Tag: ವೋಟ್‌ಬ್ಯಾಂಕ್

  • ನನಗೆ ಸದ್ಯ ಮುಸ್ಲಿಂ ಮತಗಳು ಬೇಡ: 15 ವರ್ಷದ ನಂತ್ರ ಬೇಕು ಎಂದು ಅಸ್ಸಾಂ ಸಿಎಂ ಹೇಳಿದ್ಯಾಕೆ?

    ನನಗೆ ಸದ್ಯ ಮುಸ್ಲಿಂ ಮತಗಳು ಬೇಡ: 15 ವರ್ಷದ ನಂತ್ರ ಬೇಕು ಎಂದು ಅಸ್ಸಾಂ ಸಿಎಂ ಹೇಳಿದ್ಯಾಕೆ?

    ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು ನನಗೆ ಸದ್ಯ ಮುಸ್ಲಿಂ ಮತಗಳು (Muslim Vote) ಬೇಡ, ವೋಟ್ ಬ್ಯಾಂಕ್ (Vote Bank) ರಾಜಕಾರಣದಿಂದ (Politics) ಸಮಸ್ಯೆಗಳು ಉಂಟಾಗುತ್ತವೆ ಎಂದು ಹೇಳಿದ್ದಾರೆ.

    ಮಾಧ್ಯಮ ಸಂದರ್ಶನವೊಂದರಲ್ಲಿ ಈ ರೀತಿಯಾದ ಹೇಳಿಕೆಯನ್ನು ನೀಡಿದ ಅವರು, ನಾನು ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗುವುದಿಲ್ಲ. ಅಲ್ಲದೇ ಕಾಂಗ್ರೆಸ್ (Congress) ಪಕ್ಷದಂತೆ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ವಿಷಯಗಳೊಂದಿಗೆ ರಾಜಕೀಯವನ್ನು ಜೋಡಿಸುವುದಿಲ್ಲ. ನಾನು ತಿಂಗಳಿಗೊಮ್ಮೆ ಮುಸ್ಲಿಂ ಪ್ರದೇಶಕ್ಕೆ ಭೇಟಿ ನೀಡುತ್ತೇನೆ. ಅವರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಜನರನ್ನು ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಸೇರಿಸುವುದಿಲ್ಲ. ಕಾಂಗ್ರೆಸ್ ಕೇವಲ ಮತಗಳಿಗಾಗಿ ಮುಸ್ಲಿಮರ ಓಲೈಕೆ ಮಾಡುತ್ತಿದೆ ಹೊರತು ಅವರ ಶ್ರೇಯೋಭಿವೃದ್ಧಿ ಬಗ್ಗೆ ಗಮನ ಹರಿಸಿಲ್ಲ. ಆದ್ದರಿಂದ ಮುಸ್ಲಿಮರು ಕಾಂಗ್ರೆಸ್‌ನೊಂದಿಗಿನ ತಮ್ಮ ಸಂಬಂಧದ ಬಗ್ಗೆ ಅರಿತುಕೊಳ್ಳಬೇಕು ಎಂದರು. ಇದನ್ನೂ ಓದಿ: ಪಾಕ್, ಚೀನಾಕ್ಕೆ ಠಕ್ಕರ್ – ಶ್ರೀನಗರದಲ್ಲಿ ಮೇಲ್ದರ್ಜೆಗೆರಿಸಿದ MiG- 29 ಯುದ್ಧ ವಿಮಾನ ನಿಯೋಜನೆ

    ನನಗೆ ಮತ ನೀಡಬೇಡಿ. ನಿಮ್ಮ ಪ್ರದೇಶಗಳನ್ನು ಮುಂದಿನ 10 ವರ್ಷಗಳಲ್ಲಿ ಅಭಿವೃದ್ಧಿಪಡಿಸುತ್ತೇನೆ. ಬಾಲ್ಯವಿವಾಹ ಪದ್ಧತಿ ಕೊನೆಗೊಳ್ಳಬೇಕು. ಮದರಸಾಗಳಿಗೆ ಹೋಗುವುದನ್ನು ನಿಲ್ಲಿಸಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಬೇಕು. ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ನಾನು 7 ಕಾಲೇಜುಗಳನ್ನು ಉದ್ಘಾಟಿಸಲಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಭಾರತದಲ್ಲಿ ಏಕೆ ಮುಸ್ಲಿಮರನ್ನ ಕಂಡ್ರೆ ಇಷ್ಟೊಂದು ದ್ವೇಷ, ನಮ್ಮ ಮನದ ಮಾತನ್ನೂ ಕೇಳಿ – ಮೋದಿಗೆ ಮೌಲ್ವಿ ಮನವಿ

    ಕಾಂಗ್ರೆಸ್ ಮುಸ್ಲಿಂ ಪ್ರದೇಶಗಳಲ್ಲಿ ಮೂಲಸೌಕರ್ಯ ಮತ್ತು ಶಾಲೆಗಳನ್ನು ನಿರ್ಮಿಸಲಿಲ್ಲ. ಆದರೆ ನಾನು ಅದನ್ನು ಅಭಿವೃದ್ಧಿಪಡಿಸಲು ಬಯಸುತ್ತೇನೆ. ಮುಂದಿನ 10ರಿಂದ 15 ವರ್ಷಗಳವರೆಗೆ ಇದನ್ನು ಅಭಿವೃದ್ಧಿಪಡಿಸಿದ ಬಳಿಕ ಮುಸ್ಲಿಮರ ಹತ್ತಿರ ಮತ ಕೇಳುತ್ತೇನೆ. ಈಗ ಅವರ ಬಳಿ ಮತ ಕೇಳಿದರೆ ಅದು ಕೊಡುವ ಮತ್ತು ಕೊಂಡುಕೊಳ್ಳುವ ಸಂಬಂಧವಾಗಲಿದೆ. ಅದು ವಹಿವಾಟಿನ ಸಂಬಂಧವಾಗುವುದು ನನಗೆ ಇಷ್ಟವಿಲ್ಲ ಎಂದರು. ಇದನ್ನೂ ಓದಿ: ಮಣಿಪುರ ಹೊತ್ತಿ ಉರಿಯುತ್ತಿದ್ದರೆ ಪ್ರಧಾನಿ ನಗುತ್ತ ಜೋಕ್ ಮಾಡಿಕೊಂಡಿದ್ದಾರೆ – ರಾಹುಲ್ ಕಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇಶದಲ್ಲಿ ಇಬ್ಬಗೆಯ ರಾಜಕೀಯ: ಪ್ರತಿ ಪಕ್ಷಗಳ ವಿರುದ್ಧ ಮೋದಿ ಕಿಡಿ

    ದೇಶದಲ್ಲಿ ಇಬ್ಬಗೆಯ ರಾಜಕೀಯ: ಪ್ರತಿ ಪಕ್ಷಗಳ ವಿರುದ್ಧ ಮೋದಿ ಕಿಡಿ

    ನವದೆಹಲಿ: ದೇಶದಲ್ಲಿಂದು ಇಬ್ಬಗೆಯ ರಾಜಕೀಯ ವ್ಯವಸ್ಥೆಯಿದೆ. ಒಂದು ಪರಿವಾರ ಭಕ್ತಿಯ ಪಕ್ಷವಾದರೆ ಮತ್ತೊಂದು ಪರಿವಾರ ರಾಷ್ಟ್ರಭಕ್ತಿಯ ಪಕ್ಷವಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಪ್ರತಿ ಪಕ್ಷಗಳ ವಿರುದ್ಧ ಹರಿಹಾಯ್ದರು.

    ಬಿಜೆಪಿ ಪಕ್ಷದ 42ನೇ ಸಂಸ್ಥಾಪನಾ ದಿನದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ತಾರತಮ್ಯ ಮತ್ತು ಭ್ರಷ್ಟಾಚಾರ ವೋಟ್ ಬ್ಯಾಂಕ್ ರಾಜಕಾರಣದ ದುಷ್ಪರಿಣಾಮಗಳಾಗಿದ್ದು ಈ ಹಿಂದೆ ಅಧಿಕಾರದಲ್ಲಿದ್ದ ಪಕ್ಷಗಳು ಇದನ್ನು ಅಭ್ಯಾಸ ಮಾಡಿಕೊಂಡಿದ್ದವು. ಬಿಜೆಪಿ ಅವುಗಳಿಗೆ ಸವಾಲೊಡ್ಡಿ ಮುನ್ನಡೆಯುತ್ತಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಕಾಂಗ್ರೆಸ್-ಬಿಜೆಪಿ ಮಧ್ಯೆ ಸ್ಟಾರ್ಟ್ ಅಪ್ ದಂಗಲ್ – ತೆಲಂಗಾಣ ಜೊತೆ ಹೋಲಿಸಿದ ಡಿಕೆಶಿಗೆ ಸಿಎಂ ಕ್ಲಾಸ್

    SESSION

    ಭಾರತದೇಶ ಇಂದು ಯಾವುದೇ ಒತ್ತಡ, ಬಲವಂತಕ್ಕೆ ಮಣಿಯುವ ಭಯವಿಲ್ಲದೆ ತನ್ನ ಹಿತಾಸಕ್ತಿ, ನಿಲುವನ್ನು ಜಗತ್ತಿನ ಎದುರು ದೃಢವಾಗಿ ತೋರಿಸುವ ದೇಶವಾಗಿ ಮಾರ್ಪಟ್ಟಿದೆ. ಇಡೀ ಜಗತ್ತು ಎರಡು ಪ್ರತಿಸ್ಪರ್ಧಿ ಬಣವಾಗಿ ರೂಪುಗೊಂಡಾಗಲೂ ಭಾರತವನ್ನು ಮಾನವೀಯ ನೆಲೆಗಟ್ಟಿನಲ್ಲೇ ನೋಡಿದೆ ಎಂದರು.

    ಯಾವುದೇ ಪಕ್ಷ ಅಧಿಕಾರದಲಿದ್ದಾಗಲೂ, ಅದು ಜನರಿಗಾಗಿ, ದೇಶಕ್ಕಾಗಿ ಏನೂ ಮಾಡುವುದಿಲ್ಲ ಎಂದು ಜನರು ನಂಬಿದ್ದ ಕಾಲವೊಂದಿತ್ತು. ಆದರೆ ಈಗ ಆ ಅಭಿಪ್ರಾಯ ಬಿಜೆಪಿಯಿಂದ ಬದಲಾಗಿದೆ. ದೇಶ ಮುಂದುವರಿಯುತ್ತಿದೆ ಎಂದು ಪ್ರತಿ ನಾಗಕರಿನೂ ಹೇಳುವ ಕಾಲ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ನನಗೆ ಇಷ್ಟವಾದಾಗ ಮಾಂಸ ತಿನ್ನಲು ಅವಕಾಶವಿದೆ: ಮೊಯಿತ್ರಾ

    SESSISON

    ಪಕ್ಷದ ಕುರಿತು ಮಾತನಾಡುತ್ತಾ, ಬಿಜೆಪಿ ಪಾಲಿಗೆ ಈ ಬಾರಿಯ ಸಂಸ್ಥಾಪನಾ ದಿನ ತುಂಬ ಮಹತ್ವ ದಿನ. ನಾವು ಈ ಬಾರಿ 75ನೇ ವರ್ಷದ ಸ್ವಾತಂತ್ರ‍್ಯೋತ್ಸವ ಸಂಭ್ರಮದಲ್ಲಿದ್ದೇವೆ. ಭಾರತ ಜಾಗತಿಕ ಮಟ್ಟದಲ್ಲಿ ಕ್ಷಿಪ್ರವಾಗಿ ಅಭಿವೃದ್ಧಿಯಾಗುತ್ತಿದೆ. ಹೊಸಹೊಸ ಅವಕಾಶಗಳು ಭಾರತಕ್ಕೆ ನಿರಂತರವಾಗಿ ಲಭ್ಯವಾಗುತ್ತಿವೆ. ಹಾಗೆಯೇ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿದಿದೆ. ಅಷ್ಟೇ ಅಲ್ಲ, ಬರೋಬ್ಬರಿ ಮೂರು ದಶಕಗಳ ನಂತರ ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ 100 ದಾಟಿದೆ ಈ ಕಾರಣಳು ಇಂದಿನ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಇಂದು ನವರಾತ್ರಿಯ 5ನೇ ದಿನ. ನಾವಿಂದು ಸ್ಕಂದ ಮಾತೆಯನ್ನು ಪೂಜಿಸುತ್ತೇವೆ. ಸ್ಕಂದ ಮಾತೆ ಕಮಲದ ಸಿಂಹಾಸನದ ಮೇಲೆ ಕುಳಿತು, ಕಮಲದ ಹೂವನ್ನು ಹಿಡಿದು ಕುಳಿತಿರುವ ದೇವತೆ. ಬಿಜೆಪಿಯ ಪ್ರತಿಯೊಬ್ಬ ಸದಸ್ಯ, ಕಾರ್ಯಕರ್ತನಿಗೂ ಆಶೀರ್ವದಿಸಿ, ಒಳ್ಳೆಯದನ್ನು ಮಾಡು ಎಂದು ನಾನು ಮಾತೆಯಲ್ಲಿ ಬೇಡಿಕೊಳ್ಳುತ್ತೇನೆ ಎಂದು ಹೇಳಿದರು.