Tag: ವ್ಯಾಪಾರಿಗಳು

  • ಟೀ ಆಯ್ತು, ಟೊಮೆಟೊ ಆಯ್ತು ಈಗ ಪಾನ್ ಸರದಿ- ಪಾಕ್ ಜೊತೆ ವ್ಯವಹಾರ ಕೈಬಿಡಲು ನಿರ್ಧಾರ

    ಟೀ ಆಯ್ತು, ಟೊಮೆಟೊ ಆಯ್ತು ಈಗ ಪಾನ್ ಸರದಿ- ಪಾಕ್ ಜೊತೆ ವ್ಯವಹಾರ ಕೈಬಿಡಲು ನಿರ್ಧಾರ

    ನವದೆಹಲಿ: ಪುಲ್ವಾಮಾ ದಾಳಿಯ ಪ್ರತಿಕಾರವನ್ನು ಮಂಗಳವಾರ ವಾಯುಪಡೆ ಏರ್ ಸ್ಟ್ರೈಕ್ ಮಾಡಿವ ಮೂಲಕ ಉಗ್ರರ ನೆಲೆಗಳನ್ನು ಧ್ವಂಸ ಮಾಡಿ ತೀರಿಸಿಕೊಂಡಿತ್ತು. ಒಂದೆಡೆ ಐಎಎಫ್ ಸರ್ಜಿಕಲ್ ದಾಳಿ ನಡೆಸಿದರೆ ಇನ್ನೊಂದೆಡೆ ಭಾರತೀಯ ರೈತರು ಹಾಗೂ ವ್ಯಾಪಾರಿಗಳು ಪಾಕ್ ಜೊತೆ ಯಾವುದೇ ವ್ಯವಹಾರ ಸಂಬಂಧ ಬೇಡ, ಪಾಕಿಸ್ತಾನಕ್ಕೆ ನಾವು ಬೆಳೆದ ಬೆಳೆಗಳನ್ನು ರಫ್ತು ಮಾಡಲ್ಲ ಅಂತ ಪಟ್ಟು ಹಿಡಿದಿದ್ದಾರೆ.

    ಪತ್ರಿಕೆಯೊಂದರ ವರದಿ ಪ್ರಕಾರ ಮಧ್ಯಪ್ರದೇಶದ ವೀಳ್ಯದೆಲೆ ಬೆಳೆಗಾರರು ಪಾಕಿಸ್ತಾನದ ಜತೆಗಿನ ವ್ಯಾಪಾರವನ್ನು ಕೈಬಿಡಲು ನಿರ್ಧರಿಸಿದ್ದಾರೆ. ಈ ಹಿಂದೆ ಮಧ್ಯ ಪ್ರದೇಶದ ಟೀ ವ್ಯಾಪಾರಿಗಳು ಮತ್ತು ಟೊಮೆಟೊ ಬೆಳೆಗಾರರು ಪಾಕಿಸ್ತಾನದೊಂದಿಗೆ ತಮ್ಮ ವ್ಯಾಪಾರ ಸಂಬಂಧಗಳನ್ನು ಸ್ಥಗಿತಗೊಳಿಸಿದ ಬಳಿಕ ವೀಳ್ಯದೆಲೆ ವ್ಯಾಪಾರಿಗಳು ಕೂಡ ವ್ಯವಹಾರ ನಿಲ್ಲಿಸಲು ನಿರ್ಧಾರ ಮಾಡಿದ್ದಾರೆ.

    ಮಧ್ಯಪ್ರದೇಶದ ಛತ್ತಾರ್‍ಪುರ ಜಿಲ್ಲೆಯ ಮಹಾರಾಜ್‍ಪುರ, ಗರ್ಹಿಮಾಲಹ್ರಾ, ಪಿಪಟ್ ಮತ್ತು ಪನಾಗರ್ ಪ್ರದೇಶಗಳು ವೀಳ್ಯದೆಲೆ ಬೆಳೆಗೆ ಹೆಸರುವಾಸಿ. ಇಲ್ಲಿನ ಮಹೊಬಾ ಪಾನ್‍ಗೆ(ವೀಳ್ಯದೆಲೆ) ಪಾಕಿಸ್ತಾನದಲ್ಲಿ ಭಾರೀ ಬೇಡಿಕೆ ಇದ್ದು, ಮೀರತ್ ಮತ್ತು ಶಹರಾನ್‍ಪುರ ಮೂಲಕ ಪಾನ್‍ಗಳನ್ನು ಪಾಕಿಸ್ತಾನಕ್ಕೆ ರಫ್ತು ಮಾಡಲಾಗುತ್ತಿತ್ತು. ಆದ್ರೆ ವೀಳ್ಯದೆಲೆ ರಫ್ತು ಸ್ಥಗಿತಗೊಳಿಸುವುದರಿಂದ ವ್ಯಾಪಾರಿಗಳಿಗೆ ಸುಮಾರು 13-15 ಲಕ್ಷ ನಷ್ಟವಾಗುತ್ತದೆ. ಆದರೆ ಈ ನಷ್ಟದ ಬಗ್ಗೆ ನಮಗೆ ಚಿಂತೆ ಇಲ್ಲ. ಕೇಂದ್ರ ಸರಕಾರ ಪಾಕಿಸ್ತಾನಕ್ಕೆ ನೀರು ಹರಿಸುವುದಿಲ್ಲ ಎಂದು ನಿರ್ಧರಿಸಿರುವಾಗ ನಾವ್ಯಾಕೆ ವೀಳ್ಯದೆಲೆ ರಫ್ತು ಮಾಡುವುದನ್ನು ನಿಲ್ಲಿಸಬಾರದು ಎಂದು ಪಾನ್ ಬೆಳೆಗಾರರು ಹೇಳಿದ್ದಾರೆ.

    ಭಾರತದಿಂದ ಪಾಕಿಸ್ತಾನಕ್ಕೆ ಚಹಾ, ಟೊಮೆಟೊ ಹಾಗೂ ಹಲವು ತರಕಾರಿಗಳನ್ನು ರಫ್ತು ಮಾಡುವುದಿಲ್ಲ. ವ್ಯಾಪಾರಕ್ಕಿಂತ ದೇಶ ಮುಖ್ಯ ಎಂದು ಪುಲ್ವಾಮಾ ದಾಳಿ ನಡೆದ ಬಳಿಕ ಭಾರತೀಯ ರೈತರು, ವ್ಯಾಪಾರಿಗಳು ಹಾಗೂ ರಫ್ತುದಾರರು ಪಾಕ್ ಜೊತೆ ಇದ್ದ ವ್ಯವಹಾರವನ್ನು ಸ್ಥಗಿತಗೊಳಿಸಿ ಆಕ್ರೋಶ ಹೊರಹಾಕಿದ್ದರು. ಇದೇ ಬೆನ್ನಲ್ಲೇ ಸದ್ಯ ಪಾನ್(ವೀಳ್ಯದೆಲೆ) ವ್ಯಾಪಾರಿಗಳು ಕೂಡ ಪಾಕಿಸ್ತಾನದ ಜೊತೆ ವ್ಯವಹಾರ ನಡೆಸಲ್ಲ ಅಂತ ಪಟ್ಟು ಹಿಡಿದಿದ್ದಾರೆ. ನಮ್ಮ ಆಹಾರವನ್ನೇ ತಿಂದು, ನಮ್ಮ ಮೇಲೆಯೇ ದಾಳಿ ಮಾಡ್ತಾರೆ ಅಂತ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏಕಾಏಕಿ ಬನಶಂಕರಿ ದೇಗುಲದ ಬಳಿ ಇದ್ದ ಬೀದಿ ವ್ಯಾಪಾರಿಗಳ ಎತ್ತಂಗಡಿ!

    ಏಕಾಏಕಿ ಬನಶಂಕರಿ ದೇಗುಲದ ಬಳಿ ಇದ್ದ ಬೀದಿ ವ್ಯಾಪಾರಿಗಳ ಎತ್ತಂಗಡಿ!

    ಬೆಂಗಳೂರು: ಬನಶಂಕರಿ ದೇವಾಲಯ ನಗರದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿದ್ದು, ಆದರೆ ಈಗ ದೇಗುಲದ ಮುಂದೆ ಅನೇಕ ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ಬೀದಿ ಬದಿ ವ್ಯಾಪಾರಿಗಳನ್ನು ಏಕಾಏಕಿ ಪೊಲೀಸರು ಎತ್ತಂಗಡಿ ಮಾಡಿದ್ದಾರೆ.

    ಪೊಲೀಸರು ಏಕಾಏಕಿ ಎತ್ತಂಗಡಿ ಮಾಡಿದ್ದಕ್ಕೆ ರೊಚ್ಚಿಗೆದ್ದ ವ್ಯಾಪಾರಿಗಳು ಆಕ್ರೋಶ ಹೊರಹಾಕಿದ್ದಾರೆ. ಎತ್ತಂಗಡಿ ಮಾಡೋವಾಗ ವ್ಯಾಪಾರಿಗಳು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ದೇಗುಲದ ಅಧ್ಯಕ್ಷ ವೆಂಕಟೇಶ್ ಅವರೇ ಪೊಲೀಸರಿಗೆ ಹೇಳಿ ನಮ್ಮ ಹೊಟ್ಟೆ ಮೇಲೆ ಕಲ್ಲು ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬೀದಿಬದಿ ವ್ಯಾಪಾರಿಗಳು ಕಿಡಿಕಾರಿದ್ದಾರೆ.

    ಬೀದಿಬದಿ ವ್ಯಾಪಾರಸ್ಥರ ಆರೋಪವನ್ನ ತಳ್ಳಿ ಹಾಕಿದ ದೇಗುಲದ ಅಧ್ಯಕ್ಷ ವೆಂಕಟೇಶ್, ದೇವಸ್ಥಾನದ ಮುಂದೆ ಮೆಟ್ರೋ ಸ್ಟೇಷನ್ ಇದೆ. ಇದರಿಂದ ಮೆಟ್ರೋ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಅಲ್ಲದೇ ವ್ಯಾಪಾರಸ್ಥರಿಂದ ಸ್ಥಳೀಯ ರೌಡಿಯೊಬ್ಬ ಹಣ ವಸೂಲಿ ಮಾಡುತ್ತಿದ್ದಕ್ಕೆ ಪೊಲೀಸರು ಎತ್ತಂಗಡಿ ಮಾಡಿದ್ದು, ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬನಶಂಕರಿ ದೇವಸ್ಥಾನದ ಅಧ್ಯಕ್ಷ ವೆಂಕಟೇಶ್ ತಿಳಿಸಿದ್ದಾರೆ.

    ದೇಗುಲದ ಆವರಣದಿಂದ ಎತ್ತಂಗಡಿ ಮಾಡಿಸಿದ್ದಕ್ಕೆ, ಬೀದಿವ್ಯಾಪಾರಿಗಳು ದೇಗುಲ ಅಧ್ಯಕ್ಷರ ಕಾರಿಗೆ ಮುತ್ತಿಗೆ ಹಾಕಿದ್ದರು. ಸುಮಾರು 30 ವರ್ಷಗಳಿಂದ ದೇಗುಲದ ಮುಂದೆಯೇ ವ್ಯಾಪಾರ ಮಾಡುತ್ತಿದ್ದ ಅವರು ಮುಂದೆ ಎಲ್ಲಿ ವ್ಯಾಪಾರ ಮಾಡೋದು ಅಂತ ಆತಂಕಕ್ಕಿಡಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೋವಾ ಸರ್ಕಾರದಿಂದ ಕರ್ನಾಟಕ ಮೀನು ವ್ಯಾಪಾರಿಗಳಿಗೆ ಬಿಗ್ ರಿಲೀಫ್

    ಗೋವಾ ಸರ್ಕಾರದಿಂದ ಕರ್ನಾಟಕ ಮೀನು ವ್ಯಾಪಾರಿಗಳಿಗೆ ಬಿಗ್ ರಿಲೀಫ್

    ಪಣಜಿ: ಕರ್ನಾಟಕದ ಮೀನು ವ್ಯಾಪಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಆಹಾರ ಸುರಕ್ಷತಾ ನಿಯಮ ಪಾಲಿಸುವ ವ್ಯಾಪಾರಿಗಳಿಂದ ಮೀನು ಖರೀದಿಸಬಹುದು ಎಂದು ಹೇಳುವ ಮೂಲಕ ಗೋವಾ ಸರ್ಕಾರ ಹಿಂದಿನ ಆದೇಶವನ್ನು ಸಡಿಲಗೊಳಿಸಿದೆ.

    ಲೈಸನ್ಸ್ ಹೊಂದಿರುವ ಹಾಗೂ ಆಹಾರ ಸುರಕ್ಷತಾ ನಿಯಮ ಪಾಲಿಸುವ ಹೊರರಾಜ್ಯದ ವ್ಯಾಪಾರಿಗಳಿಂದ ಮೀನು ಖರೀದಿಸಬಹುದು ಎಂದು ಗೋವಾ ಸರ್ಕಾರ ತಿಳಿಸಿದೆ. ಈ ಮೂಲಕ ಹೊರರಾಜ್ಯಗಳಿಂದ ಮೀನು ತರಿಸಿಕೊಳ್ಳುವ ಅವಕಾಶ ಗೋವಾ ವ್ಯಾಪಾರಿಗಳಿಗೆ ಸಿಗಲಿದೆ.

    ತಾವು ಪೂರೈಸುವ ಮೀನು ಫಾರ್ಮಲಿನ್ ಅಂಶ ಹೊಂದಿಲ್ಲ ಎಂದು ಕರ್ನಾಟಕ ಮೀನು ರಫ್ತುಗಾರರು ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗೋವಾ ಸರ್ಕಾರವು, ಫಾರ್ಮಲಿನ್ ಪರೀಕ್ಷೆ ನಡೆಸಿ ಮೀನನ್ನು ತರಿಸಿಕೊಳ್ಳಲು ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ವರದಿಯಾಗಿದೆ.  ಇದನ್ನು ಓದಿ: 50ಕ್ಕೂ ಹೆಚ್ಚು ಮೀನಿನ ಲಾರಿಗೆ ಪೊಲೀಸರಿಂದ ತಡೆ

    ಏನಿದು ಪ್ರಕರಣ?:
    ಫಾರ್ಮಲಿನ್ ರಾಸಾಯಲಿಕ ಪತ್ತೆಯಾಗಿದ್ದರಿಂದ ಹೊರರಾಜ್ಯಗಳಿಂದ ಮೀನು ಆಮದನ್ನು ಗೋವಾ ಸರ್ಕಾರವು ಜುಲೈ ತಿಂಗಳಿನಿಂದ ನಿರ್ಬಂಧಿಸಿತ್ತು. ಅಷ್ಟೇ ಅಲ್ಲದೇ ಮಂಗಳವಾರ ಅಧಿಕೃತ ಆದೇಶವನ್ನು ಹೊರಡಿಸಿತ್ತು. ನಿರ್ಬಂಧದಿಂದಾಗಿ ಕರ್ನಾಟಕದ ಮೀನುಗಾರರಿಗೆ ಹಾಗೂ ವ್ಯಾಪಾರಿಗಳಿಗೆ ಬಿಸಿ ಮುಟ್ಟಿತ್ತು. ಇದರಿಂದಾಗಿ ಕರ್ನಾಟಕದ ಮೀನುಗಾರರನ್ನು ಗುರಿಯಾಗಿಸಿಕೊಂಡು ಮೀನು ಲಾರಿಗಳನ್ನು ಗೋವಾ-ಕಾರವಾರದ ಗಡಿಭಾಗದಲ್ಲಿ ತಡೆದು ನಿಲ್ಲಿಸಲಾಗಿತ್ತು. ಗೋವಾಕ್ಕೆ ಆಮದು ಆಗುತ್ತಿದ್ದ ಮೀನಿನ ಮೇಲೆ ಸಂಪೂರ್ಣ ನಿರ್ಬಂಧ ಹೊರಡಿಸಿದ್ದರಿಂದ ರಾಜ್ಯದ ಮೀನು ಬೆಳೆಗಾರರು ಭಾರೀ ನಷ್ಟ ಎದುರಿಸಿದ್ದರು. ಇದನ್ನು ಓದಿ: ಮೀನು ತಿನ್ನೋರಿಗೆ ಗುಡ್ ನ್ಯೂಸ್ – ಲ್ಯಾಬ್ ಟೆಸ್ಟ್ ನಲ್ಲಿ ಪಾಸಾದ ಸಾಗರ ರಾಣಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews