Tag: ವ್ಯವಸ್ಥೆ

  • ವೈದ್ಯಕೀಯ ಸಿಬ್ಬಂದಿಗೆ ಶ್ರೀಮುರಳಿ ಊಟದ ವ್ಯವಸ್ಥೆ

    ವೈದ್ಯಕೀಯ ಸಿಬ್ಬಂದಿಗೆ ಶ್ರೀಮುರಳಿ ಊಟದ ವ್ಯವಸ್ಥೆ

    ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲಿ ಹಗಲಿರುಳು ಕೊರೊನಾ ಸೋಂಕಿತರ ಸೇವೆ ಮಾಡುತ್ತಿರುವ 5 ಸರ್ಕಾರಿ ಆಸ್ಪತ್ರೆಯ ಡಾಕ್ಟರ್ಸ್, ನರ್ಸ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಸ್ಯಾಂಡಲ್‍ವುಡ್ ನಟ ರೊರಿಂಗ್ ಸ್ಟಾರ್ ಶ್ರೀ ಮುರಳಿ ಮಾಡುತ್ತಿದ್ದಾರೆ.

    ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದಂತೆ ಆಸ್ಪತ್ರೆಗಳು ರೋಗಿಗಳ ಆರೈಕೆಯಲ್ಲಿ ಬ್ಯುಸಿಯಾಗಿವೆ. ಡಾಕ್ಟರ್ಸ್, ನರ್ಸ್ ಹಾಗೇ ಆಸ್ಪತ್ರೆ ಸಿಬ್ಬಂದಿ ದಿನವಿಡೀ ಆಸ್ಪತ್ರೆಯಲ್ಲೇ ಇದ್ದು ಕಾರ್ಯ ಪ್ರವೃತ್ತರಾಗಿದ್ದಾರೆ. ಇದೀಗ ಕೊರೊನಾ ಸಂಕಷ್ಟದ ಸಮಯದಲ್ಲಿ ಹಗಲಿರುಳು ಸೋಂಕಿತರ ಸೇವೆ ಮಾಡುತ್ತಿರುವ 5 ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ.

    ಕೆ.ಸಿ ಜನರಲ್ ಆಸ್ಪತ್ರೆ, ESI ರಾಜಾಜಿನಗರ, ಬೌರಿಂಗ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ ಹಾಗೂ ಸಿವಿ ರಾಮನ್ ಜನರಲ್ ಆಸ್ಪತ್ರೆಯ ಡಾಕ್ಟರ್ಸ್, ನರ್ಸ್ ಹಾಗೂ ಸಿಬ್ಬಂದಿಗೆ ಮುರುಳಿ ಊಟದ ವ್ಯವಸ್ಥೆ ಮಾಡಿದ್ದಾರೆ. ಊಟ ಜೊತೆಗೆ ನೀರಿನ ವ್ಯವಸ್ಥೆಯನ್ನೂ ಮಾಡಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಬಾಲಿವುಡ್, ಸ್ಯಾಂಡಲ್‍ವುಡ್ ಹಲವು ನಟ, ನಟಿಯರು ಕೈಲಾದಷ್ಟು ಸಹಾಯ ಮತ್ತು ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.

  • ಪೋಷಕರಿಗೆ ವೇಟಿಂಗ್ ರೂಂ ವ್ಯವಸ್ಥೆ – ಉಡುಪಿಯಲ್ಲಿ 14034 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ರೆಡಿ

    ಪೋಷಕರಿಗೆ ವೇಟಿಂಗ್ ರೂಂ ವ್ಯವಸ್ಥೆ – ಉಡುಪಿಯಲ್ಲಿ 14034 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ರೆಡಿ

    ಉಡುಪಿ: ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಉಡುಪಿಯ ಕೆಲ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ ಮೇಲ್ವಿಚಾರಣೆ ಮಾಡಿದರು. ನಗರದ ವಳಕಾಡು ಶಾಲೆಗೆ ಭೇಟಿ ನೀಡಿದ ಅವರು, ಸಿದ್ಧತೆ ಗಳ ಪರಿಶೀಲನೆ ಮಾಡಿದರು.

    ತರಗತಿಗಳಿಗೆ ಭೇಟಿಕೊಟ್ಟು, ಶಿಕ್ಷಕರು ಸಿಬ್ಬಂದಿಗಳ ಜೊತೆ ಸಮಾಲೋಚನೆ ಮಾಡಿದರು. ಸರ್ಕಾರಿ ಶಾಲೆಯಲ್ಲಿ ಶೆಲ್ಟರ್ ಇಲ್ಲ. ಅಕ್ಕಪಕ್ಕದ ಕಟ್ಟಡ, ಸಭಾಂಗಣದಲ್ಲಿ ಪೋಷಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿರುವ ಬಗ್ಗೆ ವೀಕ್ಷಣೆ ಮಾಡಿದರು. ಮಾಧ್ಯಮಗಳ ಜೊತೆ ಮಾತಮಾಡಿ, ಪರೀಕ್ಷೆ ನಿರ್ವಹಿಸೋದು ಜಿಲ್ಲಾಡಳಿತದ ಮುಂದಿರುವ ಮಹತ್ವದ ಜವಾಬ್ದಾರಿ. ಇಲಾಖೆ ಸರ್ಕಾರದ ಸಹಕಾರದಿಂದ ಅದನ್ನು ನಡೆಸುತ್ತೇವೆ. ಎಲ್ಲಾ ಪರೀಕ್ಷಾ ಕೇಂದ್ರ ಗಳಲ್ಲಿ ತಯಾರಿ ಮುಗಿದಿದೆ. ಬಹಳ ಚೆನ್ನಾಗಿ, ಸುರಕ್ಷಿತಾ ಕ್ರಮ ಕೈಗೊಂಡಿದ್ದೇವೆ. ಜಿಲ್ಲೆಯಲ್ಲಿ 14,034 ಮಕ್ಕಳು ಪರೀಕ್ಷೆ ಬರೆಯುತ್ತಾರೆ ಎಂದರು.

    ಸಾಮಾಜಿಕ ಅಂತರ, ಥರ್ಮಲ್ ಸ್ಕ್ಯಾನಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರ ಸ್ಯಾನಿಟೈಸ್ ಮಾಡಿದ್ದೇವೆ. ಪರೀಕ್ಷೆ ಸುಲಭವಾಗಿ ನಡೆಯುತ್ತದೆ ಅನ್ನೋ ಆಶಾಭಾವನೆ ಇದೆ. ಜಿಲ್ಲೆಯಲ್ಲಿ ಕ್ವಾರಂಟೈನ್ ಸೆಂಟರ್ ಆಗಿದ್ದ ಮೂರು ಶಾಲೆಗಳಿವೆ. ತಿಂಗಳ ಹಿಂದೆಯೇ ಕ್ವಾರಂಟೈನ್ ಕೇಂದ್ರ ತೆರವು ಮಾಡಿ ಸ್ಯಾನಿಟೈಸ್ ಮಾಡಿದ್ದೇವೆ. ಪ್ರತೀ ಪರೀಕ್ಷೆಯ ನಂತರ ಸ್ಯಾನಿಟೈಸ್ ಮಾಡಲಿದ್ದೇವೆ. ಮಳೆಗಾಲವಾದ ಕಾರಣ ಮಕ್ಕಳಿಗೆ ಶೆಲ್ಟರ್ ಅಗತ್ಯವಿದೆ. ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಶೆಲ್ಟರ್ ಇಲ್ಲ. ಮಕ್ಕಳು ಬಂದ ತಕ್ಷಣ ಜ್ವರ ಪರೀಕ್ಷೆ ಮಾಡಿ ತರಗತಿಯೊಳಗೆ ಕಳಿಸುತ್ತೇವೆ ಎಂದರು.

    ವಿದ್ಯಾರ್ಥಿಗಳಿಗೆ ಯಾವುದೇ ಆತಂಕ ಬೇಡ. ಮಕ್ಕಳು ಧೈರ್ಯವಾಗಿ ಬಂದು ಪರೀಕ್ಷೆ ಬರೆಯಿರಿ. ಯಾವುದೇ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ನಾವು ಬಳಸೋದಿಲ್ಲ. ಖಾಸಗಿ ಶಾಲೆಯ 82 ಬಸ್ ಬಳಕೆ ಮಾಡುತ್ತೇವೆ. ಡೀಸೆಲ್ ವ್ಯವಸ್ಥೆ ಸರ್ಕಾರ ಮಾಡುತ್ತದೆ. ನಾಲ್ಕು ಮಕ್ಕಳು ಕಂಟೈನ್‍ಮೆಂಟ್ ಝೋನ್ ನಿಂದ ಬರುತ್ತಾರೆ. ಅವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಿದ್ದೇವೆ. ಹತ್ತು ಪರೀಕ್ಷಾ ಕೇಂದ್ರ ಹೆಚ್ಚುವರಿಯಾಗಿದೆ. ಹೊಸ ಕಂಟೈನ್ಮೆಂಟ್ ಝೋನ್ ಆದರೆ ಅದನ್ನು ಬಳಸುತ್ತೇವೆ ಎಂದು ಡಿಸಿ ಜಿ. ಜಗದೀಶ್ ಹೇಳಿದರು.

  • ಮೀಡಿಯಾದಲ್ಲಿ ಮಿಂಚಲು ವ್ಯವಸ್ಥೆಯನ್ನ ಅವ್ಯವಸ್ಥೆ ಮಾಡಬೇಡಿ: ಸಂಸದ ಸುರೇಶ್

    ಮೀಡಿಯಾದಲ್ಲಿ ಮಿಂಚಲು ವ್ಯವಸ್ಥೆಯನ್ನ ಅವ್ಯವಸ್ಥೆ ಮಾಡಬೇಡಿ: ಸಂಸದ ಸುರೇಶ್

    – ಸರ್ಕಾರ ಸಾರ್ವಜನಿಕರ ಹಿತಕಾಯುವ ಕೆಲಸ ಮಾಡುತ್ತಿದೆ

    ರಾಮನಗರ: ಸೋಶಿಯಲ್ ಮೀಡಿಯಾ, ಮಾಧ್ಯಮದಲ್ಲಿ ಮಿಂಚಲು ಗುಂಪು ಗುಂಪಾಗಿ ಸೇರಬೇಡಿ. ದೇಣಿಗೆ ಮತ್ತೊಂದು ಮಗದೊಂದು ಅಂತೇಳಿ ಬೀದಿಗೆ ಬರಬೇಡಿ. ಬಂದು ವ್ಯವಸ್ಥೆಯನ್ನು ಅವ್ಯವಸ್ಥೆ ಮಾಡಬೇಡಿ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

    ಇಂದು ನಗರದಲ್ಲಿ ಮಾತನಾಡಿದ ಅವರು, ಸಾರ್ವಜನಿಕರೇ ನಿಮ್ಮ ಬದುಕು, ನಿಮ್ಮ ಜೀವ ನಿಮ್ಮ ಕೈನಲ್ಲಿಯೇ ಇದೆ. ನೀವು ಮನೆಯಲ್ಲಿಯೇ ಉಳಿದುಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಅಲ್ಲದೇ ಯಾರೂ ಹೊರಗೆ ಬರಬೇಡಿ ಅಂದರೂ ಹೊರಗೆ ಬರುತ್ತಿದ್ದಾರೆ ದೇಣಿಗೆ, ಮಾನವೀಯತೆ ಅಂತೇಳಿ ಓಡಾಡುತ್ತಿದ್ದಾರೆ. ಸಾರ್ವಜನಿಕರ ಹಿತಕಾಯುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು.

    ಸರ್ಕಾರಿ ಅಧಿಕಾರಿಗಳಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಅದನ್ನ ಬಿಟ್ಟು ದೇಣಿಗೆ ಸಂಗ್ರಹ ಅಂತೆಲ್ಲ ಓಡಾಡಬೇಡಿ, ಸರ್ಕಾರವಿದೆ ಏನೇ ಸಹಾಯ ಮಾಡುವುದಿದ್ದರು ಸರ್ಕಾರ, ಜಿಲ್ಲಾಡಳಿತಕ್ಕೆ ನೀಡಿ ಅದನ್ನು ಬಡವರು ನಿರ್ಗತಿಕರಿಗೆ ತಲುಪಿಸುವ ವ್ಯವಸ್ಥೆ ಆಗುತ್ತೆ. ಹೋಂ ಕ್ವಾರಂಟೈನ್‍ನಲ್ಲಿ ಇರುವವರನ್ನು ಕೇವಲ 14 ದಿನಕ್ಕೆ ಹೊರಗೆ ಬಿಡಬೇಡಿ. ಅಮೆರಿಕದಲ್ಲಿ 14 ದಿನಗಳ ಬಳಿಕವೇ ಸಾಕಷ್ಟು ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿಸಿದರು.

    ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಪ್ರತಿ ದಿನ ಆಟೋ ಮೂಲಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರು ಬೆಳೆದಂತಹ ರೇಷ್ಮೆಯನ್ನು ರೀಲರ್‍ಗಳು ಖರೀದಿಸುತ್ತಿಲ್ಲ. ಇದರಿಂದ ರೇಷ್ಮೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ರೇಷ್ಮೆ ಮಾರುಕಟ್ಟೆಯು ಬಂದ್ ಆಗಿದೆ. ಹೀಗಾಗಿ ರಾಜ್ಯ ಸರ್ಕಾರ ರೈತರ ನಷ್ಟ ತುಂಬಿಕೊಡಬೇಕು ಎಂದು ಬೇಡಿಕೆ ಸಲ್ಲಿಸಿದರು.

    ಗ್ರಾಮಗಳಲ್ಲಿ ಶುದ್ಧಕುಡಿಯುವ ನೀರಿನ ಘಟಕಗಳ ಬಳಿಯೇ ಹೆಚ್ಚಿನ ಜನ ಸೇರುತ್ತಾರೆ. ಹೀಗಾಗಿ ಅಲ್ಲಿಗೆ ಒಬ್ಬ ಸಿಬ್ಬಂದಿ ನೇಮಿಸಬೇಕು. ನೀರಿನ ಕಾರ್ಖಾನೆಗಳ ಮೂಲಕವೇ ನೀರು ಪೂರೈಸಲು ಸೂಚನೆ ನೀಡಬೇಕು. ಇಂದಿರಾ ಕ್ಯಾಂಟಿನ್ ಮೂಲಕ ದಿನಕ್ಕೆ ಕನಿಷ್ಟ 500 ಪ್ಯಾಕೆಟ್ ಆಹಾರಗಳನ್ನು ಸಿದ್ಧಪಡಿಸಿ, ನಿರ್ಗತಿಕರಿಗೆ ನೀಡಬೇಕು. ಇಷ್ಟು ಮಾತ್ರವಲ್ಲದೇ ಜಿಲ್ಲಾಡಳಿತವು ಇರುವ ಅನುದಾನದಲ್ಲಿ ಶೇ.10ರಷ್ಟು ಮಾತ್ರವೇ ಆರೋಗ್ಯಕ್ಕೆ ಖರ್ಚು ಮಾಡಬೇಕು ಎಂಬ ಸರ್ಕಾರ ನಿಯಮ ಸರಿ ಇಲ್ಲ. ಇದನ್ನು ಸಡಿಲಿಸಬೇಕು ಎಂದು ಅಗ್ರಹಿಸಿದರು.

    ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಬೇಕು. ಸರ್ಕಾರದಿಂದಲೇ ಉಚಿತವಾಗಿ ಮಾಸ್ಕ್ ಗಳನ್ನು ನೀಡುವ ಕೆಲಸವಾಗಬೇಕು. ಗ್ರಾಮಗಳಲ್ಲಿ ಟೈಂಪಾಸ್ ಮಾಡುವವರಿಗೆ ಸಾಕಷ್ಟು ಅರಿವು ಮೂಡಿಸಬೇಕು ಎಂದು ಮನವಿ ಸಲ್ಲಿಸಿದರು.

  • ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಬೇಬಿ ಕೇರ್ ಕೊಠಡಿ ನಿರ್ಮಾಣ: ಡಿ.ಸಿ ತಮ್ಮಣ್ಣ

    ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಬೇಬಿ ಕೇರ್ ಕೊಠಡಿ ನಿರ್ಮಾಣ: ಡಿ.ಸಿ ತಮ್ಮಣ್ಣ

    ಶಿವಮೊಗ್ಗ: ಮಹಿಳೆಯರು ಮಕ್ಕಳಿಗೆ ಬಸ್ ನಿಲ್ದಾಣದಲ್ಲಿ ಹೊರಗಡೆ ಹಾಲುಣಿಸಬೇಕಾಗುತ್ತದೆ. ಹೀಗಾಗಿ ಅವರಿಗೆ ಸಹಾಯವಾಗಲೇಂದು ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ತಾಯಿ ಮಡಿಲ (ಬೇಬಿ ಕೇರ್) ಕೊಠಡಿಯನ್ನು ನಿರ್ಮಾಣ ಮಾಡುವುದಾಗಿ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆಎಸ್ಆರ್‌ಟಿಸಿ ಸೇರಿ ಯಾವುದೇ ಸಾರಿಗೆ ಸಂಸ್ಥೆ ಖಾಸಗೀಕರಣ ಇಲ್ಲ. 1.16 ಲಕ್ಷ ಕನ್ನಡಿಗರಿಗೆ ಅದರಲ್ಲೂ ಗ್ರಾಮೀಣ ಜನರಿಗೆ ಉದ್ಯೋಗ ನೀಡಿರುವ ಸಂಸ್ಥೆ ಇದು. ಇಂಥ ಸಂಸ್ಥೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವುದಿಲ್ಲ. ರಾಜ್ಯದ ಸಾರಿಗೆ ಸಂಸ್ಥೆಗಳು ವಾರ್ಷಿಕ 500 ಕೋಟಿ ರೂ. ನಷ್ಟದಲ್ಲಿವೆ. ಈ ನಷ್ಟ ಸರಿದೂಗಿಸಲು ಹಲವು ಯೋಜನೆ ಹಮ್ಮಿಕೊಳ್ಳಲಾಗಿದೆ. ಸುಸ್ಥಿತಿಯಲ್ಲಿರುವ ಹಳೇ ಚಾಸಿಗಳಿಗೆ ಹೊಸ ಬಾಡಿ ಕಟ್ಟಿಸಿ ಓಡಿಸಲಾಗುವುದು. ಬಸ್ ನಿಲ್ದಾಣಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚು ಅವಕಾಶ ನೀಡಲಾಗುವುದು ಎಂದು ಹೇಳಿದರು.

    ಎಂಎಸ್‍ಐಎಲ್ ಅವರ ಸಹಯೋಗದೊಂದಿಗೆ ಎಲ್ಲಾ ಬಸ್ ನಿಲ್ದಾಣದಲ್ಲೂ ಅವರದೊಂದು ಸಣ್ಣ ಮಳಿಗೆ ಇರಿಸಲಾಗುತ್ತದೆ. ಅದರಲ್ಲಿ ಪುಸ್ತಕ ಇತರ ವಸ್ತುಗಳ ಮಾರಾಟ ಮಾಡುವ ವ್ಯವಸ್ಥೆ ಇದೆ. ಯಾರು ಬಸ್ಸಿನಲ್ಲಿ ಪ್ರಯಾಣ ಮಾಡುತ್ತಾರೋ ಆ ಬಸ್ಸಿನ ಟಿಕೆಟ್ ತೋರಿಸಿದರೆ ಅವರಿಗೆ 35 ರಿಂದ 40% ಡಿಸ್ಕೌಂಟ್‍ನಲ್ಲಿ ಎಂಎಸ್‍ಐಎಲ್ ಪದಾರ್ಥಗಳು ದೊರಕುತ್ತವೆ. ಅದರೊಂದಿಗೆ ಮಹಿಳೆಯರಿಗಾಗಿ ನ್ಯಾಪ್‍ಕಿನ್ ವ್ಯವಸ್ಥೆ ಕೂಡ ಮಾಡಲಾಗುತ್ತದೆ. ಮಹಿಳೆಯ ಶೌಚಾಲಯದಲ್ಲಿ ನ್ಯಾಪ್‍ಕಿನ್ ಬರ್ನಿಂಗ್ ಸೆಂಟರ್ ಅನ್ನು ಇಡಲಾಗುತ್ತದೆ. ಮುಂದಿನ ದಿನಗಳಲ್ಲಿ ಹೈಟೆಕ್ ನಿಲ್ದಾಣಗಳನ್ನು ಮಾಡುತ್ತೇವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv