Tag: ವೈರಮುಡಿ ಉತ್ಸವ

  • ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

    ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

    ಮಂಡ್ಯ: ಇಂದು ಮಂಡ್ಯ (Mandya) ಜಿಲ್ಲೆಯ ಪಾಂಡವಪುರ (Pandavapura) ತಾಲೂಕಿನ ಮೇಲುಕೋಟೆಯಲ್ಲಿ (Melukote) ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ (Vairamudi Brahmotsava) ಜರುಗಲಿದೆ. ಈ ವೈರಮುಡಿ ಉತ್ಸವದಲ್ಲಿ ಶ್ರೀದೇವಿ, ಭೂದೇವಿಯರೊಂದಿಗೆ ಚೆಲುವನಾರಾಯಣಸ್ವಾಮಿ ಭಕ್ತರಿಗೆ ದರ್ಶನ ನೀಡಿಲಿದ್ದಾರೆ.

    ಮಂಡ್ಯ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ವೈರಮುಡಿ ಉತ್ಸವಕ್ಕೆ ಬೆಳಗ್ಗೆ 8:30ಕ್ಕೆ ಚಾಲನೆ ಸಿಗಲಿದೆ. ಶ್ರೀದೇವಿ, ಭೂದೇವಿಯರ ಜೊತೆಗೆ ರತ್ನ ಖಚಿತ ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ದರ್ಶನ ನೀಡಲಿರುವ ಗರುಢಾರೂಢನಾದ ಚೆಲುವನಾರಾಯಣಸ್ವಾಮಿಯನ್ನು ನೋಡಿದರೆ ಸಾಕ್ಷಾತ್ ಭಗವಂತನೇ ಧರೆಗಿಳಿದು ವೈರಮುಡಿ ಕಿರೀಟ ಧರಿಸಿ ಭಕ್ತರಿಗೆ ದರ್ಶನ ನೀಡಿದಂತೆ ಭಾಸವಾಗುತ್ತದೆ. ಇದನ್ನೂ ಓದಿ: ಆಸ್ಪತ್ರೆಯಲ್ಲೇ ಹಿರಿಯ ವೈದ್ಯ ನೇಣಿಗೆ ಶರಣು

    ಇಂದು ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಳ್ಳಲು ಹೊರರಾಜ್ಯದಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಇಂದಿನ ವೈರಮುಡಿ ಉತ್ಸವಕ್ಕೆ ಲಕ್ಷಾಂತರ ಜನರು ಸಾಕ್ಷಿಯಾಗಲಿದ್ದಾರೆ. ಈಗಾಗಲೇ ಜಿಲ್ಲಾ ಖಜಾನೆಯಿಂದ ಆಭರಣಗಳು ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಗಿದೆ. ಇದನ್ನೂ ಓದಿ: ಇಂದಿನಿಂದ ಬಿಜೆಪಿ ‘ಜನಾಕ್ರೋಶ ಕಹಳೆ’ – ಹಳೇ ಮೈಸೂರು ಭಾಗದಿಂದಲೇ ಯಾತ್ರೆ

    ಖಜಾನೆಯಿಂದ ಆಭರಣಗಳನ್ನು ಡಿಸಿ ಡಾ.ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ತಂದು ಹಸ್ತಾಂತರ ಮಾಡಿದ್ದಾರೆ. ಜಿಲ್ಲಾಡಳಿತದಿಂದ ಹಸ್ತಾಂತರವಾಗಿರುವ ವೈರಮುಡಿ ಆಭರಣಗಳನ್ನು ಬಿಗಿ ಭದ್ರತೆಯೊಂದಿಗೆ ತೆಗೆದುಕೊಂಡು ಹೋಗಲಾಗಿದೆ. ಇದನ್ನೂ ಓದಿ: ಯುವತಿಯೆಂದು ಯುವಕನಿಗೆ ಅಶ್ಲೀಲ ಮೆಸೇಜ್ – ಕಾಮುಕನಿಗೆ ಬಿತ್ತು ಧರ್ಮದೇಟು

    ಮಂಡ್ಯ ನಗರದ ಪ್ರಮುಖ ಬೀದಿಯಲ್ಲಿ ಹಾದು ಹೋಗುವ ವೈರಮುಡಿ ಆಭರಣಗಳನ್ನು ಹೊತ್ತ ವಾಹನ ಬಳಿಕ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ತೆರಳಲಿದೆ. ನಂತರ ಬಾಬುರಾಯನಕೊಪ್ಪಲಿಗೆ ತೆರಳಿ ಅಲ್ಲಿಂದ ಪಾಂಡವಪುರಕ್ಕೆ ತೆರಳಿಲಿದೆ. ಬಳಿಕ ಜಕ್ಕನಹಳ್ಳಿಗೆ ತೆರಳಿ ಅಲ್ಲಿಂದ ಮೇಲುಕೋಟೆಗೆ ತೆರಳಲಿದೆ. ಈ ವೇಳೆ ದಾರಿ ಮಧ್ಯದಲ್ಲಿ ಸಿಗುವ ಗ್ರಾಮಗಳಲ್ಲಿ ವೈರಮುಡಿಗೆ ಪೂಜೆಸಲ್ಲಿಸಲಾಗುತ್ತದೆ. ಇದನ್ನೂ ಓದಿ: ಅಮೆರಿಕಕ್ಕೆ ಭಾರತದಿಂದ 5 ವಿಮಾನ ಭರ್ತಿ ಐಫೋನ್‌ ಕಳುಹಿಸಿದ ಆಪಲ್‌

  • ಇಂದು ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಉತ್ಸವ

    ಇಂದು ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಉತ್ಸವ

    ಮಂಡ್ಯ: ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಉತ್ಸವ  (Melkote Vairamudi Utsava) ಇಂದು (ಗುರುವಾರ) ರಾತ್ರಿ ಜರುಗಲಿದ್ದು, ಚೆಲುವನಾರಾಯಣಸ್ವಾಮಿ ದೇಗುಲಕ್ಕೆ (Melkote Cheluva Narayana Swamy Temple) ಲಕ್ಷಾಂತರ ಭಕ್ತರು ಬಂದು ವೈರಮುಡಿ ಉತ್ಸವವನ್ನು ಕಣ್ತುಂಬಿಕೊಳ್ಳಲಿದ್ದಾರೆ.

    ವಿಜೃಂಭಣೆಯ ಉತ್ಸವಕ್ಕೆ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆ ಸಜ್ಜಾಗಿದ್ದು. ರಾತ್ರಿ 8:30ಕ್ಕೆ ಸಲ್ಲುವ ಆಶ್ಲೇಷ ನಕ್ಷತ್ರದಲ್ಲಿ ವೈರಮುಡಿ ಉತ್ಸವಕ್ಕೆ ಚಾಲನೆ ಸಿಗಲಿದೆ. ವೈರಮುಡಿ ಉತ್ಸವ ನೋಡಲು 2 ಲಕ್ಷ ಭಕ್ತರು ಸೇರುವ ನಿರೀಕ್ಷೆ ಇದೆ. ಈಗಾಗಲೇ ತಮಿಳುನಾಡು, ಕೇರಳ ಸೇರಿದಂತೆ ಹೊರ ರಾಜ್ಯಗಳಿಂದ ಭಕ್ತರು ಆಗಮಿಸಿದ್ದಾರೆ. ವೈಭವಯುತ ಉತ್ಸವಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಚ್ಚೇಗೌಡ ರಾಜೀನಾಮೆ

    ಬೆಳಗ್ಗೆ 7:30ಕ್ಕೆ ಜಿಲ್ಲಾ ಖಜಾನೆಯಿಂದ ವಜ್ರಖಚಿತ ವೈರಮುಡಿ ಆಭರಣಗಳನ್ನು ಬಿಗಿ ಭದ್ರತೆಯಲ್ಲಿ ಮಂಡ್ಯದಿಂದ ಮೇಲುಕೋಟೆಗೆ ತರಲಾಗಿದೆ. ಡಿಸಿ, ಎಸ್ಪಿ ನೇತೃತ್ವದಲ್ಲಿ ಆಭರಣಗಳ ಪರಿಶೀಲನೆ ಬಳಿಕ ಖಜಾನೆಯಿಂದ ವೈರಮುಡಿ ಆಭರಣ ತರಲಾಗಿದ್ದು, ಈಗಾಗಲೇ ಲಕ್ಷ್ಮಿ ಜನಾರ್ದನ ಸ್ವಾಮಿ ದೇವಾಲಯದಲ್ಲಿ ವೈರಮುಡಿ ಕೀರಿಟಕ್ಕೆ ಮೊದಲ ಪೂಜೆ ಸಲ್ಲಿಕೆಯಾಗಿದೆ.

    ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ವೈರಮುಡಿ ಆಭರಣ ಇರುವ ವಾಹನ ಹಾದು ಹೋಗಲಿದ್ದು, ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು, ಪಾಂಡವಪುರ, ಜಕ್ಕನಹಳ್ಳಿ ಮಾರ್ಗವಾಗಿ ಮೇಲುಕೋಟೆಗೆ ಆಭರಣದ ವಾಹನ ತಲುಪಲಿದೆ. ಮಾರ್ಗದುದ್ದಕ್ಕೂ ಸಿಗುವ ಗ್ರಾಮಗಳಲ್ಲಿ ವೈರಮುಡಿ ಕಿರೀಟದ ಪೂಜೆ ನಡೆಯಲಿದೆ. ಸಂಜೆ 6 ವೇಳೆಗೆ ಮೇಲುಕೋಟೆಗೆ ವೈರಮುಡಿ ಕಿರೀಟ ಹಾಗೂ ಆಭರಣ ತಲುಪಲಿದೆ.

    ಬಳಿಕ ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ ಮೂರ್ತಿಗೆ ಕಿರೀಟ ಧಾರಣೆ ಮಾಡಿ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ನಂತರ ಮೇಲುಕೋಟೆಯ ಪ್ರಮುಖ ಬೀದಿಗಳಲ್ಲಿ ವೈರಮುಡಿ ಉತ್ಸವ ನಡೆಯಲಿದೆ. ಬಣ್ಣಬಣ್ಣದ ವಿದ್ಯುತ್ ದೀಪಾಲಂಕಾರಗಳಿಂದ ಇಂದು ಸಂಜೆ ಮೇಲುಕೋಟೆ ಕಂಗೊಳಿಸಲಿದೆ. ಇದನ್ನೂ ಓದಿ: 5,8,9 ತರಗತಿಗೆ ಪರೀಕ್ಷೆ ಯಾವಾಗ? – ಗೊಂದಲದಲ್ಲಿ ವಿದ್ಯಾರ್ಥಿಗಳು, ಪೋಷಕರು

  • 2 ವರ್ಷಗಳ ಬಳಿಕ ಕಳೆಗಟ್ಟಲಿದೆ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ

    2 ವರ್ಷಗಳ ಬಳಿಕ ಕಳೆಗಟ್ಟಲಿದೆ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ

    ಮಂಡ್ಯ: ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ವೈರಮುಡಿ ಬ್ರಹ್ಮೋತ್ಸವ ಆರಂಭವಾಗಿದೆ. ಕೊರೊನಾ ಕಾರಣಕ್ಕೆ ಎರಡು ವರ್ಷಗಳಿಂದ ಸರಳವಾಗಿ ನಡೆದಿದ್ದ ಉತ್ಸವ ಈ ಬಾರಿ ವಿಜೃಂಭಣೆಯಿಂದ ನೆರವೇರಲಿದೆ. ಈ ಹಿನ್ನೆಲೆ ಇಡೀ ಮೇಲುಕೋಟೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳುಸುತ್ತಿದೆ.

    ಭೂ ವೈಕುಂಠ ಎಂಬ ಪ್ರಖ್ಯಾತವಾಗಿರುವ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆ ಹಲವು ಪುರಾಣ, ಇತಿಹಾಸಗಳನ್ನು ತನ್ನೊಡಲಲ್ಲಿ ತುಂಬಿಕೊಂಡ ಪ್ರಮುಖ ಧಾರ್ಮಿಕ ಕ್ಷೇತ್ರ. ಯಾದವಾದ್ರಿ, ನಾರಾಯಣಾದ್ರಿ, ಯತಿಶೈಲ, ತಿರುನಾರಾಯಣಪುರ, ಯದುಗಿರಿ, ದಕ್ಷಿಣ ಬದರಿ ಕ್ಷೇತ್ರ.. ಹೀಗೆ ಹಲವಾರು ಹೆಸರುಗಳಿಂದ ಕರೆಯಲ್ಪಡುವ ಮೇಲುಕೋಟೆ ದಕ್ಷಿಣ ಭಾರತದ ಬಹು ಮುಖ್ಯ ನಾಲ್ಕು ವೈಷ್ಣವ ಕ್ಷೇತ್ರಗಳಲ್ಲೊಂದು. ಇಲ್ಲಿ ವರ್ಷ ಪೂರ್ತಿ ಉತ್ಸವಗಳು ನೆರವೇರಿದ್ರೂ ಅದ್ರಲ್ಲಿ ಪ್ರಮುಖವಾದುದ್ದು ಅಂದ್ರೆ ವೈರಮುಡಿ ಬ್ರಹ್ಮೋತ್ಸವ.

    ಕಳೆದ ಎರಡು ವರ್ಷಗಳಿಂದ ಮಹಾಮಾರಿ ಕೊರೊನಾದಿಂದಾಗಿ ವೈರಮುಡಿ ಜಾತ್ರಾಮಹೋತ್ಸವ ಭಕ್ತರಿಲ್ಲದೇ ಅತ್ಯಂತ ಸರಳವಾಗಿ ನೆರವೇರಿತ್ತು. ಈ ಬಾರಿ ವಿಜೃಂಭಣೆಯಿಂದ ಉತ್ಸವ ಆಚರಿಸಲು ಮಂಡ್ಯ ಜಿಲ್ಲಾಡಳಿತ ನಿರ್ಧಾರ ಮಾಡಿದ್ದು, 9 ದಿನ ನಡೆಯುವ ಐತಿಹಾಸಿಕ ಬ್ರಹ್ಮೋತ್ಸವಕ್ಕೆ ಕಳೆದ ಎರಡು ದಿನಗಳ ಹಿಂದೆ ಬೆಳಗ್ಗೆ ಗರುಡ ಧ್ವಜಾರೋಹಣದೊಂದಿಗೆ ಚಾಲನೆ ದೊರಕಿದೆ.  ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ 100% ಟ್ಯಾಕ್ಸ್ ವಿನಾಯಿತಿ : ಬೊಮ್ಮಾಯಿ

    ಮೇಲುಕೋಟೆಗೆ ದೀಪಾಲಂಕಾರ ಮಾಡಲಾಗಿದ್ದು, ಇಡೀ ಮೇಲುಕೋಟೆಯಲ್ಲಿ ವೈಕುಂಠವೇ ಧರಗೆ ಇಳಿದಂತೆ ಕಾಣುತ್ತಿದ್ದು, ಭಕ್ತರ ಅನುಕೂಲಕ್ಕಾಗಿ ಬೆಂಗಳೂರು, ಮೈಸೂರು, ಮಂಡ್ಯ, ಹಾಸನದಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶದಿಂದ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿದ್ದು, ಮೇಲುಕೋಟೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಇನ್ನು 17ರಂದು ಮಹಾ ರಥೋತ್ಸವ ಹಾಗೂ 18ರಂದು ಕಲ್ಯಾಣಿಯಲ್ಲಿ ತೆಪ್ಪೋತ್ಸವ ಹಾಗೂ ಲೇಜರ್ ಶೋ ನಡೆಯಲಿದೆ.

    ಒಟ್ಟಾರೆ ಈ ಬಾರಿಯ ಅದ್ದೂರಿ ಜಾತ್ರಾಮಹೋತ್ಸವಕ್ಕೆ10 ಲಕ್ಷ ಜನ ಸೇರುವ ನಿರೀಕ್ಷಿಸಲಾಗಿದ್ದು, ಭದ್ರತೆಗಾಗಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೆ ಜನರ ಆರೋಗ್ಯದ ದೃಷ್ಟಿಯಿಂದ 10 ಅಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡ ನಿಯೋಜಿಸಲಾಗಿದೆ.

  • ಮಾ.9 ರಿಂದ ಮೇಲುಕೋಟೆ ವೈರಮುಡಿ ಉತ್ಸವ

    ಮಾ.9 ರಿಂದ ಮೇಲುಕೋಟೆ ವೈರಮುಡಿ ಉತ್ಸವ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಮೇಲುಕೋಟೆಯ ಶ್ರೀ ಚೆಲುವರಾಯಸ್ವಾಮಿ ವೈರಮುಡಿ ಉತ್ಸವವನ್ನು ಮಾ.9 ರಿಂದ 21ರವರೆಗೆ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ.

    ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿಂದು ಉತ್ಸವ ಆಚರಣೆ ಕುರಿತು ಮೇಲುಕೋಟೆಯ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ನಂತರ ಮಾತನಾಡಿದ ಗೋಪಾಲಯ್ಯನವರು, ಮಾ.9 ರಿಂದ 21ರವರೆಗೆ ನಡೆಯುವ ವೈರಮುಡಿ ಮಹೋತ್ಸವಕ್ಕೆ ಬರುವ ಎಲ್ಲಾ ಭಕ್ತರಿಗೆ ಅನುಕೂಲವಾಗುವಂತೆ ಸಾರಿಗೆ ಸೌಲಭ್ಯ, ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ಹಾಗೂ ದೇವರ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡುವಂತೆ ಹೇಳಿದರು. ಇದನ್ನೂ ಓದಿ: ಮುಸ್ಲಿಂ ಎಂಬ ಕಾರಣಕ್ಕೆ ಈ ಸರ್ಕಾರ ಒಂದು ನಯಾ ಪೈಸೆ ಕೊಟ್ಟಿಲ್ಲ: ಸಿಎಂ ಇಬ್ರಾಹಿಂ

    ಎಲ್ಲಾ ಇಲಾಖೆಗಳು ಬಹಳ ಜಾಗೃತಿವಹಿಸಬೇಕು ಯಾವುದೇ ಕುಂದು ಕೊರತೆಯಾಗದೇ ವೈರಮುಡಿ ಉತ್ಸವ ಅರ್ಥಪೂರ್ಣವಾಗಿ ನಡೆಯಲು ಎಲ್ಲರೂ ಸಹಕರಿಸಬೇಕು. ಉತ್ಸವದಲ್ಲಿ ಸುಮಾರು 8 ರಿಂದ 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಜಾತ್ರಾ ಅವಧಿಯಲ್ಲಿ ಸ್ವಚ್ಛತೆ ಕಾಪಾಡಲು ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಗತ್ಯಕ್ರಮವನ್ನು ವಹಿಸಬೇಕು. ಜಾತ್ರಾ ಮಹೋತ್ಸವ ಹೆಚ್ಚುವರಿ ಸಿಬ್ಬಂದಿ ಮತ್ತು ಪೌರಕಾರ್ಮಿಕರನ್ನು ನೇಮಿಸಿ ನಿರಂತರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.

    ದೇವಾಲಯದ ಸಮೀಪ ಆಂಬುಲೆನ್ಸ್ ಮತ್ತು ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ವಾಹನ ಪಾರ್ಕಿಂಗ್, ಬ್ಯಾರಿಕೇಡ್, ರಸ್ತೆ ದುರಸ್ತಿ, ಉತ್ಸವಗಳ ನಿರ್ವಹಣೆ, ದೀಪಾಲಂಕಾರ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಸೂಚನೆ ನೀಡಿದರು. ಇದನ್ನೂ ಓದಿ: ನಾನು ಕೀವ್‍ನಲ್ಲಿದ್ದೇನೆ, ತಪ್ಪಿಸಿಕೊಂಡು ಹೋಗಿಲ್ಲ: ಉಕ್ರೇನ್ ಅಧ್ಯಕ್ಷ

    ಸಭೆಯಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು, ಜಿಲ್ಲಾಧಿಕಾರಿ ಎಸ್. ಅಶ್ವತಿ,ಜಿ.ಪಂ.ಮುಖ್ಯಕಾರ್ಯ ನಿರ್ವಹಣಾಧಿಕಾರಿ ದಿವ್ಯಪ್ರಭು, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಂಗಳಮ್ಮ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಇಂದು ಮೇಲುಕೋಟೆಯ ಐತಿಹಾಸಿಕ ವೈರಮುಡಿ ಉತ್ಸವ

    ಇಂದು ಮೇಲುಕೋಟೆಯ ಐತಿಹಾಸಿಕ ವೈರಮುಡಿ ಉತ್ಸವ

    ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಚಲುವನಾರಯಣಸ್ವಾಮಿಯ ಐತಿಹಾಸಿಕ ವೈರಮುಡಿ ಉತ್ಸವ ಇಂದು ಕೊರೊನಾ ಹಿನ್ನೆಲೆ ಸರಳವಾಗಿ ಜರುಗಲಿದೆ. ಹೀಗಾಗಿ ಇಂದು ಬೆಳಗ್ಗೆ ಮಂಡ್ಯದ ಜಿಲ್ಲಾ ಖಜಾನೆಯಿಂದ ವಜ್ರ ಖಚಿತ ವೈರಮುಡಿ ಕಿರೀಟವನ್ನು ಮೇಲುಕೋಟೆಗೆ ಬಿಗಿ ಪೊಲೀಸ್ ಭದ್ರತೆಯೊಂದಿಗೆ ರವಾನೆ ಮಾಡಲಾಗಿದೆ.

    ಜಿಲ್ಲಾಧಿಕಾರಿ ಅಶ್ವಥಿ, ಎಸ್‍ಪಿ ಅಶ್ವಿನಿ, ಚಲುವನಾರಯಣಸ್ವಾಮಿ ದೇವಾಲಯದ ಸ್ಥಾನಿಕರ ಸಮ್ಮುಖದಲ್ಲಿ ಮೊದಲಿಗೆ ಆಭರಣಗಳ ಪರಿಶೀಲನೆ ಮಾಡಲಾಯಿತು. ಬಳಿಕ ಸಂಪ್ರದಾಯದಂತೆ ಜಿಲ್ಲಾಧಿಕಾರಿ ಅವರು ಪೂಜೆ ಸಲ್ಲಿಸಿದರು. ನಂತರ ವಾಡಿಕೆಯಂತೆ ಮಂಡ್ಯದ ಲಕ್ಷ್ಮಿ ಜನಾರ್ಧನ ದೇವಾಲಯದಲ್ಲೂ ಪೂಜೆ ಸಲ್ಲಿಸಲಾಯಿತು. ಮೇಲುಕೋಟೆಗೆ ಹೋಗುವ ಮಾರ್ಗ ಮಧ್ಯದಲ್ಲಿ ಬರುವ ಎಲ್ಲಾ ಗ್ರಾಮದ ಗ್ರಾಮಸ್ಥರು ಪೂಜೆ ಸಲ್ಲಿಸುವುದು ವಾಡಿಕೆ. ಸಂಜೆಯ ವೇಳೆಗೆ ಮೇಲುಕೋಟೆಗೆ ಕಿರೀಟ ತಲುಪಲಿದೆ.

    ರಾತ್ರಿ 8.30 ಕ್ಕೆ ಚಲುವನಾರಾಯಣಸ್ವಾಮಿಗೆ ಕಿರೀಟ ಧಾರಣೆ ಮಾಡಿ ವೈರಮುಡಿ ಉತ್ಸಚವನ್ನು ಆರಂಭ ಮಾಡಲಾಗುತ್ತದೆ. ಮಧ್ಯರಾತ್ರಿ 12.30ರ ವರೆಗೆ ರಾಜ ಬೀದಿಯಲ್ಲಿ ಐತಿಹಾಸಿಕ ಉತ್ಸವ ಜರುಗಲಿದೆ. ಕೊರೊನಾ ಅಟ್ಟಹಾಸ ಇರುವ ಕಾರಣ ಈ ಬಾರಿಯ ಉತ್ಸವಕ್ಕೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಭಕ್ತರಿಗೆ ನಿಷೇಧ ವಿಧಿಸಲಾಗಿದೆ. ಸ್ಥಳೀಯರು ಮಾತ್ರ ಈ ಉತ್ಸವದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಲ್ಗೊಳ್ಳಬೇಕೆಂದು ಹೀಗಾಗಲೇ ಜಿಲ್ಲಾಡಳಿತ ಸೂಚನೆ ನೀಡಲಾಗಿದೆ.

    ಉತ್ಸವದಲ್ಲಿ ಪಾಲ್ಗೊಳ್ಳದೇ ಇರುವ ಭಕ್ತರು ನಿರಾಶೆಯಾಗಬಾರದೆಂದು ಜಿಲ್ಲಾಡಳಿತ ಯು ಟೂಬ್ ಲೈವ್‍ನಲ್ಲಿ https://youtu.be/O7Y3Q2Oqk_8 ವೈರಮುಡಿ ಉತ್ಸವನ್ನು ಕಣ್ತುಂಬಿಕೊಳ್ಳಲು ವ್ಯವಸ್ಥೆ ಮಾಡಿದೆ.

  • ಅದ್ಧೂರಿಯಾಗಿ ನಡೆಯಿತು ವೈರಮುಡಿ ಉತ್ಸವ

    ಅದ್ಧೂರಿಯಾಗಿ ನಡೆಯಿತು ವೈರಮುಡಿ ಉತ್ಸವ

    – ಉತ್ಸವದಲ್ಲಿ ಭಾಗಿಯಾದ ಸುಧಾಮೂರ್ತಿ, ಯದುವೀರ್

    ಮಂಡ್ಯ: ವರ್ಷಕ್ಕೊಮ್ಮೆ ನಡೆಯುವ ವಿಶ್ವ ವಿಖ್ಯಾತ ವೈರಮುಡಿ ಉತ್ಸವದ ವೈಭವವನ್ನ ಕಣ್ತುಂಬಿಸಿಕೊಳ್ಳಲು ಸಾವಿರಾರು ಭಕ್ತ ಸಮೂಹವೇ ಹರಿದು ಬಂದಿತ್ತು. ಅಕ್ಷರಶಃ ಮೇಲುಕೋಟೆ ವೈರಮುಡಿ ಉತ್ಸವ ಮತ್ತೊಮ್ಮೆ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯ್ತು.

