Tag: ಶರತ್ ಮಡಿವಾಳ

  • ಪೊಳಲಿ ಕೊಡಿಮರ ವಿಚಾರದಲ್ಲಿ ನನ್ನ ವಿರುದ್ಧ ಅಪಪ್ರಚಾರ -ರಮಾನಾಥ ರೈ

    ಪೊಳಲಿ ಕೊಡಿಮರ ವಿಚಾರದಲ್ಲಿ ನನ್ನ ವಿರುದ್ಧ ಅಪಪ್ರಚಾರ -ರಮಾನಾಥ ರೈ

    ಮಂಗಳೂರು: ತಾಲೂಕಿನ ಪೊಳಲಿ ದೇವಸ್ಥಾನ ಕೊಡಿ ಮರ ಕಡಿದ ವಿಚಾರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಕಣ್ಣೀರಿಟ್ಟಿದ್ದಾರೆ.

    ದೇವಸ್ಥಾನದ ಧ್ವಜ ಸ್ಥಂಭ ನಿರ್ಮಾಣಕ್ಕಾಗಿ ಮರವೊಂದನ್ನು ಕೊಡಗಿನ ಸಂಪಾಜೆ ಅರಣ್ಯ ಪ್ರದೇಶದಿಂದ ಕಡಿದು ತರಲಾಗಿತ್ತು. ಅಷ್ಟಕ್ಕೂ ಈ ಮರವನ್ನು ಬಂಟ್ವಾಳದ ಬಿಲ್ಲವ ಜನಾಂಗದವರು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ್ದರು. ಆ ಮರವನ್ನು ಕಡಿದಿದ್ದಕ್ಕೆ ಅರಣ್ಯ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ 21 ಲಕ್ಷ ರೂಪಾಯಿ ಮರದ ಮೊತ್ತವಾಗಿ ಪಾವತಿಸುವಂತೆ ಹೇಳಿತ್ತು. ಸರಕಾರ ಕೊನೆಗೆ ದೇವಸ್ಥಾನಕ್ಕೆ ರಿಯಾಯಿತಿ ನೀಡಿ 10 ಲಕ್ಷ 70 ಸಾವಿರ ರೂ ಪಾವತಿಸುವಂತೆ ಹೇಳಿತು.

    ರಮಾನಾಥ ರೈ ಈ ಪೊಳಲಿ ರಾಜೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಗೌರವಾಧ್ಯಕ್ಷರಾಗಿದ್ದರು. ಅರಣ್ಯ ಇಲಾಖೆಯೇ ಅವರ ಕೈಯ್ಯಲ್ಲಿತ್ತು. ಅರಣ್ಯ ಸಚಿವರಾಗಿದ್ದರೂ ದೇವಸ್ಥಾನ ಅರಣ್ಯ ಇಲಾಖೆಗೆ ಹಣ ಕಟ್ಟಬೇಕಾಯಿತು ಅಂತಾ ಆರೋಪಗಳು ಕೇಳಿಬಂದಿತ್ತು. ಈ ಆರೋಪದಿಂದ ನೊಂದ ರೈ ಪೊಳಲಿ ರಾಜೇಶ್ವರಿ ದೇವಸ್ಥಾನದಲ್ಲಿ ಕಣ್ಣೀರಿಟ್ಟಿದ್ದಾರೆ.

    ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರಮಾನಾಥ ರೈ ಈ ವಿಚಾರದಲ್ಲಿ ನನ್ನ ಪಾತ್ರವೇನೂ ಇಲ್ಲ. ಈ ವಿಚಾರದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಕೈವಾಡವಿದೆ. ಸುಮ್ಮನೇ ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ ಎಂದು ಕಣ್ಣೀರಿಟ್ಟಿದ್ದಾರೆ.

    ರಮಾನಾಥ ರೈ ಈ ಹಿಂದೆ ಕೇರಳದ ಕಾನತ್ತೂರು ದೇವಸ್ಥಾನಕ್ಕೂ ಕೂಡಾ ಭೇಟಿ ನೀಡಿದ್ದರು. ಮಂಗಳೂರಿನಲ್ಲಿ ನಡೆದ ಕೋಮುಗಲಭೆ ಹಾಗೂ ಶರತ್ ಮಡಿವಾಳ ಹತ್ಯೆ ಪ್ರಕರದಲ್ಲಿ ತಮ್ಮ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ. ತಾವು ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಇಲ್ಲವಾದರೆ ತಮ್ಮ ಹೆಸರನ್ನು ಅಪಪ್ರಚಾರ ಮಾಡುತ್ತಿರುವವರನ್ನು ಕರೆಸಿ ವಿಚಾರಿಸಲಿ ಎಂದು ದೈವಸ್ಥಾನದಲ್ಲಿ ರೈ ವಿನಂತಿ ಮಾಡಿಕೊಂಡಿದ್ದರು.

