Tag: ವ್ಹೀಲ್ ಚೇರ್

  • ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!

    ಸಿಎಂ ತವರೂರಿನ ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್ ಚೇರ್ ಅವ್ಯವಸ್ಥೆ – ಶಾಸಕ ಹರೀಶ್‌ಗೌಡ ತೀವ್ರ ತರಾಟೆ!

    – ಎಂಎಲ್‌ಎ ಪ್ರಶ್ನಿಸಿದ್ದಕ್ಕೆ ರಾಜೀನಾಮೆ ಕೊಡ್ತೀನಿ ಎಂದ ಆಸ್ಪತ್ರೆ ಸೂಪರಿಂಟೆಂಡೆಂಟ್
    – ಆಸ್ಪತ್ರೆ ಅದ್ವಾನ ನೋಡಿಯೂ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವ‌ರು ಜಿಲ್ಲೆಯ ದೊಡ್ಡಾತ್ರೆಯಲ್ಲೇ ವ್ಹೀಲ್‌ ಚೇರ್‌ ಅವ್ಯವಸ್ಥೆ ಕಂಡುಬಂದಿದೆ. 4 ಜಿಲ್ಲೆಗಳ ಕೇಂದ್ರಬಿಂದು ಆಗಿರುವ ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲೇ ವ್ಹೀಲ್‌ ಚೇರ್‌ ಇಲ್ಲದೇ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿದೆ. ವ್ಹೀಲ್‌ ಚೇರ್‌ ಇಲ್ಲದೇ ಪ್ಲಾಸ್ಟಿಕ್ ಚೇರ್‌ನಲ್ಲಿ ಚಿಕಿತ್ಸೆಗಾಗಿ ವೃದ್ಧೆಯೊಬ್ಬರನ್ನ ಕರೆದೊಯ್ದಿರುವ ದೃಶ್ಯ ಮನ ಕಲುಕುವಂತೆ ಮಾಡಿದೆ.

    ಹೌದು. ನಾಲ್ಕು ಜಿಲ್ಲೆಗಳಿಗೆ ಆಧಾರವಾಗಿರುವ ಪ್ರತಿಷ್ಠಿತ ಕೆ.ಆರ್ ಆಸ್ಪತ್ರೆಯಲ್ಲಿ ರೋಗಿಯನ್ನ ಚೇರ್‌ನಲ್ಲಿ ಕೂರಿಸಿಕೊಂಡು ಕರೆದೊಯ್ದಿರುವ ದೃಶ್ಯ ʻಪಬ್ಲಿಕ್‌ ಟಿವಿʼ ಕ್ಯಾಮೆರಾದಲ್ಲಿ ಸೆರೆಯಾಗಿದೆ. ʻಪಬ್ಲಿಕ್‌ ಟಿವಿʼ ಈ ಅವ್ಯವಸ್ಥೆಯನ್ನು ಬಯಲಿಗೆಳೆಯುತ್ತಿದ್ದಂತೆ ಸ್ಥಳೀಯ ಶಾಸಕ ಹರೀಶ್‌ ಗೌಡ, ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ವ್ಹೀಲ್‌ ಚೇರ್‌ ಇಟ್ಟಿದ್ದ ಕೊಠಡಿಯ ಬೀಗ ಒಡೆಸಿದ್ದಾರೆ. ದುಸ್ಥಿತಿಯಲ್ಲಿದ್ದ ವ್ಹೀಲ್‌ ಚೇರ್‌ಗಳನ್ನು ಕಂಡ ಶಾಸಕರು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಶೋಭಾರನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ನಾನೇ ರಾಜೀನಾಮೆ ಕೊಡ್ತಿನಿ ಅಂತ ಸೂಪರಿಂಟೆಂಡೆಂಟ್ ಅಲ್ಲಿಂದ ತೆರಳಿದ್ದಾರೆ.

    ನಿರ್ಲಕ್ಷ್ಯ ಮಾಡಿದವರ ಮೇಲೆ 100ಕ್ಕೆ 100 ಕ್ರಮ:
    ಬಳಿಕ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ಶಾಸಕ ಹರೀಶ್‌ ಗೌಡ, ಪ್ರಕರಣದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿಗಳು, ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯ ಎದ್ದು ಕಾಣ್ತಿದೆ. ಈ ನಿರ್ಲಕ್ಷ್ಯ ಮಾಡಿದವರ ಮೇಲೆ 100ಕ್ಕೆ 100 ಕ್ರಮ ಜರುಗಿಸುತ್ತೇನೆ. ಕ್ರಮಕ್ಕೆ ಆಗ್ರಹಿಸಿ ಸಚಿವರಿಗೂ ಪತ್ರ ಬರೆಯುತ್ತೇನೆ ಎಂದು ಜೋರು ದನಿಯಲ್ಲಿ ಮಾತನಾಡಿದರು.

    ಎಲ್ಲರ ಅಮಾನತ್ತಿಗೆ ಸರ್ಕಾರಕ್ಕೆ ಪತ್ರ ಬರಿತೀನಿ:
    ಕೆ.ಆರ್ ಆಸ್ಪತ್ರೆಯ ಆಡಳಿತಾಧಿಕಾರಿ ದ್ರಾಕ್ಷಾಯಿಣಿ ಪ್ರತಿಕ್ರಿಯಿಸಿ, ಘಟನೆಗೆ ಸಂಬಂಧಪಟ್ಟ ಎಲ್ಲರ ಅಮಾನತ್ತಿಗೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಇವತ್ತೇ ಎಲ್ಲರಿಗೂ ನೋಟಿಸ್ ಕೊಡ್ತೀನಿ. ಸಂಜೆಯೊಳಗೆ ಕೆಟ್ಟು ಹೋಗಿರುವ ಲಿಫ್ಟ್ ರಿಪೇರಿ ಮಾಡಿಸುತ್ತೇನೆ, ಮೂರು ದಿನಗಳಲ್ಲಿ ಮುರಿದಿರುವ ಎಲ್ಲಾ ವ್ಹೀಲ್‌ ಚೇರ್‌ಗಳನ್ನ ದುರಸ್ತಿ ಮಾಡಿಸುತ್ತೇನೆ ಎಂದು ಹೇಳಿದ್ದಾರೆ.

    ಆರ್‌ಟಿಐ ಕಾರ್ಯಕರ್ತರ ಬೆದರಿಕೆ ಇದೆ:
    ಕೆ.ಆರ್ ಆಸ್ಪತ್ರೆ ಮೇಲ್ವಿಚಾರಕಿ ಶೋಭಾ ಈ ವಿಚಾರ ಕುರಿತು ಮಾತನಾಡಿ, ನನಗೆ ಆರ್‌ಟಿಐ ಕಾರ್ಯಕರ್ತರ ಬೆದರಿಕೆ ಇದೆ. 10 ತಿಂಗಳಿಂದ ಕೆಲಸ ಮಾಡುತ್ತಿದ್ದೇನೆ. ಸೆಕ್ಯೂರಿಟಿ ಸೇರಿ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುವುದಿಲ್ಲ. ಇದರ ಬಗ್ಗೆ ಪತ್ರ ಬರೆದರೆ 20ಕ್ಕೂ RTI ಕಾರ್ಯಕರ್ತರು ಬಂದು ಪ್ರಶ್ನೆ ಮಾಡ್ತಾರೆ. ಇಲ್ಲಿ ವ್ಯವಸ್ಥೆ ಮೊದಲಿನಿಂದ ಹಾಳಾಗಿದೆ. ಡೀನ್ ಸೇರಿದಂತೆ ಎಲ್ಲರಿಗೂ ಮಾಹಿತಿ ಕೊಟ್ಟಿದ್ದೇನೆ. ಎಲ್ಲರಿಗೂ ಇದರ ಬಗ್ಗೆ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

    ಅದ್ವಾನ ನೋಡಿಯೂ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್:
    ದೊಡ್ಡಾಸ್ಪತ್ರೆಯಲ್ಲಿ ವ್ಹೀಲ್‌ ಚೇರ್‌ ಇಲ್ಲದೇ ರೋಗಿಗಳ ಪರದಾಟವನ್ನು ಕಂಡ ಶಾಸಕ ಹರೀಶ್‌ಗೌಡ ಕೆಳ ಹಂತದ ಸಿಬ್ಬಂದಿ ವಿರುದ್ಧ ರೇಗಾಡಿದರು. ಆದ್ರೆ ಆಡಳಿತಧಿಕಾರಿಗಳಿಗೆ ಕ್ಲೀನ್ ಚಿಟ್ ಕೊಟ್ಟಿದ್ದಾರೆ. ಇಲ್ಲಿ ಡೀನ್ ಮತ್ತು ಸೂಪರಿಂಟೆಂಡೆಂಟ್ ಎಲ್ಲರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಸಿಬ್ಬಂದಿ ಅಧಿಕಾರಿಗಳ ಮಾತು ಕೇಳುತ್ತಿಲ್ಲ ಎಂದು ಅಲ್ಲಿಂದ ಹೊರಟ್ಟಿದ್ದಾರೆ.

  • ರಾಷ್ಟ್ರಪತಿ ಚುನಾವಣೆ – ಮೊದಲ ಬಾರಿ ಸಾರ್ವಜನಿಕವಾಗಿ ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ಹೆಚ್‌ಡಿಡಿ

    ರಾಷ್ಟ್ರಪತಿ ಚುನಾವಣೆ – ಮೊದಲ ಬಾರಿ ಸಾರ್ವಜನಿಕವಾಗಿ ವ್ಹೀಲ್ ಚೇರ್‌ನಲ್ಲಿ ಕಾಣಿಸಿಕೊಂಡ ಹೆಚ್‌ಡಿಡಿ

    ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಚುನಾವಣೆ ಸೋಮವಾರ ಭರದಿಂದ ಸಾಗಿದ್ದು, ದೇಶಾದ್ಯಂತ ಗಣ್ಯರು ಮತ ಚಲಾಯಿಸಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದು, ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ವ್ಹೀಲ್‌ಚೇರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

    ಸಂಸತ್ತಿನ ಆವರಣದಲ್ಲಿ ಚುನಾವಣೆಗೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ದೇವೇಗೌಡರು ಕಾಲು ನೋವಿನ ಹಿನ್ನೆಲೆ ವ್ಹೀಲ್ ಚೇರ್‌ನಲ್ಲಿ ಮತ ಚಲಾಯಿಸಲು ಆಗಮಿಸಿದ್ದರು. ಮತದಾನ ಮಾಡಿದ ಬಳಿಕ ದೇವೇಗೌಡರು ವಾಪಸ್ಸಾಗಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ವ್ಹೀಲ್ ಚೇರ್‌ನಲ್ಲಿ ಬಂದು ಮತ ಹಾಕಿದ ಮನಮೋಹನ್ ಸಿಂಗ್

    ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಪಕ್ಷದ ರಾಜಕಾರಣವನ್ನು ಮೀರಿ ಬೆಂಬಲ ನೀಡುವುದಾಗಿ ಜೆಡಿಎಸ್ ಸರ್ವಾನುಮತದ ನಿರ್ಣಯ ಕೈಗೊಂಡಿತ್ತು. ಇದನ್ನೂ ಓದಿ: ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ

    ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ಹೆಚ್.ಡಿ ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ದ್ರೌಪದಿ ಮುರ್ಮು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭ ಖುದ್ದಾಗಿ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮತ ಕೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ವ್ಹೀಲ್ ಚೇರ್‌ನಲ್ಲಿ ಕೆಆರ್‌ಎಸ್‌ಗೆ ಭೇಟಿ ನೀಡಿದ್ದ ಶ್ರೀಗಳು

    ವ್ಹೀಲ್ ಚೇರ್‌ನಲ್ಲಿ ಕೆಆರ್‌ಎಸ್‌ಗೆ ಭೇಟಿ ನೀಡಿದ್ದ ಶ್ರೀಗಳು

    ಮಂಡ್ಯ: ಹಲವು ವರ್ಷಗಳ ಬಳಿಕ ದಾಖಲೆ ಪ್ರಮಾಣದಲ್ಲಿ ಕೆಲವೇ ದಿನಗಳಲ್ಲಿ ಕೆಆರ್‌ಎಸ್‌ ಜಲಾಶಯ ಭರ್ತಿಯಾಗಿತ್ತು. ಈ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಶ್ರೀಗಳು ವ್ಹೀಲ್ ಚೇರ್‌ನಲ್ಲಿ ಕೆಆರ್‌ಎಸ್‌ಗೆ ಬಂದು ಕಾವೇರಿ ತಾಯಿಗೆ ನಮಿಸಿದ್ದರು.

    ಆಗಸ್ಟ್ ತಿಂಗಳಿನಲ್ಲಿ ಅಚ್ಚರಿಯ ರೀತಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂ ಭರ್ತಿಯಾಗುವುದರ ಮೂಲಕ ಮಂಡ್ಯ, ಮೈಸೂರು ಬೆಂಗಳೂರು ಭಾಗದ ಲಕ್ಷಾಂತರ ಜನರ ಮುಖದಲ್ಲಿ ಮಂದಹಾಸ ಮೂಡಿಸಿತ್ತು. ಈ ನಿಟ್ಟಿನಲ್ಲಿ ಉಡುಪಿಯ ಪೇಜಾವರ ಶ್ರೀಗಳು ತಮ್ಮ ಆರೋಗ್ಯದ ಸ್ಥಿತಿ ಚೆನ್ನಾಗಿ ಇಲ್ಲದಿದ್ದರೂ ಸಹ ಆಗಸ್ಟ್ 11 ರಂದು ಕೆಆರ್‌ಎಸ್‌ನ ವೀಕ್ಷಣೆ ಮಾಡಿದ್ದರು.

    ತಮ್ಮ ಹಿತೈಷಿಗಳ ಜೊತೆ ಕೆಆರ್‌ಎಸ್‌ ಭೇಟಿ ನೀಡಿದ್ದ ಶ್ರೀಗಳು, ಕೆಆರ್‌ಎಸ್‌ ಡ್ಯಾಂನ ಮೇಲೆ ವ್ಹೀಲ್ ಚೇರ್‌ನಿಂದಲೇ ಒಂದು ರೌಂಡ್ ಹಾಕಿದ್ದರು. ನಂತರ ವರುಣ ಶಾಂತನಾಗಿ ಜನ ಜೀವನ ಸುಗುಮವಾಗುವಂತೆ ಮತ್ತು ಕಾವೇರಿ ತಾಯಿ ಸದಾ ಉಕ್ಕಿ ಹರಿಯುತ್ತಿರಲಿ ಎಂದು ಕಾವೇರಿ ತಾಯಿಯನ್ನು ಪ್ರಾರ್ಥನೆ ಮಾಡಿದ್ದರು.

    ಈ ಬಾರಿ ಕೆಆರ್‌ಎಸ್‌ ಜಲಾಶಯ ಭರ್ತಿ ಆಗುವುದು ಸಂದೇಹ ಎಂಬ ಸ್ಥಿತಿ ನಿರ್ಮಾಣವಾಗಿದ್ದ ವೇಳೆ, ವರುಣನ ಕೃಪೆಯಿಂದ ಕೆಆರ್‌ಎಸ್‌ ಜಲಾಶಯ ಕೆಲವೇ ದಿನಗಳಲ್ಲಿ ಭರ್ತಿಯಾಗಿತ್ತು. ಇದಲ್ಲದೇ ಆ ವೇಳೆ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಟ್ಟಿದ್ದರಿಂದ, ಜಲಾನಯನ ಪ್ರದೇಶದಲ್ಲಿ ಪ್ರವಾಹ ಉಂಟಾಗಿತ್ತು.

  • ರಾಷ್ಟ್ರಗೀತೆ ವೇಳೆ ವ್ಹೀಲ್ ಚೇರ್ ಬಿಟ್ಟು ಎದ್ದುನಿಂತ 10ರ ಬಾಲಕ!- ವಿಡಿಯೋ ನೋಡಿ

    ರಾಷ್ಟ್ರಗೀತೆ ವೇಳೆ ವ್ಹೀಲ್ ಚೇರ್ ಬಿಟ್ಟು ಎದ್ದುನಿಂತ 10ರ ಬಾಲಕ!- ವಿಡಿಯೋ ನೋಡಿ

    ನ್ಯೂಯಾರ್ಕ್: ಜಾತ್ರೆಯ ವೇಳೆ ರಾಷ್ಟ್ರಗೀತೆ ಮೊಳಗಿದ ಸಂದರ್ಭದಲ್ಲಿ 10 ವರ್ಷದ ಬಾಲಕನೊಬ್ಬ ವ್ಹೀಲ್ ಚೇರ್ ಬಿಟ್ಟು ಎದ್ದು ನಿಂತು ಗೌರವ ಕೊಟ್ಟ ಮನಕಲಕುವ ಘಟನೆಯೊಂದು ಅಮೆರಿಕಾದಲ್ಲಿ ನಡೆದಿದೆ.

    ಈ ಘಟನೆ ಅಮೆರಿಕಾದ ಪುಟ್ನಮ್ ಕೌಂಟಿಯ ಟೆನ್ನೀಸ್ಸೀ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಆವೆರಿ ಪ್ರೈಸ್, ಯಾವುದೇ ಆಧಾರಗಳಿಲ್ಲದೆ ರಾಷ್ಟ್ರಗೀತೆ ವೇಳೆ ಎದ್ದು ನಿಂತ ಬಾಲಕ. ಈ ದೃಶ್ಯವನ್ನು ಅಲ್ಲೆ ಇದ್ದ ವ್ಯಕ್ತಿಯೊಬ್ಬರು ಸೆರೆಹಿಡಿದಿದ್ದಾರೆ.

    ಪ್ರೈಸ್ ಅನುವಂಶೀಯ ಕಾಯಿಲೆ spastic paraplegia (HSP) syndrome ದಿಂದ ಬಳಲುತ್ತಿದ್ದಾನೆ. ಹೀಗಾಗಿ ಈತನಿಗೆ ನಿಲ್ಲಲು ಅಸಾಧ್ಯವಾಗಿತ್ತು. ವ್ಹೀಲ್ ಚೇರ್ ಮೂಲಕವೇ ಸಂಚರಿಸುತ್ತಿದ್ದನು. ಭಾನುವಾರ ಸಂಜೆ ಜಾತ್ರೆಯ ವೇಳೆ ರಾಷ್ಟ್ರಗೀತೆಯೊಂದು ಮೊಳಗಿದೆ. ಪರಿಣಾಮ ಅದಕ್ಕೆ ಗೌರವ ಸಲ್ಲಿಸಲೆಂದು ವ್ಹೀಲ್ ಚೇರ್ ಬಿಟ್ಟು ಯಾವುದೇ ಆಧಾರಗಳಿಲ್ಲದೆ ಎದ್ದು ನಿಂತಿದ್ದಾನೆ.

    ಆವೆರಿಗೆ ಇರುವ ಕಾಯಿಲೆಯಿಂದಾಗಿ ಆತನಿಗೆ ನಿಂತುಕೊಳ್ಳಲು ಕಷ್ಟ ಸಾಧ್ಯವಾಗುತ್ತಿತ್ತು. ಆದ್ರೂ ಆತ ಧೈರ್ಯ ಮಾಡಿ ದೇಶ ಪ್ರೇಮವನ್ನು ಮೆರೆದಿದ್ದಾನೆ. `ಯಾವತ್ತೂ ನಾನು ಕುಳಿತುಕೊಂಡೇ, ಎದೆಗೆ ಕೈ ಹಿಡಿದುಕೊಂಡು ಗೌರವ ಸೂಚಿಸುತ್ತಿದ್ದೆನು. ಆದ್ರೆ ಈ ಬಾರಿ ಹಾಗೆ ಮಾಡಬಾರದೆಂದು ದಿಟ್ಟ ನಿರ್ಧಾರ ಕೈಗೊಂಡಿದ್ದೇನು. ಯಾಕೆಂದರೆ ನನ್ನ ದೇಶಕ್ಕಾಗಿ ನಾನು ಎದ್ದು ನಿಲ್ಲಲೇಬೇಕು. ಹೀಗಾಗಿ ಇಂದು ಎದ್ದು ನಿಂತು ಗೌರವ ಸೂಚಿಸಿದ್ದೇನೆ ಅಂತ ಆವೆರಿ ತಿಳಿಸಿದ್ದಾನೆ. ಮಗನ ಈ ನಿರ್ಧಾರದಿಂದ ಆತನ ಪೋಷಕರು ಕೂಡ ಅಚ್ಚರಿ ಹಾಗೂ ಸಂತಸ ವ್ಯಕ್ತಪಡಿಸಿದ್ದಾರೆ.

    ನನ್ನ ಮಗ ಮಾಡಿದ ಕಾರ್ಯ ನನಗೆ ನಿಜಕ್ಕೂ ಹೆಮ್ಮೆ ಅನಿಸುತ್ತಿದೆ. ಅವನೇನು ಅಂದುಕೊಂಡಿರುತ್ತಾನೆಯೋ ಅದನ್ನು ಆತ ಮಾಡಿಯೇ ಮಾಡುತ್ತಾನೆ. ಇದು ನನಗೆ ತುಂಬಾ ಅಚ್ಚರಿಯೂ ತಂದಿದೆ. ಒಟ್ಟಿನಲ್ಲಿ ನನ್ನ ಮಗ ತುಂಬಾನೇ ದೇಶಪ್ರೇಮಿ. ಅವನು ಅದೇ ರೀತಿ ಇರಲು ನಾನು ಬಯಸುತ್ತೇನೆ ಅಂತ ಆವೆರಿ ತಂದೆ ತಿಳಿಸಿದ್ದಾರೆ.

    ಜಾತ್ರೆಯಲ್ಲಿ ಕಲಾವಿದ ಜೆನ್ನಿ ಲೇಘ್ ಎಂಬವರು ರಾಷ್ಟ್ರಗೀತೆಯನ್ನು ಹಾಡಿದ್ದು, ಈ ವೇಳೆ ಆವೆರಿ ದೇಶಪ್ರೇಮವನ್ನು ಕಂಡು ಹೌಹಾರಿದ್ದಾರೆ. ನಾಶ್ವಿಲ್ಲೆ ಮೆಡಿಕಲ್ ಸೆಂಟರ್ ನಲ್ಲಿ ಇತ್ತೀಚೆಗೆ ಆವೆರಿಗೆ ಸರ್ಜರಿಯೊಂದು ನಡೆದಿತ್ತು. ಆ ಬಳಿಕದಿಂದ ಆತ ನಡೆಯಲು ಪ್ರಯತ್ನ ಪಡುತ್ತಿದ್ದಾನೆ.

    https://www.facebook.com/leah.norris.792/videos/vb.100003324466640/1779887098798755/?type=2&video_source=user_video_tab