Tag: ಶತದಿನೋತ್ಸವ

  • ‘ಕಾಂತಾರ’ ಶತದಿನೋತ್ಸವ : ಮುಂದೆ ಬರಲಿದೆ ‘ಕಾಂತಾರ 1’

    ‘ಕಾಂತಾರ’ ಶತದಿನೋತ್ಸವ : ಮುಂದೆ ಬರಲಿದೆ ‘ಕಾಂತಾರ 1’

    ಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ.  ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅದ್ದೂರಿಯಾಗಿ ಆಯೋಜಿಸಿದ್ದರು.

    ಕಲಾವಿದರು, ತಂತ್ರಜ್ಞರು, ವಿತರಕರು, ಪ್ರದರ್ಶಕರು, ಚಿತ್ರಮಂದಿರ ಮಾಲೀಕರಿಗೆ ಈ ಸಮಯದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕರ್ನಾಟಕ ಚಲನಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ರ‍್ಯಾಪರ್‌ನನ್ನು ತಳ್ಳಿ ಬೀಳಿಸಿದ ಫ್ಯಾನ್‌

    ಈ ಸಂದರ್ಭದಲ್ಲಿ ಮಾತನಾಡಿದ್ದ ನಾಯಕ, ನಿರ್ದೇಶಕ ರಿಷಭ್ ಶೆಟ್ಟಿ, “ಕಾಂತಾರ”ದ ಗೆಲುವು ಖುಷಿ ಕೊಟ್ಟಿದೆ. ಈ ಕಥೆಯನ್ನು ಮೊದಲು ಕಾರ್ತಿಕ್ ಗೌಡ ಅವರ ಹತ್ತಿರ, ಆನಂತರ ವಿಜಯ್ ಸರ್ ಅವರ ಬಳಿ ಕಥೆ ಹೇಳಿದೆ. ತಕ್ಷಣ ಒಪ್ಪಿಗೆ ನೀಡಿ ನಿರ್ಮಾಣಕ್ಕೆ ಮುಂದಾದರು. ಚಿತ್ರವನ್ನು ನಾನು ಅಂದುಕೊಂಡಂತೆ ತರಲು ಸಂಪೂರ್ಣ ಸಹಕಾರ ನೀಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ನಾನು ಆಭಾರಿ.  ಯಶಸ್ಸಿಗೆ ಕಾರಣರಾದ ನನ್ನ ಚಿತ್ರತಂಡ, ಮಾಧ್ಯಮದ ಮಿತ್ರರಿಗೆ ಹಾಗೂ ಸಮಸ್ತ ಜನತೆಗೆ ನನ್ನ ಧನ್ಯವಾದ. ನನ್ನ ಮಡದಿ ಪ್ರಗತಿ ಅವರಿಗೆ ವಿಶೇಷ ಧನ್ಯವಾದ. ಎಲ್ಲರೂ ಕೇಳುತ್ತಿದ್ದಾರೆ?. ‘ಕಾಂತಾರ ಭಾಗ 2’ ಯಾವಾಗ ಎಂದು? ಆದರೆ ನೀವು ನೋಡಿರುವುದೇ ‘ಭಾಗ 2’. ಮುಂದೆ ಬರುವುದು ‘ಭಾಗ 1’ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೇಮ್ಸ್ 100 ದಿನ : ಶತಕದ ಸಂಭ್ರಮದಲ್ಲಿ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ

    ಜೇಮ್ಸ್ 100 ದಿನ : ಶತಕದ ಸಂಭ್ರಮದಲ್ಲಿ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ

    ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ‘ಜೇಮ್ಸ್’ ರಿಲೀಸ್ ಆಗಿ ನೂರು ದಿನಗಳನ್ನು ಪೂರೈಸಿದೆ. ಮಾರ್ಚ್ 17 ರಂದು ಅಪ್ಪು ಹುಟ್ಟು ಹಬ್ಬದಂದು ಬಿಡುಗಡೆಯಾದ ಆದ ಸಿನಿಮಾ ಇಂದಿಗೆ ಶತದಿನ ಆಚರಿಸಿದೆ. ಹಾಗಾಗಿ ಅಪ್ಪು ಅಭಿಮಾನಿಗಳು ಅಲ್ಲಲ್ಲಿ ಶತದಿನದ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ನೆಚ್ಚಿನ ನಟನಿಗೆ ಈ ಮೂಲಕ ಅಭಿಮಾನ ತೋರುತ್ತಿದ್ದಾರೆ. ನೂರನೇ ದಿನದ ಸಂಭ್ರಮದಂದು ಶತದಿನ ಪೋಸ್ಟರ್ ಕೂಡ ರಿಲೀಸ್ ಮಾಡಿದ್ದಾರೆ.

    ಬಹಾದ್ದೂರ್ ಚೇತನ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾಗೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಬಾಕ್ಸ್ ಆಫೀಸಿನಲ್ಲೂ ಸಖತ್ ಸದ್ದು ಮಾಡಿತ್ತು. ರಿಲೀಸ್ ಆದ ಕೆಲವೇ ದಿನಗಳಲ್ಲಿ ನೂರು ಕೋಟಿ ಕ್ಲಬ್ ಕೂಡ ಸೇರಿತ್ತು. ಇದೀಗ ನೂರು ದಿನ ಪೂರೈಸಿದೆ. ಈ ಮೂಲಕ ಅಪ್ಪು ಅವರ ನೂರು ದಿನಗಳ ಪ್ರದರ್ಶನ ಕಂಡ ಸಿನಿಮಾಗಳ ಸಾಲಿಗೆ ಜೇಮ್ಸ್ ಕೂಡ ಸೇರ್ಪಡೆಯಾಗಿದೆ. ಇದನ್ನೂ ಓದಿ : ಚಾಮುಂಡಿ ದರ್ಶನ ಮುಗಿಸಿ ಮೈಸೂರಿನಲ್ಲಿ ಉಪಾಧ್ಯಕ್ಷನನ್ನು ಭೇಟಿಯಾದ ಶಿವರಾಜ್ ಕುಮಾರ್

    ಅ‍ಪ್ಪು ನಟನೆಯ ಕೊನೆಯ ಸಿನಿಮಾ ಇದಾಗಿದ್ದರಿಂದ, ಅಭಿಮಾನಿಗಳು ಕೂಡ ಭಾವನಾತ್ಮಕವಾಗಿಯೇ ಚಿತ್ರವನ್ನು ತಗೆದುಕೊಂಡರು. ನೂರಾರು ಚಿತ್ರಮಂದಿರಗಳಲ್ಲಿ ಈ ಸಿನಿಮಾ ರಿಲೀಸ್ ಆಯಿತು. ಬಿಡುಗಡೆಯಾದ ಅಷ್ಟೂ ಚಿತ್ರಮಂದಿರಗಳಲ್ಲೂ ತುಂಬಿದ ಪ್ರದರ್ಶನ ಕಂಡಿತು. ಭಾರತದಲ್ಲಿ ಮಾತ್ರವಲ್ಲ, ಅನೇಕ ದೇಶಗಳಲ್ಲೂ ಈ ಚಿತ್ರವು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡಿತು. ಇದೀಗ ಕರ್ನಾಟಕ ಕೆಲವು ಚಿತ್ರಮಂದಿರಗಳಲ್ಲಿ ಶತದಿನದ ಪ್ರದರ್ಶನವನ್ನೂ ಮುಗಿಸಿದೆ.

    Live Tv

  • ದರ್ಶನ್-ನಿಖಿಲ್ ಮುಖಾಮುಖಿಗೆ ವೇದಿಕೆ ಸಜ್ಜು

    ದರ್ಶನ್-ನಿಖಿಲ್ ಮುಖಾಮುಖಿಗೆ ವೇದಿಕೆ ಸಜ್ಜು

    ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿಖಿಲ್ ಕುಮಾರಸ್ವಾಮಿ ಎಲ್ಲಿಯೂ ಮುಖಾಮುಖಿಯಾಗಿಲ್ಲ. ಇದೀಗ ಇಬ್ಬರೂ ಮುಖಾಮುಖಿಯಾಗುವ ಕಾಲ ಸನ್ನಿಹಿತವಾಗಿದೆ. ಇದಕ್ಕಾಗಿ ವೇದಿಕೆಯೂ ಸಜ್ಜಾಗಿದೆ.

    ಕುರುಕ್ಷೇತ್ರ ಸಿನಿಮಾದ ಶತದಿನೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ನಿರ್ಮಾಪಕ ಮುನಿರತ್ನ ಕಾರ್ಯಕ್ರಮವನ್ನು ಭರ್ಜರಿಯಾಗಿ ಮಾಡಲು ನಿರ್ಧರಿಸಿದ್ದಾರೆ. ಇದೇ ತಿಂಗಳು 21ಕ್ಕೆ ಶಿವರಾತ್ರಿಯ ದಿನ ಕುರುಕ್ಷೇತ್ರ 100ನೇ ದಿನದ ಕಾರ್ಯಕ್ರಮ ನಡೆಯುತ್ತಿದೆ. ಸಿಲಿಕಾನ್ ಸಿಟಿಯ ಜೆ.ಪಿ.ಪಾರ್ಕ್‍ನಲ್ಲಿ ಸಂಜೆ 7ರಿಂದ ರಾತ್ರಿ 11 ಗಂಟೆ ವರೆಗೂ ಕಾರ್ಯಕ್ರಮ ನಡೆಯಲಿದೆ. ಸ್ಯಾಂಡಲ್‍ವುಡ್‍ನ ತಾರಾಗಣವೇ ಭಾಗವಹಿಸಲಿದೆ ಎಂದು ಅಂದಾಜಿಸಲಾಗಿದೆ.

    ಈ ಕಾರ್ಯಕ್ರಮದಲ್ಲಿ ಕುರುಕ್ಷೇತ್ರ ಕಲಾವಿದರೆಲ್ಲ ಭಾಗಿಯಾಗುವ ಸಾಧ್ಯತೆ ಇದೆ. ಇದೇ ಸಂದರ್ಭದಲ್ಲಿ ಅಭಿಮನ್ಯು ಪಾತ್ರಧಾರಿ ನಿಖಿಲ್ ಕೂಡ ಕಾರ್ಯಕ್ರಮದಲ್ಲಿ ಹಾಜರಾಗುವ ಸಾಧ್ಯತೆ ಇದೆ. ಹೀಗಾಗಿ ಇಬ್ಬರು ಸ್ಟಾರ್ ನಟರ ಸಮಾಗಮಕ್ಕೆ ಈ ಬಾರಿಯ ಶಿವರಾತ್ರಿ ಸಾಕ್ಷಿಯಾಗಲಿದೆ ಎನ್ನಲಾಗಿದೆ.

    ಈ ಕುರಿತು ಡಿ ಬಾಸ್ ಈಗಾಗಲೇ ಖಚಿತಪಡಿಸಿದ್ದು, ಇತ್ತೀಚೆಗೆ ಮಾತನಾಡಿದ್ದ ದರ್ಶನ್, ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಖಚಿತಪಡಿಸಿದ್ದಾರೆ. ಹೀಗಾಗಿ ಈ ಇಬ್ಬರು ನಟರು ಶತದಿನೋತ್ಸವ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಅದ್ಧೂರಿಯಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಚಿತ್ರತಂಡ ಬಿಟ್ಟು ಬೇರೆ ಯಾರೆಲ್ಲ ಕಲಾವಿದರು ಭಾಗಿಯಾಗಲಿದ್ದಾರೆ ಎಂಬ ಕುತೂಹಲ ಸಹ ಮೂಡಿದೆ. ಒಟ್ಟಿನಲ್ಲಿ ಕಾರ್ಯಕ್ರಮವನ್ನು ಭರ್ಜರಿಯಾಗಿಯೇ ನಡೆಸಲು ಉದ್ದೇಶಿಸಲಾಗಿದೆ.

    ಕುರುಕ್ಷೇತ್ರ ಸಿನಿಮಾ ಕಳೆದ ವರ್ಷ ಆಗಸ್ಟ್‍ನಲ್ಲಿ ತೆರೆ ಕಂಡಿತ್ತು. ದುರ್ಯೋಧನನಾಗಿ ಅಬ್ಬರಿಸಿದ್ದ ದರ್ಶನ್‍ಗೆ ಅಭಿಮಾನಿಗಳು ಫಿದಾ ಆಗಿದ್ದರು. ಅಲ್ಲದೆ ಅಭಿಮನ್ಯು ಪಾತ್ರಕ್ಕೂ ಅಷ್ಟೇ ಮೆಚ್ಚುಗೆ ವ್ಯಕ್ತವಾಗಿತ್ತು. ನಾಗಣ್ಣ ನಿರ್ದೇಶನ, ಮುನಿರತ್ನ ನಿರ್ಮಾಣದ ಕುರುಕ್ಷೇತ್ರದಲ್ಲಿ ಸಾಕಷ್ಟು ಕಲಾವಿದರು ಬಣ್ಣಹಚ್ಚಿದ್ದರು. ಇನ್ನೂ ವಿಶೇಷವೆಂದರೆ ರೆಬಲ್ ಸ್ಟಾರ್ ಅಂಬರೀಶ್ ಕೂಡ ಕಾಣಿಸಿಕೊಂಡಿದ್ದರು. ಸ್ಯಾಂಡಲ್‍ವುಡ್ ನಲ್ಲಿ ಭರ್ಜರಿ ಗೆಲುವು ದಾಖಲಿಸಿದ ಕುರುಕ್ಷೇತ್ರ ಸ್ವಲ್ಪ ತಡವಾಗಿ ಶತದಿನೋತ್ಸವ ಆಚರಿಸಿಕೊಳ್ಳುತ್ತಿದೆ.