Tag: ವ್ಯಾಪಾರ

  • ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

    ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ – ಭಾರತಕ್ಕೆ ಏನು ಲಾಭ?

    ಲಂಡನ್‌: ಬಹುನಿರೀಕ್ಷಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ (Free Trade Agreement) ಭಾರತ ಮತ್ತು ಯುನೈಟೆಟ್‌ ಕಿಂಗ್‌ಡಮ್‌ (UK) ಸಹಿ ಹಾಕಿದೆ. ಈ ಒಪ್ಪಂದದಿಂದ ಎರಡು ದೇಶಗಳ ಮಧ್ಯೆ ವಾರ್ಷಿಕವಾಗಿ ಸುಮಾರು 34 ಶತಕೋಟಿ ಡಾಲರ್‌ ದ್ವಿಪಕ್ಷೀಯ ವ್ಯಾಪಾರ ಹೆಚ್ಚಾಗಲಿದೆ.

    ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ (Keir Starmer) ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದ (India) ಮಾರುಕಟ್ಟೆ ಪ್ರವೇಶಿಸಲು ಅಮೆರಿಕ (USA) ಸುಂಕದ ಬೆದರಿಕೆ ಹಾಕುತ್ತಿರುವ ಸಮಯದಲ್ಲೇ ಯುಕೆ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿರುವುದು ಮಹತ್ವ ಪಡೆದಿದೆ.

    ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಜವಳಿ, ಜೆನೆರಿಕ್ ಔಷಧಗಳು ಮತ್ತು ವೈದ್ಯಕೀಯ ಸಾಧನಗಳು, ಚರ್ಮದ ಸರಕುಗಳು ಮತ್ತು ಕೃಷಿ ಮತ್ತು ರಾಸಾಯನಿಕ ಉತ್ಪನ್ನಗಳು ಸೇರಿದಂತೆ ಯುಕೆಗೆ ಹೋಗುವ ಭಾರತದ 99% ವಸ್ತುಗಳ ಮೇಲಿನ ಸುಂಕವನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ ಎಂದು ವರದಿಯಾಗಿದೆ. ಇದನ್ನೂ ಓದಿ: ತಾಂತ್ರಿಕ ದೋಷದಿಂದ ರಷ್ಯಾ ವಿಮಾನ ಪತನ 48 ಮಂದಿ ಸಾವು


    ಒಪ್ಪಂದದ ಭಾಗವಾಗಿ, ಭಾರತವು ತನ್ನ ಸುಂಕದ 90% ರಷ್ಟು ಕಡಿತಗೊಳಿಸಲಿದೆ ಮತ್ತು ಯುಕೆ ಉತ್ಪನ್ನಗಳ ಮೇಲಿನ ಸರಾಸರಿ ಸುಂಕವು 15% ರಿಂದ 3% ಕ್ಕೆ ಇಳಿಯಲಿದೆ. ಬ್ರಿಟನ್‌ ಸ್ಕಾಚ್ ವಿಸ್ಕಿ, ಕಾರು ಮತ್ತು ಕೆಲ ಆಹಾರ ಪದಾರ್ಥಗಳ ಮೇಲಿನ ಆಮದು ಸುಂಕವನ್ನು ಭಾರತ ಕಡಿತಗೊಳಿಸಲಿದೆ. ವಿಸ್ಕಿಯ ಮೇಲಿನ ಸುಂಕವನ್ನುಅರ್ಧದಷ್ಟು ಅಂದರೆ 75% ಕ್ಕೆ ಇಳಿಕೆಯಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಮೇಲೂ ಪರಿಣಾಮ ಬೀರಲಿದ್ದು 110% ರಿಂದ 10% ಕ್ಕೆ ಸುಂಕ ಇಳಿಯಲಿದೆ.

    ಮುಂದಿನ ಎರಡು ವರ್ಷಗಳಲ್ಲಿ ಭಾರತದ ಚರ್ಮ ವಲಯವು ಯುಕೆಯಲ್ಲಿ 5% ಹೆಚ್ಚುವರಿ ಮಾರುಕಟ್ಟೆ ಪಾಲನ್ನು ಪಡೆಯುವ ನಿರೀಕ್ಷೆಯಿದೆ. ಅದೇ ರೀತಿ 2030 ರ ವೇಳೆಗೆ ಎಲೆಕ್ಟ್ರಾನಿಕ್ಸ್ ಮತ್ತು ಎಂಜಿನಿಯರಿಂಗ್ ರಫ್ತುಗಳು ದ್ವಿಗುಣಗೊಳ್ಳುವ ಸಾಧ್ಯತೆಯಿದೆ.

     

    ಮುಂದಿನ ಹಣಕಾಸು ವರ್ಷದಲ್ಲಿ ರಾಸಾಯನಿಕಗಳ ರಫ್ತು 30%-40% ರಷ್ಟು ಹೆಚ್ಚಾಗಬಹುದು. ರತ್ನಗಳು ಮತ್ತು ಆಭರಣ ರಫ್ತಿನ ಮೌಲ್ಯ ಪ್ರಸ್ತುತ 941 ಮಿಲಿಯನ್‌ ಡಾಲರ್‌ ಇದ್ದು ಮುಂದಿನ ಮೂರು ವರ್ಷಗಳಲ್ಲಿ ಇದು ದ್ವಿಗುಣಗೊಳ್ಳುವ ನಿರೀಕ್ಷೆಯಿದೆ.

    ವ್ಯಾಪಾರ ಒಪ್ಪಂದ ಜಾರಿಗೆ ಬಂದ ನಂತರ ಸಾಫ್ಟ್‌ವೇರ್ ಸೇವೆಗಳ ರಫ್ತು ವಾರ್ಷಿಕವಾಗಿ ಸುಮಾರು 20% ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಈ ಒಪ್ಪಂದವು ಗ್ರಾಹಕರಿಗೆ ಬೆಲೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಬ್ರಿಟಿಷ್ ಅಧಿಕಾರಿಗಳು ಹೇಳಿದ್ದಾರೆ.

