Tag: ಶರಣಬಸವೇಶ್ವರ ಜಾತ್ರೆ

  • ಕಲಬುರಗಿಯ ಶ್ರೀ ಶರಣಬವೇಶ್ವರ ಜಾತ್ರೆ ರದ್ದು

    ಕಲಬುರಗಿಯ ಶ್ರೀ ಶರಣಬವೇಶ್ವರ ಜಾತ್ರೆ ರದ್ದು

    ಕಲಬುರಗಿ: ಕೊರೊನಾ ಸೋಂಕಿನಿಂದ 76 ವರ್ಷದ ವೃದ್ಧ ಮೃತಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಶ್ರೀ ಶರಣಬವೇಶ್ವರ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.

    ಕೆಮ್ಮು, ಜ್ವರ ಇದ್ದರೆ ಶ್ರೀ ಶರಣಬಸವೇಶ್ವರ ಜಾತ್ರೆಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಈ ಮೊದಲು ಹೇಳಿದ್ದರು. ಆದರೆ ವೃದ್ಧ ಮೃತಪಟ್ಟಿದ್ದು ಕೊರೊನಾ ವೈರಸ್‍ನಿಂದಲೇ ಎಂದು ಲ್ಯಾಬ್ ರಿಪೋರ್ಟ್ ಬರುತ್ತಿದ್ದಂತೆ ಜಿಲ್ಲೆಯಲ್ಲಿ ಹೈಲರ್ಟ್ ಗೆ ಜಿಲ್ಲಾಡಳಿತ ಮುಂದಾಗಿದೆ. ಈ ನಿಟ್ಟಿನಲ್ಲಿ ಜಾತ್ರೆಯ ಆಯೋಜಕರು ಕೂಡ ಜಾತ್ರೆಯನ್ನು ರದ್ದುಗೊಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಕೊರೊನಾಗೆ ಕರ್ನಾಟಕದಲ್ಲಿ ಮೊದಲ ಬಲಿ

    ಶರಣಬಸವೇಶ್ವರ ಜಾತ್ರೆ ಶುಕ್ರವಾರದಿಂದ ಪ್ರಾರಂಭವಾಗಿ 13 ದಿನಗಳ ಕಾಲ ನಡೆಯುತ್ತಿತ್ತು. ಈ ವೇಳೆ ಕನಿಷ್ಠ 4 ಲಕ್ಷಕ್ಕೂ ಹೆಚ್ಚು ಭಕ್ತರು ಇಲ್ಲಿಗೆ ಆಗಮಿಸಿ ಶರಣನ ದರ್ಶನ ಪಡೆಯುತ್ತಿದ್ದರು. ಹೀಗಾಗಿ ಅಷ್ಟು ಜನರ ಆರೋಗ್ಯದ ಜವಾಬ್ದಾರಿಯನ್ನು ಜಿಲ್ಲಾಡಳಿತ ಹೊತ್ತುಕೊಂಡಿತ್ತು. ಆದರೆ ವೃದ್ಧ ಮೃತಪಟ್ಟಿದ್ದು ಕೊರೊನಾ ಸೋಂಕಿನಿಂದಲೇ ಎಂಬ ವರದಿ ಸಿಗುತ್ತಿದ್ದಂತೆ ಜಾತ್ರೆಯ ಆಯೋಜಕರು ಅಲರ್ಟ್ ಆಗಿದ್ದಾರೆ. ಈ ಮೂಲಕ ಜಾತ್ರೆಯನ್ನು ರದ್ದುಗೊಳಿಸಿ ಪ್ರಕಟಣೆ ಹೊರಡಿಸಿದ್ದಾರೆ. ಇದನ್ನೂ ಓದಿ: 154 ಮಂದಿ ಉದ್ಯೋಗಿಗಳಿರುವ ಕಚೇರಿಗೆ ಹಾಜರಾಗಿ ತೆರಳಿದ್ದ ಕೊರೊನಾ ಪೀಡಿತ

    ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಡಿಸಿ ಬಿ.ಶರತ್ ಅವರು, ಕೆಮ್ಮು, ಜ್ವರ, ಶೀತದಿಂದ ಬಳಲುತ್ತಿರುವ ಭಕ್ತರು ಜಾತ್ರೆಗೆ ಬರಬೇಡಿ. ಯಾರಿಗಾದರೂ ಸೋಂಕು ಇದ್ದಲಿ ಅದು ಬೇರೆಯವರಿಗೆ ಹರಡದಿರಲ್ಲಿ ಎಂಬ ಕಾರಣಕ್ಕೆ ಈ ಕ್ರಮ ಜರುಗಿಸಿರುವುದ್ದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಜಾತ್ರೆಗಳಲ್ಲಿ ಕಲಬುರಗಿಯ ಶ್ರೀ ಶರಣಬಸವೇಶ್ವರ ಜಾತ್ರೆ ಪ್ರತಿ ವರ್ಷ ಅದ್ಧೂರಿಯಾಗಿ ನಡೆಯುತ್ತಿದೆ. ಈ ಜಾತ್ರೆಗೆ 1 ಲಕ್ಷಕ್ಕೂ ಹೆಚ್ಚು ಭಕ್ತರು ತೇರು ಏಳೆಯಲು ಆಗಮಿಸುತ್ತಾರೆ. ಆದರೆ ಹೀಗೆ ಆಗಮಿಸುವ ಭಕ್ತರಿಗೆ ಇದೀಗ ಚೀನಾದ ಮಹಾಮಾರಿ ಕೊರೊನಾ ಕರಿನೆರಳು ಆವರಿಸಿದೆ. ಹೀಗಾಗಿ ಜಾತ್ರೆಗೆ ಬರುವ ಭಕ್ತರು ಒಂದಿಷ್ಟು ಮುಂಜಾಗೃತೆ ವಹಿಸಿಕೊಳ್ಳಲು ಆರೋಗ್ಯ ಇಲಾಖೆ ಸೂಚಿಸಿತ್ತು. ಇದನ್ನೂ ಓದಿ: ‘ಗೋಮೂತ್ರದಿಂದ ಕೊರೊನಾ ವಾಸಿ ಟ್ವೀಟ್’- ಪೊಲೀಸ್ ಆಯುಕ್ತರಿಗೆ ಶ್ರೀರಾಮಲು ದೂರು

  • ಕೆಮ್ಮು, ಜ್ವರ ಇದ್ರೆ ಶರಣಬಸವೇಶ್ವರ ಜಾತ್ರೆಗೆ ಬರಬೇಡಿ: ಕಲಬುರಗಿ ಡಿಸಿ ಮನವಿ

    ಕೆಮ್ಮು, ಜ್ವರ ಇದ್ರೆ ಶರಣಬಸವೇಶ್ವರ ಜಾತ್ರೆಗೆ ಬರಬೇಡಿ: ಕಲಬುರಗಿ ಡಿಸಿ ಮನವಿ

    ಕಲಬುರಗಿ: ಶರಣರ ನಾಡು ಎಂದೇ ಖ್ಯಾತಿ ಪಡೆದಿರುವ ಕಲಬುರಗಿಯಲ್ಲಿ ಶ್ರೀ ಶರಣಬವೇಶ್ವರ ಜಾತ್ರೆ ನಡೆಯಲಿದೆ. ಆದರೆ ಈ ಬಾರಿಯ ಶರಣರ ಜಾತ್ರೆಗೂ ಭೀಕರ ಕೊರೊನಾ ಎಫೆಕ್ಟ್ ಎದುರಾಗಿದ್ದು, ಕೆಮ್ಮು, ಶೀತ, ಜ್ವರ ಇರುವ ಭಕ್ತರು ಜಾತ್ರೆಗೆ ಬರದಂತೆ ಜಿಲ್ಲಾಧಿಕಾರಿ ಬಿ. ಶರತ್ ಭಕ್ತರಲ್ಲಿ ಮನವಿ ಮಾಡಿದ್ದಾರೆ.

    ಕಲ್ಯಾಣ ಕರ್ನಾಟಕದ ಸುಪ್ರಸಿದ್ಧ ಜಾತ್ರೆಗಳಲ್ಲಿ ಕಲಬುರಗಿಯ ಶ್ರೀ ಶರಣಬಸವೇಶ್ವರ ಜಾತ್ರೆ ಪ್ರತಿ ವರ್ಷ ಅದ್ಧೂರಿಯಾಗಿ ನಡೆಯುತ್ತಿದೆ. ಈ ಜಾತ್ರೆಗೆ 1 ಲಕ್ಷಕ್ಕೂ ಹೆಚ್ಚು ಭಕ್ತರು ತೇರು ಎಳೆಯಲು ಆಗಮಿಸುತ್ತಾರೆ. ಆದರೆ ಹೀಗೆ ಆಗಮಿಸುವ ಭಕ್ತರಿಗೆ ಇದೀಗ ಚೀನಾದ ಮಹಾಮಾರಿ ಕೊರೊನಾ ಕರಿನೆರಳು ಆವರಿಸಿದೆ. ಹೀಗಾಗಿ ಜಾತ್ರೆಗೆ ಬರುವ ಭಕ್ತರು ಒಂದಿಷ್ಟು ಮುಂಜಾಗೃತೆ ವಹಿಸಿಕೊಳ್ಳಲು ಆರೋಗ್ಯ ಇಲಾಖೆ ಸೂಚಿಸಿದೆ. ಕೆಮ್ಮು, ಜ್ವರ, ಶೀತದಿಂದ ಬಳಲುತ್ತಿರುವ ಭಕ್ತರು ಜಾತ್ರೆಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಮನವಿ ಮಾಡಿದ್ದಾರೆ. ಈ ಮೂಲಕ ಯಾರಿಗಾದರೂ ಸೊಂಕು ಇದ್ದಲಿ ಅದು ಬೇರೆಯವರಿಗೆ ಹರಡದಿರಲಿ ಎಂಬ ಕಾರಣಕ್ಕೆ ಈ ಕ್ರಮ ಜರುಗಿಸಿರುವುದಾಗಿ  ಡಿಸಿ ಬಿ.ಶರತ್ ಅವರು ಹೇಳಿದ್ದಾರೆ.

    ಶರಣಬಸವೇಶ್ವರ ಜಾತ್ರೆ ಇಂದಿನಿಂದ ಪ್ರಾರಂಭವಾಗಿ 13 ದಿನಗಳ ಕಾಲ ನಡೆಯಲಿದ್ದು, ಈ ವೇಳೆ ಕನಿಷ್ಟ ಅಂದ್ರು 4 ಲಕ್ಷಕ್ಕೂ ಹೆಚ್ಚು ಭಕ್ತರು ಇಲ್ಲಿಗೆ ಆಗಮಿಸಿ ಶರಣನ ದರ್ಶನ ಪಡೆಯಲ್ಲಿದ್ದಾರೆ. ಹೀಗಾಗಿ ಅಷ್ಟು ಜನರ ಆರೋಗ್ಯದ ಜವಾಬ್ದಾರಿಯನ್ನು ಇದೀಗ ಜಿಲ್ಲಾಡಳಿತ ಹೊತ್ತುಕೊಂಡಿದೆ. ಜಿಲ್ಲಾಧಿಕಾರಿಗಳು ಕೈಗೊಂಡ ಕ್ರಮ ಸ್ವಾಗತ ಆದರೆ ಕೊರೊನಾ ಬಗ್ಗೆ ಜಾಗೃತಿ ಸಹ ಮೂಡಿಸಲಿ ಎನ್ನುವುದು ಭಕ್ತರ ಮನವಿಯಾಗಿದೆ.

    ಜಾತ್ರೆಯಲ್ಲಿ ಆರೋಗ್ಯ ಇಲಾಖೆಯ ಒಂದು ತಂಡ ಸಹ ಸ್ಥಳದಲ್ಲಿಯೇ ಠಿಕಾಣಿ ಹೂಡಿ ಭಕ್ತರ ಮೇಲೆ ಒಂದು ಕಣ್ಣಿಡಲಿದೆ. ಈ ವೇಳೆ ಯಾರಿಗಾದರೂ ಕೆಮ್ಮು, ಶೀತ, ಜ್ವರದ ಲಕ್ಷಣ ಕಂಡರೆ ಅಲ್ಲಿಯೇ ಅವರ ಆರೋಗ್ಯ ತಪಾಸಣೆಗೆ ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಕೊರೊನಾ ವೈರಸ್‍ಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಇದೀಗ ಮುಂದಾಗಿದೆ.