Tag: ಶವ ಸಂಸ್ಕಾರ

  • ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಹೆಜ್ಜೇನು ದಾಳಿ – 42 ಮಂದಿಗೆ ಗಾಯ, 19 ಜನ ಆಸ್ಪತ್ರೆಗೆ

    ಚಾಮರಾಜನಗರ: ಶವಸಂಸ್ಕಾರಕ್ಕೆ (Funeral) ತೆರಳಿದ್ದ ವೇಳೆ ಹೆಜ್ಜೇನು ದಾಳಿ (Bee Attack) ನಡೆಸಿ ಹಲವರು ಗಾಯಗೊಂಡ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಸವಾಪುರ ಗ್ರಾಮದಲ್ಲಿ ನಡೆದಿದೆ.

    ಹೆಜ್ಜೇನು ದಾಳಿಯಲ್ಲಿ 42 ಮಂದಿ ಗಾಯಗೊಂಡಿದ್ದು, 19 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದ ಮಹಾದೇವಯ್ಯ ಎಂಬವರ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಅಂತ್ಯಸಂಸ್ಕಾರದಲ್ಲಿ ಬೆಂಕಿ ಹಾಕಿದ್ದ ಹೊತ್ತಲ್ಲಿ ಮರದ ಮೇಲೆ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದೆ. ಇದನ್ನೂ ಓದಿ: ಹೈ-ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ವಾರ್ಷಿಕೋತ್ಸವ: ಸ್ಕೇಟರ್‌ಗಳಿಗೆ ಚಿನ್ನ, ಬೆಳ್ಳಿ ನಾಣ್ಯ ನೀಡಿ ಗೌರವ

    ಘಟನೆಯಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಹೆಚ್‌ಒ ಚಿದಂಬರಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಮಹಿಳಾ‌ ಮೋರ್ಚಾದಿಂದ ಉಚಿತ‌ ಹೊಲಿಗೆ ಯಂತ್ರ ವಿತರಣೆ

  • ಕೋವಿಡ್‍ನಿಂದ ಮೃತರ ಅಂತ್ಯಸಂಸ್ಕಾರಕ್ಕೆ ಪ್ಯಾಕೇಜ್ – ಪಬ್ಲಿಕ್ ಟಿವಿ ವರದಿ ಪ್ರಸ್ತಾಪಿಸಿ ಸಿಎಂ ತರಾಟೆ

    ಕೋವಿಡ್‍ನಿಂದ ಮೃತರ ಅಂತ್ಯಸಂಸ್ಕಾರಕ್ಕೆ ಪ್ಯಾಕೇಜ್ – ಪಬ್ಲಿಕ್ ಟಿವಿ ವರದಿ ಪ್ರಸ್ತಾಪಿಸಿ ಸಿಎಂ ತರಾಟೆ

    ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ನಡೆದ ಉನ್ನತ ಮಟ್ಟದ ತುರ್ತು ಸಭೆಯಲ್ಲಿ ಪಬ್ಲಿಕ್ ಟಿವಿ ವರದಿ ಪ್ರತಿಧ್ವನಿಸಿದೆ. ಕೋವಿಡ್‍ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡಲು ಪ್ಯಾಕೇಜ್ ಫಿಕ್ಸ್ ಮಾಡಿರುವ ಕುರಿತು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳನ್ನು ಇಂದು ತರಾಟೆಗೆ ತೆಗೆದುಕೊಂಡರು.

    ಸಭೆ ಆರಂಭವಾಗುತ್ತಿದ್ದಂತೆಯೇ ಸಿಎಂ ನಿನ್ನೆ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗಿದ್ದ ಅಂತ್ಯಸಂಸ್ಕಾರ ಪ್ಯಾಕೇಜ್ ವರದಿಯನ್ನು ಪ್ರಸ್ತಾಪ ಮಾಡಿದರು. ಅಲ್ಲದೆ ಸಭೆಯಲ್ಲಿ ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಅವರ ಬಳಿ, ಏನ್ರೀ ಮಾಡ್ತಾ ಇದ್ದೀರಾ..? ಪಬ್ಲಿಕ್ ಟಿವಿಯಲ್ಲಿ ವರದಿ ನೋಡಿದ್ರಾ..? ಆ ಬಗ್ಗೆ ಕಠಿಣ ಕ್ರಮ ಆಗಬೇಕು. ಆ ವಿಚಾರದಲ್ಲಿ ಜನ ನಮ್ಮನ್ನ ಕ್ಷಮಿಸೋದಿಲ್ಲ. ನಾನು ನಿಮ್ಮನ್ನ ಕ್ಷಮಿಸೋದಿಲ್ಲ ಎಂದು ಗರಂ ಆದರು.

    ಇದೇ ವೇಳೆ ಆರೋಗ್ಯ ಸಚಿವ ಸುಧಾಕರ್‍ಗೂ ಸೂಚನೆ ಕೊಟ್ಟ ಸಿಎಂ ಯಡಿಯೂರಪ್ಪ, ಯಾವುದನ್ನಾದ್ರೂ ಸಹಿಸ್ಕೋಬಹುದು ಸುಧಾಕರ್. ಈ ಸಮಸ್ಯೆಯನ್ನು ಆದಷ್ಟು ಬೇಗ ಸರಿಪಡಿಸಿ ಎಂದು ತಾಕೀತು ಮಾಡಿದರು.

    ಏನಿದು ಪ್ಯಾಕೇಜ್..?
    ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ 35 ಸಾವಿರ ರೂಪಾಯಿ, ಆಸ್ಪತ್ರೆಯಿಂದ ಚಿತಾಗಾರಕ್ಕೆ 13,000 ರೂ., ಸಂಬಂಧಿಕರಿಗೆ ಪಿಪಿಇ ಕಿಟ್ ನೀಡಲು ತಲಾ 1 ಸಾವಿರ, ಶವಪೂಜೆ ಪ್ರಕ್ರಿಯೆಗೆ 10,000 ರೂ. ಹಾಗೂ ಶವಸಂಸ್ಕಾರ ಮಾಡಲು 6,500 ರೂ.ಕೊಡಬೇಕಾಗಿತ್ತು. ಈ ಬಗ್ಗೆ ಗುರುವಾರ ಮಧ್ಯಾಹ್ನದಿಂದಲೇ ಪಬ್ಲಿಕ್ ಟಿವಿ ವಿಸ್ತøತ ವರದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತ ಬಿಬಿಎಂಪಿ ವಿಶೇಷ ಆಯುಕ್ತ ಗೌರವ ಗುಪ್ತಾ, ಕೊರೊನಾ ಪೀಡತರ ಶವ ಸಂಸ್ಕಾರ ಸಂಪೂರ್ಣ ಉಚಿತ ಎಂದು ಸ್ಪಷ್ಟಪಡಿಸಿದ್ದರು.

    ಈ ಸಂಬಂಧ ನಿನ್ನೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಅವರು, 7 ಸ್ಮಶಾನಗಳನ್ನು ಶವ ಸಂಸ್ಕಾರಕ್ಕೆ ಮೀಸಲಿಡಲಾಗಿದೆ. ಮೃತದೇಹವನ್ನು ಸ್ಮಶಾನಕ್ಕೆ ಅಂಬುಲೆನ್ಸ್ ನಲ್ಲಿ ಉಚಿತವಾಗಿ ಸಾಗಿಸಬೇಕು. ಒಂದು ವೇಳೆ ಹಣಕ್ಕೆ ಡಿಮಾಂಡ್ ಮಾಡಿದ್ರೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಖಾಸಗಿ ಅಂಬುಲೆನ್ಸ್ ಗಳಿಗೆ ಎಚ್ಚರಿಕೆ ನೀಡಿದ್ದರು.

  • ಶವ ಸಂಸ್ಕಾರಕ್ಕೆ ತುಂಬಿದ ಹಳ್ಳ ದಾಟಿ ಹೋಗುವ ದುಸ್ಥಿತಿ

    ಶವ ಸಂಸ್ಕಾರಕ್ಕೆ ತುಂಬಿದ ಹಳ್ಳ ದಾಟಿ ಹೋಗುವ ದುಸ್ಥಿತಿ

    ಬಳ್ಳಾರಿ: ಶವ ಸಂಸ್ಕಾರಕ್ಕೂ ಸರಿಯಾದ ವ್ಯವಸ್ಥೆಯಿಲ್ಲದೆ ತುಂಬಿದ ಹಳ್ಳ ದಾಟಿ, ಶವ ಸಂಸ್ಕಾರ ಮಾಡಲು ಜನರು ತೆರಳಿದ ಹೃದಯ ವಿದ್ರಾವಕ ಘಟನೆ ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

    ಅಸುಂಡಿ ಗ್ರಾಮದ ನಿವಾಸಿ ಪರಶುರಾಮ್(45) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅಸುಂಡಿ ಗ್ರಾಮದಲ್ಲಿದ್ದ ಹಳ್ಳ ತುಂಬಿ ಹರಿಯುತ್ತಿದ್ದ ಪರಿಣಾಮ ಸ್ಮಶಾನಕ್ಕೆ ಶವಗಳನ್ನ ತೆಗೆದುಕೊಂಡು ಹೋಗಲು ಆಗದೆ, ನಿನ್ನೆಯಿಂದ ಶವವನ್ನು ಇಡಲಾಗಿತ್ತು. ಕೊನೆಗೆ ಬೇರೆ ಮಾರ್ಗವಿಲ್ಲದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ಇಂದು ಶವವನ್ನು ಶವದ ಪೆಟ್ಟಿಗೆಯಲ್ಲಿ ಹೊತ್ತುಕೊಂಡು ಹಳ್ಳ ದಾಟಿ ಶವ ಸಂಸ್ಕಾರ ಮಾಡಿದ್ದಾರೆ.

    ಈ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದು, ಇದನ್ನು ದಾಟುವಾಗ ಸ್ವಲ್ಪ ಯಾಮಾರಿದರೂ ಅಂತ್ಯಸಂಸ್ಕಾರಕ್ಕೆ ಹೋದವರು ಕೊಚ್ಚಿ ಹೋಗುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಗ್ರಾಮದಲ್ಲಿ ಮೇಲ್ವರ್ಗಕ್ಕೊಂದು, ಕೆಳ ವರ್ಗದವರಿಗೊಂದು ಸ್ಮಶಾನವಿದೆ. ಆದರೆ ಕೆಳ ವರ್ಗದ ಸ್ಮಶಾನ ಹಳ್ಳದಾಚೆ ಇರುವುದರಿಂದ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಪರದಾಡುತ್ತಿದ್ದಾರೆ.

    ಈ ಬಗ್ಗೆ ಪಿಡಿಒ, ತಹಶಿಲ್ದಾರ್, ಡಿಸಿವರೆಗೂ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ಶಾಸಕ ನಾಗೇಂದ್ರ ಕೂಡಾ ಚುನಾವಣೆ ವೇಳೆ ಸ್ಮಶಾನಕ್ಕೆ ಜಾಗ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಇದಾದ ನಂತರ ನಮ್ಮ ಗ್ರಾಮದ ಕಡೆ ತಲೆ ಹಾಕಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಶವಸಂಸ್ಕಾರಕ್ಕೆ ತೆರಳಿದ್ದ ಜನರ ಮೇಲೆ ಹೆಜ್ಜೇನು ದಾಳಿ – ಓರ್ವ ಸಾವು!

    ಶವಸಂಸ್ಕಾರಕ್ಕೆ ತೆರಳಿದ್ದ ಜನರ ಮೇಲೆ ಹೆಜ್ಜೇನು ದಾಳಿ – ಓರ್ವ ಸಾವು!

    – ಗುಂಡಿಯಲ್ಲಿಯೇ ಮೃತದೇಹ ಬಿಟ್ಟು ಪರಾರಿಯಾದ ಜನ!

    ಬೆಂಗಳೂರು: ಶವ ಸಂಸ್ಕಾರಕ್ಕೆಂದು ತೆರಳಿದ್ದವರ ಮೇಲೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕರ್ನಾಟಕ ತಮಿಳುನಾಡು ಗಡಿ ಕೆಂಪಟ್ಟಿಯಲ್ಲಿ ನಡೆದಿದೆ.

    ಕೆಂಪಟ್ಟಿ ಗ್ರಾಮದ ನಿವಾಸಿ ರಾಜಪ್ಪ (55) ಮೃತ ದುರ್ದೈವಿ. ಈ ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.

    ಘಟನೆಯ ವಿವರ:
    ಕೆಂಪಟ್ಟಿ ಗ್ರಾಮದ ನಿವಾಸಿ ರಾಮಕ್ಕ (102) ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಹೀಗಾಗಿ ಅವರ ಅಂತ್ಯಸಂಸ್ಕಾರವನ್ನು ಇಂದು ನೆರವೇರಿಸಲು ನಿರ್ಧರಿಸಲಾಗಿತ್ತು. ಆದರೆ ಶವ ಸಂಸ್ಕಾರಕ್ಕೆ ತೋಡಿದ್ದ ಗುಂಡಿಯ ಸಮೀಪದ ಮರದಲ್ಲಿ ಹೆಜ್ಜೇನು ಇತ್ತು. ಶವವನ್ನು ಹೊತ್ತು ಸ್ಮಶಾನಕ್ಕೆ ತರುವಾಗ ಪಟಾಕಿ ಹಾಗೂ ಹೂವಿನ ವಾಸನೆಗೆ ಜೇನು ಹುಳು ಎದ್ದ ಜನರ ಮೇಲೆ ದಾಳಿ ಮಾಡಿವೆ.

    ಜೇನು ಹುಳು ಇಪ್ಪತ್ತಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಿಂದಾಗಿ ಶವವನ್ನು ಗುಂಡಿಯಲ್ಲಿಯೇ ಬಿಟ್ಟು ಜನರು ಅಲ್ಲಿಂದಲೇ ಕಾಲ್ಕಿತ್ತಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆನೇಕಲ್‍ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದರಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಮಾಹಿತಿ ಪಡೆದು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv