Tag: ಶಂಕಿತ ಆರೋಪಿ

  • ‘ತುಳು ಭಾಷೆಯಲ್ಲಿ ಮಾತನಾಡುತ್ತಿದ್ದ’- ಶಂಕಿತ ವ್ಯಕ್ತಿಯ ಬಗ್ಗೆ ಆಟೋ ಚಾಲಕ ಹೇಳಿದ್ದೇನು?

    ‘ತುಳು ಭಾಷೆಯಲ್ಲಿ ಮಾತನಾಡುತ್ತಿದ್ದ’- ಶಂಕಿತ ವ್ಯಕ್ತಿಯ ಬಗ್ಗೆ ಆಟೋ ಚಾಲಕ ಹೇಳಿದ್ದೇನು?

    ಮಂಗಳೂರು: ಇಂದು ಬೆಳಗ್ಗೆಯಿಂದ ಆತಂಕಕ್ಕೆ ಕಾರಣವಾಗಿದ್ದ ಮಂಗಳೂರು ಬಾಂಬ್ ಪತ್ತೆ ಪ್ರಕರಣ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರಬಂದಿದೆ. ಶಂಕಿತ ಆರೋಪಿಯನ್ನು ವಿಮಾನ ನಿಲ್ದಾಣದಕ್ಕೆ ಕರೆದುಕೊಂಡ ಬಂದ ಆಟೋ ಚಾಲಕ ಸ್ವತಃ ತಾನೇ ಪೊಲೀಸರ ಎದುರು ಹಾಜರಾಗಿದ್ದಾನೆ.

    ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಪ್‍ಟಾಪ್ ಬ್ಯಾಗ್‍ನಲ್ಲಿ ಸಜೀವ ಬಾಂಬ್ ಒಂದು ಪತ್ತೆಯಾಗಿ ಆತಂಕ ಹುಟ್ಟಿಸಿತ್ತು. ಆದರೆ ಅದನ್ನು ಗಮನಿಸಿದ್ದ ಸಿಬ್ಬಂದಿಗಳು ಬಾಂಬ್ ಸ್ಕ್ವಾಡ್ ಮೂಲಕ ಕೆಂಜಾರು ಮೈದಾನದಕ್ಕೆ ತೆಗೆದುಕೊಂಡು ಸ್ಫೋಟಿಸಿ, ಭಾರೀ ದುರಂತವೊಂದನ್ನು ತಪ್ಪಿಸಿದ್ದರು. ಇದನ್ನು ಓದಿ: ಬಾಂಬ್ ಸ್ಫೋಟಿಸಿದ್ದು ಹೇಗೆ? ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಏನಾಯ್ತು? – ಇಲ್ಲಿದೆ ಪೂರ್ಣ ವಿವರ

    ಆಟೋದಲ್ಲಿ ಬಂದ ಅಪರಿಚಿತನೋರ್ವ ಟಿಕೆಟ್ ಕೌಂಟರ್ ಬಳಿ ಕಪ್ಪು ಬಣ್ಣದ ಬ್ಯಾಗ್ ಇರಿಸಿ ನಾಪತ್ತೆ ಆಗಿದ್ದ. ಮಂಗಳೂರು ವಿಮಾನ ನಿಲ್ದಾಣದ ಸಿಸಿಟಿವಿ ದೃಶ್ಯಗಳ ಫೋಟೋಗಳು ಲಭ್ಯವಾಗಿದ್ದು, ಕ್ಯಾಪ್ ಹಾಕಿರುವ ಒಬ್ಬ ಕೈಯಲ್ಲಿ ಬ್ಯಾಗ್ ಹಿಡಿದಿದ್ದಾನೆ. ಈ ವ್ಯಕ್ತಿ ನಿಲ್ದಾಣದಿಂದ ಹೊರಹೋಗುವುದನ್ನು ಫೋಟೋಗಳು ಸಿಕ್ಕಿದ್ದವು. ಹಾಗೆಯೇ ಶಂಕಿತ ಬಂದಿದ್ದ ಎನ್ನಲಾದ ಆಟೋದ ಎರಡು ಫೋಟೋಗಳು ಸಹ ಲಭಿಸಿತ್ತು. ಇದನ್ನು ಓದಿ: ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಶಂಕಿತ ಇವನೇನಾ?

    ಈ ಫೋಟೋಗಳಲ್ಲಿ ಆರೋಪಿ ವಿಮಾನ ನಿಲ್ದಾಣದಕ್ಕೆ ಆಟೋದಲ್ಲಿ ಬಂದ ಫೋಟೋ ಕೂಡ ಲಭಿಸಿತ್ತು. ಸುದ್ದಿ ತಿಳಿದ ಆಟೋದ ಚಾಲಕ ಪೊಲೀಸ್ ಠಾಣೆಗೆ ಬಂದು ಸ್ವತಃ ಶರಣಾಗಿದ್ದು, ಶಂಕಿತ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದಾನೆ. ನನ್ನ ಆಟೋದಲ್ಲಿ ಬಂದ ಶಂಕಿತ ಆರೋಪಿ ತುಳುನಲ್ಲಿ ಮಾತನಾಡುತ್ತಿದ್ದ. ಜೊತೆಗೆ ನನಗೆ 400 ರೂ. ಬಾಡಿಗೆ ಕೊಟ್ಟು ಪಂಪ್‍ವೆಲ್ ಬಳಿ ಇಳಿದುಕೊಂಡು ಹೋದ ಎಂದು ಹೇಳಿದ್ದಾನೆ. ಆಟೋ ಚಾಲಕನ ಮಾಹಿತಿ ಮೇರೆಗೆ ಮೂರು ವಿಶೇಷ ತಂಡಗಳನ್ನು ರಚಿಸಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

  • ಸಾವಿನ ಪ್ರಸಾದಕ್ಕೆ ತಮಿಳುನಾಡು ನಂಟು- ಆದಾಯ ಬರ್ತಿದ್ದನ್ನು ಕಂಡು ದ್ವೇಷಕ್ಕೆ ವಿಷಪ್ರಾಶನ..?

    ಸಾವಿನ ಪ್ರಸಾದಕ್ಕೆ ತಮಿಳುನಾಡು ನಂಟು- ಆದಾಯ ಬರ್ತಿದ್ದನ್ನು ಕಂಡು ದ್ವೇಷಕ್ಕೆ ವಿಷಪ್ರಾಶನ..?

    ಚಾಮರಾಜನಗರ: ದೇವರ ಪ್ರಸಾದಕ್ಕೆ ವಿಷ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ದೇವಾಲಯದ ನಂಟಿದೆ. ಮಾರಮ್ಮ ದೇವಾಲಯಕ್ಕೆ ಬರುತ್ತಿದ್ದ ಆದಾಯವನ್ನು ಕಂಡು ದ್ವೇಷದಿಂದ ವಿಷಪ್ರಾಶನ ಮಾಡಲಾಗಿದೆ ಎಂದು ಪೊಲೀಸರ ವಶದಲ್ಲಿರುವ ಶಂಕಿತ ಆರೋಪಿ ಚಿನ್ನಪ್ಪ ಪುತ್ರ ಲೋಕೇಶ್ ಆರೋಪಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಲೋಕೇಶ್, ತಮಿಳುನಾಡಿನ ಬ್ರಹ್ಮೇಶ್ವರಿ ದೇವಾಲಯದ ಕಾಳಪ್ಪನವರಿಗೂ ನಮ್ಮ ತಂದೆಗೂ ಆಗುತ್ತಿರಲಿಲ್ಲ. ಮೊದಲು ತಮಿಳುನಾಡಿನ ಅರ್ಚಕರು ದೇವಾಲಯದ ಪೂಜೆ ಮಾಡುತ್ತಿದ್ದರು. ಆದರೆ ಸರಿಯಾದ ರೀತಿಯಲ್ಲಿ ಪೂಜೆ ಮಾಡದ ಕಾರಣ ದೇವಾಲಯದ ಟ್ರಸ್ಟಿ ಆಗಿದ್ದ ನಮ್ಮ ತಂದೆ ಹಾಗೂ ಗ್ರಾಮಸ್ಥರು ಜವಾಬ್ದಾರಿಯನ್ನು ವಹಿಸಿಕೊಂಡರು. ಇದರಿಂದ ಅವರಿಗೆ ದೇವಾಲಯ ಕೈ ತಪ್ಪಿತ್ತು. ಈ ಹಿಂದೆ ಕೂಡ ಸುಮಾರು 1 ಸಾವಿರ ಜನ ಗ್ರಾಮಕ್ಕೆ ಆಗಮಿಸಿ ಜಗಳ ಮಾಡಿದ್ದರು. ಆದರೆ ನಮ್ಮ ಗ್ರಾಮಸ್ಥರು ಊರಿನ ದೇವಾಲಯ ಎಂದು ಅವರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಹಿಂದಿರುಗಿದ್ದರು ಎಂದು ತಿಳಿಸಿದರು.

    ನಮ್ಮ ತಂದೆ ಚಿನ್ನಪ್ಪ ದೇವಾಲಯದ ಜವಾಬ್ದಾರಿ ವಹಿಸಿದ್ದರು, ದೇವಾಲಯವನ್ನು ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಮಾಡಲಾಯಿತು. ಇದರಿಂದ ದೇವಾಲಯದ ಆದಾಯದ ಹೆಚ್ಚಾಗುವ ನಿರೀಕ್ಷೆ ಇತ್ತು. ಇದನ್ನು ಸಹಿಸಲಾದ ಮಂದಿ ಈಗ ನಮ್ಮನ್ನು ಕೊಲೆ ಮಾಡಲು ಈ ರೀತಿ ಪ್ಲಾನ್ ಮಾಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ದೇವರ ಪ್ರಸಾದವನ್ನು ಭಕ್ತರಿಗೆ ನೀಡಲು ಮಾಡಿರಲಿಲ್ಲ. ಕೇವಲ ನಮಗಾಗಿ ಸಣ್ಣ ಪ್ರಮಾಣದಲ್ಲಿ ಮಾಡಲಾಗಿತ್ತು. ಆದರೆ ಓಂ ಶಕ್ತಿ ಭಕ್ತರು ಬೇರೆ ದೇವಾಲಯಕ್ಕೆ ಹೋಗುವ ಹಿನ್ನೆಲೆಯಲ್ಲಿ ಪ್ರಸಾದ ಕೇಳಿದ್ದರು. ಆದ್ದರಿಂದಲೇ ನಮಗೆ ಮಾಡಿದ್ದ ಪ್ರಸಾದ ಅವರಿಗೆ ನೀಡಲಾಯಿತು ಎಂದು ಸ್ಪಷ್ಟನೆ ನೀಡಿದರು.

    ಒಂದೊಮ್ಮೆ ಭಕ್ತರು ಪ್ರಸಾದ ಸೇವನೆ ಮಾಡದೇ ಇದ್ದಿದ್ದರೆ ದೇವಾಲಯದ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಮಾತ್ರ ಪ್ರಸಾದ ಸೇವಿಸಿ ಸಾವನ್ನಪ್ಪುತ್ತಿದ್ದರು. ಆದರೆ ಈ ಕುತಂತ್ರಕ್ಕೆ ಭಕ್ತರು ಬಲಿಯಾಗಿದ್ದಾರೆ. ಈ ಹಿಂದೆ ಗ್ರಾಮಕ್ಕೆ ಬಂದ ವೇಳೆಯೂ ನಮಗೇ ದೇವಾಲಯ ನೀಡಬೇಕು ಎಂದು ತಮಿಳುನಾಡು ದೇವಾಲಯದ ಮಂದಿ ಎಚ್ಚರಿಕೆ ನೀಡಿದ್ದರು. ಆಗ ಹಿರಿಯರ ಸಮ್ಮುಖದಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿತ್ತು. ಆದ್ರೆ ಈ ರೀತಿ ನಮ್ಮ ಮೇಲೆ ದ್ವೇಷ ಸಾಧಿಸುತ್ತಾರೆ ಎಂಬ ಊಹೆಯೂ ನಮಗೆ ಇಲ್ಲ. ಪ್ರಸಾದ ತಯಾರು ಮಾಡಿದ ಅರ್ಚಕರ ಅಂಗವಿಕಲ ಪುತ್ರಿ, ನಮ್ಮ ಸಂಬಂಧಿಯೊಬ್ಬರು ಕೂಡ ಮೃತ ಪಟ್ಟಿದ್ದಾರೆ. ಪ್ರಸಾದ ತಯಾರು ಮಾಡಿದವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಆದರೆ ಪೊಲೀಸ್ ಠಾಣೆಯಲ್ಲೇ ಅವರು ಕೂಡ ವಾಂತಿ ಮಾಡಿಕೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

    ದೇವಾಲಯದ ಅಭಿವೃದ್ಧಿ ಮಾಡಿದ ಹಿನ್ನೆಲೆಯಲ್ಲಿ ದೇವಿ ಮಾರಮ್ಮ ನಮ್ಮ ರಕ್ಷಣೆ ಮಾಡಿದೆ. ಆದರೆ ಭಕ್ತರು ಬಂದು ಆಹಾರ ಕೇಳದಿದ್ದರೆ ನಾವು, ನಮ್ಮ ಗ್ರಾಮಸ್ಥರು ಸಾವನ್ನಪ್ಪುತ್ತಿದ್ದೆವು. ಸದ್ಯ ನಮ್ಮ ತಂದೆ ಪೊಲೀಸರ ವಶದಲ್ಲಿ ಇದ್ದು, ನಮಗೆ ಮಾತನಾಡಲು ಅವಕಾಶ ನೀಡಿಲ್ಲ. ಆದರೆ ಪೊಲೀಸರೇ ನಮಗೆ ಕರೆ ಮಾಡಿ ಬಂಧನ ಮಾಡಬೇಕೆಂದು ಹೇಳಿದ್ದರು. ಆದರೆ ನಾನೇ ಪೊಲೀಸರಿಗೆ ಮಾಹಿತಿ ನೀಡಿ ನೇರ ಠಾಣೆಗೆ ಬರುವುದಾಗಿ ತಿಳಿಸಿ ಕಳುಹಿಸಿದ್ದೇವೆ. ಅಲ್ಲದೇ ದೇವಾಲಯದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಅವರಿಗೂ ಆಹ್ವಾನ ನೀಡಲಾಗಿತ್ತು. ಆದರೆ ಅವರ ಕಡೆಯವರು ಯಾರು ಬಂದ ಹಾಗೇ ಕಾಣಲಿಲ್ಲ. ದೇವಾಲಯದ ಪೂಜೆ ಕಾರ್ಯ ನಡೆದ ಕಾರಣ ಈ ಕುರಿತು ಹೆಚ್ಚಿನ ಗಮನಹರಿಸಲು ಸಾಧ್ಯವಾಗಿಲ್ಲ. ಈ ಕುರಿತು ತನಿಖೆ ನಡೆಸಿ ತಪ್ಪು ಮಾಡಿದವರಿಗೆ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಿದರು.

    https://www.youtube.com/watch?v=pU5B9V-A7NA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv