Tag: ವ್ಯಾಕ್ಸಿನ್

  • ಕೊಡಗಿನಲ್ಲಿ ವ್ಯಾಕ್ಸಿನ್ ಪಡೆದ 953 ಮಂದಿಗೆ ಮತ್ತೆ ಕೊರೊನಾ

    ಕೊಡಗಿನಲ್ಲಿ ವ್ಯಾಕ್ಸಿನ್ ಪಡೆದ 953 ಮಂದಿಗೆ ಮತ್ತೆ ಕೊರೊನಾ

    ಮಡಿಕೇರಿ: ಕೊರೊನಾ ವ್ಯಾಕ್ಸಿನ್ ಪಡೆದಿದ್ದರೂ ಕೂಡ ಕೊಡಗಿನಲ್ಲಿ 953 ಮಂದಿಗೆ ಮತ್ತೆ ಕೊರೊನಾ ಸೋಂಕು ತಗುಲಿದೆ.

    ಮೊದಲ ಡೋಸ್ ವ್ಯಾಕ್ಸಿನ್ ಪಡೆದು ಹೇಗೆ ಬೇಕೋ, ಹಾಗೇ ಓಡಾಕೊಂಡಿದ್ದ ಕೊಡಗಿನ 953 ಜನರಿಗೆ ಮತ್ತೆ ಮಹಾಮಾರಿ ಕೊರೊನಾ ವಕ್ಕರಿಸಿದೆ. ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದವರನ್ನು ಪರೀಕ್ಷಿಸಿದಾಗ ಅವರಿಗೆಲ್ಲಾ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ಸೋಂಕಿತರಿಗೆ ಆಸ್ಪತ್ರೆ ಮತ್ತು ಹೋಂ ಐಸೋಲೇಷನ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲರೂ ಗುಣಮುಖರಾಗಿದ್ದಾರೆ. ಅಲ್ಲದೇ ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಇಲ್ಲಿಯವರೆಗೂ ಸೋಂಕು ದೃಢಪಟ್ಟ ಪ್ರಕರಣಗಳಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿದ್ದಾರೆ. ಇದನ್ನೂ ಓದಿ: ಕಲಬುರಗಿ ಪಾಲಿಕೆ ಗದ್ದುಗೆ ಹಿಡಿಯಲು ಏನು ತಂತ್ರಗಾರಿಕೆ ಮಾಡ್ಬೇಕೋ ಮಾಡ್ತೇವೆ: ಜೋಶಿ

    Madikeri DC

    ಈಗಾಗಲೇ ಕೊರೊನಾ ಮಹಾಮಾರಿ ಮೂರನೇ ಅಲೆ ಹರಡುವ ಆತಂಕದಲ್ಲಿ ಜಿಲ್ಲೆಯ ಗಡಿಭಾಗದಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಕೇರಳದಿಂದ ಬರುವವರಿಗೆ ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದೆ. ಆದರೂ ಈಗಾಗಲೇ ವ್ಯಾಕ್ಸಿನೇಷನ್ ಪಡೆದವರಿಗೆ ಸೋಂಕು ಮತ್ತೆ ಹರಡುತ್ತಿದೆ. ಅಷ್ಟೇ ಅಲ್ಲದೇ ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಮಾಣ ಶೇಕಡಾ 0.5 ಒಳಗೆ ಇತ್ತು. ಆದರೆ ಇಂದು ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಪಾಸಿಟಿವ್ ದರ ಶೇಕಡಾ 2.84 ಏರಿಕೆಯಾಗಿದೆ.  ಇದನ್ನೂ ಓದಿ: ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ

    ಒಟ್ಟಾರೆ ಮುಂದಿನ ದಿನಗಳಲ್ಲಿ ತಮಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಓಡಾಡಿಕೊಂಡಿದ್ದ ಜನರಿಗೆ ಇದೀಗಾ ಮತ್ತೆ ಕೊರೊನಾ ಸ್ಫೋಟಗೊಂಡಿರುವುದು ಕಂಡು ಆತಂಕಕ್ಕೆ ಒಳಗಾಗುತ್ತಿದ್ದಾರೆ.

  • ಮೂರನೇ ಅಲೆಯ ಆತಂಕ – ಲಸಿಕೆಗಾಗಿ ಜನರ ಪರದಾಟ

    ಮೂರನೇ ಅಲೆಯ ಆತಂಕ – ಲಸಿಕೆಗಾಗಿ ಜನರ ಪರದಾಟ

    ನೆಲಮಂಗಲ: ದೇಶಾದ್ಯಂತ ಕೋವಿಡ್ ಮೂರನೇ ಅಲೆಯ ಆತಂಕ ಎದುರಾಗಿದ್ದು ವ್ಯಾಕ್ಸಿನ್ ಸಮಸ್ಯೆ ಎದುರಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ನಗರದ ವ್ಯಾಕ್ಸಿನ್ ಕೇಂದ್ರದಲ್ಲಿ ವ್ಯಾಕ್ಸಿನ್ ಕೊರತೆ ಉಂಟಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕವಾಗಿ ವ್ಯಾಕ್ಸಿನ್ ಪೂರೈಕೆಯಾಗದ ಹಿನ್ನೆಲೆ ಸಾರ್ವಜನಿಕರು ವ್ಯಾಕ್ಸಿನ್ ಗಾಗಿ ಮುಗಿಬಿದ್ದಿರುವ ದೃಶ್ಯ ಕಂಡುಬಂದಿದ್ದು, ಬೆಳಗ್ಗೆ 5-6 ಗಂಟೆಗೆ ಬಂದರೂ ವ್ಯಾಕ್ಸಿನ್ ಸಿಗುತ್ತಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ನೆಲಮಂಗಲ ತಾಲೂಕು ಆಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ನಾಲ್ಕೈದು ದಿನದಿಂದ ವ್ಯಾಕ್ಸಿನ್ ಕೇಂದ್ರಕ್ಕೆ ಬಂದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಕೇವಲ 400 ಡೋಸ್ ವ್ಯಾಕ್ಸಿನ್ ಗೆ 600 – 700 ಜನರು ಬಂದಿದ್ದು, ವ್ಯಾಕ್ಸಿನ್ ಪಡೆಯಲು ಜನರ ನೂಕು, ನುಗ್ಗಲು ಮುಂದುವರೆದಿದೆ.