  • ಬಿಸಿಯೂಟ, ಶರತ್ ಮಡಿವಾಳ ಹತ್ಯೆ ಕುರಿತ ಆರೋಪಕ್ಕೆ ರಮಾನಾಥ ರೈ ಬೇಸರ

    ಬಿಸಿಯೂಟ, ಶರತ್ ಮಡಿವಾಳ ಹತ್ಯೆ ಕುರಿತ ಆರೋಪಕ್ಕೆ ರಮಾನಾಥ ರೈ ಬೇಸರ

    ಮಂಗಳೂರು: ಸರಕಾರಿ ಶಾಲೆಗಳಿಗೆ ಮಾತ್ರ ಬಿಸಿಯೂಟ ನೀಡುವುದು ನಿಯಮ ಎನ್ನುವ ಕಾರಣಕ್ಕೆ ಮಧ್ಯಾಹ್ನದ ಊಟವನ್ನು ನಿಲ್ಲಿಸಲಾಗಿತ್ತು. ಆದರೆ ಶಾಲೆಯ ಮಕ್ಕಳ ಅನ್ನ ಕಸಿದುಕೊಂಡ್ರು ಅಂತ ನನ್ನ ಮೇಲೆ ಗೂಬೆ ಕೂರಿಸಿದ್ರು ಅಂತ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶಾಲೆಗೆ ಮಧ್ಯಾಹ್ನದ ಬಿಸಿಯೂಟ, ಕೊಲ್ಲೂರು ಮೂಕಾಂಬಿಕೆ ದೇವಾಸ್ಥಾನದಿಂದ ಬರುತ್ತಿತ್ತು. ಆದ್ರೆ ಸರ್ಕಾರದ ನಿಯಮದಂತೆ ಅದನ್ನು ನಿಲ್ಲಿಸಲಾಗಿತ್ತು. ಆದ್ರೆ ಬಳಿಕ ನನ್ನ ಮೇಲೆಯೇ ಆರೋಪ ಮಾಡಲಾಗಿತ್ತು ಅಂತ ಅವರು ವಿಷಾದ ವ್ಯಕ್ತಪಡಿಸಿದ್ರು.

    ಶಿಕ್ಷಣ ಇಲಾಖೆಯಿಂದ ಬಿಸಿಯೂಟ ನೀಡುವ ವ್ಯವಸ್ಥೆ ಇದೆ. ಅದರೆ ಅಂದು ಬಿಸಿಯೂಟ ಕೊಡ್ತೀವಿ ಅಂದ್ರು ಬೇಡ ಎಂದಿದ್ದರು. ಹೀಗಿರುವಾಗ ಮಕ್ಕಳನ್ನು ಬೀದಿಯಲ್ಲಿ ನಿಲ್ಲಿಸಿ ನನ್ನ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡಿದ್ದರು. ಆದರೆ ಈಗ ಅವರೇ ಬಿಸಿಯೂಟ ಕೇಳಿದ್ದಾರೆ. ಇಲಾಖೆ ಕೊಡ್ತಾ ಇದೆ. ಇದರ ಬಗ್ಗೆ ಈಗ್ಯಾಕೆ ಯಾರು ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

    ಇನ್ನು ಬಂಟ್ವಾಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ವಿಚಾರದಲ್ಲಿ ಕೂಡ ಬಿಜೆಪಿಯವರು ಅಪಪ್ರಾಚಾರ ಮಾಡಿದರು. ಅದಕ್ಕಾಗಿ ಕಾನತ್ತೂರಿಗೆ ಹೋಗಿ ಬೇಡಿಕೊಂಡರೂ ತಮಾಷೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

  • ಕಾನತ್ತೂರಿಗೆ ಭೇಟಿ ನೀಡಿದ್ದು ನಿಜ, ಪ್ರಾರ್ಥನೆ ಏನನ್ನೋದು ನನಗೆ ಬಿಟ್ಟಿದ್ದು- ರಮಾನಾಥ ರೈ ಸ್ಪಷ್ಟನೆ

    ಕಾನತ್ತೂರಿಗೆ ಭೇಟಿ ನೀಡಿದ್ದು ನಿಜ, ಪ್ರಾರ್ಥನೆ ಏನನ್ನೋದು ನನಗೆ ಬಿಟ್ಟಿದ್ದು- ರಮಾನಾಥ ರೈ ಸ್ಪಷ್ಟನೆ

    ಮಂಗಳೂರು: ಕಾನತ್ತೂರು ದೈವಸ್ಥಾನಕ್ಕೆ ಭೇಟಿ ನೀಡಿ ದೂರು ನೀಡಿರುವ ಕುರಿತು ಮಾಜಿ ಸಚಿವ ರಮಾನಾಥ ರೈ ಸ್ಪಷ್ಟನೆ ನಿಡಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೌದು ನಾನು ಕಾನತ್ತೂರಿಗೆ ಭೇಟಿ ನೀಡಿದ್ದೇನೆ. ನಾನೊಬ್ಬ ಪರಿಪೂರ್ಣ ಆಸ್ತಿಕವಾದಿ. ದೈವ ದೇವರುಗಳ ಮೇಲೆ ಅಚಲ ನಂಬಿಕೆ ಹೊಂದಿದ್ದೇನೆ. ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಕಾನತ್ತೂರಿನಲ್ಲಿ ಪ್ರಾರ್ಥನೆ ಮಾಡಿದ್ದೇನೆ. ನನ್ನ ವಿರುದ್ಧ ಸುಳ್ಳು ಅಪಪ್ರಚಾರ ಮಾಡಿದ್ದಾರೆ, ಅದಕ್ಕಾಗಿ ಪ್ರಾರ್ಥಿಸಿದ್ದೇನೆ. ಏನು ಪ್ರಾರ್ಥನೆ ಅನ್ನೋದು ನನಗೆ ಬಿಟ್ಟಿದ್ದು. ಆರೋಪಿಗಳ ಪತ್ತೆಯಾಗಿದೆ, ಆದ್ರೂ ಆರೋಪ ಮಾಡಿರುವುದು ಯಾವ ನ್ಯಾಯ ಅಂತ ಪ್ರಶ್ನಿಸಿದ್ದಾರೆ.

    ತಮ್ಮ ಮೇಲಿನ ಅಪಪ್ರಚಾರವನ್ನು ಖಂಡಿಸಿ ರೈ ನ್ಯಾಯ ದೇಗುಲದ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿತ್ತು. ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಗಳಲ್ಲಿ ಬಿ. ರಮಾನಾಥ ರೈ ಮೇಲೆ ಆರೋಪವೂ ಕೂಡಾ ಕೇಳಿಬಂದಿತ್ತು. ಅಲ್ಲದೇ ಈ ವಿಚಾರ ಮತಗಳ ಧೃವೀಕರಣಕ್ಕೂ ಕಾರಣವಾಗಿತ್ತು. ಈ ಬೆಳವಣಿಗೆಗಳಿಂದ ಮನನೊಂದ ಮಾಜಿ ಸಚಿವ ರಮಾನಾಥ ರೈ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೂರು ಸಲ್ಲಿಸಿದ್ದರು ಎಂದು ವರದಿಯಾಗಿತ್ತು.

    ಶರತ್ ಹತ್ಯೆ ಪ್ರಕರಣದಲ್ಲಿ ನನ್ನ ಹೆಸರನ್ನು ಅಪಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ನನಗೆ ಮಾನಸಿಕವಾಗಿ ತೀವ್ರ ನೋವುಂಟಾಗಿದೆ. ನಾನು ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಲಿ. ಸುಮ್ಮನೇ ನನ್ನ ಮೇಲೆ ಆರೋಪ ಮಾಡಿದವರನ್ನು ಕರೆದು ವಿಚಾರಣೆ ನಡೆಸಿ ಎಂದು ದೇವಸ್ಥಾನದ ಸನ್ನಿಧಿಯಲ್ಲಿ ವಿನಂತಿ ಮಾಡಿಕೊಂಡಿದ್ದರು ಎಂಬುದಾಗಿ ತಿಳಿದುಬಂದಿತ್ತು.

  • ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದ ಮೊರೆಹೋದ ರಮಾನಾಥ ರೈ!

    ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದ ಮೊರೆಹೋದ ರಮಾನಾಥ ರೈ!

    ಮಂಗಳೂರು: ಮಾಜಿ ಸಚಿವ ರಮಾನಾಥ ರೈ ಅವರು ಕೇರಳದ ಕಾಸರಗೋಡು ಜಿಲ್ಲೆಯಲ್ಲಿರೋ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನದ ಮೊರೆ ಹೋಗಿದ್ದಾರೆ.

    ವಿಧಾಸಭಾ ಚುನಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ರಮಾನಾಥ ರೈ ತಮ್ಮ ಮೇಲಿನ ಅಪಪ್ರಚಾರವನ್ನು ಖಂಡಿಸಿ ಇದೀಗ ನ್ಯಾಯದೇಗುಲದ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

    ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಗಳಲ್ಲಿ ಬಿ. ರಮಾನಾಥ ರೈ ಮೇಲೆ ಯೂ ಆರೋಪ ಕೇಳಿಬಂದಿತ್ತು. ಅಲ್ಲದೇ ಈ ವಿಚಾರ ಮತಗಳ ಧೃವೀಕರಣಕ್ಕೂ ಕಾರಣವಾಗಿತ್ತು. ಈ ಬೆಳವಣಿಗೆಗಳಿಂದ ಮನನೊಂದ ಮಾಜಿ ಸಚಿವ ರಮಾನಾಥ ರೈ ಅವರು ದೈವಸ್ಥಾನಕ್ಕೆ ಭೇಟಿ ನೀಡಿ ದೂರು ಸಲ್ಲಿಸಿದ್ದಾರೆ.

    ಶರತ್ ಹತ್ಯೆ ಪ್ರಕರಣದಲ್ಲಿ ನನ್ನ ಹೆಸರನ್ನು ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ನನಗೆ ಮಾನಸಿಕವಾಗಿ ತೀವ್ರ ನೋವುಂಟಾಗಿದೆ. ನಾನು ತಪ್ಪು ಮಾಡಿದ್ದರೆ ನನಗೆ ಶಿಕ್ಷೆಯಾಗಲಿ. ಸುಮ್ಮನೇ ನನ್ನ ಮೇಲೆ ಆರೋಪ ಮಾಡಿದವರನ್ನು ಕರೆದು ವಿಚಾರಣೆ ನಡೆಸಿ ಎಂದು ದೈವಸ್ಥಾನದ ಸನ್ನಿಧಿಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

    ಕಾಸರಗೋಡು ಕಾನತ್ತೂರು ಕ್ಷೇತ್ರ ಸತ್ಯ ಪ್ರಮಾಣಗಳಿಗೆ ಹೆಸರುವಾಸಿಯಾದ ಕ್ಷೇತ್ರ. ಇಲ್ಲಿ ಸುಳ್ಳು ಪ್ರಮಾಣ ಮಾಡಿದವರಿಗೆ ಅಪಾಯ ತಪ್ಪಿದ್ದಲ್ಲ ಎಂಬ ಪ್ರತೀತಿಯೂ ಇದೆ.

    ಶರತ್ ಮಡಿವಾಳ ಹತ್ಯೆ: ಮಂಗಳೂರಲ್ಲಿ ಕಳೆದ ವರ್ಷ ಸಾಕಷ್ಟು ಕೋಮುಗಲಭೆಗಳು ನಡೆದಿದ್ದವು. ಈ ಗಲಭೆಯಲ್ಲಿ 2017 ರ ಜುಲೈ 7 ರಂದು ಬಂಟ್ವಾಳದ ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಎಂಬವರ ಹತ್ಯೆ ನಡೆದಿತ್ತು. ಈ ಕೊಲೆಯಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂಬ ಆರೋಪ ಕೇಳಿಬಂದಿತ್ತು. ಶರತ್ ಮಡಿವಾಳ ಅವರ ತಂದೆ ತನಿಯಪ್ಪ ಮಡಿವಾಳ ತಮ್ಮ ಮಗನ ಕೊಲೆಯ ಹಿಂದೆ ಮಾಜಿ ಸಚಿವ ಬಿ. ರಮಾನಾಥ ರೈ ಕೈವಾಡವಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದರು.

  • ಅಶ್ರಫ್ ಸಾಯ್ಸಿದ್ದು ಬಿಜೆಪಿ, ಶರತ್ ಕೊಂದಿದ್ದು ಪಿಎಫ್‍ಐ: ಮತ್ತೆ ಬೆಂಕಿ ಹಚ್ಚಿದ ರೈ

    ಅಶ್ರಫ್ ಸಾಯ್ಸಿದ್ದು ಬಿಜೆಪಿ, ಶರತ್ ಕೊಂದಿದ್ದು ಪಿಎಫ್‍ಐ: ಮತ್ತೆ ಬೆಂಕಿ ಹಚ್ಚಿದ ರೈ

    ಬೆಂಗಳೂರು: ರಾಜ್ಯದಲ್ಲಿ ಜನರ ಹತ್ಯೆಗಳನ್ನು ಮಾಡುವುದು ಎರಡೇ ಪಕ್ಷಗಳು ಅಂತ ಹೇಳುವ ಮೂಲಕ ತಣ್ಣಗಾಗಿರೋ ಕರಾವಳಿಯಲ್ಲಿ ಮತ್ತೆ ಬೆಂಕಿ ಹಚ್ಚುವ ಕೆಲಸಕ್ಕೆ ಅರಣ್ಯ ಸಚಿವ ರಮಾನಾಥ ರೈ ಕೈ ಹಾಕಿದ್ದಾರೆ.

    ಎಸ್‍ಡಿಪಿಐ-ಪಿಎಫ್‍ಐ ಮತ್ತು ಬಿಜೆಪಿ ಕೊಲೆಯ ರಾಜಕಾರಣ ಮಾಡುತ್ತಿದೆ. ಅಶ್ರಫ್‍ನನ್ನು ಬಿಜೆಪಿಯೇ ಕೊಲೆ ಮಾಡಿದೆ. ಅದಕ್ಕೆ ಶರತ್‍ನನ್ನು ಎಸ್‍ಡಿಪಿಐ-ಪಿಎಫ್‍ಐ ಕೊಲೆ ಮಾಡಿದೆ ಅಂತ ಹೇಳಿದ್ದಾರೆ.

    ಈ ಎರಡು ಮತೀಯ ಶಕ್ತಿಗಳು ಕೊಲೆ ರಾಜಕಾರಣ ಮಾಡುತ್ತಿವೆ. ಈ ಮಧ್ಯೆ ನನ್ನ ಬಳಿ ರಾಜೀನಾಮೆ ಕೇಳ್ತಿದ್ದಾರೆ ಅಂತ ಅವರು ಹೇಳಿದರು.

    ಇದನ್ನೂ ಓದಿ: 20 ವರ್ಷ ಬಟ್ಟೆ ಒಗೆದು ಕೊಟ್ರೂ ರೈ ನನ್ನ ನೋವನ್ನು ಕೇಳಲು ಬಂದಿಲ್ಲ: ಶರತ್ ತಂದೆ ತನಿಯಪ್ಪ ಕಣ್ಣೀರು

    ಇದನ್ನೂ ಓದಿ: ಮೃತ ಶರತ್ ಮಡಿವಾಳ ಮನೆಗೆ ಸಚಿವ ರಮಾನಾಥ ರೈ ಭೇಟಿ

  • ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೇಸ್: ಕೊಲೆ ಮಾಡಿದ್ದು ಯಾಕೆ? ಆರೋಪಿಗಳು ಯಾರು?

    ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೇಸ್: ಕೊಲೆ ಮಾಡಿದ್ದು ಯಾಕೆ? ಆರೋಪಿಗಳು ಯಾರು?

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ತಲ್ಲಣ ಮೂಡಿಸಿದ್ದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೈದಿದ್ದ ಆರೋಪಿಗಳು ಕೊನೆಗೂ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟಿರುವ ಪೊಲೀಸರು ಮುಚ್ಚಿ ಹೋಗುತ್ತದೆ ಎನ್ನುವ ಆರೋಪಕ್ಕೆ ಗುರಿಯಾಗಿದ್ದ ಪ್ರಕರಣಕ್ಕೆ ಜೀವ ತುಂಬಿದ್ದಾರೆ.

    ಚಾಮರಾಜನಗರ ಪಿಎಫ್‍ಐ ಜಿಲ್ಲಾ ಅಧ್ಯಕ್ಷ ಖಲೀಲುಲ್ಲಾ ಹಾಗೂ ಬಂಟ್ವಾಳದ ಸಜಿಪ ನಿವಾಸಿ ಪಿಎಫ್‍ಐ ಕಾರ್ಯಕರ್ತ ಅಬ್ದುಲ್ ಶಾಫಿ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಇನ್ನುಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

    ಕಳೆದ ಜುಲೈ 4ರಂದು ರಾತ್ರಿ 9.30ಕ್ಕೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ಲಾಂಡ್ರಿ ಶಾಪ್‍ಗೆ ಬಾಗಿಲು ಹಾಕುತ್ತಿದ್ದ ಶರತ್ ಮಡಿವಾಳನನ್ನು ಮೂವರು ಆಗಂತುಕರು ಬೈಕಿನಲ್ಲಿ ಬಂದು ಹತ್ಯೆಗೈದಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಶರತ್ ದೇಹವನ್ನು ಸ್ಥಳೀಯರು ಸೇರಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಮೂರು ದಿನಗಳ ಬಳಿಕ ಜುಲೈ 7ರಂದು ಶರತ್ ಸಾವನ್ನಪ್ಪಿರುವುದನ್ನು ಪೊಲೀಸರು ಘೋಷಿಸಿದ್ದರು.

    ಘಟನೆಗೆ ಸಂಬಂಧಿಸಿದಂತೆ ಬಿ.ಸಿ.ರೋಡಿನಲ್ಲಿ ನಿಷೇಧಾಜ್ಞೆ ನಡುವೆಯೇ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಸೇರಿ ಪ್ರತಿಭಟನೆ ನಡೆಸಿದ್ದು ಪೊಲೀಸ್ ಇಲಾಖೆಗೆ ಎಚ್ಚರಿಕೆ ರವಾನಿಸಿದಂತಾಗಿತ್ತು. ಆ ಬಳಿಕ ಪೊಲೀಸರು ಶರತ್ ಹತ್ಯೆ ಪ್ರಕರಣದ ತನಿಖೆಗೆ ಏಳು ಪ್ರತ್ಯೇಕ ಪೊಲೀಸರ ತಂಡಗಳನ್ನು ರಚಿಸಿ, ಮುಂಬೈ, ಬೆಂಗಳೂರು, ಕೇರಳಕ್ಕೂ ಕಳಿಸಿದ್ದರು. ಆದರೆ ಎರಡು ವಾರಗಳ ಹಿಂದೆ ಪೊಲೀಸ್ ತಂಡಗಳು ಬರಿಗೈಲಿ ವಾಪಸಾಗಿದ್ದರಿಂದ ಪ್ರಕರಣ ಇನ್ನೇನು ಮುಚ್ಚಿ ಹೋಗುತ್ತದೆ ಎನ್ನುವ ಅನುಮಾನ ಕೇಳಿಬಂದಿತ್ತು.

    ಈ ನಡುವೆ, ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಕೆಲವರನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಪಶ್ಚಿಮ ವಲಯ ಐಜಿಪಿ ಸ್ಥಾನದಿಂದ ನಿರ್ಗಮಿಸುತ್ತಿರುವ ಹರಿಶೇಖರನ್, ಹಠಾತ್ತಾಗಿ ಶರತ್ ಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ. ಏಳು ತಂಡಗಳಲ್ಲಿ 30 ಪೊಲೀಸರು ಕಾರ್ಯನಿರ್ವಹಿಸಿದ್ದು ಸವಾಲಾಗಿದ್ದ ಪ್ರಕರಣವನ್ನು ಬೇಧಿಸಿದ್ದಾರೆ, ಒಟ್ಟು ಐದು ಮಂದಿ ಪ್ರಕರಣದ ಆರೋಪಿಗಳಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

    ಹತ್ಯೆಗೆ ಕಾರಣ ಏನು?
    ಶರತ್ ಹತ್ಯೆಯ ಎರಡು ವಾರಗಳ ಹಿಂದೆ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿ ಎಸ್‍ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಕೊಲೆ ಮಾಡಲಾಗಿತ್ತು. ಕಲ್ಲಡ್ಕದಲ್ಲಿ ಕಲ್ಲು ತೂರಾಟ, ಚೂರಿ ಇರಿತದ ಕಾರಣದಿಂದ ತಿಂಗಳ ಪರ್ಯಂತ ಸೆಕ್ಷನ್ ಇದ್ದರೂ ಈ ಕೊಲೆ ನಡೆದಿದ್ದು ಈ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಅಶ್ರಫ್ ಹತ್ಯೆಯ ಪ್ರತೀಕಾರಕ್ಕಾಗಿ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿಯೂ ಹೊರಬಿದ್ದಿದೆ.

    ಆರೋಪಿಗಳು ಪಿಎಫ್‍ಐ ಸಂಘಟನೆಯ ಸಕ್ರಿಯ ಸದಸ್ಯರಾಗಿದ್ದು ಮತೀಯ ದ್ವೇಷಕ್ಕೆ ಅಮಾಯಕ ಶರತ್‍ನ ರಕ್ತ ಹೀರಿದ್ದಾರೆ. ಪ್ರಕರಣ ಪ್ರಮುಖ ಆರೋಪಿ ಚಾಮರಾಜನಗರ ಜಿಲ್ಲೆಯ ಪಿಎಫ್‍ಐ ಅಧ್ಯಕ್ಷ ಖಲೀಲುಲ್ಲಾ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಪರೋಕ್ಷ ಭಾಗಿಯಾದವರ ಮಾಹಿತಿಗಾಗಿ ಪೊಲೀಸರು ಕಠಿಣ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹರಿಶೇಖರನ್ ಹೇಳಿದ್ದಾರೆ.

    ಆರೋಪಿಗಳ ಬಂಧನದಿಂದ 43 ದಿನಗಳಿಂದ ಮಗನ ಸಾವಿನ ನ್ಯಾಯಕ್ಕಾಗಿ ಹಂಬಲಿಸುತ್ತಿದ್ದ ಶರತ್ ಹೆತ್ತವರಲ್ಲಿ ಸಮಾಧಾನ ಮೂಡಿದೆ. ಆದರೆ ಮತೀಯವಾದಿಗಳ ರಕ್ತ ದಾಹಕ್ಕೆ ಅಮಾಯಕರು ಬಲಿಯಾಗುತ್ತಿರುವುದು ದುರಂತ.

     

     

     

    https://www.youtube.com/watch?v=o40hIeKFh8E

  • ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ: ಮೂವರ ಬಂಧನ

    ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ: ಮೂವರ ಬಂಧನ

    ಮಂಗಳೂರು: ರಾಜ್ಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತರನ್ನು ಶಫೀ, ಷರೀಫ್, ಖಲಂದರ್ ಎಂಬುವುದಾಗಿ ಗುರುತಿಸಲಾಗಿದ್ದು, ಇವರ ಬಗ್ಗೆ ಪೂರ್ಣ ಮಾಹಿತಿ ತಿಳಿದುಬಂದಿಲ್ಲ.

    ಏನಿದು ಪ್ರಕರಣ?: ಕಳೆದ ಜುಲೈ 4 ರಂದು ರಾತ್ರಿ ಬಂಟ್ವಾಳ ತಾಲೂಕಿನ ಬಿಸಿರೋಡ್ ಬಳಿ ತನ್ನ ಲಾಂಡ್ರಿಯ ಬಾಗಿಲು ಹಾಕಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಶರತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಜುಲೈ 7 ರಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು. ಆ ಬಳಿಕ ರಾಜ್ಯಾದ್ಯಂತ ಸಾಕಷ್ಟು ಹೋರಾಟಗಳು ನಡೆದಿತ್ತು.

    ಆ ಬಳಿಕ ಪೊಲೀಸರು ಸುಮಾರು 7 ತನಿಖಾ ತಂಡಗಳನ್ನು ರಚಿಸಿ ಬೇರೆ ಬೇರೆ ಕಡೆಗಳಲ್ಲಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಅಲ್ಲದೇ ಪೊಲೀಸರಿಗೆ ಆರೋಪಿಗಳನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಘಟನೆ ಬಳಿಕ ಮಂಗಳೂರು, ಬಂಟ್ವಾಳ, ಬಿಸಿರೋಡಿನಲ್ಲಿ ಹಲವು ದಿನ 144 ಸೆಕ್ಷನ್ ಜಾರಿಯಾಗಿತ್ತು. ಸದ್ಯ ಇದೀಗ ಮೂವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    https://www.youtube.com/watch?v=o40hIeKFh8E

     

  • ದಕ್ಷಿಣ ಕನ್ನಡಕ್ಕೆ ಪೊಲೀಸ್ ಮುಖ್ಯಸ್ಥ ಆರ್‍ಕೆ ದತ್ತಾ ಭೇಟಿ

    ದಕ್ಷಿಣ ಕನ್ನಡಕ್ಕೆ ಪೊಲೀಸ್ ಮುಖ್ಯಸ್ಥ ಆರ್‍ಕೆ ದತ್ತಾ ಭೇಟಿ

    ಮಂಗಳೂರು: ಕೋಮು ಗಲಭೆಗೆ ಸಾಕ್ಷಿಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪೊಲೀಸ್ ಮಹಾನಿರ್ದೇಶಕ ಆರ್‍ಕೆ ದತ್ತಾ ಭೇಟಿ ನೀಡಿದ್ದಾರೆ.

    ಗುರುವಾರ ರಾತ್ರಿಯೇ ಡಿಜಿಪಿ ದತ್ತಾ ಮಂಗಳೂರಿಗೆ ಆಗಮಿಸಿದ್ದಾರೆ. ಜುಲೈ 10ರಂದು ಬೆಂಗಳೂರಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ಡಿಜಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡುವಂತೆ ಸೂಚಿಸಿದ್ದರು. ಪಶ್ಚಿಮ ವಲಯ ಐಜಿಪಿ ಹರಿಶೇಖರನ್, ಎಸ್‍ಪಿ ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಡಿಜಿಪಿ ಆರ್‍ಕೆ ದತ್ತಾ ಸಭೆ ನಡೆಸಲಿದ್ದಾರೆ.

    ಕೊಲೆಯಾಗಿರುವ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ನಿವಾಸಕ್ಕೂ ದತ್ತಾ ಅವರು ಭೇಟಿ ನೀಡುವ ಸಾಧ್ಯತೆ ಇದೆ. ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಶರತ್ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಂದ ಮಾಹಿತಿ ಪಡೆಯೋ ನಿರೀಕ್ಷೆ ಇದೆ. ಜೊತೆಗೆ ಕಲ್ಲು ತೂರಾಟ ನಡೆದ ಕೈಕಂಬ, ಬಿ.ಸಿ ರೋಡ್‍ಗೂ ಡಿಜಿ ಭೇಟಿ ನೀಡಲಿದ್ದಾರೆ.

  • ಮೃತ ಶರತ್ ಮಡಿವಾಳ ಮನೆಗೆ ಸಚಿವ ರಮಾನಾಥ ರೈ ಭೇಟಿ

    ಮೃತ ಶರತ್ ಮಡಿವಾಳ ಮನೆಗೆ ಸಚಿವ ರಮಾನಾಥ ರೈ ಭೇಟಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಮೃತ ಶರತ್ ಮಡಿವಾಳ ಮನೆಗೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ರಮಾನಾಥ ರೈ ಭೇಟಿ ನೀಡಿದ್ದಾರೆ.

    ಘಟನೆ ನಡೆದು ಒಂಬತ್ತು ದಿನಗಳ ಬಳಿಕ ರೈ ಬಂಟ್ವಾಳದ ಸಜಿಪದಲ್ಲಿರುವ ಶರತ್ ಮನೆಗೆ ಭೇಟಿ ನೀಡಿ ಶರತ್ ತಂದೆ ತನಿಯಪ್ಪ ಹಾಗೂ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಭೇಟಿ ವೇಳೆ ಸ್ಥಳೀಯರಿಗೆ ಮಾತ್ರ ರೈ ಬೆಂಬಲಿಗರು ಸೂಚನೆ ನೀಡಿದ್ದು, ಮಾಧ್ಯಮದವರ ಪ್ರವೇಶವನ್ನು ನಿರಾಕರಿಸಿದ್ದಾರೆ. ಅಲ್ಲದೇ ಯಾರೂ ಕೂಡ ಫೊಟೋ ಕ್ಲಿಕ್ಕಿಸದಂತೆ ಸೂಚಿಸಿದ್ದರು ಎನ್ನಲಾಗಿದೆ.

    ಇದನ್ನೂ ಓದಿ: ಮೃತ ಶರತ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ ಸಚಿವ ಡಿವಿಎಸ್

    20 ವರ್ಷ ರಮಾನಾಥ ರೈ ಬಟ್ಟೆ ಒಗೆದು ಇಸ್ತ್ರಿ ಮಾಡಿಕೊಟ್ಟಿದ್ರೂ ಇಂದು ನನ್ನ ನೋವನ್ನು ಕೇಳಲು ಬಂದಿಲ್ಲ ಅಂತ ಶರತ್ ತಂದೆ ತನಿಯಪ್ಪ ಮಡಿವಾಳ ಮಾಧ್ಯಮದ ಮುಂದೆ ಕಣ್ಣೀರಿಟ್ಟ ಬಳಿಕ ಇದೀಗ ಯಾರಿಗೂ ಮಾಹಿತಿ ನೀಡದೆ ರೈ ಶರತ್ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಇದೇ ವೇಳೆ ಪ್ರಕರಣದ ಕುರಿತು ತನಿಖೆ ಮಾಡಿ ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದಾರೆ.

    ಮಾಧ್ಯಮಗಳಲ್ಲಿ ಸುದ್ದಿಪ್ರಸಾರವಾಗಿ ಒಂದು ಗಂಟೆಯೊಳಗೆ ಶರತ್ ಮನೆಗೆ ಭೇಟಿ ಮಾಡಿದ ಫೋಟೋವನ್ನು ರೈ ಆಪ್ತ ಕಾರ್ಯದರ್ಶಿ ರಿಲೀಸ್ ಮಾಡಿದ್ದಾರೆ.

    ಇದನ್ನೂ ಓದಿ: 20 ವರ್ಷ ಬಟ್ಟೆ ಒಗೆದು ಕೊಟ್ರೂ ರೈ ನನ್ನ ನೋವನ್ನು ಕೇಳಲು ಬಂದಿಲ್ಲ: ಶರತ್ ತಂದೆ ತನಿಯಪ್ಪ ಕಣ್ಣೀರು

    https://www.youtube.com/watch?v=L5WjxAOQ_VE

  • ಈಶ್ವರಪ್ಪ, ಕರಂದ್ಲಾಜೆ ಬಳಸಿದ ಪದ ನನ್ನ ಬಾಯಿಂದ ಬರಲ್ಲ: ಸಿಎಂ

    ಈಶ್ವರಪ್ಪ, ಕರಂದ್ಲಾಜೆ ಬಳಸಿದ ಪದ ನನ್ನ ಬಾಯಿಂದ ಬರಲ್ಲ: ಸಿಎಂ

    ಕಲಬುರಗಿ: ಉಡುಪಿ, ಚಿಕ್ಕಮಗಳೂರು ಸಂಸಂದೆ ಶೋಭಾ ಕರಂದ್ಲಾಜೆ ಹಾಗೂ ಈಶ್ವರಪ್ಪ ಬಳಸಿದ ಪದ ನನ್ನ ಬಾಯಿಂದ ಬರಲ್ಲ ಅಂತ ಮುಖ್ಯಮಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ನಗರದ ಡಿಆರ್ ಪೊಲೀಸ್ ಮೈದಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೋಭಾ ಕರಂದ್ಲಾಜೆ ಮತ್ತು ಈಶ್ವರಪ್ಪರಿಂದ ಷಂಡ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಷಂಡರೋ ಗಂಡಸರೋ ಅದು ನನಗೇನು ಗೊತ್ತು? ನಾನೇನು ನೋಡಿದೆನಾ? ಅಂತ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

    ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯವ್ರೇನು ಷಂಡರಾ?- ಸರ್ಕಾರದ ವಿರುದ್ಧ ಶೋಭಾ ಕೆಂಡಾಮಂಡಲ

    ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನ ಪೊಲೀಸರು ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಅವರ ಸಂಘಟನೆಗಳು ಸುಮ್ಮನಿದ್ದರೆ ಶಾಂತಿ ನೆಲೆಸುತ್ತದೆ. ಇದೀಗ ಜಲ್ಲೆಯಲ್ಲಿ 144 ಸೆಕ್ಷನ್ ಜಾರಿಯಿದ್ದರೂ ಸಹ ಯಾಕೆ ಅಲ್ಲಿ ಹೋಗಿದ್ದರು. ಯಾವುದೇ ಸಂಘಟನೆಯಿರಲಿ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಿ ಅಂತ ಸಿಎಂ ಹೇಳಿದ್ದಾರೆ.

    ಸಂಸದೆ ಶೋಭಾ ಕರಂದ್ಲಾಜೆ ಬಳಸಿದ ಷಂಡ ಎಂಬ ಪದ ನನ್ನ ಬಾಯಿಂದ ಬರಲ್ಲ. ಇದು ಬಿಜೆಪಿ, ಆರ್‍ಎಸ್‍ಎಸ್ ಸಂಸ್ಕೃತಿಯನ್ನ ಬಿಂಬಿಸುತ್ತೆ ಅಂತ ಸಿಎಂ ಟಾಂಗ್ ನೀಡಿದ್ದಾರೆ.

    ಇದನ್ನೂ ಓದಿ: ಯಾರದ್ದೋ ಮಕ್ಕಳು ಸತ್ತರೆ ನಮಗೇನು ಎಂಬಂತೆ ಸರ್ಕಾರ ವರ್ತಿಸುತ್ತಿದೆ: ಈಶ್ವರಪ್ಪ