Tag: ವ್ಯಾಪರ

  • ಕೇಸರಿ ಧ್ವಜದೊಂದಿಗೆ ಕುಂಕುಮ, ವಿಭೂತಿ ಹಚ್ಚಿ ವ್ಯಾಪಾರ ಮಾಡಿ: ವ್ಯಾಪಾರಿಗಳಿಗೆ ಪ್ರಮೋದ್ ಮುತಾಲಿಕ್ ಸಲಹೆ

    ಕೇಸರಿ ಧ್ವಜದೊಂದಿಗೆ ಕುಂಕುಮ, ವಿಭೂತಿ ಹಚ್ಚಿ ವ್ಯಾಪಾರ ಮಾಡಿ: ವ್ಯಾಪಾರಿಗಳಿಗೆ ಪ್ರಮೋದ್ ಮುತಾಲಿಕ್ ಸಲಹೆ

    ಉಡುಪಿ: ಈಗೀಗ ಮಳಿಗೆಗಳಿಗೆ ಹಿಂದೂ (Hindu) ಹೆಸರು ಇಟ್ಟುಕೊಂಡು ಮುಸ್ಲಿಮರು (Muslims) ವ್ಯಾಪಾರ (Trade) ಮಾಡ್ತಾರೆ. ಬಹುದೇವ ಆರಾಧಕರನ್ನು ವಿರೋಧಿಸುವವರಿಗೆ ಹಿಂದೂಗಳ ಹಣ ಬೇಕಾ ಎಂದು ಪ್ರಮೋದ್ ಮುತಾಲಿಕ್ (Pramod Muthalik) ಪ್ರಶ್ನೆ ಮಾಡಿದ್ದಾರೆ.

    ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangaluru) ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ವಿಚಾರದಲ್ಲಿ ಧರ್ಮದಂಗಲ್ ನಡೆಯುತ್ತಿದೆ. ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ (VHP) ಭಜರಂಗದಳ ಒತ್ತಾಯಿಸಿದೆ. ದೇಗುಲದ ಆವರಣದಲ್ಲಿ ಎಲ್ಲಾ ಸಮುದಾಯದವರಿಗೆ ವ್ಯಾಪಾರಕ್ಕೆ ಸಮಿತಿ ಅವಕಾಶ ಕೊಟ್ಟಿದೆ. ಈ ಬಗ್ಗೆ ಶ್ರೀರಾಮ ಸೇನೆಯ (Sri Ram Sena) ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಉಡುಪಿಯಲ್ಲಿ (Udupi) ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಬೇಕಾದಷ್ಟು ಪ್ರೀತಿ ಮಾಡಿ, ಸಲಿಂಗಿ ಮದುವೆ ಬೇಡ: ಪ್ರಮೋದ್ ಮುತಾಲಿಕ್

    ವಿಶ್ವ ಹಿಂದೂ ಪರಿಷತ್ ಹೋರಾಟಕ್ಕೆ ನನ್ನ ಬೆಂಬಲ ಇದೆ. ಹಿಂದೂಗಳು ಹಣೆ ಮೇಲೆ ಕುಂಕುಮ, ಭಸ್ಮ ಹಚ್ಚಿಕೊಂಡು ವ್ಯಾಪಾರ ಮಾಡಿ ಎಂದು ಮುತಾಲಿಕ್ ಸಲಹೆ ನೀಡಿದರು. ಆಸ್ತಿಕತೆ ಬೇಡ. ಹಿಂದೂಗಳ ವ್ಯಾಪಾರ ಬೇಕು, ಲಾಭ ಬೇಕು ಅಂದ್ರೆ ಹೇಗೆ? ಗೋಪೂಜೆ ನಡೆಯುವ ದೇವಸ್ಥಾನದಲ್ಲಿ ಗೋಹತ್ಯೆ ಮಾಡುವವರಿಗೆ ಯಾಕೆ ಅವಕಾಶ ಕೊಡಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿಎಂ ಇಬ್ರಾಹಿಂ ಸಹಾನುಭೂತಿ ಗಿಟ್ಟಿಸಿಕೊಳ್ಳುವ ಮನೋಭಾವದಲ್ಲಿದ್ದಾರೆ: ಡಾ.ಶಿವರಾಜ್ ಪಾಟೀಲ್

    ಅಲ್ಲಾಹ್ ಒಬ್ಬನೇ ದೇವರು ಅನ್ನೋರಿಗೆ ಬಹುದೇವ ಉಪಾಸಕರ ವ್ಯಾಪಾರ ಯಾಕೆ ಬೇಕು? ದೇಶದ ಸುರಕ್ಷತೆಯ ಹಿನ್ನೆಲೆಯಲ್ಲಿ ದಯವಿಟ್ಟು ಈ ರೀತಿ ಅವಕಾಶ ಬೇಡ. ಹಿಂದೂಗಳಿಗೆ ಮಾತ್ರ ಅವಕಾಶ ನೀಡಿ. ಹಿಂದೂ ವ್ಯಾಪಾರಿಗಳ ಮಳಿಗೆಗೆ ಕೇಸರಿ ಧ್ವಜ ಅಳವಡಿಸಿದ ಕ್ರಮ ಸರಿಯಾಗಿದೆ ಎಂದರು. ಇದನ್ನೂ ಓದಿ: ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐಗೆ ವಹಿಸಲಿ: ಅಶ್ವಥ್ ನಾರಾಯಣ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುರಿ ವ್ಯಾಪಾರಕ್ಕೆ ತೆರಳುತ್ತಿದ್ದ ತಂದೆ, ಮಗ ಸಾವು

    ಕುರಿ ವ್ಯಾಪಾರಕ್ಕೆ ತೆರಳುತ್ತಿದ್ದ ತಂದೆ, ಮಗ ಸಾವು

    ಕೋಲಾರ:  ಬೊಲೆರೊ, ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೊಲೆರೊದಲ್ಲಿದ್ದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ   ಘಟನೆ ಕೋಲಾರದ ಮಾಲೂರು ತಾಲ್ಲೂಕಿನ ಹುಳದೇನಹಳ್ಳಿಯಲ್ಲಿ ನಡೆದಿದೆ.  

    ಹನುಮಂತು(45), ಭುವನ್(12) ಮೃತರಾಗಿದ್ದಾರೆ. ಇವರು ಚಿಕ್ಕಬಳ್ಳಾಪುರ ಮೂಲದವರಗಿದ್ದಾರೆ. 14 ವರ್ಷದ ಮತ್ತೊಬ್ಬ ಮಗ ಸೇರಿ 3 ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಲ್ಲಿ ಎರಡು ಕುರಿಗಳು ಸಾವನ್ನಪ್ಪಿವೆ. ಇದನ್ನೂ ಓದಿ: ಜನ ಬಯಸಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ: ಅಭಿಷೇಕ್ ಅಂಬರೀಶ್

    ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಹುಳದೇನಹಳ್ಳಿ ಬಳಿ ಇಂದು ಮುಂಜಾನೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ತೊರಹಳ್ಳಿಯ ಮಾವನ ಮನೆಗೆ ಬಂದು ಬೆಳಗ್ಗೆ ಬಂಗಾರಪೇಟೆ ಶುಕ್ರವಾರದ ಸಂತೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮತ್ತೊಬ್ಬ ಮಗ ಹಾಗೂ ಜೊತೆಯಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿವೆ. ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೃಷ್ಣಾ ಪ್ರವಾಹಕ್ಕೆ ರೈತರು ತತ್ತರ- ಲಕ್ಷಾಂತರ ರೂ. ಬೆಳೆ ಹಾನಿ

  • ಚೀನಾ ಜೊತೆಗಿನ 900 ಕೋಟಿ ಒಪ್ಪಂದ ರದ್ದುಗೊಳಿಸಿದ ‘ಹೀರೋ’ಸೈಕಲ್

    ಚೀನಾ ಜೊತೆಗಿನ 900 ಕೋಟಿ ಒಪ್ಪಂದ ರದ್ದುಗೊಳಿಸಿದ ‘ಹೀರೋ’ಸೈಕಲ್

    -ಚೀನಾ ಜೊತೆಗಿನ ಎಲ್ಲ ವ್ಯಾಪಾರಕ್ಕೆ ಬ್ರೇಕ್

    ನವದೆಹಲಿ: ಗಾಲ್ವಾನಾ ಕಣಿವೆ ಪ್ರದೇಶದಲ್ಲಿ ನಡೆದ ಭಾರತ ಮತ್ತು ಚೀನಾದ ನಡುವೆ ಸಂಘರ್ಷದ ಬಳಿಕ ದೇಶದಲ್ಲಿ ಹಲವು ಬದಲಾವಣೆಗಳು ಆಗುತ್ತಿವೆ. ಕೇಂದ್ರ ಸರ್ಕಾರ 59 ಚೀನಾ ಆ್ಯಪ್‍ಗಳನ್ನು ನಿಷೇಧಿಸಿದ ಬೆನ್ನಲ್ಲೆ ಉದ್ಯಮಿದಾರರು ಸಹ ವೈರಿ ರಾಷ್ಟ್ರದ ಜೊತೆಗಿನ ವ್ಯವಹಾರಿಕ ಸಂಬಂಧವನ್ನು ಕಡಿತಗೊಳಿಸಿಕೊಳ್ಳುತ್ತಿದ್ದಾರೆ. ಇದೀಗ ಹೀರೋ ಸೈಕಲ್ ಕಂಪನಿ ಚೀನಾ ಜೊತೆಗಿನ 900 ಕೋಟಿ ವ್ಯವಹಾರವನ್ನ ರದ್ದುಗೊಳಿಸಿದೆ.

    ಸೈಕಲ್ ತಯಾರಿಕೆಗಾಗಿ ಹೀರೋ ಕಂಪನಿ ಬಿಡಿ ಭಾಗಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳುತ್ತಿತ್ತು. ಈಗ ಪಂಜಾಬ್ ರಾಜ್ಯದ ಲೂಧಿಯಾನದ ಸಣ್ಣ ಕಂಪನಿಗಳಿಂದ ಬಿಡಿ ಭಾಗಗಳನ್ನು ತರಿಸಿಕೊಳ್ಳಲು ಹೀರೋ ಕಂಪನಿ ನಿರ್ಧರಿಸಿದೆ. ಮುಂದಿನ ತಿಂಗಳ ಒಪ್ಪಂದವನ್ನು ರದ್ದು ಮಾಡಿಕೊಂಡಿದ್ದರಿಂದ ಚೀನಾಗೆ ಅಂದಾಜು 900 ಕೋಟಿ ರೂ. ನಷ್ಟ ಸಂಭವಿಸಲಿದೆ.

    ಜರ್ಮಿನಿಯಲ್ಲಿ ಚೀನಾ ತನ್ನ ಸ್ಥಾವರ ಸ್ಥಾಪಿಸಲು ಮುಂದಾಗಿದೆ. ಜರ್ಮನಿಯನ್ನು ವ್ಯಾಪಾರದ ಕೇಂದ್ರ ಬಿಂದುವನ್ನಾಗಿ ಮಾಡಿಕೊಳ್ಳುವ ಮೂಲಕ ವಿಶ್ವದ ಮಾರುಕಟ್ಟೆಯನ್ನು ವ್ಯವಹರಿಸಲು ಕಂಪನಿ ಪ್ಲಾನ್ ಮಾಡಿಕೊಂಡಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಹೀರೋ ಕಂಪನಿ ಸರ್ಕಾರಕ್ಕೆ 100 ಕೋಟಿ ರೂ.ಯನ್ನು ದಾನವಾಗಿ ನೀಡಿತ್ತು.

    ಚೀನಾದ 59 ಆ್ಯಪ್ ಮಾಡುವ ಮೂಲಕ ನೆರೆಯ ವೈರಿ ರಾಷ್ಟ್ರಕ್ಕೆ ಶಾಕ್ ನೀಡಿರುವ ಪ್ರಧಾನಿ ಮೋದಿ, ಮತ್ತೊಂದು ಹೆಜ್ಜೆಯನ್ನು ಇರಿಸಿದ್ದಾರೆ. ದೇಶದ ಯುವ ಪೀಳಿಗೆ ದೇಶಿಯ ಆ್ಯಪ್ ತಯಾರಿಸುವ ಮೂಲಕ ಆತ್ಮನಿರ್ಭರ ಭಾರತದ ಜೊತೆ ಕೈ ಜೋಡಿಸಿ ಎಂದು ಕರೆ ನೀಡಿದ್ದಾರೆ.