Tag: ಶಬರಿಮಲೆ ವಿವಾದ

  • ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ – ಜನವರಿ 17 ಕ್ಕೆ ವಕೀಲರ ಸಭೆ

    ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ – ಜನವರಿ 17 ಕ್ಕೆ ವಕೀಲರ ಸಭೆ

    -ಮೂರು ವಾರಕ್ಕೆ ವಿಚಾರಣೆ ಮುಂದೂಡಿಕೆ

    ನವದೆಹಲಿ: ಶಬರಿಮಲೆ ಪ್ರಕರಣದಲ್ಲಿರುವ ವಕೀಲರ ಸಭೆ ಕರೆದು ವಿಚಾರಣೆ ಸಂಬಂಧ ಅಂತಿಮ ತಯಾರಿ ಮಾಡಿಕೊಳ್ಳುವಂತೆ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಸಿಜೆಐ ಎಸ್.ಎ ಬೋಬ್ಡೆ ಸೂಚಿಸಿದ್ದಾರೆ.

    ಶಬರಿಮಲೆ ತೀರ್ಪು ಮರು ಪರಿಶೀಲಿಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ, ಜನವರಿ 17ಕ್ಕೆ ವಕೀಲರ ಸಭೆ ದಿನಾಂಕ ನಿಗದಿಪಡಿಸಿ, ಮೂರು ವಾರಕ್ಕೆ ವಿಚಾರಣೆ ಮುಂದೂಡಿದೆ.

    ಸಿಜೆಐ ಎಸ್.ಎ ಬೋಬ್ಡೆ ನೇತೃತ್ವದ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಶಬರಿಮಲೆ ದೇವಸ್ಥಾನ ಪರ ವಾದ ಮಂಡಿಸಿದ ವಕೀಲರು, ಮಹಿಳೆಯರ ಪ್ರವೇಶ ಸಂಬಂಧ ಈ ಹಿಂದೆ ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ನಿರಾಕರಿಸಿದ ಸಿಜೆಐ, ನಾವು ಶಬರಿಮಲೆ ಆದೇಶವನ್ನು ಇಲ್ಲಿ ಪರಿಶೀಲಿಸುವುದಿಲ್ಲ. ಬದಲಿಗೆ ಈ ಪ್ರಕರಣದಲ್ಲಿ ಉದ್ಭವವಾಗಿರುವ ಏಳು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು. ಇದಕ್ಕೆ ಸಂಬಂಧಿತ ವಿಚಾರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಶಬರಿಮಲೆಗೆ ಹೋಗ್ತಿದ್ದ ಮಹಿಳೆ ಮೇಲೆ ಪೆಪ್ಪರ್ ಸ್ಪ್ರೇ

    ಈ ವೇಳೆ ಮಧ್ಯ ಪ್ರವೇಶಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಸೇರ್ಪಡೆಯಾಗಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಹೆಚ್ಚುವರಿಯಾಗಿ ವಾದ ಮಂಡಿಸಿದ ವಕೀಲ ಅಭಿಷೇಕ ಮನುಸಿಂಘ್ವಿ, ಈ ಪ್ರಕರಣವನ್ನ ಸಾಕಷ್ಟು ಕಠಿಣ ಮತ್ತು ವಿಸತರಿಸಲಾಗಿದೆ. ಇದನ್ನು ಕೊಂಚ ಸರಳಿಕರಿಸಬೇಕಿದೆ ಎಂದು ಮನವಿ ಮಾಡಿದರು. ಇದನ್ನೂ ಓದಿ: ಸರ್ಕಾರ ರಕ್ಷಣೆ ನೀಡದಿದ್ರೂ ಶಬರಿಮಲೆಗೆ ಭೇಟಿ ನೀಡ್ತೇವೆ- ತೃಪ್ತಿ ದೇಸಾಯಿ

    ಈ ವಾದಗಳನ್ನು ಆಲಿಸಿದ ಸಿಜೆಐ ನೇತೃತ್ವದ ಪೀಠ, ಜನವರಿ 17ರಂದು ಪ್ರಕರಣ ವಕೀಲರೊಂದಿಗೆ ಪ್ರಧಾನ ಕಾರ್ಯದರ್ಶಿ ಜೊತೆ ಸಭೆಗೆ ದಿನಾಂಕ ನಿಗದಿ ಪಡಿಸಿದರು. ಪ್ರಕರಣಕ್ಕೆ ಹೆಚ್ಚುವರಿ ಅಂಶಗಳ ಸೇರ್ಪಡೆ ಮಾಡುವ ಬಗ್ಗೆ ವಿಚಾರಣೆ ನಡೆಯಬೇಕಿರುವ ಅಂಶಗಳನ್ನು ವಿಂಗಡಿಸುವುದು, ಅರ್ಜಿದಾರ ಪರ ವಕೀಲರಿಗೆ ವಾದ ಮಂಡಿಸಲು ಸಮಯ ನಿಗದಿ ಮಾಡುವುದು, ಯಾವ ಅಂಶಗಳನ್ನು ಯಾವ ವಕೀಲರು ವಾದ ಮಂಡಿಸುತ್ತಾರೆ ಎನ್ನುವುದನ್ನು ಸಭೆಯಲ್ಲಿ ನಿಗದಿಪಡಿಸಿ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದರು. ಇದನ್ನೂ ಓದಿ: ಶಬರಿಮಲೆ ಪ್ರವೇಶಿಸಿದ ಮಹಿಳೆಯರಿಗೆ ಮ್ಯಾಗಜಿನಲ್ಲಿ ವಿಶೇಷ ಗೌರವ- ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

    ಧಾರ್ಮಿಕ ಸ್ವಾತಂತ್ರ್ಯವನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ನನ್ನ ಧರ್ಮ ಯಾವುದು ಮತ್ತು ಅದನ್ನು ಹೇಗೆ ಅನುಸರಿಸಬೇಕು ಎಂದು ಹೇಳುವುದು ನ್ಯಾಯಾಲಯದ ಕೆಲಸವಲ್ಲ ಎಂದು ಹಿರಿಯ ವಕೀಲ ರಾಜೀವ್ ಧವನ್ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ನಿಮ್ಮ ಆಕ್ಷೇಪಣೆಯಲ್ಲಿ ಹುರಿಳಿಲ್ಲ ಎಂದು ತಳ್ಳಿಹಾಕಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಬಹುಪತ್ನಿತ್ವದ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತದೆಯೇ ಎಂದು ಸ್ಪಷ್ಟನೆ ಕೇಳಿದರು ಇದಕ್ಕೆ ಉತ್ತರಿಸಿದ ಪೀಠ ನವೆಂಬರ್ 14 ರ ಆದೇಶದಲ್ಲಿ ಉಲ್ಲೇಖಿಸಿದ ಪ್ರಶ್ನೆಗಳನ್ನ ಮಾತ್ರ ವಿಚಾರಣೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

  • ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

    ಕೊನೆಗೂ ಶಬರಿಮಲೆ ದೇವಾಲಯಕ್ಕೆ ಇಬ್ಬರು ಮಹಿಳೆಯರು ಎಂಟ್ರಿ!

    ತಿರುವನಂತಪುರಂ: 50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ. 40 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇವಾಲಯವನ್ನು ಇಂದು ಬೆಳಗ್ಗೆ ಪ್ರವೇಶಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

    ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮಹಿಳೆಯರಿಗೆ ಸಮವಸ್ತ್ರ ಧರಿಸಿದ್ದ ಪೊಲೀಸರು ರಕ್ಷಣೆ ನೀಡಿದ್ದಾರೆ.

    ಡಿಸೆಂಬರ್ ನಲ್ಲಿ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿಲು ಪ್ರಯತ್ನ ನಡೆಸಿದ್ದರು. ಆದರೆ ಈ ವೇಳೆ ಭಾರೀ ಪ್ರತಿಭಟನೆ ನಡೆದ ಪರಿಣಾಮ ದೇವಾಲಯ ಪ್ರವೇಶಿಸುವ ನಿರ್ಧಾರದಿಂದ ಮಹಿಳೆಯರು ಹಿಂದಕ್ಕೆ ಸರಿದಿದ್ದರು.

    ಸುಪ್ರೀಂ ಕೋರ್ಟ್ ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿದ ನಂತರ ಸಾಕಷ್ಟು ಹೋರಾಟಗಳು ನಡೆದಿತ್ತು. ಹಿಂದೂ ಸಂಘಟನೆಗಳು ತೀರ್ಪನ್ನು ವಿರೋಧಿಸಿ ಕೇರಳ ರಾಜ್ಯದಲ್ಲಿ ಪ್ರತಿಭಟನೆ ನಡೆಸಿದ್ದರೆ, ಮಹಿಳಾ ಪರ ಸಂಘಟನೆಗಳು ತೀರ್ಪನ್ನು ಸ್ವಾಗತಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇತಿಹಾಸದಲ್ಲೇ ಮೊದಲ ಬಾರಿಗೆ ಶಬರಿಮಲೆಗೆ ಮಹಿಳಾ ಪೊಲೀಸರು ಎಂಟ್ರಿ!

    ಇತಿಹಾಸದಲ್ಲೇ ಮೊದಲ ಬಾರಿಗೆ ಶಬರಿಮಲೆಗೆ ಮಹಿಳಾ ಪೊಲೀಸರು ಎಂಟ್ರಿ!

    ತಿರುವನಂತಪುರಂ: ಶಬರಿಮಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳಾ ಪೊಲೀಸರು ದೇವಾಲಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ದೇವಾಲಯವು ಇಂದು ಸಂಜೆ ತೆರೆದಿದ್ದು ಭದ್ರತಾ ದೃಷ್ಟಿಯಿಂದ ಸುಮಾರು 15 ಮಹಿಳಾ ಪೊಲೀಸ್ ಪೇದೆಯನ್ನು ಶಬರಿಮಲೆ ದೇವಾಲಯದಲ್ಲಿ ನಿಯೋಜಿಸಲಾಗಿದೆ.

    ನೇಮಕಗೊಂಡಿರುವ ಎಲ್ಲಾ ಮಹಿಳಾ ಪೊಲೀಸರು 50 ವರ್ಷ ಮೇಲ್ಪಟ್ಟವರಾಗಿದ್ದು, ದೇವಾಲಯವನ್ನು ಪ್ರವೇಶಿಸಿದ ನಂತರ ಮಹಿಳಾ ಪೊಲೀಸರು ಅಯ್ಯಪ್ಪ ಸ್ವಾಮಿ ದೇವರಿಗೆ ನಮಸ್ಕರಿಸಿ ತಮ್ಮ ಕೆಲಸದಲ್ಲಿ ತೊಡಗಿದ್ದಾರೆ. ನೇಮಕಗೊಂಡವರ ಪೈಕಿ ಒಬ್ಬರು ತಮ್ಮ ಬಾಲ್ಯದಲ್ಲಿ ಪೋಷಕರ ಜೊತೆ ದೇವಾಲಯಕ್ಕೆ ಬಂದಿದ್ದರು.

    ಮಹಿಳಾ ಪೇದೆಯೊಬ್ಬರು ಪ್ರತಿಕ್ರಿಯಿಸಿ,”ನಾವು ಇಲ್ಲಿ ನಮ್ಮ ಕಾರ್ಯ ನಿರ್ವಹಿಸಲು ಬಂದಿದ್ದೇವೆ. ನಿಷೇಧಿತ ವಯೋಮಾನದ ಮಹಿಳೆಯರು ದೇವಾಲಯಕ್ಕೆ ಪ್ರವೇಶಿಸಿದಾಗ ಅವರನ್ನು ತಡೆಯುವವರ ಮೇಲೆ ಕ್ರಮ ಕೈಗೊಂಡು ಮಹಿಳೆಯರಿಗೆ ಸಹಕರಿಸುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

    ಇಂದು ಸಂಜೆ 5 ಗಂಟೆಗೆ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಮಂಗಳವಾರ ಬೆಳಗ್ಗೆ 10 ಗಂಟೆಗೆ ಮುಚ್ಚಲಿದೆ. ದೇವಾಲಯದ ಅರ್ಚಕರು ಹಾಗೂ ಸಿಬ್ಬಂದಿ ವಿಶೇಷ ಪೂಜೆಯ ವಿಡಿಯೋವನ್ನು ಚಿತ್ರಿಸಬಾರದು ಹಾಗೂ ಮಾಧ್ಯಮದವರಿಗೆ ಮಾಹಿತಿ ನೀಡಬಾರದು ಎನ್ನುವ ಕಾರಣಕ್ಕೆ ಮೊಬೈಲ್ ಜಾಮರ್‍ಗಳನ್ನು ದೇವಾಲಯದಲ್ಲಿ ಅಳವಡಿಸಲಾಗಿದೆ. ಮುಂಜಾಗ್ರತೆಯ ಕ್ರಮವಾಗಿ 2,300 ಪೊಲೀಸರನ್ನು ನಿಯೋಜಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv