Tag: ಶಸ್ತ್ರಚಿಕಿತ್ಸೆ

  • ಈ ವಾರ ನಿರ್ಣಾಯಕ – ದರ್ಶನ್‌ ಸರ್ಜರಿ ಬಗ್ಗೆ ವೈದ್ಯರಿಂದ ಸ್ಫೋಟಕ ಮಾಹಿತಿ

    ಈ ವಾರ ನಿರ್ಣಾಯಕ – ದರ್ಶನ್‌ ಸರ್ಜರಿ ಬಗ್ಗೆ ವೈದ್ಯರಿಂದ ಸ್ಫೋಟಕ ಮಾಹಿತಿ

    – ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದ ನಟ

    ಮೈಸೂರು: ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ನಟ ದರ್ಶನ್ (Darshan) ಬುಧವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ (Treatment) ಒಳಗಾದರು.

    20 ದಿನಗಳ ಹಿಂದೆ ಬೆನ್ನು ನೋವಿಗೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ನಟ ದರ್ಶನ್, ಶಸ್ತ್ರಚಿಕಿತ್ಸೆಗೂ (Surgery) ಒಪ್ಪಿದ್ದರು. ಹೀಗಾಗಿ ಕೆಲವು ಮೆಡಿಸಿನ್ ನೀಡಿ ಫಿಸಿಯೋಥೆರಪಿಗೆ ಡಾ. ಅಜಯ್ ಹೆಗ್ಡೆ ಸೂಚಿಸಿದ್ದರು. ಆ ಅವಧಿ ಮುಗಿದ ಕಾರಣ ಇಂದು ನಟ ದರ್ಶನ್ ಆಸ್ಪತ್ರೆಗೆ ಬಂದು ತಪಾಸಣೆಗೆ ಒಳಗಾದರು. ಇದನ್ನೂ ಓದಿ: ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲೇ ಗರಿಷ್ಠ ರನ್‌ ದಾಖಲೆ – ಐರ್ಲೆಂಡ್‌ ವಿರುದ್ಧ ಸರಣಿ ಗೆದ್ದ ಸಿಂಹಿಣಿಯರು

    ನಟ ದರ್ಶನ್‌ಗೆ ಇವತ್ತು ಶಸ್ತ್ರಚಿಕಿತ್ಸೆ ಮಾಡಲಿಲ್ಲ. ಶಸ್ತ್ರಚಿಕಿತ್ಸೆಗೂ ಮುನ್ನ ನರ್ವ್ ರೂಟ್ ಬ್ಲಾಕ್‌ಗೆ ಎಪಿಡ್ಯೂರಲ್ ಇಂಜೆಕ್ಷನ್ (Epidural Injection) ಅನ್ನು ವೈದ್ಯರು ನೀಡಿದರು. ಈ ಇಂಜೆಕ್ಷನ್ ಹಿನ್ನೆಲೆಯಲ್ಲಿ ಒಂದು ವಾರ ನಿಗಾ ಇಡಲಾಗುತ್ತದೆ. 1 ವಾರದಲ್ಲಿ ಬ್ಲಾಕ್ ಕ್ಲಿಯರ್ ಆಗದಿದ್ದರೆ ಅಪರೇಷನ್‌ಗೆ ವೈದ್ಯರು ಸಿದ್ಧತೆ ನಡೆಸಲಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮದುವೆಗೆ 4 ದಿನ ಬಾಕಿಯಿರುವಾಗಲೇ ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

    ದರ್ಶನ್ ಬೆನ್ನು ನೋವಲ್ಲಿ ಸ್ವಲ್ಪ ಗುಣಮುಖ
    ಫಿಸಿಯೋಥೆರಪಿಯಲ್ಲಿ ದರ್ಶನ್‌ಗೆ ಬೆನ್ನು ನೋವು ಸ್ವಲ್ಪ ಗುಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 20 ದಿನಗಳ ಹಿಂದೆ ಇದ್ದ ನೋವಿಗೂ ಇಂದಿಗೂ ಬಹಳ ವ್ಯತ್ಯಾಸ ಕಂಡುಬಂದಿದೆ. 20% ನಷ್ಟು ಚೇತರಿಕೆ ಆಗಿದೆ. ವೈದ್ಯರು ಹೇಳಿದ ಈ ಮಾತು ಕೇಳಿ ನಟ ದರ್ಶನ್ ಖುಷಿ ಆಗಿದ್ದಾರೆ. ಆದ್ದರಿಂದ ಫಿಸಿಯೋಥೆರಪಿ ಮುಂದುವರೆಸುವಂತೆ ವೈದ್ಯರು ನಟ ದರ್ಶನ್‌ಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಸಚಿವ ಕೃಷ್ಣ ಬೈರೇಗೌಡರ ವಿರುದ್ಧ ಭ್ರಷ್ಟಾಚಾರ ಆರೋಪ – ರಾಜ್ಯಪಾಲರಿಗೆ ದೂರು

    ಎಪಿಡ್ಯೂರಲ್ ಇಂಜೆಕ್ಷನ್ ಕೊಡುವ ಮುನ್ನ ದರ್ಶನ್‌ಗೆ ಇಂಜೆಕ್ಷನ್ ಸೈಡ್ ಎಫೆಕ್ಟ್ ವರ್ಕ್ ಆಗುವ ರೀತಿ ಎಲ್ಲವನ್ನು ವೈದ್ಯ ಡಾ. ಅಜಯ್ ಹೆಗ್ಡೆ ವಿವರಿಸಿದ್ದಾರೆ. ವೈದ್ಯರ ವಿವರಣೆ ಕೇಳಿ ಇಂಜೆಕ್ಷನ್ ಕೊಡಲು ದರ್ಶನ್ ಸಮ್ಮತಿ ಸೂಚಿಸಿದರು. ಒಂದು ವೇಳೆ ಅಪರೇಷನ್ ನಿಶ್ಚಿತವಾದರೆ ದರ್ಶನ್, ಪತ್ನಿ ವಿಜಯಲಕ್ಷ್ಮಿ, ದರ್ಶನ್ ಸಹೋದರ ದಿನಕರ್, ಮಗ ವಿನೀಶ್ ನಾಲ್ವರನ್ನು ಕರೆಸಿ ಅಪರೇಷನ್ ಬಗ್ಗೆ, ಅಪರೇಷನ್ ನಂತರ ಆಗುವ ಪರಿಣಾಮಗಳ ಬಗ್ಗೆ ಕೌನ್ಸಿಲಿಂಗ್ ರೂಪದಲ್ಲಿ ವೈದ್ಯರು ಮಾಹಿತಿ ನೀಡಲಿದ್ದಾರೆ. ಈ ಬಗ್ಗೆ ದರ್ಶನ್‌ಗೂ ವೈದ್ಯರು ತಿಳಿಸಿದ್ದಾರೆ. ಬಳಿಕ ಒಂದು ವಾರದ ನಂತರ ಕುಟುಂಬದ ಸಮೇತ ಆಸ್ಪತ್ರೆಗೆ ಬರುತ್ತೇನೆ ಎಂದು ದರ್ಶನ್ ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣದ ಕುಂಭಮೇಳ ಗವಿಸಿದ್ದೇಶ್ವರ ಜಾತ್ರಾಮಹೋತ್ಸವ – ರಥೋತ್ಸವಕ್ಕೆ ಭಕ್ತರ ದಂಡು 

    ಅಲ್ಲಿಗೆ ಈ ಒಂದು ವಾರ ದರ್ಶನ್ ಪಾಲಿಗೆ ಬಹಳ ಮಹತ್ತರವಾದದ್ದು. ಇಂಜೆಕ್ಷನ್ ವರ್ಕ್ ಆದರೆ ಆಪರೇಷನ್ ಇಲ್ಲ. ವರ್ಕ್ ಆಗದೆ ಇದ್ದರೆ ಮುಂದಿನ ವಾರ ಆಪರೇಷನ್ ಮಾಡಿಸಿಕೊಳ್ಳುತ್ತಾರಾ ಅನ್ನೋದನ್ನ ಕಾದುನೋಡಬೇಕಿದೆ.

  • ಪಾವಗಡ ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು

    ಪಾವಗಡ ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು

    – ಮಹಿಳೆಯರ ಸಾವಿಗೆ ಶಸ್ತ್ರಚಿಕಿತ್ಸಾ ಕೊಠಡಿ ಅಶುಚಿತ್ವವೇ ಕಾರಣ
    – ಸ್ಟೆಫೆಲೋ ಕಾಕಲ್ ಬ್ಯಾಕ್ಟೀರಿಯಾದಿಂದ ಸಾವನ್ನಪ್ಪಿರಬಹುದು ಎಂದ ಡಿಹೆಚ್‌ಒ

    ತುಮಕೂರು: ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ (Surgery) ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ (Pavagada Government Hospital) ನಡೆದಿದೆ.

    ಸಂತಾನಹರಣ, ಗರ್ಭಕೋಶ ಆಪರೇಷನ್ ಹಾಗೂ ಸಿಸೇರಿಯನ್ (Cesarean) ಹೆರಿಗೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಕಳೆದ 5 ದಿನಗಳ ಅವಧಿಯಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದುಬೈನಲ್ಲಿ ಗೌಡರ ಗೌಜಿ ಗಮ್ಮತ್ತು-2024 – ಒಕ್ಕಲಿಗ ಸಮುದಾಯಗಳ ಕುಟುಂಬ ಸಮಾಗಮ 

    ಇದೇ ಫೆಬ್ರವರಿ 22ರಂದು 7 ಮಹಿಳೆಯರಿಗೆ ಹೆರಿಗೆ ಸೇರಿದಂತೆ ವಿವಿಧ ರೀತಿಯ ಶಸ್ತ್ರಚಿಕಿತ್ಸೆಗೆ ಮಾಡಲಾಗಿತ್ತು. ಈ ವೇಳೆ ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ ಅನಿತಾ (30) ಚಿಕಿತ್ಸೆ ಮಾಡಿಸಿಕೊಂಡ ದಿನವೇ ಸಾವನ್ನಪ್ಪಿದ್ದಾರೆ. ಇನ್ನೂ ರಾಜವಂತಿ ಮೂಲದ ಅಂಜಲಿ ಎಂಬ ಮಹಿಳೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಫೆ.24ರಂದು ಅಂಜಲಿ ಸಾವನ್ನಪ್ಪಿದ್ದಾರೆ.

    ಮತ್ತೊಂದು ಪ್ರಕರಣದಲ್ಲಿ ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮ ಎಂಬ ಮಹಿಳೆ ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ನಡೆಸಲಾಗಿತ್ತು. ನಸರಮ್ಮ ಸ್ಥಿತಿಯೂ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಫೆ.25 ರಂದು ನಸರಮ್ಮ ಸಾವನ್ನಪ್ಪಿದ್ದರು. ಈ ಮೂವರು ಫೆ.22ರಂದು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ.

    ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶಸ್ತ್ರಚಿಕಿತ್ಸೆಗೆ ನಡೆಸಿದ ವೈದ್ಯೆ ಡಾ. ಪೂಜಾ ಹಾಗೂ ನಿರ್ಲಕ್ಷ್ಯ ತೋರಿದ ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮೃತರ ಭಾವಚಿತ್ರ ಹಿಡಿದು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ರಾಹುಲ್‌ಗೆ ಶಾಕ್‌ – ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

    ಆರೋಗ್ಯಾಧಿಕಾರಿ ಹೇಳಿದ್ದೇನು?
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ್ದಾರೆ. ಫೆ.22 ರಂದು ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಒಟ್ಟು 7 ಮಹಿಳೆಯರಿಗೆ ಅಂದು ಸಂತಾನಹರಣ, ಸಿಸೇರಿಯನ್ ಮತ್ತು ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆದಿದೆ. ಈ ಘಟನೆಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಹೇಳೋಕಾಗಲ್ಲ. ಶಸ್ತ್ರಚಿಕಿತ್ಸಾ ಕೊಠಡಿ (ಆಪರೇಷನ್ ಥಿಯೇಟರ್ ಶುಚಿತ್ವ) ಇಲ್ಲದಿರೋದು ಕಾರಣ ಇರಬಹುದು. ಆಪರೇಷನ್ ಥಿಯೇಟರ್‌ನಲ್ಲಿ ಸ್ಟೆಫೆಲೋ ಕಾಕಲ್ ಬ್ಯಾಕ್ಟೀರಿಯಾ ಇದೆ. ಇದರಿಂದ ಮಹಿಳೆಯರು ಸಾವನ್ನಪ್ಪಿರಬಹುದು. ಬೆಂಗಳೂರಿನಿಂದ ತನಿಖಾ ತಂಡ ಬಂದು ಸ್ಯಾಂಪಲ್ ತೆಗೆದುಕೊಂಡು ಹೋಗಿದೆ. ವರದಿ ಬಂದ ನಂತರ ವೈದ್ಯರು ಸೇರಿದಂತೆ ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

  • ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಮದುಮಗ ದುರ್ಮರಣ!

    ಚಂದಗಾಣಲೆಂದು ಹಲ್ಲಿನ ಶಸ್ತ್ರಚಿಕಿತ್ಸೆಗೆ ಹೋಗಿ ಮದುಮಗ ದುರ್ಮರಣ!

    – ಏನಿದು ಸ್ಮೈಲ್‌ ಡಿಸೈನಿಂಗ್‌ ಶಸ್ತ್ರಚಿಕಿತ್ಸೆ?

    ಹೈದರಾಬಾದ್: ಎಲ್ಲರಿಗೂ ತಾನು ಚಂದ ಕಾಣಬೇಕು ಎಂಬ ಆಸೆ ಇದ್ದೇ ಇರುತ್ತದೆ. ಶ್ರೀಮಂತರು ಅದಕ್ಕೆ ಬೇಕಾದ ಶಸ್ತ್ರಚಿಕಿತ್ಸೆಗಳನ್ನು ಮಾಡಿಸಿಕೊಳ್ಳುತ್ತಾರೆ. ಅಂತೆಯೇ ಇಲ್ಲೊಬ್ಬ ಯುವಕ ತನ್ನ ನಗುವಿನ ಮೂಲಕ ಉತ್ತಮವಾಗಿ ಕಾಣಬೇಕು ಎಂಬ ಆಸೆಯಿಂದ ಆಸ್ಪತ್ರೆಗೆ ಹೋಗಿ ಹೆಣವಾಗಿದ್ದಾನೆ.

    ಹೌದು. ಮದುವೆಯ ದಿನ ಚೆನ್ನಾಗಿ ಕಾಣಿಸಬೇಕು ಎಂದು ಲಕ್ಷ್ಮಿ ನಾರಾಯಣ ವಿಂಜಮ್ (28) ಎಂಬಾತ ಸ್ಮೈಲ್‌ ಡಿಸೈನಿಂಗ್‌ (Smile Designing) ಶಸ್ತ್ರಚಿಕಿತ್ಸೆಗೆ ಹೋಗಿ ಪ್ರಾಣವನ್ನೇ ಕಳೆದುಕೊಂಡ ವಿಚಿತ್ರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮದುವೆಯ ದಿನ ತನ್ನ ನಗು ಮತ್ತು ನಗುವನ್ನು ಉತ್ತಮವಾಗಿ ಕಾಣುವಂತೆ ಸ್ಮೈ ಲ್ ಡಿಸೈನಿಂಗ್ ಶಸ್ತ್ರ ಚಿಕಿತ್ಸೆಗೆ ಹೈದರಾಬಾದ್ ನ ಜುಬಿಲಿ ಹಿಲ್‌ನಲ್ಲಿರುವ ಎಫ್ಎಂಎಸ್ ಇಂಟರ್ನ್ಯಾ ಷನಲ್ ಡೆಂಟಲ್ ಕ್ಲಿನಿಕ್ ಗೆ ಹೋಗಿದ್ದನು. ಆದರೆ ಶಸ್ತ್ರ ಚಿಕಿತ್ಸೆಯ ಸಮಯದಲ್ಲಿಯೇ ಈತ ಸಾವನ್ನಪ್ಪಿ ದ್ದಾನೆ. ಪ್ರಜ್ಞೆ ತಪ್ಪಿಸುವ ಔಷಧ (ಅನಸ್ತೇಶಿಯಾ) ಹೆಚ್ಚು ಕೊಟ್ಟ ಕಾರಣ ಆತ ಸಾವನ್ನಪ್ಪಿದ್ದಾನೆ ಎಂದು ಲಕ್ಷ್ಮಿ ನಾರಾಯಣ್‌ ತಂದೆ ಗಂಭೀರ ಆರೋಪ ಮಾಡಿದ್ದಾರೆ.

    ಶಸ್ತ್ರಚಿಕಿತ್ಸೆ ವೇಳೆ ತನ್ನ ಮಗ ಪ್ರಜ್ಞಾ ಹೀನನಾಗಿದ್ದ. ಸರ್ಜರಿ ಬಳಿಕ ಅವನ ತಲೆಯಲ್ಲಿ ಯಾವುದೇ ಚಲನೆಯಿಲ್ಲದಿದ್ದಾಗ ಕ್ಲಿನಿಕ್ ಸಿಬ್ಬಂದಿ ನನ್ನನ್ನು ಕರೆದರು. ನಾನು ಹೋಗಿ ನೋಡಿದಾಗ ಆತನನ್ನು ನೋಡಿ ಗಾಬರಿಯಾಯಿತು. ಕೂಡಲೇ ನಾವು ಆತನನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋದೆವು. ಈ ವೇಳೆ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದರು. ಮಗನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ. ಆದರೆ ಈ ಸಾವಿಗೆ ವೈದ್ಯರೇ ನೇರ ಕಾರಣ ಎಂದು ಲಕ್ಷ್ಮಿ ನಾರಾಯಣ ತಂದೆ ರಾಮುಲು ವಿಂಜಮ್‌ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ವಿರುದ್ಧ ಮಾನನಷ್ಟ ಹೇಳಿಕೆ – ಯುಪಿ ಕೋರ್ಟ್‍ನಿಂದ ರಾಹುಲ್ ಗಾಂಧಿಗೆ ಜಾಮೀನು

    ಏನಿದು ಸ್ಮೈಲ್‌ ಡಿಸೈನಿಂಗ್‌?: ಜನರು ತಮ್ಮ ಹಲ್ಲುಗಳನ್ನು ಸರಿಪಡಿಸಲು, ಶುಚಿಗೊಳಿಸುವಿಕೆಗೆ ಆಸ್ಪತ್ರೆಗೆ ಹೋಗುತ್ತಾರೆ. ಇದರಿಂದ ಅವುಗಳು ಹೆಚ್ಚು ಹೊಳೆಯುವಂತೆ ಕಾಣುತ್ತವೆ. ಮಾನವನ ಹಲ್ಲುಗಳು ಕಾಲಾನಂತರದಲ್ಲಿ ಸಡಿಲಗೊಳ್ಳುತ್ತವೆ ಮತ್ತು ಅವುಗಳ ಬಣ್ಣವು ಮಸುಕಾಗಲು ಪ್ರಾರಂಭಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಸ್ಮೈ ಲ್ ಡಿಸೈನ್ ಸರ್ಜರಿ ಮೂಲಕ ಅವುಗಳನ್ನು ಹೊಳೆಯುವಂತೆ ಮಾಡಲಾಗುತ್ತದೆ.

    ಸದ್ಯ ಈ ಘಟನೆ ಸಂಬಂಧ ಕ್ಲಿನಿಕ್ ವೈದ್ಯರ ನಿರ್ಲಕ್ಷ್ಯದಿಂದ ಸಾವು ಎಂದು ಪ್ರ ಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಕ್ಲಿನಿಕ್‌ನ ದಾಖಲೆಗಳು ಹಾಗೂ ಅಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಲೈಂಗಿಕ ತೃಪ್ತಿಗಾಗಿ ಶಿಶ್ನಕ್ಕೆ ಬಟನ್ ಬ್ಯಾಟರಿ ಸಿಕ್ಕಿಸಿಕೊಂಡು 73ರ ವೃದ್ಧ ಎಡವಟ್ಟು!

    ಲೈಂಗಿಕ ತೃಪ್ತಿಗಾಗಿ ಶಿಶ್ನಕ್ಕೆ ಬಟನ್ ಬ್ಯಾಟರಿ ಸಿಕ್ಕಿಸಿಕೊಂಡು 73ರ ವೃದ್ಧ ಎಡವಟ್ಟು!

    – ಶಸ್ತ್ರಚಿಕಿತ್ಸೆ ವೇಳೆ ಬೆಚ್ಚಿಬಿದ್ದ ವೈದ್ಯರು

    ಕಾನ್ಪೆರಾ: ಇತ್ತೀಚಿನ ದಿನಗಳಲ್ಲಿ ಲೈಂಗಿಕ ತೃಷೆಗಾಗಿ ಚಿತ್ರವಿಚಿತ್ರ ವಿಧಾನಗಳನ್ನು ಅನುಸರಿಸುತ್ತಿರುವುದು ಆಗಾಗ್ಗೆ ಕಂಡುಬರುತ್ತಿದೆ. ಅದೇ ರೀತಿ ಆಸ್ಟ್ರೇಲಿಯಾದ (Australia) ವೃದ್ಧನೊಬ್ಬ ತಾತ್ಕಾಲಿಕ ಲೈಂಗಿಕ ತೃಪ್ತಿ ಪಡೆಯಲು ಮಾಡಿಕೊಂಡ ಎಡವಟ್ಟಿನಿಂದ ಆಸ್ಪತ್ರೆಗೆ (Hospital) ದಾಖಲಾಗಿದ್ದಾನೆ.

    ಹೌದು. 73 ವರ್ಷದ ವೃದ್ಧ ತನ್ನ ಲೈಂಗಿಕ ತೃಪ್ತಿಗಾಗಿ ಬಟನ್ ಶೈಲಿಯ ಬ್ಯಾಟರಿಗಳನ್ನು ತನ್ನ ಶಿಶ್ನಕ್ಕೆ ಅಳವಡಿಸಿಕೊಂಡಿದ್ದಾನೆ. ನಂತರ ಅದು ಶಿಶ್ನದಲ್ಲೇ ಸಿಕ್ಕಿಕೊಂಡಿದ್ದು, ಶಸ್ತ್ರಚಿಕಿತ್ಸೆಗೆ ವೈದ್ಯರ ಮೊರೆಹೋಗಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ:  284 ಕೇಸ್, 1.40 ಲಕ್ಷ ರೂ. ಫೈನ್ – ಪೊಲೀಸರ ಬಲೆಗೆ ಬಿದ್ದ ಯುವಕ

    ಮೂತ್ರಶಾಸ್ತ್ರ ವೈದ್ಯಕೀಯ ಅಧ್ಯಯನ (Medical Study) ವರದಿ ಪ್ರಕಾರ, ಅಪರಿಚಿತ ವ್ಯಕ್ತಿಯು ಉದ್ದೇಶಪೂರ್ವಕವಾಗಿಯೇ ಶಿಶ್ನದ ಒಳಕ್ಕೆ ಬ್ಯಾಟರಿ ತಳ್ಳುವ ಮೂಲಕ ತಾತ್ಕಾಲಿಕ ಲೈಂಗಿಕ ತೃಪ್ತಿ ಅನುಭವಿಸಿದ್ದಾನೆ. ಈ ವೇಳೆ ಬ್ಯಾಟರಿಗಳು ಮೂತ್ರನಾಳದಲ್ಲೇ ಸಿಕ್ಕಿಕೊಂಡಿವೆ. ಇದು ಮೂತ್ರನಾಳ ನೈಕ್ರೋಸಿಸ್‌ನ ಮೊದಲ ಕೇಸ್ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇದನ್ನೂ ಓದಿ: ಸದ್ದಿಲ್ಲದೇ ಬಸ್‌ ಹತ್ತಿ, ಮೊಬೈಲ್‌ ಎಗರಿಸಿಕೊಂಡು ಹೋಗ್ತಿದ್ರು; 120 ಮೊಬೈಲ್‌ಗಳೊಂದಿಗೆ ಕಳ್ಳಿಯರ ಗ್ಯಾಂಗ್‌ ಸಿಕ್ಕಿಬಿದ್ದಿದ್ದು ಹೇಗೆ?

    ಬಟನ್ ಬ್ಯಾಟರಿ ಅಳವಡಿಕೆಯಿಂದ ಏನಾಗುತ್ತದೆ?
    ಈ ರೀತಿ ಲೈಂಗಿಕ ತೃಷೆಗಾಗಿ ಬಟನ್ ಬ್ಯಾಟರಿ ಅಳವಡಿಸಿಕೊಳ್ಳುವುದು ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ತಿಳಿಸಿದ್ದಾರೆ. ಶಿಶ್ನಕ್ಕೆ ಬಟನ್ ಬ್ಯಾಟರಿ ಸೇರಿಸಿದ ನಂತರ ನಿಧಾನವಾಗಿ ನೋವು ಕಾಣಿಸಿಕೊಳ್ಳುತ್ತದೆ. ಶಿಶ್ನದ ಮುಂಭಾಗದ ಮುಚ್ಚಿಕೊಳ್ಳಲು ಪ್ರಾರಂಭಿಸಿದ ನಂತರ ಮೂತ್ರ ವಿಸರ್ಜನೆ ವೇಳೆ ತೀವ್ರ ನೋವುಂಟಾಗುತ್ತದೆ. ದೇಹದಲ್ಲಿ ಆಯಾಸವಾಗುತ್ತದೆ, ಮೂತ್ರ ಕೋಶಗಳಲ್ಲಿ ಸಮಸ್ಯೆಯಾಗುತ್ತದೆ. ಈ ಲಕ್ಷಣಗಳು ಕಂಡುಬಂದ ನಂತರ ವ್ಯಕ್ತಿಯೂ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾನೆ.

    ಬ್ಯಾಟರಿಯು ಸ್ವದೇಶಿತವಾಗಿ ನಿರ್ಮಿತವಾದುದ್ದಲ್ಲ, ಅದಲ್ಲಿ ಅನೇಕ ವಿದೇಶಿ ವಸ್ತುಗಳೂ ಇವೆ ಎಂದು ವ್ಯಕ್ತಿ ಒಪ್ಪಿಕೊಂಡಿದ್ದಾನೆ. ನಂತರ ವೈದ್ಯರು ಶಸ್ತçಚಿಕಿತ್ಸೆ ಮೂಲಕ ಅದನ್ನು ಹೊರತೆಗೆದಿದ್ದಾರೆ. ಇದನ್ನೂ ಓದಿ:  ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಹೆಸರಲ್ಲಿ ದೋಖಾ – ಅಪ್ಲೈ ಮಾಡುವ ಮುನ್ನ ಎಚ್ಚರ!

    ಜನರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಇಂತಹ ಯಡವಟ್ಟುಗಳನ್ನು ಮಾಡಿಕೊಳ್ಳುವುದರಿಂದ ಗ್ಯಾಂಗ್ರಿನ್ ಸಂಭವಿಸುವ ಸಾಧ್ಯತೆಯಿದೆ. ಮಾರಣಾಂತಿಕ ಕಾಯಿಲೆ ಸಂಭವಿಸಬಹುದು ಎಂದು ವೈದ್ಯರು ಸಲಹೆ ನೀಡಿದ್ದಾರೆ.

  • ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್‌ ಕೊಟ್ಟ ವೈದ್ಯ- ಮುಂದೇನಾಯ್ತು?

    ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್‌ ಕೊಟ್ಟ ವೈದ್ಯ- ಮುಂದೇನಾಯ್ತು?

    ಬೀಜಿಂಗ್:‌ ಕಣ್ಣಿನ ವೈದ್ಯರೊಬ್ಬರು (Eye Doctor) ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ ಮೂರು ಬಾರಿ ಹೊಡೆದ ಘಟನೆ ಚೀನಾದಲ್ಲಿ (China) ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಈ ಘಟನೆ 2019ರಲ್ಲಿ ನಡೆದಿದ್ದು, ಇದರ ವೀಡಿಯೋ ಸಾಕಷ್ಟು ವೈರಲ್‌ (Viral Video) ಆಗಿದೆ. ಈ ಸಂಬಂಧ ಆಸ್ಪತ್ರೆಯೂ ಕೂಡ ಸ್ಪಷ್ಟನೆಯ ಹೇಳಿಕೆ ಬಿಡುಗಡೆ ಮಾಡಿತ್ತು. ಸದ್ಯ ವೈದ್ಯನನ್ನೇ ಆಸ್ಪತ್ರೆಯಿಂದ ಅಮಾನತು ಮಾಡಲಾಗಿದೆ.

    ನಡೆದಿದ್ದೇನು..?: 82 ವರ್ಷದ ವೃದ್ಧೆಯೊಬ್ಬರು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ (Eye Surgery) ಆಸ್ಪತ್ರೆಗೆ ಹೋದರು. ಈ ವೇಳೆ ವೈದ್ಯರು ವೃದ್ಧೆಗೆ ಅನಸ್ತೇಶಿಯಾ ನೀಡಿದ್ದಾರೆ. ಈ ವೇಳೆ ವೈದ್ಯರು ಭಾಷೆ ವೃದ್ಧೆಗೆ ಅರ್ಥವಾಗುತ್ತಿರಲಿಲ್ಲ. ವೃದ್ಧೆ ಸ್ಥಳೀಯ ಭಾಷೆ ಮಾತನಾಡುತ್ತಿದ್ದರಿಂದ ಆಕೆಗೆ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯರ ಎಚ್ಚರಿಕೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಪರಿಣಾಮ ತನ್ನ ಮಾತಿಗೆ ವೃದ್ಧೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಸಿಟ್ಟುಗೊಂಡು ತಲೆಗೆ ಮೂರು ಬಾರಿ ಹೊಡೆದಿದ್ದಾರೆ.

    ಈ ಘಟನೆ ತುಂಬಾ ಹಳೆಯದ್ದಾಗಿದ್ದು, ಅಂದರೆ 2019ರಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಈ ಘಟನೆಯ ಸಂಪೂರ್ಣ ವೀಡಿಯೋ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋವನ್ನು ಆಸ್ಪತ್ರೆಯ ವೈದ್ಯರೊಬ್ಬರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯೊಂದರಲ್ಲಿ ಹಂಚಿಕೊಂಡಿದ್ದರು. ಬಳಿಕ ಈ ವೀಡಿಯೋ ಸಾಕಷ್ಟು ವೈರಲ್‌ ಆಗಿತ್ತು, ಈಗಲೂ ವೈರಲ್‌ ಆಗುತ್ತಿದೆ.

    ವೀಡಿಯೋ ವೈರಲ್‌ ಆಗುತ್ತಿದ್ದಂತೆಯೇ ಆಸ್ಪತ್ರೆ ಕೂಡ ಸ್ಪಷ್ಟನೆ ನೀಡಿದೆ. ಶಸ್ತ್ರಚಿಕಿತ್ಸೆಗಾಗಿ ರೋಗಿಗೆ ಅನಸ್ತೇಶಿಯಾ ನೀಡಲಾಯಿತು. ಆದರೆ ವೃದ್ಧೆ ಅದನ್ನು ಸಹಿಸಿಕೊಳ್ಳಲು ತಯಾರಿರಲಿಲ್ಲ. ಇಷ್ಟು ಮಾತ್ರವಲ್ಲದೇ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೃದ್ಧೆ ತನ್ನ ತಲೆ ಮತ್ತು ಕಣ್ಣುಗುಡ್ಡೆಗಳನ್ನು ಚಲಿಸುತ್ತಲೇ ಇದ್ದಳು. ರೋಗಿಯು ಸ್ಥಳೀಯ ಉಪಭಾಷೆಯನ್ನು ಮಾತನಾಡುತ್ತಿದ್ದರಿಂದ ಮ್ಯಾಂಡರಿನ್‌ನಲ್ಲಿ ವೈದ್ಯರ ಎಚ್ಚರಿಕೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ತುರ್ತು ಪರಿಸ್ಥಿತಿಯಲ್ಲಿಯೂ ರೋಗಿಗೆ ವೈದ್ಯರು ಚಿಕಿತ್ಸೆ ನೀಡಿದರು ಎಂದು ಆಸ್ಪತ್ರೆ ಸ್ಪಷ್ಟನೆ ನೀಡಿದೆ.

    ಆದರೂ ವೃದ್ಧೆಯ ಮೇಲೆ ವೈದ್ಯರು ತೋರಿದ ಅಮಾನವೀಯತೆಗೆ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಆಕ್ರೋಶದ ಜೊತೆಗೆ ಖಂಡನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯು ಸದ್ಯ ವೈದ್ಯನನ್ನು ಅಮಾನತು ಮಾಡಿದೆ. ಅಲ್ಲದೆ ವೃದ್ಧೆಯ ಕ್ಷಮೆಯಾಚಿಸಿ ಆಸ್ಪತ್ರೆಯು ಆಕೆಗೆ 5,800 ರೂ. ಪರಿಹಾರವನ್ನು ನೀಡಿತು. ಈ ನಡುವೆ ತನ್ನ ತಾಯಿಯ ಎಡಗಣ್ಣು ಕುರುಡಾಗಿದೆ ಎಂದು ವೃದ್ಧೆಯ ಮಗ ಗಂಭೀರ ಆರೋಪ ಮಾಡಿದ್ದಾನೆ. ಆದರೆ ಇದು ಇದೇ ಘಟನೆಯಿಂದಾಗಿ ಇದು ಸಂಭವಿಸಿದೆ ಎಂದು ಸೂಚಿಸುವ ಯಾವುದೇ ವೈದ್ಯಕೀಯ ವರದಿಗಳಿಲ್ಲ ಎಂದು ಆಸ್ಪತ್ರೆ ಹೇಳಿದೆ.

  • ಆಟವಾಡುವಾಗ ಗುಂಡುಸೂಜಿ ನುಂಗಿದ್ದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ಆಟವಾಡುವಾಗ ಗುಂಡುಸೂಜಿ ನುಂಗಿದ್ದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಮುಚ್ಚುಳ ಕ್ಯಾಂಪ್‌ನ ಬಾಲಕ ಶಿವಕುಮಾರ್ (13) ಶಾಲೆಯಲ್ಲಿ ಆಟವಾಡುವಾಗ ಸೂಚನಾ ಫಲಕದ ಗುಂಡುಸೂಜಿಯನ್ನು (Pin) ಆಕಸ್ಮಿಕವಾಗಿ ನುಂಗಿದ್ದ. ಗುಂಡುಸೂಜಿ ಬಲ ಶ್ವಾಸಕೋಶದೊಳಗಡೆ ಸೇರಿತ್ತು. ಇದೀಗ ಬ್ರಾಂಕೋಸ್ಕೋಪ್ ಮೂಲಕ ಗುಂಡುಸೂಜಿಯನ್ನು ಹೊರತೆಗೆಯುವಲ್ಲಿ ರಿಮ್ಸ್ (RIMS) ವೈದ್ಯರು (Doctor) ಯಶಸ್ವಿಯಾಗಿದ್ದಾರೆ.

    ಚಿಕಿತ್ಸೆಗಾಗಿ ಬಾಲಕನನ್ನು ರಿಮ್ಸ್ ಬೋಧಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾದ ಬಾಲಕನ ಶ್ವಾಸಕೋಶಕ್ಕೆ ಕ್ಷ-ಕಿರಣವನ್ನು ಮಾಡಿಸಿದಾಗ ಬಲ ಶ್ವಾಸಕೋಶದಲ್ಲಿ ಸೂಚನಾ ಫಲಕದ ಗುಂಡುಸೂಜಿ ಇರುವುದು ಖಚಿತಪಡಿಸಿಕೊಂಡು ಬ್ರಾಂಕೋಸ್ಕೋಪ್ ಮೂಲಕ ಗುಂಡು ಸೂಜಿಯನ್ನು ಹೊರತೆಗೆಯಲಾಗಿದ್ದು, ಅಪರೂಪದ ಪ್ರಕರಣದಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಗೊಳಿಸಿದ್ದಕ್ಕೆ ವೈದ್ಯರಿಗೆ ಬಾಲಕನ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಭೋಪಾಲ್‌ ಅನಿಲ ದುರಂತಕ್ಕೆ 39 ವರ್ಷ – ಇನ್ನೂ ಮಾಸಿಲ್ಲ 3,000ಕ್ಕೂ ಹೆಚ್ಚು ಜನರನ್ನ ಬಲಿ ಪಡೆದ ಕಹಿ ನೆನಪು

    ಶಸ್ತ್ರಚಿಕಿತ್ಸೆ ತಂಡದಲ್ಲಿ ಇಎನ್‌ಟಿ ನುರಿತ ತಜ್ಞ ವೈದ್ಯ ಡಾ. ಅರವಿಂದ್ ಸಂಗವಿ, ನುರಿತ ಅರವಳಿಕೆ ತಜ್ಞ ವೈದ್ಯ ಡಾ.ಕಿರಣ್ ನಾಯಕ್, ಡಾ.ಮಲ್ಲಿಕಾರ್ಜುನ್ ಕೆ ಪಾಟೀಲ್, ಡಾ. ಸಿಂಧು ಪಿಜಿ, ಡಾ. ಇಂದುಮಣಿ, ನರ್ಸಿಂಗ್ ಅಧಿಕಾರಿ ಅಮರೇಶ್ ಸಕ್ರಿ, ಓಟಿ ತಂತ್ರಜ್ಞರಾದ ಲಿಂಗರಾಜ್, ಸುಮನ್ ಕ್ಲ್ಯಾರಿ, ನಾರಾಯಣ, ಶಂಕರ ಸೇರಿದಂತೆ ಇನ್ನಿತರರು ಇದ್ದರು. ಇದನ್ನೂ ಓದಿ: ಮಾತಾ ಅಲ್ಲದೇ ಚಾಮುಂಡೇಶ್ವರಿ ಆಸ್ಪತ್ರೆಯಲ್ಲೂ ನಡೀತಿತ್ತು ಭ್ರೂಣ ದಂಧೆ- ಹೆಡ್‌ನರ್ಸ್ ಉಷಾರಾಣಿ ಬಂಧನ

  • ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ – ಆಸ್ಪತ್ರೆಗೆ ಬರಬೇಡಿ ಎಂದ ಬೊಮ್ಮಾಯಿ

    ಲಘು ಶಸ್ತ್ರಚಿಕಿತ್ಸೆ ಬಳಿಕ ವಿಶ್ರಾಂತಿ – ಆಸ್ಪತ್ರೆಗೆ ಬರಬೇಡಿ ಎಂದ ಬೊಮ್ಮಾಯಿ

    ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಗಾಗಿದ್ದಾರೆ. ಪ್ರಸ್ತುತ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ನನ್ನನ್ನು ವಿಚಾರಿಸಲು ಯಾರು ಕೂಡಾ ಆಸ್ಪತ್ರೆಗೆ ಬರಬೇಡಿ ಎಂದು ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಅವರು, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ

    ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಮಾಜಿ ಸಿಎಂ ಬರೆದಿದ್ದಾರೆ.

    ಮೊಣಕಾಲು ನೋವಿನಿಂದ ಬಳಲುತ್ತಿದ್ದ ಬಸವರಾಜ ಬೊಮ್ಮಾಯಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದನ್ನೂ ಓದಿ: ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ

    ಬೊಮ್ಮಾಯಿ ಆಸ್ಪತ್ರೆಗೆ ದಾಖಲು – ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದ ಮಾಜಿ ಸಿಎಂ

    ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರನ್ನು ಹೃದಯ ಶಸ್ತ್ರಚಿಕಿತ್ಸೆಗೆ (Heart Surgery) ಒಳಪಡಿಸಲಾಗಿದೆ.

    ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಬೊಮ್ಮಾಯಿ ಶೀಘ್ರ ಚೇತರಿಕೆಯಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾರೈಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಯಡಿಯೂರಪ್ಪ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡಿಗೆ ಶಾಕ್‌ – ಅಫ್ಘಾನ್‌ ಗೆಲುವಿನ ಹಿಂದಿದೆ ಭಾರತದ ನೆರವು

    ಸದ್ಯ ಬೊಮ್ಮಾಯಿ ಆರೋಗ್ಯವಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಅವರನ್ನು ವೈದ್ಯರು ಬುಧವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ಷರತ್ತು ಪಾಲಿಸಿದ್ರೆ ಒತ್ತೆಯಾಳುಗಳ ಬಿಡುಗಡೆ – ಇಸ್ರೇಲ್‌ ಜೊತೆ ಸಂಧಾನಕ್ಕೆ ಮುಂದಾದ ಇರಾನ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಮೆಗಾಸ್ಟಾರ್

    ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಮೆಗಾಸ್ಟಾರ್

    ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಿರಂಜೀವಿ (Chiranjeevi) ಮೊನ್ನೆಯಷ್ಟೇ ಪತ್ನಿಯೊಂದಿಗೆ ವಿಮಾನಯಾನ ಬೆಳೆಸಿದ್ದರು. ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದೊಂದು ಖಾಸಗಿ ವಿಮಾನವಾಗಿದ್ದರಿಂದ ಅಲ್ಲಿನ ಕೆಲ ದೃಶ್ಯಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದರು. ವಿರಾಮ ಬಯಸಿ ಅವರು ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಸಲಿ ಸುದ್ದಿ ಈಗ ಹೊರ ಬಂದಿದೆ.

    ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಪ್ರಯಾಣ ಬೆಳೆಸಿದ್ದು ಅಮೆರಿಕಾಗೆ (America) ಎಂದು ಹೇಳಲಾಗುತ್ತಿದೆ. ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿರಂಜೀವಿ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ (Surgery) ಮಾಡಲಾಗಿದೆಯಂತೆ. ಅದಕ್ಕಾಗಿ ಅವರು ಪತ್ನಿಯೊಂದಿಗೆ ಅಮೆರಿಕಾಗೆ ತೆರಳಿದ್ದರು ಎನ್ನುವುದು ಈಗ ಗೊತ್ತಾಗಿದೆ. ಇದನ್ನೂ ಓದಿ:ಸೌತ್‌ನ ಇಬ್ಬರು ಸ್ಟಾರ್ ನಟರ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್

    ಭೋಲಾ ಶಂಕರ್ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಅಮೆರಿಕಾಗೆ ಹಾರಿದ್ದರು ಚಿರಂಜೀವಿ. ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ  ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ಪಡೆಯಲಾಗಿತ್ತು. ಸಣ್ಣದೊಂದು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ಅದರಂತೆ ಚಿರಂಜೀವಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರಂತೆ.

     

    ಈವರೆಗೂ ಈ ವಿಷಯವನ್ನು ಗೌಪ್ಯವಾಗಿ ಇಡಲಾಗಿತ್ತು. ಆದರೆ, ಆಪ್ತರು ಈ ಮಾಹಿತಿಯನ್ನು ಹಂಚಿಕೊಂಡಿದ್ದರಿಂದ ಅದು ದೊಡ್ಡ ಸುದ್ದಿಯಾಗಿದೆ. ಈಗಾಗಲೇ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆತಂಕ ಪಡುವಂತಹ ಅಗತ್ಯವಿಲ್ಲ ಎಂದಿದ್ದಾರೆ ಆಪ್ತರು. ಅಲ್ಲಿಂದ ಬಂದು ಮತ್ತೆ ಅವರು ಸಿನಿಮಾ ಸಂಬಂಧಿ ಕಾರ್ಯಗಳಲ್ಲಿ ತೊಡಗಲಿದ್ದಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Miracle: ಅಪಘಾತಕ್ಕೀಡಾಗಿ ಬೇರ್ಪಟ್ಟ ತಲೆಯನ್ನು ಜೋಡಿಸಿ ಯಶಸ್ವಿಯಾದ ವೈದ್ಯರು!

    Miracle: ಅಪಘಾತಕ್ಕೀಡಾಗಿ ಬೇರ್ಪಟ್ಟ ತಲೆಯನ್ನು ಜೋಡಿಸಿ ಯಶಸ್ವಿಯಾದ ವೈದ್ಯರು!

    ಜೆರುಸಲೆಂ: ಕೈ, ಕಾಲುಗಳು ಮುರಿದರೆ ಅದನ್ನು ವೈದ್ಯರು ಜೋಡಿಸಿದ್ದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಇಸ್ರೇಲ್‍ನ ವೈದ್ಯರು (Israel Doctor) ಪವಾಡವೆಂಬಂತೆ ಬಾಲಕನೊಬ್ಬನ ದೇಹಕ್ಕೆ ತಲೆಯನ್ನು (Reattached Boy’s Head) ಜೋಡಿಸುವ ಮೂಲಕ ಭಾರೀ ಸುದ್ದಿಯಾಗುವುದರ ಜೊತೆಗೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಸುಲೈಮನ್ ಹಾಸನ್ (Suleiman Hassan) ಎಂಬ 12 ವರ್ಷದ ಬಾಲಕ ಸೈಕಲ್‍ನಲ್ಲಿ ಹೋಗುತ್ತಿದ್ದ. ಈ ವೇಳೆ ಕಾರು ಅಪಘಾತಕ್ಕೀಡಾಗಿ (Car Accident) ಕುತ್ತಿಗೆ ಮುರಿದುಕೊಂಡಿದ್ದ. ಕೂಡಲೇ ಆತನನ್ನು ಹಡಸ್ಸಾ ವೈದ್ಯಕೀಯ ಕೇಂದ್ರಕ್ಕೆ ವಿಮಾನದಲ್ಲಿ (Airlift) ಸಾಗಿಸಲಾಯಿತು. ಅಲ್ಲಿ ಬಾಲಕನನ್ನು ಪರೀಕ್ಷೆ ನಡೆಸಿದ ವೈದ್ಯರು, ಬಾಲಕನ ತಲೆಯು ಕತ್ತಿನ ಬುಡದಿಂದ ಬಹುತೇಕ ಸಂಪೂರ್ಣವಾಗಿ ಬೇರ್ಪಟ್ಟಿದೆ ಎಂದು ಹೇಳಿದ್ದರು. ತಕ್ಷಣವೇ ಆತನನ್ನು ತುರ್ತು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.

    ಚಿಕಿತ್ಸೆಯ ಮೇಲ್ವಿಚಾರಣೆ ವಹಿಸಿದ್ದ ಮೂಳೆ ಶಸ್ತ್ರಚಿಕಿತ್ಸಕ ಡಾ. ಓಹದ್ ಐನಾವ್ ಪ್ರತಿಕ್ರಿಯಿಸಿ, ಶಸ್ತ್ರಚಿಕಿತ್ಸೆ ನಡೆಸಲು ಹಲವಾರು ಗಂಟೆಗಳನ್ನು ತೆಗೆದುಕೊಳ್ಳಲಾಯಿತು. ಮಗುವನ್ನು ಉಳಿಸಿಕೊಳ್ಳಲು ನಮ್ಮ ಶಕ್ತಿ ಮೀರಿ ಪ್ರಯತ್ನಿಸಿದ್ದೇವೆ. ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಬಾಲಕನ ತಲೆಯನ್ನು ಮರು ಜೋಡಣೆ ಮಾಡಿದ್ದೇವೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

    ಅಪಘಾತಕ್ಕೀಡಾಗಿದ್ದ ಬಾಲಕ ಕೇವಲ 50% ನಷ್ಟು ಮಾತ್ರ ಬದುಕುಳಿಯುವ ಸಾಧ್ಯತೆಗಳಿತ್ತು. ಆದರೆ ಇದೀಗ ಶಸ್ತ್ರಚಿಕಿತ್ಸೆಯ ಮೂಲಕ ಬಾಲಕನಿಗೆ ಮರು ಜೀವ ಬಂದಿದೆ ಎಂದರೆ ನಿಜಕ್ಕೂ ಇದು ಪವಾಡ ಎಂದು ವೈದ್ಯರು ಬಣ್ಣಿಸಿದರು. ಇದನ್ನೂ ಓದಿ: ಟೆಸ್ಟಿಂಗ್‌ ವೇಳೆ ರಾಕೆಟ್‌ ಎಂಜಿನ್‌ ಸ್ಫೋಟ – ಜಪಾನ್‌ ಬಾಹ್ಯಾಕಾಶ ಸಂಸ್ಥೆಗೆ ಮತ್ತೆ ನಿರಾಸೆ

    ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ ಇಸ್ರೇಲ್‍ನ ಬೆರಳೆಣಿಕೆಯಷ್ಟು ಮಂದಿ ಮೂಳೆ ಶಸ್ತ್ರಚಿಕಿತ್ಸಕರು ಈ ಪ್ರಯೋಗ ಮಾಡಿದ್ದಾರೆ. ಇದು ಸಾಮಾನ್ಯವಾದ ಸರ್ಜರಿಯಾಗಿರಲಿಲ್ಲ. ಈ ಶಸ್ತ್ರಚಿಕಿತ್ಸೆಯನ್ನು ಮಾಡಲು ಒಬ್ಬ ಸರ್ಜನ್‍ಗೆ ಅತ್ಯದ್ಭುತ ಜ್ಞಾನ ಹಾಗೂ ಅನುಭವವಿರಬೇಕಾಗುತ್ತದೆ ಎಂದರು.

    ಶಸ್ತ್ರಚಿಕಿತ್ಸೆ ಕಳೆದ ತಿಂಗಳು ನಡೆದಿದೆ. ಆದರೆ ಬಾಲಕ ಪೂರ್ತಿ ಹುಷಾರಾಗುವವರೆಗೆ ಇದುವರೆಗೂ ಯಾವುದನ್ನೂ ವೈದ್ಯರು ಬಹಿರಂಗಪಡಿಸಿರಲಿಲ್ಲ. ಸದ್ಯ ಬಾಲಕನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಎಲ್ಲರಂತೆ ಆತ ಓಡಾಡುತ್ತಿದ್ದಾನೆ ಎಂದು ಹೇಳಿದರು.

    ಬಾಲಕನ ತಂದೆ ಪ್ರತಿಕ್ರಿಯಿಸಿ, ಮೊದಲು ಮಗನನ್ನು ಬದುಕಿಸಿದ ಆಸ್ಪತ್ರೆಯ ಸರ್ಜನ್‍ಗಳಿಗೆ ಧನ್ಯವಾದಗಳನ್ನು ಸಮರ್ಪಿಸಿದರು. ವೈದ್ಯರ ವೃತ್ತಿಪರತೆ, ತಂತ್ರಜ್ಞಾನ ಹಾಗೂ ತಕ್ಷಣದ ನಿರ್ಧಾರದಿಂದ ಇಂದು ನನ್ನ ಮಗ ನಮ್ಮ ಕಣ್ಣ ಮುಂದೆ ಓಡಾಡುವಂತಾಗಿದೆ. ಇದಕ್ಕೆಲ್ಲಾ ಕಾರಣಕರ್ತರಾದ ಆಸ್ಪತ್ರೆಯ ಸಿಬ್ಬಂದಿ, ಸರ್ಜನ್‍ಗಳಿಗೆ ನನ್ನ ದೊಡ್ಡ ನಮಸ್ಕಾರ ಎಂದು ಹೇಳುತ್ತಾ ಆನಂದ ಭಾಷ್ಪ ಸುರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]