Tag: ಶಂಕುಸ್ಥಾಪನೆ

  • ಬಿಹಾರ ಚುನಾವಣೆ ಹೊತ್ತಲ್ಲೇ ಸೀತಾ ಮಂದಿರಕ್ಕೆ ಪ್ಲ್ಯಾನ್‌ – 882 ಕೋಟಿಯ ದೇಗುಲಕ್ಕಿಂದು ಅಮಿತ್ ಶಾ ಶಂಕುಸ್ಥಾಪನೆ

    ಬಿಹಾರ ಚುನಾವಣೆ ಹೊತ್ತಲ್ಲೇ ಸೀತಾ ಮಂದಿರಕ್ಕೆ ಪ್ಲ್ಯಾನ್‌ – 882 ಕೋಟಿಯ ದೇಗುಲಕ್ಕಿಂದು ಅಮಿತ್ ಶಾ ಶಂಕುಸ್ಥಾಪನೆ

    ಪಾಟ್ನಾ: ಬಿಹಾರ ಚುನಾವಣೆ (Bihar Election) ಹೊತ್ತಲ್ಲೇ ರಾಜ್ಯದಲ್ಲಿ ಸೀತಾ ಮಂದಿರಕ್ಕೆ (Sita Mandir) ಯೋಜನೆ ಹಾಕಿಕೊಂಡಿದ್ದು, 882 ಕೋಟಿ ರೂ. ವೆಚ್ಚದಲ್ಲಿ ದೇಗುಲದ ಪುನರ್ ಅಭಿವೃದ್ಧಿ ಕಾಮಗಾರಿಗೆ ಇಂದು (ಆ.8) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

    ಸೀತಾ ದೇವಿಯ ಜನ್ಮಸ್ಥಳವೆಂದು ಪರಿಗಣಿಸಲಾದ ಬಿಹಾರದ (Bihar) ಸೀತಾಮರ್ಹಿ (Sitamarhi) ಜಿಲ್ಲೆಯ ಪುನೌರಾಧಂನಲ್ಲಿರುವ ಜಾನಕಿ ಮಂದಿರದ ಪುನರ್ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. 67 ಎಕರೆ ವ್ಯಾಪ್ತಿಯಲ್ಲಿರುವ ದೇವಸ್ಥಾನದ ಕಾಮಗಾರಿಯನ್ನು 11 ತಿಂಗಳೊಳಗೆ ಪೂರ್ಣಗೊಳಿರುವ ಸಾಧ್ಯತೆಯಿದ್ದು, 882 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ಪ್ಲ್ಯಾನ್‌ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ನಿತೀಶ್ ಕುಮಾರ್ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ.ಇದನ್ನೂ ಓದಿ: ಆನ್‌ಲೈನ್ ಗೇಮ್ ಆಡಲು ಹಣಕ್ಕಾಗಿ ಟಾರ್ಚರ್; ಸ್ವಂತ ಅಳಿಯನನ್ನೇ ಕೊಂದ ಮಾವ

    ಶಂಕುಸ್ಥಾಪನೆಗೆ 112 ನದಿಗಳಿಂದ ಪವಿತ್ರ ನೀರು ಹಾಗೂ 36 ಪವಿತ್ರ ಸ್ಥಳಗಳಿಂದ ಮಣ್ಣನ್ನು ತರಲಾಗಿದ್ದು, ಇಂದು ಮಧ್ಯಾಹ್ನ 2 ರಿಂದ 3:15 ಒಳಗಡೆ ಈ ಕಾರ್ಯಕ್ರಮ ನಡೆಯಲಿದೆ. ಕಾಶಿ, ದರ್ಭಾಂಗ ಮತ್ತು ಇತರ ನಗರಗಳ ಆರು ಆಚಾರ್ಯರು ಶಂಕುಸ್ಥಾಪನೆಯ ನೇತೃತ್ವ ವಹಿಸಲಿದ್ದಾರೆ. ಅಯೋಧ್ಯೆ, ವೃಂದಾವನ, ಮಥುರಾ, ಜನಕಪುರ ಮತ್ತು ವಾರಣಾಸಿಯಿಂದ ನೂರಾರು ಸಂತರು ಮತ್ತು ಋಷಿಗಳು ಭಾಗವಹಿಸುವ ನಿರೀಕ್ಷೆಯಿದೆ.

    ಅಯೋಧ್ಯೆಯ ರಾಮ ಮಂದಿರದ ವಾಸ್ತುಶಿಲ್ಪಿ ಚಂದ್ರಕಾಂತ್ ಸೋಂಪುರ ವಿನ್ಯಾಸಗೊಳಿಸಿದ ಈ ದೇವಾಲಯವು 151 ಅಡಿ ಎತ್ತರವಿದ್ದು, 67 ಎಕರೆಗೂ ಹೆಚ್ಚು ವಿಸ್ತೀರ್ಣದಲ್ಲಿದೆ. ದೇವಾಲಯದ ಆವರಣವು ಮರಗಳು ಸೇರಿದಂತೆ ಹಚ್ಚಹಸಿರು ಜಾಗವನ್ನು ಹೊಂದಿದೆ. ಇಲ್ಲಿ ಸೀತಾ ವನ, ಲವ-ಕುಶ ವನ, ಪ್ರದರ್ಶನ ಮಂಟಪ, ವೇದ ಶಾಲೆ, ವಸ್ತುಸಂಗ್ರಹಾಲಯ, ಅತಿಥಿಗೃಹ, ಪಾರ್ಕಿಂಗ್ ವ್ಯವಸ್ಥೆ ಮತ್ತು ಸಾಂಸ್ಕೃತಿಕ ಸ್ಥಳಗಳನ್ನು ಒಳಗೊಂಡಿದೆ.

    ಶಂಕುಸ್ಥಾಪನೆ ಬಳಿಕ ಅಮಿತ್ ಶಾ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವ ಸಾಧ್ಯತೆಯಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆ ಈ ಕಾರ್ಯಕ್ರಮ ರಾಜಕೀಯವಾಗಿ ಮಹತ್ವದ್ದು ಎನ್ನಲಾಗಿದೆ. 2023ರಲ್ಲಿ ನಿತೀಶ್ ಕುಮಾರ್ ಅವರು ದೇವಾಲಯದ ಆವರಣಕ್ಕಾಗಿ 72 ಕೋಟಿ ರೂ. ಮಂಜೂರು ಮಾಡಿದ್ದರು. ಇದೀಗ ಎನ್‌ಡಿಎ ಸರ್ಕಾರವು ಸಂಪೂರ್ಣ ಯೋಜನೆಗಾಗಿ 882 ಕೋಟಿ ರೂ.ಯನ್ನು ಮಂಜೂರು ಮಾಡಿದೆ. ಇದನ್ನೂ ಓದಿ: ಆಂಜನೇಯ ದೇಗುಲ ನಿರ್ಮಾಣಕ್ಕೆ 1.83 ಲಕ್ಷ ದೇಣಿಗೆ ನೀಡಿದ ಭಿಕ್ಷುಕಿ

  • ವಾರಣಾಸಿಯಲ್ಲಿ 6,700 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ

    ವಾರಣಾಸಿಯಲ್ಲಿ 6,700 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಶಂಕುಸ್ಥಾಪನೆ

    ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ತಮ್ಮ ಸಂಸದೀಯ ಕ್ಷೇತ್ರವಾದ ವಾರಣಾಸಿಯಲ್ಲಿ (Varanasi) 6,700 ಕೋಟಿ ರೂ. ಮೌಲ್ಯದ 23 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

    ಭಾನುವಾರ ಪ್ರಧಾನಿಯವರು ನಗರದಲ್ಲಿ ಕಂಚಿ ಮಠದ ವತಿಯಿಂದ ನಡೆಯುತ್ತಿರುವ ಆರ್.ಜೆ ಶಂಕರ ನೇತ್ರಾಲಯವನ್ನು ಉದ್ಘಾಟಿಸಿ ಮಾತನಾಡಿ, ಇಂದು ಕಾಶಿಗೆ ಮಹತ್ವದ ದಿನ. ಮುಂಜಾನೆ ನಾನು ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದೆ. ಆರ್‌.ಜೆ ಶಂಕರ ನೇತ್ರಾಲಯವು ವೃದ್ಧರು ಮತ್ತು ಮಕ್ಕಳಿಗೆ ಸಾಕಷ್ಟು ಸಹಾಯವನ್ನು ಮಾಡುತ್ತದೆ ಎಂದರು. ಇದನ್ನೂ ಓದಿ: ಚನ್ನಪಟ್ಟಣ ಟಿಕೆಟ್‌ ಕಗ್ಗಂಟು – ದೆಹಲಿಗೆ ಹೊರಟ ವಿಜಯೇಂದ್ರ

    ದೇಶಕ್ಕೆ ಮೂರನೇ ಬಾರಿ ಸೇವೆ ಸಲ್ಲಿಸಲು ಜನರು ನನ್ನನ್ನು ಆಶೀರ್ವದಿಸಿದ ನಂತರ, ನಾವು ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ದೇಶದಲ್ಲಿ 15 ಲಕ್ಷ ಕೋಟಿ ರೂ ಮೌಲ್ಯಕ್ಕೂ ಹೆಚ್ಚಿನ ಯೋಜನೆಗಳಿಗೆ ಕೆಲಸ ಮಾಡಲು ಪ್ರಾರಂಭಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಮೀಸಲು ಅರಣ್ಯ ಪ್ರದೇಶದಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ತಡೆ – ಅರಸೀಕೆರೆ ಕೆರೆಗಳಿಗೆ ಹರಿಯದ ನೀರು

    ಕೇಂದ್ರದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದವರು ಕಾಶಿ ಅಭಿವೃದ್ಧಿಗೆ ಗಮನ ಹರಿಸಿಲ್ಲ. ಅವರು ಕಾಶಿ (Kashi) ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಿದ್ದಾರೆ. ಕಾಶಿಯ ಅಭಿವೃದ್ಧಿ ಅವರ ಆದ್ಯತೆಯಾಗಿರಲಿಲ್ಲ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: 6 ಇಂಡಿಗೋ ವಿಮಾನಗಳಲ್ಲಿ 12 ಬಾಂಬ್‌ – ಬೆಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೊಂದು ಬೆದರಿಕೆ

  • ಕಲ್ಕಿಧಾಮ ದೇಗುಲಕ್ಕೆ ಮೋದಿ ಶಂಕುಸ್ಥಾಪನೆ- ಇದು ನನ್ನ ಸೌಭಾಗ್ಯವೆಂದ ಪ್ರಧಾನಿ

    ಕಲ್ಕಿಧಾಮ ದೇಗುಲಕ್ಕೆ ಮೋದಿ ಶಂಕುಸ್ಥಾಪನೆ- ಇದು ನನ್ನ ಸೌಭಾಗ್ಯವೆಂದ ಪ್ರಧಾನಿ

    ಲಕ್ನೋ: ಅಯೋಧ್ಯೆ ರಾಮಮಂದಿರದ (Ayodhya Ram mandir) ಬಳಿಕ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು ಉತ್ತರಪ್ರದೇಶದ ಸಂಭಾಲ್‌ನಲ್ಲಿ ಮತ್ತೊಂದು ಹಿಂದೂ ದೇಗುಲ ಶ್ರೀ ಕಲ್ಕಿಧಾಮದ ಶಂಕುಸ್ಥಾಪನೆಯನ್ನು ನೆರವೇರಿಸಿದರು.

    ಉತ್ತರ ಪ್ರದೇಶ (Uttarpradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಮತ್ತು ಕಲ್ಕಿಧಾಮ (Kalki Dham) ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರೊಂದಿಗೆ ಆಗಮಿಸಿದ ಮೋದಿ ಅವರು ಮೊದಲು ದೇವಾಲಯದ ಮಾದರಿಯನ್ನು ಅನಾವರಣಗೊಳಿಸಿದರು. ನಂತರ ಶಂಕುಸ್ಥಾಪನೆ ನೆರವೇರಿಸಿದರು.

    ಬಳಿಕ ಮಾತನಾಡಿದ ಪ್ರಧಾನಿ, ಇಂದು ಛತ್ರಪತಿ ಶಿವಾಜಿ ಮಹಾರಾಜರ (Chhatrapati Shivaji Maharaj) ಜನ್ಮದಿನವೂ ಆಗಿದೆ. ಆದ್ದರಿಂದ ಈ ದಿನವು ಹೆಚ್ಚು ಪವಿತ್ರ ಮತ್ತು ಹೆಚ್ಚು ಸ್ಪೂರ್ತಿದಾಯಕವಾಗಿದೆ. ಈ ಸಂದರ್ಭದಲ್ಲಿ ನಾನು ಛತ್ರಪತಿ ಶಿವಾಜಿ ಮಹಾರಾಜರಿಗೆ ಗೌರವಪೂರ್ವಕವಾಗಿ ನಮಸ್ಕರಿಸುವುದಾಗಿ ತಿಳಿಸಿದರು. ಇದನ್ನೂ ಓದಿ: ಏ.13ರಿಂದ 23ರ ವರೆಗೆ ವಿಶ್ವವಿಖ್ಯಾತ ಬೆಂಗಳೂರು ಕರಗ

    ಇಂದು ಸಂತರ ಭಕ್ತಿ ಮತ್ತು ಸಾರ್ವಜನಿಕರ ಉತ್ಸಾಹದಿಂದ ಮತ್ತೊಂದು ಪುಣ್ಯ ಕ್ಷೇತ್ರಕ್ಕೆ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಆಚಾರ್ಯರು ಮತ್ತು ಸಂತರ ಸಮ್ಮುಖದಲ್ಲಿ ಭವ್ಯವಾದ ಕಲ್ಕಿ ಧಾಮದ ಶಂಕುಸ್ಥಾಪನೆ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಕಲ್ಕಿಧಾಮವು ಭಾರತೀಯ ನಂಬಿಕೆಯ ಮತ್ತೊಂದು ಧಾರ್ಮಿಕ ಕೇಂದ್ರವಾಗಿ ಹೊರಹೊಮ್ಮಲಿದೆ ಎಂಬ ವಿಶ್ವಾಸ ನನಗಿದೆ ಎಂದರು.

    ಈ ಕಾರ್ಯಕ್ರಮದಲ್ಲಿ ದೇಶದ ನಾನಾ ಭಾಗಗಳಿಂದ ಆಗಮಿಸಿದ್ದ ಧರ್ಮಗುರುಗಳು ಹಾಗೂ ಧರ್ಮಗುರುಗಳು ಪಾಲ್ಗೊಂಡಿದ್ದರು. ಶ್ರೀ ಕಲ್ಕಿ ಧಾಮದ ನಿರ್ಮಾಣವನ್ನು ಕೃಷ್ಣಂ ಅವರ ಅಧ್ಯಕ್ಷತೆಯ ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ನೋಡಿಕೊಳ್ಳುತ್ತದೆ.

  • ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಶೆಟ್ಟರ್, ಜೋಶಿ ಭೂಮಿ ಪೂಜೆ

    ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಶೆಟ್ಟರ್, ಜೋಶಿ ಭೂಮಿ ಪೂಜೆ

    ಹುಬ್ಬಳ್ಳಿ: ನಗರದ ವಿದ್ಯಾನಗರ ಸನ್ಮಾಶನದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗಾರದ ಭೂಮಿ ಪೂಜೆಯನ್ನು ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ನೆರವೇರಿಸಿದರು.

    ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್, ಕೆನರಾ ಬ್ಯಾಂಕ್‍ನ ಸಾಮಾಜಿಕ ಹೊಣೆಗಾರಿಕಾ ನಿಧಿಯಡಿ ವಿದ್ಯಾನಗರ ಸ್ಮಶಾನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ, 11 ಲಕ್ಷ ವೆಚ್ಚದ ಫ್ರೀಜರ್ ಬಾಕ್ಸ್‍ಗಳನ್ನು ಒದಗಿಸಲಾಗುತ್ತಿದೆ. ಕಾಮಗಾರಿಯನ್ನು ಧಾರವಾಡದ ನಿರ್ಮಿತಿ ಅನುಷ್ಠಾನಗೊಳಿಸುತ್ತಿದೆ. ಆಗಸ್ಪ್ 31ರ ಒಳಗಾಗಿ ನಿರ್ಮಾಣಕ್ಕೆ ಗಡುವು ನೀಡಲಾಗಿದೆ ಎಂದರು.

    ನಗರದ ಮಂಟೂರು ಹರಿಶ್ಚಂದ್ರ ಸನ್ಮಾಶನದಲ್ಲಿ ಸ್ಮಾರ್ಟ್ ಸಿಟಿ ಅನುದಾನ ಅಡಿ 2.60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವಿದ್ಯುತ್ ಚಿತಾಗರದ ಕಾಮಗಾರಿ ಪ್ರಗತಿಯಲ್ಲಿದೆ. ಹೆಗ್ಗೇರಿ ಸ್ಮಶಾನದಲ್ಲಿ 1.20 ಕೋಟಿ ವೆಚ್ಚದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರವಾಗಿ ಕಾಮಗಾರಿ ಆರಂಭಿಸಲಾಗುತ್ತಿದೆ. ಅಲ್ಲದೆ ಆನಂದ ನಗರ ಸನ್ಮಾಶನದಲ್ಲಿ 74 ಲಕ್ಷ ವೆಚ್ಚದಲ್ಲಿ ಗ್ಯಾಸ್ ಆಧಾರಿತ ಚಿತಾಗರ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಧಾರವಾಡ ಹೊಸ ಯಲ್ಲಾಪುರ ಸ್ಮಶಾನದಲ್ಲಿ 4.40 ಲಕ್ಷ ವೆಚ್ಚದಲ್ಲಿ ಗ್ಯಾಸ್ ಕ್ರಿಮೇಷನ್ ಚೆಂಬರ್ ಅಳವಡಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಬಸವಣ್ಣನ ಅನುಭವ ಮಂಟಪ ನೆನೆದ ಪ್ರಧಾನಿ ಮೋದಿ- ಕನ್ನಡದಲ್ಲಿ ಭಾಷಣ

    ಬಸವಣ್ಣನ ಅನುಭವ ಮಂಟಪ ನೆನೆದ ಪ್ರಧಾನಿ ಮೋದಿ- ಕನ್ನಡದಲ್ಲಿ ಭಾಷಣ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನಕ್ಕೆ ಇಂದು ಶಂಕು ಸ್ಥಾಪನೆ ನೆರವೇರಿಸಿದರು. ಈ ವೇಳೆ ನೂತನ ಸಂಸತ್ ಭವನದ ಮಾದರಿಯನ್ನು ಸಹ ಬಿಡುಗಡೆಗೊಳಿಸಿದರು. ಕೇಂದ್ರ ಸಚಿವರು, ಧಾರ್ಮಿಕ ಪ್ರಮುಖರು ಸೇರಿದಂತೆ ವಿವಿಧ ಗಣ್ಯರು ಭಾಗಿಯಾಗಿದ್ದರು. ಇದೇ ವೇಳೆ ಬಸವಣ್ಣನವರ ಅನುಭವ ಮಂಟಪ ನೆನೆದು ಕನ್ನಡದಲ್ಲಿ ಮಾತನಾಡಿದರು.

    ನವದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ಸಂಸತ್ ಭವನದ ಭೂಮಿ ಪೂಜೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಗಣ್ಯರು ಭಾಗವಹಿಸಿದ್ದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪೂರಿ ಹಾಗೂ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

    ಈ ಅನುಭವ ಮಂಟಪ ಜನಸಭೆ ನಾಡಿನ ಒಟ್ಟು ರಾಷ್ಟ್ರದ ಉನ್ನತಿ ಹಾಗೂ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತದೆ. ಈ ಅನುಭವ ಮಂಟಪ ರಾಜ್ಯ, ರಾಷ್ಟ್ರದ ಉನ್ನತಿಗಾಗಿ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ. ಅನುಭವ ಮಂಟಪ ರಾಷ್ಟ್ರದ ಹಿತಕ್ಕಾಗಿ ಕೆಲಸ ಮಾಡುತ್ತದೆ ಎಂದು ಕನ್ನಡದಲ್ಲೇ ಮಾತನಾಡಿದರು.

    ಇಂದು ಐತಿಹಾಸಿಕ ದಿನವಾಗಿದ್ದು, ಹೊಸ ಸಂಸತ್ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಹೊಸ ಸಂಸತ್ ಭವನವನ್ನು ಭಾರತೀಯರೆಲ್ಲರೂ ಸೇರಿ ನಿರ್ಮಿಸೋಣ. ಇದು 130 ಕೋಟಿ ಭಾರತೀಯರು ಹೆಮ್ಮೆಪಡುವ ದಿನವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ನಾವು ಸಾಕ್ಷಿಯಾಗುತ್ತಿದ್ದೇವೆ. ಹೊಸ ಸಂಸತ್ ಭವನವು ಹೊಸ ಮತ್ತು ಹಳೆಯ ಸಹಬಾಳ್ವೆಯ ಉದಾಹರಣೆಯಾಗಿದೆ. ಸಮಯ ಮತ್ತು ಅಗತ್ಯತೆಗಳಿಗೆ ಅನುಗುಣವಾಗಿ ನಮ್ಮೊಳಗೇ ಬದಲಾವಣೆ ಮಾಡಿಕೊಳ್ಳುವ ಪ್ರಯತ್ನವಿದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

    ಪ್ರಸ್ತುತ ಇರುವ ಸಂಸತ್ ಭವನವು 100 ವರ್ಷ ಹಳೆಯದಾಗಿದ್ದು, ಹಲವು ಬಾರಿ ಉನ್ನತೀಕರಿಸಲಾಗಿದೆ. ಈಗ ಅದಕ್ಕೆ ವಿಶ್ರಾಂತಿ ಅವಶ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಭಾರತ 75ನೇ ಸ್ವಾತಂತ್ರೋತ್ಸವ ಆಚರಿಸುವ ಸುಸಂದರ್ಭದಲ್ಲಿ ಹೊಸ ಸಂಸತ್ ಭವನ ಹೊಂದುವುದಕ್ಕಿಂತ ಸುಂದರ, ಪವಿತ್ರ ದಿನ ಮತ್ಯಾವುದಿದೆ? ಹೊಸ ಸಂಸತ್ ಭವನವು ‘ಆತ್ಮನಿರ್ಭರ ಭಾರತ’ದ ಗುರಿಯನ್ನು ಸಾಧಿಸಲು ಹಾಗೂ 21ನೇ ಶತಮಾನದ ಮಹತ್ವಾಕಾಂಕ್ಷೆಯನ್ನು ಪೂರೈಸಲು ಸಹಾಯವಾಗಲಿದೆ. ಸ್ವಾತಂತ್ರ್ಯದ ಬಳಿಕ ಹಳೆಯ ಸಂಸತ್ ಕಟ್ಟಡ ಹೊಸ ದಿಕ್ಕು ನೀಡಿತು. ಆದರೆ ಹೊಸ ಕಟ್ಟಡ ಆತ್ಮನಿರ್ಭರ ಭಾರತಕ್ಕೆ ಸಾಕ್ಷಿಯಾಗಲಿದೆ ಎಂದರು.

    2014ರಲ್ಲಿ ಮೊದಲ ಭಾರಿಗೆ ಪ್ರಧಾನ ಮಂತ್ರಿಯಾಗಿ ಕಾಲಿಟ್ಟ ಸಂದರ್ಭವನ್ನು ಜೀವನದಲ್ಲಿ ನಾನೆಂದೂ ಮರೆಯುವುದಿಲ್ಲ. ಪ್ರಜಾಪ್ರಭುತ್ವದ ಈ ದೇವಸ್ಥಾನಕ್ಕೆ ಕಾಲಿಡುವ ಮುನ್ನ ಹಣೆ ಹಚ್ಚಿ ನಮಸ್ಕರಿಸಿ ಬಂದಿದ್ದೇನೆ. ಎಲ್ಲ ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕರಿಗೆ ಉತ್ತರದಾಯಿಗಳು ಎಂಬುದುನ್ನು ಮರೆಯಬಾರದು ಎಂದು ತಿಳಿಸಿದರು.

    ಮಾಜಿ ಪ್ರಧಾನಿಗಳು, ಮಾಜಿ ಲೋಕಸಭಾ ಸ್ಪೀಕರ್‍ಗಳು, ಸರ್ವಪಕ್ಷಗಳ ನಾಯಕರು ಭಾಗಿಯಾಗಿದ್ದರು. ಇನ್ನೂ ವಿಶೇಷ ಎಂಬಂತೆ 12 ಧಾರ್ಮಿಕ ಪ್ರಮುಖರು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಹರಿವಂಶ್ ನಾರಾಯಣ್ ಸಿಂಗ್ ಅವರಿಗೆ ಸಂದೇಶ ಬೋಧಿಸಿದರು.

    ಹೊಸ ಕಟ್ಟಡವು ‘ಆತ್ಮನಿರ್ಭರ ಭಾರತ’ದ ದೂರ ದೃಷ್ಟಿಯ ಒಂದು ಭಾಗವಾಗಿದೆ. ಅಲ್ಲದೆ ಸ್ವಾತಂತ್ರ್ಯದ ಬಳಿಕ ಮೊದಲ ಬಾರಿಗೆ ಜನರ ಸಂಸತ್‍ನ್ನು ನಿರ್ಮಿಸುವ ಒಂದು ಹೆಗ್ಗುರುತಾಗಿದೆ. ಹೊಸ ಭಾರತದ ಅಗತ್ಯತೆಗಳು ಹಾಗೂ ಆಕಾಂಕ್ಷೆಗಳಿಗೆ ಹೊಂದಿಕೆಯಾಗುವ ರೀತಿಯಲ್ಲಿ ಸಂಸತ್ ಭವನ ನಿರ್ಮಿಸಲಾಗುತ್ತಿದೆ. 75ನೇ ಸ್ವಾತಂತ್ರ್ಯೋತ್ಸವ ಅಂದರೆ 2022ಕ್ಕೆ ಲೋಕಾರ್ಪಣೆಯಾಗಲಿದೆ ಎಂದು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದೆ.

    ಸ್ಪೀಕರ್ ಓಂ ಬಿರ್ಲಾ ಟವರು ಈ ಕುರಿತು ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷ ಪೂರೈಸುತ್ತದೆ. ಅಂದೇ ಸರ್ಕಾರದ ಎರಡೂ ಮನೆಯ ಕಲಾಪಗಳು ಹೊಸ ಸಂಸತ್ ಭವನದಲ್ಲಿ ನಡೆಯಲಿವೆ. ಆಗಸ್ಟ್ 15, 2021ರಂದು 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದರು.

  • ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ ಬಿಎಸ್‍ವೈ ಶಂಕುಸ್ಥಾಪನೆ

    ಮುಖ್ಯಮಂತ್ರಿಗಳ 1 ಲಕ್ಷ ಮನೆ ಯೋಜನೆಗೆ ಬಿಎಸ್‍ವೈ ಶಂಕುಸ್ಥಾಪನೆ

    ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿಗಳ ಒಂದು ಲಕ್ಷ ಬಹು ಮಹಡಿ ಕಟ್ಟಡ ಯೋಜನೆಗೆ ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ಶಂಕು ಸ್ಥಾಪನೆ ಮಾಡಿದರು. ಬೆಂಗಳೂರಿನಲ್ಲಿ ಬಡವರಿಗಾಗಿ ಮನೆ ನಿರ್ಮಾಣ ಮಾಡುವ ಯೋಜನೆ ಇದಾಗಿದ್ದು, ಮುಂದಿನ ವರ್ಷದ ವೇಳೆಗೆ ಫಲಾನುಭವಿಗಳಿಗೆ ಮನೆಗಳು ಲಭ್ಯವಾಗಲಿದೆ.

    ದಾಸರಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಗಾಣಿಗರಹಳ್ಳಿಯ ಸರ್ವೆ ನಂಬರ್ 74 ರಲ್ಲಿ ಸುಮಾರು 932 ಬಹುಮಹಡಿ ಮನೆಗಳಿಗೆ ಶಂಕು ಸ್ಥಾಪನೆ ಮಾಡಲಾಯ್ತು. ರಾಜೀವ್ ಗಾಂಧಿ ವಸತಿ ನಿಗಮದಿಂದ ಈ ಬಹುಮಹಡಿ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದೆ.

    ಬೆಂಗಳೂರಿನಲ್ಲಿ ಆರ್ಥಿಕವಾಗಿ ಹಿಂದುಳಿದ, ಬಡವರಿಗಾಗಿ ಸೂರು ನೀಡುವ ಯೋಜನೆ ಇದಾಗಿದೆ. ಕಡಿಮೆ ಹಣದಲ್ಲಿ ಮನೆಗಳನ್ನ ಬಡವರಿಗೆ ಈ ಯೋಜನೆಯಲ್ಲಿ ನೀಡಲಾಗುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆ ಘೋಷಣೆ ಮಾಡಿದ್ದರು. ಬೆಂಗಳೂರಿನ ಹಲವೆಡೆ ಜಾಗಗಳನ್ನ ಗುರುತಿಸಿ ಅಲ್ಲಿ ನಿರ್ಮಾಣ ಮಾಡಿ ಬಡವರಿಗೆ ಹಂಚಿಕೆ ಮಾಡಲಾಗುತ್ತದೆ. ಈಗಾಗಲೇ 4-5 ಕಡೆ ಮನೆಗಳ ನಿರ್ಮಾಣ ಕೆಲಸ ಪ್ರಾರಂಭವಾಗಿದ್ದು, ಮೊದಲ ಹಂತದ ಮನೆಗಳು ಇನ್ನೊಂದು ವರ್ಷದಲ್ಲಿ ಪೂರ್ಣವಾಗುವ ಸಾಧ್ಯತೆಇದೆ.

    ಶಂಕು ಸ್ಥಾಪನೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ ಪ್ರಧಾನಿ ನರೇಂದ್ರ ಮೋದಿಯವರ ಅಪೇಕ್ಷೆಯಂತೆ ಬಡವರಿಗೆ ಮನೆ ಕಟ್ಟಿಕೊಡುತ್ತಿದ್ದೇವೆ. ಎಲ್ಲಾ ಬಡವರಿಗೂ ಮನೆ ಕೊಡ್ತೀವಿ ಅಂತ ತಿಳಿಸಿದರು. ಬೆಂಗಳೂರಿನಲ್ಲಿ ಸರ್ಕಾರ ಭೂಮಿ ಅನೇಕ ಕಡೆ ಒತ್ತುವರಿ ಆಗಿದೆ. ಒತ್ತುವರಿ ಆಗಿರುವ ಜಾಗವನ್ನು ತೆರವು ಮಾಡಿ ಅಲ್ಲಿ ಬಡವರಿಗೆ ಮನೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

  • ಡಿಜಿಟಲ್ ಲಾಂಚ್-ಶಹಾಪುರ ಪದವಿ ಕಾಲೇಜು ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಮೋದಿ

    ಡಿಜಿಟಲ್ ಲಾಂಚ್-ಶಹಾಪುರ ಪದವಿ ಕಾಲೇಜು ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ ಮೋದಿ

    ಯಾದಗಿರಿ: ರಾಜ್ಯದಲ್ಲೇ ಮೊದಲ ಬಾರಿಗೆ ಸರ್ಕಾರಿ ಪದವಿ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ವಿಡಿಯೋ ಕಾನ್ಫರೆನ್ಸ್ ನ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಲಾಂಚ್ ಮಾಡಿದ್ದಾರೆ.

    ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ರಾಷ್ಟ್ರೀಯ ಉಚ್ಚತರ್ ಶಿಕ್ಷಾ ಅಭಿಯಾನದಡಿ (ಆರ್ ಯುಎಸ್‍ಎ) ಕಾಲೇಜು ಮಂಜೂರು ಆಗಿತ್ತು. ದೇಶದ ವಿವಿದ ರಾಜ್ಯಗಳಲ್ಲಿ ಯೋಜನೆ ಅಡಿ ಕಾಲೇಜು ಮಂಜೂರು ಮಾಡಲಾಗಿದ್ದು, ವೇಗವಾಗಿ ಕಟ್ಟಡ ನಿರ್ಮಾಣ ಮಾಡಿ ಕಾಲೇಜು ಆರಂಭಿಸುವ ಉದ್ದೇಶವನ್ನು ಹೊಂದಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಿಗುವ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.

    ಕಾಲೇಜಿನ ಕಟ್ಟಡ ನಿರ್ಮಾಣ ಸೇರಿದಂತೆ ಯೋಜನೆ ಅಡಿ ಮೊದಲ ಭಾಗವಾಗಿ 25 ಕೋಟಿ ರೂ. ಅನುದಾನ ಲಭ್ಯವಾಗಲಿದ್ದು, 5 ರಿಂದ 6 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಎಸ್ ಮಲ್ಲೇಶಪ್ಪ, ಗುಲ್ಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ನಿರಂಜನ್ ಮತ್ತು ಜಿಲ್ಲಾಧಿಕಾರಿ ಎಂ ಕೂರ್ಮರಾವ್ ಭಾಗಿಯಾಗಿದ್ದರು. ಶಹಾಪುರದ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

    ಕಾಲೇಜು ಮೂಲ ಸೌಲಭ್ಯ ಅಭಿವೃದ್ಧಿ, ಹೊಸ ಕಟ್ಟಡ ನಿರ್ಮಾಣ, ವಸತಿಗೃಹಗಳು ಸೇರಿದಂತೆ ವಿಶ್ವ ವಿದ್ಯಾಲಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ರೂಸಾ 2.0 ಯೋಜನೆ ಮೂಲಕ ಆರ್ಥಿಕ ನೆರವು ನೀಡಲಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಿಎಂ ಶಂಕುಸ್ಥಾಪನೆ ಮಾಡಿದ 6ನೇ ದಿನಕ್ಕೆ ಅನಾಥವಾಯ್ತು ನಾಮಫಲಕಗಳು!

    ಸಿಎಂ ಶಂಕುಸ್ಥಾಪನೆ ಮಾಡಿದ 6ನೇ ದಿನಕ್ಕೆ ಅನಾಥವಾಯ್ತು ನಾಮಫಲಕಗಳು!

    ರಾಮನಗರ: ಸಿಎಂ ಸಿದ್ದರಾಮಯ್ಯ ನವರು ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದ ನಾಮಫಲಕದ ಕಲ್ಲುಗಳು ಅನಾಥವಾಗಿ ಬಿದ್ದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆದಿದೆ.

    ಕಳೆದ ಜನವರಿ 3 ರಂದು ಸಿಎಂ ಸಿದ್ದರಾಮಯ್ಯ ನವರು ಸಾಧನಾ ಸಮಾವೇಶದಲ್ಲಿ ಸುಮಾರು 542 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದರು. ಆದರೆ ಕಾರ್ಯಕ್ರಮ ಮುಗಿದು 6 ದಿನಗಳೇ ಕಳೆದಿದ್ದರೂ ಶಂಕುಸ್ಥಾಪನೆಯ ಫಲಕಗಳನ್ನು ಸಂಬಂಧಿಸಿದ ಅಧಿಕಾರಿಗಳು ತೆಗೆದುಕೊಂಡು ಹೋಗಿಲ್ಲ. ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ್ದ ಫಲಕಗಳನ್ನು ಅಲ್ಲಿಯೇ ಬಿಟ್ಟು ಬೇರೆ ಇಲಾಖೆಯವರು ಫಲಕಗಳನ್ನು ತೆಗೆದುಕೊಂಡು ಹೋಗಿದ್ದಾರೆ.

    ಕ್ರೀಡಾಂಗಣದಲ್ಲಿ ಉಳಿದಿದ್ದ ಎರಡು ಕಲ್ಲು ಗಳಲ್ಲಿ ಒಂದು ಒಡೆದು ಹೋಗಿದ್ದು ಮತ್ತೊಂದು ಅನಾಥವಾಗಿ ಬಿದ್ದಿದೆ. ರಾಜಕೀಯ ಕೆಸರೆರಚಾಟದಲ್ಲಿ ಅನಾಥವಾಗಿ ಹೋಗಿದ್ದ ನಾಮಫಲಕಗಳನ್ನು ತೆಗೆದುಕೊಂಡು ಹೋಗುವಂತೆ ಕಾಲೇಜು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಇನ್ನೂ ಅಧಿಕಾರಿಗಳ ತಾತ್ಸಾರದ ನಡೆಗೆ ತಾಲೂಕಿನ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ವಿಧಾನಸೌಧ ಉದ್ಘಾಟನೆಯಾಗಿದ್ದು ಯಾವಾಗ?- ಸರ್ಕಾರಕ್ಕೇ ಗೊತ್ತಿಲ್ಲ ಮಾಹಿತಿ

    ವಿಧಾನಸೌಧ ಉದ್ಘಾಟನೆಯಾಗಿದ್ದು ಯಾವಾಗ?- ಸರ್ಕಾರಕ್ಕೇ ಗೊತ್ತಿಲ್ಲ ಮಾಹಿತಿ

    ಬೆಂಗಳೂರು: ರಾಜ್ಯದ ಶಕ್ತಿಸೌಧ ಉದ್ಘಾಟನೆಯಾಗಿದ್ದು ಯಾವಾಗ ನಿಮಗೆ ಗೊತ್ತಾ? ನಿಮಗೆ ಅಲ್ಲ, ಘನ ಸರ್ಕಾರಕ್ಕೂ ಈ ಬಗ್ಗೆ ಗೊತ್ತಿಲ್ಲ. ಹೀಗಂತ ನಾವ್ ಹೇಳ್ತಿಲ್ಲ. ಸ್ವತಃ ಸರ್ಕಾರವೇ ನಮ್ಮ ಬಳಿ ಮಾಹಿತಿ ಇಲ್ಲ ಅಂತಿದೆ.

    ಆಶ್ಚರ್ಯ ಎನ್ನಿಸಿದ್ರೂ ನೀವು ನಂಬಲೇಬೇಕು. ಕೆಂಗಲ್ ಹನುಮಂತ್ಯನವರು ಕಟ್ಟಿಸಿದ್ದ ವಿಧಾನಸೌಧ ಯಾವಾಗ ಉದ್ಘಾಟನೆ ಆಗಿದ್ದು? ಉದ್ಘಾಟನೆ ಮಾಡಿದ್ದು ಯಾರು ಅನ್ನೋ ಮಹತ್ವದ ಮಾಹಿತಿನೇ ಸರ್ಕಾರದ ಬಳಿ ಇಲ್ಲ. ಮೊನ್ನೆಯಷ್ಟೆ ಮುಗಿದ ಅಧಿವೇಶನದಲ್ಲಿ ವಿಧಾನಸೌಧದ ಶಂಕುಸ್ಥಾಪನೆಯಾಗಿದ್ದು ಯಾವಾಗ? ಉದ್ಘಾಟನೆಯಾದದ್ದು ಯಾವಾಗ? ಯಾರು ಉದ್ಘಾಟನೆ ಮಾಡಿದ್ದು ಎಂಬ ಬಗ್ಗೆ ಮಾಹಿತಿ ನೀಡುವಂತೆ ವಿಧಾನ ಪರಿಷತ್ ಸದಸ್ಯ ಉಗ್ರಪ್ಪ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ರು.

    ಇದಕ್ಕೆ ಉತ್ತರ ನೀಡಿರುವ ಲೋಕೋಪಯೋಗಿ ಇಲಾಖೆ, 1951 ಜುಲೈ 13 ರಂದು ಅಂದಿನ ಪ್ರಧಾನಿಗಳಾದ ಪಂಡಿತ್ ಜವಹಾರ್ ಲಾಲ್ ನೆಹರು ವಿಧಾನಸೌಧಕ್ಕೆ ಶಂಕುಸ್ಥಾಪನೆ ಮಾಡಿದ್ರು. ಅಂದು ಕೆಸಿ ರೆಡ್ಡಿ ಮುಖ್ಯಮಂತ್ರಿಯಾಗಿದ್ರು. ಇದನ್ನ ಬಿಟ್ಟು ಬೇರೆ ಮಾಹಿತಿ ಇಲ್ಲ ಎಂದಿದೆ. ಇನ್ನು ಉದ್ಘಾಟನೆ ಆಗಿದ್ದು ಯಾವಾಗ? ಯಾರು ಮಾಡಿದ್ದು ಅಂತಾ ಕೇಳಿದ್ರೆ ಯಾವುದೇ ಮಾಹಿತಿ ಇಲ್ಲ ಅಂತ ಇಲಾಖೆ ಹೇಳಿದೆ.

    ನಿಗದಿಗಿಂತ 3 ಪಟ್ಟು ಹಣ ಖರ್ಚು!: ಇನ್ನೊಂದು ಇಂಟರೆಸ್ಟಿಂಗ್ ವಿಷಯ ಅಂದ್ರೆ ವಿಧಾನಸೌಧ ಕಟ್ಟಲು ಅಂದಾಜು ಮಾಡಲಾದ ವೆಚ್ಚ 50 ಲಕ್ಷ ರೂಪಾಯಿ. ಆದ್ರೆ ಕಟ್ಟಡ ಪೂರ್ಣ ಆಗುವ ವೇಳೆಗೆ ಖರ್ಚಾಗಿದ್ದು 184 ಲಕ್ಷ, ಅಂದ್ರೆ 1 ಕೋಟಿ, 84 ಲಕ್ಷ ರೂಪಾಯಿ. ಅಂದ್ರೆ ಬಹುತೇಕ ನಿಗದಿಪಡಿಸಿದಕ್ಕಿಂತ ಮೂರು ಪಟ್ಟು ಹೆಚ್ಚು ಹಣ ಖZರ್ಚಾಗಿದೆ. 1951 ರಲ್ಲಿ ಪ್ರಾರಂಭವಾದ ಕಟ್ಟಡ 5 ವರ್ಷದ ಬಳಿಕ ಅಂದ್ರೆ 1956 ರಲ್ಲಿ ಪೂರ್ಣಗೊಂಡಿದೆ.