    ಮೇಲುಕೋಟೆಯ ವಿಶ್ವ ವಿಖ್ಯಾತ ಶ್ರೀ ಚಲುವ ನಾರಾಯಣಸ್ವಾಮಿಯ ಶ್ರೀ ವೈರಮುಡಿ ಕಿರೀಟ ಧಾರಣಾ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಸಾವಿರಾರು ಭಕ್ತರು ಉತ್ಸವ ಮೂರ್ತಿಯ ದರ್ಶನ ಪಡೆದು ಪುಣಿತರಾದರು. ಶನಿವಾರ ಬೆಳಗ್ಗೆ ಜಿಲ್ಲಾ ಖಜಾನೆಯಿಂದ ವೈರಮುಡಿ ಮತ್ತು ರಾಜಮುಡಿ ಕಿರೀಟಗಳನ್ನು ಮೇಲುಕೋಟೆಗೆ ತೆಗೆದುಕೊಂಡು ಬಂದರು. ನಂತರ ವೈರಮುಡಿ ಕಿರೀಟ, ಶಂಕ, ಗಧಾ, ಸೇರಿದಂತೆ ಪ್ರಮುಖ 14 ಆಭರಣಗಳಿಂದ ಉತ್ಸವ ಮೂರ್ತಿಗೆ ಅಲಂಕಾರ ಮಾಡಿ, ಮೆರವಣಿಗೆ ಮಾಡಲಾಯ್ತು.

    ಮೇಲುಕೋಟೆ ಉತ್ಸವ ಅಭಿವೃದ್ಧಿಗೆ ಇನ್ಫೋಸಿಸ್ ಫೌಂಡೇಶನ್ ಮುಂದಾಗಿತ್ತು. ಇದೇ ಮೊದಲ ಬಾರಿಗೆ ಉತ್ಸವದಲ್ಲಿ ಭಾಗಿಯಾಗದ ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ, ಈ ಉತ್ಸವ ತುಂಬಾ ಚೆನ್ನಾಗಿದೆ. ಉತ್ಸವದಲ್ಲಿ ಹಬ್ಬದ ವಾತಾವರಣ ಅನಾವರಣಗೊಂಡಿದೆ ಅಂದರು. ಇನ್ನು ಯದುವೀರ್ ಒಡೆಯರ್ ಕೂಡ, ಈ ಉತ್ಸವ ಕುರಿತು ಸಂತಸ ವ್ಯಕ್ತಪಡಿಸಿದರು. ಈ ಕ್ಷೇತ್ರ ಐತಿಹಾಸಿಕ ಹಿನ್ನೆಲೆಯನ್ನು ಹೊಂದಿದೆ. ಮೈಸೂರು ಅರಮನೆಗೂ ಈ ದೇವಸ್ಥಾನಕ್ಕೂ ಅವಿನಭಾವ ಸಂಬಂಧ ಇದೆ ಎಂದು ಹೇಳಿದರು.

    ಐತಿಹಾಸಿಕ ಹಿನ್ನೆಲೆಯುಳ್ಳ ವೈರಮುಡಿ ಉತ್ಸವ ಭಾರೀ ಪೊಲೀಸ್ ಬಿಗಿ ಭದ್ರತೆಯಲ್ಲಿ ಸುಸೂತ್ರವಾಗಿ ನಡೆಯಿತು. ಆದರೆ ಉತ್ಸವ ಆರಂಭಕ್ಕೂ ಮುನ್ನ ಕೆಲವು ಪೊಲೀಸರು ಮಾಧ್ಯಮದವರ ಮೇಲೆ ಅಂಧಾ ದರ್ಬಾರ್ ನಡೆಸಿದರು. ನಂತರ ಎಸ್‍ಪಿ ಶಿವ ಪ್ರಕಾಶ್ ಮಧ್ಯೆ ಪ್ರವೇಶಿಸಿ, ಮಾಧ್ಯಮದವರಿಗೆ ಮುಕ್ತ ವರದಿ ಮಾಡೋದಕ್ಕೆ ಅವಕಾಶ ಮಾಡಿಕೊಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ವೈರಮುಡಿ ಉತ್ಸವಕ್ಕೆ ವಿಶೇಷ ಸಾರಿಗೆ ಸೌಲಭ್ಯ

    ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ವೈರಮುಡಿ ಉತ್ಸವಕ್ಕೆ ವಿಶೇಷ ಸಾರಿಗೆ ಸೌಲಭ್ಯ

    ಬೆಂಗಳೂರು: ಮೇಲುಕೋಟೆಯಲ್ಲಿ ನಡೆಯುವ ವೈರಮುಡಿ ಉತ್ಸವಕ್ಕೆ ಆಗಮಿಸುವ ಭಕ್ತರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದೆ.

    ಮಾರ್ಚ್ 26 ರಿಂದ ಆರಂಭವಾಲಿರುವ ಉತ್ಸವಕ್ಕೆ ಬೇರೆ ಬೇರೆ ಪ್ರದೇಶಗಳಿಂದ ಭಕ್ತರು, ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ  ಬೆಂಗಳೂರಿನಿಂದ ಮೇಲುಕೋಟೆಗೆ ಪ್ರಯಾಣಿಸಲು ನಿಗಮದಿಂದ ಎಸಿ ಡಿಲಕ್ಸ್ ವಾಹನ ಸೌಲಭ್ಯದೊಂದಿಗೆ, ಒಂದು ದಿನದ ವ್ಯವಸ್ಥಿತ ಪ್ರವಾಸವನ್ನ ಏರ್ಪಡಿಸಿದೆ.

    ಈ ಕುರಿತು ನಿಗಮ ಪತ್ರಿಕಾ ಪ್ರಕಟಣೆಯನ್ನು ನೀಡಿದ್ದು, ಪ್ರವಾಸ ಕೈಗೊಳ್ಳಲು ಇಚ್ಚಿಸುವವರಿಗೆ ಮುಂಗಡವಾಗಿ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯನ್ನು ನಿಗಮದ ಪ್ರಧಾನ ಕಚೇರಿ ಯಶವಂತಪುರ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದ ಕೌಂಟರ್ ಸಂಪರ್ಕಿಸಲು ಕೋರಿದೆ.

    ಟಿಕೆಟ್ ಮುಂಗಡವಾಗಿ ಕಾಯ್ದಿರಿಸಲು ನಿಗಮದ ಏಜೆಂಟ್ ಅವರ ಸಂಪರ್ಕಿಸಿ ಸಹಕಾರ ಪಡೆಯಬಹುದು. ಅಲ್ಲದೇ ನಿಗಮದ ಆನ್ ಲೈನ್ ತಾಣದಲ್ಲೂ ಮುಂಗಡ ಬುಕಿಂಗ್ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದೆ. ಪ್ರತಿ ಪ್ರಯಾಣಿಕರಿಗೆ 765 ರೂ. ದರ ನಿಗದಿ ಪಡಿಸಿದೆ. ಆನ್‍ಲೈನ್ ನಲ್ಲಿ  kstdc.co  ವೆಬ್‍ಸೈಟಿಗೆ ತೆರಳಿ ಟಿಕೆಟ್ ಬುಕ್ ಮಾಡಬಹುದು.

  • ಮೇಲುಕೋಟೆಯಲ್ಲಿ ವೈರಮುಡಿ ವೈಭವ- ಎಲ್ಲೆಲ್ಲೂ ಚಲುವನಾರಾಯಣಸ್ವಾಮಿಯ ನಾಮಸ್ಮರಣೆ

    ಮೇಲುಕೋಟೆಯಲ್ಲಿ ವೈರಮುಡಿ ವೈಭವ- ಎಲ್ಲೆಲ್ಲೂ ಚಲುವನಾರಾಯಣಸ್ವಾಮಿಯ ನಾಮಸ್ಮರಣೆ

    ಮಂಡ್ಯ: ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ರಾತ್ರಿ ಸಾಕ್ಷಾತ್ ಭಗವಂತನೇ ಧರೆಗಿಳಿದ ಭಕ್ತಿ-ಭಾವ ಮೇಳೈಸಿತ್ತು. ವಿಶ್ವದಲ್ಲಿಯೇ ಪ್ರಸಿದ್ಧವಾದ ವೈರಮುಡಿ ಬ್ರಹ್ಮೋತ್ಸವದ ಸಡಗರ-ಸಂಭ್ರಮ ಎಲ್ಲೆ ಮೀರಿತ್ತು. ಶ್ರೀದೇವಿ-ಭೂದೇವಿಯರೊಂದಿಗೆ ರತ್ನಖಚಿತ ವೈರಮುಡಿ ಕಿರೀಟ ಧರಿಸಿ ಗರುಡಾರೂಢನಾದ ಶ್ರೀಚಲುವನಾರಾಯಸ್ವಾಮಿಯ ದರ್ಶನದಿಂದ ನೆರೆದಿದ್ದ ಜನಸ್ತೋಮ ಪಾವನರಾದರು.

    ಅಧಿಕಾರಿಗಳು ಹಾಗೂ ದೇವಸ್ಥಾನದ ಸ್ಥಾನಿಕರು ರಾಜಮುಡಿಯ ಚಿನ್ನಾಭರಣಗಳ ಪಾರ್ಕಾವಣೆ ಮಾಡಿ ದೇವರಿಗೆ ವೈರಮುಡಿಯನ್ನು ಧರಿಸಲಾಯಿತು. ಈ ವೇಳೆ ಯಾಗಶಾಲೆಯಲ್ಲಿ ಹೋಮ ನಡೆಸಿ ಗರುಡ ದೇವರ ಉತ್ಸವ ನಡೆಯುತ್ತಿದ್ದಂತೆ ಮಹಾಮಂಗಳಾರತಿಯೊಂದಿಗೆ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

    ಉತ್ಸವ ದೇವಸ್ಥಾನದಿಂದ ಹೊರಬರುತ್ತಿದ್ದಂತೆ ಹೊರಗೆ ನೆರೆದಿದ್ದ ಲಕ್ಷಾಂತರ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ನೂಕುನುಗ್ಗಲಿನಲ್ಲಿ ಚಲುವನಾರಾಯಣಸ್ವಾಮಿಯ ದರ್ಶನ ಪಡೆದು ಧನ್ಯರಾದರು. ದೇವಾಲಯದ ಮುಖ್ಯದ್ವಾರದಿಂದ ಪ್ರಾರಂಭಗೊಂಡ ಉತ್ಸವ, ಮುಂಜಾನೆವರೆಗೂ ಚತುರ್ವೀದಿಗಳಲ್ಲಿ ವೈಭವದಿಂದ ಸಾಗಿತು. ದಕ್ಷಿಣ ಬದರೀಕಾಶ್ರಮ ಎಂದೇ ಪ್ರಸಿದ್ಧಿ ಪಡೆದ ಮಂಡ್ಯ ಜಿಲ್ಲೆಯ ಈ ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ ಶ್ರದ್ಧಾ ಭಕ್ತಿಯಿಂದ ಅದ್ಧೂರಿಯಾಗಿ ನೆರವೇರಿತು. ಕರ್ನಾಟಕವಷ್ಟೇ ಅಲ್ಲದೆ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಸೇರಿದಂತೆ ನಾನಾ ರಾಜ್ಯಗಳು ಹಾಗೂ ಹೊರ ದೇಶದ ಭಕ್ತರು ಆಗಮಿಸಿ ಗೋವಿಂದ ನಾಮ ಸ್ಮರಣೆ ಮಾಡಿದ್ರು.

    ಬೆಟ್ಟದ ಶ್ರೀಯೋಗಾನರಸಿಂಹಸ್ವಾಮಿ ದೇವಸ್ಥಾನದ ರಾಜಗೋಪುರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿತು. ಇಡೀ ಊರ ಬೀದಿಗಳು ದೀಪಗಳಿಂದ ಜಗಮಗಿಸಿ ಉತ್ಸವದ ರಂಗು ಹೆಚ್ಚಿಸಿತು. ಆದ್ರೆ ಎಲ್ಲಕ್ಕಿಂತ ಮುಖ್ಯವಾಗಿ ಈ ಬಾರಿ ಚಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವದಲ್ಲಿ ಮಳೆಯ ಸಿಂಚನವಾಯ್ತು. ತುಂತುರು ಮಳೆಯಲ್ಲೇ ಭಕ್ತರು ಚಲುವನಾರಾಯಣಸ್ವಾಮಿಯ ದರ್ಶನ ಪಡೆದು ಪುನೀತರಾದ್ರು. ಈ ಮಳೆ ರಾಜ್ಯದಲ್ಲಿ ತಲೆದೋರಿರುವ ಬರಗಾಲ ನೀಗಿ ಸಮೃದ್ಧಿಯನ್ನ ನೀಡಲಿದೆ. ಅದಕ್ಕೆ ಚಲುವನಾರಾಯಣಸ್ವಾಮಿಯ ಆಶಿರ್ವಾದ ಇದೆ ಎಂದು ಭಕ್ತಿಪರವಶರಾದ್ರು.

     

  • ರಾಜ್ಯಾದ್ಯಂತ ಶ್ರೀರಾಮನವಮಿ ಸಂಭ್ರಮ – ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ

    ರಾಜ್ಯಾದ್ಯಂತ ಶ್ರೀರಾಮನವಮಿ ಸಂಭ್ರಮ – ಮೇಲುಕೋಟೆಯಲ್ಲಿ ವೈರಮುಡಿ ಬ್ರಹ್ಮೋತ್ಸವ

    ಬೆಂಗಳೂರು/ಮಂಡ್ಯ: ರಾಜ್ಯಾದ್ಯಂತ ಇಂದು ಶ್ರೀರಾಮನವಮಿಯನ್ನ ಶ್ರದ್ಧಾಭಕ್ತಿಯಿಂದ ಆಚರಿಸಲಾಗ್ತಿದೆ. ಮುಂಜಾನೆಯೇ ದೇವಾಲಯಗಳಲ್ಲಿ ಭಕ್ತರು ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸ್ತಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಬಳ್ಳಾರಿ, ಕಲಬುರಗಿಯಲ್ಲಿ ಜನ ಈ ಬೇಸಿಗೆಯಲ್ಲಿ ಪಾನಕ, ನೀರುಮಜ್ಜಿಗೆ, ಕೋಸಂಬರಿಯನ್ನ ಸಿದ್ಧ ಮಾಡ್ತಿದ್ದಾರೆ.

    ಮಂಡ್ಯದ ಪಾಂಡವಪುರದ ಮೇಲುಕೋಟೆಯಲ್ಲಿ ಐತಿಹಾಸಿಕ ಚಲುವನಾರಾಯಣಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಮನೆ ಮಾಡಿದೆ. ಉತ್ಸವಕ್ಕೆ ಸಾವಿರಾರು ಜನರು ದೇಶದ ನಾನಾ ಭಾಗಗಳಿಂದ ಆಗಮಿಸಲಿದ್ದಾರೆ. ಚಲುವನಾರಾಯಣನಿಗೆ ವೈರಮುಡಿ ಕಿರೀಟಧಾರಣ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಮಂಡ್ಯ ಜಿಲ್ಲಾ ಖಜಾನೆಯಲ್ಲಿರೋ ವೈರಮುಡಿ ಮತ್ತು ಆಭರಣವನ್ನ ಅಧಿಕಾರಿಗಳ ಸಮ್ಮುಖದಲ್ಲಿ ಹೊರ ತೆಗೆಯಲಾಗುತ್ತೆ. ನಂತರ ವಿಶೇಷ ಪೂಜೆ ಬಳಿಕ ಬಿಗಿ ಭದ್ರತೆಯಲ್ಲಿ ರವಾನೆಯಾಗೋ ವೈರಮುಡಿ ಸಂಜೆ ವೇಳೆಗೆ ಮೇಲುಕೋಟೆಗೆ ತಲುಪಲಿದೆ.

    ಮೇಲುಕೋಟೆಗೆ ಕೊಂಡೊಯ್ಯೋ ದಾರಿಯುದ್ದಕ್ಕೂ ಗ್ರಾಮಸ್ಥರು, ಭಕ್ತರು ವೈರಮುಡಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ವೈರಮುಡಿ ಕಿರೀಟ ಧಾರಣೆಯೊಂದಿಗೆ ಬ್ರಹ್ಮೋತ್ಸವ ನಡೆಯಲಿದೆ.