    ಸಮರ್ಪಕವಾಗಿ ವ್ಯಾಕ್ಸಿನ್ ಪೂರೈಕೆ ಆಗದಿರುವುದಕ್ಕೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ವ್ಯಾಕ್ಸಿನ್ ಪೂರೈಕೆ ಮಾಡಿ ಜನರಿಗೆ ಒದಗಿಸುವ ಕೆಲಸವನ್ನು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದ್ದಾರೆ. ಇದನ್ನೂ ಓದಿ:ಕುರಿ ವ್ಯಾಪಾರಕ್ಕೆ ತೆರಳುತ್ತಿದ್ದ ತಂದೆ, ಮಗ ಸಾವು

  • ಶಾಸಕರ ಅಭಿಮಾನಿಗಳು ಆಯೋಜಿಸಿದ ಉಚಿತ ವ್ಯಾಕ್ಸಿನ್‍ಗೆ ಮುಗಿಬಿದ್ದ ಜನ

    ಶಾಸಕರ ಅಭಿಮಾನಿಗಳು ಆಯೋಜಿಸಿದ ಉಚಿತ ವ್ಯಾಕ್ಸಿನ್‍ಗೆ ಮುಗಿಬಿದ್ದ ಜನ

    ನೆಲಮಂಗಲ: ಯಲಹಂಕ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್ ವಿಶ್ವನಾಥ್ ಅಭಿಮಾನಿಗಳು ಹಳ್ಳಿಗಾಡಿನ ಜನರಿಗೆ ವ್ಯಾಕ್ಸಿನ್ ಹಾಕಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

    ಖಾಸಗಿ ಆಸ್ಪತ್ರೆಯ ಸಹ ಭಾಗಿತ್ವದಲ್ಲಿ ಐನೂರಕ್ಕೂ ಹೆಚ್ಚು ಜನರಿಗೆ ಇಂದು ವ್ಯಾಕ್ಸಿನ್ ನೀಡಲಾಗುತ್ತದೆ. ಬೆಂಗಳೂರು ಹೊರವಲಯ ನೆಲಮಂಗಲ ಸಮಯದಲ್ಲಿ ದಾಸನಪುರದ ಖಾಸಗಿ ಶಾಲೆಯ ಆವರಣದಲ್ಲಿ ಜನರಿಗೆ ವ್ಯಾಕ್ಸಿನ್ ಬಗ್ಗೆ ಅರಿವು ಮೂಡಿಸಿ, ಮಹಾಮಾರಿ ಕೊರೋನ ಸೋಂಕು ನಿಯಂತ್ರಣಿಸಲು ಪರಿಣಾಮಕಾರಿಯಾಗಿ ಈ ವ್ಯಾಕ್ಸಿನ್ ಸದುಪಯೋಗವಾಗಲಿದೆ. ಹೀಗಾಗಿ ಜನರ ನೂಕುನುಗ್ಗಲು ಶುರುವಾಗಿದೆ.

    ಸಾಮಾಜಿಕ ಅಂತರ ಇಲ್ಲ, ಮಾಸ್ಕ್ ಇಲ್ಲದೆ ಜನರು ಉಚಿತ ವ್ಯಾಕ್ಸಿನ್ ಪಡೆಯಲು ಮುಗಿಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡ ಬಾಲಕೃಷ್ಣ ಮಾತನಾಡಿ, ನಮ್ಮ ಶಾಸಕರು ಜನರ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾವು ಕೂಡ ನಮ್ಮ ಪಂಚಾಯ್ತಿ ದಾಸನಪುರ ವ್ಯಾಪ್ತಿಯಲ್ಲಿನ ಬಡ ಜನರಿಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ, ಅವರಿಗೆ ಲಸಿಕೆ ಹಾಕಿಸುವ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದೇವೆ.

    ನಾವು 500 ಜನರಿಗೆ ವ್ಯಾಕ್ಸಿನ್ ಪಡೆಯಲು ಗುರುತಿನ ಚೀಟಿ ನೀಡಿದ್ದೆವು. ಆದರೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದಾರೆ ಸಾಧ್ಯವಾದಷ್ಟು ಜನರಿಗೆ ಲಸಿಕೆ ಹಾಕಿಸುವ ಪ್ರಯತ್ನ ಮಾಡುವುದಾಗಿ ಆಯೋಜಕರು ತಿಳಿಸಿದ್ದಾರೆ. ಈ ವೇಳೆ ಮಾಜಿ ತಾಲೂಕು ಪಂಚಾಯ್ತಿ ಸದಸ್ಯ ಅರಸಹನುಮಂತೇಗೌಡ್ರು, ಗ್ರಾಮ ಪಂಚಾಯ್ತಿ ಸದಸ್ಯ ಡಿ.ಬಿ ಬಾಲಕೃಷ್ಣ, ಮಧುಸೂದನ್, ರಂಗಾಚಾರ್, ಗಿರೀಶ್.ಡಿಎಂ, ಹನುಮಂತರಾಜು ಇನ್ನಿತರರು ಹಾಜರಿದ್ದರು. ಇದನ್ನೂ ಓದಿ: ರಸ್ತೆ ಬದಿ ನಿಂತು ಸೀಬೆಕಾಯಿ ಸವಿದ ಪ್ರಹ್ಲಾದ್ ಜೋಶಿ

  • ಆ.21ರವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ಹೇರಿದ ಕೆನಡಾ

    ಆ.21ರವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ಹೇರಿದ ಕೆನಡಾ

    ಒಟ್ಟಾವಾ: ಭಾರತದಿಂದ ಕೆನಡಾ ತೆರಳುವ ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು 2021ರ ಆಗಸ್ಟ್ 21ರವರೆಗೆ ನಿಷೇಧಿಸಲಾಗಿದೆ ಎಂದು ಕೆನಡಾ ಸರ್ಕಾರ ಮಂಗಳವಾರ ಘೋಷಿಸಿದೆ. ಹೀಗಾಗಿ ಭಾರತದಿಂದ ಕೆನಡಾಕ್ಕೆ ತೆರಳಲು ಪ್ಲಾನ್ ಮಾಡಿಕೊಂಡಿರುವ ಪ್ರಯಾಣಿಕರು ಇನ್ನೂ ಒಂದು ತಿಂಗಳು ಕಾಯಬೇಕಾಗುತ್ತದೆ.

