಮಂದಿ ವೈನ್ ಶಾಪ್ಗೆ ಬಂದು ಕುಡಿದು ಹೋಗುತ್ತಿದ್ದಾರೆ. ಅಲ್ಲದೇ ಕಳೆದ 6 ತಿಂಗಳಲ್ಲಿ 2 ಕೊಲೆಗಳಾಗಿವೆ. ವೈನ್ಶಾಪ್ ಪಕ್ಕದಲ್ಲಿಯೇ ಅಂಗನವಾಡಿ ಕೇಂದ್ರ, ಗ್ರಾಮಪಂಚಾಯ್ತಿ ಕಾರ್ಯಾಲಯ ಇದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಇತ್ತ ವೈನ್ಶಾಪ್ ಇರೋದ್ರಿಂದ 10, 12 ವರ್ಷದ ಮಕ್ಕಳು ಕುಡಿದು ಹಾಳಾಗುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡುತ್ತಿದ್ದಾರೆ.
ಕುಡಿದ ಮತ್ತಿನಲ್ಲಿ ಒಬ್ಬರ ಮೇಲೊಬ್ಬರು ಗ್ರಾಮದಲ್ಲಿ ಗಲಾಟೆ ಮಾಡುವುದು. ಕೆಲವು ವೇಳೆ ಅಮಾಯಕರು ಏಟು ತಿಂದಿರುವ ಪರಿಸ್ಥಿತಿ ಕೂಡ ಇದೆಯಂತೆ. ಒಟ್ಟಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ರೂ ವೈನ್ಶಾಪ್ ಮುಚ್ಚಬೇಕಾದ ತಹಶೀಲ್ದಾರ್, ಅಬಕಾರಿ ಇಲಾಖೆ ಅಧಿಕಾರಿಗಳಾಗಲಿ ಇತ್ತ ಸುಳಿಯದಿರೋದು ದುರಂತ.
ಮೈಸೂರು: ನಗರದ ಎಚ್.ಡಿ ಕೋಟೆ ತಾಲೂಕು ಕಚೇರಿಯ ಮುಂಭಾಗದಲ್ಲಿ ವೈನ್ ಶಾಪ್ ತೆರೆಯುವ ಸಂಬಂಧ ಪರ ಹಾಗೂ ವಿರೋಧದ ಪ್ರತಿಭಟನೆ ಜೋರಾಗಿ ನಡೆದಿದೆ.
ಎಚ್.ಡಿ ಕೋಟೆ ತಾಲೂಕಿನ ಹೀರಳ್ಳಿ ಗ್ರಾಮದ ಹೊರವಲಯದಲ್ಲಿ ವೈನ್ ಶಾಪ್ ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಆದರೆ ವೈನ್ ಶಾಪ್ ಬೇಡ ಎಂದು ಮಹಿಳೆಯರು ಪ್ರತಿಭಟಿಸಿದರೆ, ವೈನ್ ಶಾಪ್ ಬೇಕು ಎಂದು ಡಿಎಸ್ಎಸ್ ಸಂಘಟನೆ ಕಾರ್ಯಕರ್ತರು ತಾಲೂಕು ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.
ವೈನ್ ಶಾಪ್ ವಿರೋಧಿಸಿದ ಹೀರಳ್ಳಿ ಗ್ರಾಮದ ಮಹಿಳೆಯರು, ನಮ್ಮ ಹಳ್ಳಿಯಲ್ಲಿ ಬಾರ್ ಬೇಡವೆಂದು ತಾಲೂಕು ಕಚೇರಿಮುಂದೆ ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈನ್ ಶಾಪ್ ಆರಂಭವಾದ್ರೆ ನಮ್ಮ ನೆಮ್ಮದಿ ಕೆಡುತ್ತೆ ಹೀಗಾಗಿ ಶಾಪ್ ಆರಂಭಿಸಬಾರದು ಎಂದು ಮಹಿಳೆಯರು ಕೇಳಿಕೊಂಡಿದ್ದಾರೆ. ಒಂದು ವೇಳೆ ನೀವೆನಾದರೂ ವೈನ್ ಶಾಪ್ ಆರಂಭಿಸಿದರೆ ಬೆಂಕಿ ಹಚ್ಚುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ ಇದೇ ಸ್ಥಳದಲ್ಲಿ ಸ್ಥಳೀಯ ಡಿಎಸ್ಎಸ್ ಸಂಘಟನೆ ಕಾರ್ಯಕರ್ತರು ಬಾರ್ ಪರವಾಗಿ ಪ್ರತಿಭಟಿಸಿದ್ದು ವಿಶೇಷವಾಗಿತ್ತು. ವೈನ್ ಶಾಪ್ ಅನ್ನು ವೈಯಕ್ತಿಕ ಲಾಭದ ಕಾರಣದಿಂದ ಕೆಲವರು ವಿರೋಧಿಸುತ್ತಿದ್ದಾರೆ. ಹೀಗಾಗಿ ಕಾನೂನು ಪ್ರಕಾರ ವೈನ್ ಶಾಪ್ ಆರಂಭವಾಗಲೇ ಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಬೆಂಗಳೂರು: ಲಾಂಗ್, ಮಚ್ಚು ಹಿಡಿದು ವೈನ್ ಶಾಪ್ಗೆ ನುಗ್ಗಿದ ದುಷ್ಕರ್ಮಿಗಳು ಕ್ಯಾಶಿಯರ್ ನನ್ನ ಬೆದರಿಸಿ ನಗದು ದೋಚಿರೋ ಘಟನೆ ಬೆಂಗಳೂರಿನ ಏರ್ಪೋರ್ಟ್ ರಸ್ತೆಯ ಗೊಲ್ಲಹಳ್ಳಿ ಗೇಟ್ ಬಳಿ ನಡೆದಿದೆ.
ಹೈವೇಗಳಲ್ಲಿ ಬಾರ್ ಬಂದ್ ಆಗಿದ್ದ ಹಿನ್ನೆಲೆಯಲ್ಲಿ ಗೊಲ್ಲಹಳ್ಳಿಯಲ್ಲಿ ಹೊಸದಾಗಿ ವೈನ್ಸ್ ಶಾಪ್ವೊಂದನ್ನು ತೆರೆಯಲಾಗಿತ್ತು. ಸೋಮವಾರ ರಾತ್ರಿ 10 ಘಂಟೆ ಸುಮಾರಿಗೆ ಮಂಕಿ ಕ್ಯಾಪ್ ಹಾಕಿಕೊಂಡು ಶಾಪ್ ಒಳಗೆ ನುಗ್ಗಿದ ದುಷ್ಕರ್ಮಿಗಳು ಲಾಂಗ್ ಬೀಸಿ ಕ್ಯಾಶಿಯರ್ನನ್ನ ಬೆದರಿಸಿದ್ದಾರೆ.
ಬಳಿಕ ಕೌಂಟರ್ನಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರೋ ಬಾಗಲೂರು ಪೊಲೀಸರು ಸಿಸಿಟಿವಿ ದೃಶ್ಯಾವಳಿಯ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.