Tag: ವ್ಯಾಪಾರಿ

  • ಕಾರಿನಲ್ಲಿ ಮಲಗಿದ್ದ ವ್ಯಾಪಾರಿ; ಆಚೆಗೆಳೆದು 35 ಸುತ್ತು ಗುಂಡು ಹಾರಿಸಿ ಕೊಂದ ದುರುಳರು!

    ಕಾರಿನಲ್ಲಿ ಮಲಗಿದ್ದ ವ್ಯಾಪಾರಿ; ಆಚೆಗೆಳೆದು 35 ಸುತ್ತು ಗುಂಡು ಹಾರಿಸಿ ಕೊಂದ ದುರುಳರು!

    – ದುಷ್ಕರ್ಮಿಗಳ ಪತ್ತೆಗೆ 8 ವಿಶೇಷ ತಂಡ ರಚನೆ

    ಚಂಡೀಗಢ: ತನ್ನ ಎಸ್‌ಯುವಿ ಕಾರಿನಲ್ಲಿ ಮಲಗಿದ್ದ ವ್ಯಾಪಾರಿಯೊಬ್ಬನನ್ನು ಕಾರಿನಿಂದಾಚೆಗೆ ಎಳೆದು ಸುಮಾರು 35 ಸುತ್ತು ಗುಂಡು ಹಾರಿಸಿ ಕೊಂದಿರುವ ಘಟನೆ ಹರಿಯಾಣದ ಡಾಬಾವೊಂದರ (Haryana Dhaba) ಪಾರ್ಕಿಂಗ್‌ ಸ್ಥಳದಲ್ಲಿ ನಡೆದಿದೆ.

    ಭಾನುವಾರ (ಇಂದು) ಬೆಳಗ್ಗೆ 8:30ರ ಸುಮಾರಿಗೆ ಹರಿಯಾಣದ ಮುರ್ತಾಲ್‌ನ ಗುಲ್ಶನ್‌ ಡಾಬಾದಲ್ಲಿ (Gulshan Dhaba) ಘಟನೆ ನಡೆದಿದ್ದು, ಗೊಹಾನಾದ ಸರಗ್ತಾಲ್ ಗ್ರಾಮದ ಸುಂದರ್ ಮಲಿಕ್ (38) ಎಂದು ಗುರುತಿಸಲಾಗಿದೆ. ಈತ ಮದ್ಯದ ವ್ಯಾಪಾರಿ ಎಂಬುದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ ಭಾರೀ ಮಳೆ- 19 ಮಂದಿ ಸಾವು, ಹಲವರು ನಾಪತ್ತೆ

    ಇಬ್ಬರು ದುಷ್ಕರ್ಮಿಗಳು ಗುಂಡಿನ ಮಳೆ ಸುರಿಸಿದ ದೃಶ್ಯಾವಳಿ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಕಾರಿನಲ್ಲಿ ಕುಳಿತಿದ್ದ ವ್ಯಾಪಾರಿಯನ್ನು ಕೆಳಗೆ ಎಳೆಯುತ್ತಿದ್ದಂತೆ ಆತ ಒಬ್ಬನೊಂದಿಗೆ ಗುದ್ದಾಟಕ್ಕೆ ಇಳಿದಿದ್ದಾನೆ. ಅಷ್ಟರಲ್ಲೇ ಮತ್ತೊಬ್ಬ ದುಷ್ಕರ್ಮಿ ಏಕಾಏಕಿ ಗುಂಡು ಹಾರಿಸಿ ಹತ್ಯೆಗೈದಿದ್ದಾನೆ. ಘಟನೆ ತಿಳಿದಕೂಡಲೇ ಡಾಬಾ ಮಾಲೀಕರು ಪೊಲೀಸರಿಗೆ (Haryana Police) ಮಾಹಿತಿ ನೀಡಿದ್ದಾರೆ.

    ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಪೊಲೀಸರು ಒಂದು ಕ್ಷಣ ಶಾಕ್‌ಗೆ ಒಳಗಾಗಿದ್ದಾರೆ. ದುಷ್ಕರ್ಮಿಗಳು ಸುಮಾರು 30 ರಿಂದ 35 ಸುತ್ತು ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಪತ್ತೆಗಾಗಿ 8 ವಿಶೇಷ ತಂಡಗಳನ್ನು ರಚಿಸಿ, ಶೋಧ ಕಾರ್ಯ ನಡೆಸಲಾಗುತ್ತಿದೆ. ಅವರ ಕುಟುಂಬದ ಸದಸ್ಯರನ್ನೂ ವಿಚಾರಣೆ ನಡೆಸಲಾಗುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ಪೊಲೀಸ್ ಅಧಿಕಾರಿ ಗೌರವ್ ರಾಜಪುರೋಹಿತ್ ಹೇಳಿದ್ದಾರೆ.

    ಈ ಘಟನೆಯು ಗ್ಯಾಂಗ್‌ವಾರ್‌ ದೃಷ್ಟಿಕೋನ ಒಳಗೊಂಡಿಲ್ಲ ಅನ್ನೋದು ಮೇಲ್ನೋಟಕ್ಕೆ ಕಂಡುಬಂದಿದೆ ಎಂಬುದಾಗಿಯೂ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲೇ ಮೊದಲ ಬಾರಿಗೆ ಬೀದರ್‌ನಲ್ಲಿ 15.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ!

    ಕಳೆದ ಫೆಬ್ರವರಿ 26 ರಂದು ಭಾರತೀಯ ರಾಷ್ಟ್ರೀಯ ಲೋಕದಳ ಹರಿಯಾಣ ಘಟಕದ ಅಧ್ಯಕ್ಷ ನಫೆ ಸಿಂಗ್ ರಾಠಿ ಅವರನ್ನೂ ಇದೇ ರೀತಿ ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿತ್ತು. ಇದನ್ನೂ ಓದಿ: 2 ಸಾವಿರ ಕೋಟಿ ರೂ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ: ಖ್ಯಾತ ನಿರ್ಮಾಪಕ ಜಾಫರ್ ಬಂಧನ

  • ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ ಕೊಟ್ಟಿಲ್ಲವೆಂದು ವ್ಯಾಪಾರಿ ಮೇಲೆ ಹಲ್ಲೆ- ಮುಖ್ಯಪೇದೆ ಅಮಾನತು

    ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ ಕೊಟ್ಟಿಲ್ಲವೆಂದು ವ್ಯಾಪಾರಿ ಮೇಲೆ ಹಲ್ಲೆ- ಮುಖ್ಯಪೇದೆ ಅಮಾನತು

    ಹಾಸನ: ಕೇಳಿದಷ್ಟು ಹಣಕ್ಕೆ ಪ್ಲಾಸ್ಟಿಕ್ ಟೇಬಲ್ (Plastic Table) ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕ ವ್ಯಾಪಾರಿ ಮೇಲೆ ಕಳ್ಳತನದ ಆರೋಪ ಮಾಡಿ ಲಾಠಿಯಿಂದ ಹಲ್ಲೆ ಮಾಡಿದ ಘಟನೆ ಹಾಸನಲ್ಲಿ ನಡೆದಿದೆ.

    ಹಲ್ಲೆ ಮಾಡಿದ ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣೆಯ ಹೆಡ್‍ಕಾನ್ಸ್ ಟೇಬಲ್ ಮಣಿಕುಮಾರ್ ನನ್ನು ಅಮಾನತು ಮಾಡಲಾಗಿದೆ.

    ಏನಿದು ಘಟನೆ..?: ಗದಗ ಮೂಲದ ವ್ಯಾಪಾರಿ ಅರ್ಜುನ್ ಪ್ಲಾಸ್ಟಿಕ್ ಟೇಬಲ್ ವ್ಯಾಪಾರ ಮಾಡಿಕೊಂಡು ರಸ್ತೆಯಲ್ಲಿ ಹೋಗುತ್ತಿದ್ದ. ಈ ವೇಳೆ ರಸ್ತೆ ಬಳಿ ನಿಂತಿದ್ದ ಪೊಲೀಸ್ ಕಾನ್ಸ್ ಟೇಬಲ್ ಮಣಿಕುಮಾರ್, ಅರ್ಜುನ್‍ನನ್ನು ಕರೆದು ಒಂದು ಪ್ಲಾಸ್ಟಿಕ್ ಟೇಬಲ್‍ಗೆ ಎಷ್ಟು ಎಂದು ಕೇಳಿದ್ದಾರೆ. ಈ ವೇಳೆ ಅರ್ಜುನ್ 2,500 ರೂ. ಎಂದು ಹೇಳಿದ್ದಾನೆ. 1,800 ರೂ.ಗೆ ಪ್ಲಾಸ್ಟಿಕ್ ಟೇಬಲ್ ಕೊಡುವಂತೆ ಮಣಿಕುಮಾರ್ ಕೇಳಿದ್ದಾನೆ.

    ಅಷ್ಟು ಹಣಕ್ಕೆ ಬರಲ್ಲ ನೀವೇ ಒಂದು ರೇಟ್ ಹೇಳಿ ಪ್ಲಾಸ್ಟಿಕ್ ಟೇಬಲ್ ತೆಗೆದುಕೊಳ್ಳಿ ಎಂದು ಬಡ ವ್ಯಾಪಾರಿ ಅರ್ಜುನ್ ಹೇಳಿದ್ದಾನೆ. ಇದರಿಂದ ಕೋಪಗೊಂಡ ಮಣಿಕುಮಾರ್, ಯಸಳೂರಿನ ಕೆನರಾಬ್ಯಾಂಕ್‍ನ ಕಟ್ಟಡದ ಮೇಲೆ ಅರ್ಜುನ್‍ನನ್ನು ಕರೆದುಕೊಂಡು ಹೋಗಿದ್ದಾನೆ. ಬಳಿಕ ಪ್ಲಾಸ್ಟಿಕ್ ಟೇಬಲ್ ಕಳ್ಳತನ ಮಾಡಿಕೊಂಡು ಬಂದಿದ್ದೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲಾಠಿಯಿಂದ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಸ್ವಂತ ಕಾರು ಇದ್ದವರಿಗೆ BPL Card ಡೌಟ್- ರಾಜ್ಯ ಸರ್ಕಾರ ಗಂಭೀರ ಚಿಂತನೆ

    ಘಟನೆ ಸಂಬಂಧ ಮಣಿಕುಮಾರ್ ವಿರುದ್ಧ ಯಸಳೂರು ಪೊಲೀಸ್ ಠಾಣೆಯಲ್ಲಿ (Yalasoor Police Station) ಅರ್ಜುನ್ ದೂರು ನೀಡಿದ್ದಾನೆ. ಸದ್ಯ ಮಣಿಕುಮಾರ್‍ನನ್ನು ಅಮಾನತುಗೊಳಿಸಿ ಎಸ್‍ಪಿ ಹರಿರಾಂ ಶಂಕರ್ (Hariram Shankar) ಆದೇಶ ಹೊರಡಿಸಿದ್ದಾರೆ. ಯಸಳೂರಿನಲ್ಲಿ ಮಣಿಕುಮಾರ್ ಸಾರ್ವಜನಿಕರೊಂದಿಗೆ ಕೂಡ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಆರೋಪ ಕೇಳಿ ಬಂದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರಿಯಾದ ಅಫ್ಘಾನಿಸ್ತಾನದ ಫೇಮಸ್ ಟಿವಿ ಆ್ಯಂಕರ್

    ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರಿಯಾದ ಅಫ್ಘಾನಿಸ್ತಾನದ ಫೇಮಸ್ ಟಿವಿ ಆ್ಯಂಕರ್

    ಕಾಬೂಲ್: ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕವಂತೂ ಅಲ್ಲಿನ ಜನರ ಪರಿಸ್ಥಿತಿ ಹೇಳ ತೀರದಂತಾಗಿದೆ. ಮಹಿಳೆಯರ ಮೇಲೆ ಅಲ್ಲಿನ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡರೆ, ಪುರುಷರೂ ಅಲ್ಲಿನ ಸಂಕಷ್ಟಕ್ಕೆ ಹೊರತಾಗಿಲ್ಲ. ಈ ಪರಿಸ್ಥಿತಿಗೆ ಸಾಕ್ಷಿ ಎಂಬಂತೆ ಪತ್ರಕರ್ತನೊಬ್ಬನ ಫೋಟೋಗಳು ವೈರಲ್ ಆಗಿವೆ.

    ವಿವಿಧ ಟಿವಿ ಚಾನೆಲ್‌ಗಳಲ್ಲಿ ಆ್ಯಂಕರ್ ಹಾಗೂ ವರದಿಗಾರನಾಗಿ ಹಲವು ವರ್ಷಗಳಿಂದ ಕೆಲಸ ಮಾಡಿದ್ದ ಅಫ್ಘಾನಿಸ್ತಾನದ ಮೂಸಾ ಮೊಹಮ್ಮದಿ ಈಗ ತನ್ನ ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡಬೇಕಾದ ಸಂದರ್ಭ ಬಂದೊದಗಿದೆ. ಅಫ್ಘಾನಿಸ್ತಾನದ ಭೀಕರ ಬಡತನದಿಂದಾಗಿ ಮೊಹಮ್ಮದಿಯೂ ಬೀದಿಪಾಲಾಗಿದ್ದು, ತನ್ನ ಕುಟುಂಬವನ್ನು ಪೋಷಿಸಲು ಇದೀಗ ಬೀದಿ ಬೀದಿಗಳಲ್ಲಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸದಿದ್ದರೆ ಮಹಿಳೆಯರು ಪ್ರಾಣಿಗಳಂತೆ ಕಾಣ್ತಾರೆ: ತಾಲಿಬಾನ್

    ಈ ಫೋಟೋವನ್ನು ಟ್ವಿಟ್ಟರ್ ಬಳಕೆದಾರ ಕಬೀರ್ ಹಕ್ಮಲ್ ಫೋಸ್ಟ್ ಮಾಡಿದ್ದು, ಶೀರ್ಷಿಕೆಯಲ್ಲಿ ಇಲ್ಲಿನ ಗಣರಾಜ್ಯ ಪತನವಾದ ಬಳಿಕ ಅಫ್ಘನ್ನರು ಭೀಕರ ಬಡತನವನ್ನು ಅನುಭವಿಸುತ್ತಿದ್ದಾರೆ. ವಿವಿಧ ಟಿವಿ ಚಾನೆಲ್‌ಗಳಲ್ಲಿ ಆ್ಯಂಕರ್ ಹಾಗೂ ವರದಿಗಾರನಾಗಿ ವರ್ಷಗಳಿಂದ ಕೆಲಸ ಮಾಡಿದ ಮೂಸಾ ಮೊಹಮ್ಮದಿ ಈಗ ತಮ್ಮ ಕುಟುಂಬವನ್ನು ಮುನ್ನಡೆಸಲು ಕೈಯಲ್ಲಿ ಹಣವಿಲ್ಲ. ಅಲ್ಪ ಸ್ವಲ್ಪ ಹಣ ಗಳಿಸಲು ಈಗ ಅವರು ಬೀದಿಗಳಲ್ಲಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಪ್ರವಾದಿ ಕುರಿತ ಬಿಜೆಪಿ ನಾಯಕರ ಹೇಳಿಕೆ ಖಂಡಿಸಿದ ಅಮೆರಿಕ

    ಮೂಸಾ ಮೊಹಮ್ಮದಿ ಅವರ ಫೋಟೋಗಳು ವೈರಲ್ ಆದ ಬಳಿಕ ಇದು ಅಫ್ಘಾನಿಸ್ತಾನದ ರಾಷ್ಟ್ರೀಯ ರೇಡಿಯೋ ಹಾಗೂ ದೂರದರ್ಶನ ಮಹಾನಿರ್ದೇಶಕ ಅಹ್ಮದುಲ್ಲಾ ವಾಸಿಕ್ ಅವರ ಗಮನಕ್ಕೆ ಬಂದಿದೆ. ಮಾಜಿ ದೂರದರ್ಶನದ ಆ್ಯಂಕರ್ ಹಾಗೂ ವರದಿಗಾರನನ್ನು ತಮ್ಮ ಏಜೆನ್ಸಿಗೆ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.

    Live Tv

  • ಕೆಜಿಗೆ 350ರೂ. ದಾಟಿದ ನಿಂಬೆಹಣ್ಣಿನ  ಬೆಲೆ – ಜನ ಸಾಮಾನ್ಯರು ತತ್ತರ

    ಕೆಜಿಗೆ 350ರೂ. ದಾಟಿದ ನಿಂಬೆಹಣ್ಣಿನ ಬೆಲೆ – ಜನ ಸಾಮಾನ್ಯರು ತತ್ತರ

    ಲಕ್ನೋ: ದಿನೇ ದಿನೇ ನಿಂಬೆ ಹಣ್ಣಿನ ಬೆಲೆ ಗಗನಕ್ಕೇರುತ್ತಿದೆ. ಗಾಜಿಯಾಬಾದ್‍ನ ಸಗಟು ತರಕಾರಿ ಮಾರುಕಟ್ಟೆಯಲ್ಲಿ ಕಳೆದ ಒಂದು ವಾರದಲ್ಲಿ ಕೆಜಿಗೆ ನಿಂಬೆ ಹಣ್ಣಿನ ಬೆಲೆ 350ರೂ.ಗೆ ಏರಿಕೆಯಾಗಿದೆ. ಇದರಿಂದಾಗಿ ವ್ಯಾಪಾರಿಗಳು ಕೂಡ ಆಶ್ಚರ್ಯಗೊಂಡಿದ್ದಾರೆ.

    ಹೈದರಾಬಾದ್‍ನಲ್ಲಿ ಒಂದು ಕೆಜಿ ನಿಂಬೆ ಹಣ್ಣು 10 ರೂಪಾಯಿಗೆ ಮಾರಾಟವಾಗುತ್ತಿದೆ. ಆದರೆ ಗುಜರಾತ್‍ನಲ್ಲಿ ಒಂದು ಕೆಜಿ ನಿಂಬೆ ಹಣ್ಣು 200 ರೂಪಾಯಿಗೆ ಮಾರಾಟವಾಗುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ವ್ಯಾಪಾರಿಯೊಬ್ಬರು, ಬೆಲೆಗಳು ಏರಿಕೆಯಾಗುತ್ತಿದೆ. ನಾವು ಮೊದಲು 700ರೂ.ಗೆ ಒಂದು ಗೋಣಿ ಚೀಲ ತುಂಬಾ ನಿಂಬೆಹಣ್ಣನ್ನು ಖರೀಸುತ್ತಿದ್ದೇವು. ಆದರೀಗ 3,500ರೂ. ಆಗಿದೆ. ನಾವು ಒಂದು ನಿಂಬೆ ಹಣ್ಣನ್ನು 10ರೂ.ಗೆ ಮಾರಾಟ ಮಾಡುತ್ತಿದ್ದೇವೆ. ಆದರೂ ನಿಂಬೆ ಹಣ್ಣನ್ನು ಖರೀದಿಸಲು ಯಾರು ಸಿದ್ಧರಿಲ್ಲ ಮತ್ತು ಅದನ್ನು ಒಪ್ಪಿಕೊಳ್ಳಲು ಕೂಡ ಯಾರು ತಯಾರಿಲ್ಲ. ಇದರಿಂದಾಗಿ ನಿಂಬೆಹಣ್ಣು ಕೊಳೆತು ಹಾಳಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

    ಮತ್ತೋರ್ವ ವ್ಯಾಪಾರಿ ನನ್ನ 30 ವರ್ಷಗಳ ವೃತ್ತಿ ಜೀವನದಲ್ಲಿ ನಿಂಬೆಹಣ್ಣಿನ ಬೆಲೆ ಗರಿಷ್ಠವೆಂದರೆ 150ರೂ.ಗೆ ಮಾರಾಟವಾಗಿದ್ದರೂ, 300ರೂ. ಅಷ್ಟು ಆಗಿರಲಿಲ್ಲ. ಆದರೆ ಡೀಸೆಲ್ ಬೆಲೆ ಏರಿಯಿಂದ ಟ್ರಕ್ ಸಾಗಾಟನೆ ವೆಚ್ಚ 24,000ರೂ. ಆಗಿದೆ. ಹದಿನೈದು ದಿನಗಳ ಹಿಂದೆಯಷ್ಟೇ ನಿಂಬೆಹಣ್ಣು ಕೆ.ಜಿ.ಗೆ 50 ರಿಂದ 100ರೂ.ಗೆ ಮಾರಾಟವಾಗುತ್ತಿತ್ತು ಎಂದು ತಿಳಿಸಿದ್ದಾರೆ. ನಿಂಬೆ ಹಣ್ಣಿನ ಜೊತೆಗೆ ಹಸಿ ಮೆಣಸಿನಕಾಯಿ, ಹಾಗಲಕಾಯಿ ಸೇರಿದಂತೆ ಇತರೆ ತರಕಾರಿಗಳ ಬೆಲೆ ಎರಡು ವಾರಗಳಲ್ಲಿ ದುಪ್ಪಟ್ಟಾಗಿದೆ. ಇದನ್ನೂ ಓದಿ:  ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರ ತ್ಯಾಗ ಮುಂದಿನ ಪೀಳಿಗೆಗೆ ಪ್ರೇರಣೆ: ಮೋದಿ

  • ಸೈಕಲ್‍ನಲ್ಲಿ ಬಟ್ಟೆ ಮಾರುವ ವ್ಯಾಪಾರಿ ಪುತ್ರ UPSC ಪರೀಕ್ಷೆಯಲ್ಲಿ 45ನೇ ರ್‍ಯಾಂಕ್

    ಸೈಕಲ್‍ನಲ್ಲಿ ಬಟ್ಟೆ ಮಾರುವ ವ್ಯಾಪಾರಿ ಪುತ್ರ UPSC ಪರೀಕ್ಷೆಯಲ್ಲಿ 45ನೇ ರ್‍ಯಾಂಕ್

    ಪಾಟ್ನಾ: ಸಾಧನೆಗೆ ಬಡತನ ಅಡ್ಡಿಯಾಗುವುದಿಲ್ಲ ಎನ್ನುವುದು ಸಾಬೀತಾಗಿದೆ. ಸೈಕಲ್ ಮೇಲೆ ಬಟ್ಟೆ ಮಾರುವ ಬಡ ವ್ಯಾಪಾರಿಯ ಪುತ್ರನೋರ್ವ ಇದೀಗ ಯುಪಿಎಸ್‍ಸಿ( UNION PUBLIC SERVICE COMMISSION) ಪಾಸ್ ಮಾಡಿ ಇತರರಿಗೆ ಮಾದರಿಯಾಗಿದ್ದಾನೆ.

    ಸೈಕಲ್‍ನಲ್ಲಿ ಬಟ್ಟೆಯ ಮೂಟೆ ಹೊತ್ತುಕೊಂಡು, ಊರೂರು ತಿರುಗಿ ಬಟ್ಟೆ ಮಾರಿ ಬದುಕುತ್ತಿರುವ ಬಿಹಾರದ ವ್ಯಾಪಾರಿ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಈ ವ್ಯಾಪಾರಿಯ ಮಗ ಯುಪಿಎಸ್‍ಸಿ ಪರೀಕ್ಷೆಯಲ್ಲಿ 45ನೇ ರ್‍ಯಾಂಕ್ ಪಡೆದಿದ್ದಾರೆ . 2018ರಲ್ಲಿ ದೆಹಲಿ ಐಐಟಿ ಪದವಿ ಪಡೆದಿರುವ ಅನಿಲ್ ಬೋಸಕ್ ತಮ್ಮ 3ನೇ ಪ್ರಯತ್ನದಲ್ಲಿ ಯುಪಿಎಸ್‍ಸಿ ರ್‍ಯಾಂಕ್ ಪಡೆದಿದ್ದಾರೆ . ಇದನ್ನೂ ಓದಿ:  ಬಾಕ್ಸ್ ಆಫೀಸ್‍ನಲ್ಲಿ ಬಿಗ್ ಫೈಟ್ – ಒಂದೇ ದಿನ ಸ್ಯಾಂಡಲ್‍ವುಡ್‍ನ 2 ಸಿನಿಮಾ ರಿಲೀಸ್

    ತಮ್ಮ ಪುತ್ರನ ಸಾಧನೆ ಕುರಿತು ಮಾತನಾಡಿರುವ ಬಿನೋದ್ ಬೋಸಕ್, ನಾನೇನೂ ಕಲಿತಿಲ್ಲ. ಆದರೆ ಈ ಪರೀಕ್ಷೆ ನನ್ನ ಮಗನ ಕನಸಾಗಿತ್ತು. ಎಲ್ಲರೂ ತಮ್ಮ ಮಕ್ಕಳಿಗೆ ಉತ್ತೇಜನ ಕೊಟ್ಟರೆ ಅವರೂ ಈ ರೀತಿಯ ಸಾಧನೆ ಮಾಡುತ್ತಾರೆ ಎಂದಿದ್ದಾರೆ.

    ಐಐಟಿ ಮುಗಿಸಿ ಕೆಲಸಕ್ಕೆ ಸೇರಬಹುದೆಂದು ನಾವು ಅಂದುಕೊಂಡಿದ್ದೇವು. ಆದರೆ ಆತ ಯುಪಿಎಸ್‍ಸಿಗೆ ತಯಾರಿ ನಡೆಸುವುದಾಗಿ ಹೇಳಿದ. ಅವನ ಕನಸಿಗೆ ನಾವು ಅಡ್ಡಿಯಾಗಲಿಲ್ಲ. ಆತನ ಶಿಕ್ಷಕರು ಅವನಿಗೆ ಆರ್ಥಿಕವಾಗಿ ಸಹಾಯ ಮಾಡಿದರು. ಎಲ್ಲರ ಬೆಂಬಲ ಹಾಗೂ ಆತನ ಶ್ರಮದಿಂದ ಯುಪಿಎಸ್‍ಸಿ ಪಾಸ್ ಆಗಿದ್ದಾನೆ. ಇಡೀ ಊರಿನ ಜನ ಮನೆಗೆ ಬಂದು ಶುಭಾಶಯ ಕೋರುತ್ತಿರುವುದು ನೋಡಿದರೆ ನನಗೆ ಖುಷಿಯಾಗುತ್ತಿದೆ ಎಂದು ಮಗನ ಸಾಧನೆ ಬಗ್ಗೆ ಹೆಮ್ಮೆಯಿಂದ ಬಿನೋದ್ ಬೋಸಕ್ ಹೇಳಿಕೊಂಡಿದ್ದಾರೆ.

  • ಪಾನಿಪುರಿ ಪ್ರಿಯರಿಗೆ ಶಾಕಿಂಗ್ ನ್ಯೂಸ್- ನೀರಿಗೆ ಮೂತ್ರ ಬೆರೆಸಿದ ವೀಡಿಯೋ ವೈರಲ್

    ಪಾನಿಪುರಿ ಪ್ರಿಯರಿಗೆ ಶಾಕಿಂಗ್ ನ್ಯೂಸ್- ನೀರಿಗೆ ಮೂತ್ರ ಬೆರೆಸಿದ ವೀಡಿಯೋ ವೈರಲ್

    ದಿಸ್ಪುರ್: ಪಾನಿಪುರಿ, ಗೋಲ್‍ಗಪ್ಪಾ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ರಸ್ತೆ ಬದಿಯಲ್ಲಿ ಸಿಗುವ ಪಾನಿಪುರಿಯನ್ನಂತೂ ಯುವಕ- ಯುವತಿಯರು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಇದೀಗ ಇಂತಹ ಪಾನಿಪುರಿ, ಗೋಲ್‍ಗಪ್ಪಾ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ವರದಿಯಾಗಿದೆ.

    ಹೌದು. ರಸ್ತೆ ಬದಿ ಪಾನಿಪುರಿ ಮಾರಾಟ ಮಾಡುತ್ತಿರುವ ವ್ಯಕ್ತಿಯೊಬ್ಬ ಪಾನಿಗೆ ತನ್ನ ಮೂತ್ರ ಬೆರೆಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಇದನ್ನೂ ಓದಿ: ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್

    ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಕೈ ಗಾಡಿಯಲ್ಲಿ ಪಾನಿಪುರಿ ಮಾರಾಟ ಮಾಡುತ್ತಿದ್ದಾನೆ. ಈ ವ್ಯಕ್ತಿ ಮಗ್ ಗೆ ಮೂತ್ರ ಮಾಡಿ ಅದನ್ನು ಪಾನಿಗೆ ಮಿಕ್ಸ್ ಮಾಡುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಸದ್ಯ 20 ಸೆಕೆಂಡ್ ವೀಡಿಯೋ ನೋಡಿದ ನೆಟ್ಟಿಗರು ವ್ಯಾಪಾರಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಅಲ್ಲದೆ ಕೂಡಲೇ ಆತನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ: ಹೆಚ್.ಡಿ. ಕುಮಾರಸ್ವಾಮಿ

    ಒಟ್ಟಿನಲ್ಲಿ ಗೋಲ್‍ಗಪ್ಪಾ ನೀರಿಗೆ ವ್ಯಕ್ತಿ ಮೂತ್ರ ಬೆರೆಸುವುದು ಕ್ಲೀಯರ್ ಆಗಿ ಕಾಣುತ್ತಿದೆ. ಹೀಗಾಗಿ ನೆಟ್ಟಿಗರು ವ್ಯಾಪಾರಿಯ ನಡತೆಯನ್ನು ಖಂಡಿಸಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ವ್ಯಾಪಾರಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಆತನನ್ನು ಬಂಧಿಸಿರುವುದಾಗಿ ವರದಿಯಾಗಿದೆ.  ಇದನ್ನೂ ಓದಿ: ತಾನು ಸೆಲೆಕ್ಟ್ ಮಾಡಿದ ಹಾಡು ಹಾಕೋವರೆಗೂ ಮದುವೆ ಹಾಲ್‍ಗೆ ತೆರಳಲು ನಿರಾಕರಿಸಿದ ವಧು!

  • ರಾಜಸ್ಥಾನ ಮೂಲದ ಬಟ್ಟೆ ವ್ಯಾಪಾರಿ ಮೇಲೆ ಹೊಳಲ್ಕೆರೆಯಲ್ಲಿ ಗುಂಡಿನ ದಾಳಿ

    ರಾಜಸ್ಥಾನ ಮೂಲದ ಬಟ್ಟೆ ವ್ಯಾಪಾರಿ ಮೇಲೆ ಹೊಳಲ್ಕೆರೆಯಲ್ಲಿ ಗುಂಡಿನ ದಾಳಿ

    ಚಿತ್ರದುರ್ಗ: ರಾಜಸ್ಥಾನ ಮೂಲದ ಬಟ್ಟೆ ವ್ಯಾಪಾರಿ ಮೇಲೆ ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

    ಕೊಲೆಯಾದ ಮೂಲ್‍ಸಿಂಗ್ (30) ಆರು ವರ್ಷಗಳಿಂದ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಿಯದರ್ಶಿನಿ ಟೆಕ್ಸ್ ಟೈಲ್ಸ್ ನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದರು. ಮಂಗಳವಾರ ರಾತ್ರಿ 9 ಗಂಟೆಗೆ ಅಂಗಡಿ ಬಂದ್ ಮಾಡಲು ಪೂಜೆ ಮಾಡ್ತಿದ್ದ ವೇಳೆ ಮೂಲ್‍ಸಿಂಗ್ ಕುತ್ತಿಗೆ ಭಾಗಕ್ಕೆ ಶೂಟ್‍ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗುಂಡಿಕ್ಕಿದ ಆರೋಪಿಗಳು ಎಸ್ಕೇಪ್ ಆಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಇನ್ನು ಶೂಟೌಟ್ ನಿಂದಾಗಿ ಮೂಲಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲ್‍ಸಿಂಗ್ ರಾಜಸ್ಥಾನದ ಸರ್ದಾರ್ ಪುರ ಗ್ರಾಮದ ನಿವಾಸಿಯಾಗಿದ್ದಾರೆ. ಕಳೆದ ಆರು ವರ್ಷಗಳಿಂದ ಹೊಳಲ್ಕೆರೆಯಲ್ಲಿ ವಾಸವಾಗಿದ್ದರು. 5 ವರ್ಷಗಳ ಹಿಂದೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ರಾಮಗಿರಿಯಲ್ಲಿ ಕಲ್ಯಾಣಸಿಂಗ್ ಎಂಬ ಬಟ್ಟೆ ವ್ಯಾಪಾರಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದ ಆರೋಪಿಯಾಗಿದ್ದರು.

    ಆ ದ್ವೇಷದ ಹಿನ್ನೆಲೆಯಲ್ಲೂ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರೂ ಅಪರಿಚಿತ ವ್ಯಕ್ತಿಗಳು ಕೊಲೆ ಮಾಡಿ ತಕ್ಷಣ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಎಸ್.ಪಿ.ರಾಧಿಕಾ, ಎಎಸ್‍ಪಿ ನಂದಗಾವಿ ಹಾಗೂ ಡಿವೈಸ್‍ಪಿ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದಾರೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಎದುರೇ ಸಿದ್ದರಾಮಯ್ಯಗೆ ಜೈಕಾರ ಕೂಗಿದ ವ್ಯಕ್ತಿ

    ಬಟ್ಟೆ ಅಂಗಡಿಯಲ್ಲಿನ ಸಿಸಿಟಿವಿ ವೀಡಿಯೋ ಕೂಡ ಪರಿಶೀಲನೆ ನಡೆಸಿ ತನಿಖೆ ಚುರುಕುಗೊಳಿಸಿದ್ದು, ಕೃತ್ಯದ ಆರೋಪಿಗಳ ಸೆರೆಗಾಗಿ ಬಲೆ ಬೀಸಿದ್ದಾರೆ. ಆದ್ರೆ ಮೃತನ ಸಹೋದರ ಗೋವರ್ಧನ್ ಸಿಂಗ್ ಮಾತ್ರ ನಮ್ಮ ಮೇಲೆ ಯಾವುದೇ ದ್ವೇಷವಿರಲಿಲ್ಲ. ನಾವು ಸಹ ಎಲ್ಲರೊಂದಿಗೆ ಅನ್ಯೋನ್ಯವಾಗಿದ್ದೇವು. ಹೀಗಾಗಿ ಈ ಕೃತ್ಯದ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:60 ವರ್ಷದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳು ಮೋದಿ ಅವಧಿಯಲ್ಲಿ ನಡೆದಿದೆ: ರಾಜೀವ್ ಚಂದ್ರಶೇಖರ್

    ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಏರಿಕೆಯಾಯ್ತು ಗೃಹ ಬಳಕೆ ಎಲ್‍ಪಿಜಿ ಸಿಲಿಂಡರ್ ಬೆಲೆ

  • ಕೊತ್ತಂಬರಿ ಸೊಪ್ಪು ಖರೀದಿಸದ್ದಕ್ಕೆ ಚಾಕು ಇರಿದ ವ್ಯಾಪಾರಿ

    ಕೊತ್ತಂಬರಿ ಸೊಪ್ಪು ಖರೀದಿಸದ್ದಕ್ಕೆ ಚಾಕು ಇರಿದ ವ್ಯಾಪಾರಿ

    ಹುಬ್ಬಳ್ಳಿ: ಮಾರಾಟಕ್ಕಿಟ್ಟ ಕೊತ್ತಂಬರಿ ಸರಿಯಿಲ್ಲವೆಂದು ಕೊತ್ತಂಬರಿ ಖರೀದಿಸದ ಗ್ರಾಹಕನಿಗೆ ವ್ಯಾಪಾರಸ್ಥ ಹಾಗೂ ಆತನ ಸಹಚರರು ಚಾಕು ಇರಿದು ಕೊಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ಹುಬ್ಬಳ್ಳಿಯ ಗೌಳಿಗಲ್ಲಿಯಲ್ಲಿ ಹಳೇ ಹುಬ್ಬಳ್ಳಿಯ ನಿವಾಸಿ ಮಹಮ್ಮದಗೌಸ್ ಬಿಜಾಪುರ ಮೇಲೆ ಕೊತ್ತಂಬರಿ ವ್ಯಾಪಾರ ಮಾಡುತ್ತಿದ್ದ ಖಾದರ್ ಹಾಗೂ ಸಹಚರರು ಚಾಕು ಇರಿದು ಕೊಲೆಗೆ ಯತ್ನಿಸಿದ್ದಾರೆ.

    ಮಹಮ್ಮದಗೌಸ್ ಪ್ರತಿನಿತ್ಯ ಖಾದರ್ ಬಳಿಯೇ ಕೊತ್ತಂಬರಿ ಖರೀದಿ ಮಾಡುತ್ತಿದ್ದರು. ಆದರೆ ನಿನ್ನೆ ಕೊತ್ತಂಬರಿ ಸರಿಯಿಲ್ಲವೆಂದು ಕೊತ್ತಂಬರಿ ಸೊಪ್ಪು ಖರೀದಿ ಮಾಡಲು ನಿರಾಕರಿಸಿದ್ದಕ್ಕೆ ಕೋಪಿತಗೊಂಡ ಖಾದರ್ ಚಾಕು ಇರಿದಿದ್ದಾನೆ. ಸದ್ಯ ಗಾಯಾಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಬೆಂಗಳೂರಿನ ಹಂಪಿನಗರ ಮನೆಯಲ್ಲಿ ನಿಗೂಢ ಸ್ಫೋಟ

  • ವ್ಯಾಪಾರಿಗೆ ಗುಂಡೇಟು – ಚಿನ್ನ, ಮೊಬೈಲ್ ಬಿಟ್ಟು ಸಿಮ್ ತಗೊಂಡು ಎಸ್ಕೇಪ್

    ವ್ಯಾಪಾರಿಗೆ ಗುಂಡೇಟು – ಚಿನ್ನ, ಮೊಬೈಲ್ ಬಿಟ್ಟು ಸಿಮ್ ತಗೊಂಡು ಎಸ್ಕೇಪ್

    – ಹೆದ್ದಾರಿಯಲ್ಲಿ ತಡೆದು ಐದು ಬಾರಿ ಶೂಟ್

    ಪಾಟ್ನಾ: ವ್ಯಾಪಾರಿಗೆ ಗುಂಡಿಕ್ಕಿದ್ದ ಅಪರಿಚಿತರು ಚಿನ್ನ, ಮೊಬೈಲ್ ಬಿಟ್ಟು ಸಿಮ್ ತೆಗೆದುಕೊಂಡು ಪರಾರಿಯಾಗಿರೋ ಘಟನೆ ಪಾಟ್ನಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಸಂಜಯ್ ಕುಮಾರ್ ಕೊಲೆಯಾದ ವ್ಯಾಪಾರಿ. ಸಂಜಯ್ ಹಾಜಿಪುರಕ್ಕೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ-19ರಲ್ಲಿ ಕೆಲವರು ತಡೆದಿದ್ದಾರೆ. ನಂತರ ಐದು ಬಾರಿ ಸಂಜಯ್ ಮೇಲೆ ಗುಂಡು ಹಾರಿಸಿದ್ದಾರೆ. ಸಂಜಯ್ ಸಾವನ್ನಪ್ಪಿದ್ದ ಅವರ ಬಳಿಯಲ್ಲಿದ್ದ ನಗದು, ಚಿನ್ನದ ಚೈನ್ ಮತ್ತು ಮೊಬೈಲ್ ಸಹ ತೆಗೆದುಕೊಂಡಿಲ್ಲ. ಬದಲಾಗಿ ಸಂಜಯ್ ಬಳಸುತ್ತಿದ್ದ ಸಿಮ್ ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.

    ಮೃತ ಸಂಜಯ್ ಕುಮಾರ್ ಮೂಲತಃ ಆಲಂಗಂಜ್ ಕ್ಷೇತ್ರದ ನುರಾನಿಬಾಗ್ ಗ್ರಾಮದ ನಿವಾಸಿ. ಪಾಟ್ನಾದಲ್ಲಿ ಔಷಧಿಗಳ ವ್ಯಾಪಾರಿಯಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸಂಜಯ್ ಕುಟುಂಬ ಮತ್ತು ಆಪ್ತರು ಆಗಮಿಸಿದ್ದಾರೆ. ಇದನ್ನೂ ಓದಿ: ವಿಧವೆ ಅತ್ತೆಯನ್ನ ರೇಪ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಅಳಿಯ

    ಸಂಜಯ್ ಹಾಜಿಪುರಕ್ಕೆ ತೆರಳುತ್ತಿರುವ ವಿಷಯ ತಿಳಿದವರೇ ಈ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ದಾಳಿಕೋರರು ಕೇವಲ ಸಿಮ್ ಮಾತ್ರ ತೆಗೆದುಕೊಂಡು ಹೋಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹೊಲದಲ್ಲೇ ಪ್ರೇಮಿಯೊಂದಿಗೆ ತಾಯಿ ಸಲ್ಲಾಪ – ಮರುದಿನ 6ರ ಬಾಲಕನ ಶವ ಪತ್ತೆ

  • ವ್ಯವಹಾರದ ಚೇತರಿಕೆಗಾಗಿ ವಾಹನಗಳ ಚಕ್ರ ಕದ್ದು ಜೈಲು ಸೇರಿದ್ರು

    ವ್ಯವಹಾರದ ಚೇತರಿಕೆಗಾಗಿ ವಾಹನಗಳ ಚಕ್ರ ಕದ್ದು ಜೈಲು ಸೇರಿದ್ರು

    -ಲಾಕ್‍ಡೌನ್‍ನಿಂದಾಗಿ ವ್ಯಾಪಾರದಲ್ಲಿ ನಷ್ಟ

    ಮುಂಬೈ: ಲಾಕ್‍ಡೌನ್ ನಿಂದಾಗಿ ನಷ್ಟದಲ್ಲಿದ್ದ ವ್ಯವಹಾರದ ಚೇತರಿಕೆಗಾಗಿ ವ್ಯಾಪಾರಿಗಳಿಬ್ಬರು ವಾಹನಗಳ ಚಕ್ರ ಕದ್ದು ಜೈಲು ಸೇರಿರುವ ಘಟನೆ ಮಹಾರಾಷ್ಟ್ರದ ನಾಗ್ಪುರಲ್ಲಿ ನಡೆದಿದೆ.

    ಮೊನಿಶ್ ದದ್ಲಾನಿ (27) ಮತ್ತು ವಿವೇಕ್ ಗುಮ್ನಾನಿ ಬಂಧಿತ ಆರೋಪಿಗಳು. ಬಂಧಿತರದಿಂದ ಮೂರು ಲಕ್ಷ ರೂ. ಮೌಲ್ಯದ 10 ಚಕ್ರಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

    ಮೊನಿಶ್ ದದ್ಲಾನಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ರೆ, ವಿವೇಕ್ ಟೂರ್ ಗಳನ್ನು ಅರೆಂಜ್ ಮಾಡುತ್ತಿದ್ದ. ಕೊರೊನಾ ಲಾಕ್‍ಡೌನ್ ನಿಂದಾಗಿ ಇಬ್ಬರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಹೀಗಾಗಿ ಗಾಡಿಯ ಚಕ್ರಗಳನ್ನು ಕದ್ದು ಸಾಲದಿಂದ ಮುಕ್ತರಾಗಲು ಪ್ಲಾನ್ ಮಾಡಿಕೊಂಡಿದ್ದರು. ಇದೇ ಹಣದಿಂದ ವ್ಯವಹಾರ ಮಾಡಲು ಸಿದ್ಧತೆ ನಡೆಸಿದ್ದರು ಎಂದು ಸಾದರ್ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಮಹೇಶ್ ಬನ್ಸೊಡೆ ಹೇಳಿದ್ದಾರೆ.