Tag: ಶರಣ್ಯ ಶೆಟ್ಟಿ

  • ಮತ್ತೊಂದು ಗೋಲ್ಡನ್‌ ಚಾನ್ಸ್‌ ಗಿಟ್ಟಿಸಿಕೊಂಡ ಶರಣ್ಯ ಶೆಟ್ಟಿ

    ಮತ್ತೊಂದು ಗೋಲ್ಡನ್‌ ಚಾನ್ಸ್‌ ಗಿಟ್ಟಿಸಿಕೊಂಡ ಶರಣ್ಯ ಶೆಟ್ಟಿ

    1980, ಹುಟ್ಟುಹಬ್ಬದ ಶುಭಾಶಯಗಳು, ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ‘ಗಟ್ಟಿಮೇಳ’ (Gattimela) ನಟಿ ಶರಣ್ಯ ಶೆಟ್ಟಿ ಅವರು ಇತ್ತೀಚಿಗೆ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಟನೆಯ ಸಿನಿಮಾಗೆ ನಾಯಕಿಯಾಗುವ ಮೂಲಕ ಸಿಹಿಸುದ್ದಿ ನೀಡಿದ್ರು. ಈಗ ‘ಅಕಿರ’ ಹೀರೋ ಅನೀಶ್ ತೇಜೇಶ್ವರ್‌ಗೆ (Anish Tejeshwar) ಹೀರೋಯಿನ್ ಆಗಿದ್ದಾರೆ.

    ಕಿರುತೆರೆಯ ಜನಪ್ರಿಯ ‘ಗಟ್ಟಿಮೇಳ’ ಧಾರಾವಾಹಿಯಲ್ಲಿ ವಿಲನ್ ಆಗಿ ವೇದಾಂತ್- ಅಮೂಲ್ಯಗೆ ಟಕ್ಕರ್ ಕೊಡ್ತಿದ್ದರು. ಅವರ ಪಾತ್ರ ಮುಕ್ತಾಯವಾಗುತ್ತಿದ್ದಂತೆ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾಗಿದ್ದರು. ಪ್ರಿಯಾಂಕಾ ಉಪೇಂದ್ರ ಅವರ ಜೊತೆ ‘1980’ ಚಿತ್ರದಲ್ಲಿ ನಟಿ ಗಮನ ಸೆಳೆದರು. ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ನಟಿ ಒಪ್ಪಿಕೊಳ್ತಿದ್ದಾರೆ. ಒಂದು ಸಿನಿಮಾದಿಂದ ಮತ್ತೊಂದು ಸಿನಿಮಾಗೆ ಡಿಫರೆಂಟ್ ರೋಲ್‌ಗಳನ್ನ ನಟಿ ಓಕೆ ಅಂತಿದ್ದಾರೆ.

    ‘ಕೃಷ್ಣಂ ಪ್ರಣಯ ಸಖಿ’ ಗೋಲ್ಡನ್ ಹೀರೋಗೆ ಸೆಕೆಂಡ್ ಹೀರೋಯಿನ್ ಆಗಿದ್ದರು ಶರಣ್ಯ ಪಾತ್ರಕ್ಕೆ ಮಹತ್ವವಿದೆ. ಮಾಡ್ರನ್ ಅವತಾರದಲ್ಲಿ ಶರಣ್ಯ ನಟಿಸಿದ್ದಾರೆ. ಗಣೇಶ್‌ಗೆ ಮಾಲಿವುಡ್ ನಟಿ ಮಾಳವಿಕಾ ಮತ್ತು ಶರಣ್ಯ ಶೆಟ್ಟಿ (Sharanya Shetty) ನಾಯಕಿಯರಾಗಿದ್ದಾರೆ. ಭಿನ್ನವಾಗಿರುವ ತ್ರಿಕೋನ ಪ್ರೇಮಕಥೆಯನ್ನ ಇಲ್ಲಿ ನೋಡಬಹುದಾಗಿದೆ. ಈ ಬೆನ್ನಲ್ಲೇ ಮತ್ತೊಂದು ಬ್ರೇಕಿಂಗ್ ಅಪ್‌ಡೇಟ್ ಸಿಕ್ಕಿದೆ. ಇದನ್ನೂ ಓದಿ:‘ಲೈಗರ್‌’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ

    ಅಕಿರ, ರಾಮಾರ್ಜುನ, ವಾಸು ನಾನು ಪಕ್ಕಾ ಕಮರ್ಷಿಯಲ್, ಚಿತ್ರಗಳ ಮೂಲಕ ಸಂಚಲನ ಮೂಡಿಸಿರುವ ಅನೀಶ್ ತೇಜೇಶ್ವರ್‌ಗೆ ನಾಯಕಿಯಾಗಿ ಶರಣ್ಯ ಶೆಟ್ಟಿ ಸೆಲೆಕ್ಟ್ ಆಗಿದ್ದಾರೆ. ಈ ಸಿನಿಮಾದಲ್ಲಿ ಪಕ್ಕಾ ಸಂಪ್ರಾದಾಯಿಕ್ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ನಟನೆಗೆ ಹೆಚ್ಚು ಒತ್ತಿರುವ ವಿಭಿನ್ನ ರೋಲ್‌ಗೆ ನಟಿ ಜೀವತುಂಬುತ್ತಿದ್ದಾರೆ. ಹೆಸರಿಡದ ಈ ಹೊಸ ಪ್ರಾಜೆಕ್ಟ್, ಜುಲೈ 18ರಿಂದ ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿದೆ. ಸಾಂಗ್ ಶೂಟ್ ಥೈಲ್ಯಾಂಡ್‌ನಲ್ಲಿ ನಡೆಯಲಿದೆ. ‘ಬ್ರಹ್ಮಚಾರಿ’ ಸಿನಿಮಾ ನಿರ್ದೇಶಕ ಚಂದ್ರ ಮೋಹನ್‌ (Chandra Mohan) ಈ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ.

    ಸ್ಟಾರ್ ನಟರ ಸಿನಿಮಾಗಳಿಗೆ ನಾಯಕಿಯಾಗುವ ಮೂಲಕ ಶರಣ್ಯ ಶೆಟ್ಟಿ ಬಂಪರ್ ಆಫರ್ಸ್ ಗಿಟ್ಟಿಸಿಕೊಳ್ತಿದ್ದಾರೆ. ಚಿತ್ರರಂಗದಲ್ಲಿ ಮೊದಲೇ ಶೆಟ್ರ ಹವಾ ಜೋರಾಗಿದೆ. ಶರಣ್ಯ ಶೆಟ್ಟಿ ಅವರು ಅದೆಷ್ಟರ ಮಟ್ಟಿಗೆ ಮೋಡಿ ಮಾಡುತ್ತಾರೆ ಅಂತಾ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೋಲ್ಡನ್ ಹೀರೋಗೆ ಜೋಡಿಯಾದ ‘ಗಟ್ಟಿಮೇಳ’ ನಟಿ ಶರಣ್ಯ ಶೆಟ್ಟಿ

    ಗೋಲ್ಡನ್ ಹೀರೋಗೆ ಜೋಡಿಯಾದ ‘ಗಟ್ಟಿಮೇಳ’ ನಟಿ ಶರಣ್ಯ ಶೆಟ್ಟಿ

    ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ‘ಕೃಷ್ಣಂ ಪ್ರಣಯ ಸಖಿ’ಯಾಗಿ ಎಂಟ್ರಿ ಕೊಡುತ್ತಾ ಇರೋದು ಗೊತ್ತೆ ಇದೆ. ಲವರ್ ಬಾಯ್ ಗಣೇಶ್‌ಗೆ ಜೋಡಿಯಾಗಿ ಮಾಳವಿಕಾ ಮಾತ್ರವಲ್ಲ ಇದೀಗ ಮತ್ತೋರ್ವ ಯುವ ನಟಿಯ ಎಂಟ್ರಿಯಾಗಿದೆ. ಗೋಲ್ಡನ್ ಹೀರೋ ಗಣಿಗೆ ನಾಯಕಿಯಾಗಿ ಕಿರುತೆರೆಯ ಬ್ಯೂಟಿ ಶರಣ್ಯ ಶೆಟ್ಟಿ (Sharanya Shetty) ಕಾಣಿಸಿಕೊಳ್ತಿದ್ದಾರೆ.

    ನಟ ಗಣೇಶ್ ಅವರ ಹುಟ್ಟುಹಬ್ಬದಂದು ‘ಕೃಷ್ಣಂ ಪ್ರಣಯ ಸಖಿʼ (Krishnam Pranaya Sakhi) ಸಿನಿಮಾದ ಫಸ್ಟ್ ಲುಕ್ ರಿವೀಲ್ ಆಗಿತ್ತು. ಮೊದಲ ಪೋಸ್ಟರ್ ಲುಕ್‌ನಿಂದಲೇ ಗಣೇಶ್ ಅಭಿಮಾನಿಗಳ ಗಮನ ಸೆಳೆದಿದ್ದರು. ಗಣೇಶ್ ಅಭಿನಯದ 41ನೇ ಸಿನಿಮಾಗೆ ‘ಕೃಷ್ಣಂ ಪ್ರಣಯ ಸಖಿ’ ಎಂದು ಟೈಟಲ್ ಇಡಲಾಗಿದೆ. ಈ ಪೋಸ್ಟರ್‌ನಲ್ಲಿ ಗಣೇಶ್ ಮನೆ ಕೆಲಸ ಮಾಡುವ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್ ಧರಿಸಿ ಹೈ ಫೈ ಆಗಿರುವ ಗಣೇಶ್ ಕೈಯಲ್ಲಿ ಬಕೆಟ್, ಪೊರಕೆ, ನೆಲ ಒರೆಸುವ ಸ್ಟಿಕ್ ಹಿಡಿದು ಹೊರಟಿದ್ದಾರೆ. ಟೈಟಲ್ ಕೇಳಿದ್ರೆ ಗಣೇಶ್ ಲವರ್ ಬಾಯ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಗೊತ್ತಾಗುತ್ತಿದೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಆರಂಭವಾಗಿದ್ದು, ಗಣೇಶ್‌ಗೆ ಜೋಡಿಯಾಗಿ ಮಾಳವಿಕಾ ಸಾಥ್ ನೀಡಿದ್ದಾರೆ. ಗಣೇಶ್- ಮಾಳವಿಕಾ (Malavika) ಭಾಗದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಹೀಗಿರುವಾಗ ಮತ್ತೊರ್ವ ನಾಯಕಿಯ ಎಂಟ್ರಿಯಾಗಿದೆ. ಕಿರುತೆರೆಯ ‘ಗಟ್ಟಿಮೇಳ’ ಸೀರಿಯಲ್‌ನಲ್ಲಿ ಖಳನಾಯಕಿಯಾಗಿ ಮೋಡಿ ಮಾಡಿದ್ದ ಶರಣ್ಯ ಶೆಟ್ಟಿ ಈಗ ಗಣೇಶ್ ಜೊತೆ ನಟಿಸುವ ಸುವರ್ಣಾವಕಾಶ ಗಿಟ್ಟಿಸಿಕೊಂಡಿದ್ದಾರೆ.

    ಈಗಾಗಲೇ ಶರಣ್ಯ, 1980, ಪೆಂಟಗನ್, ಹುಟ್ಟುಹಬ್ಬದ ಶುಭಾಶಯಗಳು, ರವಿ ಬೋಪಣ್ಣ, ಸ್ಪೂಕಿ ಕಾಲೇಜ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ನಟಿ ಶರಣ್ಯ ಜೀವ ತುಂಬಲಿದ್ದಾರೆ. ರೊಮ್ಯಾಂಟಿಕ್-ಕಾಮಿಡಿಯಾಗಿರೋ ಈ ಸಿನಿಮಾ ಜುಲೈ ಅಂತ್ಯದಲ್ಲಿ ಮತ್ತೆ ಶೂಟಿಂಗ್ ಶುರುವಾಗಲಿದೆ. ಶ್ರೀನಿವಾಸ್ ರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕಾ ನಾಯರ್, ಶರಣ್ಯ ಶೆಟ್ಟಿ ಈ ಜೋಡಿಯನ್ನ ನೋಡಲು ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೆಂಕಟ್ ಭಾರದ್ವಾಜ್ ನಿರ್ದೇಶನದ ಚಿತ್ರಕ್ಕೆ ‘ಯು’ ಪ್ರಮಾಣಪತ್ರ

    ವೆಂಕಟ್ ಭಾರದ್ವಾಜ್ ನಿರ್ದೇಶನದ ಚಿತ್ರಕ್ಕೆ ‘ಯು’ ಪ್ರಮಾಣಪತ್ರ

    ರೋಮ್ಯಾಂಟಿಕ್ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ನಗುವಿನ ಹೂಗಳ ಮೇಲೆ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈಗ ಸೆನ್ಸಾರ್ ಮಂಡಳಿಯಿಂದ ಕ್ಲೀನ್ ಚಿಟ್ ಪಡೆದುಕೊಂಡಿದೆ. ಯಾವುದೇ ಕಟ್ ಮತ್ತು ಯಾವುದೇ ದೃಶ್ಯಕ್ಕೆ ಮ್ಯೂಟ್ ಇಲ್ಲದೇ ಯು ಪ್ರಮಾಣ ಪತ್ರ  ತನ್ನದಾಗಿಸಿಕೊಂಡಿದೆ.

    ಶ್ರೀರಂಗ , ಕೆಂಪಿರ್ವೆ ಮತ್ತು  ಆಮ್ಲೆಟ್  ಸೇರಿದಂತೆ ಹತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿರುವ ವೆಂಕಟ್ ಭಾರದ್ವಾಜ್ (Venkat Bharadwaj) ಆಕ್ಷನ್ ಕಟ್ ಹೇಳಿರುವ ನಗುವಿನ ಹೂಗಳ ಮೇಲೆ  (Naguvin Hugala mele) ಸಿನಿಮಾದಲ್ಲಿ ಕಿರುತೆರೆಯಲ್ಲಿ ಖ್ಯಾತಿ ಗಳಿಸಿರುವ ಅಭಿದಾಸ್ (Abhidas), ಶರಣ್ಯ ಶೆಟ್ಟಿ (Sharanya Shetty)ಜೋಡಿಯಾಗಿ ನಟಿಸುತ್ತಿದ್ದು, ಬಾಲ ರಾಜವಾಡಿ, ಆಶಾ ಸುಜಯ್, ಗಿರೀಶ್, ನಂಜಪ್ಪ, ಅಭಿಷೇಕ್ ಅಯ್ಯಂಗರ್, ಹರ್ಷಿತ್ ಗೌಡ, ಹರೀಶ್ ಚೌಹಾನ್, ಹರ್ಷ ಗೋ ಭಟ್ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್‌ ಖಾನ್

    ಈಗಾಗಲೇ ಬಿಡುಗಡೆಯಾಗಿರುವ ಇರಲಿ ಬಿಡು ಈ ಜೀವ ನಿನಗಾಗಿ ಎಂಬ ರೋಮ್ಯಾಂಟಿಕ್ ಹಾಡು ಪ್ರೇಕ್ಷಕರನ್ನು ಆಕರ್ಷಿಸುತ್ತಿದೆ. ವೆಂಕಟ್‌ ಭಾರದ್ವಾಜ್‌ ಕಥೆ, ಚಿತ್ರಕಥೆ ಬರೆದು‌ ನಿರ್ದೇಶಿಸಿರುವ ನಗುವಿನ ಹೂಗಳ ಮೇಲೆ ಸಿನಿಮಾವನ್ನು ಟಾಲಿವುಡ್ ನಲ್ಲಿ ಸೂಪರ್ ಹಿಟ್ ಚಿತ್ರಗಳಾದ  ಬೆಂಗಾಲ್ ಟೈಗರ್, ಪಂಥಂ, ಒರೆ ಬುಜ್ಜುಗ , ಒಡೇಲ ರೈಲ್ವೆ ಸ್ಟೇಷನ್  ಮತ್ತು ಪ್ಯಾರ್  ಮೇ ಪಡೀಪೊಯಾನು ಚಿತ್ರಗಳನ್ನು ನಿರ್ಮಾಣ ಮಾಡಿರುವ  ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಇವರ ನಿರ್ಮಾಣದ ಮೊದಲ ಕನ್ನಡ ಸಿನಿಮಾವಾಗಿದೆ.

    ಅಭಿಷೇಕ್ ಅಯ್ಯಂಗಾರ್ ಸಂಭಾಷಣೆ, ಪ್ರಮೋದ್ ಭಾರತಿಯ ಛಾಯಾಗ್ರಹಣ, ಚಂದನ್ ಪಿ ಸಂಕಲನ, ಲವ್ ಪ್ರಾನ್ ಮೆಹತಾ ಸಂಗೀತ ನಿರ್ದೇಶನ, ಟೈಗರ್ ಶಿವು ಸಾಹಸವಿರುವ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.