Tag: ವ್ಯಾಪಾರಿಗಳು

  • ಡಿಜಿಟಲ್ ಪೇಮೆಂಟ್ ಕೋಲಾಹಲ – ಲಕ್ಷ, ಲಕ್ಷ ಟ್ಯಾಕ್ಸ್ ನೋಟಿಸ್‌ ಕಂಡು ಹೌಹಾರಿದ ಜನ; ಕ್ಯಾಶ್‌ ವಹಿವಾಟಿಗೆ ದುಂಬಾಲು

    ಡಿಜಿಟಲ್ ಪೇಮೆಂಟ್ ಕೋಲಾಹಲ – ಲಕ್ಷ, ಲಕ್ಷ ಟ್ಯಾಕ್ಸ್ ನೋಟಿಸ್‌ ಕಂಡು ಹೌಹಾರಿದ ಜನ; ಕ್ಯಾಶ್‌ ವಹಿವಾಟಿಗೆ ದುಂಬಾಲು

    ಬೆಂಗಳೂರು: ವಿಶ್ವದಲ್ಲೇ ಅತಿದೊಡ್ಡ ಆನ್‌ಲೈನ್ ಪೇಮೆಂಟ್ (Online Payment) ಕೀರ್ತಿ ಭಾರತದ್ದು. ಪ್ರಧಾನಿ ಮೋದಿ ಕನಸಿನ ಯೋಜನೆ ಡಿಜಿಟಲ್ ಇಂಡಿಯಾದ ಯುಪಿಐ (UPI) ಪೇಮೆಂಟ್‌ಗೆ ವಿಘ್ನ ಎದುರಾಗಿದೆ. ಬೇಕರಿ, ಟೀ-ಕ್ಯಾಂಡಿಮೆಂಟ್ಸ್, ತರಕಾರಿ, ಬೀಡ, ಹೂವಿನ ಅಂಗಡಿ, ಹಾಲು ಮಾರೋವ್ರು, ಡಾಬಾದವರು. ಹೀಗೆ.. ಎಲ್ಲರಿಗೂ ಯುಪಿಐ ವಹಿವಾಟು ಆಧರಿಸಿ ಲಕ್ಷಲಕ್ಷ ಟ್ಯಾಕ್ಸ್ (Tax) ಕಟ್ಟುವಂತೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ.

    ಈ ನೋಟಿಸ್, ಟ್ಯಾಕ್ಸ್ ಟಾರ್ಚರ್‌ಗೆ ಹೈರಾಣಾಗಿರೋ ವರ್ತಕರು, ನಮಗೆ ಯುಪಿಐ.. ಆನ್‌ಲೈನ್ ಪೇಮೆಂಟ್ ಸಹವಾಸವೇ ಬೇಡ… ಕೇವಲ ಕ್ಯಾಶ್ ಇದ್ದರೆ ಕೊಡಿ ಅಂತ ಗ್ರಾಹಕರಿಗೆ ಮನವಿ ಮಾಡ್ತಿದ್ದಾರೆ. ತಮ್ಮ ಅಂಗಡಿಗಳಿಗೆ ಅಂಟಿಸಿರೋ ಯುಪಿಐ ಕ್ಯೂಆರ್ ಕೋಡ್ ಸ್ಟಿಕ್ಕರ್‌ಗಳನ್ನು ತೆಗೆಯುತ್ತಿದ್ದಾರೆ. ಕಮ್ಮನಹಳ್ಳಿ, ಮಾರತಹಳ್ಳಿ ಭಾಗದ ಬೇಕರಿಗಳಲ್ಲಿ `ಕ್ಯಾಶ್ ಓನ್ಲಿ’ ಅಂತ ಬೋರ್ಡನ್ನೇ ಹಾಕಿಬಿಟ್ಟಿದ್ದಾರೆ. ಹೀಗಾಗಿ ಜಿಎಸ್‌ಟಿ ಟ್ಯಾಕ್ಸ್‌ ಅನ್ನು ಕಂಪ್ಲೀಟ್ ಮನ್ನಾ ಮಾಡಿ ಅಂತ ಅಂಗಡಿ ಮಾಲೀಕರು ಮನವಿ ಸಲ್ಲಿಕೆ ಮಾಡಿದ್ದಾರೆ. ಅಲ್ಲದೆ, ಜಿಎಸ್‌ಟಿ ಕೌನ್ಸಿಲ್, ಕೇಂದ್ರ ಸರ್ಕಾರ, ಸಿಎಂಗೂ ಕೂಡ ಪತ್ರ ಬರೆದಿದ್ದಾರೆ.

    ಇದೆಲ್ಲದರ ಮಧ್ಯೆ, ಜುಲೈ- 23ರಿಂದ 2 ದಿನಗಳ ಕಾಲ ಹಾಲು, ಸಿಗರೇಟು ಮಾರಾಟ, ಕಾಂಡಿಮೆಂಟ್ಸ್, ಬೇಕರಿ ಬಂದ್ ಮಾಡಲಿದ್ದಾರೆ. ಜುಲೈ 25 ರಂದು ರಾಜ್ಯಾದ್ಯಂತ ಅಂಗಡಿ ಬಂದ್ ಮಾಡಿ ಕುಟುಂಬ ಸಮೇತ ಪ್ರತಿಭಟನೆಗೆ ನಿರ್ಧರಿಸಿರೋ ಕಾರ್ಮಿಕ ಪರಿಷತ್ ನಂತರ ಕೋರ್ಟ್ ಮೊರೆ ಹೋಗಲೂ ಸಜ್ಜಾಗ್ತಿದೆ.

    ಯುಪಿಐ ಪೇಮೆಂಟ್ ಗೊಂದಲ ಏನು..?
    * ವಾರ್ಷಿಕವಾಗಿ 20 ಲಕ್ಷದಿಂದ 40 ಲಕ್ಷ ರೂ. ವಹಿವಾಟು ಮಾಡಿದವರಿಗೆ ನೊಟೀಸ್
    * ಬಡ್ಡಿ ಸಮೇತ 1 ಕೋಟಿಯಿಂದ ಹಿಡಿದು, 60, 30, 20 ಲಕ್ಷ ರೂ. ವರೆಗೆ ಜಿಎಸ್‌ಟಿ ಕಟ್ಟೋಕೆ ನೋಟಿಸ್
    * ಜಿಎಸ್‌ಟಿ ಕಟ್ಟದೇ ಹೋದರೆ ಅಕೌಂಟ್ ಫ್ರೀಜ್ ಮಾಡುವ ಎಚ್ಚರಿಕೆ
    * ತೆರಿಗೆ ವಿನಾಯಿತಿ ಪಡೆದ ತರಕಾರಿ, ಹಣ್ಣಿನ ಅಂಗಡಿಗೂ ಟ್ಯಾಕ್ಸ್ ನೋಟಿಸ್

    ಯಾರಿಗೆ ಟ್ಯಾಕ್ಸ್.. ಯಾರಿಗಿಲ್ಲ..?
    * ಸರಕು ಪೂರೈಕೆದಾರರ ಸಮಗ್ರ ವಹಿವಾಟು ವಾರ್ಷಿಕ 40 ಲಕ್ಷ ರೂ. ಮೀರಿದ್ರೆ ಜಿಎಸ್‌ಟಿ ನೋಂದಣಿ ಕಡ್ಡಾಯ
    * ಸೇವೆಗಳ ಪೂರೈಕೆದಾರರ ಸಮಗ್ರ ವಹಿವಾಟು ವಾರ್ಷಿಕ 20 ಲಕ್ಷ ರೂ. ಮೀರಿದ್ರೆ ಜಿಎಸ್‌ಟಿ ನೋಂದಣಿ ಕಡ್ಡಾಯ
    * ತರಕಾರಿ, ಹಣ್ಣು ಯಾವುದೇ ತೆರಿಗೆ ವ್ಯಾಪ್ತಿಗೆ ಬರಲ್ಲ
    * ಹಾಲು, ಮೊಸರು, ಬ್ರೆಡ್‌ಗೆ ಟ್ಯಾಕ್ಸ್ ಇರಲ್ಲ
    * ಕುರುಕಲು ತಿಂಡಿಗೆ 5% ರಷ್ಟು ಟ್ಯಾಕ್ಸ್

    ಅಧಿಕಾರಿಗಳ ಎಡವಟ್ಟೇನು?
    – ವಿನಾಯಿತಿ ಇದ್ದರೂ ಹಾಲು, ತರಕಾರಿ ಅಂಗಡಿಗೂ ಟ್ಯಾಕ್ಸ್ ನೋಟಿಸ್
    – ವಿನಾಯಿತಿ ಸರಕುಗಳ ಬಿಲ್ ನೀಡಿದ್ರೆ ವಿನಾಯಿತಿ ನೀಡುವ ಸಬೂಬು
    – ಜಾಗೃತಿ ಮೂಡಿಸಿ ಜಿಎಸ್‌ಟಿ ನೋಂದಣಿ ಮಾಡಿಸದೇ ಲಕ್ಷ ಲಕ್ಷ ಟ್ಯಾಕ್ಸ್ ಕಟ್ಟುವಂತೆ ನೊಟೀಸ್
    – ಅಧಿಕಾರಿಗಳ ನೋಟಿಸ್ ಎಡವಟ್ಟಿಗೆ ಹೆದರಿದ ಸಣ್ಣ ವ್ಯಾಪಾರಿಗಳು
    – ಯುಪಿಐ ಪೇಮೆಂಟ್‌ಗೆ ನಿರಾಕರಿಸಿ, ಕ್ಯಾಶ್ ಮೊರೆ ಹೋಗಲು ಇವರೇ ಕಾರಣ

    ವರ್ತಕರ ಎಡವಟ್ಟೇನು..?
    * ವರ್ತಕರಲ್ಲಿ ಜಿಎಸ್‌ಟಿ ಅರಿವಿನ ಕೊರತೆ ಇರೋದು ನಿಜ
    * ಆದರೆ, ಜಿಎಸ್‌ಟಿ ವಿಚಾರದಲ್ಲಿ ಕೊಂಚ ಎಚ್ಚರಿಕೆ ವಹಿಸಬೇಕಿತ್ತು
    * ಡಿಜಿಟಲ್ ಪೇಮೆಂಟ್‌ನ ಪ್ರತಿ ಮಾಹಿತಿ ಅಧಿಕಾರಿಗಳಿಗೆ ಗೊತ್ತಾಗುತ್ತೆ ಅನ್ನೋದು ಗೊತ್ತು
    * ವಾರ್ಷಿಕ ವಹಿವಾಟು ನಿಯಮಾವಳಿಗಿಂತ ಹೆಚ್ಚಿದ್ದರೂ ಜಿಎಸ್‌ಟಿ ನೋಂದಣಿ ಮಾಡಿಸಿಲ್ಲ
    * ರಿಯಾಯಿತಿ ಪಡೆಯಲು ನಮ್ಮ ಬಳಿ ಬಿಲ್‌ಗಳಿಲ್ಲ ಎನ್ನುತ್ತಿರುವ ವರ್ತಕರು

    ʻಪಬ್ಲಿಕ್‌ ಟಿವಿʼ ರಿಯಾಲಿಟಿ ಚೆಕ್‌
    ಯುಪಿಐ ಪೇಮೆಂಟ್ ಗೊಂದಲದ ಬಗ್ಗೆ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ನಡೆಸಿದ ಬಳಿಕ ವಾಣಿಜ್ಯ ತೆರಿಗೆ ಇಲಾಖೆ ಎಚ್ಚೆತ್ತುಕೊಂಡಿದೆ. ಯುಪಿಐ ನಿಲ್ಲಿಸಿ ಕ್ಯಾಶ್ ರೂಪದಲ್ಲಿ ಹಣ ಸ್ವೀಕರಿಸೋದು ಗಮನಕ್ಕೆ ಬಂದಿದೆ. ವ್ಯಾಪಾರಿಗಳು ಯಾವ ರೀತಿ ವಹಿವಾಟು ನಡೆಸಿದ್ರೂ ಜಿಎಸ್‌ಟಿ ಕಾಯ್ದೆಯಡಿ ತೆರಿಗೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು ಅಂತ ಎಚ್ಚರಿಕೆ ರವಾನಿಸಿದೆ. ಅಲ್ಲದೆ, ನೋಟಿಸ್ ಕೊಟ್ಟಿರೋ ವಿಚಾರಕ್ಕೆ ಮತ್ತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ನೋಟಿಸ್ ಬಂದಿರುವ ವರ್ತಕರು ಆದಾಯ ತೆರಿಗೆ ಇಲಾಖೆ ಕಚೇರಿಗೆ ತೆರಳಿ ಸೂಕ್ತ ದಾಖಲಾತಿ ನೀಡಿ ವಿವರಣೆ ನೀಡಬೇಕೆಂದು ತಿಳಿಸಿದೆ.

    ವಾಣಿಜ್ಯ ತೆರಿಗೆ ಇಲಾಖೆ ಹೇಳಿದ್ದೇನು..?
    * ವರ್ತಕರು ಕಚೇರಿಗೆ ತೆರಳಿ ಸೂಕ್ತ ದಾಖಲಾತಿ ಜೊತೆ ವಿವರಣೆ ನೀಡಬೇಕು
    * ತೆರಿಗೆ ಇರುವ ಸರಕಿಗೆ ಮಾತ್ರ ತೆರಿಗೆ ವಿಧಿಸಲಾಗುತ್ತೆ
    * ತೆರಿಗೆ ವಿನಾಯಿತಿ ಇರುವ ಸರಕು ಸೇವೆಗಳನ್ನು ಕೈಬಿಡಲಾಗುತ್ತದೆ
    * ರಾಜಿ ತೆರಿಗೆ ಪದ್ಧತಿ ಅನ್ನುವ ಉತ್ತಮ ಆಯ್ಕೆ ಇದೆ.
    * ವಾರ್ಷಿಕ ವಹಿವಾಟು 1.50 ಕೋಟಿ ರೂ.ಗಿಂತ ಕಡಿಮೆ ಇರುವ ವ್ಯಾಪಾರಿಗಳು ಜಿಎಸ್‌ಟಿ ಅಡಿ ನೋಂದಣಿ ಪಡೆದು ರಾಜಿ ತೆರಿಗೆ ಪದ್ಧತಿ ಆಯ್ಕೆ ಮಾಡಿಕೊಳ್ಳಬಹುದು.
    * ಈ ಪದ್ಧತಿಯಡಿ ಶೇ.0.5ರಷ್ಟು ಎಸ್‌ಜಿಎಸ್‌ಟಿ (ಸ್ಟೇಟ್) ಮತ್ತು ಶೇ.0.5ರಷ್ಟು ಸಿಜಿಎಸ್‌ಟಿ (ಸೆಂಟ್ರಲ್) ಪಾವತಿಸಬೇಕು. ಒಟ್ಟು 1% ನಷ್ಟು ತೆರಿಗೆ ಇದೆ.
    * ರಾಜ್ಯದಲ್ಲಿ ಈಗಾಗಲೇ 98,915 ವರ್ತಕರು ರಾಜಿ ತೆರಿಗೆ ಪದ್ಧತಿಯಡಿ ನೋಂದಣಿ
    * ವಾರ್ಷಿಕ ವಹಿವಾಟು ಮಿತಿ ಮೀರಿದ್ದರೂ ನೋಂದಣಿ ಮಾಡಿಸಿಕೊಳ್ಳದ ವರ್ತಕರಿಗೆ ಮಾತ್ರ ಈಗ ನೋಟಿಸ್

  • ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಗುನ್ನಾ – ವಾರ್ಷಿಕ 40 ಲಕ್ಷ ವಹಿವಾಟು ಮೀರಿದ್ರೆ GST ಫಿಕ್ಸ್

    ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್ ಗುನ್ನಾ – ವಾರ್ಷಿಕ 40 ಲಕ್ಷ ವಹಿವಾಟು ಮೀರಿದ್ರೆ GST ಫಿಕ್ಸ್

    – ಹಣ್ಣು, ತರಕಾರಿ ವ್ಯಾಪಾರಿಗೆ 1 ಕೋಟಿ ರೂ. ಟ್ಯಾಕ್ಸ್‌, ನೋಟಿಸ್‌ ಕಂಡು ಹೌಹಾರಿದ ವ್ಯಕ್ತಿ

    ಬೆಂಗಳೂರು: ಬಡವರು ಸಣ್ಣ-ಪುಟ್ಟ ವ್ಯಾಪಾರ ಮಾಡಿಕೊಂಡು ಬದುಕು ಕಟ್ಟಿಕೊಳ್ಳೋಣ ಅಂತ ಕನಸು ಹೊಂದಿರುತ್ತಾರೆ. ಅದಕ್ಕಂತಲೇ ಬೇಕರಿ, ಕಾಂಡಿಮೆಂಟ್ಸ್, ಟೀ-ಕಾಫಿ, ತರಕಾರಿ ಅಂಗಡಿಯನ್ನು ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದಾರೆ. ಆದ್ರೆ, ವಾಣಿಜ್ಯ ತೆರಿಗೆ ಇಲಾಖೆ (Commercial Tax Department) ಜಿಎಸ್‌ಟಿ (GST) ಗುನ್ನಾ ಕೊಟ್ಟಿದೆ.

    ಸಣ್ಣ-ಪುಟ್ಟ ಅಂಗಡಿಗಳು ಅಂದಮೇಲೆ ಅಲ್ಲಿ ಫೋನ್ ಪೇ, ಗೂಗಲ್ ಪೇ.. ಆನ್‌ಲೈನ್ ಪೇಮೆಂಟ್ ಮೋಡ್ ಇದ್ದೇ ಇರುತ್ತೆ, ವ್ಯಾಪಾರಿಗಳಿಗೂ ಆನ್‌ಲೈನ್ ಪೇಮೆಂಟ್ ಸ್ವೀಕರಿಸೋದು ಕಾಮನ್ ಆಗೋಗಿದೆ. ಆದ್ರೆ, ಅವ್ರು ಇದೆಂದೂ ಕಂಡಿರದ, ಕೇಳಿರದ ಶಾಕ್‌ಗೆ ಅಂಗಡಿ ಮಾಲೀಕರು (Traders) ಒಳಗಾಗಿದ್ದಾರೆ. ಆನ್ ಲೈನ್ ಪೇಮೆಂಟ್ ನೋಡಿ ಟ್ಯಾಕ್ಸ್ ಕಟ್ಟುವಂತೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 40 ರಿಂದ 60 ಲಕ್ಷ ರೂ. 1 ಕೋಟಿವರೆಗೂ ದಂಡ ವಿಧಿಸಿದ್ದು, ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ಗೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.

    ವ್ಯಾಪಾರಸ್ಥರು ಗರಂ
    ಇನ್ನೂ ವಾಣಿಜ್ಯ ತೆರಿಗೆ ಇಲಾಖೆ ಕಳಿಸಿರೋ ನೋಟಿಸ್‌ಗೆ ವ್ಯಾಪಾರಿಗಳು ಶಾಕ್‌ಗೆ ಒಳಗಾಗಿದ್ದಾರೆ. `ನಮ್ ಕಿಡ್ನಿ ಮಾರಿ.. ಅಂಗಡಿ ಅಡವಿಟ್ರು ಈ ದಂಡ ಕಟ್ಟೋಕೆ ಆಗಲ್ಲ’.. ಸಣ್ಣ-ಪುಟ್ಟ ವ್ಯಾಪಾರಿಗಳ ಹೊಟ್ಟೆಯ ಮೇಲೆ ಹೊಡೆಯುತ್ತಿದ್ದಾರೆ ಎಂದು ʻಪಬ್ಲಿಕ್ ಟಿವಿʼ ಬಳಿ ಅಳಲು ತೋಡಿಕೊಂಡಿದ್ದಾರೆ. ಅದರಂತೆ ರಾಜೇಂದ್ರ ಶೆಟ್ಟಿ, ಇವ್ರು ದೂರದ ಕುಂದಾಪುರದಿಂದ ಜೀವನ ಸಾಗಿಸಲು ಬೆಂಗಳೂರು ಸೇರಿ ಅನೇಕ ವರ್ಷಗಳೇ ಕಳೆದಿದೆ, ಕೆಂಗೇರಿಯಲ್ಲಿ ಕಾಂಡಿಮೆಂಟ್ಸ್ ಮಾಡಿಕೊಂಡು ಸಂಸಾರದ ಬಂಡಿದೂಡ್ತಿದ್ದಾರೆ. ಇವ್ರಿಗೆ 2021 ರಿಂದ ಇಲ್ಲಿವರೆಗೆ ಒಟ್ಟು 67 ಲಕ್ಷ ಟ್ಯಾಕ್ಸ್ ಬಾಕಿ ಇದೆ ಅಂತಾ ನೋಟಿಸ್ ನೀಡಿದ್ದಾರೆ. ಟ್ಯಾಕ್ಸ್ ಕಟ್ಟೋದಕ್ಕೆ ಹೇಗೆ ಆಗುತ್ತೆ ಬೇಕಾದ್ರೇ ನಮ್ಮನ್ನ ಸಾಯಿಸಿ ಅಂತ ಕಣ್ಣೀರಿಟ್ಟಿದ್ದಾರೆ.

    ಬನ್ನೇರುಘಟದಲ್ಲಿ ತರಕಾರಿ-ಹಣ್ಣಿನ ವ್ಯಾಪಾರಿ ವೀರಮಾದ ಮಾತನಾಡಿ, ಆನ್‌ಲೈನ್ ಮೂಲಕ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಇದಕ್ಕೆ ವಾಣಿಜ್ಯ ತೆರಿಗೆ ಇಲಾಖೆಯವ್ರು ನೋಟಿಸ್ ನೀಡಿದ್ದು, ಬರೋಬ್ಬರಿ 1 ಕೋಟಿ 30 ಲಕ್ಷ ಹಣ ಕಟ್ಟುವಂತೆ ತಿಳಿಸಿದ್ದಾರೆ. ಇದರಿಂದ ಅಂಗಡಿ ಮಾಲೀಕ ಹೌಹಾರಿರಿದ್ದಾರೆ.

    ಬೇಕರಿ ವ್ಯಾಪಾರಿ ರಾಜೇಂದ್ರ ಪೂಜಾರಿ ಅನ್ನೋರು ಮಾತನಾಡಿ, ನಮಗೂ 33 ಲಕ್ಷ ರೂ. ಟ್ಯಾಕ್ಸ್ ಕಟ್ಟುವಂತೆ ನೋಟಿಸ್ ಬಂದಿದೆ. ನಾವು ಕಾಫಿ, ಟೀ-ಸಿಗರೇಟ್ ಮಾರಿಕೊಂಡಿರೋರು, ನಮ್ಮ ಅಂಗಡಿಯ ವ್ಯಾಲ್ಯೂನೇ 3 ಲಕ್ಷ ಆಗೋದಿಲ್ಲ. 33 ಲಕ್ಷ ಎಲ್ಲಿಂದ ತಂದು ಕೊಟ್ಟದಕ್ಕೆ ಆಗುತ್ತೆ? ನಾವು ಟ್ಯಾಕ್ಸ್ ಪೇ ಮಾಡೋದಕ್ಕೆ ಆಗೋಲ್ಲ, ದಯಾಮರಣ ಮಾಡಿಕೊಳ್ಳಬೇಕು ಅಷ್ಟೇ ಅಂತ ಗೋಳಾಡಿದ್ದಾರೆ.

    ಮಾರಾಟ ಮಾಡಿದ ಸರಕುಗಳಿಗೆ ಟ್ಯಾಕ್ಸ್ ಕಡ್ಡಾಯ
    ಇದೇ ವಿಚಾರವಾಗಿ ವಾಣಿಜ್ಯ ತೆರಿಗೆಗಳ ಅಪರ ಆಯುಕ್ತರಿಂದ ಸ್ಪಷ್ಟೀಕರಣ ನೀಡಲಾಗಿದೆ. ಮಾರಾಟ ಮಾಡಿದ ಸರಕುಗಳಿಗೆ ಟ್ಯಾಕ್ಸ್ ಕಡ್ಡಾಯ, ವಾರ್ಷಿಕ 40 ಲಕ್ಷ ವಹಿವಾಟು ಮೀರಿದರೆ ಜಿಎಸ್‌ಟಿ ಫಿಕ್ಸ್ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೇಕರಿಗಳಲ್ಲಿ ಬ್ರೆಡ್ ಮೇಲೆ ಜಿಎಸ್‌ಟಿ ಇಲ್ಲ, ಬ್ರೆಡ್ ಹೊರತುಪಡಿಸಿ ಕುರುಕಲು ತಿಂಡಿಗಳಿಗೆ 5% ಜಿಎಸ್‌ಟಿ, ಯುಪಿಐ ಮೂಲಕ 40 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸಿರುವ ವರ್ತಕರಿಗೆ ನೋಟಿಸ್ ನೀಡಿರೋ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

  • ಎಕ್ಸ್‌ ಪೈರ್ ಆದ ಡ್ರೈಫ್ರೂಟ್ಸ್ ಮಾರಾಟ ಜಾಲ ಪತ್ತೆ – ಮಹಾರಾಷ್ಟ್ರ ವ್ಯಾಪಾರಿಗಳು ಎಸ್ಕೇಪ್

    ಎಕ್ಸ್‌ ಪೈರ್ ಆದ ಡ್ರೈಫ್ರೂಟ್ಸ್ ಮಾರಾಟ ಜಾಲ ಪತ್ತೆ – ಮಹಾರಾಷ್ಟ್ರ ವ್ಯಾಪಾರಿಗಳು ಎಸ್ಕೇಪ್

    ಬೀದರ್: ಎಕ್ಸ್ ಪೈರ್ ಆದ ಡ್ರೈಫ್ರೂಟ್ಸ್ ಮಾರಾಟ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ವ್ಯಾಪರಿಗಳಿಗೆ ಸಾರ್ವಜನಿಕರು ತರಾಟೆ ತೆಗೆದುಕೊಂಡ ಘಟನೆ ನಗರದ ಶಿವನಗರದ ಪಾಪನಾಶ ಗೇಟ್ ಬಳಿ ನಡೆದಿದೆ.

    ಮಹಾರಾಷ್ಟ್ರ ಮೂಲದ ವ್ಯಾಪಾರಿಗಳು ಕಳಪೆ ಗುಣಮಟ್ಟದ ಹಾಗೂ ದಿನಾಂಕ ಮುಗಿದಿರುವ ಡ್ರೈಫ್ರೂಟ್ಸ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಪಾಪನಾಶ ಗೇಟ್ ನಿಂದ ನೌಬಾದ್ ವರೆಗೆ 10ಕ್ಕೂ ಹೆಚ್ಚು ರಸ್ತೆ ಬದಿಯ ಅಂಗಡಿಗಳನ್ನು ಹಾಕಿಕೊಂಡು ಎಕ್ಸ್ ಪೈರ್ ಆಗಿರುವ ಡ್ರೈಫ್ರೂಟ್ಸ್ ಗಳನ್ನು ವ್ಯಾಪಾರಿಗಳು ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ:  ಹರ್ಷನ ಒಂದೊಂದು ರಕ್ತದ ಹನಿಯೂ ವ್ಯರ್ಥವಾಗದಂತೆ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಶಪಥ ಮಾಡ್ತೇವೆ: ಪ್ರಮೋದ್ ಮುತಾಲಿಕ್

    ಡ್ರೈಫ್ರೂಟ್ಸ್ ಕೊಂಡುಕೊಳ್ಳಲು ಬಂದಾಗ ಸಾರ್ವಜನಿಕರು ದಿನಾಂಕ ಪರಿಶೀಲನೆ ಮಾಡಿ ವ್ಯಾಪಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ತರಾಟೆ ತೆಗೆದುಕೊಳ್ಳುತ್ತಿದ್ದಂತ್ತೆ ಎಕ್ಸ್ ಪೈರ್ ಆಗಿರುವ ಡ್ರೈಫ್ರೂಟ್ಸ್ ತುಂಬಿಕೊಂಡು ಅಂಗಡಿಗಳನ್ನು ಮುಚ್ಚಿಕೊಂಡು ಮಹಾರಾಷ್ಟ್ರ ಮೂಲದ ವ್ಯಾಪಾರಿಗಳು ಪರಾರಿಯಾಗಿದ್ದಾರೆ.

     

  • ಗಣೇಶೋತ್ಸವಕ್ಕೆ ಅವಕಾಶ ಕೊಡಿ, ನಮ್ಮ ಬದುಕು ಬೀದಿಗೆ ಬಂದಿದೆ: ವ್ಯಾಪಾರಿಗಳ ಅಳಲು

    ಗಣೇಶೋತ್ಸವಕ್ಕೆ ಅವಕಾಶ ಕೊಡಿ, ನಮ್ಮ ಬದುಕು ಬೀದಿಗೆ ಬಂದಿದೆ: ವ್ಯಾಪಾರಿಗಳ ಅಳಲು

    ಬೆಂಗಳೂರು: ಕೊರೊನಾ ವೈರಸ್‍ನಿಂದಾಗಿ ಈ ಬಾರಿ ಗಣೇಶೋತ್ಸವವನ್ನು ಆಚರಿಸಬೇಕೋ, ಇಲ್ಲವೋ ಎಂಬುವುದರ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಆದರೆ ಈ ನಡುವೆ ಗಣೇಶ ಮೂರ್ತಿ ತಯಾರಕರು ಗಣೇಶೋತ್ಸವಕ್ಕೆ ಅವಕಾಶ ಮಾಡಿ ಕೊಡಿ, ನಮ್ಮ ಬದುಕು ಬೀದಿಗೆ ಬರುತ್ತಿದೆ ಎಂದು ಅಳಲುತೊಡಿಕೊಂಡಿದ್ದಾರೆ.

    ಕೊರೊನಾ ಎಂಬ ವೈರಾಣುವಿನ ಕಾಟಕ್ಕೆ ಎಷ್ಟೋ ಜನ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಜೊತೆಗೆ ಕೊರೊನಾದಿಂದ ಆರ್ಥಿಕ ಚಟುವಟಿಕೆಗಳು ಸಹ ನೆಲ ಕಚ್ಚಿದೆ. ಅದೇ ರೀತಿಯಲ್ಲಿ ಗಣೇಶ ಮೂರ್ತಿ ತಯಾರಕರ ಬದುಕು ಸಹ ಅತಂತ್ರವಾಗಿದೆ. ಈ ಬಾರಿ ಗಣೇಶೋತ್ಸವಕ್ಕೆ ಅವಕಾಶ ಮಾಡಿಕೊಟ್ಟರೆ ನಮ್ಮ ಬದುಕು ಸಾಗಿಸಲು ಸಾಧ್ಯವಾಗುತ್ತದೆ ಎಂದು ವ್ಯಾಪಾರಸ್ಥರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಗಣೇಶೋತ್ಸವ ಆಚರಣೆ ನಡೆಸಿಯೇ ನಡೆಸುತ್ತೇವೆ: ಈಶ್ವರಪ್ಪ

    75 ವರ್ಷದಿಂದ ಗಣೇಶ ಮೂರ್ತಿಗಳ ವ್ಯಾಪರದಲ್ಲಿದ್ದೇವೆ. ಈ ಕೊರೊನಾದಿಂದ ಎರಡು ವರ್ಷ ನಮಗೆ ತುಂಬಾ ನಷ್ಟವಾಗಿದೆ. ಶೇ 98 ರಷ್ಟು ವ್ಯಾಪಾರ ಕುಸಿದಿದೆ. ಸರ್ಕಾರ ಇನ್ನೂ ಅನುಮತಿ ಬೇರೆ ನೀಡಿಲ್ಲ. ಹಬ್ಬದ ತಯಾರಿ ಸಹ ನಡೆಯುತ್ತಿಲ್ಲ. ಹಬ್ಬಕ್ಕೆ ಇನ್ನೂ ಕೇವಲ 5 ದಿನ ಮಾತ್ರ ಬಾಕಿ ಇದೆ. ಇಲ್ಲಿವರೆಗೂ ಕೇವಲ 10 ಜನ ಬಂದು ಗಣಪತಿ ಬುಕ್ ಮಾಡಿದ್ದಾರೆ. ಅದು ಸರ್ಕಾರ ಅನುಮತಿ ನೀಡಿದರೆ, ಗಣೇಶನ ಮೂರ್ತಿ ಖರೀಸಿಸುತ್ತೇವೆ ಅಂತ ಹೇಳಿದ್ದಾರೆ ಎಂದು ವ್ಯಾಪಾರಿಗಳು ಕೊರೋನಾದಿಂದ ತಮಗಾಗಿರುವ ನಷ್ಟವನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಗಣೇಶೋತ್ಸವ ಕುರಿತು ಸಿಎಂ ನಿರ್ಧಾರ: ಬೈರತಿ ಬಸವರಾಜು

  • ವೀಕೆಂಡ್ ಕರ್ಫ್ಯೂ ವಿರೋಧಿಸಿ ಮೈಸೂರಲ್ಲಿ ಪ್ರತಿಭಟನೆ

    ವೀಕೆಂಡ್ ಕರ್ಫ್ಯೂ ವಿರೋಧಿಸಿ ಮೈಸೂರಲ್ಲಿ ಪ್ರತಿಭಟನೆ

    ಮೈಸೂರು: ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆ ವಿವಿಧ ಸಂಘ, ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿ ನಗರದ ದೇವರಾಜ ಅರಸು ರಸ್ತೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿವೆ.

    ದೇವರಾಜ ಅರಸು ರಸ್ತೆಯ ಮಳಿಗೆಗಳ ಮುಂಭಾಗದಲ್ಲಿ ಕಪ್ಪು ಬಟ್ಟೆ ಹಾಗೂ ಕಪ್ಪು ಪಟ್ಟಿಯನ್ನ ಧರಿಸಿ ಪ್ರತಿಭಟನೆ ನಡೆಸಿದರು. ವೀಕೆಂಡ್ ಕರ್ಫ್ಯೂ ಅನಗತ್ಯ ಹಾಗೂ ಅವೈಜ್ಞಾನಿಕವಾದದ್ದು, ಹೀಗಾಗಿ ಯಾವುದೇ ಕಾರಣಕ್ಕೂ ವೀಕೆಂಡ್ ಕರ್ಫ್ಯೂ ಮುಂದುವರಿಸಬಾರದು. ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿ ವ್ಯಾಪಾರಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಇಂದು 1,453 ಹೊಸ ಕೊರೊನಾ ಪ್ರಕರಣ, 17 ಮಂದಿ ಸಾವು

    ತಕ್ಷಣವೇ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಬೇಕು, ಶನಿವಾರ ಹಾಗೂ ಭಾನುವಾರ ವ್ಯಾಪಾರ ಹೆಚ್ಚಾಗಿರುತ್ತದೆ. ಈ ಎರಡು ದಿನಗಳ ವ್ಯಾರ ಒಂದೇ, ವಾರದ ಉಳಿದ ಐದು ದಿನಗಳ ವ್ಯಾಪಾರವೂ ಒಂದೇ. ಮದುವೆ ಸಮಾರಂಭ ನಡೆಸುವ ಹಾಲ್‍ಗಳಿಗೂ ತೊಂದರೆಯಾಗಿದೆ. ಸರ್ಕಾರ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

     

  • ಟೊಮೆಟೋ ಮಾರ್ಕೆಟ್‍ನಲ್ಲಿ ಭಾರೀ ಗಲಾಟೆ

    ಟೊಮೆಟೋ ಮಾರ್ಕೆಟ್‍ನಲ್ಲಿ ಭಾರೀ ಗಲಾಟೆ

    ಚಿಕ್ಕಬಳ್ಳಾಪುರ: ರೈತರು ಹಾಗೂ ವರ್ತಕರ ನಡುವೆ ಚಿಂತಾಮಣಿ ನಗರದ ಎಪಿಎಂಸಿ ಯಾರ್ಡ್‍ನಲ್ಲಿ ಟೊಮೆಟೋ ವಿಚಾರವಾಗಿ ಮಾರ್ಕೆಟ್‍ನಲ್ಲಿ ಗಲಾಟೆ ನಡೆದಿದೆ. ಇದನ್ನೂ ಓದಿ:  ಮನೆಗೆ ಹೋದಾಗ ಮಗನೇ ಅಂತ ಕರೀತಿದ್ರು – ವಿಜಿ ತಾಯಿ ನಿಧನಕ್ಕೆ ನವೀನ್ ಸಜ್ಜು ಕಣ್ಣೀರು

    ಪ್ರತಿದಿನ ಚಿಂತಾಮಣಿ ಟೊಮೆಟೋ ಮಾರ್ಕೆಟ್‍ಗೆ ರಾಶಿರಾಶಿ ಲೋಢ್ ಗಟ್ಟಲೇ ಬರುತ್ತಿದೆ. ಟೊಮೆಟೋ ಮಾರ್ಕೆಟ್‍ನಲ್ಲಿ ಜಾಗ ಸಾಕಾಗುತ್ತಿಲ್ಲ. ಹೀಗಾಗಿ ಮಾರ್ಕೆಟ್‍ನ ದಿನಸಿ ಅಕ್ಕಿ ಬೆಳೆ ಅಂಗಡಿಗಳ ಮಾರ್ಕೆಟ್ ಬಳಿ ಸಹ ಟೊಮೆಟೋ ತುಂಬಿಕೊಂಡು ಬಂದ ವಾಹನಗಳನ್ನು ಪಾಕಿರ್ಂಗ್ ಮಾಡಿ ವ್ಯಾಪಾರ ವಹಿವಾಟು ಮಾಡಲಾಗುತ್ತಿದೆ. ದಿನಸಿ ಅಂಗಡಿಗಳ ಮುಂದೆ ನಿಲ್ಲಿಸಿಕೊಂಡು ಒಂದು ವಾಹನದಿಂದ ಮತ್ತೊಂದು ವಾಹನಕ್ಕೆ ಟೊಮೆಟೋ ಶಿಫ್ಟ್ ಮಾಡಲಾಗುತ್ತಿದೆ. ಹೀಗಾಗಿ ಅಕ್ಕಿ-ಬೇಳೆ ಇತರೆ ದವಸಧಾನ್ಯಗಳ ಗೋದಾಮುಗಳ ವರ್ತಕರು ತಮ್ಮ ವ್ಯಾಪಾರ ವಹಿವಾಟಿಗೆ ಅಡ್ಡಿ ಆಗುತ್ತೆ ಅಂತ ಆಕ್ಷೇಪ ವ್ಯಕ್ತಪಡಿಸಿ ತಕರಾರು ತೆಗೆದಿದ್ದಾರೆ.

    ಈ ವಿಚಾರವಾಗಿ ರೈತರು ದವಸಧಾನ್ಯ ಗೋದಾಮುಗಳ ವರ್ತಕರ ನಡುವೆ ಗಲಾಟೆಯಾಗಿದೆ. ಗಲಾಟೆ ವಿಕೋಪಕ್ಕೆ ಹೋಗಿ ಕೈ ಕೈ ಮಿಲಾಯಿಸುವ ಹಂತವೂ ತಲುಪಿದೆ. ಕೂಡಲೇ ಮಧ್ಯ ಪ್ರವೇಶ ಮಾಡಿರೋ ಎಪಿಎಂಸಿ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ನಿರತರಾಗಿದ್ದಾರೆ. ಟೊಮೆಟೋ ಮಾರ್ಕೆಟ್‍ನಲ್ಲಿ ವ್ಯಾಪಾರ ವಹಿವಾಟಿಗೆ ಜಾಗದ ಕೊರತೆ ಎದುರಾಗಿರೋದು ಇದಕ್ಕೆಲ್ಲಾ ಮೂಲ ಕಾರಣವಾಗಿದೆ. ಟೊಮೆಟೋ ಮಾರ್ಕೆಟ್ ಬೇರೆ ಕಡೆ ಶಿಫ್ಟ್ ಮಾಡಿ ಅಥವಾ ಬೇರೆ ಮಾರುಕಟ್ಟೆ ವ್ಯವಸ್ಥೆ ಮಾಡುವಂತೆ ರೈತರು ವರ್ತಕರು ಆಗ್ರಹಿಸಿದ್ದಾರೆ.

  • ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್ಲ

    ಕೊರೊನಾ ಹಿನ್ನೆಲೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಕೊಳ್ಳುವವರೂ ಇಲ್ಲ, ಮಾರುವವರೂ ಇಲ್ಲ

    – ಚಿನ್ನದ ಅಂಗಡಿ ಬಂದ್‍ಗೆ ಗದಗನಲ್ಲಿ ಆಕ್ರೋಶ

    ಧಾರವಾಡ/ಗದಗ: ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಧಾರವಾಡ ಮಹಾನಗರ ಪಾಲಿಕೆ ಧಾರವಾಡ ತರಕಾರಿ ಮಾರುಕಟ್ಟೆಯನ್ನು ನಗರದ ಕೆಇ ಬೊರ್ಡ್ ಶಾಲೆಯ ಆವರಣಕ್ಕೆ ಸ್ಥಳಾಂತರಿಸಿದೆ. ಆದರೆ ಅಲ್ಲಿ ಕೊಳ್ಳವವರೂ ಬರುತ್ತಿಲ್ಲ, ಮಾರುವವರೂ ಬರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ.

    ವ್ಯಾಪಾರಕ್ಕೆ ಬರುವವರಿಗೆ ಇಗಾಗಲೇ ಪಾಲಿಕೆ ಮಾರ್ಕಿಂಗ್ ಮಾಡಿ ಜಾಗ ಗುರುತಿಸುವ ಕೆಲಸ ಮಾಡುತ್ತಿದೆ. ಅಲ್ಲದೆ ಕೆಲವೇ ಕೆಲವು ತರಕಾರಿ ವ್ಯಾಪಾರಿಗಳು ಮಾತ್ರ ಸ್ಥಳಕ್ಕೆ ಆಗಮಿಸಿದ್ದಾರೆ. ಆದರೆ ವ್ಯಾಪಾರ ಇಲ್ಲದ ಕಾರಣ ಮೊದಲಿನ ಜಾಗಕ್ಕೇ ಕಳುಹಿಸಿ ಎಂದು ಮನವಿ ಮಾಡುತಿದ್ದಾರೆ.

    ಬಿಸಿಲಿನಲ್ಲಿ ಕೂರಲು ಆಗುತ್ತಿಲ್ಲ, ಅಲ್ಲದೆ ಜನರು ಸಹ ಇತ್ತ ಬರುತ್ತಿಲ್ಲ. ವ್ಯಾಪಾರವೇ ಆಗುತ್ತಿಲ್ಲ. ಹೀಗಾಗಿ ತುಂಬಾ ಕಷ್ಟವಾಗುತ್ತಿದೆ. ನಮ್ಮನ್ನು ಮೊದಲಿನ ಜಾಗಕ್ಕೇ ಕಳುಹಿಸಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಗ್ರಾಹಕರು ಸಹ ಮಾರುಕಟ್ಟೆಯತ್ತ ಬಾರುತ್ತಿಲ್ಲ. ಹೀಗಾಗಿ ಆವರಣ ಬಿಕೋ ಎನ್ನುತ್ತಿದೆ.

    ಚಿನ್ನದ ಅಂಗಡಿ ಬಂದ್ ಗೆ ಆಕ್ರೋಶ

    ಸರ್ಕಾರದ ಆಫ್ ರೂಲ್ಸ್ ನಿರ್ಧಾರದ ವಿರುದ್ಧ ಗದಗ ಜಿಲ್ಲೆಯ ಅನೇಕ ಚಿನ್ನದ ಅಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಾವು ಕೋವಿಡ್ ನಿಯಮಗಳನ್ನು ಪಾಲಿಸುತ್ತೇವೆ. ಅಂಗಡಿ ತೆರೆಯಲು ಅವಕಾಶ ಕಲ್ಪಿಸಿ ಕೊಡಿ ಎಂದು ಚಿನ್ನದ ಅಂಗಡಿಯ ಅನೇಕ ಮಾಲೀಕರು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದ ಅನೇಕ ಕಡೆಗಳಲ್ಲಿ ಮಾರ್ಕೆಟ್ ಓಪನ್ ಇದೆ. ಗದಗನಲ್ಲಿ ಮಾತ್ರ ಬಂದ್ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕಳೆದ 2 ವರ್ಷಗಳಿಂದ ವ್ಯಾಪಾರ ಕುಂಠಿತದಿಂದ ಸಾಕಷ್ಟು ತೊಂದರೆಯಲ್ಲಿದ್ದೆವೆ. ಜೀವನ ನಡೆಸುವುದು ದುಸ್ತರವಾಗಿದೆ. ರಾಜಕಾರಣಿಗಳು ಚುನಾವಣೆ, ಸಭೆ, ಸಮಾರಂಭಗಳಂತಹ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಅವರಿಗಿಲ್ಲದ ಕಾನೂನು ಸಣ್ಣಪುಟ್ಟ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಯಾಕೆ ಎಂದು ಸರ್ಕಾರದ ವಿರುದ್ಧ ಗುಡುಗಿದರು. ಮದುವೆ, ಶುಭ ಸಮಾರಂಭಗಳ ಈ ಸೀಸನ್ ನಲ್ಲಿ ಅಂಗಡಿಗಳನ್ನು ಬಂದ್ ಮಾಡಿಸಿದರೆ ಬದುಕೊದು ಹೇಗೆ ಎಂದು ಪ್ರಶ್ನಿಸಿದರು. ವೀಕೆಂಡ್ ಲಾಕ್‍ಡೌನ್ ಬಿಟ್ಟು ಉಳಿದ ದಿನಗಳಲ್ಲಿ, ಕೋವಿಡ್ ನಿಯಮ ಪಾಲಿಸುತ್ತೇವೆ ದಿನಕ್ಕೆ 4 ಗಂಟೆ ವರೆಗೆಯಾದರೂ, ಅಂಗಡಿ ತೆರೆಯಲು ಅನುಮತಿ ಕೊಡಿ ಎಂದು ಚಿನ್ನದ ಅಂಗಡಿ ಮಾಲೀಕರು ಬೇಡಿಕೆ ಇಟ್ಟಿದ್ದಾರೆ.

  • ಸಂತೆಗಳ ವ್ಯಾಪಾರಿಗಳಿಂದಲೇ  ಕೋವಿಡ್ ಸೇಲ್

    ಸಂತೆಗಳ ವ್ಯಾಪಾರಿಗಳಿಂದಲೇ ಕೋವಿಡ್ ಸೇಲ್

    ಮಡಿಕೇರಿ: ರಾಜ್ಯದಲ್ಲಿ ಕೊರೊನಾ ಸುನಾಮಿ ತಾಂಡವಾಡುತ್ತಿದೆ. ಕೊಡಗು ಜಿಲ್ಲೆಯಲ್ಲಿ ಸಹ ಕಳೆದ ಒಂದು ವಾರದಿಂದ ಶತಕದ ಆಸುಪಾಸಿನಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಿದ್ದರೂ ಸಂತೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕೊರೊನಾಗೆ ಡೋಂಟ್ ಕೇರ್ ಎನ್ನುತ್ತಿದ್ದು, ವ್ಯಾಪಾರಿಗಳು ಮಾಸ್ಕ್ ಧರಿಸದೆ ಹಣ್ಣು, ತರಕಾರಿಗಳನ್ನು ಮಾರಾಟ ಮಾಡುತ್ತಿದ್ದಾರೆ.

    ವ್ಯಾಪಾರಿಗಳು ಜಿಲ್ಲೆಯ ವಿವಿಧ ಸಂತೆಗಳಲ್ಲಿ ಹಣ್ಣು ತರಕಾರಿಗಳ ಜೊತೆಗೆ ಕೊರೊನಾ ಸೇಲ್ ಮಾಡುತ್ತಿದ್ದಾರಾ ಎಂಬ ಅನುಮಾನ ಮೂಡಿದೆ. ಜಿಲ್ಲೆಯಲ್ಲಿ ನಡೆಯುವ ಮಡಿಕೇರಿ, ಕುಶಾಲನಗರ ಮತ್ತು ಸುಂಟಿಕೊಪ್ಪದ ಪ್ರಮುಖ ಮೂರು ಸಂತೆಗಳಲ್ಲಿ ಈ ವ್ಯಾಪಾರಿಗಳು ಇರುತ್ತಾರೆ. ಆದರೆ ಮಾಸ್ಕ್ ಸೇರಿದಂತೆ ಕೊರೊನಾ ನಿಯಮಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ಸಂತೆಗಳಿಗೆ ಬರುವ ನೂರಾರು ಗ್ರಾಹಕರಿಗೆ ಹಣ್ಣು, ತರಕಾರಿ ಮತ್ತು ದಿನಸಿ ವಸ್ತುಗಳ ಜೊತೆಗೆ ವ್ಯಾಪಾರಿಗಳು ಕೊರೊನಾ ವೈರಸ್ ನ್ನೂ ಸೇಲ್ ಮಾಡುತ್ತಿದ್ದಾರಾ ಎಂಬ ಅನುಮಾನ ಮೂಡಿದೆ.

    ವ್ಯಾಪಾರಿಗಳು ಮಾಸ್ಕ್ ಧರಿಸದೇ ವ್ಯಾಪಾರ ಮಾಡುತ್ತಿರುವುದು ನಮಗೂ ಆತಂಕವಿದೆ ಎಂದು ಗ್ರಾಹಕರು ಕಳವಳ ವ್ಯಕ್ತಪಡಿಸಿದ್ದಾರೆ. ಆದರೆ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಕ್ರಮ ಕೈಗೊಳ್ಳಬೇಕಾದ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮತ್ತು ಪೊಲೀಸರು ಸಂತೆಗಳತ್ತ ತಿರುಗಿ ನೋಡುತ್ತಿಲ್ಲ.

  • ಬಂದ್ ಎಫೆಕ್ಟ್ – ಗ್ರಾಹಕರಿಗಾಗಿ ಕಾದು ಸುಸ್ತಾಗಿ ನಿದ್ರೆಗೆ ಜಾರಿದ ವ್ಯಾಪಾರಸ್ಥರು

    ಬಂದ್ ಎಫೆಕ್ಟ್ – ಗ್ರಾಹಕರಿಗಾಗಿ ಕಾದು ಸುಸ್ತಾಗಿ ನಿದ್ರೆಗೆ ಜಾರಿದ ವ್ಯಾಪಾರಸ್ಥರು

    ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಬೀದಿಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಹಕರಿಲ್ಲದೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.

    ಹೌದು. ಬಂದ್ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಗ್ರಾಹಕರಿಗಾಗಿ ಕಾದು ಕಾದು ಸುಸ್ತಾಗಿ ಕುಳಿತಲ್ಲಿಯೇ ನಿದ್ದೆಗೆ ಜಾರಿರುವ ಪ್ರಸಂಗ ನಡೆದಿದೆ.

    ವಿವಿಧ ಸಂಘಟನೆಗಳು ಇಂದು ಬಂದ್‍ಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಶ್ರೀ ಕೃಷ್ಣ ರಾಜೇಂದ್ರ ಮಾರುಕಟ್ಟೆ(ಸಿಟಿ) ಗಿರಾಕಿಗಳಿಲ್ಲದೆ ಭಣಗುಡುತ್ತಿತ್ತು. ಹೀಗಾಗಿ ಬೀದಿ ಬದಿಯ ವ್ಯಾಪಾರಿಗಳು ಗಿರಾಕಿಗಳನ್ನು ಕಾದು ಸುಸ್ತಾಗಿ ತರಕಾರಿ ಇದ್ದ ಗೋಣಿಚೀಲದ ಮೇಲೆ ತಲೆಯಿಟ್ಟು ನಿದ್ದೆ ಮಾಡಿದ್ದಾರೆ.

    ಇತ್ತ ಮೆಜೆಸ್ಟಿಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದು, ಮೆಜೆಸ್ಟಿಕ್ ಮುಂಭಾಗ ಪೇಟ ತೊಟ್ಟು ಕತ್ತೆಯ ಮೇಲೆ ಮೆರವಣಿಗೆ ಬರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ ವಾಟಾಳ್ ಮಂಗಳವಾದ್ಯಗಳ ದೊಡ್ಡ ತಂಡದೊಂದಿಗೆ ಆಗಮಿಸಿದ್ದರು. ಇವರ ಜೊತೆಗೆ ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದಾರೆ.

    ಮಂಗಳವಾದ್ಯಗಳ ಮಧ್ಯೆ ಕತ್ತೆಯ ಮೇಲೆ ಕುಳಿತುಕೊಂಡು ವಾಟಾಳ್ ನಾಗರಾಜ್ ಇಡೀ ಮೆಜೆಸ್ಟಿಕ್ ರೌಂಡ್ಸ್ ಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ವಾಟಾಳ್, ಇದು ಒಂದು ಅಪರೂಪದ ಚಳುವಳಿ. ವಿಶ್ವದಲ್ಲೇ ಇಂತಹ ಚಳುವಳಿ ನಡೆದಿಲ್ಲ. ಕತ್ತೆಯ ಮೇಲೆ ಕುಳಿತುಕೊಂಡು ಮೆರವಣಿಗೆ ಮಾಡುವ ಮೂಲಕ ರಾಜ್ಯ ಸರ್ಕಾರದ ನೀತಿಯನ್ನ ವಿರೋಧಿಸುತ್ತಿದ್ದೇವೆ. ಇಂತಹ ಪ್ರತಿಭಟನೆ ನೂರು ವರ್ಷಗಳಾದರೂ ಬರುವುದಿಲ್ಲ. ನಾವೆಲ್ಲರೂ ಪ್ರಾಮಾಣಿಕ ಕನ್ನಡ ಒಕ್ಕೂಟದ ಮುಖಂಡರು ಬಹಳ ನಿರಂತರವಾಗಿ ಹೋರಾಟ ಮಾಡಿದ್ದೇವೆ. ರೈತರಿಗಾಗಿ ನಾವು 50 ವರ್ಷಗಳಿಂದ ಹೋರಾಟ ಮಾಡಿದ್ದೇವೆ. ಇನ್ಮುಂದೆ ಮುಂದೆಯೂ ನಮ್ಮ ಉಸಿರುವ ಇರುವವರೆಗೂ ರೈತರ ಪರವಾಗಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

  • ಚಿಕ್ಕಬಳ್ಳಾಪುರ ನಗರದಲ್ಲಿ ದಿನಸಿ ವರ್ತಕರಿಂದ ಸೆಲ್ಫ್ ಲಾಕ್‍ಡೌನ್

    ಚಿಕ್ಕಬಳ್ಳಾಪುರ ನಗರದಲ್ಲಿ ದಿನಸಿ ವರ್ತಕರಿಂದ ಸೆಲ್ಫ್ ಲಾಕ್‍ಡೌನ್

    ಚಿಕ್ಕಬಳ್ಳಾಪುರ: ಕೊರೊನಾ ಆತಂಕದಿಂದ ನಗರದ ದಿನಸಿ ವರ್ತಕರು ಸ್ವಯಂ ಲಾಕ್‍ಡೌನ್‍ಗೆ ಮೊರೆ ಹೋಗಿದ್ದಾರೆ.

    ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಇಂದಿನಿಂದ(ಜುಲೈ 1) ಪ್ರತಿದಿನ ಎರಡು ಗಂಟೆಗೆ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿ ವ್ಯಾಪಾರ ವಹಿವಾಟನ್ನ ಬಂದ್ ಮಾಡಿ ದಿನಸಿ ವರ್ತಕರೇ ಸೆಲ್ಫ್ ಲಾಕ್‍ಡೌನ್ ಮಾಡುತ್ತಿದ್ದಾರೆ. ಅದರಲ್ಲೂ ಚಿಕ್ಕಬಳ್ಳಾಪುರ ನಗರದಲ್ಲೇ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿದ್ದು, ವರ್ತಕರಿಗೂ ಆತಂಕ ಶುರುವಾಗಿದೆ.

    ಖಾಸಗಿ ಫೈನಾನ್ಸ್ ಸಂಸ್ಥೆಯ ಪಿಗ್ಮಿ ಕಲೆಕ್ಟರ್ ಗೂ ಸೋಂಕು ದೃಢವಾಗಿದೆ. ತದನಂತರ ಅದೇ ಬ್ಯಾಂಕಿನವರಾಗಿದ್ದ ಜ್ಯುವೆಲ್ಲರಿ ಶಾಪ್ ನವರಿಗೂ ಹಾಗೂ ಹಾಲಿನ ಮಳಿಗೆ ಕಾಂಡಿಮೆಂಟ್ಸ್ ನವರಿಗೂ ಸೋಂಕು ದೃಢವಾಗಿತ್ತು. ವ್ಯಾಪಾರಸ್ಥರಿಗೂ ಸೋಂಕು ಹರಡುವ ಸಾಧ್ಯತೆ ದಟ್ಟವಾಗಿರೋದ್ರಿಂದ ದಿನಸಿ ವರ್ತಕರ ಸಂಘದಿಂದ ಈ ತೀರ್ಮಾನ ಮಾಡಲಾಗಿದೆ. ಹೀಗಾಗಿ ಪ್ರತಿದಿನ 2 ಗಂಟೆಗೆ ವ್ಯಾಪಾರ ವಹಿವಾಟು ಬಂದ್ ಆಗಲಿದೆ.

    ಇನ್ನೂ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವರ್ತಕರೊಬ್ಬರು, ಬರೀ 2 ಗಂಟೆ ಅಲ್ಲ 15-20 ದಿನಗಳೇ ಅಂಗಡಿ ಬಂದ್ ಮಾಡಲು ತೀರ್ಮಾನಿಸಿದ್ದೀನಿ ಎಂದರು. ಕಾರಣ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ಜಾಸ್ತಿ ಆಗುತ್ತಿದೆ. ಎಷ್ಟೇ ಮುಂಜಾಗ್ರತೆ ಕೈಗೊಂಡರೂ ಕೊರೊನಾ ಯಾವುದೇ ರೂಪದಲ್ಲಿ ಬಂದು ವಕ್ಕರಿಸಿಕೊಳ್ಳೋ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.