    ಭಾರತ ಮತ್ತು ಕೆನಡಾ ನಡುವಿನ ಅಂತರಾಷ್ಟ್ರೀಯ ವಿಮಾನ ಸಂಚಾರವನ್ನು ಪುನಾರಂಭಿಸಲು ಇತ್ತೀಚೆಗಷ್ಟೇ ಕೆನಡಾ ಹಾಗೂ ಭಾರತದ ಹೈ ಕಮಿಷನರ್ ಅಜಯ್ ಬಿಸಾರಿಯಾ ಏರ್ ಇಂಡಿಯಾ ಟೊರೊಂಟೊ ಪ್ರತಿನಿಧಿಯನ್ನು ಭೇಟಿ ಮಾಡಿದ್ದರು. ಜೊತೆಗೆ ಉಭಯ ರಾಷ್ಟ್ರಗಳ ನಡುವೆ ವಿಮಾನಯಾನಗಳನ್ನು ಪುನಾರಂಭಿಸುವುದು ಮುಖ್ಯವಾಗಿದೆ. ಅದರಲ್ಲಿಯೂ ಕಾಲೇಜುಗಳನ್ನು ಪುನಃ ತೆರೆಯುವ ದೃಷ್ಟಿಯಿಂದ ವಿಮಾನ ಹಾರಾಟವನ್ನು ಪ್ರಾರಂಭಿಸಬೇಕು ಎಂದು ಹೇಳಿದ್ದರು.

    ಭಾರತ ಹೊರತುಪಡಿಸಿ ಉಳಿದ ಅಂತರಾಷ್ಟ್ರಿಯ ಪ್ರಯಾಣಿಕರು ಲಸಿಕೆ ಪಡೆದು ಕೆನಾಗೆ ಆಗಮಿಸಬಹುದಾಗಿದೆ. ಈ ನಿಯಮ ಪರವಾನಗಿ ಹೊಂದಿರುವ ಕಾರ್ಮಿಕರು, ವಿದೇಶಿ ವಿದ್ಯಾರ್ಥಿಗಳು ಮತ್ತು ಮೂಲ ನಿವಾಸಿಗಳಿಗೂ ಅನ್ವಯಿಸಲಾಗಿದೆ. ಇದನ್ನೂ ಓದಿ:ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

  • ಸೂಕ್ತ ಪ್ರಮಾಣದಲ್ಲಿ ವ್ಯಾಕ್ಸಿನ್ ಲಭ್ಯ ಇಲ್ಲ: ಗೌರವ್ ಗುಪ್ತಾ

    ಸೂಕ್ತ ಪ್ರಮಾಣದಲ್ಲಿ ವ್ಯಾಕ್ಸಿನ್ ಲಭ್ಯ ಇಲ್ಲ: ಗೌರವ್ ಗುಪ್ತಾ

    ಬೆಂಗಳೂರು: ಸಿಲಿಕಾನ್ ಸಿಟಿಯ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವ್ಯಾಕ್ಸಿನ್ ಕೊರತೆ ಕಾಣುತ್ತಿದೆ. ಕಾರಣ ಅಗತ್ಯ ಪ್ರಮಾಣದಲ್ಲಿ ಆರೋಗ್ಯ ಇಲಾಖೆಯಿಂದ ವ್ಯಾಕ್ಸಿನ್ ಲಭ್ಯತೆ ಆಗುತ್ತಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಮೀಷನರ್, ನಗರಕ್ಕೆ ನಿತ್ಯ 40-50 ಸಾವಿರ ಮಾತ್ರ ವ್ಯಾಕ್ಸಿನ್ ಸಿಗುತ್ತಿದೆ. ಆದರೆ ಒಂದೂವರೆ ಲಕ್ಷದವರೆಗೂ ವ್ಯಾಕ್ಸಿನ್ ಕೊಡಲು ಪಾಲಿಕೆ ಬಳಿ ಸಿಸ್ಟಂ ರೆಡಿ ಇದೆ. ಆದರೆ ಪೂರೈಕೆ ಹೆಚ್ಚಳ ಆಗಬೇಕಿದೆ ಎಂದರು.

    ಇದೇ ವೇಳೆ ಮಹಾರಾಷ್ಟ್ರದ ಮಾದರಿಯಂತೆ ಮನೆ ಮನೆಯ ಬೆಡ್ ರಿಡನ್ ಗಳಿಗೆ ವ್ಯಾಕ್ಸಿನ್ ಮಾಡೆಲ್ ವಿಚಾರವೂ ಚರ್ಚೆ ಆಗಿದೆ. ಈ ದಿಕ್ಕಿನಲ್ಲಿ ವ್ಯಾಕ್ಸಿನ್ ನೀಡುವ ವಿಚಾರವೂ ಈಗಾಗಲೇ ಚರ್ಚೆ ನಡೆಯುತ್ತಾ ಇದೆ. ಶೇ.50 ಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಪಾಲಿಕೆಯೇ ಹೆಚ್ಚು ವ್ಯಾಕ್ಸಿನ್ ನೀಡಲಾಗಿದೆ. ವ್ಯಾಕ್ಸಿನ್ ಲಭ್ಯತೆ ಆಧರಿಸಿ ಪಾಲಿಕೆಯೇ ಮನೆ ಬಾಗಿಲಿಗೆ ಹೋಗಿ ವ್ಯಾಕ್ಸಿನ್ ಕೊಡಲಾಗುತ್ತದೆ ಎಂದು ಹೇಳಿದರು.

    ರಾಜ್ಯ ಸರ್ಕಾರದ ಸೂಚನೆಯಂತೆ ಕಾಲೇಜುಗಳಲ್ಲಿ ವ್ಯಾಕ್ಸಿನ್ ಡ್ರೈವ್ ಕ್ಯಾಂಪ್ ನಡೆಯುತ್ತಿದೆ. 61 ಕಾಲೇಜುಗಳಲ್ಲಿ ವ್ಯಾಕ್ಸಿನ್ ನೀಡುವ ಕೆಲಸಕ್ಕೂ ಚಾಲನೆ ನೀಡಲಾಗಿದೆ. ಇದನ್ನೂ ಓದಿ: ನಾಲ್ಕು ಬಾರಿ ಕಾರ್ ಪಲ್ಟಿಯಾಗಿ, ಮರಕ್ಕೆ ಡಿಕ್ಕಿ ಹೊಡಿತು: ಪ್ರತ್ಯಕ್ಷದರ್ಶಿ

    ನೆಗೆಟಿವ್ ರಿಪೋರ್ಟ್ ಕಡ್ಡಾಯದ ಉಲ್ಲೇಖ ಇಲ್ಲ:
    ಮಹಾರಾಷ್ಟ್ರ ಭಾಗದಿಂದ ಬರುವ ಪ್ರಯಾಣಿಕರಿಗೆ ಕೊರೋನಾ ನೆಗೆಟಿವ್ ವರದಿ ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿಲ್ಲ. ಆದರೆ ಗಡಿ ಪ್ರದೇಶದ ಜಿಲ್ಲೆಗಳಲ್ಲಿ ನೆಗೆಟಿವ್ ರಿಪೋರ್ಟ್ ಬಗ್ಗೆ ಉಲ್ಲೇಖ ಇದೆ. ಜೊತೆಗೆ ನಗರದಲ್ಲಿ ವಿಮಾನ, ರೈಲು, ಬಸ್, ಖಾಸಗೀ ವಾಹನಗಳಲ್ಲಿ ಬರುವವರ ಕೊರೋನಾ ನೆಗೆಟಿವ್ ವರದಿ ಪಡೆಯುವುದು ಕಷ್ಟ ಎಂದು ಕಮೀಷನರ್ ಸ್ಪಷ್ಟಪಡಿಸಿದರು.

    ತದನಂತರ ಅನ್ ಲಾಕ್ 3.0 ಸಂಬಂಧಿತ ಸಭೆಯಲ್ಲಿ ಸಿನಿಮಾ ರಂಗನವನ್ನು ಪರಿಗಣಿಸಿ ಎಂದು ಸಾರಾ ಗೋವಿಂದು ಪಾಲಿಕೆ ಕಮೀಷನರ್ ಗೆ ಮನವಿ ಮಾಡಿದರು. ಔಟ್ ಡೋರ್ ಶೂಟಿಂಗ್ ಗೆ ಅವಕಾಶ ದೊರಕಿದೆ. ಅದೇ ರೀತಿ ಇನ್ ಡೋರ್ ಶೂಟಿಂಗ್ ಗೆ ಅವಕಾಶ ಕೊಡಿ, ಸೆಟ್ ಗಳನ್ನ ಹಾಕಿ ಸಮಯಕ್ಕಾಗಿ ಕಾಯುತ್ತಿದ್ದು, ತಡವಾದರೆ ಸೆಟ್ ಹಾಳಾಗುವ ಸ್ಥಿತಿಯನ್ನ ಸಾ.ರಾ ಗೋವಿಂದು ಕಮೀಷನರ್ ಗೆ ವಿವರಿಸಿದರು.

  • ತಮಗೆ ಬೇಕಾದವರಿಗೆ ವ್ಯಾಕ್ಸಿನ್ ಹಾಕ್ತಾರೆ – ಧಾರಾವಾಡ ಜಿಲ್ಲಾ ಆಸ್ಪತ್ರೆ ವಿರುದ್ಧ ಆರೋಪ

    ತಮಗೆ ಬೇಕಾದವರಿಗೆ ವ್ಯಾಕ್ಸಿನ್ ಹಾಕ್ತಾರೆ – ಧಾರಾವಾಡ ಜಿಲ್ಲಾ ಆಸ್ಪತ್ರೆ ವಿರುದ್ಧ ಆರೋಪ

    ಧಾರವಾಡ: ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಾಕ್ಸಿನ್‍ಗಾಗಿ ಜನ ಗಲಾಟೆ ಆರಂಭ ಮಾಡಿದ್ದಾರೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬೆಳಿಗ್ಗೆ 6 ಗಂಟೆಯಿಂದಲೇ ಇಲ್ಲಿ ಬಂದು ಸರದಿಯಲ್ಲಿ ನಿಂತಿದ್ದರು. ಆದರೆ ವ್ಯಾಕ್ಸಿನ್ ಕೊಡಬೇಕಾದ ಸಿಬ್ಬಂದಿ ತಮಗೆ ಬೇಕಾದವರಿಗೆ ಮಾತ್ರ ಆಸ್ಪತ್ರೆ ಒಳಗೆ ಕರೆದುಕೊಂಡು ಹೋಗಿ ವ್ಯಾಕ್ಸಿನ್ ಹಾಕುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

    ವ್ಯಾಕ್ಸಿನ್‍ಗಾಗಿ ಮುಂಜಾನೆ ಬಂದು ಕಾದು ನಿಂತು ಸುಸ್ತಾದ ಸಾರ್ವಜನಿಕರು ಆಸ್ಪತ್ರೆ ಸಿಬ್ಬಂದಿ ಜೊತೆ ಗಲಾಟೆ ಮಾಡಿ ಆಸ್ಪತ್ರೆ ಒಳಗೆ ನುಗ್ಗಿದ್ದಾರೆ. ಕೆಲವರು ನಿನ್ನೆ ಕೂಡಾ ವ್ಯಾಕ್ಸಿನ್ ಗಾಗಿ ಬಂದು ವಾಪಸ್ ಆಗಿದ್ದಾರೆ. ಆದರೆ ನಿನ್ನೆ ವ್ಯಾಕ್ಸಿನ್ ಸಿಗದ ಹಿನ್ನೆಲೆ ಇವತ್ತು ಬಂದು ಸಾಲಿನಲ್ಲಿ ನಿಂತಿದ್ದರು. ಆದರೆ ಇಂದು ಕೂಡ ವ್ಯಾಕ್ಸಿನ್ ಸಿಗದೆ ಇದ್ದಾಗ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅರಣ್ಯದಲ್ಲಿ ಕಾಣೆಯಾಗಿದ್ದ 110ರ ವೃದ್ಧ ನಾಲ್ಕು ದಿನಗಳ ಬಳಿಕ ಪತ್ತೆ

    ಧಾರವಾಡ ಜಿಲ್ಲೆಯಲ್ಲಿ ಇಂದು 7 ಸಾವಿರ ಕೊವ್ಯಾಕ್ಸಿನ್ ಹಾಗೂ 7 ಸಾವಿರ ಕೋವಿಶೀಲ್ಡ್ ಮಾತ್ರ ಸ್ಟಾಕ್ ಇವೆ. ಹೀಗಾಗಿ ಈ ವ್ಯಾಕ್ಸಿನ್ ಕೇವಲ ವಿದ್ಯಾರ್ಥಿಗಳಿಗೆ ಹಾಗೂ ಎರಡನೇ ಡೊಸ್ ಇದ್ದವರಿಗೆ ಮಾತ್ರ ಆರೋಗ್ಯ ಇಲಾಖೆ ನೀಡಲು ಸೂಚನೆ ನೀಡಿದೆ. ಹೀಗಾಗಿ 45 ವರ್ಷದ ಮೇಲ್ಪಟ್ಟ ಜನ ಮೊದಲ ಡೊಸ್ ಪಡೆಯಲು ಬಂದು ವಾಪಸ್ ಆಗುವಂತೆ ಆಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

  • ಮಾಸ್ಕ್ ಮರೆತ ಕೋಟೆನಾಡಲ್ಲಿ ವಿದ್ಯಾರ್ಥಿಗಳಿಂದ ಜನಜಾಗೃತಿ

    ಮಾಸ್ಕ್ ಮರೆತ ಕೋಟೆನಾಡಲ್ಲಿ ವಿದ್ಯಾರ್ಥಿಗಳಿಂದ ಜನಜಾಗೃತಿ

    ಚಿತ್ರದುರ್ಗ: ಮದುವೆ, ಮುಂಜಿ, ನಾಮಕರಣ ಎಂದು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಜನರು ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಮರೆತು ಓಡಾಡ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಇದನ್ನೂ ಓದಿ:  ಜುಲೈ 19, 22ಕ್ಕೆ SSLC ಎಕ್ಸಾಂ ಫಿಕ್ಸ್ – 2 ದಿನದಲ್ಲಿ ಸರಳ ಪರೀಕ್ಷೆ, ಯಾರೂ ಫೇಲ್ ಇಲ್ಲ

    ನಮಗೆ ಕೊರೊನಾ ಮತ್ತೆ ಮರುಕಳಿಸಿ ಅನಾಹುತವನ್ನ ಸೃಷ್ಟಿಮಾಡಬಹುದೆಂಬ ಮುಂಜಾಗ್ರತೆಯಿಂದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಮತ್ತು ಮಲ್ಲನಕಟ್ಟೆ ಗ್ರಾಮದ ಮಕ್ಕಳ ಸಹಯೋಗದೊಂದಿಗೆ ಮಾಸ್ಕ್ ಕುರಿತ ಜನಜಾಗೃತಿ ಕಾರ್ಯಕ್ರಮ ಇಂದು ನಡೆಸಲಾಯಿತು.

    ಈ ವೇಳೆ ಮಾತನಾಡಿದ ಜಾಗೃತಿ ಹೋರಾಟಗಾರದ ಹೆಚ್ ಎಸ್‍ಕೆ ಸ್ವಾಮಿಯವರು,ವೈದ್ಯರಸಲಹೆಯಂತೆ ವರ್ಷ ಪೂರ್ತಿ ಮಾಸ್ಕ್ ಧರಿಸಿಕೊಂಡು ಇರಬೇಕು. 3ನೇ ಅಲೆ ಮತ್ತೆ ಬರಬಹುದು, ಅದಕ್ಕಾಗಿ ನಾವು ಸಿದ್ಧರಾಗಿರಬೇಕು. 3ನೇ ಅಲೆ ಮಕ್ಕಳಿಗೆ ಬರುತ್ತದೆ ಹೀಗಾಗಿ ಶಾಲಾ ಮಕ್ಕಳಿಗೆ ಲಸಿಕೆ ಹಾಕುವರೆಗೆ ನಾವು ಎಚ್ಚರವಾಗಿರಬೇಕು. ಅಲ್ಲದೇ ಸಾಮಾಜಿಕ ಅಂತರ ಮರೆಯಬಾರದು. ಸಾವಿನ ಪ್ರಮಾಣ ಹೆಚ್ಚಾಗುವ ಸಂಭವವುಂಟು. ಹೀಗಾಗಿ ಕೊರೊನಾ ನಿಗ್ರಹಿಸುವುದು ಮುಂದೆ ಕಷ್ಟಕರವಾಗಬಹುದು. ಆದರೆ ಜನರು ಬೇಗ ವೈದ್ಯಕೀಯ ಮಾಹಿತಿಯನ್ನ ಮರೆತು ಓಡಾಡುವುದನ್ನ ಕಲಿಯುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

    ಈ ವರ್ಷ ಶಾಲೆಗಳು ಪ್ರಾರಂಭಮಾಡುವುದು ದುಸ್ತರವಾಗಿದೆ, ಅದಕ್ಕಾಗಿ ನಾವು ಇನ್ನೂ ಸಿದ್ಧರಾಗಿಲ್ಲ. ಈ ವರ್ಷ ಪೂರ್ತಿ ಮಕ್ಕಳು ಮನೆಯಲ್ಲೇ ಕಲಿಯಬೇಕಾಗುವುದು, ಅವರ ದೈಹಿಕ ಆರೋಗ್ಯ ಕೂಡ ಏರು ಪೇರಾಗುವುದು. ಪೌಷ್ಟಿಕಾಂಶಗಳ ಕೊರೆತೆ ಎದ್ದು ಕಾಣುವುದು. ಬಿಸಿ ಊಟ ಇಲ್ಲದೇ, ಬಡತನದಲ್ಲಿ ಬದುಕು ಸಾಗಿಸುತ್ತಿರುವ ಸಾವಿರಾರು ಮಕ್ಕಳ ಆರೋಗ್ಯ ರಕ್ಷಣೆ ಆಗಬೇಕು, ಅವರ ಬದುಕು ಕೂಡ ಹಸನಾಗಬೇಕು. ಅದಕ್ಕಾಗಿ ನಾವು ಸಾಕಷ್ಟು ಪ್ರಯತ್ನಪಟ್ಟು ಕೊರೊನಾವನ್ನು ನಮ್ಮಿಂದ ದೂರ ಮಾಡಬೇಕಾಗಿದೆ ಎಂದರು.

    ಕಾರ್ಯಕ್ರಮದಲ್ಲಿ ಮಕ್ಕಳ ಮಾಸ್ಕ್ ಧರಿಸಿ ಎಂಬ ಕಾಗದದ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂಬ ಬಿತ್ತಿ ಪತ್ರಗಳನ್ನ ಪ್ರದರ್ಶಿಸಿ, ಕೊರೊನಾ ಹಾಡಿನ ಮೂಲಕ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಕಾವ್ಯ, ಜಾನವಿ, ಶ್ರೀನಿವಾಸ, ಸುರಕ್ಷಾ, ಹೆಚ್.ಎಸ್.ರಚನ, ಹೆಚ್.ಎಸ್. ಪ್ರೇರಣ, ವೇನಿಲಾ, ಹಾಜರಿದ್ದರು.

  • ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ರಾಜ್ಯವನ್ನು ಕೊರೊನಾ ಮುಕ್ತಗೊಳಿಸಿ: ಈಶ್ವರಪ್ಪ

    ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ರಾಜ್ಯವನ್ನು ಕೊರೊನಾ ಮುಕ್ತಗೊಳಿಸಿ: ಈಶ್ವರಪ್ಪ

    ಶಿವಮೊಗ್ಗ: ಕೊರೊನಾ ರೋಗವನ್ನು ಹಿಮ್ಮೆಟ್ಟಿಸಲು ಅವಶ್ಯಕವಾಗಿರುವ ಕೋವಿಡ್ ಲಸಿಕೆಯನ್ನು ದೊರಕಿಸುವ ಲಸಿಕಾ ಅಭಿಯಾನವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ರಾಜ್ಯವನ್ನು ಕೊರೊನಾ ಮುಕ್ತಗೊಳಿಸಲು ಎಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

    ಜಿಲ್ಲಾ ಪಂಚಾಯತ್ ಸಭಾಂಣದಲ್ಲಿ ಧ್ವನಿ ಫೌಂಡೇಶನ್ ಬೆಂಗಳೂರು, ಜಿಲ್ಲಾ ಪಂಚಾಯತ್ ಹಾಗೂ ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿಯ ಕೋವಿಡ್ ಜಿಲ್ಲಾ ನೋಡಲ್ ಏಜೆನ್ಸಿ ಇವರ ಸಹಯೋಗದಲ್ಲಿ ಕೋವಿಡ್ ಲಸಿಕೆ ಮಹತ್ವ ಮತ್ತು ಅದರ ಉಪಯೋಗ ಕುರಿತು ಎಲ್ಲರಿಗೂ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ತಯಾರಿಸಲಾಗಿರುವ ಲಸಿಕೆ ಮೂಲಕ ಕೋವಿಡ್ 19ನ್ನು ನಿಯಂತ್ರಿಸಲು ಮಾರ್ಗದರ್ಶಿಕೆಯನ್ನು ಅನಾವರಣಗೊಳಿಸಿದ್ದಾರೆ. ಇದನ್ನೂ ಓದಿ: ಕೆಲಸದ ಒತ್ತಡದಿಂದಾಗಿ ವ್ಯಕ್ತಿಗೆ ಖಾಲಿ ಸಿರಿಂಜ್ ಚುಚ್ಚಿದ ನರ್ಸ್..!

    ರಾಜ್ಯ ಸರಕಾರ ಈಗಾಗಲೇ ತುಂಬ ವ್ಯವಸ್ಥಿತವಾಗಿ ಎಲ್ಲರಿಗೂ ಲಸಿಕೆ ದೊರಕಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಜೂನ್ 21ರಂದು ಸುಮಾರು 11 ಲಕ್ಷ ಜನರಿಗೆ ಒಂದೇ ದಿನ ಲಸಿಕೆ ಹಾಕುವ ಮೂಲಕ ದೊಡ್ಡ ಸಾಧನೆಯನ್ನೇ ಮಾಡಲಾಗಿದೆ. ಹೀಗೆ ಇಡೀ ರಾಜ್ಯದ ಜನತೆಗೆ ಲಸಿಕೆ ದೊರಕಬೇಕು ಹಾಗೂ ರಾಜ್ಯ ಕೊರೊನಾ ಮುಕ್ತವಾಗಬೇಕು ಎಂಬ ಸದುದ್ದೇಶದಿಂದ ಮಾರ್ಗದರ್ಶಿಕೆಯನ್ನು ಇಂದು ಲೋಕಾರ್ಪಣೆ ಮಾಡಿದ್ದೇನೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಮಾರ್ಗದರ್ಶಿಕೆಯನ್ನು ಗ್ರಾಮ ಪಂಚಾಯ್ತಿ ಮೂಲಕ ಜನರಿಗೆ ತಲುಪಿಸಬೇಕು ಎಂದರು. ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಪ್ರಯತ್ನಿದರೆ ತಪ್ಪೇನು, ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ : ಈಶ್ವರಪ್ಪ

    ಆರಂಭದಲ್ಲಿ ಲಸಿಕೆ ಬಗ್ಗೆ ಹಲವರಲ್ಲಿ ತಪ್ಪು ಕಲ್ಪನೆ ಇತ್ತು. ಈಗಲೂ ಕೆಲವರಲ್ಲಿ ಇದೆ. ಅದನ್ನು ಹೋಗಲಾಡಿಸುವ ಪ್ರಯತ್ನ ಸರ್ಕಾರ ಮತ್ತು ಸಂಘ ಸಂಸ್ಥೆಗಳು ಮಾಡುತ್ತಿದೆ. ಜೊತೆಗೆ ಇತ್ತೀಚೆಗೆ ಲಸಿಕೆ ಬಗ್ಗೆ ಜಾಗೃತಿ ಕೂಡ ಹೆಚ್ಚಾಗಿದೆ. ಲಸಿಕೆ ಬೇಡಿಕೆ ಹೆಚ್ಚಿದೆ. ನಮ್ಮ ಪ್ರಧಾನಿಯವರು ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ಪಣ ತೊಟ್ಟಿದ್ದಾರೆ. ಲಸಿಕೆಯನ್ನೂ ಪೂರೈಸುತ್ತಿದ್ದಾರೆ ಎಂದು ಹೇಳಿದರು.

    ಕೊರೊನಾ ನಿಯಂತ್ರಣ ಕುರಿತು ಜನಜಾಗೃತಿ ಮತ್ತು ಎರಡನೇ ಅಲೆ ನಿಯಂತ್ರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರ, ವಿವಿಧ ಇಲಾಖೆಗಳು ಗ್ರಾಮೀಣ ಭಾಗದಲ್ಲಿ ವಿಶೇಷವಾಗಿ ಗ್ರಾಮೀಣಾಭಿವೃದ್ದಿ ಇಲಾಖೆಯ ಸೇವೆಯನ್ನು ಮರೆಯುವಂತಿಲ್ಲ. ರಾಜ್ಯ, ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮೀಣ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಎನ್‍ಜಿಓಗಳು ಜನ ಜಾಗೃತಿಗೊಳಿಸುವಲ್ಲಿ ಮಾಡುತ್ತಿರುವ ಕೆಲಸ ಅತ್ಯುತ್ತಮವಾಗಿದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ವ್ಯಾಕ್ಸಿನ್ ಕೊರತೆ- NO STOCK ಫಲಕ ಹಾಕಿದ ಆಸ್ಪತ್ರೆಗಳು

    ಗ್ರಾಮ ಮಟ್ಟದಲ್ಲಿ ಲಸಿಕಾ ಅಭಿಯಾನ ಯಶಸ್ವಿಯಾಗಬೇಕು ಎಂಬ ಉದ್ದೇಶದಿಂದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಅಭಿಯಾನದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಂಡಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಮಾರ್ಗದರ್ಶಿಯನ್ನು ಹೊರತಂದಿದ್ದು, ಇದರಲ್ಲಿ ರಾಜ್ಯ, ಜಿಲ್ಲೆ, ತಾಲ್ಲೂಕು ಹಾಗೂ ಗ್ರಾ.ಪಂ ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಸ್ವಯಂ ಸೇವಕರ ಪಾತ್ರವನ್ನು ವಿವರಿಸಲಾಗಿದೆ. ಈ ಮಾರ್ಗದರ್ಶಿಕೆಯಿಂದಾಗಿ ಜಿಲ್ಲಾಧಿಕಾರಿಯಿಂದ ಹಿಡಿದು ಗ್ರಾಮ ಪಂಚಾಯಿತಿ ಕಾರ್ಯದರ್ಶಿಯವರೆಗೆ ಎಲ್ಲರಿಗೂ ತಮ್ಮ ತಮ್ಮ ಜವಾಬ್ದಾರಿಗಳ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿ ಸಿಗುತ್ತದೆ. ಈ ಮಾರ್ಗದರ್ಶಿಕೆಯನ್ನು ಉಪಯೋಗಿಸಿಕೊಂಡು ಎಲ್ಲಾ ಮಟ್ಟದಲ್ಲಿಯೂ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಹೆಚ್ಚು ವ್ಯವಸ್ಥಿತವಾಗಿ ಕೆಲಸ ಮಾಡಿ ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸಿ ಕೊರೊನಾದಿಂದ ರಾಜ್ಯ ಮುಕ್ತಿ ಪಡೆಯಲು ಸಹಾಯವಾಗಲಿದೆ ಎಂದರು. ಇದನ್ನೂ ಓದಿ: ಜಿಯೋದಿಂದ ಬರುತ್ತೆ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ – ಬೆಲೆ ಎಷ್ಟು? ವಿಶೇಷತೆ ಏನು? ಕಡಿಮೆ ಬೆಲೆಗೆ ಹೇಗೆ ಸಿಗುತ್ತೆ?

    ಇದೇ ವೇಳೆ ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸುವ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಓ ಎಂ.ಎಲ್.ವೈಶಾಲಿ, ಡಿ.ಎಸ್. ಜಯಲಕ್ಷ್ಮಿ, ಡಿಹೆಚ್‍ಓ ಡಾ. ರಾಜೇಶ್ ಸುರಗಿಹಳ್ಳಿ, ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿಯ ಸಿಇಓ ಬದ್ರೀಶ.ಬಿ.ಟಿ, ಇತರೆ ಅಧಿಕಾರಿಗಳು ಹಾಜರಿದ್ದರು.

  • ಡಾ.ದೇವಿಶೆಟ್ಟಿ ವರದಿ ಶಿಫಾರಸು 45 ದಿನಗಳಲ್ಲಿ ಅನುಷ್ಠಾನ: ಸಚಿವ ಸುಧಾಕರ್

    ಡಾ.ದೇವಿಶೆಟ್ಟಿ ವರದಿ ಶಿಫಾರಸು 45 ದಿನಗಳಲ್ಲಿ ಅನುಷ್ಠಾನ: ಸಚಿವ ಸುಧಾಕರ್

    ಬೆಂಗಳೂರು: ಕೊರೊನಾ 3ನೇ ಅಲೆ ನಿಯಂತ್ರಣಕ್ಕೆ ಸರ್ಕಾರ ರಚಿಸಿದ್ದ ತಜ್ಞರ ಸಮಿತಿ ಮಧ್ಯಂತರ ವರದಿ ನೀಡಿದ ಬೆನ್ನಲ್ಲೇ ವರದಿಯ ಶಿಫಾರಸು ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ. ತಜ್ಞರ ನೀಡಿರುವ ಸಲಹೆ, ಶಿಫಾರಸುಗಳನ್ನ 45 ದಿನಗಳಲ್ಲಿ ರಾಜ್ಯಾದ್ಯಂತ ಅನುಷ್ಠಾನ ಮಾಡೋದಾಗಿ ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ವರದಿ ಅನುಷ್ಠಾನ ಕುರಿತು ಮಾತನಾಡಿದ ಅವರು, ನಿನ್ನೆ ಡಾ. ದೇವಿ ಪ್ರಸಾದ್ ಶೆಟ್ಟಿ ನೇತೃತ್ವದ ಸಮಿತಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. 92 ಪುಟಗಳ ವರದಿಯಲ್ಲಿ ಅನೇಕ ಶಿಫಾರಸುಗಳನ್ನು ಮಾಡಿದೆ. ಸಮಿತಿಯ ಶಿಫಾರಸು ಅನುಷ್ಠಾನ ಮಾಡಲು ಸರ್ಕಾರ ಪ್ರಕ್ರಿಯೆ ಪ್ರಾರಂಭ ಮಾಡಿದೆ. 45 ದಿನಗಳಲ್ಲಿ ತಜ್ಞರು ಕೊಟ್ಟ ಶಿಫಾರಸನು ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ:  2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೇರ್ ಸೆಂಟರ್ ಪ್ರಾರಂಭ, ವೈದ್ಯರು, ಸಿಬ್ಬಂದಿ ನೇಮಕ ಪ್ರಕ್ರಿಯೆ, ಐಸಿಯು ಬೆಡ್, ಆಕ್ಸಿಜನ್ ಬೆಡ್ ಹೆಚ್ಚಳ ಮಾಡುವುದು. ಸಿಬ್ಬಂದಿಗೆ ಅಗತ್ಯ ತರಬೇತಿ ನೀಡುವುದು ಸೇರಿದಂತೆ ಅನೇಕ ಶಿಫಾರಸುಗಳನ್ನ ಸಮಿತಿ ಮಾಡಿತ್ತು. ಸಮತಿ ವರದಿಯನ್ನು ಪ್ರತಿ ಜಿಲ್ಲೆಗಳಲ್ಲೂ ಅನುಷ್ಠಾನ ಮಾಡಲು ಕ್ರಮವಹಿಸಲಾಗುತ್ತೆ. ತಜ್ಞರ ಎಲ್ಲಾ ಸಲಹೆ, ಶಿಫಾರಸುಗಳನ್ನ ರಾಜ್ಯ ಸರ್ಕಾರ ಸಮರ್ಪಕವಾಗಿ ಅನುಷ್ಠಾನ ಮಾಡುವ ಕೆಲಸ ಮಾಡಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

    ಖಾಸಗಿ ಆಸ್ಪತ್ರೆಗಳ ಬೆಡ್ ವಾಪಸ್:

    ಕೊರೊನಾ ತೀವ್ರತೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಂದ ಪಡೆದಿದ್ದ ಬೆಡ್‍ಗಳನ್ನು ತಾತ್ಕಾಲಿಕವಾಗಿ ಆಸ್ಪತ್ರೆಗಳಿಗೆ ವಾಪಸ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದೂ ಅವರು ಇದೇ ವೇಳೆ ತಿಳಿಸಿದರು. ಕೊರೊನಾ ಕೇಸ್ ಕಡಿಮೆ ಆಗಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇವೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಬೆಡ್ ಸದ್ಯಕ್ಕೆ ಕೊಡೋದು ಬೇಡ. ಮುಂದೆ ಏನಾದ್ರೂ ಕೇಸ್ ಹೆಚ್ಚಳ ಆದ್ರೆ, ಸರ್ಕಾರಕ್ಕೆ ಬೆಡ್ ಬೇಕು ಎಂದು ಕೇಳಿದ್ರೆ ಆಗ ಖಾಸಗಿ ಆಸ್ಪತ್ರೆಗಳು ಬೆಡ್ ಕೊಡಬೇಕು. ಸದ್ಯ ಕೋವಿಡೇತರ ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗುತ್ತೆ ಎಂದು ಸಚಿವರು ತಿಳಿಸಿದರು.

  • 2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    ಬೆಂಗಳೂರು: ಇಡೀ ದೇಶದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡಲಾಗಿದೆ. ಇದೇ ವೇಳೆ ಲಸಿಕೆ ನೀಡೋದ್ರಲ್ಲಿ ಕರ್ನಾಟಕ ರಾಜ್ಯ ಇತಿಹಾಸ ನಿರ್ಮಿಸಿದೆ. ಕರ್ನಾಟಕ ಇದುವರೆಗೂ 2 ಕೋಟಿ ಜನರಿಗೆ ಲಸಿಕೆ ನೀಡಿ ಹೊಸ ದಾಖಲೆಯನ್ನು ಬರೆದಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಇದನ್ನೂ ಓದಿ:  ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ

    ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್ ಕರ್ನಾಟಕ ಲಸಿಕೆ ನೀಡಿಕೆಯಲ್ಲಿ ಇತಿಹಾಸ ನಿರ್ಮಿಸಿದೆ ಇದೊಂದು ದೊಡ್ಡ ಸಾಧನೆ. ಇದಕ್ಕೆ ಕೆಲಸ ಮಾಡಿದ ಎಲ್ಲಾ ವೈದ್ಯರು, ದಾದಿಯರಿಗೆ, ಆಸ್ಪತ್ರೆಗಳಿಗೆ ಧನ್ಯವಾದ ಎಂದು ಅಂತ ಹೆಮ್ಮೆಯಿಂದ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ಜನರ ಲಸಿಕೆ ಉತ್ಸಾಹಕ್ಕೂ ಧನ್ಯವಾದ ತಿಳಿಸಿದ ಸಚಿವರು, ಜನರು ಕೂಡಾ ಲಸಿಕೆ ಹಾಕಿಸಿಕೊಳ್ಳೋಕೆ ಬರುತ್ತಿದ್ದಾರೆ. ಇದರಿಂದಾಗಿಯೇ ಲಸಿಕೆ ಅಭಿಯಾನ 2 ಕೋಟಿ ದಾಟಿದೆ. ಯೋಗ ದಿನದಂದು ಒಂದೇ ದಿನ 11 ಲಕ್ಷ ಲಸಿಕೆ ಕೊಟ್ಟಿದ್ದೇವೆ. ದೇಶದಲ್ಲಿ ಅತಿ ಹೆಚ್ಚು ಲಸಿಕೆ ಕೊಟ್ಟ ಎರಡನೇ ಸ್ಥಾನದಲ್ಲಿ ನಾವು ಇದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಧೋನಿ ಮಾಸ್ ಮೀಸೆಗೆ ಅಭಿಮಾನಿಗಳು ಫಿದಾ

    ಲಸಿಕೆ ಉಚಿತವಾಗಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವ್ರಿಗೆ ಧನ್ಯವಾದ. ಜನರು ಕೂಡಾ ಆತಂಕ ಇಲ್ಲದೆ ಎಲ್ಲರೂ ಲಸಿಕೆ ಪಡೆಯಬೇಕು. ಇದೇ ವೇಳೆ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಮಾತನಾಡಿದ ಅವರು, ಮಕ್ಕಳಿಗೆ ಲಸಿಕೆ ಟ್ರಯಲ್ ನಡೆಯುತ್ತಿದೆ. ಟ್ರಯಲ್ ಪ್ರಕ್ರಿಯೆ ಮುಗಿದ ಮೇಲೆ ಈ ಬಗ್ಗೆ ನಿರ್ಧಾರ ಮಾಡಲಾಗುತ್ತೆ ಎಂದು ಸ್ಪಷ್ಟಪಡಿಸಿದ್ದಾರೆ.