Tag: ಶವಾಗಾರ

  • Viral Video| ಶವಾಗಾರದಲ್ಲೇ ಜೋಡಿಗಳ ಮಿಲನ ಮಹೋತ್ಸವ!

    Viral Video| ಶವಾಗಾರದಲ್ಲೇ ಜೋಡಿಗಳ ಮಿಲನ ಮಹೋತ್ಸವ!

    ನೋಯ್ಡಾ: ಇತ್ತೀಚಿಗೆ ಎಲ್ಲೆಡೆ ಕಾಮುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂತಹ ಅನೇಕ ಪ್ರಕರಣಗಳು ಪ್ರತಿದಿನ ಕಾಣಸಿಗುತ್ತಿವೆ. ಅದೇ ರೀತಿ ಇದೀಗ ನೋಯ್ಡಾದ (Noida) ಆಸ್ಪತ್ರೆಯೊಂದರ ಶವಾಗಾರದಲ್ಲಿ (Mortuary) ಶವಗಳ ಮುಂದೇಯೇ ಕ್ಲೀನರ್ ಹಾಗೂ ಮಹಿಳೆಯೊಬ್ಬಳು ಲೈಂಗಿಕ ಕ್ರಿಯೆಯಲ್ಲಿ ಮುಳುಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ಭಾರೀ ವೈರಲ್ ಆಗಿದೆ.

    ನೋಯ್ಡಾ ಸೆಕ್ಟರ್ 94ರ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆಂದು ಇರಿಸಿದ್ದ ಶವದ ಮುಂದೆಯೇ ಆಸ್ಪತ್ರೆಯ ಕ್ಲೀನರ್ ಮತ್ತು ಮಹಿಳೆಯೊಬ್ಬಳು ಅಸಹಜ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಕುರಿತ 6.17 ನಿಮಿಷದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಶವ ಇರುವ ಸ್ಟ್ರೆಚರ್ ಕೆಳಗೆ ಕ್ಲೀನರ್ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಇದಕ್ಕೆ ಮಹಿಳೆ ಸಹ ಅಡ್ಡಿಪಡಿಸುವುದು ಕಂಡುಬಂದಿಲ್ಲ. ಇದರಿಂದ ಇದು ಬಲತ್ಕಾರವಾಗಿ ನಡೆಯುತ್ತಿದ್ದ ಕ್ರಿಯೆಯಲ್ಲ ಎಂಬುದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಸಂಸದ ಕಾಗೇರಿ ಪ್ರಯತ್ನ – ಪ್ರಧಾನಿ ಪರಿಹಾರ ನಿಧಿಯಿಂದ ಶಿರೂರು ಸಂತ್ರಸ್ತರಿಗೆ ವಿಶೇಷ ಅನುದಾನಕ್ಕೆ ಅನುಮತಿ

    ಮಹಿಳೆ ಜೊತೆ ಅಸಹಜ ಸ್ಥಿತಿಯಲ್ಲಿದ್ದ ಕ್ಲೀನರ್ ಅನ್ನು ಈ ವರ್ಷದ ಜೂನ್‌ನಲ್ಲಿ ಡಂಕೌರ್ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆಯ ಶವಾಗಾರದಲ್ಲಿ ಕೆಲಸಕ್ಕೆ ನೇಮಿಸಲಾಗಿತ್ತು. ಇನ್ನು ಆ ಶವಾಗಾರದಲ್ಲಿ ಯಾವುದೇ ಮಹಿಳಾ ಸಿಬ್ಬಂದಿ ಕೆಲಸ ಮಾಡದ ಕಾರಣ ವೀಡಿಯೋದಲ್ಲಿರುವ ಮಹಿಳೆ ಹೊರಗಿನವಳು ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇದನ್ನೂ ಓದಿ: Ramanagara | ನೇಣು ಬಿಗಿದುಕೊಂಡು ವಕೀಲೆ ಆತ್ಮಹತ್ಯೆ – ಕಾರಣ ಸಸ್ಪೆನ್ಸ್‌!

    ಇನ್ನು ಈ ಶವಾಗಾರಕ್ಕೆ ಪ್ರತಿದಿನ ಐದರಿಂದ ಏಳು ಶವಗಳು ಮರಣೋತ್ತರ ಪರೀಕ್ಷೆಗಾಗಿ ಬರುತ್ತವೆ. ಇವುಗಳಲ್ಲಿ ಮಹಿಳೆಯರು, ಹದಿಹರೆಯದವರು, ಹುಡುಗಿಯವರು ಮತ್ತು ಎಲ್ಲಾ ವಯಸ್ಸಿನ ಪುರುಷರು ಮತ್ತು ಮಹಿಳೆಯರ ಶವಗಳು ಸೇರಿವೆ. ಈ ಶವಗಾರದಲ್ಲಿ ಇಬ್ಬರು ಕಾವಲುಗಾರರು ಎರಡು ಪಾಳಿಯಲ್ಲಿ ಕೆಲಸ ಮಾಡುತ್ತಾರೆ. ಇದನ್ನೂ ಓದಿ: ಗುಜರಾತ್‌ನಲ್ಲಿದೆ `ಏಷ್ಯಾದ ಅತ್ಯಂತ ಶ್ರೀಮಂತ ಗ್ರಾಮ’ – ಒಬ್ಬಬ್ಬರ ಬಳಿ ಇರೋ ಆಸ್ತಿ ಎಷ್ಟು?

  • ಶವಾಗಾರದಲ್ಲಿ ಹೆಣಗಳ ಬೆತ್ತಲೆ ಫೋಟೋ ಸೆರೆಹಿಡಿಯುತ್ತಿದ್ದವ ಅಂದರ್

    ಶವಾಗಾರದಲ್ಲಿ ಹೆಣಗಳ ಬೆತ್ತಲೆ ಫೋಟೋ ಸೆರೆಹಿಡಿಯುತ್ತಿದ್ದವ ಅಂದರ್

    – ವೃದ್ಧೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ

    ಮಡಿಕೇರಿ: ಕೊಡಗು (Kodagu) ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಕಡಗದಾಳು ನಿವಾಸಿ ಸೈಯದ್ (24) ಎಂಬಾತನನ್ನು ಮಾನ ಭಂಗ ಯತ್ನದ ಆರೋಪದಡಿ ಬಂಧಿಸಲಾಗಿದೆ.

    ಮಡಿಕೇರಿಯ 74 ವರ್ಷದ ವೃದ್ಧೆಯೋರ್ವರ ಮನೆಗೆ ನುಗ್ಗಿದ ಸೈಯದ್, ಮಾನ ಭಂಗಕ್ಕೆ ಯತ್ನ ಮಾಡಿರುವುದಾಗಿ ಮಡಿಕೇರಿ ನಗರ ಠಾಣೆ (Madikeri City Police) ಗೆ ವೃದ್ಧೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೈಯದ್‍ನನ್ನು ಬಂಧಿಸಿದ್ದಾರೆ.

    ಸೈಯದ್ ಇತ್ತೀಚೆಗಷ್ಟೆ ಕೆಲಸಕ್ಕೆ ರಾಜೀನಾಮೆ ನೀಡಿದ್ದನು. ಕಳೆದ ಸೆಪ್ಟೆಂಬರ್ 22 ರಂದು ರಾತ್ರಿ ಸುಮಾರು 11 ಗಂಟೆಗೆ ವೃದ್ಧೆ ಮನೆಗೆ ಆಗಮಿಸಿದ ಸೈಯದ್ ಮನೆ ಬಾಗಿಲು ಬಡಿದಿದ್ದಾನೆ. ವೃದ್ಧೆ ಬಾಗಿಲು ತೆರೆದಕ್ಷಣ ಸೈಯದ್ ಮನೆ ಒಳಗೆ ನುಗ್ಗಿ ಮಾನ ಭಂಗಕ್ಕೆ ಯತ್ನಿಸಿದ್ದಾನೆ. ವೃದ್ಧೆ ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡಿದ್ದು, ಪಕ್ಕದ ಮನೆಯವರು ಹೊರಬರುವಷ್ಟರಲ್ಲಿ ಸೈಯದ್ ತಲೆಮರೆಸಿಕೊಂಡಿದ್ದಾನೆ.

    ಈ ಸಂದರ್ಭ ತನ್ನ ಫೋನ (Mobile Phone) ನ್ನು ಮನೆಯಲ್ಲೇ ಬಿಟ್ಟು ಪರಾರಿಯಾಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನನ್ವಯ ಮಡಿಕೇರಿ ನಗರ ಠಾಣೆ ಉಪನಿರೀಕ್ಷಕ ಅವರು ಸೆಕ್ಷನ್ 446 ಹಾಗೂ 354ನಡಿ ಪ್ರಕರಣ ದಾಖಲಿಸಿ ಸೈಯದ್‍ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಸೈಯದ್ ಮೊಬೈಲ್ ಘೋನನ್ನು ದೂರುದಾರರು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಶವಾಗಾರದಲ್ಲಿ ಕಾರ್ಯನಿರ್ವ ಹಿಸುತ್ತಿದ್ದ ಸೈಯದ್ ಶವಾಗಾರದಲ್ಲಿನ ಮೃತ ದೇಹಗಳ ಬೆತ್ತಲೆ ಚಿತ್ರಗಳನ್ನು ತನ್ನ ಫೋನಿನಲ್ಲಿ ಸೆರೆ ಹಿಡಿಯುತ್ತಿದ್ದ ಎಂಬುದಾಗಿ ಈ ಹಿಂದೆ ಹಿಂದೂಪರ ಸಂಘಟನೆ ದೂರು ನೀಡಿದ್ದು, ಈ ಸಂಬಂಧ ತನಿಖೆ ನಡೆಸುತ್ತಿರುವುದಾಗಿ ಮಡಿಕೇರಿ ಡಿ.ವೈ.ಎಸ್.ಪಿ ಗಜೇಂದ್ರ ಪ್ರಸಾದ್ ಅವರು ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದ ಸಾರ್ವಜನಿಕ ಆಸ್ಪತ್ರೆಯಲ್ಲಿ 200 ಕೊಳೆತ ಶವ ಪತ್ತೆ

    ಪಾಕಿಸ್ತಾನದ ಸಾರ್ವಜನಿಕ ಆಸ್ಪತ್ರೆಯಲ್ಲಿ 200 ಕೊಳೆತ ಶವ ಪತ್ತೆ

    ಇಸ್ಲಾಮಾಬಾದ್: ಸಾರ್ವಜನಿಕ ಆಸ್ಪತ್ರೆಯೊಂದರ (Hospital) ಮೇಲ್ಛಾವಣಿಯಲ್ಲಿ 200 ಕೊಳೆತ ಮೃತದೇಹಗಳು ಪತ್ತೆಯಾದ ಘಟನೆ ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.

    ಪಂಜಾಬ್‌ನ ಮುಖ್ಯಮಂತ್ರಿ ಚೌಧರಿ ಜಮಾನ್ ಗುಜ್ಜರ್ (Chaudhry Zaman Gujjar) ಅವರು ನಿಶ್ತಾರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿದ್ದ ಓರ್ವ ವ್ಯಕ್ತಿಯು, ನೀವು ಏನಾದರೂ ಒಳ್ಳೆಯ ಕಾರ್ಯ ಮಾಡಲು ಬಯಸಿದ್ದರೇ ಶವಾಗಾರಕ್ಕೆ ಹೋಗಿ ಪರೀಕ್ಷಿಸಿ ಎಂದಿದ್ದರು.

