Tag: ವೈರಲ್ ವಿಡಿಯೋ

  • ಸೈಕಲ್ ಗುದ್ದಿದ ರಭಸಕ್ಕೆ ಕಾರಿನ ಬಂಪರ್ ನಜ್ಜುಗುಜ್ಜಾಯ್ತು – ವಿಡಿಯೋ ನೋಡಿ

    ಸೈಕಲ್ ಗುದ್ದಿದ ರಭಸಕ್ಕೆ ಕಾರಿನ ಬಂಪರ್ ನಜ್ಜುಗುಜ್ಜಾಯ್ತು – ವಿಡಿಯೋ ನೋಡಿ

    ಬೀಜಿಂಗ್: ಸೈಕಲ್ ಗುದ್ದಿದ ರಭಸಕ್ಕೆ ಕಾರೊಂದರ ಮುಂಭಾಗ ನಜ್ಜುಗುಜ್ಜಾಗಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಫೋಟೋ ನೋಡಿದ ನೆಟ್ಟಿಗರು ಇದು ಸುಳ್ಳು ಸುದ್ದಿಯಾಗಿದ್ದು, ಈ ರೀತಿ ಆಗಲು ಸಾಧ್ಯವಿಲ್ಲ ಎಂದು ಹೇಳಿ ಕಮೆಂಟ್ ಮಾಡುತ್ತಿದ್ದಾರೆ. ಆದರೆ ಅಪಘಾತ ನಿಜವಾಗಿ ನಡೆದಿದ್ದು ಪೊಲೀಸರೇ ಅಧಿಕೃತವಾಗಿ ವಿಡಿಯೋ ರಿಲೀಸ್ ಮಾಡಿ ಸ್ಪಷ್ಟಪಡಿಸಿದ್ದಾರೆ.

    ನಡೆದಿದ್ದು ಎಲ್ಲಿ?
    ದಕ್ಷಿಣ ಚೀನಾದ ಶೇನ್ಜೆನ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸೈಕಲ್ ಸವಾರ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಬಂದ ಕಾರಣ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೈಕಲ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು ಪಾರಾಗಿದ್ದಾನೆ.

    ಈ ಫೋಟೋ ವೈರಲ್ ಆಗುತ್ತಿದ್ದಂತೆ ಮಾಧ್ಯಮಗಳು ಪೊಲೀಸ್ ಠಾಣೆಯನ್ನು ಸಂಪರ್ಕಿಸಿವೆ. ಈ ವೇಳೆ ಪೊಲೀಸರು ಅಪಘಾತ ನಡೆದ ಸ್ಥಳದ ವಿಡಿಯೋವನ್ನು ರಿಲೀಸ್ ಮಾಡಿದ್ದಾರೆ.

    ನಾಯಿ ಕಚ್ಚಿದರೆ ಸುದ್ದಿಯಲ್ಲ, ಮನುಷ್ಯ ನಾಯಿಗೆ ಕಚ್ಚಿದರೆ ಸುದ್ದಿ ಎನ್ನುವಂತೆ ಈಗ ಸೈಕಲ್ ಗುದ್ದಿದ ರಭಸಕ್ಕೆ ಕಾರಿನ ಬಂಪರ್ ನಜ್ಜುಗುಜ್ಜಾಗಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮನೆಯ ಬುಡದಲ್ಲಿ 30ಕ್ಕೂ ಅಧಿಕ ಹಾವುಗಳು ಪತ್ತೆ-ವಿಡಿಯೋ ನೋಡಿದ್ರೆ ಮೈ ಜುಮ್ಮೆನ್ನುತ್ತೆ

    ಮನೆಯ ಬುಡದಲ್ಲಿ 30ಕ್ಕೂ ಅಧಿಕ ಹಾವುಗಳು ಪತ್ತೆ-ವಿಡಿಯೋ ನೋಡಿದ್ರೆ ಮೈ ಜುಮ್ಮೆನ್ನುತ್ತೆ

    ಗೊರ್ಮಾನ್(ಟೆಕ್ಸಾಸ್): ತಾತ್ಕಲಿಕ ಮನೆಯ (ಕಟ್ಟಿಗೆ ಮನೆ) ಬುಡದಲ್ಲಿ 30 ಅಧಿಕ ಹಾವುಗಳು ಪತ್ತೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಬೇಟೆಗೆ ತೆರಳುವರಿಗಾಗಿ ನಿರ್ಮಿಸಲಾಗಿದ್ದ ಮನೆಯ ಬುಡದಲ್ಲಿ ಹಾವುಗಳು ಪತ್ತೆಯಾಗಿದ್ದು, ವಿಡಿಯೋ ನೋಡಿದ ನೆಟ್ಟಿಗರು ಶಾಕಿಂಗ್ ಪ್ರತಿಕ್ರಿಯೆಗಳನ್ನು ಕಮೆಂಟ್ ಮೂಲಕ ನೀಡಿದ್ದಾರೆ. ಬಾಬಿ ಕೋವನ್ ಎಂಬವರ ಮನೆಯ ಅಡಿಯಲ್ಲಿ ಹಾವುಗಳು ಪತ್ತೆಯಾಗಿದ್ದು, ಬಾಬಿ ತಮ್ಮ ಫೇಸ್‍ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದಾರೆ. ಟೆಕ್ಸಾಸ್ ನ ಗೋರ್ಮಾನ್ ಎಂಬಲ್ಲಿ ಮಂಗಳವಾರ ಹಾವುಗಳು ಕಂಡುಬಂದಿವೆ.

    ಸಾಂದರ್ಭಿಕ ಚಿತ್ರ

    ಮಂಗಳವಾರ ಬಾಬಿ ತನ್ನ ಗೆಳೆಯರೊಂದಿಗೆ ಮನೆಯಲ್ಲಿ ಕೆಲಸದಲ್ಲಿ ನಿರರತಾಗಿದ್ದರು. ಈ ವೇಳೆ ಮನೆಯ ತಳದ ಕಟ್ಟಿಗೆ ಚಿಕ್ಕ ರಂಧ್ರದಿಂದ ಹಾವು ಬಂದಿದೆ. ಹೀಗೆ ಒಂದರ ನಂತರ ಎರಡ್ಮೂರು ಹಾವುಗಳು ಕಾಣಿಸಿಕೊಂಡಿವೆ. ಭಯಬೀತರಾದ ಬಾಬಿ ಗೆಳೆಯರೊಂದಿಗೆ ಚರ್ಚಿಸಿ ಮನೆಯ ತಳಭಾಗವನ್ನು ಎತ್ತಿದ್ದಾರೆ. ಮನೆಯ ತಳಭಾಗ ಮೇಲೆ ಎತ್ತಿದ್ದ ಕೂಡಲೇ ಸುಮಾರು 30ಕ್ಕೂ ಅಧಿಕ ಹಾವುಗಳು ಕಾಣಿಸಿಕೊಂಡಿವೆ.

    ಫೇಸ್‍ಬುಕ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡ ಕೆಲವೇ ಗಂಟೆಯಲ್ಲಿ ವೈರಲ್ ಆಗಿದೆ. ವಿಡಿಯೋ ನೋಡಿದ ಹಲವರು ಅಲ್ಲೇ ಅವುಗಳಿಗೆ ಬೆಂಕಿ ಹಚ್ಚಿ. ಅಪಾಯಕಾರಿ ಹಾವುಗಳು ಎಂದು ಬರೆದ್ರೆ. ಪ್ರಾಣಿಗಳಿಗೂ ಜೀವವಿದೆ ರಕ್ಷಿಸಿ ಎಂದು ಕಮೆಂಟ್ ಮಾಡಿದ್ದಾರೆ.

    ಬಾಬಿ ಸ್ಥಳಕ್ಕೆ ಉರಗ ತಜ್ಞರನ್ನು ಕರೆಸಿ ಎಲ್ಲ ಹಾವುಗಳನ್ನು ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    https://www.facebook.com/bobbyjessica.cowan/videos/10217172379971129/

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೂಡ್ಸ್ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ- ವೈರಲ್ ವಿಡಿಯೋ ನೋಡಿ

    ಗೂಡ್ಸ್ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ- ವೈರಲ್ ವಿಡಿಯೋ ನೋಡಿ

    ಅಮರಾವತಿ: ಗೂಡ್ಸ್ ರೈಲಿನ ಅಡಿ ಮಲಗಿ ವ್ಯಕ್ತಿಯೊಬ್ಬರು ತನ್ನ ಪ್ರಾಣವನ್ನು ಉಳಿಸಿಕೊಂಡ ಘಟನೆ ಆಂಧ್ರಪ್ರದೇಶದ ಅನಂತಪುರ ರೈಲು ನಿಲ್ದಾಣದಲ್ಲಿ ನಡೆದಿದೆ.

    ಶನಿವಾರ ರೈಲು ನಿಲ್ದಾಣದಲ್ಲಿ ಲಕ್ನೋ-ಯಶವಂತಪುರ ಟ್ರೈನ್‍ನಿಂದ ಇಳಿದ ಅಪರಿಚಿತ ವ್ಯಕ್ತಿಯೊಬ್ಬರು, ತಮ್ಮ 2ನೇ ಪ್ಲಾಟ್ ಫಾರಂನಿಂದ 1ನೇ ಪ್ಲಾಟ್ ಫಾರಂಗೆ ಹೋಗಲು ಮೇಲುಸೇತುವೆಯನ್ನು ಬಳಸದೇ, ರೈಲ್ವೇ ಹಳಿಗಳನ್ನು ದಾಟುವ ಯತ್ನ ಮಾಡುತ್ತಿದ್ದರು. ಈ ವೇಳೆ ಅದೇ ಮಾರ್ಗವಾಗಿ ಗೂಡ್ಸ್ ರೈಲು ಬಂದಿದೆ.

    ತಾನಿದ್ದ ಹಳಿಯಲ್ಲೇ ರೈಲು ಬರುತ್ತಿರುವುದನ್ನು ಅರಿತ ವ್ಯಕ್ತಿ ಧೃತಿಗೆಡದೇ ಟ್ರಾಕ್ ಮೇಲೆಯೇ ಮಲಗಿದ್ದಾರೆ. ನಂತರ ಗೂಡ್ಸ್ ರೈಲು ಆ ವ್ಯಕ್ತಿಯ ಮೇಲೆ ಹರಿದು ಹೋಗಿದೆ. ರೈಲು ಹೋದ ಬಳಿಕ ತನ್ನಪಾಡಿಗೆ ತಾನು ಎದ್ದು, ಏನೂ ಆಗದಂತೆ ವ್ಯಕ್ತಿ ಹೋಗಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

    ಅನಂತಪುರ ರೈಲ್ವೇ ಪೊಲೀಸರು ಪ್ರತಿಕ್ರಿಯಿಸಿ, ವ್ಯಕ್ತಿಯೊಬ್ಬರು ರೈಲ್ವೇ ಹಳಿಯನ್ನು ದಾಟುತ್ತಿರುವಾಗ ಏಕಾಏಕಿ ಗೂಡ್ಸ್ ರೈಲು ಆಗಮಿಸಿತ್ತು. ಈ ವೇಳೆ ವ್ಯಕ್ತಿ ಹಳಿ ಮೇಲೆಯೇ ಮಲಗಿಕೊಂಡು, ಆಗಬಹುದಾಗಿದ್ದ ಅನಾಹುತದಿಂದ ಪಾರಾಗಿದ್ದಾರೆ. ಆದರೆ ಈ ಬಗ್ಗೆ ರೈಲ್ವೇ ನಿಲ್ದಾಣದಲ್ಲಿದ್ದ ಯಾವುದೇ ಪ್ರಯಾಣಿಕರು ನಮ್ಮ ಗಮನಕ್ಕೆ ತಂದಿರಲಿಲ್ಲ. ವಿಡಿಯೋ ವೈರಲ್ ಬಳಿಕ ಮಾಹಿತಿ ಲಭಿಸಿದೆ. ಈ ಘಟನೆ ಶನಿವಾರ ನಡೆದಿದೆ. ಪ್ರಯಾಣಿಕ ಹಳಿಯನ್ನು ದಾಟುವುದಕ್ಕೆ ಮೇಲುಸೇತುವೆಯನ್ನು ಬಳಸದೇ ಇರುವುದೇ ಕಾರಣ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಳ್ಳತನಗೈದು ಪರಾರಿಯಾಗುವ ವೇಳೆ ಸಿಸಿಟಿವಿ ಕ್ಯಾಮೆರಾ ಮುಂದೆ ಕಳ್ಳನ ಡ್ಯಾನ್ಸ್!

    ಕಳ್ಳತನಗೈದು ಪರಾರಿಯಾಗುವ ವೇಳೆ ಸಿಸಿಟಿವಿ ಕ್ಯಾಮೆರಾ ಮುಂದೆ ಕಳ್ಳನ ಡ್ಯಾನ್ಸ್!

    ಗಾಂಧಿನಗರ: ಕಳ್ಳರ ಗುಂಪೊಂದು ಕಳ್ಳತನ ಮಾಡಿ ಪರಾರಿಯಾಗುವ ವೇಳೆ ತಂಡದಲ್ಲಿಯ ಕಳ್ಳನೊಬ್ಬ ಸಿಸಿಟಿವಿ ಕ್ಯಾಮೆರಾ ಮುಂದೆ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

    ಶನಿವಾರ ರಾತ್ರಿ ಗಾಂಧಿ ನಗರ ಜಿಲ್ಲೆಯ ಸರಗಾಸನ ಎಂಬಲ್ಲಿ ಈ ಘಟನೆ ನಡೆದಿದೆ. ಕಳ್ಳರ ಗುಂಪಿನಲ್ಲಿದ್ದ ಓರ್ವ ಬೆಡ್ ಶೀಟ್ ಹೊದ್ದುಕೊಂಡು ಡ್ಯಾನ್ಸ್ ಮಾಡಿ ಪರಾರಿಯಾಗಿದ್ದಾನೆ. ಶನಿವಾರ ಅಪಾರ್ಟ್ ಮೆಂಟ್ ಗೆ ನುಗ್ಗಿದ ಮೂವರು ಕಳ್ಳರು ಎರಡು ಫ್ಲ್ಯಾಟ್ ನಲ್ಲಿ ಕೈಚಳಕ ತೋರಿಸಿದ್ದಾರೆ. ಕಳ್ಳತನದ ಬಳಿಕ ಕಳ್ಳರು ಓಡಿ ಹೋಗುವ ದೃಶ್ಯಗಳು ಕಟ್ಟಡದ ಪ್ರವೇಶ ದ್ವಾರದ ಬಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ವಿಡಿಯೋವನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ.

    ಅರವಿಂದ್ ಪಟೇಲ್ ಎಂಬವರ ಮನೆಗೆ ನುಗ್ಗಿದ ಕಳ್ಳರು 1.81 ಲಕ್ಷ ರೂ. ದೋಚಿದ್ದಾರೆ. ನಂತರ ಅದೇ ಕಟ್ಟಡದ ಕಲ್ಪನಾ ಶುಕ್ಲಾ ಎಂಬ ಮಹಿಳೆ ಮನೆಗೆ ನುಗ್ಗಿ 61 ಸಾವಿರ ನಗದು ಮತ್ತು ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಕಟ್ಟಡದಿಂದ ಹೊರ ಹೋಗುತ್ತಿರುವಾಗ ಗುಂಪಿನಲ್ಲಿದ್ದ ಕಳ್ಳನೊಬ್ಬ ಸಿಸಿಟಿವಿ ಡ್ಯಾನ್ಸ್ ಮಾಡಿದ್ದಾನೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

  • ಮುಸ್ಲಿಂ ಯುವಕನ ಜೊತೆಯಲ್ಲಿದ್ದ ಹಿಂದೂ ಯುವತಿಗೆ ಥಳಿಸಿದ ಯುಪಿ ಮಹಿಳಾ ಪೊಲೀಸ್!

    ಮುಸ್ಲಿಂ ಯುವಕನ ಜೊತೆಯಲ್ಲಿದ್ದ ಹಿಂದೂ ಯುವತಿಗೆ ಥಳಿಸಿದ ಯುಪಿ ಮಹಿಳಾ ಪೊಲೀಸ್!

    ಲಕ್ನೋ: ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಇದ್ದಳು ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಮಹಿಳಾ ಪೊಲೀಸ್ ಆಕೆಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

    ಈ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಹಿಳಾ ಪೊಲೀಸ್ ಯುವತಿಗೆ ಥಳಿಸುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಇದೀಗ ಮಹಿಳಾ ಪೊಲೀಸನ್ನ ಕೆಲಸದಿಂದ ವಜಾ ಮಾಡಲಾಗಿದೆ.

    ವಿಡಿಯೋದಲ್ಲೇನಿದೆ?:
    ಯುವತಿಯನ್ನು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ. ಯುವತಿ ಮಹಿಳಾ ಪೊಲೀಸ್ ಪಕ್ಕದಲ್ಲೇ ಕುಳಿತಿದ್ದಾಳೆ. ಈ ವೇಳೆ ಪೊಲೀಸ್ ಕಾನ್ಸ್ ಸ್ಟೇಬಲ್, ಯುವತಿಗೆ ಅಸಭ್ಯ ಶಬ್ಧಗಳಿಂದ ಬೈದು, ದೈಹಿಕ ಹಿಂಸೆ ನೀಡಿದ್ದಾಳೆ. ಅಲ್ಲದೇ ನೀನ್ಯಾಕೆ ಮುಸ್ಲಿಂ ಯುವಕನನ್ನು ಫ್ರೆಂಡ್ ಮಾಡಿಕೊಂಡಿದ್ದೀಯಾ ಅಂತ ಪ್ರಶ್ನಿಸಿದ್ದಾಳೆ. ಈ ಎಲ್ಲಾ ಘಟನೆಗಳನ್ನು ವಾಹನದಲ್ಲಿ ಅವರಿಬ್ಬರ ಎದುರು ಕುಳಿತಿದ್ದ ಪೊಲೀಸ್ ವಿಡಿಯೋ ಮಾಡಿದ್ದು, ಆ ಬಳಿಕ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಅಲ್ಲದೇ ವಿಡಿಯೋ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಆಕ್ರೋಶವ್ಯಕ್ತವಾಗಿತ್ತು. ಯುವತಿಯ ಮೇಲೆ ಕೈ ಮಾಡಿದ್ದ ಮಹಿಳಾ ಪೊಲೀಸ್ ಕಾನ್ಸ್ ಸ್ಟೇಬಲ್ ವಿರುದ್ಧ ಟ್ವಿಟ್ಟಿಗರು ಕಿಡಿಕಾರಿದ್ದರು.

    `ಈವರೆಗೆ ಕೋಮುವಾದದ ಬೀಜ ಬಿತ್ತುತ್ತವೆ ಅಂತ ರಾಜಕೀಯ ಪಕ್ಷಗಳ ವಿರುದ್ಧ ಮಾತನಾಡುತ್ತಿದ್ದೆವು. ಆದ್ರೆ ಇದೀಗ ಪಕ್ಷಗಳಿಗಿಂತ ಪೊಲೀಸರೇ ಕೋಮವಾದದ ಬೀಜ ಬಿತ್ತುತ್ತಿದ್ದಾರೆ. ಹೀಗಾಗಿ ಯುವತಿ ಮೇಲೆ ಕೈ ಮಾಡಿದ್ದ ಮಹಿಳಾ ಪೊಲೀಸ್ ಕಾನ್ಸ್ ಸ್ಟೇಬಲ್ ವಿರುದ್ಧ ಕ್ರಮಕೈಗೊಳ್ಳಬೇಕು. ಹಾಗೆಯೇ ಈ ಪ್ರಕರಣಕ್ಕೆ ಮುಖ್ಯಮಂತ್ರಿ ಯೋಗಿ ಆದಿನಾಥ್ ಅವರು ಮಧ್ಯಪ್ರವೇಶಿಸಬೇಕು’ ಅಂತ ಟ್ವಿಟ್ಟಗನೊಬ್ಬ ಬೇಡಿಕೆ ಇಟ್ಟಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಸ್ತೆಯಲ್ಲಿ ಹೋಗ್ತಿದ್ದ ಹಾವಿನ ಮರಿಯನ್ನು ಹಿಡಿದು ತಿಂದೇ ಬಿಟ್ಟ

    ರಸ್ತೆಯಲ್ಲಿ ಹೋಗ್ತಿದ್ದ ಹಾವಿನ ಮರಿಯನ್ನು ಹಿಡಿದು ತಿಂದೇ ಬಿಟ್ಟ

    ಪಾಟ್ನಾ: ಪಾನಮತ್ತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಹಾವಿನ ಮರಿಯನ್ನು ತಿಂದು ಸಾವನ್ನಪ್ಪಿರುವ ವಿಚಿತ್ರ ಘಟನೆ ಶನಿವಾರ ನಡೆದಿದೆ.

    ಮಹಿಪಾಲ್ ಹಾವಿನ ಮರಿ ತಿಂದು ಸಾವನ್ನಪ್ಪಿದ ವ್ಯಕ್ತಿ. ಅಮರೋಹಾ ಜಿಲ್ಲೆಯ ನಿವಾಸಿಯಾಗಿದ್ದ ಮಹಿಪಾಲ್ ಶನಿವಾರ ನಶೆಯಲ್ಲಿ ತೂರಾಡುತ್ತಾ ಬರುತ್ತಿದ್ದನು. ಈ ಮಧ್ಯೆ ಆತನಿಗೆ ಪುಟಾಣಿ ಹಾವಿನ ಮರಿಯೊಂದು ಸಿಕ್ಕಿದೆ. ಕೂಡಲೇ ಹಾವಿನ ಮರಿಯನ್ನು ಕೈಯಲ್ಲಿ ಹಿಡಿದುಕೊಂಡ ಮಹಿಪಾಲ್ ಅದರೊಂದಿಗೆ ಆಟವಾಡಿದ್ದಾನೆ.

    ರಸ್ತೆಯಲ್ಲಿ ನಿಂತಿದ್ದ ಮಹಿಪಾಲ್ ನೋಡ ನೋಡುತ್ತಿದ್ದಂತೆ ಜೀವಂತ ಹಾವಿನ ಮರಿಯನ್ನು ಬಾಯಿಗೆ ಹಾಕಿಕೊಂಡಿದ್ದಾನೆ. ಮರಿಯನ್ನ ಹೊರ ಉಗುಳದೇ ಒಂದೆರಡು ಸಾರಿ ಅಗಿದು ನುಂಗಿದ್ದಾನೆ ಎಂದು ಹೇಳಲಾಗಿದೆ. ಹಾವಿನ ಮರಿಯನ್ನು ಬಾಯಿಯಲ್ಲಿ ಹಾಕಿಕೊಳ್ಳತ್ತಿದ್ದಂತೆ ಜನರು ಸೇರಿದ್ದಾರೆ. ಆರಂಭದಲ್ಲಿ ಆರೋಗ್ಯವಾಗಿ ಕಾಣಿಸುತ್ತಿದ್ದರೂ, ಕೆಲ ಸಮಯದ ಬಳಿಕ ಆತನ ದೇಹದಲ್ಲಿ ಬದಲಾವಣೆ ಕಾಣಿಸಿಕೊಂಡಿದೆ.

    ಸ್ಥಳೀಯರು ಕೂಡಲೇ ಅಸ್ವಸ್ಥಗೊಂಡ ಮಹಿಪಾಲನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಾವು ತಿಂದ ಬಳಿಕ ಬರೋಬ್ಬರಿ 4 ಗಂಟೆಯ ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮಹಿಪಾಲ್ ಹಾವು ತಿನ್ನುತ್ತಿರುವ ವಿಡಿಯೋವನ್ನು ಕೆಲವರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿಕೊಂಡು, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

    ಮಹಿಪಾಲ್‍ನ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವನ್ನಪ್ಪಿದ ಮಹಿಪಾಲ ಪತ್ನಿ ಹಾಗು ನಾಲ್ವರು ಮಕ್ಕಳನ್ನು ಅಗಲಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿ ಸಂಸದನ ಪಾದಪೂಜೆ ನೆರವೇರಿಸಿ ಅದೇ ಗಲೀಜು ನೀರು ಕುಡಿದ ಕಾರ್ಯಕರ್ತ

    ಬಿಜೆಪಿ ಸಂಸದನ ಪಾದಪೂಜೆ ನೆರವೇರಿಸಿ ಅದೇ ಗಲೀಜು ನೀರು ಕುಡಿದ ಕಾರ್ಯಕರ್ತ

    ರಾಂಚಿ: ಕಾರ್ಯಕರ್ತರೊಬ್ಬರ ಬಿಜೆಪಿ ಸಂಸದರೊಬ್ಬರ ಪಾದ ಪೂಜೆ ಮಾಡಿ, ಕೊನೆಗೆ ಅದೇ ಗಲೀಜು ನೀರು ಕುಡಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

    ಜಾರ್ಖಂಡ್ ರಾಜ್ಯದ ಗೊಡ್ಡಾ ಲೋಕಸಭಾ ಕ್ಷೇತ್ರದ ಸಂಸದ ನಿಶಿಕಾಂತ್ ದುಬೆ ಪಾದಪೂಜೆ ಮಾಡಿಸಿಕೊಂಡ ಸಂಸದರು. ಸಾರ್ವಜನಿಕ ಸಮಾರಂಭದಲ್ಲಿ ಪಾದ ಪೂಜೆ ಮಾಡಿಸಿಕೊಂಡು ಟ್ವಿಟ್ಟರ್ ಮತ್ತು ಫೇಸ್‍ಬುಕ್ ನಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ.

    ಗುಡ್ಡಾ ಜಿಲ್ಲೆಯ ಕಲಾಲಿ ಗ್ರಾಮದ ಸೇತುವೆಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಂಸದ ನಿಶಿಕಾಂತ್ ದುಬೆ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಈ ವೇಳೆ ಸಮಾರಂಭದಲ್ಲಿ ಮಾತನಾಡುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವ, ಸಂಸದರು ಸೇತುವೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಸೇತುವೆ ನಿರ್ಮಾಣದಿಂದ ನಮಗೆ ಅನುಕೂಲವಾಗಿದೆ. ಹಾಗಾಗಿ ನನಗೆ ಇಂದು ಸಂಸದರ ಪಾದಪೂಜೆ ಮಾಡಬೇಕು ಅಂತಾ ಅನಿಸುತ್ತಿದೆ ಅಂತಾ ಹೇಳಿದರು.

    ತಮ್ಮ ಭಾಷಣ ಮುಗಿಸಿದ ಕಾರ್ಯಕರ್ತ ತಾವು ಹೇಳಿದಂತೆ ತುಂಬಿದ ಸಮಾರಂಭದಲ್ಲಿಯೇ ಸಂಸದ ಪಾದ ಪೂಜೆಗೆ ಮುಂದಾದರು. ಆದ್ರೆ ಸಂಸದರು ಮಾತ್ರ ಪಾದ ಪೂಜೆಗೆ ಯಾವುದೇ ವಿರೋಧ ವ್ಯಕ್ತಪಡಿಸದೇ ಖುಷಿಯಾಗಿ ಕಾಲುಗಳನ್ನು ತೊಳೆಸಿಕೊಂಡಿದ್ದಾರೆ. ಕಾರ್ಯಕರ್ತ ಇಷ್ಟಕ್ಕೆ ಸುಮ್ಮನಾಗದ ಪಾದಪೂಜೆ ಮಾಡಿದ ನೀರನ್ನು ಅಮೃತ ಅಂತಾ ಸೇವನೆ ಮಾಡಿದ್ದಾರೆ.

    ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಸಂಸದರ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಕಾರ್ಯಕರ್ತ ಪಾದಪೂಜೆಗೆ ಮುಂದಾದ್ರೆ ಸಚಿವರು ತಡೆಯುವ ಪ್ರಯತ್ನ ಮಾಡಬಹುದಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 4ನೇ ಅಂತಸ್ತಿನ ಕಿಟಕಿಯಲ್ಲಿ ನೇತಾಡ್ತಿದ್ದ ಬಾಲಕಿಯನ್ನು ರಕ್ಷಿಸಿದ್ರು ಸೂಪರ್ ಹೀರೋಗಳು

    4ನೇ ಅಂತಸ್ತಿನ ಕಿಟಕಿಯಲ್ಲಿ ನೇತಾಡ್ತಿದ್ದ ಬಾಲಕಿಯನ್ನು ರಕ್ಷಿಸಿದ್ರು ಸೂಪರ್ ಹೀರೋಗಳು

    ಬೀಜಿಂಗ್: ಕಟ್ಟಡದ ನಾಲ್ಕನೇ ಅಂತಸ್ತಿನ ಫ್ಲ್ಯಾಟ್ ಕಿಟಕಿಯಲ್ಲಿ ನೇತಾಡುತ್ತಿದ್ದ ಬಾಲಕಿಯನ್ನು ಇಬ್ಬರು ಯುವಕರು ರಕ್ಷಣೆ ಮಾಡಿದ್ದಾರೆ. ಬಾಲಕಿಯನ್ನು ರಕ್ಷಣೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಯುವಕರನ್ನು ‘ಸೂಪರ್ ಹೀರೋ’ ಅಂತಾ ಕೊಂಡಾಡುತ್ತಿದ್ದಾರೆ.

    ಚೀನಾದ ಜಿಯಾಂಗ್ಸು ಪ್ರಾಂತ್ಯದ ಚಾಂಗ್ಸು ಎಂಬಲ್ಲಿ ಸೆಪ್ಟೆಂಬರ್ 7ರಂದು ಈ ಘಟನೆ ನಡೆದಿದೆ. ಅಪಾಯದಲ್ಲಿ ಸಿಲುಕಿದ್ದ ಬಾಲಕಿಯನ್ನು ನೋಡಿದ ಯುವಕರು ತಮ್ಮ ಪ್ರಾಣವನ್ನು ಲೆಕ್ಕಿಸದೇ ಆಕೆಯನ್ನು ರಕ್ಷಿಸಿದ್ದಾರೆ. ಒಂದು ವೇಳೆ ಯುವಕರು ಕೊಂಚ ಆಯತಪ್ಪಿದ್ರೂ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುವ ಸಾಧ್ಯತೆ ಇತ್ತು.

    ಏನದು ವಿಡಿಯೋ?
    ಐದು ಅಂತಸ್ತಿನ ಕಟ್ಟಡದಲ್ಲಿ ಬಾಲಕಿ 4ನೇ ಫ್ಲೋರ್ ಮನೆಯ ಕಿಟಕಿಯಿಂದ ಹೊರ ಬಿದ್ದು ಎಸಿಯ ಕಂಡೆನ್ಸರ್ ಯೂನಿಟ್ (AC Condenser Unit) ಮೇಲೆ ನೇತಾಡುತ್ತಿದ್ದಳು. ಸ್ಥಳದಲ್ಲಿ ಜನರು ಚೀರಾಡುತ್ತಿದ್ದಂತೆ ಯುವಕರಿಬ್ಬರು ಹಾಗೇ ನೇರವಾಗಿ ಏಣಿಯನ್ನು ಸಹ ಬಳಸದೇ ನೋಡ ನೋಡುತ್ತಿದ್ದಂತೆ ಕಟ್ಟಡವನ್ನು ಹತ್ತಿದ್ದಾರೆ. ಬಾಲಕಿಯ ಬಳಿ ತಲುಪಿದ ಇಬ್ಬರು ಆಕೆಯನ್ನು ರಕ್ಷಣೆ ಮಾಡಿದ್ದಾರೆ.

    ಈ ಘಟನೆ ನಡೆದಾಗ ಬಾಲಕಿ ಮನೆಯಲ್ಲಿ ಯಾರು ಇರಲಿಲ್ಲ. ಆಕೆ ಮಲಗಿದ್ದರಿಂದ ಬಾಗಿಲು ಹಾಕಿಕೊಂಡು ಪೋಷಕರು ಹೊರ ಹೋಗಿದ್ದರು. ನಿದ್ದೆಯಿಂದ ಎಚ್ಚರಗೊಂಡ ಬಾಲಕಿ ಮಂಪರಿನಲ್ಲಿ ಕಿಟಕಿ ಬಳಿ ಬಂದಿದ್ದರಿಂದ ಆಯತಪ್ಪಿ ಬಿದ್ದಿದ್ದಾಳೆ ಎಂದು ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ.

    ನನ್ನ ಮಗಳ ಜೀವವನ್ನು ಉಳಿಸಿದ ಇಬ್ಬರು ಸೂಪರ್ ಹೀರೋಗಳಿಗೆ ನಾನು ಚಿರಋಣಿ ಆಗಿದ್ದೇನೆ. ಯುವಕರು ತಮ್ಮ ಜೀವವನ್ನ ಪಣಕ್ಕಿಟ್ಟು ನನ್ನ ಮಗಳನ್ನು ರಕ್ಷಿಸಿದ್ದಾರೆ. ಇನ್ನು ಮುಂದೆ ಮಗಳನ್ನು ಮನೆಯಲ್ಲಿ ಒಂಟಿಯಾಗಿ ಬಿಟ್ಟು ಎಲ್ಲಿಯೂ ಹೋಗಲಾರೆ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮದ್ವೆ ಆಗ್ತಿದ್ದಂತೆ ಖುಷಿಯಿಂದ ಎದ್ದು ನಿಂತು ಚಪ್ಪಾಳೆ ಹೊಡೆದ ವಧು

    ಮದ್ವೆ ಆಗ್ತಿದ್ದಂತೆ ಖುಷಿಯಿಂದ ಎದ್ದು ನಿಂತು ಚಪ್ಪಾಳೆ ಹೊಡೆದ ವಧು

    ಬೆಂಗಳೂರು: ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದಲ್ಲಿ ಬರುವ ಮಹತ್ವದ ಘಟ್ಟ. ಇತ್ತೀಚಿನ ದಿನಗಳಲ್ಲಿ ಮದುವೆ ದಿನ ವಧು-ವರರು ವೇದಿಕೆಯ ಮೇಲೆ ಡ್ಯಾನ್ಸ್ ಮಾಡುವ ವಿಡಿಯೋಗಳನ್ನು ಸಾಮಾನ್ಯವಾಗಿ ನಾವೆಲ್ಲ ನೋಡಿರುತ್ತೇವೆ. ಆದ್ರೆ ಈ ವಧು ಮದುವೆಯ ಕಾರ್ಯ ಪೂರ್ಣವಾಗುತ್ತಿದ್ದಂತೆ ಎದ್ದು ನಿಂತು ಚಪ್ಪಾಳೆ ಹೊಡೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ವಿಡಿಯೋದಲ್ಲಿ ಏನಿದೆ..?
    ಮುಸ್ಲಿಂ ಸಂಪ್ರದಾಯದ ಪ್ರಕಾರ ಮದುವೆ ನಡೆಯುತ್ತಿದೆ. ವಧು-ವರರನ್ನು ಮುಂದೆ ಕೂರಿಸಿಕೊಂಡು ನಿಮಗೆ ಮದುವೆ ಒಪ್ಪಿಗೆ ಇದೆಯಾ ಅಂತಾ ಕೇಳಿದ್ದಾರೆ. ಮೊದಲಿಗೆ ವಧು ತನ್ನ ಸಮ್ಮತಿಯನ್ನು ಸೂಚಿಸಿದ್ರು. ನಂತರ ವರನ ಸರದಿ, ಈ ವೇಳೆ ವಧು ಬಾವಿ ಪತಿಯನ್ನು ನೋಡುತ್ತಾ, ಆತ ಒಪ್ಪಿಗೆ ಅನ್ನುತ್ತಲೇ ಎದ್ದು ನಿಂತು ಚಪ್ಪಾಳೆ ಹೊಡೆದಿದ್ದಾರೆ. ಮದುವೆಗೆ ಬಂದ ಅತಿಥಿಗಳೆಲ್ಲಾ ನಗಲಾರಂಭಿಸಿದ್ದಾರೆ.

    ಕೂಡಲೇ ಕುಳಿತ ವಧು ಖುಷಿಯಿಂದ ಪತಿಗೆ ಮುತ್ತು ನೀಡಿದ್ದಾರೆ. ಧರ್ಮಗುರುಗಳು ಪಠಣ ನಡೆಸುತ್ತಿದ್ದರೂ, ವಧು ಯಾವುದನ್ನು ಲೆಕ್ಕಿಸದೇ ಖುಷಯಿಂದ ಗಂಡನನ್ನ ಮುದ್ದಾಡಿದ್ದಾರೆ.

    ಈ ಜೋಡಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡ್ತಿದ್ದು, ಆದ್ರೆ ಘಟನೆ ನಿಖರವಾಗಿ ಎಲ್ಲಿ ನಡೆದಿದೆ ಎಂಬುವುದು ಮಾತ್ರ ತಿಳಿದು ಬಂದಿಲ್ಲ. ವಿಡಿಯೋ ನೋಡಿದ ನೆಟ್ಟಿಗರು ಮಾತ್ರ ಫನ್ನಿ ಫನ್ನಿ ಕಮೆಂಟ್ ಹಾಕುವ ಮೂಲಕ ನವ ಜೋಡಿಗೆ ಶುಭಕೋರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಗಾಸಾಧು ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ – ವೈರಲ್ ವಿಡಿಯೋ ಹಿಂದಿನ ಸತ್ಯ ಇಲ್ಲಿದೆ

    ನಾಗಾಸಾಧು ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ – ವೈರಲ್ ವಿಡಿಯೋ ಹಿಂದಿನ ಸತ್ಯ ಇಲ್ಲಿದೆ

    ಬೆಂಗಳೂರು: ಭಾನುವಾರ ಫೇಸ್‍ಬುಕ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿಯಂತೆ ನಾಗಾಸಾಧು ಎಂದು ಹೇಳುವ ವ್ಯಕ್ತಿಯೊಬ್ಬನ ಮೇಲಿನ ಹಲ್ಲೆಯ ವಿಡಿಯೋ ವೈರಲ್ ಆಗುತ್ತಿದೆ. ಕೆಲವರು ತಮ್ಮ ವಾಟ್ಸಪ್ ಸ್ಟೇಟಸ್ ನಲ್ಲಿ ಈ ವಿಡಿಯೋ ಹಾಕಿಕೊಳ್ಳುವ ಮೂಲಕ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ.

    ಹಲವರು ಫೇಸ್‍ಬುಕ್ ನಲ್ಲಿ ಈ ವಿಡಿಯೋ ನೋಡಿದ ನೆಟ್ಟಿಗರು ಶೇರ್ ಮಾಡಿಕೊಳ್ಳುವ ಮೂಲಕ ತಮ್ಮ ಅಭಿಪ್ರಾಯವನ್ನು ಪೋಸ್ಟ್ ಮಾಡುತ್ತಿದ್ದಾರೆ. ಕೆಲ ಮುಸ್ಲಿಂ ಯುವಕರು ಅಮಾಯಾಕ ನಾಗಾಸಾಧು ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡ್ತಿದ್ದಾರೆ ಎಂದು ಸಾಲುಗಳನ್ನು ಹಾಕಿ ವಿಡಿಯೋ ಶೇರ್ ಆಗುತ್ತಿದೆ. ಆದ್ರೆ ಈ ವಿಡಿಯೋ ನಿಜವಾದ ಸತ್ಯ ಇಲ್ಲಿದೆ.

    ಏನಿದು ವಿಡಿಯೋ..?
    ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಖಾಸಗಿ ಮಾಧ್ಯಮವೊಂದು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಿದೆ. ಹಲ್ಲೆಗೊಳಗಾದ ವ್ಯಕ್ತಿ ಓರ್ವ ಭಿಕ್ಷುಕನಾಗಿದ್ದು, ನಾಗಾ ಸಾಧು ಅಲ್ಲ ಅಂತಾ ಹೇಳಿದೆ. ಭಿಕ್ಷುಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಸ್ಥಳೀಯರು ಆತನನ್ನು ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದರು ಎಂಬ ಸ್ಫೋಟಕ ವಿಷಯ ರಿವೀಲ್ ಆಗಿದೆ.

    ಈ ವಿಡಿಯೋ ಶಿಖಾ ಎಂಬ ಹೆಸರಿನ ಖಾತೆಯಿಂದ ಮೊದಲ ಬಾರಿಗೆ ಅಪ್ಲೋಡ್ ಆಗಿದೆ. ಶಿಖಾ ವಿಡಿಯೋ ಅಪ್ಲೋಡ್ ಮಾಡಿಕೊಂಡು, ‘ಭಾರತದ ಕೆಲ ಮುಸ್ಲಿಂ ಯುವಕರು ಬಡ ಭಿಕ್ಷುಕ ಮೇಲೆ ಹಲ್ಲೆ ನಡೆಸಿದ್ದಾರೆ. ಆದಷ್ಟು ಬೇಗ ಈ ಮುಸ್ಲಿಂ ಅಪರಾಧಿಗಳನ್ನು ಪೊಲೀಸರು ಬಂಧಿಸಬೇಕು.’ ಎಂಬ ಸಾಲುಗಳನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ಹಲವರು ಶೇರ್ ಮತ್ತು ಟ್ವೀಟ್ ಮಾಡಿಕೊಂಡು ಪ್ರಧಾನಿ ಮೋದಿ ಅವರಿಗೂ ಸಹ ಟ್ಯಾಗ್ ಮಾಡಿದ್ದಾರೆ. ವಿಡಿಯೋವನ್ನು ಶೇರ್ ಮಾಡಿಕೊಂಡಿರುವ ನೆಟ್ಟಿಗರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಇದೇ ವಿಡಿಯೋವನ್ನು ಹಲವು ರಾಜಕೀಯ ಗಣ್ಯರು ಮತ್ತು ಸಿನಿಮಾ ತಾರೆಯರು ಸಹ ಶೇರ್ ಮಾಡಿಕೊಂಡಿದ್ದಾರೆ. ಕೆಲವರು ವಿಡಿಯೋ ಶೇರ್ ಮಾಡಿಕೊಳ್ಳುವ ಕೋಮುಭಾವನೆ ಹುಟ್ಟಿಸುವಂತಹ ಸಾಲುಗಳನ್ನು ಬರೆದಿದ್ದಾರೆ. ನಟ ಕೊಯಿರಲಾ ಮಿತ್ರ ವಿಡಿಯೋ ಶೇರ್ ಮಾಡಿಕೊಂಡು, ‘ಭಾರತದಲ್ಲಿ ಇಂತಹ ಘಟನೆಗಳು ಈ ಮೊದಲು ನಡೆಯುತ್ತಿದ್ದವು, ಅಂತಹ ಪ್ರಕರಣಗಳು ಇಂದು ನಡೆಯುತ್ತಿವೆ.’ ಎಂದು ಬರೆದುಕೊಂಡಿದ್ದರು. ಕೆಲ ಸಮಯದ ಬಳಿಕ ಎಚ್ಚೆತ್ತ ನಟ ವಿಡಿಯೋವನ್ನು ತಮ್ಮ ಖಾತೆಯಿಂದ ಡಿಲೀಟ್ ಮಾಡಿದ್ದಾರೆ.

    ಹಾಗಾದ್ರೆ ನಿಜವಾಗಿ ನಡೆದಿದ್ದೇನು?:
    ವಿಡಿಯೋ ವೈರಲ್ ಆಗುತ್ತಿದ್ದಂತೆ ಡೆಹರಾಡೂನ್ ಎಸ್.ಎಸ್.ಪಿ. ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದೆ. ಆಗಸ್ಟ್ 24 ರಿಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋಗೆ ಸಂಬಂಧಿಸಿದಂತೆ ಕೆಲವರು ಪ್ರಚೋದನಕಾರಿ ಸಾಲುಗಳನ್ನು ಬರೆದುಕೊಳ್ಳುತ್ತಿದ್ದಾರೆ.

    ಹಲ್ಲೆಗೊಳಗಾದ ವ್ಯಕ್ತಿ ಹೆಸರು ಸುಶೀಲನಾಥ್ ಸೋಮನಾಥ್. ಡೆಹ್ರಾಡೂನಿನ ವಿಕಾಸನಗರದ ನಿವಾಸಿಯಾಗಿದ್ದು, ಸಾಧು ವೇಷ ಧರಿಸಿ ಭಿಕ್ಷೆ ಬೇಡುತ್ತಿದ್ದನು. ಸುಶೀಲನಿಗೆ ಪತ್ನಿ ಸೇರಿದಂತೆ 6 ಜನ ಮಕ್ಕಳು ಇದ್ದಾರೆ. ಸುಶೀಲನಾಥ್ ಮೂಲತಃ ಹರಿಯಾಣ ರಾಜ್ಯದ ಯಮುನಾ ನಗರದ ಜಗದಾರಿ ಎಂಬಲ್ಲಿಯ ನಿವಾಸಿಯಾಗಿದ್ದು, ಡೆಹ್ರಾಡೂನಿನಲ್ಲಿ ವಾಸವಾಗಿದ್ದಾನೆ. ಸುಶೀಲನಾಥ್ ಪ್ರತಿದಿನ ನಕಲಿ ವೇಷ ಧರಿಸಿ ಭಿಕ್ಷೆ ಬೇಡಿ ಜೀವನ ನಡೆಸುವ ವ್ಯಕ್ತಿಯಾಗಿದ್ದು, ಮದ್ಯವ್ಯಸನಿ ಸಹ ಆಗಿದ್ದಾನೆ.

    ಆಗಸ್ಟ್ 24 ರಂದು ಸುಶೀಲನಾಥ್ ಪಟೇಲನಗರದ ಮನೆಯೊಂದಕ್ಕೆ ನುಗ್ಗಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಕೂಡಲೇ ಮನೆಯಲ್ಲಿದ್ದ ಯುವತಿಯ ಸೋದರ ಶುಭಂ ಎಂಬವರ ಆತನನ್ನು ಹೊರ ಎಳೆದು ತಂದಿದ್ದಾರೆ. ನೆರೆಹೊರೆಯವರು ಸುಶೀಲನಾಥನಿಗೆ ಧರ್ಮದೇಟು ನೀಡಿ ನಂತರ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಸಮಯದಲ್ಲಿ ಕೆಲವರು ಈ ದೃಶ್ಯಗಳನ್ನು ಮೊಬೈಲ್‍ನಲ್ಲಿ ಚಿತ್ರೀಕರಿಸಿಕೊಂಡು ಕೋಮು ಸಂಘರ್ಷದ ರೂಪ ನೀಡಿದ್ದಾರೆ. ಘಟನೆ ಸಂಬಂಧ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಟ್ವಿಟ್ಟರ್ ನಲ್ಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv