Tag: ಶಶಿಧರ್

  • ‘ಪಬ್ಲಿಕ್‌ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್‌ ನಿಧನ

    ‘ಪಬ್ಲಿಕ್‌ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್‌ ನಿಧನ

    ಶಿವಮೊಗ್ಗ: ‘ಪಬ್ಲಿಕ್ ಟಿವಿ’ ಶಿವಮೊಗ್ಗ ಜಿಲ್ಲಾ ವರದಿಗಾರ ಶಶಿಧರ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಶಿಧರ್ ಇಂದು (ಶನಿವಾರ) ಸಂಜೆ ಅಕಾಲಿಕ ನಿಧನ ಹೊಂದಿದ್ದಾರೆ.

    ಪಬ್ಲಿಕ್ ಟಿವಿಯಲ್ಲಿ ಕಳೆದ 6 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಶಶಿಧರ್ ಮೂಲತಃ ಅರಸೀಕೆರೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದವರಾಗಿದ್ದು, 40 ವರ್ಷ ವಯಸ್ಸಾಗಿತ್ತು.

    ಮೃತರು ಪತ್ನಿ, ತಂದೆ-ತಾಯಿಯನ್ನು ಅಗಲಿದ್ದಾರೆ. ಶಶಿಧರ್ ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಪಬ್ಲಿಕ್ ಟಿವಿ ಬಳಗ ಶಶಿಧರ್ ನಿಧನಕ್ಕೆ ಸಂತಾಪ ಸೂಚಿಸಿದೆ.

    ಶಶಿಧರ್‌ ಅವರು ಶಿವಮೊಗ್ಗದ ಆಕ್ಟಿವ್ ಜರ್ನಲಿಸ್ಟ್ ಎಂದೇ ಬಿಂಬಿತರಾಗಿದ್ದರು. ಇವರು ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆ ತಾಲೂಕಿನ ಕಡೂರಿಗೆ ಸನಿಹವಿರುವ ಕಲ್ಲಳ್ಳಿ ಗ್ರಾಮದವರು. ತಂದೆ ಹೊಸಂತಪ್ಪ ಹಾಗೂ ತಾಯಿ ಸಾವಿತ್ರಮ್ಮನ ಹಿರಿಯ ಪುತ್ರನಾಗಿ ಜನಿಸಿದ ಇವರು ಸ್ವಗ್ರಾಮದಲ್ಲಿ ಪ್ರಾಥಮಿಕ, ನಂತರ ಅರಸೀಕೆರೆಯಲ್ಲಿ ಹೈಸ್ಕೂಲ್ ಶಿಕ್ಷಣ ಮುಗಿಸಿದರು.

    ಪತ್ರಿಕೋದ್ಯಮಕ್ಕೆ ಬರುವ ಆಶಯದೊಂದಿಗೆ ಮೈಸೂರಿನಲ್ಲಿ 2006 ರಲ್ಲಿ ಎಂಎ ಜರ್ನಲಿಸಂಗೆ ಸೇರ್ಪಡೆಗೊಂಡರು. ಸ್ನಾತಕೋತ್ತರ ಪದವಿಯ ನಂತರ ಈಟಿವಿಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿದರು. ನಂತರ ಚಾಮರಾಜನಗರದಲ್ಲಿ ಸುವರ್ಣ ಟಿವಿಯ ವರದಿಗಾರರಾಗಿ ಸೇವೆ ಸಲ್ಲಿಸಿದರು. ಇದಾದ ಬಳಿಕ ಶಿವಮೊಗ್ಗದಲ್ಲಿ ಕಳೆದ ಆರು ವರ್ಷಗಳಿಂದ ‘ಪಬ್ಲಿಕ್ ಟಿವಿ’ಯಲ್ಲಿ ವರದಿಗಾರಗಾಗಿ ಸೇವೆ ಸಲ್ಲಿಸುತ್ತಾ ಬಂದರು.

    ಶಶಿಧರ್ ಅವರ ಅಕಾಲಿಕ ಮರಣ ಶಿವಮೊಗ್ಗ ಮಾತ್ರವಲ್ಲ ರಾಜ್ಯದ ಪತ್ರಕರ್ತರ ಪಾಲಿಗೆ ನುಂಗಲಾರದ ತುತ್ತಾಗಿದೆ. ನಾಳೆ ಹುಟ್ಟೂರಿನಲ್ಲಿ ಶಶಿಯವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಶಶಿ ಅವರ ಸಾವಿಗೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಶಾಖೆ ಕಂಬನಿ ಮಿಡಿದಿದೆ.

  • ನಿರ್ದೇಶಕನಿಗೆ ಕಾರು ಉಡುಗೊರೆ ನೀಡಿದ ರಾಧಿಕಾ ಕುಮಾರಸ್ವಾಮಿ

    ನಿರ್ದೇಶಕನಿಗೆ ಕಾರು ಉಡುಗೊರೆ ನೀಡಿದ ರಾಧಿಕಾ ಕುಮಾರಸ್ವಾಮಿ

    ಯಾವುದೇ ಚಿತ್ರವಾದರೂ ಸರಿ. ಮೊದಲು ಬಂಡಾವಳ ಹಾಕಿದ ನಿರ್ಮಾಪಕರಿಗೆ ಆ ಸಿನಿಮಾ ಮೆಚ್ಚುಗೆಯಾಗಬೇಕು. ನಿರ್ಮಾಪಕರಿಗೆ ಸಿನಿಮಾ ಇಷ್ಟವಾದಾರೆ ನಿರ್ದೇಶಕ ಅರ್ಧ ಗೆದ್ದ ಹಾಗೆ. ರಾಧಿಕಾ ಕುಮಾರಸ್ವಾಮಿ  (Radhika Kumaraswamy)ಅವರು ನಾಯಕಿಯಾಗಿ ನಟಿಸಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ ನಿರ್ದೇಶನದ ‘ಅಜಾಗ್ರತ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ವರ್ಕ್ ಮುಗಿದು ಚಿತ್ರದ ರಫ್ ಕಾಪಿ ಬಂದಿದೆ. ‘ಅಜಾಗ್ರತ’ (Ajagrata) ಚಿತ್ರದ ರಫ್ ಕಾಪಿ ನೋಡಿದ ನಿರ್ಮಾಪಕರಿಗೆ ಚಿತ್ರ ತುಂಬಾ ಇಷ್ಟವಾಗಿದೆಯಂತೆ.  ಈ ಸಂದರ್ಭದಲ್ಲಿ  ನಿರ್ಮಾಪಕ ರವಿರಾಜ್ (Raviraj), ನಿರ್ದೇಶಕ ಶಶಿಧರ್ ಅವರಿಗೆ ದುಬಾರಿ ಕಾರು ನೀಡುವ ಮೂಲಕ ಚಿತ್ರ ಉತ್ತಮವಾಗಿ ಮೂಡಿಬಂದಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ‌.

    ನಿರ್ದೇಶಕರು ಕಥೆ ಹೇಳಿದ ರೀತಿಯಲ್ಲೇ, ಅದಕ್ಕೂ ಹೆಚ್ಚಾಗಿಯೇ ಚಿತ್ರವನ್ನು ಬಹಳ ಚೆನ್ನಾಗಿ ಮಾಡಿ ಮುಗಿಸಿದ್ದಾರೆ. ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರ ನೋಡಿ ನನಗೆ ತುಂಬಾ ಖುಷಿಯಾಗಿದೆ. ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿರುವ ನಿರ್ದೇಶಕರಿಗೆ ಉಡುಗೊರೆ ನೀಡುವ ಮನಸ್ಸಾಯಿತು. ಹಾಗಾಗಿ ಫಾರ್ಚ್ಯೂನರ್ ಕಾರನ್ನು ಉಡುಗೊರೆಯಾಗಿ ನೀಡುತ್ತೀದ್ದೇನೆ” ಎಂದು ನಿರ್ಮಾಪಕ ರವಿರಾಜ್ ತಿಳಿಸಿದ್ದಾರೆ.  ಚಿತ್ರ ಬಿಡುಗಡೆಯಾಗಿ ಯಶಸ್ವಿಯಾದ ನಂತರ ನಿರ್ದೇಶಕರಿಗೆ ಉಡುಗೊರೆ ನೀಡುವ ನಿರ್ಮಾಪಕರಿದ್ದಾರೆ. ಆದರೆ ಚಿತ್ರ ಬಿಡುಗಡೆಗೂ ಮುನ್ನ ನಿರ್ದೇಶಕರ ಕಾರ್ಯವನ್ನು ಮೆಚ್ಚಿ, ಕಾರನ್ನು ಉಡುಗೊರೆ ನೀಡಿರುವ ನಿರ್ಮಾಪಕ ರವಿರಾಜ್ ಅವರ ಗುಣ ನಿಜಕ್ಕೂ ಶ್ಲಾಘನೀಯ.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ  ಅಭಿನಯಿಸಿದ್ದಾರೆ.  ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

     

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.  ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ನೂರು ದಿನಗಳ ಶೂಟಿಂಗ್ ಮುಗಿಸಿದ ಸ್ವೀಟಿ ರಾಧಿಕಾ ಚಿತ್ರ

    ನೂರು ದಿನಗಳ ಶೂಟಿಂಗ್ ಮುಗಿಸಿದ ಸ್ವೀಟಿ ರಾಧಿಕಾ ಚಿತ್ರ

    ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ನಾಯಕಿಯಾಗಿ ನಟಿಸುತ್ತಿರುವ, ರವಿರಾಜ್ ನಿರ್ಮಾಣದ ಹಾಗೂ ಎಂ.ಶಶಿಧರ್ (Sashidhar) ನಿರ್ದೇಶನದ ‘ಅಜಾಗ್ರತ’ (Ajagrata) ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಚಿತ್ರೀಕರಣವಾಗಿದೆ. ಕೆಲವು ಮಾತಿನ ಭಾಗದ ಹಾಗೂ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಈ ತಿಂಗಳ ಕೊನೆಗೆ ಕೊನೆಯ ಹಂತದ ಚಿತ್ರೀಕರಣ ಆರಂಭವಾಗಲಿದೆ.

    ಇತ್ತೀಚಿಗೆ ನಿರ್ದೇಶಕ ಶಶಿಧರ್ ಅವರ ಹುಟ್ಟುಹಬ್ಬ ಹಾಗೂ ಚಿತ್ರ ನೂರು ದಿನಗಳ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರೈಸಿದೆ. ಈ ಎರಡು ಸಂಭ್ರಮಗಳನ್ನು ಸಂಭ್ರಮಿಸಲು ನಿರ್ಮಾಪಕ ರವಿರಾಜ್ ಹಾಗೂ ರಾಧಿಕಾ ಕುಮಾರಸ್ವಾಮಿ ಅವರು ನಿರ್ದೇಶಕರಿಂದ ನೂರು ಕೇಜಿ ಕೇಕ್ ಕಟ್ ಮಾಡಿಸಿದರು. ಇಡೀ ಚಿತ್ರತಂಡ ಈ ಸಂದರ್ಭದಲ್ಲಿ ಭಾಗಿಯಾಗಿತ್ತು.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ  ಅಭಿನಯಿಸುತ್ತಿದ್ದಾರೆ.  ಹೆಸರಾಂತ ನಟ ಬಾಬಿ ಸಿಂಹ ಸಹ ಈಗ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.  ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.  ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

  • ‘ವೀರಂ’ ಮೂಲಕ ವಿಷ್ಣುವರ್ಧನ್ ಅಭಿಮಾನಿಯಾದ ಪ್ರಜ್ವಲ್ ದೇವರಾಜ್

    ‘ವೀರಂ’ ಮೂಲಕ ವಿಷ್ಣುವರ್ಧನ್ ಅಭಿಮಾನಿಯಾದ ಪ್ರಜ್ವಲ್ ದೇವರಾಜ್

    ಗಾಗಲೇ ನಾನಾ ರೀತಿಯ ಪಾತ್ರಗಳನ್ನು ಮಾಡಿರುವ ಪ್ರಜ್ವಲ್ ದೇವರಾಜ್, ಇದೇ ಮೊದಲ ಬಾರಿಗೆ ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಯಾಗಿ ನಟಿಸಿದ್ದಾರೆ. ವೀರಂ ಚಿತ್ರದಲ್ಲಿ ಅವರದ್ದು ವಿಷ್ಣುವರ್ಧನ್ ಅಭಿಮಾನಿ ಪಾತ್ರವಾಗಿದ್ದು, ಈ ಸಿನಿಮಾವನ್ನು ನೋಡಲು ವಿಷ್ಣು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಮಾಸ್ ಮತ್ತು ಕ್ಲಾಸ್ ಅಂಶಗಳನ್ನು ಒಳಗೊಂಡಿರುವ ಚಿತ್ರ ಇದಾಗಿದ್ದು, ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ಮೂಲಕ ನಿರೀಕ್ಷೆ ಹೆಚ್ಚಿಸಿದೆ.

    ನಿರ್ಮಾಪಕ ಕೆ.ಎಂ. ಶಶಿಧರ್ (Shashidhar) ಅವರು ತಮ್ಮ ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್‌ನ ಮೂರನೇ ಪ್ರಾಜೆಕ್ಟ್ ಆಗಿ ಎಮೋಷನಲ್, ಆಕ್ಷನ್, ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ‘ವೀರಂ’ (Veeram) ಚಿತ್ರವನ್ನು  ನಿರ್ಮಿಸಿದ್ದಾರೆ. ಡಾಟರ್ ಆಫ್ ಪಾರ್ವತಮ್ಮ, ಶುಗರ್‌ಲೆಸ್ ಚಿತ್ರದ ನಂತರ ಈಗ ಆಕ್ಷನ್ ಥ್ರಿಲ್ಲರ್  ಜಾನರ್ ಚಿತ್ರದೊಂದಿಗೆ ಬರುತ್ತಿದ್ದಾರೆ.

    ಪ್ರಜ್ವಲ್ ದೇವರಾಜ್, ರಚಿತಾರಾಮ್  ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದ ಟ್ರೈಲರ್ ಮತ್ತು ಹಾಡುಗಳಿಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.  ಖದರ್ ಕುಮಾರ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಏಪ್ರಿಲ್ 7ಕ್ಕೆ ರಾಜ್ಯಾದ್ಯಂತ  ತೆರೆಕಾಣುತ್ತಿದೆ.   ವೀರಂ ಎಂದರೆ ಯಾರಿಗೂ ಹೆದರದ ವ್ಯಕ್ತಿ. ಖದರ್‌ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ  ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಹಿರಿಯನಟಿ ಶೃತಿ (Shruti), ಅಕ್ಕ ತಮ್ಮನಾಗಿ ಅಲ್ಲದೆ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಾಗಿ ಕಾಣಿಸಿಕೊಂಡಿದ್ದಾರೆ.

    ಎಮೋಷನಲ್ ಥ್ರಿಲ್ಲರ್ ಡ್ರಾಮಾ  ಜೊತೆಗೆ ಕಂಪ್ಲೀಟ್ ಪ್ಯಾಕೇಜ್ಡ್ ಮೂವೀ ಇದಾಗಿದ್ದು,  ಸೆಕೆಂಡ್ ಹಾಫ್‌ನಲ್ಲಿ  ಥ್ರಿಲ್ಲರ್ ಅಂಶವಿದೆ. ಜೊತೆಗೆ  ಶಿಷ್ಯ ದೀಪಕ್‌ (Shishya Deepak) ಮೊದಲಬಾರಿಗೆ ಪೂರ್ಣಪ್ರಮಾಣದ ಖಳನಾಯಕನಾಗಿ ನಟಿಸಿದ್ದಾರೆ. ವಿಶೇಷವಾಗಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಪಾತ್ರವನ್ನಿಟ್ಟುಕೊಂಡು ಕಥೆ ಹೇಳಲಾಗಿದೆ. ಹಾಗಾಗಿ ಈ ಸಿನಿಮಾವನ್ನು ವಿಷ್ಣು   ಅವರಿಗೇ ಅರ್ಪಣೆ ಮಾಡಿದ್ದಾರೆ ಚಿತ್ರತಂಡ.

  • ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್

    ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್

    ನಿರ್ಮಾಪಕ ಕೆ.ಎಂ. ಶಶಿಧರ್ (Shashidhar) ಅವರು ತಮ್ಮ ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್‌ನ ಮೂರನೇ ಪ್ರಾಜೆಕ್ಟ್ ಆಗಿ ಎಮೋಷನಲ್, ಆಕ್ಷನ್, ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ‘ವೀರಂ’ (Veeram) ಚಿತ್ರವನ್ನು  ನಿರ್ಮಿಸಿದ್ದಾರೆ, ಡಾಟರ್ ಆಫ್ ಪಾರ್ವತಮ್ಮ, ಶುಗರ್‌ಲೆಸ್ ಚಿತ್ರದ ನಂತರ ಈಗ ಆಕ್ಷನ್ ಥ್ರಿಲ್ಲರ್  ಜಾನರ್ ಚಿತ್ರದೊಂದಿಗೆ ಬರುತ್ತಿದ್ದಾರೆ.  ಪ್ರಜ್ವಲ್ ದೇವರಾಜ್, ರಚಿತಾರಾಮ್  ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಪ್ರಸನ್ನ ಥಿಯೇಟರ್‌ನಲ್ಲಿ ನೆರೆದಿದ್ದ ಸಾವಿರಾರು ಪ್ರೇಕ್ಷಕರ ನಡುವೆ ನೆರವೇರಿತು.  ಖದರ್ ಕುಮಾರ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಏಪ್ರಿಲ್ 7ಕ್ಕೆ ರಾಜ್ಯಾದ್ಯಂತ  ತೆರೆಕಾಣುತ್ತಿದೆ.  ಹಿರಿಯನಟ ದೇವರಾಜ್ ಅವರು ಚಿತ್ರದ ಟ್ರೈಲರ್ (Trailer) ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೀರಂ ಎಂದರೆ ಯಾರಿಗೂ ಹೆದರದ ವ್ಯಕ್ತಿ. ಖದರ್‌ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ  ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಹಿರಿಯನಟಿ ಶೃತಿ (Shruti), ಅಕ್ಕ ತಮ್ಮನಾಗಿ ಅಲ್ಲದೆ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಾಗಿ ಕಾಣಿಸಿಕೊಂಡಿದ್ದಾರೆ.

    ಟ್ರೈಲರ್ ನೋಡಿದ ನಂತರ ಮಾತನಾಡಿದ ದೇವರಾಜ್, ಟ್ರೈಲರ್‌ನಲ್ಲಿ ವೀರಾವೇಶ ಕಾಣಿಸ್ತಿದೆ. ಶೃತಿ ಅವರಿದ್ದ ಮೇಲೆ ಎಮೋಷನ್ ಸೀನ್‌ಗಳು ಇದ್ದೇ ಇರುತ್ತದೆ, ಪ್ರಜ್ವಲ್, ಕಿಟ್ಟಿ ಹೀಗೆ ಎಲ್ಲ ಯಂಗ್ ಸ್ಟರ್ಸ್  ಸೇರಿ ಈ ಚಿತ್ರ ಮಾಡಿದ್ದಾರೆ.  ಥೇಟರ್‌ನಲ್ಲಿ ಟ್ರೈಲರ್ ನೋಡಿದ್ದು ನನಗೆ ಮೊದಲ ಅನುಭವ, ಜನರ ಕೂಗಾಟ, ಚಪ್ಪಾಳೆ ಕೇಳಿ ತುಂಬಾ ಖುಷಿಯಾಯ್ತು ಎಂದು ಹೇಳಿದರು. ನಟ ಶೃತಿ ಮಾತನಾಡಿ ಇವರೆಲ್ಲ ಸಿನಿಮಾನ ಪ್ರೀತಿಸುವಂಥ ಜನ, ಚಪ್ಪಾಳೆ ಶಿಳ್ಳೆ ಇದನ್ನೆಲ್ಲ ಬಹಳ ದಿನಗಳ ನಂತರ ನೋಡಿ ಖುಷಿಯಾಯ್ತು. ಸಿನಿಮಾದಲ್ಲಿರುವ ಹೋರಾಟ, ಸಾಹಸ ಜನರಿಗೆ ತಲುಪಬೇಕು, ಈ ಸಿನಿಮಾ ನನಗೆ ತುಂಬಾ ವಿಶೇಷ, ಏಕೆಂದರೆ ನಾನು ವಿಷ್ಣು ಸರ್ ಅಭಿಮಾನಿಯಾಗಿಯೇ ಬಂದವಳು, ಇದರಲ್ಲೂ ಅದೇಥರದ ಪಾತ್ರವಿದೆ, ಫಸ್ಟ್ ಟೈಮ್ ಪ್ರಜ್ವಲ್ ಅವರ ಅಭಿನಯ ನೋಡಿ ಕಣ್ಣಲ್ಲಿ ನೀರುಬಂತು, ಸಾಮಾನ್ಯವಾಗಿ ನಾನು ಡಬ್ಬಿಂಗ್ ಮಾಡುವಾಗ, ನನ್ನ ಪಾತ್ರನೋಡಿ ನಾನೇ ನಗುತ್ತೇನೆ. ಈಗ ಎಲ್ಲಾಕಡೆ ಪ್ಯಾನ್ ಇಂಡಿಯಾ ಬಂದಿದೆ, ಆದರೆ ಫ್ಯಾನ್ಸ್ ಇಂಡಿಯಾ ಸಿನಿಮಾ ಇರುವುದು ಕರ್ನಾಟಕದಲ್ಲಿ ಮಾತ್ರ. ಅವರ ಶಿಳ್ಳೆ, ಕೇಕೆಯೇ ಕಲಾವಿದರಿಗೆ ಖುಷಿ ಎಂದರು.

    ಶ್ರೀನಗರಕಿಟ್ಟಿ ಮಾತನಾಡಿ ವಿಷ್ಣು ದಾದಾ ಅವರ ಸವಿನೆನಪಿನಲ್ಲಿ ಈ ಚಿತ್ರ ರಿಲೀಸಾಗುತ್ತಿದೆ. ಒಂದು ಸಿನಿಮಾನ ತೆರೆಯಮೇಲೆ ತಂದು ನಿಲ್ಲಿಸುವುದರ ಕಷ್ಟ ಆ ನಿರ್ಮಾಪಕನಿಗಷ್ಟೇ ಗೊತ್ತು ಎಂದರು. ನಿರ್ಮಾಪಕ ಶಶಿಧರ್ ಮಾತನಾಡಿ, ಈ ಸಿನಿಮಾ ನಿಂತೋಯ್ತು, ಆಗೋದೇ ಇಲ್ಲ ಎಂದು ಕೆಲವರು ಹೇಳಿದ್ದರು, ಅವರಿಗೆಲ್ಲ ಈ ಸಿನಿಮಾ ತೋರಿಸುತ್ತೇನೆ. ಎಮೋಷನಲ್ ಥ್ರಿಲ್ಲರ್ ಡ್ರಾಮಾ  ಜೊತೆಗೆ ಕಂಪ್ಲೀಟ್ ಪ್ಯಾಕೇಜ್ಡ್ ಮೂವೀ ಇದಾಗಿದ್ದು,  ಸೆಕೆಂಡ್ ಹಾಫ್‌ನಲ್ಲಿ  ಥ್ರಿಲ್ಲರ್ ಕಥೆಯಿದೆ.  ಶಿಷ್ಯ ದೀಪಕ್‌ (Shishya Deepak) ಮೊದಲಬಾರಿಗೆ ಪೂರ್ಣಪ್ರಮಾಣದ ಖಳನಾಯಕನಾಗಿ ನಟಿಸಿದ್ದಾರೆ. ವಿಶೇಷವಾಗಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಪಾತ್ರವನ್ನಿಟ್ಟುಕೊಂಡು ಕಥೆ ಹೇಳಿದ್ದೇವೆ, ವಿಷ್ಣು  ಫ್ಯಾನ್ಸ್ಗೆ ಚಿತ್ರ ತುಂಬಾನೇ ಇಷ್ಟವಾಗುತ್ತದೆ, ಚಿತ್ರವನ್ನು ವಿಷ್ಣು ಅವರಿಗೇ ಅರ್ಪಣೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

    ನಿರ್ದೇಶಕ ಖದರ್‌ಕುಮಾರ್ ಮಾತನಾಡಿ ನಾನು ಚಿಕ್ಕವನಿದ್ದಾಗ ವಿಷ್ಣು ಅವರ ದಾದಾ ಚಿತ್ರವನ್ನು 2.75 ರೂಪಾಯಿ ಕೊಟ್ಟು ಇಲ್ಲೇ ನೋಡಿದ್ದೆ. ಈಗ ಇದೇ ಚಿತ್ರಮಂದಿರದಲ್ಲಿ ನನ್ನ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಬಲ ರಾಜವಾಡಿ, ಅಚ್ಯುತ್‌ಕುಮಾರ್, ಸ್ವಾತಿ, ಮೈಕೋ ನಾಗರಾಜ್, ಪ್ರಶಾಂತ್ ನಟನಾ, ಹನುಮಂತೇಗೌಡ ಅಲ್ಲದೆ ನಿರ್ದೇಶಕರಾದ ಜೋಸೈಮನ್, ವಿ.ನಾಗೇಂದ್ರಪ್ರಸಾದ್ ಹೀಗೆ ಬಹುದೊಡ್ಡ ತಾರಾಗಣವೇ ಇದೆ ಎಂದು ಹೇಳಿದರು.

    ನಾಯಕ ಪ್ರಜ್ವಲ್ ಮಾತನಾಡಿ ನಾನು ಹೋದ ಜನ್ಮದಲ್ಲಿ ತುಂಬಾ ಪುಣ್ಯ ಮಾಡಿದ್ದೆ ಅಂತ ಕಾಣಿಸುತ್ತೆ, ಇಂಥ ತಂದೆ ತಾಯಿ ಪಡೆದ ನಾನೇ ಧನ್ಯ, ಆರಂಭದಲ್ಲಿ ನಿರ್ಮಾಪಕ, ನಿರ್ದೇಶಕರು ನನ್ನ ಬಳಿ ಬಂದಾಗ ಅವರ ಕಣ್ನಲ್ಲಿ ಒಂದು ಕನಸಿತ್ತು. ಕಿಟ್ಟಣ್ಣ ಕೂಡ ನನ್ನ ಜೊತೆ ಅಂದಕೂಡಲೇ ಕಥೆಕೇಳದೆ ಒಪ್ಪಿಕೊಂಡರು. ದಾದಾ ಅವರ ಅಚ್ಚೆ ಕೈಮೇಲೆ ಹಾಕಿಕೊಂಡು ಆಕ್ಟ್ ಮಾಡಲು ತುಂಬಾ ಖುಷಿಯಾಗಿತ್ತು. ನನ್ನ ದೊಡ್ಡ ಪವರ್ ಅಂದ್ರೆ ನನ್ನ ಅಭಿಮಾನಿಗಳು, ಮತ್ತೊಂದುಕಡೆ ನನ್ನ ಕುಟುಂಬ ಎಂದು ಹೇಳಿದರು.

    ಖಳನಟನಾಗಿ ಕಾಣಿಸಿಕೊಂಡಿರುವ ಶಿಷ್ಯ ದೀಪಕ್ ಮಾತನಾಡುತ್ತಾ ಈ ಪಾತ್ರವನ್ನು ನಾನು ಅನುಭವಿಸಿ ಮಾಡಿದ್ದೇನೆ. ನಿರ್ಮಾಪಕರು ನನ್ನ ಬಗ್ಗೆ ಬಹಳಷ್ಟು ಜನ ನೆಗೆಟಿವ್ ಮಾತಾಡಿದರೂ ಅದನ್ನು ಲೆಕ್ಕಿಸದೆ ನನಗೆ ಸಪೋರ್ಟ್ ಮಾಡಿದರು. ಶಿಶ್ಯ ದೀಪಕ್‌ನನ್ನು ಜೇಡ ದೀಪಕ್ ಮಾಡಿದ್ದಾರೆ ಎಂದು ಗಗ್ಗದಿತರಾದರು, ಅನೂಪ ಸೀಳನ್ ಅವರ ಸಂಗೀತ ಸಂಯೋಜನೆ, ಲವಿತ್ ಅವರ ಕ್ಯಾಮೆರಾವರ್ಕ್ ಚಿತ್ರಕ್ಕಿದೆ.

  • ‘ತರ್ಲೆ ವಿಲೇಜ್’ ಖ್ಯಾತಿಯ ನಿರ್ದೇಶಕ ಕೆ.ಎಂ ರಘು ಹೊಸ ಚಿತ್ರ ಘೋಷಣೆ

    ‘ತರ್ಲೆ ವಿಲೇಜ್’ ಖ್ಯಾತಿಯ ನಿರ್ದೇಶಕ ಕೆ.ಎಂ ರಘು ಹೊಸ ಚಿತ್ರ ಘೋಷಣೆ

    ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಕೆ.ಎಂ.ರಘು ಹೊಸದೊಂದು ಸಿನಿಮಾಗೆ ಆಕ್ಷನ್ ಕಟ್ ಹೇಳಲು ರೆಡಿಯಾಗಿದ್ದಾರೆ. ಈ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕಥೆ ಹೆಣೆದು ನಿರ್ದೇಶನಕ್ಕೆ ಕೆ.ಎಂ ರಘು ಸಜ್ಜಾಗಿದ್ದು ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ.

    ಚಿತ್ರಕ್ಕೆ ‘ಜಸ್ಟ್ ಪಾಸ್’ ಎಂದು ಶೀರ್ಷಿಕೆ ಇಡಲಾಗಿದೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರಕ್ಕೆ ‘ಇರುವುದೆಲ್ಲವ ಬಿಟ್ಟು’, ‘ಗಜಾನನ ಗ್ಯಾಂಗ್’ ಖ್ಯಾತಿಯ ನಟ ಶ್ರೀ ನಾಯಕ ನಟನಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ನಾಯಕಿ ಪೈನಲ್ ಆಗಬೇಕಿದ್ದು,ಸ್ಕ್ರಿಪ್ಟ್ ಕೆಲಸಗಳೆಲ್ಲ ಮುಗಿಸಿ ಶೂಟಿಂಗ್ ಹೊರಡಲು ಸಿನಿಮಾ ತಂಡ ಸಕಲ ತಯಾರಿ ನಡೆಸಿಕೊಂಡಿದೆ. ಇದೇ ತಿಂಗಳು ಸಿನಿಮಾ ಸೆಟ್ಟೇರಲಿದೆ. ಇದನ್ನೂ ಓದಿ: ರಶ್ಮಿಕಾ ಕನ್ನಡದ ಹುಡುಗಿ, ಬ್ಯಾನ್ ಯಾಕೆ ಮಾಡಬೇಕು: ಧನಂಜಯ್

    ಕೆ.ಎಂ ರಘು. ನಿರ್ದೇಶನದ ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಈ ಬಾರಿಯ ಬೆಂಗಳೂರು ಇಂಟರ್ ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ಅತ್ಯುತ್ತಮ ಮೊದಲ ಸಿನಿಮಾ ಎಂಬ ಪ್ರಶಸ್ತಿ ಪಡೆದುಕೊಂಡಿದೆ. ಇದೀಗ ಮೊದಲ ಬಾರಿ ಯೂತ್ ಫುಲ್ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದು, ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಶೇರ್ ಮಾಡಿಕೊಳ್ಳಲಿದೆ ಚಿತ್ರತಂಡ.

    ರಾಯ್ಸ್ ಎಂಟಟೈನ್ಮೆಂಟ್ ಬ್ಯಾನರ್ ನಡಿ ಶಶಿಧರ್.ಕೆ.ವಿ, ಶ್ರೀಧರ್ ಕೆ.ವಿ ‘ಜಸ್ಟ್ ಪಾಸ್’ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ, ಸುಚೇಂದ್ರ ಪ್ರಸಾದ್, ನವೀನ್ ಡಿ ಪಡಿಕ್ಕಲ್, ಪ್ರಕಾಶ್ ತುಮಿನಾಡ್, ದೀಪಕ್ ರೈ ಮೊದಲಾದವರ ತಾರಾಬಳಗ ಸಿನಿಮಾದಲ್ಲಿದೆ. ಕೆ.ಎಂ.ಪ್ರಕಾಶ್ ಸಂಕಲನ, ಹರ್ಷವರ್ಧನ್ ರಾಜ್ ಸಂಗೀತ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

  • ಭಾರೀ ಮೊತ್ತಕ್ಕೆ ಶುಗರ್ ಲೆಸ್ ಗೆ ಹಿಂದಿ  ರೀಮೇಕ್ ರೈಟ್ಸ್

    ಭಾರೀ ಮೊತ್ತಕ್ಕೆ ಶುಗರ್ ಲೆಸ್ ಗೆ ಹಿಂದಿ ರೀಮೇಕ್ ರೈಟ್ಸ್

    ನಿರ್ಮಾಪಕ ಶಶಿಧರ ಕೆ.ಎಂ. ಅವರು ಇದೇ ಮೊದಲಬಾರಿಗೆ ನಿರ್ದೇಶನ ಮಾಡಿರುವ ಶುಗರ್‌ ಲೆಸ್ ಚಿತ್ರದ  ಹಿಂದಿ ರೀಮೇಕ್ ರೈಟ್ಸ್ ನ್ನು ಹೆಸರಾಂತ ಸಂಸ್ಥೆಯೊಂದು ಖರೀದಿಸಿದೆ. ಬ್ಲ್ಯಾಕ್ ಪ್ಯಾಂತರ್ ಮೂವೀಸ್ ಲಿಮಿಟೆಡ್ (ಲಂಡನ್ ಹಾಗೂ ಮುಂಬೈ)ನ ಶಿವ ಆರ್ಯನ್ ಅವರು ಶುಗರ್ಲೆಸ್ ವಿತ್ರದ ಕಂಟೆಂಟ್ ನಿರೂಪಣೆಯನ್ನು ಇಷ್ಟ ಪಟ್ಟು  ಉತ್ತಮ ಬೆಲೆಗೆ ಖರೀದಿಸಿದ್ದಾರೆ. ಶಿವ ಆರ್ಯನ್ ಕೂಡ ಒಬ್ಬ ಪ್ರತಿಭಾವಂತ ಕಲಾವಿದ, ನಿರ್ಮಾಪಕ ಹಾಗೂ ಉದ್ಯಮಿಯಾಗಿದ್ದು  ಶುಗರ್ ಲೆಸ್ ಸಿನಿಮಾದ ಮೇಕಿಂಗ್ ಅವರಿಗೆ ಇಷ್ಟವಾಗಿದೆ. ಬರುವ ಜುಲೈ ತಿಂಗಳಲ್ಲಿ ಈ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

    ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜೊತೆಗೆ ನಿರ್ಮಾಣವನ್ನೂ ಸಹ ಶಶಿಧರ್ ಕೆ.ಎಂ. ಅವರೇ ಮಾಡಿದ್ದು, ಅವರ ಜೊತೆ  ಸಹಾಯಕ ನಿರ್ಮಾಪಕರಾಗಿ ಪ್ರಜ್ವಲ್ ಎಂ.ರಾಜ ಹಾಗೂ ವಿಜಯಲಕ್ಷ್ಮಿಕೃಷ್ಣೇಗೌಡ ಸಾತ್ ನೀಡಿದ್ದಾರೆ. ಅಲ್ಲದೆ ಈ ಚಿತ್ರದ ಕಾರ್ಯಕಾರಿ  ನಿರ್ಮಾಪಕರಾಗಿ ರಘು ಸಿಂಗಂ ಹಾಗೂ ದಿವ್ಯ ಶಶಿಧರ್ ಕಾರ್ಯನಿರ್ವಹಿಸಿದ್ದಾರೆ. ದಿಶಾ ಎಂಟರ್‌ಟೈನ್‌ಮೆಂಟ್ ಹಾಗೂ ಜಾಜಿ ಪ್ರೊಡಕ್ಷನ್ಸ್ ಸಹಕಾರದೊಂದಿಗೆ ನಿರ್ಮಾಣವಾಗಿರುವ ಶುಗರ್‌ಲೆಸ್ ಚಿತ್ರದ ಛಾಯಾಗ್ರಾಹಕರಾಗಿ ಲವಿತ್, ಸಂಗೀತ ನಿರ್ದೇಶಕರಾಗಿ ಅನೂಪ್ ಸೀಳಿನ್ ಕೆಲಸ ಮಾಡಿದ್ದು, ಡಾ|| ವಿ. ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ಗುರು ಕಶ್ಯಪ್ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಇದನ್ನೂ ಓದಿ: ಥೈಲ್ಯಾಂಡ್ ಟ್ರಿಪ್‌ನಲ್ಲಿ ಪಟಾಕಿ ಪೋರಿ ಆಶಿಕಾ ರಂಗನಾಥ್

    ಈ ಚಿತ್ರಕ್ಕೆ ಸಂಕಲನ ರವಿಚಂದ್ರನ್, ನೃತ್ಯ ಸಂಯೋಜನೆ ಮುರಳಿ ಮಾಸ್ಟರ್, ಕಲೆ ವಿನ್ಯಾಸ ರೂಪೇಂದ್ರ ಆಚಾರ್ ಅವರದಾಗಿದೆ. ಈ ಚಿತ್ರಕ್ಕೆ ಕರ್ನಾಟಕದಾದ್ಯಂತ ನಲವತೈದು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಸಕ್ಕರೆ ಖಾಯಿಲೆ ಹಿನನೆಲೆಯಲ್ಲಿ ನಡೆಯುವ ತುಂಬಾ ಹ್ಯೂಮರಸ್ ಆದ ನಿರೂಪಣೆ ಇರುವಂಥ ಚಿತ್ರ  ಇದಾಗಿದ್ದು,  ಕಥೆಯಲ್ಲಿ ಹಾಸ್ಯವೇ ಪ್ರಧಾನವಾಗಿರುತ್ತದೆ.  ನಾನು ಸ್ಕಿಪ್ಟ್ ಮಾಡುವಾಗ ನನ್ನ ಸಿನಿಮಾದ ಹೀರೋ ಪಾತ್ರ ಹೇಗೆಲ್ಲ ಇರಬೇಕು ಎಂದುಕೊಡಿದ್ದೆನೋ, ಅದೇ ರೀತಿಯಲ್ಲಿ ನಾಯಕನಟ ಪೃಥ್ವಿ ಅಂಬರ್  ನಟಿಸಿದ್ದಾರೆ ಎಂದು ಶಶಿಧರ ಹೇಳಿದ್ದಾರೆ.

  • ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

    ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

    ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು ಸಾಗುವ ವೀಕೆಂಡ್ ಒಂದೊಳ್ಳೆ ಚಿತ್ರವಾಗಿ ಎಲ್ಲರನ್ನೂ ತಾಕಿದೆ. ಸಾಮಾನ್ಯವಾಗಿ ಸಾಮಾಜಿಕ ಸಂದೇಶವನ್ನು ಕಮರ್ಶಿಯಲ್ ಜಾಡಿನಲ್ಲಿಯೇ ಹೇಳೋದು ಅಪರೂಪ. ಆದರೆ ಭರ್ಜರಿ ಕಾಮಿಡಿ, ಆಕ್ಷನ್, ಲವ್ ಸೇರಿದಂತೆ ಎಲ್ಲ ಅಂಶಗಳನ್ನೂ ಒಳಗೊಂಡಿರೋ ವೀಕೆಂಡಿನಲ್ಲಿ ನಮ್ಮ ನಡುವಿದ್ದೂ ನಾವ್ಯಾರೂ ಹೆಚ್ಚಾಗಿ ತಲೆ ಕೆಡಿಸಿಕೊಳ್ಳದ ವಿಚಾರಗಳನ್ನು ಪರಿಣಾಮಕಾರಿಯಾಗಿಯೇ ದೃಷ್ಯೀಕರಿಸಲಾಗಿದೆ.

    ಹೊರ ಜಗತ್ತಿನಲ್ಲಿ ಇವರಿಗೇನೂ ಕಮ್ಮಿ ಇಲ್ಲ ಎಂಬಂಥಾ ಇಮೇಜು, ಅದಕ್ಕೆ ಸರಿಯಾಗಿ ರೂಢಿಸಿಕೊಂಡ ಥಳುಕು ಬಳುಕಿನ ಲೈಫ್ ಸ್ಟೈಲ್… ಆದರೆ ಬದುಕಿನ ನೆತ್ತಿಯ ಮೇಲೆ ಸದಾ ನೇತಾಡುತ್ತಲೇ ಇರುವ ಅನಿಶ್ಚಿತತೆಯ ತೂಗುಗತ್ತಿ. ಯಾವುದೇ ಕ್ಷಣದಲ್ಲಿಯಾದರೂ ನೆಚ್ಚಿಕೊಂಡ ಕೆಲಸವನ್ನು ಬಿಟ್ಟು ಬೀದಿಯಲ್ಲಿ ನಿಲ್ಲಬಹುದಾದ ಬದುಕು… ಇದು ಐಟಿ ಬಿಟ ವಲಯದಲ್ಲಿ ಕೆಲಸ ಮಾಡೋರ ಸಾಮಾನ್ಯ ಗೋಳು. ಇಂಥಾ ಅಕ್ಷರಸ್ಥರೇ ಬದುಕಿನ ಅನಿವಾರ್ಯತೆಗೆ ಸಿಕ್ಕಿ ಅಡ್ಡ ದಾರಿ ಹಿಡಿದರೆ, ಕ್ರಿಮಿನಲ್ಲುಗಳಾದರೆ ಅದರ ಪರಿಣಾಮ ಘೋರ. ಇಂಥಾ ವಾಸ್ತವವನ್ನು ಸವರಿಕೊಂಡು ಹೋದಂತೆ ಭಾಸವಾಗುವ ರೋಚಕ ಕಥೆಯನ್ನು ವೀಕೆಂಡ್ ಚಿತ್ರ ಹೊಂದಿದೆ.

    ನಾಯಕ ಅಜೆಯ್ ಸಾಫ್ಟ್‍ವೇರ್ ಕ್ಷೇತ್ರದಲ್ಲಿಯೇ ಕಾರ್ಯ ನಿರ್ವಹಿಸುವಾತ. ಈತನ ಮೇಲೆ ಸಹೋದ್ಯೋಗಿಯೊಬ್ಬಳು ಮೋಹಗೊಂಡಿದ್ದರೆ ಈತ ಮಾತ್ರ ನಾಯಕಿಯ ಹಿಂದೆ ಬಿದ್ದಿರುತ್ತಾನೆ. ಈ ಪ್ರೇಮದ ಹಿನ್ನೆಲೆಯಲ್ಲಿಯೇ ನಿರ್ದೇಶಕರು ಐಟಿ ಬಿಟಿ ಕ್ಷೇತ್ರದ ಅಷ್ಟೂ ವಿಚಾರಗಳನ್ನು ಪರಿಣಾಮಕಾರಿಯಾಗಿ ಚಿತ್ರಿಸುವ ಜಾಣ್ಮೆ ತೋರಿದ್ದಾರೆ. ಅಲ್ಲಿನ ಕೆಲಸದೊತ್ತಡ, ಸಂಬಳ ಪಡೆಯಲು ಮಾಡಬೇಕಾದ ಅನಿವಾರ್ಯ ಸರ್ಕಸ್ಸುಗಳೆಲ್ಲವನ್ನು ಕೂಡಾ ಮನ ಮುಟ್ಟುವಂತೆ ದೃಷ್ಯದ ಚೌಕಟ್ಟಿಗೆ ಒಗ್ಗಿಸಲಾಗಿದೆ.

    ಇಂಥಾ ಎಲ್ಲ ಸರ್ಕಸ್ಸುಗಳಾಚೆಗೂ ಕೆಲಸ ಕಳೆದುಕೊಂಡಾಗ ಈ ಐಟಿ ಉದ್ಯೋಗಿಗಳ ಬದುಕು ಹೇಗಿರುತ್ತೆ? ಎಂಥೆಂಥಾ ಅವಘಡಗಳು ಸಂಭವಿಸಬಹುದೆಂಬುದನ್ನು ನಿರ್ದೇಶಕರು ರುಚಿಕಟ್ಟಾಗಿಯೇ ನಿರೂಪಿಸಿದ್ದಾರೆ. ಹಾಗಂತ ಈ ಸಿನಿಮಾ ಇಂಥಾ ಒಳತೋಟಿ, ತಲ್ಲಣಗಳಲ್ಲಿಯೇ ಕಳೆದು ಹೋಗಿದೆ ಅಂದುಕೊಳ್ಳಬೇಕಿಲ್ಲ. ಕಾಮಿಡಿ, ಪ್ರೀತಿ ಸೇರಿದಂತೆ ಎಲ್ಲೆಲ್ಲಿ ಯಾವುದನ್ನು ಬೆರೆಸಬೇಕೋ ಅದನ್ನು ಅಚ್ಚುಕಟ್ಟಾಗಿಯೇ ಮಾಡಲಾಗಿದೆ. ಆದ್ದರಿಂದಲೇ ವೀಕೆಂಡ್ ಎಂಬುದು ಸಂಪೂರ್ಣ ಎಂಟರ್‍ಟೈನ್ಮೆಂಟ್ ಪ್ಯಾಕೇಜಿನಂತೆ ಮೂಡಿ ಬಂದಿದೆ. ಒಂದಿಡೀ ಚಿತ್ರ ಇಷ್ಟೊಂದು ಪರಿಣಾಮಕಾರಿಯಾಗಿ ಮೂಡಿ ಬರಲು ಬೇರೇನೇ ಕಾರಣಗಳಿದ್ದರೂ ಅನಂತ್ ನಾಗ್ ಎಂಬ ಮೇರು ನಟ ಈ ಚಿತ್ರದ ಪ್ರಧಾನ ಆಕರ್ಷಣೆ. ಅವರಿಲ್ಲಿ ಸಾಫ್ಟ್‍ವೇರ್ ಮೊಮ್ಮಗನ ತಾತನಾಗಿ, ತಪ್ಪಾದಾಗ ತಿದ್ದುವ ಹಿರಿಯನ ಪಾತ್ರವನ್ನು ಎಂದಿನಂತೆಯೇ ಮನಸೂರೆಗೊಳ್ಳುವಂತೆ ನಿರ್ವಹಿಸಿದ್ದಾರೆ.

    ವಿಶೇಷವೆಂದರೆ ಈ ಚಿತ್ರವನ್ನು ನಿರ್ಮಾಣ ಮಾಡಿರುವ ಮಂಜುನಾಥ್ ಡಿ ಅವರೇ ಪೊಲೀಸ್ ಅಧಿಕಾರಿಯಾಗಿಯೂ ಅಬ್ಬರಿಸಿದ್ದಾರೆ. ಈ ಪಾತ್ರವೂ ಸೇರಿದಂತೆ ಗೋಪಿನಾಥ್ ಭಟ್, ರಘು ನೀನಾಸಂ ಸೇರಿದಂತೆ ಎಲ್ಲ ಪಾತ್ರಗಳೂ ಮನಮುಟ್ಟುವಂತಿವೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ಕೂಡಾ ತಂತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಶಶಿಧರ್ ಅವರ ಛಾಯಾಗ್ರಹಣ ಕಥೆಗೆ ಹೊಸಾ ಓಘವನ್ನೇ ನೀಡಿದೆ. ಹೀಗೆ ಕಮರ್ಶಿಯಲ್ ವೇನಲ್ಲಿ ರೋಚಕವಾದ ಕಥೆ ಹೇಳೋ ಈ ಚಿತ್ರ ಮನಮಿಡಿಯುವಂಥಾ ಒಂದು ಸಂದೇಶವನ್ನೂ ರವಾನಿಸುತ್ತದೆ. ಇಡೀ ಸಿನಿಮಾ, ಶ್ರಮ ಸಾರ್ಥಕ ಅನ್ನಿಸೋದು ಈ ಕಾರಣದಿಂದಲೇ. ಒಟ್ಟಾರೆಯಾಗಿ ವೀಕೆಂಡ್ ಒಂದೊಳ್ಳೆ ಚಿತ್ರ ನೋಡಿದ ಖುಷಿಯನ್ನು ನೋಡುಗರೆಲ್ಲರ ಮನಸಿಗಿಳಿಯುವಂತೆ ಮಾಡುತ್ತದೆ.

    ರೇಟಿಂಗ್: 3.5/5 

  • ಪೊಲೀಸರ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ರೆ ತಪ್ಪೇ – ಸರ್ಕಾರಕ್ಕೆ ಚಾಟಿ, ಶಶಿಧರ್‌ಗೆ ಬಿಗ್ ರಿಲೀಫ್

    ಪೊಲೀಸರ ಸಮಸ್ಯೆ ಬಗ್ಗೆ ಧ್ವನಿ ಎತ್ತಿದ್ರೆ ತಪ್ಪೇ – ಸರ್ಕಾರಕ್ಕೆ ಚಾಟಿ, ಶಶಿಧರ್‌ಗೆ ಬಿಗ್ ರಿಲೀಫ್

    ಬೆಂಗಳೂರು: ಪೊಲೀಸರ ಸಮಸ್ಯೆ ಪರಿಹಾರಕ್ಕಾಗಿ ಪ್ರತಿಭಟಸಿ ರಾಜ್ಯ ದ್ರೋಹ ಆರೋಪ ಪ್ರಕರಣ ಎದುರಿಸುತ್ತಿದ್ದ ಪೊಲೀಸ್ ಮಹಾಸಭಾ ಅಧ್ಯಕ್ಷ ಶಶಿಧರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

    ಹೈಕೋರ್ಟ್ ಏಕಸದಸ್ಯ ಪೀಠವು ಶಶಿಧರ್ ವಿರುದ್ಧ ಸಿಸಿಬಿ ದಾಖಲಿಸಿದ್ದ ರಾಜ್ಯ ದ್ರೋಹ ಪ್ರಕರಣದ ವಿಚಾರಣೆಯನ್ನು ಇಂದು ನಡೆಸಿತು. ಪೊಲೀಸರ ಸಮಸ್ಯೆ ಕುರಿತು ಧ್ವನಿ ಎತ್ತಿದರೆ ತಪ್ಪೇ? ಮುಖ್ಯಮಂತ್ರಿಗಳ ಬಗ್ಗೆ ಮಾತನಾಡಬಾರದೇ? ಶಶಿಧರ್ ಅವರನ್ನೇ ಯಾಕೆ ಬೆನ್ನತ್ತಿದ್ದೀರಿ ಎಂದು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಸರ್ಕಾರದ ಪರ ವಕೀಲರನ್ನು ಮಾರ್ಮಿಕವಾಗಿ ಪ್ರಶ್ನಿಸಿದರು.

    ರಾಜ್ಯ ಸರ್ಕಾರ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತರಾಟೆ ತೆಗದುಕೊಂಡ ನ್ಯಾ.ಅರವಿಂದ್ ಕುಮಾರ್ ಅವರು ಶಶಿಧರ್ ವಿರುದ್ಧ ನಡೆಯುತ್ತಿದ್ದ ವಿಚಾರಣೆಗೆ ತಡೆ ನೀಡಿ ಮಾ.5ಕ್ಕೆ ಮುಂದೂಡಿದರು. ಇದನ್ನೂ ಓದಿ: ಖಾಕಿಗಳಿಗೆ ಸರ್ಕಾರದಿಂದ ವೇತನ ಹೆಚ್ಚಳದ ಉಡುಗೊರೆ!

    ಏನಿದು ಪ್ರಕರಣ?
    ಪೊಲೀಸರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪೊಲೀಸರ ಪ್ರತಿಭಟನೆಗೆ ಶಶಿಧರ್ ಕರೆ ನೀಡಿದ್ದರು. 2016ರ ಜೂನ್ 4ರಂದು ಸಾಮೂಹಿಕ ರಜೆ ಹಾಕಲು ಪೊಲೀಸ್ ಇಲಾಖೆಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಶಶಿಧರ್ ಮೇಲೆ ರಾಜದ್ರೋಹದ ಆರೋಪ ಹೊರಿಸಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಶಶಿಧರ್ ಅವರಿಗೆ 84 ದಿನದ ಬಳಿಕ ಆಗಸ್ಟ್ 25 ರಂದು ಹೈಕೋರ್ಟ್ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಇತ್ತೀಚೆಗೆ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿತ್ತು. ಈ ಚಾರ್ಜ್‍ಶೀಟ್ ರದ್ದುಕೋರಿ ಶಶಿಧರ್ ಹೈ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

    ಈ ಪ್ರಕರಣದ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರ ಬಜೆಟ್ ನಲ್ಲಿ ಪೊಲೀಸರ ಸಂಬಳ ಏರಿಕೆ ಮಾಡದ್ದಕ್ಕೆ ಔರಾದ್‍ಕರ್ ಸಮಿತಿಯ ವರದಿಯ ಜಾರಿ ಸಂಬಂಧ ಫೇಸ್‍ಬುಕ್ ನಲ್ಲಿ ಪೋಸ್ಟ್ ಪ್ರಕಟಿಸಿದ್ದರು. ಷರತ್ತು ಬದ್ಧ ಜಾಮೀನಿನಲ್ಲಿದ್ದರೂ ಅನುಚಿತವಾಗಿ ಬರೆದು ಪೋಸ್ಟ್ ಗಳನ್ನು ಪ್ರಕಟಿಸಿದ್ದಾರೆ ಎನ್ನುವ ಆರೋಪದ ಅಡಿ ಶಶಿಧರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv