Tag: ಶಂಖನಾದ ಅರವಿಂದ್

  • ಯಾವ ಅಕ್ಷರದಿಂದ ನೊಂದವರ ಮನಸ್ಸಿಗೆ ಸಾಂತ್ವನ ಹೇಳಲಿ: ಜಗ್ಗೇಶ್

    ಯಾವ ಅಕ್ಷರದಿಂದ ನೊಂದವರ ಮನಸ್ಸಿಗೆ ಸಾಂತ್ವನ ಹೇಳಲಿ: ಜಗ್ಗೇಶ್

    ಬೆಂಗಳೂರು: ಹಿರಿಯ ನಟ ಶಂಖನಾದ ಅರವಿಂದ್ ಹಾಗೂ ನಿರ್ದೇಶಕ ರೇಣುಕಾ ಶರ್ಮಾ ಅವರ ಅಗಲಿಕೆಗೆ ಯಾವ ಅಕ್ಷರದಿಂದ ನೊಂದವರ ಮನಸ್ಸಿಗೆ ಸಾಂತ್ವನ ಹೇಳಲಿ ಎಂದು ನಟ ಜಗ್ಗೇಶ್ ಕಂಬನಿ ಮಿಡಿದು ಸಾಮಾಜಿಕ ಜಾಲತಾಣದಲ್ಲಿ ನೋವಿನಿಂದ ಪೋಸ್ಟ್ ಮಾಡಿದ್ದಾರೆ.

     

    ಏನೆಂದು ಬರೆಯಲಿ, ಯಾವ ಅಕ್ಷರದಲ್ಲಿ ಸಾಂತ್ವನ ಹೇಳಲಿ ಯಾವ ಅಕ್ಷರದಿಂದ ಇವರ ಮನೆಯ ನೊಂದವರನ್ನು ಸಮಾಧಾನ ಪಡಿಸಲಿ? ಒಂದಂತೂ ಹೇಳುವೆ ನಿಮ್ಮಗಳ ಜೊತೆ ನಾನು ಕಳೆದ ಸಮಯ ಮಾತ್ರ ಅವಿಸ್ಮರಣೀಯ. ನಿಮ್ಮ ಆತ್ಮ ರಾಯರಲ್ಲಿ ಲೀನವಾಗಲಿ. ನಿಮ್ಮ ಮನೆಯವರಿಗೆ ಧೈರ್ಯ ಆ ರಾಯರೆ ತುಂಬಲಿ. ಓಂ ಶಾಂತಿ….ಸದ್ಗತಿ ಎಂದು ಬರೆದುಕೊಂಡಿದ್ದಾರೆ.

    ಜ.23ರಂದು ಶಂಖನಾದ ಅರವಿಂದ್ ಅವರ ಪತ್ನಿ ರಮಾ ಅವರೂ ಸಹ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದರು. ರಮಾ ಅವರೂ ಕನ್ನಡ ಸಿನಿ ರಂಗದಲ್ಲಿ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ನಿನ್ನೆಯಷ್ಟೆ ಕವಿರತ್ನ ಕಾಳಿದಾಸ ಸಿನಿಮಾದ ನಿರ್ದೇಶಕ ರೇಣುಕಾ ಶರ್ಮಾ ಅವರೂ ಸಹ ಕೊರೊನಾದಿಂದ ಕೊನೆಯುಸಿರೆಳೆದಿದ್ದರು. ಅದಕ್ಕೂ ಹಿಂದೆ ನಿರ್ಮಾಪಕ ರಾಮು, ಎಂ. ಚಂದ್ರಶೇಖರ್, ನಿರ್ದೇಶಕ ನವೀನ್ ಕುಮಾರ್ ಸೇರಿದಂತೆ ಇನ್ನೂ ಹಲವಾರು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದನ್ನು ಓದಿ: ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್ ಕೊರೊನಾ ವೈರಸ್‍ಗೆ ಬಲಿ

  • ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್ ಕೊರೊನಾ ವೈರಸ್‍ಗೆ ಬಲಿ

    ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್ ಕೊರೊನಾ ವೈರಸ್‍ಗೆ ಬಲಿ

    ಬೆಂಗಳೂರು: ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್ ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಇಂದು ಮೃತಪಟ್ಟಿದ್ದಾರೆ.

    ಶಂಖನಾದ ಅರವಿಂದ್ (70) ಕೊರೊನಾ ಸೋಂಕು ತಗುಲಿತ್ತು. ಕಳೆದ ಹತ್ತು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಇಂದು ಕೊನೆಯುಸಿರೆಳೆದಿದ್ದಾರೆ.

    ಜನವರಿ 23ರಂದು ಅರವಿಂದ್ ಪತ್ನಿ ರಮಾ ಕೂಡ ಉಸಿರಾಟದ ತೊಂದರೆಯಿಂದ ಕೊನೆಯುಸಿರೆಳೆದ್ದರು. ರಮಾ ಕನ್ನಡ ಚಿತ್ರರಂಗದಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದರು. ಈ ಹಾಸ್ಯ ನಟ ಮೂರು ಮಕ್ಕಳನ್ನು ಅಗಲಿದ್ದಾರೆ.

    70-80ರ ದಶಕದಲ್ಲಿ ಅರವಿಂದ್ ಬಹು ಬೇಡಿಕೆಯ ಕಲಾವಿದನಾಗಿ ಗುರುತಿಸಿಕೊಂಡಿದ್ದರು. ಕಾಶಿನಾಥ್ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದರು. ಇತ್ತೀಚಿಗೆ ಕನ್ನಡದ ಕೆಲವೊಂದು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಕನ್ನಡ ಚಿತ್ರರಂಗ ಇಂದು ಅರವಿಂದ್ ಅವರನ್ನು ಕಳೆದುಕೊಂಡಿದೆ. ಅರವಿಂದ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.