  • 40 ಅಡಿಗಿಂತ ಕಿರಿದಾದ ರಸ್ತೆಗಳಲ್ಲಿ ವ್ಯಾಪಾರ ಮಾಡಿದರೆ ಅಂಗಡಿ ಬಂದ್‌: ಬಿಬಿಎಂಪಿ ಮಾರ್ಗಸೂಚಿಯಲ್ಲಿ ಏನಿದೆ?

    40 ಅಡಿಗಿಂತ ಕಿರಿದಾದ ರಸ್ತೆಗಳಲ್ಲಿ ವ್ಯಾಪಾರ ಮಾಡಿದರೆ ಅಂಗಡಿ ಬಂದ್‌: ಬಿಬಿಎಂಪಿ ಮಾರ್ಗಸೂಚಿಯಲ್ಲಿ ಏನಿದೆ?

    – ವ್ಯಾಪಾರ ಪರವಾನಗಿ ನವೀಕರಣಕ್ಕೆ ಫೆ.28 ಕೊನೆಯ ದಿನ
    – 5 ವರ್ಷಗಳ ಅವಧಿಗೆ ನವೀಕರಣ

    ಬೆಂಗಳೂರು: 40 ಅಡಿಗಿಂತ ಕಡಿಮೆ ಅಗಲವಿರುವ ರಸ್ತೆಗಳನ್ನು ಹೊಂದಿರುವ ವಸತಿ ಪ್ರದೇಶಗಳಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ (2015 ರ ನಂತರ ತೆರೆದ ಅಂಗಡಿಗಳು) ವ್ಯಾಪಾರ ಪರವಾನಗಿಗಳನ್ನು ಇನ್ನು ಮುಂದೆ ನವೀಕರಿಸಲಾಗುವುದಿಲ್ಲ ಎಂದು ಬಿಬಿಎಂಪಿ (BBMP) ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.

    ಫೆ.28ರ ಒಳಗಡೆ 2025-26ನೇ ಹಣಕಾಸು ವರ್ಷದ ವ್ಯಾಪಾರ ಪರವಾನಗಿಗಳ ನವೀಕರಣ ಮಾಡಬೇಕೆಂದು ಬಿಬಿಎಂಪಿ ಸೂಚಿಸಿದೆ. ಉದ್ದಿಮೆದಾರರ ಅನುಕೂಲಕ್ಕೆ ತಕ್ಕಂತೆ 1 ರಿಂದ 5 ಆರ್ಥಿಕ ವರ್ಷಗಳ ಅವಧಿಗೆ  ನವೀಕರಣ ಮಾಡಬಹುದಾಗಿದೆ.

    ನವೀಕರಣ ಶುಲ್ಕವನ್ನು ಉದ್ದಿಮೆದಾರರು ಕೋರುವ ಆರ್ಥಿಕ ವರ್ಷಕ್ಕೆ ಮಿತಿಗೊಳಿಸಿ ಪಾವತಿಸಿಕೊಳ್ಳುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಇನ್ಫಿ ಸಹ ಸಂಸ್ಥಾಪಕ ಕ್ರಿಸ್ ಸೇರಿ 18 ಮಂದಿ ವಿರುದ್ಧ ಅಟ್ರಾಸಿಟಿ ಕೇಸ್

    ಕಳೆದ ಸಾಲಿನಂತೆ ಉದ್ದಿಮೆ ಪರವಾನಿಗೆ ಶುಲ್ಕವನ್ನು ಆನ್‌ಲೈನ್ ಮುಖಾಂತರ ಮಾಡಬೇಕು. ಫೆ.1 ರಿಂದ ಫೆ. 28ರ ವರೆಗೆ ದಂಡವಿಲ್ಲದೇ ಪರವಾನಿಗೆ ಶುಲ್ಕವನ್ನು ಪಾವತಿಸಬಹುದು.

     

    ದಂಡ ಎಷ್ಟು?
    ಫೆ.28 ಗಡವು ಮುಗಿದ ಬಳಿಕ ದಂಡ ವಿಧಿಸಲಾಗುತ್ತದೆ. ಮಾರ್ಚ್‌ 1 ರಿಂದ 31ರವರೆಗೆ ಪರವಾನಿಗೆ ನವೀಕರಣ ಶುಲ್ಕದ 25% ರಷ್ಟು ದಂಡ ಮೊತ್ತದೊಂದಿಗೆ ಪಾವತಿಸಿಕೊಳ್ಳಬೇಕಾಗುತ್ತದೆ.

    ಏಪ್ರಿಲ್‌ 1 ರಿಂದ ಪರವಾನಿಗೆ ಶುಲ್ಕದ 100% ರಷ್ಟು ದಂಡದ ಮೊತ್ತದೊಂದಿಗೆ ಪರವಾನಿಗೆ ಶುಲ್ಕವನ್ನು ಪಾವತಿಸಿಕೊಳ್ಳಬೇಕಿರುತ್ತದೆ.

     

  • ಕರ್ನಾಟಕ-ಲಕ್ಷದ್ವೀಪ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಕೆಎಂಬಿ ಪೂರ್ವ ಭಾವಿಯಾಗಿ ಕೆಲಸ ಮಾಡಲಿದೆ: ಸಚಿವ ವೈದ್ಯ

    ಕರ್ನಾಟಕ-ಲಕ್ಷದ್ವೀಪ ವ್ಯಾಪಾರ ಮಾರ್ಗ ಪುನರುಜ್ಜೀವನಗೊಳಿಸಲು ಕೆಎಂಬಿ ಪೂರ್ವ ಭಾವಿಯಾಗಿ ಕೆಲಸ ಮಾಡಲಿದೆ: ಸಚಿವ ವೈದ್ಯ

    ಬೆಂಗಳೂರು : ಕರ್ನಾಟಕ (Karnataka) ಮತ್ತು ಲಕ್ಷದ್ವೀಪ (Lakshadweepa) ನಡುವಿನ ಐತಿಹಾಸಿಕ ವ್ಯಾಪಾರ ಮಾರ್ಗಗಳನ್ನು ಪುನರುಜ್ಜೀವನಗೊಳಿಸಲು ಕರ್ನಾಟಕ ಜಲಸಾರಿಗೆ ಮಂಡಳಿ (KMB) ಪೂರ್ವಭಾವಿಯಾಗಿ ಕೆಲಸ ಮಾಡುತ್ತದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ್ ಎಸ್. ವೈದ್ಯ (Mankal Vaidya) ತಿಳಿಸಿದರು.

    ಲಕ್ಷದ್ವೀಪದ ಕವರತ್ತಿಗೆ (Kavaratti) ಭೇಟಿ ನೀಡಿದ ಸಚಿವ ಮಂಕಾಳ್ ಎಸ್. ವೈದ್ಯ ಅವರು, ಕಡಲ ವಲಯದಲ್ಲಿ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಮೂಲಸೌಕರ್ಯ ಯೋಜನೆಗಳ ಬಗ್ಗೆ ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದೀರ್ಘವಾಗಿ ಚರ್ಚಿಸಿ, ಮಾತನಾಡಿದರು.

    ಮಂಗಳೂರಿನಲ್ಲಿ ಲಕ್ಷದ್ವೀಪಕ್ಕೆ ಮೀಸಲಾದ ಜೆಟ್ಟಿಯನ್ನು ಅಭಿವೃದ್ಧಿಪಡಿಸುವ ಯೋಜನೆಯ ಪ್ರಗತಿಯನ್ನು ವೇಗಗೊಳಿಸಲಾಗುತ್ತಿದ್ದು, ಈ ಯೋಜನೆಯನ್ನು ಕೇಂದ್ರ ಸರ್ಕಾರದ ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಸಾಗರಮಾಲಾ ಯೋಜನೆಯಡಿ ಕೈಗೊಳ್ಳಲಾಗುತ್ತದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜಕೀಯ ಬಿಡುವ ಮಾತೇ ಇಲ್ಲ: ಎಸ್ಎನ್ ನಾರಾಯಣಸ್ವಾಮಿ

    ಸಾಗಾರಮಾಲಾ ಯೋಜನೆಯಿಂದ ಲಕ್ಷದ್ವೀಪ ದ್ವೀಪಗಳ ಮುಖ್ಯ ಭೂಭಾಗಕ್ಕೆ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ಅಭಿಪ್ರಾಯ ತಿಳಿಸಿದ್ದಾರೆ.

    ತರುವಾಯ, ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಎದುರಿಸುತ್ತಿರುವ ಪ್ರಸ್ತುತ ನಿರ್ಬಂಧಗಳು ಮತ್ತು ಸವಾಲುಗಳನ್ನು ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು. ಈ ಸವಾಲುಗಳನ್ನು ಪರಿಹರಿಸಲು, ರಾಜ್ಯ ಸಚಿವರಾದ ಮಂಕಾಳ್ ಎಸ್. ವೈದ್ಯ ಅವರು ಮಾತನಾಡಿ, ಕರ್ನಾಟಕ ರಾಜ್ಯದಿಂದ ಲಕ್ಷದ್ವೀಪ ದ್ವೀಪಗಳಿಗೆ ಹಾಲು ಉತ್ಪನ್ನಗಳು, ಔಷಧಿಗಳು ಮತ್ತು ತಾಜಾ ಉತ್ಪನ್ನಗಳಂತಹ ಅಗತ್ಯ ಸರಕುಗಳ ಸಾಗಣೆಯನ್ನು ಹೆಚ್ಚಿಸಲು ಕರ್ನಾಟಕ ಪ್ರಬಲ್ಯವಾಗಿದೆ ಎಂದು ತಿಳಿಸಿದರು.

    ಹೆಚ್ಚುವರಿಯಾಗಿ, ವ್ಯಾಪಾರ ಮಾರ್ಗಗಳನ್ನು ಮತ್ತಷ್ಟು ಸುಗಮಗೊಳಿಸಲು ಹಳೆಯ ಮಂಗಳೂರು ಬಂದರು ಸಮೀಪದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸ್ಥಾಪಿಸಲು ಯುಟಿಎಲ್ಎಗೆ ನೆರವು ನೀಡುವಂತೆ ಸಚಿವ ಮಂಕಾಳ್ ಎಸ್‌ ವೈದ್ಯ ಅವರು ಮನವಿ ಮಾಡಿಕೊಂಡರು.

    ಈ ಸಭೆಯಲ್ಲಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್ ರಾಯ್‌ ಪುರ ಹಾಗೂ ಲಕ್ಷದ್ವೀಪ ಆಡಳಿತದ ಕೇಂದ್ರಾಡಳಿತ ಪ್ರದೇಶದ ಅಧಿಕಾರಿಗಳು, ರಾಜ್ಯ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದರು.

  • ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್

    ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ: ದಿನೇಶ್ ಗುಂಡೂರಾವ್

    ಮಂಗಳೂರು: ವ್ಯಾಪಾರಕ್ಕೆ ಯಾರನ್ನೂ ನಿರ್ಬಂಧನೆ ಮಾಡುವುದು ಸರಿಯಲ್ಲ. ಕಾನೂನು ಪ್ರಕಾರ ಮಾಡಲಿ, ಕಾನೂನು ಬಿಟ್ಟು ಏನನ್ನೂ ಮಾಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ತಿಳಿಸಿದ್ದಾರೆ.

    ಮಂಗಳಾದೇವಿ ದೇವಸ್ಥಾನದಲ್ಲಿ (Mangaladevi Temple) ವ್ಯಾಪಾರ ಧರ್ಮದಂಗಲ್ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ವ್ಯಾಪಾರ ಬಹಿಷ್ಕಾರದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಸಂವಿಧಾನದ ಪ್ರಕಾರ ದೇಶ ನಡೆಯಬೇಕು, ಯಾವುದೋ ಧರ್ಮದ ಪ್ರಕಾರ ಅಲ್ಲ. ಎಲ್ಲರಿಗೂ ಸಮಾನ ಹಕ್ಕುಗಳು ಈ ದೇಶದಲ್ಲಿ ಇರಬೇಕು ಎಂದರು. ಇದನ್ನೂ ಓದಿ: ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    ಅವರು (ವಿಹೆಚ್‍ಪಿ, ಬಜರಂಗದಳ) ಕರೆ ಕೊಡಲಿ, ಅವರ ಕರೆಯನ್ನು ಯಾರೂ ಒಪ್ಪಿಕೊಳ್ಳಬೇಕಿಲ್ಲ. ಆ ಕರೆಗಳಿಗೆ ಯಾವುದೇ ಕಾನೂನಿನ ಹಿನ್ನೆಲೆ ಇಲ್ಲ. ಅವರಿಗೆ ಈ ಥರ ವಿಚಾರ ಇಟ್ಟುಕೊಂಡು ಜನರಲ್ಲಿ ಗೊಂದಲ ಮೂಡಿಸಬೇಕು. ಅವರ ರಾಜಕಾರಣ ಇದರಲ್ಲೇ ಇರೋದು, ಧಾರ್ಮಿಕ ರಾಜಕಾರಣ ಬಿಜೆಪಿ ಮಾಡುತ್ತೆ. ನಾನು ಈ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡ್ತೇನೆ ಎಂದು ಸಚಿವರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಮಗಾರಿ ವಿಳಂಬ: ಬಾಗಲಕೋಟೆ ನಗರದ ವ್ಯಾಪಾರಸ್ಥರು ಆಕ್ರೋಶ

    ಕಾಮಗಾರಿ ವಿಳಂಬ: ಬಾಗಲಕೋಟೆ ನಗರದ ವ್ಯಾಪಾರಸ್ಥರು ಆಕ್ರೋಶ

    ಬಾಗಲಕೋಟೆ: ನಗರದ ವಿದ್ಯಾಗಿರಿಯ 19ನೇ ಕ್ರಾಸ್ ನಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ (Road Development Works) ಅತೀ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ನಗರದ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿ ಬಾಗಲಕೋಟೆ (Bagalkote) ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದಾರೆ.

    ಬಾಗಲಕೋಟೆಯ ವಿದ್ಯಾಗಿರಿಯ 19ನೇ ಕ್ರಾಸ್‌ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಸುಮಾರು ಐದು ತಿಂಗಳಿನಿಂದ ಮಂದಗತಿಯಲ್ಲಿ ನಡೆಯುತ್ತಿದೆ. ಅಂದಾಜು 1 ಕಿಲೋ ಮೀಟರ್ ಅಂತರದ ಈ ರಸ್ತೆ ನಿರ್ಮಾಣ ಕಾಮಗಾರಿ ಸುಮಾರು ಐದು ತಿಂಗಳಾದರೂ ಪೂರ್ಣಗೊಂಡಿಲ್ಲ. ಇದರಿಂದ ನಮ್ಮ ವ್ಯಾಪಾರ ವಹಿವಾಟಿಗೆ ಸಮಸ್ಯೆಯಾಗುತ್ತಿದೆ ಎಂದು ವ್ಯಾಪಾರಸ್ಥರು ಗುತ್ತಿಗೆದಾರರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ನಿತ್ಯ ನಾವು ವ್ಯಾಪಾರ- ವಹಿವಾಟನ್ನೇ ಅವಲಂಬಿಸಿ ಬದುಕು ಸಾಗಿಸುತ್ತಿದ್ದೇವೆ. ಸದ್ಯ ರಸ್ತೆ ಕಾಮಗಾರಿಯಿಂದ ಅಂಗಡಿಗಳು ಬಂದ್ ಆಗಿ ವ್ಯಾಪಾರವಿಲ್ಲದೇ ನಮ್ಮ ಬದುಕು ದುಸ್ತರವಾಗಿದೆ. ನಾವೆಂದೂ ಅಭಿವೃದ್ಧಿಗೆ ಅಡ್ಡಿಪಡಿಸಿಲ್ಲ. ಸಾರ್ವಜನಿಕರ ಉದ್ದೇಶಕ್ಕಾಗಿ ನಡೆಯುವ ಅಭಿವೃದ್ದಿ ಕಾಮಗಾರಿಗೆ ಸಹಕರಿಸಬೇಕೆಂಬ ಕಾರಣಕ್ಕಾಗಿಯೇ ಕಳೆದ ಐದಾರು ತಿಂಗಳಿನಿಂದ ಸಹಕರಿಸುತ್ತಾ ಬಂದಿದ್ದೇವೆ. ಆದರೆ ಈಗ ರಸ್ತೆ ಮಾಡುವುದಕ್ಕಾಗಿ ಕಳೆದ 20 ದಿನಗಳಿಂದ ರಸ್ತೆಯನ್ನು ಬಂದ್ ಮಾಡಿದ್ದರಿಂದ ನಮ್ಮ ವ್ಯಾಪಾರ- ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಬಿರಿಯಾನಿಯಿಂದಾಗಿ ಸ್ವಲ್ಪ ಸ್ಲೋ – ಅಭ್ಯಾಸ ಪಂದ್ಯದ ಸೋಲಿಗೆ ಪಾಕ್ ಆಟಗಾರನ ಪ್ರತಿಕ್ರಿಯೆ

    ಪ್ರಮುಖ ರಸ್ತೆಯನ್ನು ಬಂದ್ ಮಾಡಿ ಕೆಲಸ ಮಾಡುವಾಗ ವೇಗದಲ್ಲಿ ಕಾಮಗಾರಿ ಮುಂದುವರಿಯಲಿ ಎಂದು ನಾವು ಭಾವಿಸಿದ್ದೆವು. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಇತ್ತೀಚಿಗಿನ ಗಣೇಶ ಚತುರ್ಥಿಯ ವ್ಯಾಪಾರವನ್ನು ಈ ಕಾಮಗಾರಿ ಈಗಾಗಲೇ ನುಂಗಿ ಹಾಕಿದೆ. ಈಗಲೂ ಕಾಮಗಾರಿ ವಿಳಂಬವಾದರೆ ಮುಂಬರುವ ಸಾಲು, ಸಾಲು ಹಬ್ಬಗಳಿಗೂ ನಮಗೆ ವ್ಯಾಪಾರ ಇಲ್ಲದಂತಾಗುತ್ತದೆ. ಅದಕ್ಕಾಗಿ ಕಾಮಗಾರಿಗೆ ವೇಗ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ಜಾನಕಿಯವರಿಗೆ ನಗರದ ವ್ಯಾಪಾರಸ್ಥರು ಮನವಿ ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರೂಪಾಯಿ, ದಿರ್ಹಾಮ್‌ ವ್ಯವಹಾರಕ್ಕೆ ಭಾರತ, ಯುಎಇ ಒಪ್ಪಿಗೆ

    ರೂಪಾಯಿ, ದಿರ್ಹಾಮ್‌ ವ್ಯವಹಾರಕ್ಕೆ ಭಾರತ, ಯುಎಇ ಒಪ್ಪಿಗೆ

    ಅಬುಧಾಬಿ: ಭಾರತ (India) ಮತ್ತು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (UAE) ಇನ್ನು ಮುಂದೆ ರೂಪಾಯಿ – ದಿರ್ಹಾಮ್‌ನಲ್ಲಿ (Rupee-Dirham) ವ್ಯವಹಾರ ನಡೆಸಲು ಪರಸ್ಪರ ಸಹಿ ಹಾಕಿವೆ.

    ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ (Sheikh Mohamed Bin Zayed Al Nahyan) ಅವರ ಸಮ್ಮುಖದಲ್ಲಿ ಆಗಸ್ಟ್ ಸಮ್ಮುಖದಲ್ಲಿ ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ (RBI Governor Shaktikanta Das) ಮತ್ತು ಯುಎಇಯ ಸೆಂಟ್ರಲ್ ಬ್ಯಾಂಕ್ ಗವರ್ನರ್ ಹೆಚ್ ಇ ಖಲೀದ್ ಮೊಹಮದ್ ತಿಳುವಳಿಕಾ ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

    ಈ ಒಪ್ಪಂದದಿಂದ ಭಾರತ ಮತ್ತು ಯುಎಇ ಇನ್ನು ಮುಂದೆ ರಫ್ತು ಮತ್ತು ಆಮದನ್ನು ದೇಶಿಯ ಕರೆನ್ಸಿಯಲ್ಲಿ ಮಾಡಬಹುದಾಗಿದೆ. ಇಷ್ಟೇ ಅಲ್ಲದೆ ಭಾರತದಲ್ಲಿ ಅತ್ಯಂತ ಯಶಸ್ವಿಯಾಗಿರುವ ಪಾವತಿ ವ್ಯವಸ್ಥೆ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಮತ್ತು ಯುಎಇಯ ಸುರಕ್ಷಿತ ಆನ್‌ಲೈನ್ ಪಾವತಿ ವ್ಯವಸ್ಥೆಯಾದ ಐಪಿಪಿ (IPP) ಇನ್ನು ಮುಂದೆ ಲಿಂಕ್‌ ಆಗಲಿದೆ.

    UPI-IPP ಸಂಪರ್ಕವು ಎರಡೂ ದೇಶದ ಬಳಕೆದಾರರಿಗೆ ವೇಗವಾಗಿ, ಅನುಕೂಲಕರ, ಸುರಕ್ಷಿತವಾಗಿ ಪರಿಣಾಮಕಾರಿ ಎರಡು ದೇಶಗಳ ಮಧ್ಯೆ ಹಣ ವರ್ಗಾವಣೆ ಮಾಡಲು ಅನುವು ಮಾಡಿಕೊಡುತ್ತದೆ.

    ಇದರೊಂದಿಗೆ ಅಬುಧಾಬಿಯಲ್ಲಿ ಡೆಲ್ಲಿ ಐಐಟಿ ಕ್ಯಾಂಪಸ್‌ ತೆರೆಯಲು ಸಹ ಒಪ್ಪಂದ ಮಾಡಲಾಗಿದೆ.  ಇದನ್ನೂ ಓದಿ: ಇನ್ನು ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ ಮಾಡಬಹುದು

    ಲಾಭ ಏನು?
    ಎರಡು ದೇಶಗಳ ನಡುವಿನ ಚಿಲ್ಲರೆ ಪಾವತಿಗಳು ಸಾಮಾನ್ಯವಾಗಿ ಕಡಿಮೆ ಪಾರದರ್ಶಕವಾಗಿರುತ್ತವೆ ಮತ್ತು ಇದು ದೇಶೀಯ ವಹಿವಾಟುಗಳಿಗಿಂತ ಹೆಚ್ಚು ದುಬಾರಿ. ಗಡಿಯಾಚೆಗಿನ ಹಣ ವ್ಯವಹಾರ ಪಾರದರ್ಶಕವಾಗಿರುತ್ತದೆ. ಅಷ್ಟೇ ಅಲ್ಲದೇ ಅಗ್ಗ ಮತ್ತು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಯುಎಇಯಲ್ಲಿರುವ ಭಾರತೀಯ ವಲಸಿಗರಿಗೆ, ವಿಶೇಷವಾಗಿ ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ, ಪ್ರವಾಸಿಗರಿಗೆ ಲಾಭವಾಗಲಿದೆ. ಯುಪಿಐ ಮೂಲಕ ಚಿಲ್ಲರೆ ಪಾವತಿಗಳನ್ನು ಭಾರತೀಯ ರೂಪಾಯಿಗಳಲ್ಲಿ ಮಾಡಲಾಗುವುದರಿಂದ ಇದು ವಿದೇಶೀ ವಿನಿಮಯ ಮೀಸಲುಗಳನ್ನು ಉಳಿಸಲು ಸಹಾಯ ಮಾಡುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಟೊಮೆಟೊ ಮಾರಾಟ

    ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಟೊಮೆಟೊ ಮಾರಾಟ

    ಹಾವೇರಿ: ರಾಜ್ಯದಲ್ಲಿ ಈಗ ತರಕಾರಿ ಬೆಲೆ ಗಗನಕ್ಕೆ ಏರಿದೆ. ಅದರಲ್ಲೂ ಟೊಮೆಟೊ (Tomato) ಬೆಲೆ ಕೆಜಿಗೆ 150 ರೂ. ನಿಂದ 200 ರೂ. ಸನಿಹಕ್ಕೆ ಹೋಗಿದೆ. ಹಾವೇರಿ (Haveri) ಜಿಲ್ಲೆಯಲ್ಲಿ ಟೊಮೆಟೊ ಬೆಲೆ ದುಬಾರಿಯಾದ ಹಿನ್ನೆಲೆ ಕಳ್ಳತನವಾಗದಂತೆ ವ್ಯಾಪಾರಿಯೊಬ್ಬರು ಸಿಸಿಟಿವಿ (CCTV) ಕಣ್ಗಾವಲಿನಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ.

    ಹಾನಗಲ್ (Hanagal) ತಾಲೂಕಿನ ಅಕ್ಕಿಆಲೂರಿನಲ್ಲಿ ನಡೆದ ಸಂತೆಯಲ್ಲಿ, ಕೃಷ್ಣಪ್ಪ ಎಂಬವರು ಟೊಮೆಟೊ ಕಳ್ಳತನ ಆಗದಂತೆ ಎಚ್ಚರಿಕೆ ವಹಿಸಿ ಸಿಸಿಟಿವಿ ಕಾವಲಿನಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ 1 ಕೆಜಿ ಟೊಮೆಟೊ ಬೆಲೆ 150 ರೂ. ಆಗಿದೆ. ಖರೀದಿ ಮಾಡುವ ನೆಪದಲ್ಲಿ ಜನ ಟೊಮೆಟೊ ಕದಿಯಬಾರದು ಎಂಬ ಕಾರಣಕ್ಕೆ ಸಿಸಿ ಕ್ಯಾಮೆರಾ ಹಾಕಿ ವ್ಯಾಪಾರ ನಡೆಸುತ್ತಿದ್ದಾರೆ. ಇದನ್ನೂ ಓದಿ: ದಾಖಲೆ ಮೀರಿ ಗೋಧಿ ಉತ್ಪಾದನೆಯಾಗುತ್ತಿದ್ದರೂ ಬೆಲೆ ಏರಿಕೆ ಯಾಕೆ?

    ಕಳೆದ ಒಂದು ವಾರದಿಂದ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದು ಎರಡು ಟೊಮೆಟೊ ಕದ್ದರೂ ನಮಗೇ ನಷ್ಟ. ಸಾವಿರಾರು ರೂಪಾಯಿ ಕೊಟ್ಟು ಟೊಮೆಟೊ ಖರೀದಿಸಿದ್ದೇನೆ. ಹೀಗಾಗಿ ಸಿಸಿ ಕ್ಯಾಮೆರಾ ಹಾಕಿ ಟೊಮೆಟೊ ವ್ಯಾಪಾರ ಮಾಡುವ ಪರಿಸ್ಥಿತಿ ಬಂದಿದೆ ಎಂದು ವ್ಯಾಪಾರಸ್ಥ ಕೃಷ್ಣಪ್ಪ ಅವರು ಹೇಳಿದ್ದಾರೆ. ಇವರ ಸಿಸಿಟಿವಿ ಟೊಮೆಟೊ ವ್ಯಾಪಾರದಿಂದಾಗಿ ಟೊಮೆಟೊ ಖರೀದಿಗೆಂದು ಬಂದ ಗ್ರಾಹಕರು ಸಹ ಸಿಸಿ ಕ್ಯಾಮೆರಾ ನೋಡಿ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಸೇಬಿಗಿಂತ ಟೊಮೆಟೊ ರೇಟೇ ಜಾಸ್ತಿ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖಲಿಸ್ತಾನಿ ಕೃತ್ಯ ಖಂಡಿಸದ ಯುಕೆ – ವ್ಯಾಪಾರ ಮಾತುಕತೆ ಸ್ಥಗಿತಗೊಳಿಸಿದ ಭಾರತ

    ಖಲಿಸ್ತಾನಿ ಕೃತ್ಯ ಖಂಡಿಸದ ಯುಕೆ – ವ್ಯಾಪಾರ ಮಾತುಕತೆ ಸ್ಥಗಿತಗೊಳಿಸಿದ ಭಾರತ

    ಲಂಡನ್‌: ಖಲಿಸ್ತಾನ್‌ ಪರ ಪ್ರತಿಭಟನೆ (Khalistan Protest) ನಡೆಸಿದ ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಯುನೈಟೆಡ್‌ ಕಿಂಗ್‌ಡಮ್‌ (UK) ಜೊತೆ ಮುಕ್ತ ವ್ಯಾಪಾರ ಮಾತುಕತೆಯನ್ನು ಭಾರತ (India) ಸ್ಥಗಿತಗೊಳಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಮಾರ್ಚ್‌ 19 ರಂದು ಲಂಡನ್‌ನಲ್ಲಿರುವ (London) ಭಾರತದ ಹೈಕಮೀಷನ್‌ ಕಚೇರಿ ಮುಂಭಾಗ ಖಲಿಸ್ತಾನಿ ಪರ ಬೆಂಬಲಿಗರು ಪ್ರತಿಭಟನೆ ನಡೆಸಿ ಭಾರತದ ಧ್ವಜವನ್ನು ಎಸೆದು ಖಲಿಸ್ತಾನಿ ಧ್ವಜ ಹಾರಿಸಿದ್ದರು. ಈ ಘಟನೆಯ ಬಗ್ಗೆ ನೇರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಭಾರತ ಹೋರಾಟಗಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚಿಸಿತ್ತು.

    ಸೂಚನೆಯ ಹೊರತಾಗಿಯೂ ಯುಕೆ ಸರ್ಕಾರ ಈ ಘಟನೆಯನ್ನು ಖಂಡಿಸುವಲ್ಲಿ ಮತ್ತು ಹೋರಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಯುಕೆ ಜೊತೆಗಿನ ವ್ಯಾಪಾರ ಮಾತುಕತೆಯನ್ನು (Trade Talks) ಸ್ಥಗಿತಗೊಳಿಸಿದೆ ಎಂದು ವರದಿಯಾಗಿದೆ.

    ಗುಜರಾತ್‌ ಗಲಭೆಯನ್ನು ಆಧಾರಿಸಿ ಬಿಬಿಸಿ (BBC) ಪ್ರಸಾರ ಮಾಡಿದ ಸಾಕ್ಷ್ಯಚಿತ್ರದ ಬಳಿಕ ಯುಕೆ ಮತ್ತು ಭಾರತದ ಸಂಬಂಧ ಹಳಸಿತ್ತು. ಇದರ ಬೆನ್ನಲ್ಲೇ ಖಲಿಸ್ತಾನಿ ಬೆಂಬಲಿಗರು ನಡೆಸಿದ ಗಲಾಟೆಯ ನಂತರ ಭಾರತ ಮತ್ತು ಯುಕೆ ಸಂಬಂಧ ಮತ್ತಷ್ಟು ಹಳಸಿದೆ. ಇದನ್ನೂ ಓದಿ: ದೆಹಲಿಯ ಬ್ರಿಟಿಷ್‌ ಹೈಕಮೀಷನ್‌ಗೆ ನೀಡಿದ ಭದ್ರತೆ ತೆಗೆದು ಯುಕೆಗೆ ಬಿಸಿ ಮುಟ್ಟಿಸಿದ ಭಾರತ

    ವಿಶ್ವದ ಎರಡನೇ ಅತಿದೊಡ್ಡ ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಹೂಡಿಕೆ ಮಾಡಲು ಯುಕೆ ಕಂಪನಿಗಳು ಆಸಕ್ತಿ ತೋರಿಸಿವೆ. ಅದೇ ರೀತಿಯಾಗಿ ರಕ್ಷಣೆಗೆ ಸಂಬಂಧಿಸಿದ ವಸ್ತುಗಳನ್ನು ಯುಕೆ ಪೂರೈಸುವುದಾಗಿ ಭಾರತಕ್ಕೆ ತಿಳಿಸಿದೆ. ಎರಡು ದೇಶಗಳ ಮಧ್ಯೆ ಮುಕ್ತ ವ್ಯಾಪಾರ ಒಪ್ಪಂದ (FTA) ಸಹಿ ಹಾಕುವ ಸಂಬಂಧ ಮಾತುಕತೆ ನಡೆಯುತ್ತಿದೆ. ಎಲ್ಲವೂ ನಿಗದಿಯಂತೆ ಆಗಿದ್ದರೆ 2022ರ ದೀಪಾವಳಿಗೆ ಇದು ಜಾರಿಗೆ ಬರಬೇಕಿತ್ತು.

  • ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ

    ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ

    ಮಂಗಳೂರು: ರಾಜ್ಯದ ಕರಾವಳಿಯಲ್ಲಿ ವ್ಯಾಪಾರ ಬಹಿಷ್ಕಾರದ ಧರ್ಮ ದಂಗಲ್ ಮತ್ತೆ ಮುಂದುವರಿದಿದೆ. ಕಳೆದ ವರ್ಷದಿಂದ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಬಹಿಷ್ಕಾರ ಹಾಕಲಾಗುತ್ತಿದೆ. ಇದೀಗ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಮಂಗಳೂರಿನ (Mangaluru) ಕಾವೂರು (Kavoor) ಶ್ರೀಮಹಾಲಿಂಗೇಶ್ವರ ದೇವಸ್ಥಾನದ (Shree Mahalingeswara Temple) ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ವಿಎಚ್‍ಪಿ – ಭಜರಂಗದಳ ಬಹಿಷ್ಕಾರ ಹಾಕಿದ್ದು, ಕ್ಷೇತ್ರದ ಆಡಳಿತ ಮಂಡಳಿಯೂ ಸಮ್ಮತಿ ನೀಡಿದೆ.

    ಕಳೆದ ವರ್ಷದಿಂದ ಕರಾವಳಿಯ ಹೆಚ್ಚಿನ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಲಾಗಿತ್ತು. ಈ ಸಂಪ್ರದಾಯ ಈ ವರ್ಷವೂ ಮುಂದುವರಿದಿದ್ದು, ಇದೀಗ ಮಂಗಳೂರಿನ ಕಾವೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲೂ ಈ ಬಹಿಷ್ಕಾರ ಮುಂದುವರಿದಿದೆ. ಈ ದೇವಸ್ಥಾನದ ಜಾತ್ರಾ ಮಹೋತ್ಸವವು (Fair) ಜ. 14ರ ಮಕರ ಸಂಕ್ರಮಣದಿಂದ ಆರಂಭಗೊಂಡು ಜ. 18ರವರೆಗೆ ನಡೆಯಲಿದೆ.

    ಈ 4 ದಿನಗಳ ಕಾಲ ಸಾವಿರಾರು ಜನ ಸೇರುವ ಈ ಜಾತ್ರೆಯಲ್ಲಿ ನೂರಾರು ವ್ಯಾಪಾರಸ್ಥರು ವ್ಯಾಪಾರ ಮಾಡ್ತಾರೆ. ಕಳೆದ ಹಲವಾರು ವರ್ಷಗಳಿಂದಲೂ ಈ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಮಾತ್ರ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಜಾತ್ರೆಯಲ್ಲಿ ಬಹಿಷ್ಕಾರ ಹಾಕಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ಅನುಮತಿ ಪಡೆದು ಕ್ಷೇತ್ರದ ಆವರಣದಲ್ಲಿ ವಿಎಚ್‍ಪಿ ಹಾಗೂ ಭಜರಂಗದಳ ಬ್ಯಾನರ್ ಅಳವಡಿಕೆ ಮಾಡಿದ್ದು, ಅನ್ಯಧರ್ಮಿಯರ ವ್ಯಾಪಾರಕ್ಕೆ ಸಂಪೂರ್ಣ ಬಹಿಷ್ಕಾರ ಹಾಕಲಾಗಿದೆ.

    ಹಿಂದೂ ಸಂಘಟನೆ ಅಳವಡಿಸಿರುವ ಬ್ಯಾನರ್‍ನಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಗಳಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ, ವಿಗ್ರಹರಾಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರದ ಅವಕಾಶವಿಲ್ಲ ಎಂದು ಬರೆಯಲಾಗಿದೆ. ಈಗಾಗಲೇ ದೇವಸ್ಥಾನದ ಜಾತ್ರೆ ಆರಂಭಗೊಂಡಿದ್ದು, ಕ್ಷೇತ್ರದ ಒಳ ಹಾಗೂ ಹೊರ ಭಾಗದಲ್ಲಿ ನೂರಾರು ಸ್ಟಾಲ್‍ಗಳ ನಿರ್ಮಾಣವಾಗಿದೆ. ಈ ಬಾರಿ ಸ್ಟಾಲ್‍ಗಳ ನಿರ್ವಹಣೆಯ ಉಸ್ತುವಾರಿಯನ್ನು ಭಜರಂಗದಳ ಕಾರ್ಯಕರ್ತರಿಗೆ ನೀಡಿರುವುದರಿಂದ ಇತರ ಧರ್ಮದವರಿಗೆ ಯಾವುದೇ ಕಾರಣಕ್ಕೂ ವ್ಯಾಪಾರ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ. ಮುಸ್ಲಿಮರಿಗೆ ಈ ಕ್ಷೇತ್ರದಲ್ಲಿ ವ್ಯಾಪಾರ ಬಹಿಷ್ಕಾರ ನಡೆಸಲು ಆಡಳಿತ ಮಂಡಳಿಯ ಸಭೆಯಲ್ಲೇ ನಿರ್ಧರಿಸಲಾಗಿದೆ. ಇದನ್ನೂ ಓದಿ: ಗುಜರಾತಿನಲ್ಲಿ ಸ್ಯಾಂಟ್ರೋ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

    ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಎನ್ನುವ ಬ್ಯಾನರ್ ಪ್ರತ್ಯಕ್ಷವಾಗುತ್ತಿದ್ದಂತೆ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ದೇವಸ್ಥಾನದ ಸುತ್ತ ಸಿಎಆರ್ ತುಕಡಿ ಸೇರಿದಂತೆ ಹೆಚ್ಚುವರಿ ಪೊಲೀಸ್ ಭದ್ರತೆ ಮಾಡಲಾಗಿದೆ. ಒಟ್ಟಿನಲ್ಲಿ ಹಲವು ವರ್ಷಗಳಿಂದ ಸೌಹಾರ್ದಯುತವಾಗಿ ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಇನ್ನು ಮಾತ್ರ ವ್ಯಾಪಾರ ಮಾಡುವ ಅವಕಾಶ ಕಡಿಮೆಯಾದಂತಿದೆ. ಇದನ್ನೂ ಓದಿ: ಬೆಂಗಳೂರಿನ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಚಿರತೆ ಆತಂಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿಕೊಂಡು ವ್ಯಾಪಾರ ನಡೆಸಿದ ಅನ್ಯಕೋಮಿನ ವ್ಯಾಪಾರಸ್ಥರು

    ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿಕೊಂಡು ವ್ಯಾಪಾರ ನಡೆಸಿದ ಅನ್ಯಕೋಮಿನ ವ್ಯಾಪಾರಸ್ಥರು

    ಮಡಿಕೇರಿ: ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯ (Temple) ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರು ವ್ಯಾಪಾರ ವಹಿವಾಟು ನಡೆಸಬಾರದು ಎಂದು ಹಿಂದೂ ಸಂಘಟನೆ ಹಾಗೂ ಭಜರಂಗದಳದವರು (Bajrang Dal) ಎಚ್ಚರಿಕೆ ನೀಡಿದ್ದಾರೆ. ಆದರೆ ಹಿಂದೂಗಳ (Hindu) ಆಧಾರ್ ಕಾರ್ಡ್‌ಗಳನ್ನು (Aadhaar Card) ಬಳಸಿಕೊಂಡು ಅನ್ಯಕೋಮಿನ ಯುವಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದುದು ಬೆಳಕಿಗೆ ಬಂದಿದೆ.

    ಇಂದು ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದ ಹರಿಹರ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯದ ವಾರ್ಷಿಕೋತ್ಸವ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಳೆದ 4 ದಿನಗಳ ಹಿಂದೆಯೇ ಹಿಂದೂಯೇತರರು ವ್ಯಾಪಾರ ವಹಿವಾಟು ನಡೆಸಬಾರದು ಎಂಬ ಎಚ್ಚರಿಕೆ ನೀಡಲಾಗಿತ್ತು. ಒಂದು ವೇಳೆ ವ್ಯಾಪಾರ ನಡೆಸಲು ಬಂದರೆ ಅದರ ಪರಿಣಾಮ ಬೇರೆ ರೀತಿಯಲ್ಲಿ ಎದುರಿಸಬೇಕಾಗುತ್ತದೆ ಎಂದು ಖಡಕ್ ಆಗಿ ಹಿಂದೂ ಸಂಘಟನೆ ಪ್ರಮುಖರು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಬಿಜೆಪಿಯಲ್ಲಿ ‘ರೌಡಿ ಮೋರ್ಚಾ’ ಎಂಬ ಹೊಸ ಘಟಕ ತೆರೆಯುವ ಲಕ್ಷಣವಿದೆ: ಕಾಂಗ್ರೆಸ್

    ಈ ಎಚ್ಚರಿಕೆಗಳ ನಡುವೆಯೂ ಇಂದು ಸುಬ್ರಹ್ಮಣ್ಯ ಷಷ್ಠಿ ಇರುವ ಹಿನ್ನೆಲೆಯಲ್ಲಿ ಅನ್ಯಕೋಮಿನ ಕೆಲ ಯುವಕರು ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿಕೊಂಡು ವ್ಯಾಪಾರ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ದೇವಾಲಯದ ಹೊರಭಾಗದಲ್ಲಿ ವ್ಯಾಪಾರ ನಡೆಸುತ್ತಿರುವುದನ್ನು ಕಂಡ ಸಂಘಟನಾಕಾರರು ವ್ಯಾಪಾರಸ್ಥರ ಐಡಿ ಕಾರ್ಡ್ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ

    ಅನ್ಯಕೋಮಿನ ಯುವಕರು ಹಿಂದೂಗಳ ಐಡಿ ಕಾರ್ಡ್ ಬಳಸಿಕೊಂಡು ವ್ಯಾಪಾರ ನಡೆಸುತ್ತಿರುವುದು ಬೆಳಕಿಗೆ ಬಂದ ತಕ್ಷಣವೇ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ದುರ್ಗ ವಾಹಿನಿಯ ಜಿಲ್ಲಾ ಸಂಚಾಲಕಿ ಅಂಬಿಕಾ ಅವರು ಸ್ಥಳಕ್ಕೆ ತೆರಳಿ ಅನ್ಯಕೋಮಿನ ಯುವಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಅವರ ವ್ಯಾಪಾರದ ಸಾಮಗ್ರಿಗಳನ್ನು ತೆರವು ಮಾಡಿ ಅಲ್ಲಿಂದ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]