    ಈ ಹಿನ್ನೆಲೆಯಲ್ಲಿ ಶವಗಾರಕ್ಕೆ ಹೋಗಿದ್ದ ಮುಖ್ಯಮಂತ್ರಿ, ಸಿಬ್ಬಂದಿ ಬಳಿ ಬಾಗಿಲು ತೆಗೆಯಲು ಹೇಳಿದಾಗ ಆತ ಬಾಗಿಲು ತೆರೆಯಲು ನಿರಾಕರಿಸಿದ. ಆಗ ಸಿಎಂ ಬಾಗಿಲು ತೆರೆಯದಿದ್ದರೇ ಎಫ್‌ಐಆರ್ ದಾಖಲಿಸುವುದಾಗಿ ಎಚ್ಚರಿಸಿದ್ದರು. ಇದನ್ನೂ ಓದಿ: ಮುರುಘಾ ಮಠದಲ್ಲಿ ಮಗು ಪತ್ತೆ – ಮಗುವಿನ ಹಿನ್ನೆಲೆ ಬಗ್ಗೆ ರೋಚಕ ಟ್ವಿಸ್ಟ್

    ಆ ನಂತರ ಬಾಗಿಲನ್ನು ತೆರೆದಾಗ ಅಲ್ಲಿ ಸುಮಾರು 200 ಕೊಳೆತ ಶವ ಪತ್ತೆ ಆಗಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿ ತನಿಖೆಗೆ ಆಗ್ರಹಿಸಲಾಗಿದೆ ಎಂದು ಪಂಜಾಬ್‌ನ ಮುಖ್ಯಮಂತ್ರಿ ತಿಳಿಸಿದ್ದಾರೆ.

    crime

    ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೂರಾರು ಶವಗಳನ್ನು ಕೆಟ್ಟ ಸ್ಥಿತಿಯಲ್ಲಿ ಛಾವಣಿಯ ಮೇಲೆ ಎಸೆದಿರುವುದು ಕಾಣಬಹುದಾಗಿದೆ. ಶವಗಳನ್ನು ರಣಹದ್ದುಗಳಿಗೆ ಮೇವಾಗಿ ಬಳಸಲು ಛಾವಣಿ ಮೇಲೆ ಇಡಲಾಗಿದೆ ಎಂಬ ವದಂತಿ ಹಬ್ಬಿದೆ. ಇದನ್ನೂ ಓದಿ: ಆರ್‌ಸಿಬಿಯನ್ನು ಗೇಲಿ ಮಾಡಿದ್ದಕ್ಕೆ ಸ್ನೇಹಿತನನ್ನೇ ಹತ್ಯೆಗೈದ

    Live Tv
    [brid partner=56869869 player=32851 video=960834 autoplay=true]

  • ತನ್ನ ವಾಟ್ಸಾಪ್ ಸ್ಟೇಟಸ್‍ನಲ್ಲೇ Rip ಎಂದು ಬರೆದು ನೇಣು ಹಾಕಿಕೊಂಡ

    ತನ್ನ ವಾಟ್ಸಾಪ್ ಸ್ಟೇಟಸ್‍ನಲ್ಲೇ Rip ಎಂದು ಬರೆದು ನೇಣು ಹಾಕಿಕೊಂಡ

    ರಾಮನಗರ: ಪ್ರೇಮ ವೈಫಲ್ಯದಿಂದಾಗಿ ಓರ್ವ ಯುವಕ ನೇಣಿಗೆ ಶರಣಾಗಿರುವ ಘಟನೆ ಅರ್ಚಕರಹಳ್ಳಿಯಲ್ಲಿ ನಡೆದಿದೆ.

    ಸೋಮಶೇಖರ್(26) ಮೃತ ಯುವಕ. ಸಾಯುವ ಮೊದಲೇ ಸೋಮಶೇಖರ್ ತನ್ನ ವಾಟ್ಸಾಪ್ ಸ್ಟೇಟಸ್‍ನಲ್ಲಿ ಬೆಳಗ್ಗೆ 12 ಗಂಟೆ ಸುಮಾರಿಗೆ ರಿಪ್ ಎಂದು ಬರೆದುಕೊಂಡಿದ್ದ. ಸಂಜೆ 5 ಗಂಟೆ ಸುಮಾರಿಗೆ ನೇಣಿಗೆ ಶರಣಾಗಿದ್ದಾನೆ. ಘಟನೆ ನಡೆದ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಹಳ್ಳದಲ್ಲಿ ಕೊಚ್ಚಿ ಹೋಗಿದ್ದವ ಶವವಾಗಿ ಪತ್ತೆ – ತಕ್ಷಣವೇ ಐದು ಲಕ್ಷ ರೂ. ಪರಿಹಾರ ವಿತರಣೆ 

    ದತ್ತುಮಗ
    ಅರ್ಚಕರಹಳ್ಳಿಯ ಸೋದರಸಂಬಂಧಿಯೊಬ್ಬರಿಗೆ ಮಕ್ಕಳಿಲ್ಲದ ಕಾರಣ ಈತನನ್ನು ದತ್ತುಮಗನಂತೆ ಸಾಕುತ್ತಿದ್ದರು ಎನ್ನಲಾಗಿದೆ. ಸೋಮಶೇಖರ್ ಚನ್ನಪಟ್ಟಣ ಮೂಲದ ಯುವಕನಾಗಿದ್ದು, ಸದ್ಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸುವ ಸಲುವಾಗಿ ನಗರದ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.

    ಈ ಸಂಬಂಧ ಐಜೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ:ಇಬ್ರಾಹಿಂ ಸಾಹೇಬ್ರು ಸೋತು ಸುಣ್ಣವಾಗಿದ್ದಾರೆ: ಜಮೀರ್ ತಿರುಗೇಟು 

    Live Tv
    [brid partner=56869869 player=32851 video=960834 autoplay=true]

  • ಶಾಲಾ ಬಾಲಕನ ಅನುಮಾನಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

    ಶಾಲಾ ಬಾಲಕನ ಅನುಮಾನಾಸ್ಪದ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

    ಮಡಿಕೇರಿ: ಶಾಲಾ ಬಾಲಕನೊಬ್ಬ ಅನುಮಾನಾಸ್ಪದವಾಗಿ ನೇಣು ಬಿಗಿದ ಸಾವನ್ನಪ್ಪಿದ ಘಟನೆ ಕುಶಾಲನಗರ ಸಮೀಪದ ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಬೆಂಡೆಬೆಟ್ಟ ಹಾಡಿಯಲ್ಲಿ ನಡೆದಿದೆ.

    ಗುಮ್ಮನಕೊಲ್ಲಿ ರಸ್ತೆಯ ಮೂಕಾಂಬಿಕ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮಂಜುನಾಥ್ (15) ಮೃತ ಬಾಲಕ. ಪೋಷಕರಿಲ್ಲದ ಈತ ಕಳೆದ 5 ವರ್ಷದಿಂದ ಅಜ್ಜ, ಅಜ್ಜಿಯ ಮನೆಯಲ್ಲಿ ವಾಸವಾಗಿದ್ದ. ಗುರುವಾರ ವಾಸದ ಮನೆಯಲ್ಲಿ ವೇಲ್‍ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

    ಆದರೆ ಈತನ ಸಾವಿನ ಬಗ್ಗೆ ಸಂಬಂಧಿಕರು ಹಾಗೂ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು, ಬಾಲಕನ ಅಜ್ಜ, ಅಜ್ಜಿ ಈತನ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದರು ಎಂದು ಆರೋಪಿಸಿದ್ದಾರೆ.

    ಮೃತ ಬಾಲಕನ ಮೈಮೇಲೆ ಹಲ್ಲೆ ನಡೆಸಿದ ಗುರುತುಗಳಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ ಅಂತ ಒತ್ತಾಯಿಸಿದ್ದಾರೆ. ಈ ಸಂಬಂಧ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಮುಂದೆ ಬಾಲಕನ ಅಜ್ಜ, ಅಜ್ಜಿ ವಿರುದ್ಧ ಸಂಬಂಧಿಕರು ಹರಿಹಾಯ್ದಿದ್ದು, ಪೊಲೀಸರು ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ಗೆ ವೀಡಿಯೋ ಶೂಟ್ ಮಾಡುತ್ತಿದ್ದ ವೇಳೆ ರೈಲು ಹರಿದು ಮೂವರು ಸಾವು

    ಬಾಲಕನ ಅಜ್ಜ ಚಂದ್ರಶೇಖರ್ ಹೇಳಿಕೆಯಂತೆ ಬಾಲಕ ಮಂಜುನಾಥ್ ನಶೆಯ ಪದಾರ್ಥ ತೆಗೆದುಕೊಳ್ಳುವ ಚಟ ಅಂಟಿಸಿಕೊಂಡಿದ್ದ. ಈ ಬಗ್ಗೆ ಹಲವು ಬಾರಿ ಬುದ್ದಿವಾದ ಹೇಳಿ ಗದರಿಸಲಾಗಿತ್ತು. ಗುರುವಾರ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಾಮೀನು ಮಂಜೂರಾಗಿದ್ದರೂ ಕಾರಾಗೃಹದಲ್ಲಿ ಕೈದಿ ನೇಣಿಗೆ ಶರಣು

    ಈ ನಡುವೆ ಬಾಲಕ ಸಾಯುವ ಮುನ್ನ ತನ್ನ ಸ್ನೇಹಿತರಿಗೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಳಿಸಿದ ವಾಯ್ಸ್ ಮೆಸೇಜ್ ಹರಿದಾಡುತ್ತಿದ್ದು, ಮೃತನ ಅತ್ತೆ ಭಾಗ್ಯ ನೀಡಿದ ದೂರಿನ ಮೇರೆಗೆ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿರುವ ಕುಶಾಲನಗರ ಗ್ರಾಮಾಂತರ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಮಡಿಕೇರಿಗೆ ರವಾನಿಸಿದ್ದಾರೆ.

  • 10 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ!

    10 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ತಂದೆ!

    ನವದೆಹಲಿ: ವ್ಯಕ್ತಿಯೊಬ್ಬನು ತನ್ನ ಮಗಳನ್ನು ಕೊಲೆ ಮಾಡಿದ್ದಲ್ಲದೇ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಯುವ್ಯ ದೆಹಲಿಯ ಮೆಟ್ರೋ ವಿಹಾರ್ ಹಂತ-2 ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸುರೇಶ್ (32) ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತಂದೆಯು ವಾಯುವ್ಯ ದೆಹಲಿಯಲ್ಲಿರುವ ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಆತನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಅದೇ ಕೋಣೆಯಲ್ಲಿ ಅವರ 10 ವರ್ಷದ ಮಗಳ ಶವವೂ ಕೂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಾಯಿ ಬೊಗಳಿದ್ದಕ್ಕೆ ವೃದ್ಧನ ಹತ್ಯೆಗೈದ ಹುಡುಗ

    ಮಂಗಳವಾರ ಮಧ್ಯಾಹ್ನ, ತನ್ನ ಚಿಕ್ಕಪ್ಪ ಮತ್ತು ಚಿಕ್ಕಪ್ಪನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದಾಗ, ಅವರು ಹಾಸಿಗೆಯ ಮೇಲೆ ಸುರೇಶ್ ಶವವಾಗಿ ಪತ್ತೆಯಾದರು. ವ್ಯಕ್ತಿಯ ಶವವನ್ನು ಕುಟುಂಬ ಸದಸ್ಯರು ಆಗಲೇ ಕೆಳಗೆ ತಂದಿದ್ದೇವೆ ಅಂತ ಹೇಳಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

    ಅದೇ ಹಾಸಿಗೆಯ ಮೇಲೆ ಅವರ 10 ವರ್ಷದ ಮಗಳು ಕೂಡ ಸತ್ತು ಬಿದ್ದಿದ್ದಳು. ಆಕೆಗೆ ಯಾವುದೇ ಗಾಯದ ಗುರುತುಗಳು ಅಥವಾ ಕತ್ತು ಹಿಸುಕಿದ ಗುರುತು ಇರಲಿಲ್ಲ. ಆಕೆ ತನ್ನ ತಂದೆಗಿಂತ ಮೊದಲೇ ಸಾವನ್ನಪ್ಪಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕೈದು ವರ್ಷಗಳ ಹಿಂದೆ ಕಟ್ಟಡದ ಎರಡನೇ ಮಹಡಿಯಿಂದ ಬಾಲಕಿ ಬಿದ್ದಿದ್ದು, ಅವಳಿಗೆ ಚಿಕಿತ್ಸೆ ಮುಂದುವರಿದಿತ್ತು. ಆಕೆ ಕೂಡ ‘ಫಿಟ್ಸ್’ ನಿಂದ ಬಳಲುತ್ತಿದ್ದಳು ಎಂದು ಹಿರಿಯ ಪೊಲೀಸ್ ಅಧಿಕಾರಿ ಪ್ರಾಥಮಿಕ ತನಿಖೆಯ ನಂತರ ತಿಳಿಸಿದ್ದಾರೆ. ಇದನ್ನೂ ಓದಿ: ರೈಲು ಬರುವಾಗ ಹಳಿಯಲ್ಲಿದ್ದ ಯುವಕನನ್ನು ಜಿಗಿದು ರಕ್ಷಿಸಿದ ಪೊಲೀಸ್ ಪೇದೆ

    ನರಸಂಬಂಧಿ ಸಮಸ್ಯೆಗಳಿಂದಾಗಿ ಸುರೇಶ್ ತನ್ನ ಕೆಲಸ ಬಿಟ್ಟು ಅವಳ ಆರೈಕೆಗಾಗಿ ಮನೆಯಲ್ಲೇ ಇರಬೇಕಾಯಿತು. ಅವರ ಪತ್ನಿ ರಾಮ್ ದೇವಿ ತರಕಾರಿ ಮಾರುಕಟ್ಟೆಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು. ಮೃತನು ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆಯೇ ಮಗಳನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇಬ್ಬರ ಮೃತದೇಹಗಳನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಹೆಚ್ಚಿದ ಕೋವಿಡ್ ಮರಣ- ಚಿತಾಗಾರಗಳಲ್ಲಿ ಅಂಬುಲೆನ್ಸ್‌ಗಳ ಕ್ಯೂ

    ಹೆಚ್ಚಿದ ಕೋವಿಡ್ ಮರಣ- ಚಿತಾಗಾರಗಳಲ್ಲಿ ಅಂಬುಲೆನ್ಸ್‌ಗಳ ಕ್ಯೂ

    ಬೆಂಗಳೂರು: ಕೊರೊನಾ ಸೋಂಕಿತರ ಸಾವಿನ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಬಿಬಿಎಂಪಿ ಚಿತಾಗಾರಗಳಿಗೆ ಒತ್ತಡ ಹೆಚ್ಚಿದೆ. ಬೆಳಗ್ಗೆ 7ರಿಂದ ರಾತ್ರಿ 12 ಗಂಟೆಯಾದರೂ ಸಾರ್ವಜನಿಕರು ಹೆಣ ಸುಡಲು ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ನಿತ್ಯ ಹತ್ತಾರು ಅಂಬುಲೆನ್ಸ್ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿವೆ.

    ಯಲಹಂಕದ ಮೇಡಿ ಸ್ಮಶಾನದಲ್ಲಿ ಇಂತಹ ದುಸ್ಥಿತಿ ಎದುರಾಗಿದೆ. ನಗರದ ಐದು ಕಡೆ ಕೋವಿಡ್ ಶವ ಸುಡಲು ಅವಕಾಶ ನೀಡಲಾಗಿದೆ. ಆದರೆ ಎರಡು ಕಡೆ ಮಿಷನ್ ಕೆಟ್ಡಿದೆ. ಹೀಗಾಗಿ ಉಳಿದ ಶವಾಗಾರಗಳಲ್ಲಿ ಒತ್ತಡ ಹೆಚ್ಚಿದೆ. ಸರತಿಯಲ್ಲಿ ಅಂಬುಲೆನ್ಸ್ ಗಳು ನಿಲ್ಲುವುದು ಸಹ ಹೆಚ್ಚಿದೆ. ಒಂದು ಹೆಣ ಸುಡಲು 1 ಗಂಟೆ ಬೇಕು. ಹೀಗಾಗಿ ಸರತಿಯಲ್ಲಿ ನಿಲ್ಲುವವರ ಸಂಖ್ಯೆ ಹೆಚ್ಚುತ್ತಿದೆ.

    ಇತ್ತ ಕೋವಿಡ್ ಮರಣ ಪ್ರಮಾಣದಲ್ಲಿ ಸಹ ಏರಿಕೆ ಕಂಡಿದ್ದು, ಬೆಳಗ್ಗೆ 7 ರಿಂದ ರಾತ್ರಿ 12 ಗಂಟೆ ವರೆಗೆ ಕೆಲಸ ಮಾಡಿದರೂ ಸಾಕಾಗುತ್ತಿಲ್ಲ. ಹೀಗಾಗಿ ಅಂಬುಲೆನ್ಸ್ ಗಳು ಸಾಲುಗಟ್ಟಿ ನಿಲ್ಲುತ್ತಿವೆ.

    ಸೌಲಭ್ಯಗಳೂ ಇಲ್ಲ
    ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಶವ ಸಂಸ್ಕಾರಕ್ಕೆ ಸೌಲಭ್ಯ ಇತ್ತು. ಈ ಬಾರಿ ಸ್ಯಾನಿಟೈಸರ್, ಗ್ಲೌಸ್, ಮಾಸ್ಕ್, ಪಿಪಿಇ ಕಿಟ್ ಯಾವುದನ್ನೂ ಕೊಟ್ಟಿಲ್ಲ. ಹೀಗಾಗಿ ನಮಗೆ ರಕ್ಷಣೆ ಇಲ್ಲ, ಜೀವ ಭಯ ಕಾಡುತ್ತಿದೆ ಎಂದು ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.

  • ಬೆಂಗಳೂರಿನ ಸ್ಮಶಾನಗಳಲ್ಲಿ ಶವ ಹೂಳಲು, ಸುಡಲು ಜಾಗವೇ ಇಲ್ಲ!

    ಬೆಂಗಳೂರಿನ ಸ್ಮಶಾನಗಳಲ್ಲಿ ಶವ ಹೂಳಲು, ಸುಡಲು ಜಾಗವೇ ಇಲ್ಲ!

    – ನಿತ್ಯ 50ಕ್ಕೂ ಹೆಚ್ಚು ಜನ ಕೊರೊನಾಗೆ ಬಲಿ
    – ಪ್ರತ್ಯೇಕ ಜಾಗ ಗುರುತಿಸಿದರೂ ಪ್ರಯೋಜನವಾಗಿಲ್ಲ
    – ಸ್ಮಶಾನಗಳಲ್ಲೀಗ ಜನವೋ ಜನ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇದೀಗ ಸ್ಮಶಾನಗಳದ್ದೇ ತಲೆನೋವಾಗಿದ್ದು, ಎಲ್ಲ ಸ್ಮಶಾನಗಳು ಫುಲ್ ಆಗಿರುವುದರಿಂದ ಹೆಣಗಳನ್ನು ಹೂಳಲು, ಸುಡಲು ಜನ ಪರದಾಡುವಂತಾಗಿದೆ.

    ಕಳೆದ ನಾಲ್ಕೈದು ದಿನದಿಂದ ಬೆಂಗಳೂರಿನಲ್ಲಿ ಮರಣ ಪ್ರಮಾಣ ದಿಢೀರ್ ಹೆಚ್ಚಳವಾಗಿದ್ದು, ಕೊರೊನಾ ರೋಗಿಗಳ ಸಾವು ಬೆನ್ನಲ್ಲೇ ಈಗ ಮತ್ತೆ ನಗರದ ಸ್ಮಶಾನಗಳಲ್ಲಿ ಜನ ತುಂಬಿ ತುಳುಕುತ್ತಿದ್ದಾರೆ. ಕೊರೊನಾ ರೋಗಿಗಳನ್ನು ಸುಡಲು ಸರ್ಕಾರ ಪ್ರತ್ಯೇಕ ಜಾಗ ಗುರುತಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಂಗಳೂರಿನಲ್ಲಿ ಕೊರೊನಾದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಎರಡು ಸಾವಿರಕ್ಕೆ ಹತ್ತಿರವಾಗುತ್ತಿದೆ.

    ಪ್ರತಿ ನಿತ್ಯ ಈಗ 50ಕ್ಕೂ ಅಧಿಕ ಜನ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಸ್ಮಶಾನಗಳು ಸಂಪೂರ್ಣ ಭರ್ತಿಯಾಗಿದ್ದು, ಸೋಂಕಿತರನ್ನು ಹೂಳುವುದು ಅಥವಾ ಸುಡುವು ಹೇಗೆ ಎಂದು ಆರೋಗ್ಯಾಧಿಕಾರಿಗಳು ಹಾಗೂ ಕುಟುಂಬಸ್ಥರು ಆತಂಕಗೊಂಡಿದ್ದಾರೆ.

    ಸ್ಮಶಾನದಲ್ಲಿ ಜಾಗವಿಲ್ಲದ ಕಾರಣ ಕೊರೊನಾ ಸೋಂಕಿತರ ಮೃತದೇಹವನ್ನು ಮರಳಿ ಆಸ್ಪತ್ರೆಗೆ ತರಲಾಗುತ್ತಿದೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಬೆಂಗಳೂರಿನಲ್ಲಿ ಕೊರೊನಾ ಮರಣ ಪ್ರಮಾಣ ಹೆಚ್ಚಳವಾಗಿದ್ದರಿಂದ ಸುಡಲು ಹೆಚ್ಚು ಸಮಯಾವಕಾಶ ತೆಗೆದುಕೊಳ್ಳುತ್ತದೆ. ಇದರಿಂದಾಗಿ ಮೃತದೇಹವನ್ನು ಹೆಚ್ಚು ಕಾಯಿಸಬೇಕಾಗುತ್ತದೆ. ಹೀಗಾಗಿ ಮೃತದೇಹ ಕೊಳೆತುಹೋಗುತ್ತೆ ಎನ್ನುವ ಕಾರಣಕ್ಕೆ ವಾಪಾಸ್ ಶವಗಾರದ ಮಾರ್ಚರಿಯಲ್ಲೂ ಇಡಲಾಗುತ್ತೆ ಎನ್ನುವ ಮಾತುಗಳು ಈಗ ಕೇಳಿ ಬರುತ್ತಿದೆ.

    ದೊಡ್ಡ ಸಾಲು ಇರುವುದರಿಂದ ಎಂಟು ಗಂಟೆಗಳ ಕಾಲ ಸಮಯ ತೆಗೆದುಕೊಳ್ಳುತ್ತೆ. ಹೀಗಾಗಿ ವಾಪಾಸ್ ಮಾರ್ಚರಿಗೆ ಶವವನ್ನು ಕೊಂಡೊಯ್ಯುವ ಪರಿಸ್ಥಿತಿ ಬರುತ್ತಿದೆ ಎಂದು ಹೇಳಲಾಗುತ್ತಿದೆ. ಕೊರೊನಾ ಸೋಂಕಿತರು ಹಾಗೂ ಮರಣ ಪ್ರಮಾಣದಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿದ್ದು, ಇದೇ ರೀತಿಯದರೆ ಮುಂದೆ ಏನು ಎಂಬ ಪ್ರಶ್ನೆ ಅಧಿಕಾರಿಗಳು ಹಾಗೂ ಕುಟುಂಬಸ್ಥರಲ್ಲಿ ಕಾಡುತ್ತಿದೆ.

  • ಶವಾಗಾರದಲ್ಲಿದ್ದ ಶವದ ಜೊತೆಗೆ ದರೋಡೆಕೋರನ ಸೆಕ್ಸ್!

    ಶವಾಗಾರದಲ್ಲಿದ್ದ ಶವದ ಜೊತೆಗೆ ದರೋಡೆಕೋರನ ಸೆಕ್ಸ್!

    – ಆರೋಪಿಗೆ ಆರು ವರ್ಷ ಜೈಲು ಶಿಕ್ಷೆ

    ಲಂಡನ್: ಶವಾಗಾರದಲ್ಲಿದ್ದ ಮೃತ ದೇಹದ ಜೊತೆಗೆ ಸೆಕ್ಸ್ ಮಾಡಿದ್ದ ದರೋಡೆಕೋರನಿಗೆ ಇಂಗ್ಲೆಂಡ್ ಕೋರ್ಟ್ ಆರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

    ಖಾಸಿಂ ಖುರಾಮ್ (23) ಜೈಲು ಶಿಕ್ಷೆಗೆ ಗುರಿಯಾದ ದರೋಡೆಕೋರ. ಆರೋಪಿಯನ್ನು 2018 ನವೆಂಬರ್ 11ರಂದು ಬಂಧಿಸಲಾಗಿತ್ತು. ಪ್ರಕರಣದ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಬರ್ಮಿಂಗ್‍ಹ್ಯಾಮ್ ಕೋರ್ಟ್ ಖಾಸಿಂಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

    ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಖಾಸಿಂ ಅಮಾನವೀಯವಾಗಿ ನಡೆದುಕೊಂಡಿದ್ದಾನೆ ಎಂದ ಅವರು, ಮೂರು ದೇಹಗಳನ್ನು ಕದಡಿದ್ಯಾಕೆ? ಒಂಬತ್ತು ಶವ ಪೆಟ್ಟಿಗೆಗಳನ್ನು ಧ್ವಂಸಗೊಳಿಸಲು ಪ್ರಯತ್ನಿಸಿದ್ದು ಯಾಕೆ? ನಿಜವಾಗಿಯೂ ನೀನು ಏನು ಮಾಡಿರುವೆ? ಯಾಕೆ ಹೀಗೆ ಮಾಡಿದ್ದು? ಈ ಕೃತ್ಯವನ್ನು ನೀನೊಬ್ಬನೇ ಮಾಡಿದ್ದೀಯಾ ಅಥವಾ ಬೇರೆ ಯಾರಾದ್ರೂ ನಿನ್ನ ಜೊತೆಯಲ್ಲಿದ್ರಾ ಎಂದು ಪ್ರಶ್ನಿಸಿದ್ದರು.

    ನನ್ನ ಕಕ್ಷಿದಾರನ ತಪ್ಪನ್ನು ಕ್ಷಮಿಸಿ ಹಾಗೂ ಆತನ ನಿಯಂತ್ರಣ ಮೀರಿ ಘಟನೆ ನಡೆದಿದೆ ಎಂದು ಖಾಸಿಂ ಪರ ವಕೀಲ ವಾದ ಮಂಡಿಸಿದ್ದಾರೆ.

    ಏನಿದು ಪ್ರರಕಣ?:
    ದರೋಡೆ ಮಾಡಿದ್ದ ಆಭರಣಗಳನ್ನು ಹಿಡಿದುಕೊಂಡು ಆರೋಪಿ ಖಾಸಿಂ ಖುರಾಮ್ ಇಂಗ್ಲೆಂಡ್ ಕೇಂದ್ರ ಕೋ ಆಪರೇಟಿವ್ ಶವಾಗಾರಕ್ಕೆ ತೆರಳಿದ್ದ. ಈ ವೇಳೆ ಮದ್ಯ ಹಾಗೂ ಗಾಂಜಾ ಮತ್ತಿನಲ್ಲಿದ್ದ ಖಾಸಿಂ ಖುರಾಮ್ ಶವಾಗಾರದಲ್ಲಿದ್ದ ಶವಗಳನ್ನು ನೋಡಿದ್ದಾನೆ. ಅಲ್ಲಿದ್ದ ಮಹಿಳೆಯೊಬ್ಬರ ಮೃತ ದೇಹದ ಜೊತೆಗೆ ಸೆಕ್ಸ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಎರಡು ಶವಗಳ ಬಟ್ಟೆಯನ್ನು ಕೂಡ ಕಳಚಿದ್ದ.

    ಸೆಕ್ಸ್ ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದ ಖಾಸಿಂ ಖುರಾಮ್‍ನನ್ನು ಸಿಬ್ಬಂದಿಯೊಬ್ಬರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ರಾತ್ರಿ 1.40 ಸುಮಾರು ಆರೋಪಿಯನ್ನು ಬಂಧಿಸಿ, ದರೋಡೆ ಮಾಡಿದ್ದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದರು.

    ಶವದ ಸಂಬಂಧಿಕರು ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಪಟ್ಟು ಹಿಡಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಯಾದಗಿರಿ ಜಿಲ್ಲಾಸ್ಪತ್ರೆಯ ಆವರಣದ ಶವಾಗಾರಕ್ಕೆ ಹೋಗಲು ಸೂಕ್ತ ದಾರಿಯೇ ಇಲ್ಲ!

    ಯಾದಗಿರಿ ಜಿಲ್ಲಾಸ್ಪತ್ರೆಯ ಆವರಣದ ಶವಾಗಾರಕ್ಕೆ ಹೋಗಲು ಸೂಕ್ತ ದಾರಿಯೇ ಇಲ್ಲ!

    – ಶವ ಸಾಗಿಸದೇ ಎರಡು ಗಂಟೆ ತುರ್ತು ಚಿಕಿತ್ಸಾ ಘಟಕದಲ್ಲಿಯೇ ಇರಿಸಿದ ಸಿಬ್ಬಂದಿ

    ಯಾದಗಿರಿ: ಜಿಲ್ಲಾಸ್ಪತ್ರೆಯ ಆವರಣದ ಶವಾಗಾರಕ್ಕೆ ಮೃತದೇಹ ಸಾಗಿಸಲು ದಾರಿ ಇಲ್ಲದೇ, ಎರಡು ಗಂಟೆಗಳ ಕಾಲ ತುರ್ತು ಚಿಕಿತ್ಸಾ ಘಟಕದಲ್ಲಿ ಶವವನ್ನು ಇಟ್ಟು ಆಸ್ಪತ್ರೆಯ ಸಿಬ್ಬಂದಿ ಬೇಜವಾಬ್ದಾರಿ ಮೆರೆದಿದ್ದಾರೆ.

    ತುರ್ತು ಚಿಕಿತ್ಸಾ ಘಟಕದಲ್ಲಿ ಶವ ಇರಿಸಿದ್ದ ಪರಿಣಾಮ, ರೋಗಿಗಳು ಭಯದಿಂದಲೇ ಚಿಕಿತ್ಸೆ ಪಡೆದಿದ್ದಾರೆ. ಹಲವು ದಿನಗಳಿಂದ ಇದೇ ರೀತಿಯ ಅವ್ಯವಸ್ಥೆಯಿದ್ದರೂ ಜಿಲ್ಲಾಸ್ಪತ್ರೆಯ ಸಿಬ್ಬಂದಿ ಮಾತ್ರ, ಯಾವುದೇ ಕ್ರಮಕೈಗೊಳ್ಳದೇ ಕಾಲ ಕಳೆಯುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಏನಿದು ಪ್ರಕರಣ:
    ಗುರುಮಠಕಲ್ ವಿಭಾಗದ ಬಸ್ ಚಾಲಕ ಪ್ರಕಾಶ್ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗ್ಗೆ 7 ಗಂಟೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ದಾರಿಯ ಮಧ್ಯದಲ್ಲಿ ಪ್ರಕಾಶ್ ಮೃತಪಟ್ಟಿದ್ದಾರೆ ಅಂತ ಜಿಲ್ಲಾಸ್ಪತ್ರೆಯ ವೈದ್ಯರು ಖಚಿತ ಪಡಿಸಿದ್ದಾರೆ. ಬಳಿಕ ಮೃತದೇಹವನ್ನು ಶವಾಗಾರಕ್ಕೆ ಸಾಗಿಸಲು ಮುಂದಾಗಿದ್ದರು. ಈ ವೇಳೆ ಅಲ್ಲಿಗೆ ಹೋಗಲು ದಾರಿಯೇ ಇರಲಿಲ್ಲ. ಹೀಗಾಗಿ ಎರಡು ಗಂಟೆಗಳ ಕಾಲ ತುರ್ತು ಚಿಕಿತ್ಸಾ ಘಟಕದಲ್ಲಿ ಇರಿಸಿದ್ದಾರೆ.

    ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಶವಾಗಾರದ ದಾರಿಯಲ್ಲಿ ಕೊಳಚೆ ನಿಂತಿದೆ. ಜೊತೆಗೆ ಕಸ ಬೆಳೆದು, ಕಲ್ಲುಗಳು ಎಲ್ಲಂದರಲ್ಲಿ ಬಿದ್ದಿದ್ದು, ಒಬ್ಬ ವ್ಯಕ್ತಿ ಕೂಡಾ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ ಮೃತದೇಹವನ್ನು ಸಾಗಿಸಲು ಕಷ್ಟವಾಗುತ್ತಿದ್ದು, ಸಿಬ್ಬಂದಿ ಮಾತ್ರ ಒಂದು ಪ್ಲಾಸ್ಟಿಕ್ ಸೀಟ್‍ನಲ್ಲಿ ಶವ ಸಾಗಿಸುತ್ತಿದ್ದಾರೆ ಎಂದು ಸಾರಿಗೆ ಸಂಸ್ಥೆ ನೌಕರರು ಆರೋಪಿಸಿದ್ದಾರೆ.

    ಈ ಕುರಿತು ನಾವು ಪ್ರಶ್ನೆ ಮಾಡಿದರೂ, ಆಸ್ಪತ್ರೆಯ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಹೀಗಾಗಿ ನಮ್ಮ ಸಾರಿಗೆ ಬಸ್ಸಿನಲ್ಲೇ ಶವವನ್ನು ಮರಳಿ ತಗೆದುಕೊಂಡು ಹೋಗುತ್ತಿದ್ದೇವೆ. ಇಲ್ಲಿನ ಶಾಸಕರು ತಕ್ಷಣವೇ ಅವ್ಯವಸ್ಥೆಯ ಪರಿಹಾರಕ್ಕೆ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv