Tag: ಶಂಕರ್

  • ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್

    ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳಿರುವುದೆಲ್ಲಾ ಸುಳ್ಳು: ಶಂಕರ್

    – ವಿಚಾರಣೆಯ ಬಳಿಕ ಎಲ್ಲವನ್ನೂ ಬಿಚ್ಚಿಡ್ತೇನೆ

    ಬೆಂಗಳೂರು: ಮಹಾನಗರಿ ಬೆಂಗಳೂರಿನಲ್ಲಿ ನಡೆದ ಒಂದೇ ಕುಟುಂಬದ ಐವರು ಸಾವು ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಮೃತ ಮಧು ಸಾಗರ್ ಡೆತ್ ನೋಟ್ ಸಿಗುತ್ತಿದ್ದಂತೆ ಪೊಲೀಸರ ವಿಚಾರಣೆಯಲ್ಲಿರುವ ಶಂಕರ್ ನನ್ನ ಮಗನ ಆರೋಪಗಳೆಲ್ಲವೂ ಸುಳ್ಳು ಎಂದು ಹೇಳಿದ್ದಾರೆ.

    ವಿಚಾರಣೆಗೆ ಹಾಜರಾದ ಶಂಕರ್, ನನ್ನ ಮಗ ಡೆತ್ ನೋಟ್‍ನಲ್ಲಿ ಹೇಳೊರೋದೆಲ್ಲಾ ಸುಳ್ಳು ಆಗಿದೆ. ನಾನು ಪ್ರಾಮಾಣಿಕವಾಗಿ ಕಷ್ಟಪಟ್ಟು ದುಡಿದಿದ್ದೇನೆ. 36 ವರ್ಷದ ಸಾಹಿತ್ಯ, 28 ವರ್ಷದ ಪತ್ರಿಕೋದ್ಯಮ, ನಿಮ್ಮ ವಯಸ್ಸಿನಷ್ಟು ನಂಗೆ ಅನುಭವ ಇದೆ. ಮೂವತ್ತು ವರ್ಷಗಳ ಹಿಂದೆಯೇ ನಾನು ಎರಡು ಬಾರ್‍ಗಳ ಓನರ್ ಆಗಿದ್ದವನು. ಇನ್ನು ತುಂಬಾ ಸತ್ಯಗಳಿವೆ, ವಿಚಾರಣೆ ಮುಗಿಸಿಕೊಂಡು ಬಂದು ಎಲ್ಲವನ್ನೂ ಬಿಚ್ಚಿಡುತ್ತೇನೆ. ಶಂಕರ್ ಆಕ್ರೋಶದ ನುಡಿಗಳನ್ನಾಡಿದ್ದಾರೆ. ಇದನ್ನೂ ಓದಿ:  40 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್‍ನ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಪತ್ನಿ

    ಪ್ರಕರಣದ ಹಿನ್ನೆಲೆ ಏನು?:
    ತಿಗಳರಪಾಳ್ಯದ ಐವರ ಆತ್ಮಹತ್ಯೆ ರಹಸ್ಯ ಬಗೆದಷ್ಟು ಬಯಲಾಗ್ತಿದೆ. ಡೆತ್ ನೋಟ್ ಬರೆದಿಟ್ಟು ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ. ಸಿಂಚನಾ, ಸಿಂಧುರಾಣಿ, ಮಧುಸಾಗರ್ ಹೀಗೆ ಪ್ರತಿಯೊಬ್ಬರೂ ಡೆತ್‍ನೋಟ್ ಬರೆದಿದ್ದಾರೆ. ಈ ಮೂಲಕ ಶಂಕರ್ ಹಾಗೂ ಅಳಿಯಂದಿರ ಪಾಲಿಗೆ ಇದು ಕಂಟಕವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಅಲ್ಲದೆ ಮೂವರ ಡೆತ್‍ನೋಟ್‍ನ ಮುಖಪುಟದಲ್ಲಿ ಒಂದೇ ರೀತಿಯ ಫೋಟೋ ಹಾಕಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ:  ತಂದೆ ಶಂಕರ್ ಅನೈತಿಕ ಸಂಬಂಧವೇ ಕುಟುಂಬಕ್ಕೆ ಕುತ್ತಾಯ್ತಾ..? – ಅಪ್ಪನ ಬಗ್ಗೆ ಮೃತ ಮಕ್ಕಳ ಡೆತ್‍ನೋಟ್

    ಡೆತ್‍ನೋಟ್‍ನಲ್ಲಿ ಏನಿದೆ?: ನಮ್ಮ ಸಾವಿಗೆ ತಂದೆ ಶಂಕರ್ ಅವರೇ ಕಾರಣ. ನಮ್ಮಪ್ಪ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ಪದೇ ಪದೇ ಹಣಕ್ಕಾಗಿ ನಮ್ಮ ಮೇಲೆ ಒತ್ತಡ ಹೇರುತ್ತಿದ್ದರು. ತಾಯಿ ಭಾರತಿಯನ್ನ ಸಂತೋಷವಾಗಿ ಬದುಕಲು ಬಿಟ್ಟಿರಲಿಲ್ಲ. ಹೀಗಾಗಿ ಗಂಡನ ಮನೆಯಲ್ಲಿಯೂ ಕಿರುಕುಳ, ತಂದೆ ಮನೆಯಲ್ಲೂ ಕಿರುಕುಳ ಅನುಭವಿಸುತ್ತಿದ್ದೇವೆ. ಮನೆ ಸಮಸ್ಯೆಗಳ ಬಗೆಹರಿಸುವ ಗೋಜಿಗೆ ತಂದೆ ಹೋಗ್ತಿರಲಿಲ್ಲ. ಗಂಡನ ಮನೆಯಲ್ಲಿ ಅತ್ತೆ, ಮಾವಂದಿರು ಬದುಕಲು ಬಿಡಲಿಲ್ಲ. ಇತ್ತ ನಮ್ಮ ಮನೆಯಲ್ಲಿ ತಂದೆಯೇ ಸಂತೋಷವಾಗಿ ಬದುಕೋದಕ್ಕೆ ಬಿಡಲಿಲ್ಲ ಎಂದೆಲ್ಲ ಡೆತ್ ನೋಟ್ ನಲ್ಲಿ ಮಕ್ಕಳು ತಮ್ಮ ತಂದೆಯ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ಇತ್ತ ಪ್ರಕರಣ ಸಂಬಂಧ ತನಿಖೆಗೆ ತೆರಳಿರುವ ಪೊಲೀಸರಿಗೆ ಶಂಕರ್ ಮನೆಯಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಪತ್ತೆಯಾಗಿದೆ. 15 ಲಕ್ಷ ರೂ. ನಗದು, ಚೆಲ್ಲಾಪಿಲ್ಲಿ ಆಗಿರುವ ಹರಿದ ನೋಟುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಣ ಹಾಗೂ ಚಿನ್ನಾಭರಣದ ಬಗ್ಗೆ ಐಟಿಗೆ ತಿಳಿಸಲು ಚಿಂತನೆ ನಡೆಸಿದ್ದಾರೆ. ಶಂಕರ್ ಮನೆಯಲ್ಲಿ ರಾಶಿರಾಶಿ ಆರ್ ಟಿಐ ಚೀಟಿ ಕೂಡ ಪತ್ತೆಯಾಗಿವೆ. ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸಲಿದ್ದಾರೆ.

  • ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್, ಕುಡುಕ – ಡೆತ್‍ನೋಟ್‍ನಲ್ಲಿ ಮಧುಸಾಗರ್ ಗಂಭೀರ ಆರೋಪ

    ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್, ಕುಡುಕ – ಡೆತ್‍ನೋಟ್‍ನಲ್ಲಿ ಮಧುಸಾಗರ್ ಗಂಭೀರ ಆರೋಪ

    – ನಮ್ಮಪ್ಪನಿಗೆ ಐವರು ಮಹಿಳೆಯರ ಜೊತೆಯಿದೆ ಸಂಬಂಧ
    – ಅಮ್ಮನ ಬಾಯಲ್ಲಿ ಚಪ್ಪಲಿಯಿಟ್ಟು ಅವಮಾನಿಸ್ತಿದ್ದ
    – ಸಹೋದರಿಯರ ಜೀವನ ಹಾಳಾಗಲು ಅಪ್ಪನೇ ಕಾರಣ
    – 3 ಕೋಟಿಯ ಮನೆ ಸೋರುತ್ತಿದೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಐವರ ಸಾವು ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಇದೀಗ ಆತ್ಮಹತ್ಯೆಗೂ ಮುನ್ನ ಮಕ್ಕಳು ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಡೆತ್ ನೋಟ್ ನಲ್ಲಿ ಮಕ್ಕಳು ಅಪ್ಪ ಶಂಕರ್ ವಿರುದ್ಧ ಗಂಭೀರ ಆರೋಪಗಳ ಸುರಿಮಳೆಗೈದಿದ್ದಾರೆ.

    ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್ ಹಾಗೂ ಕುಡುಕ ಎಂದು ಮೃತ ಪುತ್ರ ಮಧುಸಾಗರ್ ಆರೋಪಿಸಿದ್ದಾರೆ. ನಮ್ಮಪ್ಪನಿಗೆ ಐವರು ಮಹಿಳೆಯರೊಂದಿಗೆ ಸಂಬಂಧ ಇತ್ತು. ಅಲ್ಲದೆ ಅಕ್ರಮ ಸಂಬಂಧ ಹೊಂದಿರುವ ಮಹಿಳೆಯ ಮಗಳನ್ನು ಮದುವೆಯಾಗುವಂತೆ ನನ್ನನ್ನು ಪೀಡಿಸುತ್ತಿದ್ದನು. ಕುಡಿದು ಬಂದು ಅಮ್ಮನಿಗೆ ಹೊಡೆಯುತ್ತಿದ್ದನು ಎಂದೆಲ್ಲಾ ಡೆತ್ ನೋಟ್ ನಲ್ಲಿ ಬರೆದಿದ್ದಾನೆ.  ಇದನ್ನೂ ಓದಿ: ತಂದೆ ಶಂಕರ್ ಅನೈತಿಕ ಸಂಬಂಧವೇ ಕುಟುಂಬಕ್ಕೆ ಕುತ್ತಾಯ್ತಾ..? – ಅಪ್ಪನ ಬಗ್ಗೆ ಮೃತ ಮಕ್ಕಳ ಡೆತ್‍ನೋಟ್

    ಡೆತ್ ನೋಟ್ ನಲ್ಲೇನಿದೆ..?
    ನನ್ನ ತಂದೆ ಸ್ಯಾಡಿಸ್ಟ್, ಕಾಮುಕ. ತಂದೆ ಶಂಕರ್‍ಗೆ ಐವರು ವಿವಾಹಿತ ಮಹಿಳೆಯ ಜೊತೆ ಸಂಬಂಧವಿದೆ. ನಮ್ಮ ಏರಿಯಾದಲ್ಲೇ ಇರುವ ಓರ್ವ ಮಹಿಳೆ ಜೊತೆ ಸಂಪರ್ಕ ಇದೆ. ತಾನು ಸಂಬಂಧ ಹೊಂದಿದ್ದ ಮಹಿಳೆಯ ಮಗಳನ್ನೇ ಮದುವೆ ಆಗುವಂತೆ ಒತ್ತಾಯ ಮಾಡಿದ್ದಾನೆ. ತನ್ನ ಕಚೇರಿಯಲ್ಲಿ ಓರ್ವ ಮಹಿಳೆ ಜೊತೆ ಲೈಂಗಿಕ ಸಂಪರ್ಕ ಹೊಂದಿದ್ದಾರೆ. ಹೀಗೆ ಹಲವು ಮಹಿಳೆಯರಿಗೆ ಬ್ಲಾಕ್‍ಮೇಲ್ ಮಾಡಿ ಲೈಂಗಿಕ ಸಂಪರ್ಕ ಹೊಂದಿದ್ದಾರೆ. ಹಲವು ಮಹಿಳೆಯರನ್ನು ಟ್ರ್ಯಾಪ್ ಮಾಡಿ ಸಂಬಂಧ ಹೊಂದಿದ್ದರು. ಅಪ್ಪನ ಅನೈತಿಕ ಸಂಬಂಧಕ್ಕೆ ಬೇಸತ್ತು ಅಪ್ಪನಿಂದ ನಾನು, ಅಮ್ಮ ದೂರ ಉಳಿದಿದ್ದೆವು. ನಮ್ಮ ಅಮ್ಮ, ಅಕ್ಕಂದಿರಿಗೆ ಕಿರುಕುಳ ನೀಡುತ್ತಿದ್ದರು. ಈ ಮೂಲಕ ಅಕ್ಕಂದಿರ ಜೀವನವನ್ನೂ ಹಾಳು ಮಾಡಿದ್ದಾರೆ.

    ನನ್ನ ತಂದೆ ಕಾಮುಕ, ಅಪ್ಪನ ಎಲ್ಲಾ ಕೃತ್ಯದ ಬಗ್ಗೆ ಅಮ್ಮನಿಗೆ ಗೊತ್ತಿತ್ತು. ಇದೇ ವಿಚಾರವಾಗಿ ಮನೆಯಲ್ಲಿ ಸಾಕಷ್ಟು ಬಾರಿ ಗಲಾಟೆಗಳಾಗಿವೆ. ನಮ್ಮನ್ನು ಮನೆಯಲ್ಲೇ ಕೂಡಿ ಹಾಕುತ್ತಿದ್ದರು. ಅಪ್ಪನ ಕಿರುಕುಳದಿಂದ ಅಮ್ಮನಿಗೆ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆಯನ್ನು ಕೂಡ ನೀಡಲಾಗಿತ್ತು. ಈ ಹಿಂದೆ ಪೊಲೀಸ್ ಠಾಣೆಯಲ್ಲೂ ಅಪ್ಪನ ವಿರುದ್ಧ ಕೇಸ್ ದಾಖಲಾಗಿತ್ತು. 2007ರಲ್ಲಿ ಇದೇ ವಿಚಾರಕ್ಕೆ ಅಪ್ಪನ ಮೇಲೆ ಹಲ್ಲೆ ನಡೆದಿತ್ತು. 3 ಕೋಟಿ ಖರ್ಚು ಮಾಡಿ ಮನೆ ಕಟ್ಟಿದ್ರು, ಆದರೆ ಮನೆ ಸೋರುತ್ತೆ. ಕಿಟಕಿಯಿಂದ ನೀರು ಮನೆ ಒಳಗೆ ಬರುತ್ತೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

    ಅಕ್ಕನ ಗಂಡಂದಿರ ಮನೆಯವರು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ. ಅಕ್ಕಂದಿರಿಗೆ ಅಪ್ಪ ಯಾವುದೇ ಆಸ್ತಿ ನೀಡಿರಲಿಲ್ಲ. ಹೀಗಾಗಿ ಗಂಡಂದಿರ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು. ನನ್ನ ತಂದೆ ಕುಡುಕ. ಹೀಗಾಗಿ ಮನೆಯ ಬಾಗಿಲು ಲಾಕ್ ಮಾಡುತ್ತಿರಲಿಲ್ಲ. ನಮ್ಮ ಅಪ್ಪ ಅತೀ ದೊಡ್ಡ ಸ್ಯಾಡಿಸ್ಟ್. ನನ್ನ ಅಮ್ಮನಿಗೆ ಕಿರುಕುಳ ಕೊಡುತ್ತಿದ್ದರು. ನನ್ನ ಅಮ್ಮನ ಚಾರಿತ್ರ್ಯಹರಣ ಮಾಡ್ತಿದ್ದರು. ಗಂಡ-ಹೆಂಡತಿ ನಡುವಿನ ಸಂಬಂಧ ಹಾಳು ಮಾಡ್ತಿದ್ದರು. ನಮ್ಮ ಅಪ್ಪ ಆತನ ಸಹೋದರಿಯನ್ನು ಆಕೆಯ ಗಂಡನಿಂದ ದೂರ ಮಾಡಿದ್ದಾರೆ.

    ನನ್ನ ಮೊದಲ ಸಹೋದರಿಗೆ ಆಕೆಯ ಅತ್ತೆ ಮತ್ತು ಮಾವ, ಗಂಡನಿಗೆ ಹೇಳಿ ಹೊಡೆಸ್ತಿದ್ದರು. ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯಕ್ಕೆ ನಮ್ಮಪ್ಪನೇ ಕಾರಣ ಎಂದು ಮಗ ಮಧುಸಾಗರ್ ದೂರಿದ್ದಾನೆ. ನನ್ನ ಎರಡನೇ ಸಹೋದರಿಗೂ ನನ್ನ ತಂದೆ ತೊಂದರೆ ಕೊಟ್ಟಿದ್ದರು. ನನ್ನ ತಾಯಿಗೆ ಹಾನಿ ಉಂಟು ಮಾಡಲು ಯತ್ನಿಸಿದ್ದರು. ನಮ್ಮನಿಗೆ ನಮ್ಮಪ್ಪ ಚಪ್ಪಲಿಯಿಂದ ಹೊಡೆಯುತ್ತಿದ್ದರು. ನಮ್ಮಮ್ಮನ ಬಾಯಲ್ಲಿ ಚಪ್ಪಲಿ ಇಟ್ಟು ಅವಮಾನಿಸ್ತಿದ್ದರು. ನಮ್ಮಮ್ಮನಿಗೆ ಇನ್ನೊಂದು ಸಂಬಂಧ ಇದೆ ಎಂದು ಶಂಕಿಸಿದ್ದರು. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್

    ನಮ್ಮನ್ನು ಮನೆಯೊಳಗೆ ಕೂಡಿ ಹಾಕಿ ಅಫೀಸ್‍ಗೆ ಹೋಗ್ತಿದ್ದರು. ನಮ್ಮಪ್ಪನ ಕಿರುಕುಳದಿಂದ ನನ್ನ ತಾಯಿ ಖಿನ್ನತೆಗೆ ಒಳಗಾಗಿ ನಿಮ್ಹಾನ್ಸ್‍ನಲ್ಲಿ ಚಿಕಿತ್ಸೆ ಪಡೆದಿದ್ದರು. ನಮ್ಮಮ್ಮನ ಅಸಹಾಯಕತೆಯನ್ನೇ ನಮ್ಮಪ್ಪ ಬಳಸಿಕೊಂಡು ಆಕೆಗೆ ಕಿರುಕುಳ ನೀಡ್ತಿದ್ದರು. ದಿನಾ ಕುಡಿದು ಬಂದು ಗಲಾಟೆ ಮಾಡ್ತಿದ್ದರು. ನಮ್ಮಪ್ಪನ ಜೊತೆ ನಾವು ಊಟನೂ ಮಾಡ್ತಿರಲಿಲ್ಲ. ಅವರು ಮನೆಗೆ ಬರುವ ಮೊದಲೇ ಊಟ ಮಾಡಿ ಮಲಗ್ತಿದ್ವಿ.

    ಕೆಲಸ ಬಿಡುವಂತೆ ನನಗೆ, ನನ್ನ ಸಹೋದರರಿಗೆ ಕಿರುಕುಳ ಕೊಡ್ತಿದ್ದರು. ಅಪ್ಪನ ಕಿರುಕುಳ ತಾಳಲಾರದೇ ನಾನು ಕೆಲಸಕ್ಕೆ ರಾಜೀನಾಮೆ ಕೊಟ್ಟಿದ್ದೆ. ನಾನು, ಅಮ್ಮ, ಸಹೋದರರಿರನ್ನು ಬೇರೆ ಬೇರೆ ಇಟ್ಟಿದ್ದರು. ನಮ್ಮ ಅಪ್ಪನ ಕಾಟದಿಂದ ನನ್ನ ಸಹೋದರರಿಯ ಶಿಕ್ಷಣ ಒಂದು ವರ್ಷ ಹಾಳಾಗಿತ್ತು ಎಂದೆಲ್ಲಾ ಡೆತ್ ನೋಟ್ ಬರೆದಿದ್ದು, ಈ ಡೆತ್ ನೋಟ್ ಶಂಕರ್ ಜೀವನಕ್ಕೆ ಕುತ್ತು ತರುತ್ತಾ ಎಂಬ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ- ಐದು ದಿನ ಅನ್ನ, ನೀರಿಲ್ಲದೆ ಬದುಕುಳಿದ ಎರಡೂವರೆ ವರ್ಷದ ಕಂದಮ್ಮ

  • ತಂದೆ ಶಂಕರ್ ಅನೈತಿಕ ಸಂಬಂಧವೇ ಕುಟುಂಬಕ್ಕೆ ಕುತ್ತಾಯ್ತಾ..? – ಅಪ್ಪನ ಬಗ್ಗೆ ಮೃತ ಮಕ್ಕಳ ಡೆತ್‍ನೋಟ್

    ತಂದೆ ಶಂಕರ್ ಅನೈತಿಕ ಸಂಬಂಧವೇ ಕುಟುಂಬಕ್ಕೆ ಕುತ್ತಾಯ್ತಾ..? – ಅಪ್ಪನ ಬಗ್ಗೆ ಮೃತ ಮಕ್ಕಳ ಡೆತ್‍ನೋಟ್

    – 2 ಕೋಟಿ ಬಂಗಲೆಯಲ್ಲಿ ನಗನಾಣ್ಯ ಪತ್ತೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಒಂದೇ ಕುಟುಂಬದ ಐವರ ಸಾವು ಪ್ರಕರಣ ದಿನದಿಂದ ದಿನ್ಕಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸದ್ಯ ಮೃತ ಮಧುಸಾಗರ್ ಬರೆದ ಡೆತ್ ನೋಟ್ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು. ತಿಗಳರಪಾಳ್ಯದ ಐವರ ಆತ್ಮಹತ್ಯೆ ರಹಸ್ಯ ಬಗೆದಷ್ಟು ಬಯಲಾಗ್ತಿದೆ. ಡೆತ್ ನೋಟ್ ಬರೆದಿಟ್ಟು ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ. ಸಿಂಚನಾ, ಸಿಂಧುರಾಣಿ, ಮಧುಸಾಗರ್ ಹೀಗೆ ಪ್ರತಿಯೊಬ್ಬರೂ ಡೆತ್‍ನೋಟ್ ಬರೆದಿದ್ದಾರೆ. ಈ ಮೂಲಕ ಶಂಕರ್ ಹಾಗೂ ಅಳಿಯಂದಿರ ಪಾಲಿಗೆ ಇದು ಕಂಟಕವಾಗುತ್ತಾ ಎಂಬ ಪ್ರಶ್ನೆ ಮೂಡಿದೆ. ಅಲ್ಲದೆ ಮೂವರ ಡೆತ್‍ನೋಟ್‍ನ ಮುಖಪುಟದಲ್ಲಿ ಒಂದೇ ರೀತಿಯ ಫೋಟೋ ಹಾಕಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಶಂಕರ್, ಇಬ್ಬರು ಅಳಿಯಂದಿರ ವಿರುದ್ಧ ದೂರು ದಾಖಲು

    ಶಂಕರ್‌ಗೆ ಡೆತ್‍ನೋಟ್ ಕಂಟಕ..?: ನಮ್ಮ ಸಾವಿಗೆ ತಂದೆ ಶಂಕರ್ ಅವರೇ ಕಾರಣ. ನಮ್ಮಪ್ಪ ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು. ಪದೇ ಪದೇ ಹಣಕ್ಕಾಗಿ ನಮ್ಮ ಮೇಲೆ ಒತ್ತಡ ಹೇರುತ್ತಿದ್ದರು. ತಾಯಿ ಭಾರತಿಯನ್ನ ಸಂತೋಷವಾಗಿ ಬದುಕಲು ಬಿಟ್ಟಿರಲಿಲ್ಲ. ಹೀಗಾಗಿ ಗಂಡನ ಮನೆಯಲ್ಲಿಯೂ ಕಿರುಕುಳ, ತಂದೆ ಮನೆಯಲ್ಲೂ ಕಿರುಕುಳ ಅನುಭವಿಸುತ್ತಿದ್ದೇವೆ. ಮನೆ ಸಮಸ್ಯೆಗಳ ಬಗೆಹರಿಸುವ ಗೋಜಿಗೆ ತಂದೆ ಹೋಗ್ತಿರಲಿಲ್ಲ. ಗಂಡನ ಮನೆಯಲ್ಲಿ ಅತ್ತೆ, ಮಾವಂದಿರು ಬದುಕಲು ಬಿಡಲಿಲ್ಲ. ಇತ್ತ ನಮ್ಮ ಮನೆಯಲ್ಲಿ ತಂದೆಯೇ ಸಂತೋಷವಾಗಿ ಬದುಕೋದಕ್ಕೆ ಬಿಡಲಿಲ್ಲ ಎಂದೆಲ್ಲ ಡೆತ್ ನೋಟ್ ನಲ್ಲಿ ಮಕ್ಕಳು ತಮ್ಮ ತಂದೆಯ ವಿರುದ್ಧವೇ ಗಂಭೀರ ಆರೋಪ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೌಟುಂಬಿಕ ಕಲಹದಿಂದ್ಲೇ ಸಾಮೂಹಿಕ ಆತ್ಮಹತ್ಯೆ – ದುರಂತಕ್ಕೆ ಪತ್ನಿಯೇ ಕಾರಣವೆಂದ ಪತಿ ಶಂಕರ್

    ಕೆಜಿಗಟ್ಟಲೇ ಚಿನ್ನಾಭರಣ ಪತ್ತೆ: ಇತ್ತ ಪ್ರಕರಣ ಸಂಬಂಧ ತನಿಖೆಗೆ ತೆರಳಿರುವ ಪೊಲೀಸರಿಗೆ ಶಂಕರ್ ಮನೆಯಲ್ಲಿ ಕೆಜಿಗಟ್ಟಲೇ ಚಿನ್ನಾಭರಣ ಪತ್ತೆಯಾಗಿದೆ. 15 ಲಕ್ಷ ರೂ. ನಗದು, ಚೆಲ್ಲಾಪಿಲ್ಲಿ ಆಗಿರುವ ಹರಿದ ನೋಟುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಣ ಹಾಗೂ ಚಿನ್ನಾಭರಣದ ಬಗ್ಗೆ ಐಟಿಗೆ ತಿಳಿಸಲು ಚಿಂತನೆ ನಡೆಸಿದ್ದಾರೆ. ಶಂಕರ್ ಮನೆಯಲ್ಲಿ ರಾಶಿರಾಶಿ ಆರ್ ಟಿಐ ಚೀಟಿ ಕೂಡ ಪತ್ತೆಯಾಗಿವೆ. ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸಲಿದ್ದಾರೆ. ಇದನ್ನೂ ಓದಿ:  ಬೆಂಗ್ಳೂರಲ್ಲಿ ಒಂದೇ ಕುಟುಂಬದ ಐವರು ಸಾವು ಪ್ರಕರಣ- ಐದು ದಿನ ಅನ್ನ, ನೀರಿಲ್ಲದೆ ಬದುಕುಳಿದ ಎರಡೂವರೆ ವರ್ಷದ ಕಂದಮ್ಮ

  • ಸಂಸದ ಶ್ರೀನಿವಾಸ್ ಪ್ರಸಾದ್ ಆಪ್ತ ಸಹಾಯಕ ಕೊರೊನಾಗೆ ಬಲಿ

    ಸಂಸದ ಶ್ರೀನಿವಾಸ್ ಪ್ರಸಾದ್ ಆಪ್ತ ಸಹಾಯಕ ಕೊರೊನಾಗೆ ಬಲಿ

    ಮೈಸೂರು: ಸಂಸದ ಶ್ರೀನಿವಾಸ್ ಪ್ರಸಾದ್ ಆಪ್ತ ಸಹಾಯಕರೊಬ್ಬರು ಮಹಾಮಾರಿ ಕೊರೊನಾಗೆ ಬಲಿಯಾಗಿದ್ದಾರೆ.

    ಶಂಕರ್(78) ಕೊರೊನಾಗೆ ಬಲಿಯಾದ ಆಪ್ತ ಸಹಾಯಕ. ಇವರು ಕಳೆದ 40 ವರ್ಷಗಳಿಂದ ಶ್ರೀನಿವಾಸ್ ಪ್ರಸಾದ್ ಬಳಿ ಆಪ್ತ ಸಹಾಯಕರಾಗಿದ್ದರು.

    ಶಂಕರ್ ಅವರಲ್ಲಿ ಒಂದು ವಾರದ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆಪ್ತ ಸಹಾಯಕನ ಸಾವಿಗೆ ಸಂಸದರು ಕಂಬನಿ ಮಿಡಿದಿದ್ದಾರೆ.

    ಸಕಾಲದಲ್ಲಿ ಆಕ್ಸಿಜನ್ ಸಿಗದ ಕಾರಣ ಸೋಮವಾರ ಬೆಳಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ರಮೇಶ್ ಮೃತಪಟ್ಟಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ರಮೇಶ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

    ಏ.13ರಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಉಸಿರಾಟದ ಸಮಸ್ಯೆ ಮಾತ್ರ ಅಲ್ಲದೇ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ವೆಂಟಿಲೇಟರ್ ಬೆಡ್ ನಲ್ಲಿ ಚಿಕಿತ್ಸೆ ಪಡೆಯುತ್ತದ್ದ ರಮೇಶ್ ಅವರಿಗೆ ನಿನ್ನೆ ಆಕ್ಸಿಜನ್ ಕೊರತೆಯಾಗಿತ್ತು. ಸರಿಯಾದ ಸಮಯದಲ್ಲಿ ಆಕ್ಸಿಜನ್ ಆಸ್ಪತ್ರೆಯಲ್ಲಿ ದೊರೆಯದ ಕಾರಣ ರಮೇಶ್ ನಿನ್ನೆ ಬೆಳಗ್ಗೆ ಸಾವನ್ನಪ್ಪಿದ್ದರು.

  • 3ಡಿಯಲ್ಲಿ ಬರಲಿದ್ದಾನೆ ಮಗಧೀರ?

    3ಡಿಯಲ್ಲಿ ಬರಲಿದ್ದಾನೆ ಮಗಧೀರ?

    ಹೈದರಾಬಾದ್: ಟಾಲಿವುಡ್ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತೇಜ ಹಾಗೂ ನಿರ್ದೇಶಕ ಶಂಕರ್ ಕಾಂಬೀನೇಷನ್‍ನಲ್ಲಿ ಬರುತ್ತಿರುವ ಸಿನಿಮಾವನ್ನು 3ಡಿಯಲ್ಲಿ ಚಿತ್ರೀಕರಿಸುವ ಸಾಧ್ಯತೆ ಇದೆ. ನಟ ರಾಮ್ ಚರಣ್ ತೇಜರ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾವನ್ನು ನಿರ್ದೇಶಕ ಶಂಕರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಂದು ತೆಲುಗಿನ ಖ್ಯಾತ ನಿರ್ಮಾಪಕ ದಿಲ್ ರಾಜು ಫೆಬ್ರವರಿ 12ರಂದು ಘೋಷಿಸಿದ್ದರು. ಇದೊಂದು ಐತಿಹಾಸಿಕ ಕಥೆ ಆಧಾರಿತ ಸಿನಿಮಾವಾಗಿದ್ದು, ಬಹುಶಃ 2022ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

    ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಸಿಕ್ವೆನ್ಸ್‍ಗಳಿದ್ದು, ಪ್ರೇಕ್ಷಕರು 3ಡಿಯಲ್ಲಿ ನೋಡಲು ಹೆಚ್ಚಾಗಿ ಬಯಸಬಹುದು. ಹಾಗಾಗಿ ಸಿನಿಮಾವನ್ನು 3ಡಿಯಲ್ಲಿ ಚಿತ್ರೀಕರಿಸಲು ನಿರ್ದೇಶಕ ಶಂಕರ್ ಯೋಚಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಈ ಹಿಂದೆ ಶಂಕರ್‍ರವರು ನಿರ್ದೇಶಿಸಿದ್ದ 2.0 ಸಿನಿಮಾವನ್ನು 3ಡಿಯಲ್ಲಿ ಬಿಡುಗಡೆ ಆಗಿತ್ತು.

    ಇದು ಮಲ್ಟಿಸ್ಟಾರ್ ಸಿನಿಮಾವಾದ್ದರಿಂದ ತಮಿಳು, ತೆಲುಗು, ಹಿಂದಿ, ಕನ್ನಡ ಮತ್ತು ಮಲಯಾಳಂ ಐದು ಭಾಷೆಗಳಲ್ಲಿ ಚಿತ್ರೀಕರಿಸಲಾಗುವುದು ಮತ್ತು ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್ ಸೆಟ್ ನಿರ್ಮಿಸಲು ಚಿತ್ರತಂಡ ಚಿಂತನೆ ನಡೆಸಿದೆ. ಇನ್ನೂ ಸಿನಿಮಾಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶಂಕರ್ ವಿಜಯ್ ಸೇತುಪತಿ ಮತ್ತು ಇನ್ನಿತರ ಖ್ಯಾತ ನಟರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿನಿಮಾ ಕುರಿತಂತೆ ನಿರ್ಮಾಪಕ ದಿಲ್ ರಾಜು, ಭಾರತದ ಅತ್ಯುತ್ತಮ ನಟ ರಾಮ್ ಚರಣ್ ತೇಜ ಮತ್ತು ನಿರ್ದೇಶಕ ಶಂಕರ್ ಷಣ್ಮುಗಮ್ ಅವರೊಂದಿಗೆ ಸಿನಿಮಾಕ್ಕಾಗಿ ಕೈ ಜೋಡಿಸುತ್ತಿರುವುದು ನನಗೆ ಬಹಳ ಸಂತೋಷವಾಗುತ್ತಿದೆ. ಜನಸಾಮಾನ್ಯರನ್ನು ರಂಜಿಸುವ ಸಲುವಾಗಿ ಪ್ಯಾನ್ ಇಂಡಿಯಾ ಸಿನಿಮಾವಾಗಿ ಪ್ರೇಕ್ಷಕರೆದುರಿಗೆ ತರಲಿದ್ದೇವೆ ಎಂದು ತಿಳಿಸಿದ್ದರು. ಅಲ್ಲದೆ ಇದು ನಿರ್ಮಾಪಕ ದಿಲ್ ರಾಜು ನಿರ್ಮಿಸುತ್ತಿರುವ 50ನೇ ಸಿನಿಮಾವಾಗಿದೆ.

    ಸದ್ಯ ನಿರ್ದೇಶಕ ಶಂಕರ್ ನಟ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇಂಡಿಯನ್ 2 ಸಿನಿಮಾ 1996ರಲ್ಲಿ ತೆರೆ ಕಂಡ ಬ್ಲಾಕ್ ಬಾಸ್ಟರ್ ಇಂಡಿಯನ್ ಸಿನಿಮಾದ ಮುಂದುವರಿದ ಭಾಗವಾಗಿದ್ದು, ಈ ಸಿನಿಮಾದಲ್ಲಿ ಕಮಲ್ ಹಾಸನ್, ಸಿದ್ದಾರ್ಥ್, ಕಾಜಲ್ ಅಗರ್‍ವಾಲ್,ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭಾವನಿ ಶಂಕರ್ ಮತ್ತು ವಿವೇಕ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

    ನಟ ರಾಮ್‍ಚರಣ್ ಪ್ರಸ್ತುತ ನಿರ್ದೇಶಕ ರಾಜಮೌಳಿ ನಿರ್ದೇಶಿಸುತ್ತಿರುವ ಆರ್‍ಆರ್‍ಆರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟ ಜ್ಯೂನಿಯರ್ ಎನ್‍ಟಿಆರ್ ಅಭಿನಯಿಸಿದ್ದು, ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮ ರಾಜು ಮತ್ತು ಕೊಮರಾಮ ಭೀಮ್ ಜೀವನಾದಾರಿತ ಸಿನಿಮಾವಾಗಿದೆ. ಅಲ್ಲದೆ ಈ ಸಿನಿಮಾಕ್ಕೆ ಬರೋಬ್ಬರಿ 400 ಕೋಟಿ ಬಂಡಾವಾಳ ಹೂಡಿದ್ದು, ನಟ ಅಜಯ್ ದೇವ್‍ಗನ್, ಅಲಿಯಾ ಭಟ್, ಸಮುತ್ರಿಕಣಿ ಸೇರಿದಂತೆ ಹಲವಾರು ಕಲಾವಿದರು ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ.

  • ವಿಶ್ವನಾಥ್‌ಗೆ ಹೈಕೋರ್ಟ್‌ ಶಾಕ್‌ – ಎಂಟಿಬಿ, ಶಂಕರ್‌ಗೆ ಬಿಗ್‌ ರಿಲೀಫ್‌

    ವಿಶ್ವನಾಥ್‌ಗೆ ಹೈಕೋರ್ಟ್‌ ಶಾಕ್‌ – ಎಂಟಿಬಿ, ಶಂಕರ್‌ಗೆ ಬಿಗ್‌ ರಿಲೀಫ್‌

    ಬೆಂಗಳೂರು: ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲು ತುದಿಗಾಲಿನಲ್ಲಿ ನಿಂತಿದ್ದ ಎಚ್.ವಿಶ್ವನಾಥ್ ಅವರಿಗೆ ಹೈಕೋರ್ಟ್ ಬಿಗ್‌ ಶಾಕ್ ನೀಡಿದೆ.

    ವಿಧಾನ ಪರಿಷತ್‍ನ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡದಂತೆ ಕೋರಿ ವಕೀಲ ಎ.ಎಸ್. ಹರೀಶ್ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಇಂದು ಮಧ್ಯಂತರ ಆದೇಶ ಪ್ರಕಟಿಸಿತು.

    ಸಂವಿಧಾನದ 164 (1ಬಿ), 361 ಬಿ ಅಡಿ ಹೆಚ್.ವಿಶ್ವನಾಥ್ ಅವರು ಶಾಸಕ ಸ್ಥಾನದಿಂದ ಅನರ್ಹರಾಗಿದ್ದಾರೆ. ಹೀಗಾಗಿ ಹಾಲಿ ಪರಿಷತ್‌ ಅವಧಿ ಮುಗಿಯುವವರೆಗೆ ಅನರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ, ಎಸ್.ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿದೆ. ಈ ಆದೇಶದ ಅನ್ವಯ 2021ರವರೆಗೆ ವಿಶ್ವನಾಥ್‌ ಮಂತ್ರಿಯಾಗಲು ಸಾಧ್ಯವಿಲ್ಲ

    ತನ್ನ ಆದೇಶದಲ್ಲಿ ವಿಶ್ವನಾಥ್ ಅವರಿಗೆ ಮಂತ್ರಿಯಾಗಲು ಸಾಧ್ಯವಿಲ್ಲ ಎಂದಿರುವ ಕೋರ್ಟ್, ಎಂಟಿಬಿ ನಾಗರಾಜ್, ಆರ್.ಶಂಕರ್ ಮಂತ್ರಿಯಾಗಬಹುದು ಎಂದು ಹೇಳಿದೆ. ಈ ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ, ಸಿಎಂಗೆ ಹೈಕೋರ್ಟ್ ಸೂಚನೆ ನೀಡಿದೆ.

    ಅನರ್ಹರಾದವರು ಮರು ಆಯ್ಕೆಯಾಗಲು ಮಾತ್ರ ಅವಕಾಶವಿದೆ. ಆದರೆ ಎ.ಹೆಚ್‍ವಿಶ್ವನಾಥ್ ನಾಮನಿರ್ದೇಶಿತ ಶಾಸಕರಾಗಿದ್ದಾರೆ. ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್ ವಿಧಾನಸಭೆಯಿಂದ ಪರಿಷತ್‍ಗೆ ಆಯ್ಕೆಯಾಗಿದ್ದಾರೆ. ಹಿಂಬಾಗಿಲಿನಿಂದ ಪರಿಷತ್‍ಗೆ ಆಯ್ಕೆ ಆಗುವುದನ್ನು ನಿರ್ಬಂಧಿಸಿ ಎಂದು ಅರ್ಜಿದಾರರು ಮನವಿ ಮಾಡಿದ್ದರು. ಅರ್ಜಿದಾರರ ಪರವಾಗಿ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ವಾದ ಮಾಡಿದ್ದರು.

    ಎಚ್‌ ವಿಶ್ವನಾಥ್‌, ಎಂ.ಟಿ.ಬಿ. ನಾಗರಾಜ್‌, ಆರ್‌ ಶಂಕರ್‌ ಚುನಾವಣೆಯಲ್ಲಿ ಜನರಿಂದ ನೇರವಾಗಿ ಆಯ್ಕೆಯಾಗಿಲ್ಲ. ಸುಪ್ರೀಂ ಕೋರ್ಟ್‌ನ ಆದೇಶದಂತೆ ಈ ಮೂವರೂ ಜನರಿಂದ ಆಯ್ಕೆಯಾಗದೇ ಚುನಾಯಿತ ಶಾಸಕರಿಂದ ಆಯ್ಕೆಯಾಗಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಮುಂದಾಗಿದ್ದಾರೆ. ಹಾಗಾಗಿ, ಅವರನ್ನು ಸಚಿವರನ್ನಾಗಿ ನೇಮಿಸಬಾರದು ಎಂದು ಪ್ರಶಾಂತ್‌ ಭೂಷಣ್‌ ವಾದಿಸಿದ್ದರು.

    ಯಾಕಿಲ್ಲ ಮಂತ್ರಿ ಸ್ಥಾನ?
    ವಿಶ್ವನಾಥ್ ಅವರನ್ನು ಸಾಹಿತ್ಯ ಕ್ಷೇತ್ರದಿಂದ ನಾಮನಿರ್ದೇಶನ ಮಾಡಲಾಗಿದ್ದರೆ, ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಎಂಟಿಬಿ, ಶಂಕರ್ ಆಯ್ಕೆ ಆಗಿದ್ದರು. ವಿಶ್ವನಾಥ್ ಯಾವುದೇ ಚುನಾವಣೆ ನಡೆಯದೇ ಅವಿರೋಧವಾಗಿ ಪರಿಷತ್ ಮೆಟ್ಟಿಲು ಹತ್ತಿದ ಕಾರಣ ಮಂತ್ರಿ ಸ್ಥಾನ ಮಾಡಲು ಬರುವುದಿಲ್ಲ ಎಂದು ಕೋರ್ಟ್ ಹೇಳಿದೆ.

    ಏನಿದು ಪ್ರಕರಣ?
    ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹಾಲಿ ವಿಧಾನಸಭೆ ಮುಗಿಯುವರೆಗೆ 17 ಶಾಸಕರನ್ನು ಅನರ್ಹಗೊಳಿಸಿ ಆದೇಶ ಪ್ರಕಟಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಅನರ್ಹತೆ ಆದೇಶವನ್ನು ಎತ್ತಿ ಹಿಡಿದಿತ್ತು. ಆದರೆ ವಿಧಾನಸಭೆ ಮುಗಿಯುವರೆಗೂ ಅನರ್ಹತೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸಿ ಶಾಸಕರಾಗಬಹುದು ಎಂದು ಮಹತ್ವದ ಆದೇಶವನ್ನು ಪ್ರಕಟಿಸಿತ್ತು.

    ಈ ಕಾರಣಕ್ಕೆ ವಿಶ್ವನಾಥ್‌ ಮತ್ತು ಎಂಟಿಬಿ ನಾಗರಾಜ್‌ ಹುಣಸೂರು ಮತ್ತು ಹೊಸಕೋಟೆ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಸೋತ ಹಿನ್ನೆಲೆಯಲ್ಲಿಇಬ್ಬರನ್ನು ಬಿಜೆಪಿ ಪರಿಷತ್‌ಗೆ ಆಯ್ಕೆ ಮಾಡಿ ಮಂತ್ರಿ ಮಾಡಲು ಮುಂದಾಗಿತ್ತು. ಈ ನಡುವೆ ಹೈಕೋರ್ಟ್‌ನಲ್ಲಿ ಅನರ್ಹರಾದವರಿಗೆ ಪರಿಷತ್‌ ಮೂಲಕ ಮಂತ್ರಿಯಾಗಲು ನಿರ್ಬಂಧಿಸಿ ಕೋರಿ ಪಿಐಎಲ್‌ ಸಲ್ಲಿಕೆಯಾಗಿತ್ತು. ಈಗ ಹೈಕೋರ್ಟ್‌ ನೀಡಿದ ಮಧ್ಯಂತರ ಆದೇಶದಿಂದ ವಿಶ್ವನಾಥ್‌ಗೆ ಮಂತ್ರಿ ಸ್ಥಾನ ಕೈ ತಪ್ಪಿದರೆ ಎಂಟಿಬಿಗೆ ಮಂತ್ರಿಯಾಗುವ ಅವಕಾಶ ಸಿಕ್ಕಿದೆ.

  • ಶಂಕರ್, ವಿಶ್ವನಾಥ್, ಎಂಟಿಬಿಗೆ ಎಂಎಲ್‍ಸಿ ಸ್ಥಾನ ನೀಡ್ಬೇಕು: ಸಚಿವ ನಾಗೇಶ್

    ಶಂಕರ್, ವಿಶ್ವನಾಥ್, ಎಂಟಿಬಿಗೆ ಎಂಎಲ್‍ಸಿ ಸ್ಥಾನ ನೀಡ್ಬೇಕು: ಸಚಿವ ನಾಗೇಶ್

    ಕೋಲಾರ: ಮಾಜಿ ಸಚಿವ ಎಂ.ಟಿ.ಬಿ ನಾಗರಾಜ್ ಸೇರಿದಂತೆ ವಿಶ್ವನಾಥ್ ಹಾಗೂ ಶಂಕರ್ ಅವರಿಗೆ ನ್ಯಾಯಬದ್ಧವಾಗಿ ಎಂ.ಎಲ್.ಸಿ ಸ್ಥಾನ ನೀಡಬೇಕೆಂದು ಅಬಕಾರಿ ಸಚಿವ ಎಚ್.ನಾಗೇಶ್ ತಮ್ಮ ಆಪ್ತರ ಪರವಾಗಿ ಬ್ಯಾಟ್ ಬೀಸಿದ್ದಾರೆ.

    ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಮನ್ವಂತರ ಪ್ರಕಾಶನ ಹಾಗೂ ಜನಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾಗಲು ಈ ಮೂವರು ಕಾರಣರಾಗಿದ್ದಾರೆ ಎಂದರು.

    ಎಂಟಿಬಿ ನಾಗರಾಜ್ ಸೇರಿದಂತೆ ಈ ಮೂವರು ತ್ಯಾಗ ಮಾಡಿದ್ದಾರೆ. ಹೀಗಾಗಿ ಅವರಿಗೆ ಎಂ.ಎಲ್.ಸಿ ಸ್ಥಾನ ನೀಡುವುದರಲ್ಲಿ ತಪ್ಪಿಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ರು. ಅಲ್ಲದೆ ನಾನು ಸೇರಿದಂತೆ 18 ಜನರು ಕಷ್ಟಕಾಲದಲ್ಲಿದ್ದಾಗ ಕೈ ಹಿಡಿದಿದ್ದೇವೆ. ಹೀಗಾಗಿ ನಾನು ಸಹ ಅವರ ಪರವಾಗಿ ಎಂ.ಎಲ್.ಸಿ ಸ್ಥಾನ ನೀಡಬೇಕೆಂದು ಒತ್ತಾಯ ಮಾಡುವುದಾಗಿ ತಿಳಿಸಿದರು.

    ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೆ ಹಾಗೂ ಆಡಳಿತದಲ್ಲಿರುವುದಕ್ಕೆ ಕಾರಣ ಇವರು. ಇಲ್ಲವಾದಲ್ಲಿ ವಿರೋಧ ಪಕ್ಷದಲ್ಲಿರಬೇಕಿತ್ತು. ಯಡಿಯೂರಪ್ಪ ಅವರು ಮಾತು ಕೊಟ್ಟರೆ ಯಾವತ್ತೂ ತಪ್ಪುವುದಿಲ್ಲ, ಅವರದ್ದು ಮಾತು ಕೊಟ್ಟರೆ ನಡೆದುಕೊಳ್ಳುವಂತಹ ಗುಣ. ನನ್ನ ಎರಡು ವರ್ಷದ ಅನುಭವದಲ್ಲಿ ನುಡಿದಂತೆ ನಡೆದ ಧೀಮಂತ ನಾಯಕ ಅವರು ಎಂದರು.

    ಈಗಾಗಲೇ ಬಾರ್ ಅಂಡ್ ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ಗೆ ಅವಕಾಶ ನೀಡಲಾಗಿದೆ. ಉಳಿದಂತೆ ಪಬ್‍ಗಳು ಓಪನ್ ಮಾಡಲು ಇದೆ 8 ರಂದು ತೀರ್ಮಾನ ಮಾಡಲಾಗುವುದು.

  • ಒಂದು ಎಂಎಲ್‍ಸಿ ಸ್ಥಾನಕ್ಕೆ ಇಬ್ಬರ ಮಧ್ಯೆ ಪೈಪೋಟಿ

    ಒಂದು ಎಂಎಲ್‍ಸಿ ಸ್ಥಾನಕ್ಕೆ ಇಬ್ಬರ ಮಧ್ಯೆ ಪೈಪೋಟಿ

    ಬೆಂಗಳೂರು: ಖಾಲಿ ಇರುವ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಲ್ಲಿ ಇಬ್ಬರು ನಾಯಕರ ನಡುವೆ ಪೈಪೋಟಿ ಪ್ರಾರಂಭವಾಗಿದೆ. ಅನರ್ಹ ಶಾಸಕ ಶಂಕರ್ ಮತ್ತು ಡಿಸಿಎಂ ಲಕ್ಷ್ಮಣ ಸವದಿ ನಡುವೆ ಪೈಪೋಟಿ ಏರ್ಪಟ್ಟಿದ್ದು, ಶತಾಯಗತಾಯ ಶಾಸಕರಾಗಲು ಕಸರತ್ತು ಪ್ರಾರಂಭ ಮಾಡಿದ್ದಾರೆ.

    ಅನರ್ಹರಾಗಿ ಉಪಚುನಾವಣೆಯಲ್ಲಿ ರಾಣೆಬೆನ್ನೂರು ಕ್ಷೇತ್ರವನ್ನು ಬಿಜೆಪಿ ಸೂಚಿಸಿದ ಅಭ್ಯರ್ಥಿಗೆ ಆರ್.ಶಂಕರ್ ಬಿಟ್ಟುಕೊಟ್ಟಿದ್ದರು. ಸಿಎಂ ಯಡಿಯೂರಪ್ಪ ಶಂಕರ್ ಅವರಿಗೆ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಶಿವಾಜಿನಗರದಿಂದ ಆಯ್ಕೆ ಆಗಿರುವ ರಿಜ್ವಾನ್ ಅರ್ಷದ್ ಅವರಿಂದ ಖಾಲಿಯಾಗಿರುವ ಸ್ಥಾನವನ್ನು ನನಗೆ ನೀಡಿ ಎಂದು ಸಿಎಂಗೆ ಶಂಕರ್ ದುಂಬಾಲು ಬಿದ್ದಿದ್ದಾರೆ. ಸಿಎಂ ಅವರನ್ನು ಭೇಟಿ ಮಾಡಿ ಕೊಟ್ಟ ಮಾತು ಉಳಿಸಿಕೊಳ್ಳಿ ಅಂತ ಆರ್. ಶಂಕರ್ ಒತ್ತಡ ಹಾಕಿದ್ದಾರೆ.

    ಹೈಕಮಾಂಡ್ ಕೃಪಾಕಟಾಕ್ಷದಿಂದ ಡಿಸಿಎಂ ಸ್ಥಾನ ಗಿಟ್ಟಿಸಿಕೊಂಡ ಲಕ್ಷ್ಮಣ ಸವದಿ ಯಾವುದೇ ಮನೆಯ ಸದಸ್ಯರಲ್ಲ. ಈಗಾಗಲೇ ಬಹುತೇಕ 4 ತಿಂಗಳು ಕಳೆದು ಹೋಗಿದೆ. ಇನ್ನು ಎರಡು ತಿಂಗಳಲ್ಲಿ ಸವದಿ ಪರಿಷತ್ ಸದಸ್ಯರಾಗದೇ ಹೋದರೆ ಡಿಸಿಎಂ ಸ್ಥಾನ ಹೋಗುತ್ತದೆ. ಉಪ ಚುನಾವಣೆಯಲ್ಲಿ ಕೊಟ್ಟ ಕೆಲಸವನ್ನು ಯಶಸ್ವಿಯಾಗಿ ನಿಭಾಯಿಸಿರುವ ಸವದಿ, ಪರಿಷತ್ ಸದಸ್ಯರಾಗಿ ಡಿಸಿಎಂ ಸ್ಥಾನ ಉಳಿಸಿಕೊಳ್ಳಲು ಸಿಎಂಗೆ ದುಂಬಾಲು ಬಿದ್ದಿದ್ದಾರೆ.

    ಶಂಕರ್ ಮತ್ತು ಸವದಿ ಒತ್ತಡದಿಂದ ಸಿಎಂ ಅಕ್ಷರಶಃ ಗೊಂದಲಕ್ಕೆ ಒಳಗಾಗಿದ್ದಾರೆ. ಇರುವ ಒಂದು ಸ್ಥಾನ ಯಾರಿಗೆ ನೀಡುವುದು ಎಂದು ಸಿಎಂ ತಲೆ ಕೆಡಿಸಿಕೊಂಡಿದ್ದಾರೆ. ಮುಂದಿನ ಜೂನ್ ನಲ್ಲಿ ಸುಮಾರು 7-8 ವಿಧಾನ ಪರಿಷತ್ ಸ್ಥಾನಗಳು ಖಾಲಿ ಆಗಲಿದೆ. ಹೀಗಾಗಿ ಈಗ ಒಬ್ಬರಿಗೆ ಕೊಟ್ಟು ಮುಂದಿನ ಜೂನ್ ವೇಳೆ ಇನ್ನೊಬ್ಬರಿಗೆ ನೀಡುವ ಚಿಂತನೆಯಲ್ಲಿ ಸಿಎಂ ಇದ್ದಾರೆ. ಯಾರಿಗೆ ಮೊದಲು ಕೊಡಬೇಕು ಎನ್ನುವುದು ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಲಿದೆ.

  • ಟಿಕೆಟ್ ಸಿಗದಿದ್ರೂ ಅನರ್ಹ ಶಾಸಕ  ಶಂಕರ್​ಗೆ ಬಿಜೆಪಿಯಿಂದ ಭರ್ಜರಿ ಗಿಫ್ಟ್

    ಟಿಕೆಟ್ ಸಿಗದಿದ್ರೂ ಅನರ್ಹ ಶಾಸಕ ಶಂಕರ್​ಗೆ ಬಿಜೆಪಿಯಿಂದ ಭರ್ಜರಿ ಗಿಫ್ಟ್

    ತುಮಕೂರು: ಅನರ್ಹ ಶಾಸಕ ಶಂಕರ್ ಅವರಿಗೆ ಬಿಜೆಪಿ ಭರ್ಜರಿ ಗಿಫ್ಟ್ ನೀಡಿದೆ. ಶಂಕರ್ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

    ಸೊಗಡು ಶಿವಣ್ಣ ನಿವಾಸದ ಬಳಿ ಮಾಧ್ಯಮಗಳು ಶಂಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದರೂ ರಾಣಿಬೆನ್ನೂರು ಕ್ಷೇತ್ರದ ಟಿಕೆಟ್ ಇನ್ನೂ ಯಾಕೆ ಹಂಚಿಕೆ ಮಾಡಿಲ್ಲ ಎಂದು ಬಿಎಸ್‍ವೈಯನ್ನು ಪ್ರಶ್ನಿಸಿದ್ದಕ್ಕೆ, ಶಂಕರ್ ಅವರನ್ನು ಪರಿಷತ್‍ಗೆ ಆಯ್ಕೆ ಮಾಡಿ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಹೇಳಿದ್ದಾರೆ.

    ಈ ವೇಳೆ ಶಿವಾಜಿನಗರದ ನಾಯಕ ರೋಷನ್ ಬೇಗ್ ಬಗ್ಗೆ ಬಿಜೆಪಿ ಸೇರ್ಪಡೆ ಬಗ್ಗೆ ಕೇಳಲಾದ ಪ್ರಶ್ನೆಗೆ, ಇನ್ನೂ ಚರ್ಚೆ ಮಾಡುತ್ತಿದ್ದೇವೆ. ಚರ್ಚೆ ಮಾಡಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

    ಇಂದು ಬಿಜೆಪಿಗೆ 16 ಮಂದಿ ಅನರ್ಹ ಶಾಸಕರು ಸೇರ್ಪಡೆಯಾಗಿದ್ದಾರೆ. ಸೇರ್ಪಡೆಯಾದ ಬೆನ್ನಲ್ಲೇ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ಟಿಕೆಟ್ ಗಳನ್ನು ಅನರ್ಹರಿಗೆ ಬಿಜೆಪಿ ಹಂಚಿಕೆ ಮಾಡಿದೆ. ಈ ಮೂಲಕ ಅನರ್ಹರಿಗೆ ನೀಡಿದ ವಚನವನ್ನು ಸಿಎಂ ಈಡೇರಿಸಿದ್ದಾರೆ.

    ರಮೇಶ್ ಜಾರಕಿಹೊಳಿ(ಗೋಕಾಕ್), ಎಂಟಿಬಿ ನಾಗರಾಜ್(ಹೊಸಕೋಟೆ), ಎಚ್. ವಿಶ್ವನಾಥ್(ಹುಣಸೂರು), ಮಹೇಶ್ ಕುಮಟಳ್ಳಿ(ಅಥಣಿ) ಶ್ರೀಮಂತ ಪಾಟೀಲ್(ಕಾಗವಾಡ) ಶಿವರಾಂ ಹೆಬ್ಬಾರ್(ಯಲ್ಲಾಪುರ) ಬಿಸಿ ಪಾಟೀಲ್(ಹಿರೇಕೆರೂರು) ಆನಂದ್ ಸಿಂಗ್ (ವಿಜಯ ನಗರ), ಡಾ.ಸುಧಾಕರ್(ಚಿಕ್ಕಬಳ್ಳಾಪುರ) ಬೈರತಿ ಬಸವರಾಜ್(ಕೆಆರ್ ಪುರ) ಎಸ್‍ಟಿ ಸೋಮಶೇಖರ್(ಯಶವಂತಪುರ), ಗೋಪಾಲಯ್ಯ(ಮಹಾಲಕ್ಷ್ಮಿ ಲೇಔಟ್), ನಾರಾಯಣ ಗೌಡ(ಕೆ.ಆರ್.ಪೇಟೆ) ಅವರಿಗೆ ಟಿಕೆಟ್ ನೀಡಲಾಗಿದೆ.

    ಅನರ್ಹ ಶಾಸಕರು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಯಡಿಯೂರಪ್ಪ, ಇದೊಂದು ಐಹಿಹಾಸಿಕ ದಿನ. ಬಹುಶಃ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಈ 17 ಮಂದಿ ಜೆಡಿಎಸ್, ಕಾಂಗ್ರೆಸ್ ಶಾಸಕರು ಕಾರಣ. ಅವರು ತಮ್ಮ ಸಚಿವ ಸ್ಥಾನ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಮಗಾಗಿ ಎಲ್ಲಾ ರೀತಿಯ ತ್ಯಾಗವನ್ನು ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪಿನ ನಂತರ ಅವರೆಲ್ಲರೂ ನಮ್ಮ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಸದಸ್ಯತ್ವವನ್ನು ಪಡೆದು ಬಿಜೆಪಿ ಸೇರಿದ್ದಾರೆ ಎಂದು ಹೇಳಿದರು.

    ರಾಜೀನಾಮೆ ಕೊಟ್ಟು ನಮ್ಮ ಜೊತೆ ಬಂದಂತಹ ವೇದಿಕೆ ಮೇಲಿರುವ ಶಾಸಕರಿಗೆ, ಬೆಂಬಲಿಗರಿಗೆ ಸಿಎಂ ಆಗಿ ನಳಿನ್ ಕುಮಾರ್ ಅವರ ಪರವಾಗಿ ಭರವಸೆ ಕೊಡುತ್ತಿದ್ದೇನೆ. ನಾವೇನು ನಿಮಗೆ ಭರವಸೆ ಮಾತನ್ನು ಕೊಟ್ಟಿದ್ದೀವೋ ಅದನ್ನು ನಾವು ಅಕ್ಷರಶಃ ಪಾಲಿಸುತ್ತೇವೆ. ನಿಮಗೆ ನಂಬಿಕೆದ್ರೋಹ ಅಥವಾ ವಿಶ್ವಾಸದ್ರೋಹ ಮಾಡುವುದಿಲ್ಲ ಎಂದು ಹೇಳಿದರು.

    ಬಹುಶಃ ದೇಶದ ರಾಜಕಾರಣದಲ್ಲಿ ಈ ರೀತಿ 17 ಮಂದಿ ಶಾಸಕರು, ಮಂತ್ರಿಗಳು ರಾಜೀನಾಮೆ ಕೊಟ್ಟು ಹೊರಬಂದ ಉದಾಹರಣೆ ಇಲ್ಲ. ಇವರು ನಮಗಾಗಿ ಎಲ್ಲಾ ರೀತಿಯ ತ್ಯಾಗ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಕೈ ಜೊಡಿಸಿ ಪ್ರಾರ್ಥಿಸುತ್ತೇನೆ, ಇವರ ಗೆಲುವು ನಮ್ಮ ಜವಾಬ್ದಾರಿ. ಉಪಚುನಾವಣೆಯಲ್ಲಿ ಒಟ್ಟಿಗೆ ಕೆಲಸ ಮಾಡೋಣ ಎಂದು ಕರೆ ನೀಡಿದರು.

  • ರಾತ್ರೋರಾತ್ರಿ ಬೆಂಗ್ಳೂರಿಗೆ ನಾಗೇಶ್ ವಾಪಸ್

    ರಾತ್ರೋರಾತ್ರಿ ಬೆಂಗ್ಳೂರಿಗೆ ನಾಗೇಶ್ ವಾಪಸ್

    ಬೆಂಗಳೂರು: ವಿಶ್ವಾಸಮತಯಾಚನೆ ಹಿನ್ನೆಲೆಯಲ್ಲಿ ಮುಳಬಾಗಿಲು ಪಕ್ಷೇತರ ಶಾಸಕ ಆರ್.ಶಂಕರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮಧ್ಯರಾತ್ರಿ 1 ಗಂಟೆಗೆ ಬೆಂಗಳೂರಿನ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

    ಶಂಕರ್ ಜೊತೆಗೆ ಬಿಜೆಪಿ ಶಾಸಕರ ಆರ್.ಅಶೋಕ್ ಮತ್ತು ಅಶ್ವಥ್ ನಾರಾಯಣ್ ಕೂಡ ಇದ್ದರು. ಎಚ್‍ಎಎಲ್‍ನಿಂದ ನೇರವಾಗಿ 5 ಕಾರ್ ನಲ್ಲಿ ಜಾಲಹಳ್ಳಿಯ ಆರ್.ಅಶೋಕ್ ಮನೆಗೆ ಶಂಕರ್ ಅವರನ್ನು ಕರೆದೊಯ್ಯಲಾಯ್ತು.

    ಮುಂಬೈನಿಂದ ನಾಗೇಶ್ ಜೊತೆಗೆ ಬೆಂಗಳೂರಿಗೆಂದು ಹೊರಟಿದ್ದ ರಾಣೆಬೆನ್ನೂರು ಶಾಸಕ ಆರ್.ಶಂಕರ್ ಮಾರ್ಗಮಧ್ಯೆ ನಾಪತ್ತೆಯಾಗಿದ್ದಾರೆ. ಪ್ರತ್ಯೇಕವಾಗಿ ಬರುತ್ತೇನೆ ಎಂದು ನಾಗೇಶ್‍ರನ್ನು ಕಳುಹಿಸಿದ್ದ ಶಂಕರ್, ಬೆಂಗಳೂರಿಗೆ ಬರಲೇ ಇಲ್ಲ. ಮುಂಬೈನಿಂದ ನೇರವಾಗಿ ಹೈದ್ರಾಬಾದ್‍ಗೆ ಹಾರಿದ್ದಾರೆ ಎನ್ನಲಾಗಿದೆ.

    ಇದೀಗ ಶಂಕರ್ ನಡೆ ಕುತೂಹಲ ಕೆರಳಿಸಿದೆ. ಅನರ್ಹತೆ ಭೀತಿಯಿಂದ ಏನಾದ್ರೂ ಉಲ್ಟಾ ಹೊಡೀತಾರಾ ಎಂಬ ಪ್ರಶ್ನೆ ಎದ್ದಿದೆ. ಇನ್ನು ಸ್ಪೀಕರ್, ರಾಜೀನಾಮೆ ಪ್ರಕರಣವನ್ನು ಮೊದಲು ಇತ್ಯರ್ಥ ಮಾಡ್ತಾರಾ? ಅನರ್ಹತೆ ಪ್ರಕರಣವನ್ನು ಇತ್ಯರ್ಥ ಮಾಡ್ತಾರಾ ಅನ್ನೋ ಕುತೂಹಲ ಎಲ್ಲರಲ್ಲಿದೆ.