Tag: ಶರ್ವಾನಂದ್‌

  • ಹೆಣ್ಣು ಮಗುವಿಗೆ ತಂದೆಯಾದ ಸಂಭ್ರಮದಲ್ಲಿ ಶರ್ವಾನಂದ್

    ಹೆಣ್ಣು ಮಗುವಿಗೆ ತಂದೆಯಾದ ಸಂಭ್ರಮದಲ್ಲಿ ಶರ್ವಾನಂದ್

    ಟಾಲಿವುಡ್ ನಟ ಶರ್ವಾನಂದ್ (Sharwanand) ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಶರ್ವಾನಂದ್ ಪತ್ನಿ ರಕ್ಷಿತಾ ರೆಡ್ಡಿ (Rakshitha Reddy) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಮುದ್ದು ಮಗಳ ಆಗಮನದ ಬಗ್ಗೆ ನಟ ಸಿಹಿಸುದ್ದಿ ಹಂಚಿಕೊಂಡಿದ್ದಾರೆ.

    ಮಾರ್ಚ್ 6 ಶರ್ವಾನಂದ್ ಹುಟ್ಟುಹಬ್ಬವಾಗಿದ್ದು, ಮಗಳ ಆಗಮನದ ಬಗ್ಗೆ ಸ್ಪೆಷಲ್ ಫೋಟೋ ಹಂಚಿಕೊಂಡಿದ್ದಾರೆ. ಹುಟ್ಟುಹಬ್ಬಕ್ಕೆ ವಿಶ್ ಮಾಡಿದಕ್ಕೆ ನಟ ಧನ್ಯವಾದಗಳನ್ನು ತಿಳಿಸಿದ್ದು, ಮಗಳು (Baby Girl) ಹುಟ್ಟಿರುವ ಸುದ್ದಿ ತಿಳಿಸಿ, ಈ ವರ್ಷ ಆಶೀರ್ವಾದದೊಂದಿಗೆ ಹೊಸ ವರ್ಷವನ್ನು ಪ್ರವೇಶಿಸುತ್ತಿದ್ದೇನೆ ಎಂದಿದ್ದಾರೆ.

     

    View this post on Instagram

     

    A post shared by Sharwanand (@imsharwanand)

    ‘ಲೀಲಾ ದೇವಿ ಮೈನೇನಿ’ ಎಂದು ಮಗಳಿಗೆ ಹೆಸರಿಟ್ಟಿರೋದಾಗಿ ನಟ ರಿವೀಲ್ ಮಾಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ ಪತ್ನಿ ರಕ್ಷಿಕಾ ಮಗಳ ಕಾಲು ಹಿಡಿದುಕೊಂಡಿರುವ ಮುದ್ದಾದ ಫೋಟೋ ಶೇರ್ ಮಾಡಿದ್ದಾರೆ. ಆದರೆ ಎಲ್ಲೂ ಕೂಡ ಮಗಳ ಮುಖ ರಿವೀಲ್ ಮಾಡಿಲ್ಲ.

     

    View this post on Instagram

     

    A post shared by Sharwanand (@imsharwanand)

    ರನ್ ರಾಜಾ ರನ್, ಎಕ್ಸ್‌ಪ್ರೆಸ್‌ ರಾಜಾ, ಜಾನು, ಮಹಾಸಮುದ್ರಂ, ಸೇರಿದಂತೆ ಹಲವು ಸಿನಿಮಾಗಳಲ್ಲಿ ಶರ್ವಾನಂದ್ ನಟಿಸಿದ್ದಾರೆ. ಇದನ್ನೂ ಓದಿ:ಕಿಚ್ಚ ಸುದೀಪ್ ಮೆಚ್ಚಿದ ‘ಕೆರೆಬೇಟೆ’ ಟ್ರೈಲರ್

    ಕಳೆದ ವರ್ಷ ಜೂನ್‌ನಲ್ಲಿ ರಕ್ಷಿತಾ ರೆಡ್ಡಿ ಜೊತೆ ಶರ್ವಾನಂದ್ ಜೈಪುರನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಶರ್ವಾನಂದ್ ಮದುವೆ ಸಂಭ್ರಮದಲ್ಲಿ ಅದಿತಿ ರಾವ್ ಹೈದರಿ, ಸಿದ್ಧಾರ್ಥ್, ಮೆಗಾ ಸ್ಟಾರ್ ಚಿರಂಜೀವಿ- ರಾಮ್ ಚರಣ್ ಕುಟುಂಬ ಭಾಗಿಯಾಗಿತ್ತು.

  • ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ಶರ್ವಾನಂದ್ ರಿಸೆಪ್ಷನ್ ಸಂಭ್ರಮದಲ್ಲಿ ಸಿನಿ ತಾರೆಯರ ದಂಡು

    ತೆಲುಗು ಆಕ್ಟರ್ ಶರ್ವಾನಂದ್ (Sharwanand) ಅವರು ಜೂನ್ 3ರಂದು ರಕ್ಷಿತಾ ರೆಡ್ಡಿ (Rakshitha Reddy) ಜೊತೆ ಹೊಸ ಬಾಳಿಗೆ ಕಾಲಿಟ್ಟರು. ಜೈಪುರದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ಶರ್ವಾನಂದ್ ಮದುವೆಯಾದರು. ಇದೀಗ ಹೈದರಾಬಾದ್‌ನಲ್ಲಿ ಅದ್ದೂರಿಯಾಗಿ ನಟನ ಆರತಕ್ಷತೆ ಜರುಗಿದೆ. ಈ ಸಂಭ್ರಮದಲ್ಲಿ ಸಿನಿ ತಾರೆಯರು ಭಾಗಿಯಾಗಿದ್ದಾರೆ.

    ಟಾಲಿವುಡ್ (Tollywood) ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ನಟ ಶರ್ವಾನಂದ್ ಸಂಚಲನ ಮೂಡಿಸಿದ್ದಾರೆ. ಜಾನೂ, ಮಹಾಸಮುದ್ರಂ, ಓಕೆ ಓಕಾ ಜೀವಿತಂ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಭಿನ್ನ ಕಥೆ, ವಿಭಿನ್ನ ಪಾತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ.

    ಜನವರಿ 26ರಂದು ಶರ್ವಾನಂದ್- ರಕ್ಷಿತಾ ರೆಡ್ಡಿ (Rakshitha Reddy) ಜೋಡಿ ಗುರುಹಿರಿಯರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೊಂದು ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದ್ದು, ಇಂಜಿನಿಯರ್ ರಕ್ಷಿತಾ ಜೊತೆ ನಟ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಜೂನ್ 3ರ ರಾತ್ರಿ 11ಕ್ಕೆ ಸಂಪ್ರದಾಯ ಬದ್ಧವಾಗಿ ಶರ್ವಾನಂದ್ ಜೋಡಿ ಮದುವೆಯಾದರು. ನಟ ಶರ್ವಾನಂದ್ ಲೈಟ್ ಬಣ್ಣದ ಶೆರ್ವಾನಿಯಲ್ಲಿ ಮಿಂಚಿದ್ರೆ, ಪತ್ನಿ ರಕ್ಷಿತಾ ಲೈಟ್ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದರು. ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

    ಜೈಪುರ ಲೀಲಾ ಪ್ಯಾಲೇಸ್‌ನಲ್ಲಿ ಮದುವೆಯಾಗಿದ್ದ ಶರ್ವಾನಂದ್ ಇದೀಗ ಹೈದರಾಬಾದ್‌ನಲ್ಲಿ ಚಿತ್ರರಂಗದ ಸ್ನೇಹಿತರಿಗೆ ಆಪ್ತರಿಗೆ ರಿಸೆಪ್ಷನ್‌ಗೆ ಆಹ್ವಾನ ನೀಡಿದ್ದರು. ಸೆಲೆಬ್ರಿಟಿಗಳ ದಂಡೇ ನಟನ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಬಿಳಿ ಬಣ್ಣದ ಸೂಟ್‌ನಲ್ಲಿ ಶರ್ವಾನಂದ್ ಕಾಣಿಸಿಕೊಂಡಿದ್ದರೆ, ಪತ್ನಿ ರಕ್ಷಿತಾ ಲೈಟ್ ಬಣ್ಣದ ಸೀರೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಶರ್ವಾನಂದ್ ರೆಸೆಪ್ಷನ್ ಸಂಭ್ರಮದಲ್ಲಿ ರಾಮ್ ಚರಣ್ (Ram Charan) ದಂಪತಿ, ಬಾಲಯ್ಯ, ನಟ ವೆಂಕಟೇಶ್, ರಾಣಾ ದಗ್ಗುಭಾಟಿ, ಲಕ್ಷ್ಮಿ ಮಂಚು, ನಿಖಿಲ್ ಸಿದ್ಧಾರ್ಥ್, ನಟಿ ರೀತು ವರ್ಮಾ ಸೇರಿದಂತೆ ಹಲವು ಭಾಗಿಯಾಗಿ, ಶುಭಕೋರಿದರು.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ ನಟ ಶರ್ವಾನಂದ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ ನಟ ಶರ್ವಾನಂದ್

    ತೆಲುಗು ನಟ ಶರ್ವಾನಂದ್- ರಕ್ಷಿತಾ ರೆಡ್ಡಿ (Rakshitha Reddy) ಅವರು ಜೂನ್ 3ರಂದು ರಾತ್ರಿ 11 ಗಂಟೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕುಟುಂಬದಸ್ಥರ ಸಮ್ಮುಖದಲ್ಲಿ ಶರ್ವಾನಂದ್ (Actor sharwanand) ಅವರು ರಕ್ಷಿತಾ ಜೊತೆ ಸಪ್ತಪದಿ ತುಳಿದರು. ನಟನ ಮದುವೆ ಸಂಭ್ರಮದಲ್ಲಿ ನಟ ರಾಮ್‌ಚರಣ್ (Ramcharan), ಸಿದ್ಧಾರ್ಥ್, ನಿರ್ಮಾಪಕ ವಂಶಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

    ಜನವರಿ 26ರಂದು ಶರ್ವಾನಂದ್- ರಕ್ಷಿತಾ ರೆಡ್ಡಿ ಜೋಡಿ ಗುರುಹಿರಿಯರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೊಂದು ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದ್ದು, ಇಂಜಿನಿಯರ್ ರಕ್ಷಿತಾ ಜೊತೆ ನಟ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಜೂನ್ 3ರ ರಾತ್ರಿ 11ಕ್ಕೆ ಸಂಪ್ರದಾಯ ಬದ್ಧವಾಗಿ ಶರ್ವಾನಂದ್ ಜೋಡಿ ಮದುವೆಯಾಗಿದ್ದಾರೆ. ಜೈಪುರದ (Jaipur) ಲೀಲಾ ಪ್ಯಾಲೇಸ್‌ನಲ್ಲಿ ಈ ಅದ್ದೂರಿ ಮದುವೆ ನಡೆದಿದೆ.

    ನಟ ಶರ್ವಾನಂದ್ ಲೈಟ್ ಬಣ್ಣದ ಶೆರ್ವಾನಿಯಲ್ಲಿ ಮಿಂಚಿದ್ರೆ, ಪತ್ನಿ ರಕ್ಷಿತಾ ಲೈಟ್ ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ದಾರೆ. ಸದ್ಯ ಮದುವೆಯ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಅಭಿಷೇಕ್ ಮದುವೆಗೆ ಬಂದು ಶುಭ ಹಾರೈಸಿದ ರಜನಿಕಾಂತ್

    ನಟ ಶರ್ವಾನಂದ್ ಮದುವೆಗೆ ರಾಮ್‌ಚರಣ್, ಸಿದ್ಧಾರ್ಥ್ ಸೇರಿದಂತೆ ಸಿನಿಮಾ ತಾರೆಯರು ಮತ್ತು ರಾಜಕೀಯ ರಂಗದ ಗಣ್ಯರು ಭಾಗವಹಿಸಿ, ಹಾರೈಸಿದ್ದಾರೆ. ನವಜೋಡಿಗೆ ಅಭಿಮಾನಿಗಳು ಕೂಡ ಶುಭಕೋರಿದ್ದಾರೆ.

  • ಕಾರು ಅಪಘಾತ: ಆರೋಗ್ಯವಾಗಿದ್ದೇನೆ ಭಯ ಬೇಡ ಎಂದ ನಟ ಶರ್ವಾನಂದ್

    ಕಾರು ಅಪಘಾತ: ಆರೋಗ್ಯವಾಗಿದ್ದೇನೆ ಭಯ ಬೇಡ ಎಂದ ನಟ ಶರ್ವಾನಂದ್

    ತೆಲುಗಿನ ಖ್ಯಾತ ನಟ ಶರ್ವಾನಂದ್ ಅವರ ಕಾರು ಅಪಘಾತವಾಗಿ ಅಭಿಮಾನಿಗಳಿಗೆ ಸಾಕಷ್ಟು ಆತಂಕ ಮೂಡಿಸಿತ್ತು. ಶರ್ವಾನಂದ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು.  ಅಪಘಾತಕ್ಕೆ ಸಂಬಂಧಿಸಿದಂತೆ ನಾನಾ ರೀತಿಯ ಗೊಂದಲಗಳು ಕೂಡ ಮೂಡಿದ್ದವು. ಈ ಕುರಿತು ಸ್ವತಃ ಶರ್ವಾನಂದ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ‘ರವಿವಾರ ಆಗಿದ್ದು ಸಣ್ಣ ಅಪಘಾತ. ಅದರಿಂದ ನನಗೆ ಸಣ್ಣ ಪುಟ್ಟ ಗಾಯಗಳಾಗಿವೆ ಅಷ್ಟೆ. ಆತಂಕ ಪಡುವಂಥದ್ದು ಏನೂ ಆಗಿಲ್ಲ. ನಾನು ಆರೋಗ್ಯವಾಗಿದ್ದೇನೆ. ತಾವೆಲ್ಲ ನನ್ನ ಬಗ್ಗೆ ಕಾಳಜಿ ತೋರಿಸಿದ್ದಕ್ಕೆ ಧನ್ಯವಾದಗಳು’ ಎಂದು ಶರ್ವಾನಂದ್ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ:ಜೂನ್‌ನಲ್ಲಿ ಅಂಬಿ ಪುತ್ರನ ಅದ್ದೂರಿ ಮದುವೆ- ಆಮಂತ್ರಣ ಪತ್ರಿಕೆ ಇಲ್ಲಿದೆ

    ಜೂನ್ 2 ರಂದು ಶರ್ವಾನಂದ್ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಹೈದರಾಬಾದ್ ನ ಜೂಬ್ಲಿ ಹಿಲ್ಸ್ ಬಳಿ ಅಪಘಾತಕ್ಕೀಡಾಗಿತ್ತು (Accident). ಶರ್ವಾನಂದ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಶರ್ವಾನಂದ್ ಅವರ ಡ್ರೈವರ್ ಆ ಕಾರು ಓಡಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಕಾರು ಪಲ್ಟಿಯಾಗಿದೆ. ಅದು ಐಷಾರಾಮಿ ಕಾರು ಆಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದರು.

    ಶರ್ವಾನಂದ್ (Sharwanand) ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಕೆಲ ತಿಂಗಳ ಹಿಂದೆಯಷ್ಟೇ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದರು. ಇದೀಗ ಜೂನ್ 2 ಮತ್ತು 3 ರಂದು ರಾಜಸ್ಥಾನದ ಜೈಪುರದಲ್ಲಿರುವ ಲೀಲಾ ಪ್ಯಾಲೇಸ್ ನಲ್ಲಿ ಮದುವೆ ಆಗುತ್ತಿದ್ದಾರೆ. ಈಗವರು ಮದುವೆ ಸಿದ್ಧತೆಯಲ್ಲಿದ್ದರು.

    ಶರ್ವಾನಂದ್ ಕೈ ಹಿಡಿಯುತ್ತಿರುವ ಹುಡುಗಿಯ ಹೆಸರು ರಕ್ಷಿತಾ ರೆಡ್ಡಿ (Raskshitha Reddy). ಸಾಫ್ಟ್ ವೇರ್ ಇಂಜಿನಿಯರ್ ಆಗಿ ಆಕೆ ಕೆಲಸ ಮಾಡುತ್ತಿದ್ದಾರೆ. ತಂದೆ ಮಧುಸೂದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಇವರ ಮದುವೆಗೆ ರಾಮ್ ಚರಣ್ (Ramcharan) ದಂಪತಿ, ಸಿದ್ಧಾರ್ಥ್- ಅದಿತಿ ಜೋಡಿ, ನಟ ಚಿರಂಜೀವಿ, ನಾನಿ, ನಟ ನಾಗಾರ್ಜುನ ದಂಪತಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಕಾರು ಅಪಘಾತದಲ್ಲಿ ಗಾಯಗೊಂಡ ನಟ ಶರ್ವಾನಂದ್: ನಟನ ಮದುವೆಗೆ 3 ದಿನವಷ್ಟೇ ಬಾಕಿ

    ಕಾರು ಅಪಘಾತದಲ್ಲಿ ಗಾಯಗೊಂಡ ನಟ ಶರ್ವಾನಂದ್: ನಟನ ಮದುವೆಗೆ 3 ದಿನವಷ್ಟೇ ಬಾಕಿ

    ದೇ ಜೂನ್ 2 ರಂದು ತೆಲುಗಿನ ಖ್ಯಾತ ನಟ ಶರ್ವಾನಂದ್ ಮದುವೆ. ಅವರ ಇಡೀ ಕುಟುಂಬ ಸಡಗರ ಸಂಭ್ರಮದಲ್ಲಿದ್ದರೆ ಅತ್ತ ಶರ್ವಾನಂದ್ ಕಾರು (Car) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಹೈದರಾಬಾದ್ ನ ಜೂಬ್ಲಿ ಹಿಲ್ಸ್ ಬಳಿ ಅಪಘಾತಕ್ಕೀಡಾಗಿದೆ (Accident). ಶರ್ವಾನಂದ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

    ಶರ್ವಾನಂದ್ ಅವರ ಡ್ರೈವರ್ ಆ ಕಾರು ಓಡಿಸುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರು ಪಲ್ಟಿಯಾಗಿದೆ. ಅದು ಐಷಾರಾಮಿ ಕಾರು ಆಗಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಕೂಡಲೇ ಶರ್ವಾನಂದ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆತಂಕ ಪಡುವಂಥದ್ದು ಏನೂ ಆಗಿಲ್ಲವೆಂದು ತಿಳಿಸಿದ್ದಾರೆ.

    ಶರ್ವಾನಂದ್ (Sharwanand) ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಕೆಲ ತಿಂಗಳ ಹಿಂದೆಯಷ್ಟೇ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದರು. ಇದೀಗ ಜೂನ್ 2 ಮತ್ತು 3 ರಂದು ರಾಜಸ್ಥಾನದ ಜೈಪುರದಲ್ಲಿರುವ ಲೀಲಾ ಪ್ಯಾಲೇಸ್ ನಲ್ಲಿ ಮದುವೆ ಆಗುತ್ತಿದ್ದಾರೆ. ಈಗವರು ಮದುವೆ ಸಿದ್ಧತೆಯಲ್ಲಿದ್ದರು. ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಹೊಯ್ಸಳ’ ಬಲಿ- ಫ್ಯಾನ್ಸ್‌ಗೆ ಸಿಕ್ತು ಸಿಹಿಸುದ್ದಿ

    ಶರ್ವಾನಂದ್ ಕೈ ಹಿಡಿಯುತ್ತಿರುವ ಹುಡುಗಿಯ ಹೆಸರು ರಕ್ಷಿತಾ ರೆಡ್ಡಿ (Raskshitha Reddy). ಸಾಫ್ಟ್ ವೇರ್ ಇಂಜಿನಿಯರ್ ಆಗಿ ಆಕೆ ಕೆಲಸ ಮಾಡುತ್ತಿದ್ದಾರೆ. ತಂದೆ ಮಧುಸೂದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಇವರ ಮದುವೆಗೆ ರಾಮ್ ಚರಣ್ (Ramcharan) ದಂಪತಿ, ಸಿದ್ಧಾರ್ಥ್- ಅದಿತಿ ಜೋಡಿ, ನಟ ಚಿರಂಜೀವಿ, ನಾನಿ, ನಟ ನಾಗಾರ್ಜುನ ದಂಪತಿ ಸೇರಿದಂತೆ ಹಲವರು ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಟೆಕ್ಕಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿತ್ತಾ? : ನಟ ಶರ್ವಾನಂದ್ ಆಪ್ತರ ಪ್ರತಿಕ್ರಿಯೆ

    ಟೆಕ್ಕಿ ಜೊತೆಗಿನ ನಿಶ್ಚಿತಾರ್ಥ ಮುರಿದು ಬಿತ್ತಾ? : ನಟ ಶರ್ವಾನಂದ್ ಆಪ್ತರ ಪ್ರತಿಕ್ರಿಯೆ

    ತ್ತೀಚೆಗಷ್ಟೇ ಟೆಕ್ಕಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಟಾಲಿವುಡ್ (Tollywood) ನಟ ಶರ್ವಾನಂದ್ (Sharwanand), ಕೆಲವೇ ದಿನಗಳಲ್ಲಿ ಎಂಗೇಜ್ ಮೆಂಟ್ ಮುರಿದುಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಟಾಲಿವುಡ್ ಅಂಗಳದಲ್ಲಿ ಈ ಸುದ್ದಿ ಭಾರೀ ಸದ್ದು ಮಾಡುತ್ತಿದ್ದರೂ, ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ ಶರ್ವಾನಂದ್. ಇದೇ ಮೊದಲ ಬಾರಿಗೆ ಅವರ ಆತ್ಮೀಯರು ಈ ಕುರಿತು ಮಾತನಾಡಿದ್ದಾರೆ. ಅವರು ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರಿಂದ ಮದುವೆಯನ್ನು ಮುಂದೂಡಲಾಗಿದೆ. ಅದರ ಹೊರತು ನಿಶ್ಚಿತಾರ್ಥ ಮುರಿದು ಬಿದ್ದಿಲ್ಲ ಎಂದಿದ್ದಾರೆ.

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟ ಶರ್ವಾನಂದ್, ಭಿನ್ನ ಪಾತ್ರಗಳ ಮೂಲಕ  ಪ್ರೇಕ್ಷಕರ ಮನಗೆದ್ದಿದ್ದರು. ಇತ್ತೀಚಿಗಷ್ಟೇ ರಕ್ಷಿತಾ (Rakshitha Reddy) ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಸಿಹಿಸುದ್ದಿ ನೀಡಿದ್ದರು. ಇದನ್ನೂ ಓದಿ:ಹಣಕ್ಕಾಗಿ ನಾನು ಯಾರ ಹಿಂದೆಯೂ ಹೋಗಿಲ್ಲ : ನಟಿ ಪವಿತ್ರಾ ಲೋಕೇಶ್

    ಈ ವರ್ಷದ ಆರಂಭ ಜನವರಿಯಲ್ಲಿ ಗುರುಹಿರಿಯರು ಸಮ್ಮತಿಸಿದ ಹುಡುಗಿ ರಕ್ಷಿತಾ ಶರ್ವಾನಂದ್ ಎಂಗೇಜ್ ಆಗಿದ್ದರು. ಆದರೆ ಈಗ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಈ ನಿಶ್ಚಿತಾರ್ಥ ಮುರಿದು ಬಿದ್ದಿದೆ (Break Up) ಎಂದು ಹೇಳಲಾಗಿತ್ತು. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿತ್ತು.

    ಈ ಸುದ್ದಿಯನ್ನ ಶರ್ವಾನಂದ್ ಟೀಂ ನಿರಾಕರಿಸಿದೆ. ಶರ್ವಾನಂದ್- ರಕ್ಷಿತಾ ನಡುವೆ ಸಂಬಂಧ ಚೆನ್ನಾಗಿದೆ. ಸದ್ಯ ನಟ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಷ್ಟೇ, ಲಂಡನ್‌ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಸದ್ಯ ಒಪ್ಪಿಕೊಂಡಿರುವ ಸಿನಿಮಾಗಳನ್ನ ಮುಗಿಸಿ, ಮದುವೆ ಆಗ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ನಿಶ್ಚಿತಾರ್ಥ ಮುರಿದಿರುವ ಸುದ್ದಿ ಬಗ್ಗೆ ನೇರವಾಗಿ ಶರ್ವಾನಂದ್- ರಕ್ಷಿತಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಮುರಿದು ಬಿತ್ತಾ ತೆಲುಗು ನಟ ಶರ್ವಾನಂದ್ ನಿಶ್ಚಿತಾರ್ಥ?

    ಮುರಿದು ಬಿತ್ತಾ ತೆಲುಗು ನಟ ಶರ್ವಾನಂದ್ ನಿಶ್ಚಿತಾರ್ಥ?

    ಟಾಲಿವುಡ್ (Tollywood) ಅಂಗಳದಲ್ಲಿ ಬಿಸಿ ಬಿಸಿ ಸಮಾಚಾರವೊಂದು ಸದ್ದು ಮಾಡ್ತಿದೆ. ಸ್ಟಾರ್ ನಟ ಶರ್ವಾನಂದ್(Sharwanand), ಖಾಸಗಿ ಸಮಾಚಾರವೊಂದು ಭಾರಿ ಸೌಂಡ್ ಮಾಡ್ತಿದೆ. ಇತ್ತೀಚಿಗಷ್ಟೇ ಅದ್ದೂರಿಯಾಗಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದ ಶರ್ವಾನಂದ್ ನಿಶ್ಚಿತಾರ್ಥ (Engagement) ಮುರಿದು ಬಿದ್ದಿದೆ ಎಂದು ಹೇಳಲಾಗುತ್ತಿದೆ.

    ತೆಲುಗಿನ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟ ಶರ್ವಾನಂದ್, ಭಿನ್ನ ಪಾತ್ರಗಳ ಮೂಲಕ ರೆಲುಗು ಪ್ರೇಕ್ಷಕರ ಮನಗೆದ್ದಿದ್ದರು. ಇತ್ತೀಚಿಗಷ್ಟೇ ರಕ್ಷಿತಾ (Rakshitha Reddy) ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಸಿಹಿಸುದ್ದಿ ನೀಡಿದ್ದರು.

    ಈ ವರ್ಷದ ಆರಂಭ ಜನವರಿಯಲ್ಲಿ ಗುರುಹಿರಿಯರು ಸಮ್ಮತಿಸಿದ ಹುಡುಗಿ ರಕ್ಷಿತಾ ಶರ್ವಾನಂದ್ ಎಂಗೇಜ್ ಆಗಿದ್ದರು. ಆದರೆ ಈಗ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆ ಈ ನಿಶ್ಚಿತಾರ್ಥ ಮುರಿದು ಬಿದ್ದಿದೆ (Break Up) ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಅಜಯ್ ರಾವ್ ಚಿತ್ರಕ್ಕೆ ಕೆಜಿಎಫ್ ನಟಿ ಅರ್ಚನಾ ಜೋಯಿಸ್ ನಾಯಕಿ

    ಈ ಸುದ್ದಿಯನ್ನ ಶರ್ವಾನಂದ್ ಟೀಂ ನಿರಾಕರಿಸಿದೆ. ಶರ್ವಾನಂದ್- ರಕ್ಷಿತಾ ನಡುವೆ ಸಂಬಂಧ ಚೆನ್ನಾಗಿದೆ. ಸದ್ಯ ನಟ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಷ್ಟೇ, ಲಂಡನ್‌ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ಸದ್ಯ ಒಪ್ಪಿಕೊಂಡಿರುವ ಸಿನಿಮಾಗಳನ್ನ ಮುಗಿಸಿ, ಮದುವೆ ಆಗ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ನಿಶ್ಚಿತಾರ್ಥ ಮುರಿದಿರುವ ಸುದ್ದಿ ಬಗ್ಗೆ ನೇರವಾಗಿ ಶರ್ವಾನಂದ್- ರಕ್ಷಿತಾ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ಬಹುಕಾಲದ ಗೆಳತಿ ಜೊತೆ ತೆಲುಗು ನಟ ಶರ್ವಾನಂದ್ ಎಂಗೇಜ್‌ಮೆಂಟ್

    ಟಾಲಿವುಡ್ ನಟ ಶರ್ವಾನಂದ್ (Sharwanand) ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿ ರಕ್ಷಿತಾ ರೆಡ್ಡಿ ಜೊತೆ ಶರ್ವಾನಂದ್ ಎಂಗೇಜ್‌ಮೆಂಟ್ (Engagement) ಮಾಡಿಕೊಂಡಿದ್ದಾರೆ. ನಟ ಶರ್ವಾನಂದ್‌ಗೆ  ಶುಭಹಾರೈಸಲು ಟಾಲಿವುಡ್‌ನ ನಟ-ನಟಿಯರು ಕೂಡ ಭಾಗಿಯಾಗಿದ್ದಾರೆ.

    ಗೆಳತಿ ರಕ್ಷಿತಾ ರೆಡ್ಡಿ ಜೊತೆ ಗುರುವಾರ (ಜ.26)ರಂದು ಶರ್ವಾನಂದ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಉಂಗುರ ತೊಡಿಸಿದ್ದಾರೆ. ಸಾಕಷ್ಟು ವರ್ಷಗಳಿಂದ ಶರ್ವಾನಂದ್ ಮತ್ತು ರಕ್ಷಿತಾ ಪ್ರೀತಿಸುತ್ತಿದ್ದರು. ಈಗ ಹಿರಿಯರ ಒಪ್ಪಿಗೆಯ ಮೇರೆಗೆ ಎಂಗೇಜ್ ಆಗಿದ್ದಾರೆ.

     

    View this post on Instagram

     

    A post shared by Sharwanand (@imsharwanand)

    ನಟ ಶರ್ವಾನಂದ್ ಕೈ ಹಿಡಿಯುತ್ತಿರುವ ಹುಡುಗಿಯ ಹೆಸರು ರಕ್ಷಿತಾ ರೆಡ್ಡಿ (Raskshitha Reddy). ಸಾಫ್‌ವೇರ್ ಇಂಜಿನಿಯರ್ ಆಗಿ ಆಕೆ ಕೆಲಸ ಮಾಡುತ್ತಿದ್ದಾರೆ. ತಂದೆ ಮಧುಸೂದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದಾರೆ. ಶರ್ವಾನಂದ್ ಹಾಗೂ ರಕ್ಷಿತಾ ರೆಡ್ಡಿ ಎಂಗೇಜ್‌ಮೆಂಟ್ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಇನ್ನೂ ನಟ ಶರ್ವಾನಂದ್ ಎಂಗೇಜ್‌ಮೆಂಟ್‌ಗೆ ರಾಮ್ ಚರಣ್ (Ramcharan) ದಂಪತಿ, ಸಿದ್ಧಾರ್ಥ್- ಅದಿತಿ ಜೋಡಿ, ನಟ ಚಿರಂಜೀವಿ, ನಾನಿ, ನಟ ನಾಗಾರ್ಜುನ ದಂಪತಿ ಸೇರಿದಂತೆ ಹಲವರು ಭಾಗಿಯಾಗಿ ಶುಭಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಭಾಸ್ ನಂತರ ನನ್ನ ಮದುವೆ ಎಂದಿದ್ದ ನಟ ಶರ್ವಾನಂದ್ ಕಾಲೆಳೆದ ನೆಟ್ಟಿಗರು

    ಪ್ರಭಾಸ್ ನಂತರ ನನ್ನ ಮದುವೆ ಎಂದಿದ್ದ ನಟ ಶರ್ವಾನಂದ್ ಕಾಲೆಳೆದ ನೆಟ್ಟಿಗರು

    ಟಾಲಿವುಡ್ (Tollywood) ನಟ ಶರ್ವಾನಂದ್ಮ (Sharwanand) ನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟನ ಮದುವೆಯ ತಯಾರಿ ಬೆನ್ನಲ್ಲೇ ಶರ್ವಾನಂದ್ ಹೇಳಿದ್ದ ಹೇಳಿಕೆ ಸಖತ್ ಸದ್ದು ಮಾಡ್ತಿದೆ. ಪ್ರಭಾಸ್ (Actor Prabhas) ನಂತರ ನಾನು ಮದುವೆ ಆಗ್ತೀನಿ ಎಂದಿದ್ದ ಶರ್ವಾನಂದ್ ನೆಟ್ಟಿಗರು ಕಾಲೆಳೆದಿದ್ದಾರೆ.

    ತೆಲುಗಿನ ನಟ ಶರ್ವಾನಂದ್ ತಮ್ಮ 38ನೇ ವಯಸ್ಸಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇದೇ ಶರ್ವಾನಂದ್ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದ ಹೇಳಿಕೆ ಕೂಡ ಈಗ ಸದ್ದು ಮಾಡ್ತಿದೆ. ಮದುವೆಯ ಬಗ್ಗೆ ಪ್ರಶ್ನೆ ಎದುರಾದಾಗ, ಪ್ರಭಾಸ್ ನಂತರ ನನ್ನ ಮದುವೆ (Wedding) ಎಂದಿದ್ದರು. ಆಮೇಲೆ ಮದುವೆ ಆಗ್ತೀನಿ ಎಂದು ಮಾತನಾಡಿದ್ದರು. ಪ್ರಭಾಸ್ ಮದುವೆ ಆಗೋಲ್ಲ ಬಿಡಿ. ಅದಕ್ಕೆ ನೀವು ಸೈಲೆಂಟ್ ಆಗಿ ಹುಡುಗಿ ಹುಡುಕಿಕೊಂಡ್ರಾ ಎಂದು ನೆಟ್ಟಿಗರು ನಟನ ಕಾಲೆಳೆಯುತ್ತಿದ್ದಾರೆ. ಇದನ್ನೂ ಓದಿ: `ಜೈಲರ್’ ರಜನಿಕಾಂತ್‌ಗೆ ಮೋಹನ್ ಲಾಲ್ ಸಾಥ್

    ಟಿಡಿಪಿ ಪಕ್ಷದ ರಾಜಕಾರಣಿ ಬೊಜ್ಜಲ ಗೋಪಾಲ ಕೃಷ್ಣಾ ರೆಡ್ಡಿ ಮೊಮ್ಮಗಳು ಪದ್ಮಾ (Padma) ಅವರ ಜೊತೆ ಶರ್ವಾನಂದ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ಇದೇ ಜನವರಿ 26ರಂದು ಹೈದರಾಬಾದ್‌ನ ಪಾರ್ಕ್ ಹಯಾತ್‌ನಲ್ಲಿ ಶರ್ವಾನಂದ್ ಮತ್ತು ಪದ್ಮಾ ಎಂಗೇಜ್‌ಮೆಂಟ್ ನಡೆಯಲಿದೆ. ಎರಡು ಕುಟುಂಬದವರ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಶರ್ವಾನಂದ್ ಅವರದ್ದು, ಗುರುಹಿರಿಯರು ನಿಗದಿಪಡಿಸಿರುವ ಅರೇಂಜ್ ಮ್ಯಾರೇಜ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k