Tag: ಶಬ್ದ

  • ಸಿಂಗನಲ್ಲೂರು ಗ್ರಾಮದಲ್ಲಿ ಭಾರಿ ಶಬ್ದ- 12ಕ್ಕೂ ಹೆಚ್ಚು ಮನೆ ಜಖಂ

    ಸಿಂಗನಲ್ಲೂರು ಗ್ರಾಮದಲ್ಲಿ ಭಾರಿ ಶಬ್ದ- 12ಕ್ಕೂ ಹೆಚ್ಚು ಮನೆ ಜಖಂ

    ಚಾಮರಾಜನಗರ: ತಡ ರಾತ್ರಿ ಭಾರಿ ಪ್ರಮಾಣದ ಶಬ್ದದಿಂದ ಸುಮಾರು 10 ರಿಂದ 11 ಮನೆಗಳಿಗೆ ಹಾನಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸಿಂಗಲ್ಲನೂರು ಗ್ರಾಮದಲ್ಲಿ ನಡೆದಿದೆ.

    ಮಧ್ಯರಾತ್ರಿ 2.30ರ ಸುಮಾರಿಗೆ ಕೇಳಿ ಬಂದ ಶಬ್ದ ಜನರ ನಿದ್ದೆಗೆಡಿಸಿದೆ. ಪರಿಣಾಮ ನಿದ್ದೆಯಲ್ಲಿದ್ದ ಜನರೆಲ್ಲರೂ ಮನೆಯಿಂದ ಹೊರ ಬಂದಿದ್ದಾರೆ. ಮಹದೇವಮ್ಮ, ಶೈಲಪ್ಪ, ಸೋಮಣ್ಣ, ಸಿದ್ದರಾಜು, ಸುರೇಶ್ ಸೇರಿದಂತೆ ಹಲವರ ಮನೆಗಳು ಹಾನಿಗೊಳಗಾಗಿವೆ. ದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅವಶ್ಯಕತೆ ಏನಿದೆ?: ಎಚ್.ಡಿ ರೇವಣ್ಣ

    ಸಿದ್ದರಾಜು ಅವರ ಮನೆಯು ಸಂಪೂರ್ಣ ಜಖಂಗೊಂಡಿದೆ. ಸಿದ್ದರಾಜು ಮನೆಯಲ್ಲಿ ವಾಸವಿದ್ದ ರತ್ಮಮ್ಮ ಎಂಬುವರಿಗೆ ಕೈಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಚಾರ ತಿಳಿದ ಶಾಸಕ ಆರ್.ನರೇಂದ್ರ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾನಿಗೊಳಗಾದ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಅವಘಡಕ್ಕೆ ಕಾರಣ ಏನು ಎಂಬುದರ ವರದಿಯನ್ನು ತ್ವರಿತವಾಗಿ ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದನ್ನೂ ಓದಿ: ದೇಶದಲ್ಲಿ 200 ಗಡಿ ದಾಟಿದ ಓಮಿಕ್ರಾನ್ ಸೋಂಕಿತರ ಸಂಖ್ಯೆ – ನಾಲ್ಕನೇ ಸ್ಥಾನದಲ್ಲಿ ಕರ್ನಾಟಕ

  • ಬಾಗಲಕೋಟೆಯಲ್ಲಿ ಭೂ ಕಂಪನದ ಅನುಭವ – ಜನರಲ್ಲಿ ಆತಂಕ

    ಬಾಗಲಕೋಟೆಯಲ್ಲಿ ಭೂ ಕಂಪನದ ಅನುಭವ – ಜನರಲ್ಲಿ ಆತಂಕ

    ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಕೆಲ ಭಾಗಗಳಲ್ಲಿ ಶನಿವಾರ ತಡರಾತ್ರಿ 11.50ರ ಸುಮಾರಿಗೆ ಭೂ ಕಂಪನದ ಅನುಭವ ಆಗಿದೆ ಎಂದು ಹೇಳಲಾಗುತ್ತಿದೆ.

    earth quack

    ಜಿಲ್ಲೆಯ ಜಮಖಂಡಿ, ಬಾಗಲಕೋಟೆ ವಿದ್ಯಾಗಿರಿಯ 22 ಕ್ರಾಸ್, ಬಾಗಲಕೋಟೆ ತಾಲೂಕಿನ ಶಾರದಾಳ, ಅಂಕಲಗಿ, ಹಿರೇ ಶೆಲ್ಲಿಕೇರಿ ಕ್ರಾಸ್ ನಲ್ಲಿ ಭೂ ಕಂಪನ ಅನುಭವವಾಗಿದೆ. ಭೂಮಿ ಕಂಪನದ ಅನುಭವ ಆಗುದ್ದಂತೆ ಶೆಲ್ಲಿಕೇರಿ ಕ್ರಾಸ್‍ನ ಕೆಲವರು ಮನೆಯಿಂದ ಹೊರ ಬಂದಿದ್ದು, ಈ ವೇಳೆ ದನದ ಕೊಟ್ಟಿಗೆಯಲ್ಲಿದ್ದ ದನಕರುಗಳು ಕೂಡ ಎದ್ದು ನಿಂತಿವೆ. ಇದನ್ನೂ ಓದಿ: ಕೋವಿಡ್‌ಗೂ ಮೊದಲು ಬಂದಿದ್ದ ನಿಫಾ ವೈರಸ್‌ಗೆ ಕೇರಳದಲ್ಲಿ 12ರ ಬಾಲಕ ಬಲಿ

    earth quack

    ಈ ಬಗ್ಗೆ ಶೆಲ್ಲಿಕೇರಿ ಕ್ರಾಸ್‍ನ ಬಾಗಲಕೋಟೆ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸಲೀಮ್ ಶೇಕ್, ರಾತ್ರಿ 11.43ರ ಸುಮಾರಿಗೆ ನಮಗೆ ಭೂ ಕಂಪನದ ಅನುಭವ ಆಗಿದೆ. 10-12 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದ್ದು, ರೂಲರ್ ಸಂಚರಿಸುವ ವೇಳೆ ಬರುವ ಶಬ್ದದ ಹಾಗೇ ಶಬ್ದ ಕೇಳಿಸಿದೆ. ನಾವೆಲ್ಲ ಮನೆಯ ಸದಸ್ಯರು ಹೊರಗೆ ಬಂದು ನಿಂತಿದ್ದೇವು. ಮಕ್ಕಳು ಮನೆಮಂದಿ ಭಯಗೊಂಡಿದ್ದರು ಎಂದಿದ್ದಾರೆ. ಅಲ್ಲದೇ ಸಲೀಮ್ ಶೇಖ್ ಅವರ ಮನೆ ಗೋಡೆ ಮೇಲೆ ಚಿಕ್ಕದಾಗಿ ಬಿರುಕು ಕಾಣಿಸಿಕೊಂಡಿದೆ. ಇದನ್ನೂ ಓದಿ: ಮೈಸೂರಿನ ದರೋಡೆ, ಶೂಟ್‍ಔಟ್ ಪ್ರಕರಣ- ಖತರ್ನಾಕ್ ಬಾಂಬೆ ಬುಡ್ಡಾ ಅಂದರ್

  • ಬೆಂಗ್ಳೂರಿನ ನಂತ್ರ ಮಂಡ್ಯದಲ್ಲಿ ಭಾರೀ ಶಬ್ದ- ಗಾಬರಿಯಾದ ಜನ

    ಬೆಂಗ್ಳೂರಿನ ನಂತ್ರ ಮಂಡ್ಯದಲ್ಲಿ ಭಾರೀ ಶಬ್ದ- ಗಾಬರಿಯಾದ ಜನ

    ಮಂಡ್ಯ: ಬುಧವಾರ ಬೆಂಗಳೂರಿನ ಹಲವೆಡೆ ಭಾರೀ ದೊಡ್ಡ ಶಬ್ದ ಕೇಳಿಸಿತ್ತು. ಇದೀಗ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಶಬ್ದ ಕೇಳಿಸುವ ಮೂಲಕ ಜನರು ಆತಂಕಗೊಂಡಿದ್ದಾರೆ.

    ಇಂದು ಮಧ್ಯಾಹ್ನ ಸುಮಾರು 1.58ರ ವೇಳೆಯಲ್ಲಿ ಭಾರೀ ಶಬ್ದ ಕೇಳಿದ್ದು, ಸುಮಾರು ನಾಲ್ಕು ಸೆಕೆಂಡ್‍ಗಳ ಕಾಲ ಶಬ್ದ ಕೇಳಿ ಬಂದಿದೆ. ಶಬ್ಧದ ಪರಿಣಾಮ ಭೂ ಕಂಪಿಸಿದ ಅನುಭವ ಕೂಡ ಆಗಿದೆ ಎಂದು ಜನರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರೀ ಶಬ್ದದಿಂದ ಜನರಲ್ಲಿ ಆತಂಕ ಉಂಟಾಗಿದೆ.

    ಪಾಂಡವಪುರ ಹಾಗೂ ಶ್ರೀರಂಗಪಟ್ಟಣ ವ್ಯಾಪಿಯ 30 ಹಳ್ಳಿಗಳ ಜನರಿಗೆ ಈ ಶಬ್ದ ಕೇಳಿಸಿದೆ. ಆದರೆ ಯಾವ ಕಾರಣಕ್ಕೆ ಶಬ್ದ ಬಂದಿದೆ ಎಂದು ತಿಳಿದಿಲ್ಲ. ಹೀಗಾಗಿ ಮಾಹಿತಿ ತಿಳಿದು ಶಬ್ದ ಎಲ್ಲಿಂದ ಬಂದಿದೆ ಎಂದು ಪೊಲೀಸರು ಹುಡುಕಾಡುತ್ತಿದ್ದಾರೆ.

    ಬುಧವಾರ ಮಧ್ಯಾಹ್ನ 1.20ರ ವೇಳೆಗೆ ಬೆಂಗಳೂರಿನ ಹಲವೆಡೆ ದೊಡ್ಡ ಶಬ್ದ ಕೇಳಿಸಿತ್ತು. ಭಯಾನಕ ಶಬ್ದ ಕೇಳಿದ ಹಿನ್ನೆಲೆಯಲ್ಲಿ ಜನ ಭಯಗೊಂಡು ಮನೆಯಿಂದ ಹೊರಗಡೆ ಓಡಿ ಬಂದಿದ್ದರು. ಬೆಂಗಳೂರಿನ ಒಂದು ಕಡೆ ಮಾತ್ರ ಕೇಳಿಸಿದ್ರೆ ಯಾವುದೇ ಭಯ ಇರಲಿಲ್ಲ. ಆದರೆ ನಗರದ ಹಲವೆಡೆ ಈ ಶಬ್ದ ಕೇಳಿಸಿತ್ತು. ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಎಚ್‍ಎಎಲ್, ಇಸ್ರೋ ಲೇಔಟ್, ವಸಂತಪುರ, ಬನಶಂಕರಿ, ಸೇರಿದಂತೆ ಹಲವೆಡೆ ಈ ಶಬ್ದ ಕೇಳಿಬಂದಿತ್ತು.

    ಇದು ಭೂಕಂಪನವಲ್ಲ. ಗೌರಿಬಿದನೂರಿನ ಕಚೇರಿಗೂ ಕರೆ ಮಾಡಿ ಮಾಹಿತಿ ತೆಗೆದುಕೊಂಡಿದ್ದೇವೆ. ಭೂಕಂಪನದ ತೀವೃತೆ ಯಾವುದೂ ದಾಖಲಾಗಿಲ್ಲ. ಭೂಗರ್ಭದ ಧ್ವನಿಯೋ ಅಥವಾ ಯಾವುದು ಎನ್ನುವುದರ ಬಗ್ಗೆ ನಾವು ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿಎಂಸಿ) ತಿಳಿಸಿತ್ತು.

    ಆದರೆ ಈ ಸಂಬಂಧ ರಾತ್ರಿ ರಕ್ಷಣಾ ಇಲಾಖೆ ಸ್ಪಷ್ಟನೆ ನೀಡಿದ್ದು, ಏರ್ ಕ್ರಾಫ್ಟ್ ಸಿಸ್ಟಂ ಆಂಡ್ ಟೆಸ್ಟಿಂಗ್ ಎಸ್ಟಾಬ್ಲಿಸ್ಟ್ ಮೆಂಟ್(ಎಎಸ್‍ಟಿಇ) ನ ವಿಮಾನ ಹಾರಾಡಿದೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಸೂಪರ್ ಸೋನಿಕ್ ವಿಮಾನ ನಗರದಿಂದ ಹೊರಗಡೆ ಹಾರಾಟ ನಡೆಸಿತ್ತು. ಪೈಲಟ್ ಗಳು ಮತ್ತು ಎಂಜಿನಿಯರುಗಳು ವಿಮಾನವನ್ನು ಪರೀಕ್ಷೆ ಮಾಡುತ್ತಿರುತ್ತಾರೆ. ಈ ಸಂದರ್ಭದಲ್ಲಿ 36 ಸಾವಿರ ಮತ್ತು 40 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸಿದಾಗ ಸೋನಿಕ್ ಬೂಮ್ ಕೇಳಿಸಿರಬಹುದು. ಸೋನಿಕ್ ಬೂಮ್ ನಡೆದ ಪ್ರದೇಶದಿಂದ ವ್ಯಕ್ತಿ 65 ರಿಂದ 85 ಕಿ.ಮೀ ದೂರದಲ್ಲಿದ್ದರೂ ಈ ಧ್ವನಿ ಕೇಳಿಸುತ್ತದೆ ಎಂದು ಟ್ವೀಟ್ ಸ್ಪಷ್ಟನೆ ನೀಡಿತ್ತು.

  • ಕಲಬುರಗಿಯ ಗಡಿಕೇಶ್ವರ ಗ್ರಾಮದಲ್ಲಿ ಲಘು ಕಂಪನ

    ಕಲಬುರಗಿಯ ಗಡಿಕೇಶ್ವರ ಗ್ರಾಮದಲ್ಲಿ ಲಘು ಕಂಪನ

    ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಭೂಮಿಯಿಂದ ಬಂದ ಬಾರಿ ಸದ್ದಿನಿಂದ ಜನರಿಗೆ ಕಂಪನದ ಅನುಭನ ಉಂಟಾಗಿದೆ.

    ಮಧ್ಯಾಹ್ನ 1.27ಕ್ಕೆ ದೊಡ್ಡ ಪ್ರಮಾಣದ ಸದ್ದಿನಿಂದ ಹೆದರಿದ ಅಲ್ಲಿನ ಜನ ಮನೆಯೊಳಗಿಂದ ಹೊರಬಂದಿದ್ದಾರೆ. ಕಳೆದ ವರ್ಷ ಕೂಡಾ ಚಳಿಗಾಲದಲ್ಲಿ ಭೂಮಿಯಿಂದ ವಿಚಿತ್ರ ಸದ್ದು ಬಂದಿತ್ತು. ಇದೀಗ ಮತ್ತೆ ಭೂಮಿಯಿಂದ ಸದ್ದು ಬಂದಿರುವದರಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.

    ರಿಕ್ಟರ್ ಮಾಪನದಲ್ಲಿ ಭೂಕಂಪ ಆಗಿರುವ ಬಗ್ಗೆ ದಾಖಲಾಗಿಲ್ಲ. ಹೀಗಾಗಿ ಗ್ರಾಮದ ಸುತ್ತಮುತ್ತಲಿನಲ್ಲಿರುವ ಕಲ್ಲು ಗಣಿಗಾರಿಕೆಯಲ್ಲಿನ ಸ್ಫೋಟಿಸಿರುವ ಶಬ್ದ ಇರಬಹದು ಎಂದು ಶಂಕಿಸಲಾಗಿದೆ.

  • ಕರ್ಕಶ ಶಬ್ದ – ಜೆಸಿಬಿಯಿಂದ ಸೈಲೆನ್ಸರ್ ಬಿಚ್ಚಿ ಪುಡಿ ಪುಡಿ

    ಕರ್ಕಶ ಶಬ್ದ – ಜೆಸಿಬಿಯಿಂದ ಸೈಲೆನ್ಸರ್ ಬಿಚ್ಚಿ ಪುಡಿ ಪುಡಿ

    ದಾವಣಗೆರೆ: ಕರ್ಕಶವಾಗಿ ಶಬ್ದ ವಾಗುವ ಸೈಲೆನ್ಸರ್ ಅಳವಡಿಕೆ ಮಾಡಿದ ದ್ವಿಚಕ್ರ ವಾಹನಗಳ ಮೇಲೆ ದಾವಣಗೆರೆ ಪೊಲೀಸರು ಸಮರ ಸಾರಿದ್ದಾರೆ.

    ದಾವಣಗೆರೆ ನಗರದಲ್ಲಿ ಇಂದು ಆರ್‌ಟಿಓ ಅಧಿಕಾರಿಗಳು ಹಾಗೂ ಪೊಲೀಸರ ಜಂಟಿಯಾಗಿ ಕಾರ್ಯಚರಣೆ ಮಾಡಿ 70ಕ್ಕೂ ಹೆಚ್ಚು ಬುಲೆಟ್ ಸೇರಿದಂತೆ ಹಲವು ಬೈಕ್ ಗಳನ್ನು ಸೀಜ್ ಮಾಡಿದ್ದಲ್ಲದೆ ದಂಡ ಹಾಕಿದ್ದಾರೆ. ಸೀಜ್ ಮಾಡಲಾದ ಬೈಕ್‍ಗಳ ಸೈಲೆನ್ಸರ್ ಕಿತ್ತು ಹಾಕಿ ಜೆಸಿಬಿಯಿಂದ ಪುಡಿ ಮಾಡಿ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

    ಯುವಕರು ತಮ್ಮ ಬೈಕ್‍ಗಳಿಗೆ ಕರ್ಕಶವಾಗಿ ಶಬ್ದಮಾಡುವ ಸೈಲೆನ್ಸರ್ ಅಳವಡಿಸಿಕೊಂಡು ಶಬ್ದ ಮಾಲಿನ್ಯದ ಜೊತೆಗೆ ಪರಿಸರ ಮಾಲಿನ್ಯ ಮಾಡಿಕೊಂಡು ಹೋಗುತ್ತಿದ್ದರು. ಇದರಿಂದ ರೋಸಿಹೋದ ಸಾರ್ವಜನಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

    ನಗರದಲ್ಲಿ ಕರ್ಕಶವಾಗಿ ಶಬ್ದ ಮಾಡಿಕೊಂಡು ಓಡಾಡುವ ದ್ವಿಚಕ್ರ ವಾಹನಗಳು ಬಹಳ ಇವೆ. ಅವುಗಳನ್ನು ಸಹ ಹಿಡಿದು ದಂಡ ವಿಧಿಸುವುದರ ಜೊತೆ ಸೈಲೆನ್ಸರ್ ಪುಡಿ ಪುಡಿ ಮಾಡುವುದಾಗಿ ಆರ್‌ಟಿಓ ಅಧಿಕಾರಿಗಳು ತಿಳಿಸಿದ್ದಾರೆ.

  • ಜೋಡುಪಾಲ ದುರಂತಕ್ಕೂ ಮುನ್ನ ಮೂಕ ಪ್ರಾಣಿಗಳಿಂದ ಸಿಕ್ಕಿತ್ತು ಮುನ್ಸೂಚನೆ!

    ಜೋಡುಪಾಲ ದುರಂತಕ್ಕೂ ಮುನ್ನ ಮೂಕ ಪ್ರಾಣಿಗಳಿಂದ ಸಿಕ್ಕಿತ್ತು ಮುನ್ಸೂಚನೆ!

    ಮಂಗಳೂರು: ಕೊಡಗಿನ ಜೋಡುಪಾಲದಲ್ಲಿಯೂ ದುರಂತ ಸಂಭವಿಸುವ ಮುನ್ನ ಮೂಕ ಪ್ರಾಣಿಗಳು ವಿಚಿತ್ರವಾಗಿ ವರ್ತಿಸಿದ್ದವು ಎಂಬ ಮಾಹಿತಿಯನ್ನು ಜೋಡಪಾಲದ ಸಂತ್ರಸ್ತರು ಹಂಚಿಕೊಂಡಿದ್ದಾರೆ.

    ಸಾಕು ನಾಯಿಗಳು, ತೋಟದಲ್ಲಿದ್ದ ಮಂಗಗಳು ವಿಲಕ್ಷಣವಾಗಿ ಕೂಗು ಹಾಕಿದ್ದವು. ಈ ಬಗ್ಗೆ ದೂರದ ಮಂಗಳೂರಿಗೆ ಬಂದು ಸಂಬಂಧಿಕರ ಮನೆಯಲ್ಲಿ ನೆಲೆಸಿರುವ ಜೋಡುಪಾಲದ ಸಂತ್ರಸ್ತರಾದ ಶಿಶಿರ್ ಅವರು ತಮ್ಮ ಅನುಭವವನ್ನು ಪಬ್ಲಿಕ್ ಟಿವಿ ಜೊತೆ ಹಂಚಿಕೊಂಡಿದ್ದಾರೆ.

    ಆಗಸ್ಟ್ 16ರ ಬೆಳಗ್ಗೆಯಿಂದಲೇ ನಾಯಿ ವಿಚಿತ್ರವಾಗಿ ಬೊಗಳುವುದು ಮತ್ತು ತಮ್ಮ ಮನೆಯ ಸುತ್ತಮುತ್ತ ಇದ್ದ ಮಂಗಗಳೆಲ್ಲವೂ ಕೂಗಾಡುತ್ತಿದ್ದವು. ರಾತ್ರಿಯ ವೇಳೆ ಆನೆಗಳು ಕೂಡ ಘೀಳಿಡುತ್ತಿದ್ದವು. ಕೊಡಗಿನಲ್ಲಿ ಪ್ರಾಣಿಗಳು ಕೂಗುವುದು ಸಹಜವಾಗಿರುವ ಕಾರಣ ನಾವು ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ ಎಂದು ಹೇಳಿದರು.

    ಪ್ರಾಣಿಗಳು ಕೂಗಾಟ ಜಾಸ್ತಿಯಾಗುತ್ತಿದ್ದಂತೆ ಮನೆಯ ಹೊರಗಡೆ ಬಂದಾಗ ಭೂಮಿ ಒಳಭಾಗದಿಂದ ರೈಲು ಹೋಗುವ ಹಾಗೇ, ದೊಡ್ಡ ದೊಡ್ಡ ಬೆಟ್ಟ ಗುಡ್ಡಗಳೆಲ್ಲ ಕೊಚ್ಚಿಕೊಂಡು ಹೋಗುವ ಹಾಗೇ ಶಬ್ದಗಳು ಕೇಳಿಬರುತ್ತಿತ್ತು. ಅಲ್ಲಿದ್ದ ಸಣ್ಣ ಹೊಳೆಯೊಂದು ನೋಡ ನೋಡುತ್ತಲೇ 10 ಪಟ್ಟು ಹೆಚ್ಚಾಗಿ ಹರಿದು ತೋಟಗಳೆಲ್ಲ ನಾಶವಾಯಿತು. ಆದರೂ ಧೈರ್ಯ ಮಾಡಿ ನಮ್ಮ ಕುಟುಂಬ ಮನೆಯಲ್ಲೇ ತಂಗಿತ್ತು. ಮಾರನೇ ದಿನ 17 ರಂದು ಬೆಟ್ಟದಲ್ಲಿ ಸುಮಾರು 5 ರಿಂದ 6 ಬಾರಿ ಭಾರೀ ಸ್ಫೋಟ ಸಂಭವಿಸಿದ ಕೂಡಲೇ ನಾವು ಭಯಗೊಂಡು ಮಂಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದೇವೆ ಎಂದು ಶಿಶಿರ್ ವಿವರಿಸಿದರು.

    ಜೋಡುಪಾಲದ ಸುತ್ತಮುತ್ತ ಒಟ್ಟು 700 ಮನೆಗಳಿದ್ದು, 3 ಸಾವಿರ ಜನರಿದ್ದಾರೆ. ಈ ದುರಂತ ನಡೆದ ಬಳಿಕ 150, 200 ಜನ ಬೆಟ್ಟ ಹತ್ತಿ ಮಡಿಕೇರಿಗೆ ತಲುಪಿದ್ದಾರೆ. 500 ರಿಂದ 1000 ಜನರು ದಕ್ಷಿಣ ಕನ್ನಡದ ಕಲ್ಲುಗುಂಡಿ, ಸಂಪಾಜೆ, ಅರಂತೋಡಿಗೆ ಬಂದು ನೆಲೆಸಿದ್ದಾರೆ ಎಂದು ವಿವರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv