Tag: ಶಸ್ತ್ರಾಸ್ತ್ರ

  • AK-47, ಐದು 303 ಕೋವಿ, 100ಕ್ಕೂ ಹೆಚ್ಚು ಗುಂಡು – ನಕ್ಸಲರದ್ದು ಎನ್ನಲಾದ ಶಸ್ತ್ರಾಸ್ತ್ರ ಪತ್ತೆ

    AK-47, ಐದು 303 ಕೋವಿ, 100ಕ್ಕೂ ಹೆಚ್ಚು ಗುಂಡು – ನಕ್ಸಲರದ್ದು ಎನ್ನಲಾದ ಶಸ್ತ್ರಾಸ್ತ್ರ ಪತ್ತೆ

    ಚಿಕ್ಕಮಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಶರಣಾದ ನಕ್ಸಲರು ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿದ್ದರು ಎನ್ನಲಾದ ಶಸ್ತ್ರಾಸ್ತ್ರಗಳು (Naxalite weapons) ಪತ್ತೆಯಾಗಿವೆ.

    ಚಿಕ್ಕಮಗಳೂರು (Chikkamagaluru) ಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ನಕ್ಸಲರದ್ದೇ ಎಂದು ಹೇಳಲಾಗುತ್ತಿದ್ದರೂ, ಇನ್ನೂ ಖಚಿತವಾಗಿಲ್ಲ. ತನಿಖೆಯಿಂದ ಗೊತ್ತಾಗಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ದನ್ನೂ ಓದಿ: ಚಿಕ್ಕಮಗಳೂರು | ಎಸ್ಟೇಟ್ ಮ್ಯಾನೇಜರ್ ಮೇಲೆ ಅಕ್ರಮ ಬಾಂಗ್ಲಾ ವಲಸಿಗರಿಂದ ಕಲ್ಲು ತೂರಾಟ

    1 ಎಕೆ-47, 303 ಕೋವಿ 5, ಒಂದು ಪಿಸ್ತೂಲ್, 100ಕ್ಕೂ ಹೆಚ್ಚು ಗುಂಡುಗಳು ಮೇಗೂರು ಅರಣ್ಯ ವ್ಯಾಪ್ತಿಯ ಕಿತ್ತಲೆಗಂಡಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿವೆ. ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಅಪರಿಚಿತರ ಆಯುಧಗಳು ಎಂದು ಜಯಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದನ್ನೂ ಓದಿ: ನಕ್ಸಲರು ಚೀನಾ, ಪಾಕ್‌ನಿಂದ ಸಹಾಯ ಪಡೆದಿದ್ದಾರೆ: ಸಿ.ಟಿ ರವಿ ಗಂಭೀರ ಆರೋಪ

    ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದರು. ಕೆಲವರು ಅರಣ್ಯದ (Forest) ರಹಸ್ಯ ಸ್ಥಳದಲ್ಲಿ ಅಡಗಿಸಿ ಇಟ್ಟಿರುವುದಾಗಿ ತಿಳಿದುಬಂದಿತ್ತು. ಈ ಸ್ಥಳಗಳ ಮಾಹಿತಿ ಪೊಲೀಸರಿಗೆ ಇರಲಿಲ್ಲ. ಹೀಗಾಗಿ ಪೊಲೀಸರು ಬಾಡಿ ವಾರಂಟ್‌ ಪಡೆದು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ ಬಳಿಕ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿತ್ತು.

    ಪರಪ್ಪನ ಅಗ್ರಹಾರದಲ್ಲಿ ನಕ್ಸಲರು
    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರ ಎದುರು ಬುಧವಾರ ರಾತ್ರಿ ಶರಣಾದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಟಿ.ಎನ್‌. ಜಿಶಾ, ಕೆ.ವಸಂತ್, ಮಾರೆಪ್ಪ ಅರೋಲಿ ಅವರನ್ನು ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದನ್ನೂ ಓದಿ: ಶರಣಾದ ನಕ್ಸಲರಿಗೆ ಎಷ್ಟು ಹಣ ಸಿಗುತ್ತೆ? ಸರ್ಕಾರದ ಪ್ಯಾಕೇಜ್ ಏನು?

    ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರ ನೇತ್ವತ್ವದಲ್ಲಿ ಗುರುವಾರ ನಗರದದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಆರು ಮಂದಿಯನ್ನು ಜನವರಿ 30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ನಂತರ ಪೊಲೀಸರು 6 ಮಂದಿ ನಕ್ಸಲರನ್ನು ಬಿಗಿ ಭದ್ರತೆ ನಡುವೆ ಗುರುವಾರ ರಾತ್ರಿ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹಕ್ಕೆ ಬಿಟ್ಟು ಬಂದಿದ್ದಾರೆ.

    ಆರು ಮಂದಿ ನಕ್ಸಲರ ವಿರುದ್ಧವೂ ‘ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ’(ಯುಎಪಿಎ) ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

  • ಕಾಡಿನ ರಹಸ್ಯ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ ನಕ್ಸಲರು!

    ಕಾಡಿನ ರಹಸ್ಯ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿದ್ದಾರೆ ನಕ್ಸಲರು!

    ಬೆಂಗಳೂರು: ರಾಜ್ಯದಲ್ಲಿ ಶರಣಾದ ನಕ್ಸಲರು ( Naxals) ಇನ್ನೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳನ್ನು (Modern Weapons) ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ.

    ಯಾವೊಬ್ಬ ನಕ್ಸಲರು ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ. ಮುಂದಿನ ವಾರ ಪೊಲೀಸರು ನಕ್ಸಲರ ವಶಕ್ಕೆ ಪಡೆಯಲಿದ್ದು ಬಳಿಕ ಅಡಗಿಸಿಟ್ಟ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

    ಪೊಲೀಸರು 6 ಮಂದಿ ನಕ್ಸಲರನ್ನು ರಾಷ್ಟ್ರೀಯ ತನಿಖಾ ದಳದ (NIA) ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕೆಲವರು ಅರಣ್ಯದ (Forest) ರಹಸ್ಯ ಅಡಗಿಸಿ ಇಟ್ಟಿರುವುದಾಗಿ ತಿಳಿಸಿದ್ದಾರೆ. ಈ ಸ್ಥಳಗಳ ಮಾಹಿತಿ ಪೊಲೀಸರಿಗೆ ಇಲ್ಲ. ಹೀಗಾಗಿ ಪೊಲೀಸರು ಬಾಡಿ ವಾರಂಟ್‌ ಪಡೆದು ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ ಬಳಿಕ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಿದ್ದಾರೆ ಎನ್ನಲಾಗಿದೆ.

    ಎಕೆ 47, ಮಿಷಿನ್‌ ಗನ್‌ಗಳನ್ನು ಇವರು ಬಳಸುತ್ತಿದ್ದರು. ಸಿಎಂ ಮುಂದೆ ಶರಣಾದ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಕಾಡಿನಲ್ಲಿಯೇ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

    ಪರಪ್ಪನ ಅಗ್ರಹಾರದಲ್ಲಿ ನಕ್ಸಲರು
    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರ ಎದುರು ಬುಧವಾರ ರಾತ್ರಿ ಶರಣಾದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಟಿ.ಎನ್‌. ಜಿಶಾ, ಕೆ.ವಸಂತ್, ಮಾರೆಪ್ಪ ಅರೋಲಿ ಅವರನ್ನು ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರ ನೇತ್ವತ್ವದಲ್ಲಿ ಗುರುವಾರ ನಗರದದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ಆರು ಮಂದಿಯನ್ನು ಜನವರಿ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ನಂತರ ಪೊಲೀಸರು ಆರು ಮಂದಿ ನಕ್ಸಲರನ್ನು ಬಿಗಿ ಭದ್ರತೆ ನಡುವೆ ಗುರುವಾರ ರಾತ್ರಿ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹಕ್ಕೆ ಬಿಟ್ಟು ಬಂದಿದ್ದಾರೆ. ಇದನ್ನೂ ಓದಿ: ಸ್ನೇಹಮಹಿ ಕೃಷ್ಣ ಹೆಸರಲ್ಲಿ ಹಲವರ ಮೇಲೆ ಅನಾಮಧೇಯರಿಂದ ದೂರು

    ಕೋರ್ಟ್‌ಗೆ ಹಾಜರು ಪಡಿಸುವ ಮೊದಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರು ಮಂದಿಯ ಆರೋಗ್ಯ ತಪಾಸಣೆ ನಡೆಸಲಾಯಿತು.  ಮುಖ್ಯಮಂತ್ರಿಯವರ ಗೃಹ ಕಚೇರಿಯಲ್ಲಿ ಶರಣಾದ ನಂತರ ನಕ್ಸಲರನ್ನು ಪೊಲೀಸರು ಬಂಧಿಸಿದ್ದರು. ನಾಲ್ವರು ಮಹಿಳೆಯರನ್ನು ಸಾಂತ್ವನ ಕೇಂದ್ರ ಹಾಗೂ ಇಬ್ಬರು ಪುರುಷರನ್ನು ಆಡುಗೋಡಿಯ ಎಫ್‌ಎಸ್‌ಎಲ್ ತಾಂತ್ರಿಕ ಕಚೇರಿಯಲ್ಲಿ ಬುಧವಾರ ರಾತ್ರಿ ಇರಿಸಿದ್ದರು.

    ಆರು ಮಂದಿ ನಕ್ಸಲರ ವಿರುದ್ಧವೂ ‘ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ’(ಯುಎಪಿಎ) ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

     

  • ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು

    ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು

    ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ (Manipur Violence) ಕಳೆದ 3 ತಿಂಗಳುಗಳಿಂದ ನಿರಂತರವಾಗಿ ನಡೆಯುತ್ತಲೇ ಇದ್ದು, ಗುರುವಾರ ಕಿಡಿಗೇಡಿಗಳು ಇಂಫಾಲದಲ್ಲಿ (Imphal) ಪೊಲೀಸ್ ಅಧಿಕಾರಿಯೊಬ್ಬರನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿರುವ ಘಟನೆ ನಡೆದಿದೆ.

    ಗುರುವಾರ ಪುರುಷರು ಹಾಗೂ ಮಹಿಳೆಯರನ್ನು ಒಳಗೊಂಡ ಗುಂಪು ಬಿಷ್ಣುಪುರ್ ಜಿಲ್ಲೆಯ ಮಣಿಪುರ ಸಶಸ್ತ್ರ ಪೊಲೀಸ್ ಎರಡನೇ ಬೆಟಾಲಿಯನ್‌ನ ಕೀರೆನ್‌ಫಾಬಿ ಪೊಲೀಸ್ ಔಟ್‌ಪೋಸ್ಟ್ ಹಾಗೂ ತಂಗಲವಾಯ್ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ದಾಳಿ ನಡೆಸಿ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಜನಸಮೂಹ ಹೀಂಗಾಂಗ್ ಹಾಗೂ ಸಿಂಗ್ಜಮೇಯಿ ಪೊಲೀಸ್ ಠಾಣೆಗಳಿಂದಲೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದೆ. ಆದರೆ ಭದ್ರತಾಪಡೆಗಳು ಅವರ ದಾಳಿಯನ್ನು ವಿಫಲಗೊಳಿಸಿದೆ. ಕೌಟ್ರುಕ್, ಹರಾಥೆಲ್ ಮತ್ತು ಸೆಂಜಮ್ ಚಿರಾಂಗ್ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಹಾಗೂ ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಒಬ್ಬ ಭದ್ರತಾ ಸಿಬ್ಬಂದಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    ಕಳೆದ 24 ಗಂಟೆಗಳಲ್ಲಿ ರಾಜ್ಯದ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ವಿವಿಧ ಸ್ಥಳಗಳಲ್ಲಿ ಜನರ ಸಮೂಹ ಅಶಿಸ್ತಿನಿಂದ ವರ್ತಿಸಿ ಗುಂಡು ಹಾರಿಸುವ ಹಾಗೂ ಗುಂಪುಗೂಡುವುದು ಸಂಭವಿಸುತ್ತಲೇ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಮಣಿಪುರದ ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಒಟ್ಟು 129 ಚೆಕ್‌ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಲ್ಲಂಘನೆಗೆ ಸಂಬಂಧಿಸಿದಂತೆ ಸುಮಾರು 1,047 ಜನರನ್ನು ಬಂಧಿಸಲಾಗಿದೆ. ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಪ್ರಾರಂಭವಾದ ಜನಾಂಗೀಯ ಘರ್ಷಣೆ ಕಳೆದ 3 ತಿಂಗಳಿನಿಂದ ನೂರಾರು ಜನರನ್ನು ಬಲಿ ತೆಗೆದುಕೊಂಡಿದೆ. ಇದನ್ನೂ ಓದಿ: ಟೈಟ್‌ ಸೆಕ್ಯುರಿಟಿಯೊಂದಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ಆರಂಭ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದೇಶಕ್ಕೆ ಭಾರತದ ಬ್ರಹ್ಮೋಸ್‌ – ಶಸ್ತ್ರಾಸ್ತ ರಫ್ತು ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?

    ವಿದೇಶಕ್ಕೆ ಭಾರತದ ಬ್ರಹ್ಮೋಸ್‌ – ಶಸ್ತ್ರಾಸ್ತ ರಫ್ತು ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?

    ಸ್ತ್ರಾಸ್ತ್ರಗಳನ್ನು ಆಮದು ಮಾಡುಕೊಳ್ಳುವ ಟಾಪ್‌ ರಾಷ್ಟ್ರಗಳಲ್ಲಿ ಭಾರತ (India) ಮೊದಲನೇಯ ಸ್ಥಾನದಲ್ಲಿದೆ. ಆದರೆ ಈಗ ಭಾರತ ಶಸ್ತ್ರಾಸ್ತ್ರಗಳನ್ನು ರಫ್ತು (Arms Export) ಮಾಡುವ ದೇಶವಾಗಿ ನಿಧಾನವಾಗಿ ಹೊರಹೊಮ್ಮುತ್ತಿದೆ. ಇದರ ಭಾಗವಾಗಿ ಈಗ ಭಾರತ ವಿಶ್ವದ 12 ದೇಶಗಳಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು (BrahMos Missile) ರಫ್ತು ಮಾಡಲು ಮಾತುಕತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿದ್ದು ಹೇಗೆ? ಬ್ರಹ್ಮೋಸ್‌ ಕ್ಷಿಪಣಿ ವಿಶೇಷತೆ ಏನು? ಮಿಸೈಲ್‌ ಮ್ಯಾನ್‌ ಅಬ್ದುಲ್‌ ಕಲಾಂ (APJ Abdul Kalam) ಪಾತ್ರ ಏನು? ಪಾಕಿಸ್ತಾನಕ್ಕೆ ಈ ಕ್ಷಿಪಣಿ ಹಾರಿದ್ದು ಹೇಗೆ? 10 ವರ್ಷದ ಹಿಂದೆ ಶಸ್ತ್ರಾಸ್ತ್ರ ರಫ್ತು ಎಷ್ಟಿತ್ತು? ಈಗ ಎಷ್ಟು ಏರಿಕೆಯಾಗಿದೆ? ಈ ಎಲ್ಲಾ ವಿಷಯಗಳ ಬಗ್ಗೆ ಕೆಲ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    ಸ್ವಾತಂತ್ರ್ಯ ಸಿಕ್ಕಿದ ಬಳಿಕ ಭಾರತ ಶಾಂತಿ ಮಂತ್ರವನ್ನು ಅನುಸರಿಸಿದರೂ ಪಾಕಿಸ್ತಾನ (Pakistan) ಮತ್ತು ಚೀನಾದ (China) ಮಧ್ಯೆ ಯುದ್ಧ ನಡೆಸಬೇಕಾಯಿತು. 1947, 1965, 1971 ರಲ್ಲಿ ಪಾಕಿಸ್ತಾನದ ಜೊತೆ 1962 ರಲ್ಲಿ ಚೀನಾದ ಜೊತೆ ಯುದ್ಧ ಮಾಡಬೇಕಾಯಿತು. ಪಾಕಿಸ್ತಾನ ಜೊತೆಗಿನ ಮೂರು ಯುದ್ಧದಲ್ಲಿ ಭಾರತ ಗೆದ್ದರೆ ಚೀನಾದ ವಿರುದ್ಧ ಭಾರತ ಸೋತಿತ್ತು. ಗಡಿಯಲ್ಲಿರುವ ಈ ದೇಶಗಳ ಕಿರಿಕಿರಿ ಜಾಸ್ತಿ ಆಗುತ್ತಿದ್ದಂತೆ ಭಾರತ ಸರ್ಕಾರ ರಕ್ಷಣೆಗೆ ಹೆಚ್ಚು ಒತ್ತು ನೀಡಲು ಆರಂಭಿಸಿತು. ಅಷ್ಟೇ ಅಲ್ಲದೇ ಸ್ವಂತ ಕ್ಷಿಪಣಿ ಅಭಿವೃದ್ಧಿ ಪಡಿಸಲು ಮುಂದಾಯಿತು.

     

    ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾದ ಡಿಆರ್‌ಡಿಒ ವಿಜ್ಞಾನಿಗಳು 1989ರಲ್ಲೇ ಅಗ್ನಿ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿ ಪರೀಕ್ಷಾರ್ಥ ಪ್ರಯೋಗ ನಡೆಸಿದ್ದರು. ಈ ಸಂದರ್ಭದಲ್ಲಿ ಧ್ವನಿಗಿಂತ ವೇಗವಾಗಿ ಸಂಚರಿಸುವ ಸೂಪರ್‌ ಸಾನಿಕ್‌ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಲು ಭಾರತ ಮುಂದಾಯಿತು. ಆದರೆ ಅದಕ್ಕೆ ಬೇಕಾದ ತಂತ್ರಜ್ಞಾನ ಭಾರತದ ಬಳಿ ಇರಲಿಲ್ಲ. ಅಣುಬಾಂಬ್ ಪರೀಕ್ಷೆ ಮಾಡಿದ ಬಳಿಕ ಅಮೆರಿಕ ಭಾರತದ ಮೇಲೆ ಹಲವು ದಿಗ್ಭಂಧನ ವಿಧಿಸಿತ್ತು. ಈ ಸಂದರ್ಭದಲ್ಲಿ ಭಾರತ ಮತ್ತು ರಷ್ಯಾದ ಸಂಬಂಧ ಚೆನ್ನಾಗಿತ್ತು. ಕೊನೆಗೆ ಭಾರತ ಮತ್ತು ರಷ್ಯಾದ ಜಂಟಿ ಹೂಡಿಕೆಯಲ್ಲಿ ಬ್ರಹ್ಮೋಸ್‌ ಕಂಪನಿ 1998ರಲ್ಲಿ ಸ್ಥಾಪನೆಯಾಯಿತು. ಕ್ಷಿಪಣಿ ಮನುಷ್ಯ ಅಬ್ಧುಲ್‌ ಕಲಾಂ ಮತ್ತು ರಷ್ಯಾದ ರಕ್ಷಣಾ ಸಚಿವ ಮಿಖಾಲಿವೋ ಫೆಬ್ರವರಿ 12 ರಂದು ಮಾಸ್ಕೋದಲ್ಲಿ ಸಹಿ ಹಾಕಿದರು. ಬ್ರಹ್ಮೋಸ್ ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ರಷ್ಯಾದ NPOM ನಡುವಿನ ಜಂಟಿ ಉದ್ಯಮವಾಗಿದೆ. ಬಹ್ಮಪುತ್ರ ಮತ್ತು ರಷ್ಯಾದ ಮಾಸ್ಕೋವಾ ನದಿಗಳನ್ನು ಪ್ರತಿನಿಧಿಸಲು ಈ ಕ್ಷಿಪಣಿಗೆ ಬ್ರಹ್ಮೋಸ್‌ ಎಂದು ಹೆಸರನ್ನು ಇಡಲಾಯಿತು. 250 ಮಿಲಿಯನ್‌ ಡಾಲರ್‌ ಹೂಡಿಕೆಯ ಕಂಪನಿಯಲ್ಲಿ ಭಾರತದ ಪಾಲು ಶೇ.50.5 ಇದ್ದರೆ ರಷ್ಯಾದ ಪಾಲು ಶೇ.49.5 ಇದೆ.  ಇದನ್ನೂ ಓದಿ: ನೀಲಿ ಬಣ್ಣದ ಜೀನ್ಸ್‌ ಬ್ಯಾನ್‌, ಆತ್ಮಹತ್ಯೆಗೈದ್ರೆ ಕುಟುಂಬಕ್ಕೆ ಶಿಕ್ಷೆ – ಉತ್ತರ ಕೊರಿಯಾದಲ್ಲಿದೆ ವಿಚಿತ್ರ ಕಾನೂನುಗಳು

    ಬ್ರಹ್ಮೋಸ್‌ ವಿಶೇಷತೆ ಏನು?
    ಚಲಿಸುವ ಪಥದ ಆಧಾರದ ಮೇಲೆ ಕ್ಷಿಪಣಿಗಳನ್ನು ಬ್ಯಾಲಿಸ್ಟಿಕ್‌ ಮತ್ತು ಕ್ರೂಸ್‌ ಕ್ಷಿಪಣಿಗಳಾಗಿ ವಿಂಗಡಿಸಲಾಗುತ್ತದೆ. ಬ್ಯಾಲಿಸ್ಟಿಕ್‌ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಭಾರತದ ಅಗ್ನಿ, ಪೃಥ್ವಿ ಬ್ಯಾಲಿಸ್ಟಿಕ್‌ ಕ್ಷಿಪಣಿಗಳಾಗಿವೆ.

    ಕ್ರೂಸ್‌ ಕ್ಷಿಪಣಿ ಶಬ್ಧದ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಹೋಗುತ್ತದೆ. ಆರಂಭದಲ್ಲಿ ಕ್ರೂಸ್‌ ಕ್ಷಿಪಣಿ ಕೆಳಹಂತದಲ್ಲಿ ಭೂಮಿಯ ಮೇಲ್ಮೆಗೆ ಸಮಾನಂತರವಾಗಿ ಶಬ್ಧದ ವೇಗಕ್ಕಿಂತ ಕಡಿಮೆ ವೇಗದಲ್ಲಿ ಚಲಿಸಿ ಗುರಿ ತಲುಪುತ್ತಿದ್ದಂತೆ ಇದರ ವೇಗ ಶಬ್ಧದ ವೇಗಕ್ಕಿಂತ ಹೆಚ್ಚಾಗಿ ಕೊನೆಗೆ ಗುರಿಯನ್ನು ತಲುಪುತ್ತದೆ. ಈ ತಂತ್ರಜ್ಞಾನದಿಂದ ಶತ್ರುಗಳ ರೇಡಾರ್‌ಗಳಿಗೆ ಸಹ ಈ ಕ್ಷಿಪಣಿಯ ಪಥವನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಭಾರತದ ಬ್ರಹ್ಮೋಸ್‌ ಕ್ರೂಸ್‌ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.

    ಬ್ರಹ್ಮೋಸ್‌ ಕ್ಷಿಪಣಿಗಳನ್ನು ಭೂಮಿಯಿಂದ, ಬಾನಿನಿಂದ, ಸಮುದ್ರದಿಂದ, ಜಲಾಂತರ್ಗಾಮಿ, ಚಲಿಸುವ ವಾಹನಗಳಿಂದಲೂ ಉಡಾಯಿಸಬಹುದು. ಭೂ ನೆಲೆ ಮತ್ತು ಯುದ್ಧ ನೌಕೆ ಆಧಾರಿತ ಬ್ರಹ್ಮೋಸ್ ಕ್ಷಿಪಣಿಗಳು ಗರಿಷ್ಠ 200 ಕೆಜಿ ಸಿಡಿತಲೆಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದರೆ ಯುದ್ಧ ವಿಮಾನದಿಂದ ಉಡಾವಣೆಯಾಗುವ ವೇರಿಯೆಂಟ್‌ 300 ಕೆಜಿ ಭಾರವನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ.

    ಚಲಿಸುವ ಗುರಿಯನ್ನು ನಿಖರವಾಗಿ ಹೊಡೆದು ಉರುಳಿಸವ ಸಾಮರ್ಥ್ಯ ಬ್ರಹ್ಮೋಸ್‌ಗೆ ಇದೆ. ಶತ್ರು ನೆಲೆಗಳಿಂದ ಬರುವ ಕ್ಷಿಪಣಿ ಹಾದಿಯನ್ನು ತಪ್ಪಿಸುವ ಎಲೆಕ್ಟ್ರಾನ್‌ ಸಂಕೇತಗಳ ವಿರುದ್ಧ ತನ್ನನ್ನು ರಕ್ಷಿಸಿಕೊಳ್ಳುವ ಸಿಗ್ನಲ್‌ ಜಾಮಿಂಗ್‌ ವ್ಯವಸ್ಥೆ ಬ್ರಹ್ಮೋಸ್‌ನಲ್ಲಿದೆ. ಮೊದಲ ಬಾರಿಗೆ ಬ್ರಹ್ಮೋಸ್‌ ಕ್ಷಿಪಣಿಯನ್ನು 2001ರ ಜೂನ್‌ 12 ರಲ್ಲಿ ಒಡಿಶಾದ ತೀರಪ್ರದೇದೇಶದದಲ್ಲಿ ಪರೀಕ್ಷೆ ಮಾಡಿದ್ದು ಈಗ ಭಾರತದ ಭೂ, ವಾಯು, ನೌಕಾ ಸೇನೆಗೆ ಸೇರ್ಪಡೆಯಾಗಿದೆ. ಇದನ್ನೂ ಓದಿ: ಡಾಲರ್‌ಗೆ ರೂಪಾಯಿ ಸೆಡ್ಡು – ಇಂಟರ್‌ನ್ಯಾಷನಲ್‌ ಕರೆನ್ಸಿ ಆಗುತ್ತಾ?

    ಯಾವೆಲ್ಲ ದೇಶಗಳು ಆಸಕ್ತಿ ತೋರಿಸಿವೆ?
    ಫಿಲಿಪೈನ್ಸ್‌ ಬ್ರಹ್ಮೋಸ್‌ ನೆವಿ ಮಿಸೈಲ್‌ ಖರೀದಿ ಸಂಬಂಧ 375 ಮಿಲಿಯನ್‌ ಡಾಲರ್‌ ಮೊತ್ತದ ಒಪ್ಪಂದಕ್ಕೆ 2022ರಲ್ಲಿ ಸಹಿ ಹಾಕಿದೆ. ಈ ವರ್ಷದ ಅಂತ್ಯಕ್ಕೆ ಕ್ಷಿಪಣಿ ರಫ್ತು ಆಗುವ ಸಾಧ್ಯತೆಯಿದೆ. ಈಗಾಗಲೇ 12 ದೇಶಗಳ ಜೊತೆ ಭಾರತ ಬ್ರಹ್ಮೋಸ್‌ ಕ್ಷಿಪಣಿ ರಫ್ತು ಸಂಬಂಧ ಮಾತುಕತೆ ನಡೆಸುತ್ತಿದೆ. ಈ ಜುಲೈ ತಿಂಗಳಿನಲ್ಲಿ ಅರ್ಜೆಂಟೀನಾ ರಕ್ಷಣಾ ಸಚಿವರ ಜೊತೆ ಭಾರತದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮಾತುಕತೆ ನಡೆಸಿದ್ದಾರೆ.

    ಬ್ರಹ್ಮೋಸ್‌ ಖರೀದಿಗೆ ಹಲವು ದೇಶಗಳು ಆಸಕ್ತಿ ತೋರಿಸಿದ್ದು ಯಾಕೆ ಎನ್ನುವುದಕ್ಕೆ ಕಾರಣವಿದೆ. ಬ್ರಹ್ಮೋಸ್‌ ಭಾರತದಲ್ಲಿ ಪ್ರಯೋಗ ಯಶಸ್ವಿಯಾಗಿದ್ದು ಈಗಾಗಲೇ ಮೂರು ಸೇನೆಗೆ ಸೇರ್ಪಡೆಯಾಗಿದೆ. ನಿಖರವಾಗಿ ಗುರಿಯನ್ನು ಹೊಡೆಯುವುದು ಅಲ್ಲದೇ ಬೆಲೆಯೂ ಕಡಿಮೆ. ಅಧಿಕೃತವಾಗಿ ಈ ಕ್ಷಿಪಣಿಯ ಬೆಲೆ ಎಷ್ಟು ಎಂಬುದನ್ನು ಸರ್ಕಾರ ತಿಳಿಸದೇ ಇದ್ದರೂ ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿ ಪ್ರಕಾರ ಒಂದು ಕ್ಷಿಪಣಿಯ ಬೆಲೆ 35 ಕೋಟಿ ರೂ. ಇದೆಯಂತೆ.. ಇದರ ಜೊತೆ ಭಾರತದ ವಿಜ್ಞಾನಿಗಳ ಬಗ್ಗೆ ನಂಬಿಕೆ ಈಗ ವಿಶ್ವಕ್ಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮೋಸ್‌ ಖರೀದಿಗೆ ಹಲವು ದೇಶಗಳು ಆಸಕ್ತಿ ತೋರಿಸಿವೆ.

    ಪಾಕಿಸ್ತಾನಕ್ಕೆ ಹಾರಿತ್ತು ಬ್ರಹ್ಮೋಸ್‌
    ಈ ಬ್ರಹ್ಮೋಸ್‌ ಕ್ಷಿಪಣಿ ಪಾಕಿಸ್ತಾನಕ್ಕೂ ಹಾರಿತ್ತು. 2022ರ ಮಾರ್ಚ್‌ 9ರ ಸಂಜೆಯ ವೇಳೆ ಹರ್ಯಾಣದ ಸಿರ್ಸಾದಿಂದ ಬ್ರಹ್ಮೋಸ್‌ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಯಾಗಿ ಕೇವಲ 3 ನಿಮಿಷ 44 ಸೆಕೆಂಡ್‌ನಲ್ಲಿ 124 ಕಿ.ಮೀ ಕ್ರಮಿಸಿ ಪಾಕಿಸ್ತಾನದ ಭೂ ಪ್ರದೇಶದ ಒಳಗಡೆ ಬಿದ್ದಿತ್ತು. ಈ ಘಟನೆಯಿಂದ ಯಾವುದೇ ಸಾವು, ನೋವು ಸಂಭವಿಸಲಿಲ್ಲ. ಈ ವಿಷಯವನ್ನು ಇಟ್ಟುಕೊಂಡು ಪಾಕಿಸ್ತಾನ ಭಾರೀ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಭಾರತ ತಾಂತ್ರಿಕ ಸಮಸ್ಯೆಯಿಂದ ಈ ಕ್ಷಿಪಣಿ ಉಡಾವಣೆಯಾಗಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸಿ ತನಿಖೆ ನಡೆಸುವುದಾಗಿ ಹೇಳಿತ್ತು. ತನಿಖೆಯ ಬಳಿಕ ವಾಯುಸೇನೆಯ ಇಮೇಜ್‌ಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ವಿಂಗ್‌ ಕಮಾಂಡರ್‌ ಅಭಿನವ್‌ ಶರ್ಮಾ ಅವರನ್ನು ಸೇವೆಯಿಂದಲೇ ವಜಾಗೊಳಿಸಿತ್ತು. ಈ ಕ್ಷಿಪಣಿ ಪ್ರಕರಣದಿಂದ ಭಾರತ ಸರ್ಕಾರಕ್ಕೆ 24 ಕೋಟಿ ರೂ. ನಷ್ಟವಾಗಿತ್ತು.

    ಶಸ್ತ್ರಾಸ್ತ ರಫ್ತು ಹೆಚ್ಚಳ
    ಮೇಕ್‌ ಇನ್‌ ಇಂಡಿಯಾಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವ ಕಾರಣ ಈಗ ಶಸ್ತ್ರಾಸ್ತ್ರಗಳನ್ನು ಭಾರತ ಹೆಚ್ಚು ರಫ್ತು ಮಾಡುತ್ತಿದೆ. ವರ್ಷದಿಂದ ವರ್ಷಕ್ಕೆ ರಫ್ತು ಪ್ರಮಾಣ ಹೆಚ್ಚಾಗುತ್ತಿದೆ. ರಕ್ಷಣಾ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ 2014-15 – 1,941 ಕೋಟಿ ರೂ., 2017-18 – 4,682 ಕೋಟಿ ರೂ., 2018-19- 10,746 ಕೋಟಿ ರೂ., 2021-22- 12,815 ಕೋಟಿ ರೂ., 2022-23 – 15,918 ಕೋಟಿ ರೂ. ಮೊತ್ತದ ರಕ್ಷಣಾ ಸಾಮಾಗ್ರಿಗಳನ್ನು ರಫ್ತು ಮಾಡಿದೆ.

    ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ರಫ್ತು ಮಾಡಲಾದ ಪ್ರಮುಖ ರಕ್ಷಣಾ ಸಾಧನಗಳಲ್ಲಿ ಸಿಮ್ಯುಲೇಟರ್, ಅಶ್ರುವಾಯು ಲಾಂಚರ್, ಟಾರ್ಪಿಡೊ-ಲೋಡಿಂಗ್ ಮೆಕ್ಯಾನಿಸಂ, ಅಲಾರ್ಮ್ ಮಾನಿಟರಿಂಗ್ ಮತ್ತು ಕಂಟ್ರೋಲ್, ನೈಟ್ ವಿಷನ್ ಮಾನೋಕ್ಯುಲರ್ ಮತ್ತು ಬೈನಾಕ್ಯುಲರ್, ಅಗ್ನಿಶಾಮಕ ನಿಯಂತ್ರಣ ವ್ಯವಸ್ಥೆಗಳು, ಶಸ್ತ್ರಸಜ್ಜಿತ ರಕ್ಷಣಾ ವಾಹನ, ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚುವ ರಾಡಾರ್, ಹೈ ಫ್ರಿಕ್ವೆನ್ಸಿ ರೇಡಿಯೊ ಇತ್ಯಾದಿಗಳನ್ನು ರಫ್ತು ಮಾಡಿವೆ. ಇಟಲಿ, ಶ್ರೀಲಂಕಾ, ರಷ್ಯಾ, ಮಾಲ್ಡೀವ್ಸ್, ಮಾರಿಷಸ್, ನೇಪಾಳ, ಫ್ರಾನ್ಸ್, ಶ್ರೀಲಂಕಾ, ಈಜಿಪ್ಟ್, ಇಸ್ರೇಲ್, ಭೂತಾನ್, ಯುಎಇ, ಸೌದಿ ಅರೇಬಿಯಾ, ಇಥಿಯೋಪಿಯಾ, ಫಿಲಿಪೈನ್ಸ್, ಪೋಲೆಂಡ್, ಸ್ಪೇನ್ ಮತ್ತು ಚಿಲಿ ದೇಶಗಳು ರಫ್ತು ಲಿಸ್ಟ್‌ನಲ್ಲಿವೆ.

    2025ರ ವೇಳೆಗೆ ಭಾರತ 35 ಸಾವಿರ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡಬೇಕೆಂಬ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. ಈ ಗುರಿಯನ್ನು ತಲುಪಬೇಕಾದರೆ ಸರ್ಕಾರ ಬಹಳ ಶ್ರಮಪಡಬೇಕಾದ ಅಗತ್ಯವಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಳೆದ 5 ವರ್ಷಗಳಲ್ಲಿ ರಷ್ಯಾದಿಂದ 13 ಶತಕೋಟಿ ಡಾಲರ್ ಮೌಲ್ಯದ ಶಸ್ತಾಸ್ತ್ರ ಪೂರೈಕೆ

    ಕಳೆದ 5 ವರ್ಷಗಳಲ್ಲಿ ರಷ್ಯಾದಿಂದ 13 ಶತಕೋಟಿ ಡಾಲರ್ ಮೌಲ್ಯದ ಶಸ್ತಾಸ್ತ್ರ ಪೂರೈಕೆ

    ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಭಾರತಕ್ಕೆ (India) ಸುಮಾರು 13 ಶತಕೋಟಿ ಡಾಲರ್ ಮೌಲ್ಯದ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿರುವುದಾಗಿ ರಷ್ಯಾದ (Russia) ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಅಷ್ಟೇ ಅಲ್ಲದೇ ಹತ್ತು ಶತಕೋಟಿ ಡಾಲರ್ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಮುಂದಾಗಿದೆ ಎಂದು ತಿಳಿಸಿದೆ.

    ಭಾರತ ಹೆಚ್ಚಿನ ಪ್ರಮಾಣದ ಶಸ್ತ್ರಾಸ್ರಗಳನ್ನು (Arms) ರಷ್ಯಾದಿಂದ ಖರೀದಿಸುವ ದೇಶವಾಗಿದೆ. ಖರೀದಿಯ ಆರ್ಡರ್‌ನಲ್ಲಿ ಶೇ.20 ರಷ್ಟು ಭಾರತದ ಪಾಲಿದೆ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ.

    ಈ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಡಿಸೆಂಬರ್‌ನಲ್ಲಿ ಶಾಂತಿ ಮಾತುಕತೆಗೆ ಕರೆಕೊಟ್ಟಿದ್ದು ನೇರವಾಗಿ ರಷ್ಯಾ, ಉಕ್ರೇನ್ ಮೇಲೆ ನಡೆಸಿದ ದಾಳಿಯನ್ನು ಖಂಡಿಸಲು ಭಾರತಕ್ಕೆ ಸಾಧ್ಯವಾಗಿಲ್ಲ ಎಂದು ಅದು ತನ್ನ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಭಾರತಕ್ಕೆ ರಷ್ಯಾದಿಂದ ಬಂತು ಎಸ್ 400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ

    ಭಾರತ ಸೇರಿದಂತೆ, ಚೀನಾ ಮತ್ತು ಆಗ್ನೇಯ ಏಷ್ಯಾದ ದೇಶಗಳು ರಷ್ಯಾದ ಶಸ್ತ್ರಾಸ್ತ್ರಗಳನ್ನು ಕೊಂಡುಕೊಳ್ಳಲು ಮನಸ್ಸು ಮಾಡುತ್ತಿವೆ ಎಂದು ಮಿಲಿಟರಿ ತಾಂತ್ರಿಕ ಸೇವೆಯ ಮುಖ್ಯಸ್ಥ ಡ್ಮಿಟ್ರೈ ಶುಘೈವ್ ತಿಳಿಸಿದ್ದಾಗಿ ವರದಿಯಲ್ಲಿ ಹೇಳಲಾಗಿದೆ.

    ಏಷ್ಯಾದ ದೇಶಗಳಿಂದ ಎಸ್-400 ಟ್ರಯಾಫ್ ಕ್ಷಿಪಣಿ, ಸುಕೋಯ್‌ 30 ಯುದ್ಧ ವಿಮಾನಗಳು, ಮಿಗ್-29 ಹೆಲಿಕಾಪ್ಟರ್ ಮತ್ತು ಡ್ರೋಣ್‌ ಖರೀದಿಗೆ ಬೇಡಿಕೆಯಿದೆ ಎಂದು ಶುಘೈವ್ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ನಡೆಯುತ್ತಿರುವ 14ನೇ ಅಂತರಾಷ್ಟ್ರೀಯ ಏರ್ ಶೋಗೆ 200 ಬಗೆಯ ವಿವಿಧ ಮಾದರಿಯ ಶಸ್ತ್ರಾಸ್ತ್ರಗಳು ಪ್ರದರ್ಶನಗೊಳ್ಳಲಿದೆ. ಏರ್ ಶೋನಲ್ಲಿ ಪ್ರದರ್ಶನಗೊಳ್ಳುವ ವಿಮಾನಗಳ ಬೇಡಿಕೆ ಆಧಾರದ ಮೇಲೆ ಸ್ಥಳೀಯವಾಗಿ ಉತ್ಪಾದಿಸಲು ಕಂಪನಿಗಳಿಗೆ ಭಾರತ ಒತ್ತಾಯಿಸಲಿದೆ ಎಂದು ವರದಿಯಲ್ಲಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಂಜಾಬ್‌ನಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಬಿಗಿ – ಹಿಂಸೆ ವೈಭವೀಕರಿಸುವ ಹಾಡುಗಳು ಬ್ಯಾನ್

    ಪಂಜಾಬ್‌ನಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಬಿಗಿ – ಹಿಂಸೆ ವೈಭವೀಕರಿಸುವ ಹಾಡುಗಳು ಬ್ಯಾನ್

    ಚಂಡೀಗಢ: ಪಂಜಾಬ್ (Punjab) ಸರ್ಕಾರ ರಾಜ್ಯದ ಕುಖ್ಯಾತ ಬಂದೂಕು ಸಂಸ್ಕೃತಿಗೆ (Gun Culture) ಕಡಿವಾಣ ಹಾಕಿದ್ದು, ಶಸ್ತ್ರಾಸ್ತ್ರ (Arms)ನಿಯಂತ್ರಣವನ್ನು ಬಿಗಿಗೊಳಿಸಿದೆ. ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಸಾರ್ವಜನಿಕ ಶಸ್ತ್ರಾಸ್ತ್ರಗಳ ಪ್ರದರ್ಶನವನ್ನು ನಿಷೇಧಿಸುವುದು ಸೇರಿದಂತೆ ಗನ್ ಮಾಲೀಕತ್ವ ಮತ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಶಸ್ತ್ರಾಸ್ತ್ರಗಳು ಅಥವಾ ಹಿಂಸೆಯನ್ನು ವೈಭವೀಕರಿಸುವ ಹಾಡುಗಳನ್ನು (Songs) ಕೂಡಾ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

    ಮೂಲಗಳ ಪ್ರಕಾರ ಇದುವರೆಗೆ ನೀಡಲಾದ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿಗಳನ್ನು ಮುಂದಿನ 3 ತಿಂಗಳೊಳಗೆ ಕೂಲಂಕುಷವಾಗಿ ಪರಿಶೀಲಿಸಲಾಗುವುದು. ಪರವಾನಗಿದಾರರಲ್ಲಿ ಶಸ್ತ್ರಾಸ್ತ್ರ ಹೊಂದಿರಲು ಜಿಲ್ಲಾಧಿಕಾರಿಗಳಿಗೆ ತೃಪ್ತಿದಾಯಕ ಕಾರಣಗಳು ಸಿಗಲಿಲ್ಲವೆಂದಾದರೆ ಹೊಸ ಪರವಾನಗಿಯನ್ನು ನೀಡಲಾಗುವುದಿಲ್ಲ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

    ಮಾನವನ ಜೀವನಕ್ಕೆ, ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಶಸ್ತ್ರಾಸ್ತ್ರಗಳನ್ನು ಅಜಾಗರೂಕರಾಗಿ ಬಳಕೆ ಮಾಡುವುದು ಅಥವಾ ಸಂಭ್ರಮಾಚರಣೆಯ ವೇಳೆ ಗುಂಡು ಹಾರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಇದನ್ನೂ ಓದಿ: ಅಯೋಧ್ಯೆ ಮಸೀದಿ ನಿರ್ಮಾಣ ಕಾರ್ಯ 2023ಕ್ಕೆ ಪೂರ್ಣ ಸಾಧ್ಯತೆ – ಟ್ರಸ್ಟ್‌

    ಭಗವಂತ್ ಮಾನ್ ಅವರು ಮೇ ತಿಂಗಳಿನಲ್ಲಿಯೇ ಹಾಡುಗಳ ಮೂಲಕ ಶಸ್ತ್ರಾಸ್ತ್ರಗಳನ್ನು ಅಥವಾ ಹಿಂಸೆಯನ್ನು ವೈಭವೀಕರಿಸುವ ಗಾಯಕರಿಗೆ ಎಚ್ಚರಿಕೆ ನೀಡಿದ್ದರು. ಅಂತಹ ಪ್ರವೃತ್ತಿಯನ್ನು ಬೆಂಬಲಿಸುವುದಕ್ಕೆ ಅವರು ಅಸಮ್ಮತಿ ಸೂಚಿಸಿದರು. ಇಂತಹ ಕೆಲಸಗಳಲ್ಲಿ ಭಾಗಿಯಾಗುವವರೊಂದಿಗೆ ಕಠಿಣವಾಗಿ ವ್ಯವಹರಿಸಲಾಗುವುದು ಎಂದು ಹೇಳಿದ್ದರು.

    ಇಂತಹ ಹಾಡುಗಳ ಮೂಲಕ ಸಮಾಜ ವಿರೋಧಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಬದಲು ಸಹೋದರತ್ವ, ಶಾಂತಿ ಮತ್ತು ಸೌಹಾರ್ದತೆಯ ಬಂಧಗಳನ್ನು ಬಲಪಡಿಸುವ ಮೂಲಕ ಪಂಜಾಬ್‌ನ ನೀತಿಗಳನ್ನು ಅನುಸರಿಸುವಂತೆ ಮಾನ್ ಗಾಯಕರಿಗೆ ಕರೆ ನೀಡಿದ್ದರು. ಇದನ್ನೂ ಓದಿ: ತನ್ನ ಹೆಂಡತಿಯನ್ನ ಭಾರೀ ಮೊತ್ತಕ್ಕೆ ಮಾರಾಟ ಮಾಡಿದ ಗಂಡ – ಮದುವೆನೂ ಮಾಡಿಸಿದ

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್ ಯುದ್ಧದಲ್ಲಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ವೀಡಿಯೋ ಶೇರ್ ಮಾಡಿದ ರಷ್ಯಾ

    ಉಕ್ರೇನ್ ಯುದ್ಧದಲ್ಲಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ವೀಡಿಯೋ ಶೇರ್ ಮಾಡಿದ ರಷ್ಯಾ

    ಮಾಸ್ಕ್: ಉಕ್ರೇನ್‍ನ ಮೇಲೆ ನಡೆಯುತ್ತಿರುವ ಆಕ್ರಮಣದ ಸಮಯದಲ್ಲಿ ವಶಪಡಿಸಿಕೊಂಡ ಯುಎಸ್ ಶಸ್ತ್ರಾಸ್ತ್ರಗಳು ಮತ್ತು ಯುದ್ಧದ ಇತರ ವಸ್ತುಗಳನ್ನು ಟ್ರೋಫಿಗಳಂತೆ ರಷ್ಯಾ ವೀಡಿಯೋದಲ್ಲಿ ಪ್ರದರ್ಶಿಸುತ್ತಿದೆ.

    ಉಕ್ರೇನಿಯನ್ ಪಡೆಗಳಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಫೋಟೋಗಳನ್ನು ರಷ್ಯಾದ ರಕ್ಷಣಾ ಸಚಿವಾಲಯವು ತನ್ನ ಅಧಿಕೃತ ಚಾನೆಲ್‍ವೊಂದರಲ್ಲಿ ಶೇರ್ ಮಾಡಿಕೊಂಡಿದೆ. 2 ನಿಮಿಷ 15 ಸೆಕೆಂಡುಗಳ ಕ್ಲಿಪ್‍ನಲ್ಲಿ, ರಷ್ಯಾದ ಸೈನಿಕನು ಯುಎಸ್, ಯುಕೆ, ಪೋಲೆಂಡ್ ಮತ್ತು ಸ್ವೀಡನ್‍ನಲ್ಲಿ ತಯಾರಿಸಿದ ಟ್ಯಾಂಕ್ ವಿರೋಧಿ ಗ್ರೆನೇಡ್ ಲಾಂಚರ್‌ಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಮಾತನಾಡುವುದನ್ನು ಕಾಣಬಹುದು. ವೀಡಿಯೋದಲ್ಲಿ, ಆಯುಧಗಳನ್ನು ಸೈನಿಕರು ಟ್ರೋಫಿಗಳ ರೀತಿ ತೋರಿಸುತ್ತಿದ್ದರು. ಇದನ್ನೂ ಓದಿ:  10ರ ಮಗಳು, ತಾಯಿ ಪ್ರತ್ಯೇಕ ಕೋಣೆಯಲ್ಲಿ ನೇಣಿಗೆ ಶರಣು – ಪ್ರೀತಿಸಿ ಮದ್ವೆಯಾಗಿದ್ದ ವೈದ್ಯ ದಂಪತಿ 

    ವಿಶೇಷ ಮಿಲಿಟರಿ ಕಾರ್ಯಾಚರಣೆಯ ಸಮಯದಲ್ಲಿ ಪಡೆದ ಸಣ್ಣ ಪ್ರಮಾಣದ ಶಸ್ತ್ರಾಸ್ತ್ರಗಳು, ಮಷಿನ್ ಗನ್ ಮತ್ತು ಉಕ್ರೇನಿಯನ್ ಸೈನಿಕರ ಆಯುಧ, ಸೋವಿಯತ್ ಮೂಲದ ಶಸ್ತ್ರಾಸ್ತ್ರಗಳನ್ನು ಸಹ ಒಳಗೊಂಡಿದೆ.

    ಶಸ್ತ್ರಾಸ್ತ್ರಗಳು ಮುಖ್ಯವಾಗಿ ವಿದೇಶಿ ಉತ್ಪಾದನೆಗಳಾಗಿವೆ. ಜಾವೆಲಿನ್, ಗ್ರೇಟ್ ಬ್ರಿಟನ್, ಯುಎ, ಪೋಲೆಂಡ್, ಸ್ವೀಡನ್‍ನಲ್ಲಿ ತಯಾರಿಸಿದ ಹ್ಯಾಂಡ್-ಹೆಲ್ಡ್ ಆಂಟಿ-ಟ್ಯಾಂಕ್ ಗ್ರೆನೇಡ್ ಲಾಂಚರ್‌ಗಳು, ಜೊತೆಗೆ ಹೆವಿ ಮೆಷಿನ್ ಗನ್‍ಗಳು ಮತ್ತು ಸೋವಿಯತ್ ನಿರ್ಮಿತ ಸಣ್ಣ ಶಸ್ತ್ರಾಸ್ತ್ರಗಳನ್ನು ಉಕ್ರೇನಿಯನ್ ರಾಷ್ಟ್ರೀಯವಾದಿಗಳು ಬಿಟ್ಟಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯದ ಪೋಸ್ಟ್ ತಿಳಿಸಿದೆ. ಇದನ್ನೂ ಓದಿ: ಗ್ರಾಮಕ್ಕೆ ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸಿ – ಡಿಸಿಗೆ ಮನವಿ ಮಾಡಿದ ಪುಟ್ಟ ಬಾಲಕಿ 

    Live Tv
    [brid partner=56869869 player=32851 video=960834 autoplay=true]

  • ಡ್ರೋನ್ ಮುಖಾಂತರ ಶಸ್ತ್ರಾಸ್ತ್ರಗಳನ್ನು ಪಡೆದ 4 ಖಲಿಸ್ತಾನಿ ಭಯೋತ್ಪಾದಕರ ಬಂಧನ

    ಡ್ರೋನ್ ಮುಖಾಂತರ ಶಸ್ತ್ರಾಸ್ತ್ರಗಳನ್ನು ಪಡೆದ 4 ಖಲಿಸ್ತಾನಿ ಭಯೋತ್ಪಾದಕರ ಬಂಧನ

    ಚಂಡೀಗಢ: ಪಾಕಿಸ್ತಾನದಿಂದ ಡ್ರೋನ್ ಮುಖಾಂತರ ಶಸ್ತ್ರಾಸ್ತ್ರಗಳನ್ನು ಪಡೆದ ನಾಲ್ವರು ಶಂಕಿತ ಖಲಿಸ್ತಾನಿ ಭಯೋತ್ಪಾದಕರನ್ನು ಹರಿಯಾಣದ ಕರ್ನಾಲ್‌ನಲ್ಲಿ ಬಂಧಿಸಲಾಗಿದೆ.

    ಆರೋಪಿಗಳನ್ನು ಪಂಜಾಬ್ ಮೂಲದ ಗುರ್‌ಪ್ರೀತ್, ಅಮನ್‌ದೀಪ್, ಪರ್ಮಿಂದರ್ ಹಾಗೂ ಭೂಪಿಂದರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಪಿಸ್ತೂಲ್ ಹಾಗೂ 21 ಕಾರ್ಟ್ರಿಜ್‌ಗಳನ್ನು(ಮದ್ದುಗುಂಡುಗಳ ಪ್ಯಾಕೇಜಿಂಗ್) ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಮಡಿಲಲ್ಲಿ ತಂಗಿಯನ್ನುಟ್ಟುಕೊಂಡು ತರಗತಿಗೆ ಹಾಜರಾಗಿದ್ದ ಬಾಲಕಿಗೆ ಬೋರ್ಡಿಂಗ್ ಸ್ಕೂಲ್‍ನಲ್ಲಿ ಫ್ರೀ ಸೀಟ್

    ಫಿರೋಜ್‌ಪುರ ಜಿಲ್ಲೆಯಲ್ಲಿ ಪಾಕಿಸ್ತಾನದ ಖಲಿಸ್ತಾನದ ಭಯೋತ್ಪಾದಕ ಹರ್ಜಿಂದರ್ ಸಿಂಗ್ ಜಿಂದಾ ಡ್ರೋನ್ ಬಳಸಿ ಶಸ್ತ್ರಾಸ್ತ್ರಗಳನ್ನು ರವಾನಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರ ಸುಧಾರಣೆಗೆ 3,000 ಕಿ.ಮೀ. ಪಾದಯಾತ್ರೆ: ಪ್ರಶಾಂತ್‌ ಕಿಶೋರ್‌ ಘೋಷಣೆ

    ಇದೀಗ ಕರ್ನಾಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

  • ಬೆಳಗಾವಿಯಲ್ಲಿಯೂ ಬೇರೆ ದೇಶದ ನೋಟುಗಳು, ಶಸ್ತ್ರಾಸ್ತ್ರಗಳು ಸಿಗುತ್ತವೆ: ಅಭಯ್ ಪಾಟೀಲ್ ಸ್ಫೋಟಕ ಹೇಳಿಕೆ

    ಬೆಳಗಾವಿಯಲ್ಲಿಯೂ ಬೇರೆ ದೇಶದ ನೋಟುಗಳು, ಶಸ್ತ್ರಾಸ್ತ್ರಗಳು ಸಿಗುತ್ತವೆ: ಅಭಯ್ ಪಾಟೀಲ್ ಸ್ಫೋಟಕ ಹೇಳಿಕೆ

    ಬೆಳಗಾವಿ: ಇಲ್ಲಿಯೂ ನಿಮಗೆ ಬೇರೆ ದೇಶದ ನೋಟುಗಳು ಹಾಗೂ ಶಸ್ತ್ರಾಸ್ತ್ರಗಳು ಸಿಗುತ್ತವೆ ಎಂದು ಶಾಸಕ ಅಭಯ್ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ಪತ್ತೆಯಾದ ಪಾಕಿಸ್ತಾನ ನೋಟು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪಾಟೀಲ್, ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿರುವ ಕೆಲವು ಪ್ರದೇಶಗಳನ್ನು ಪರಿಶೀಲಿಸಿದರೆ ಇಲ್ಲಿಯೂ ನಿಮಗೆ ಬೇರೆ ದೇಶದ ನೋಟುಗಳು ಸಿಗುತ್ತವೆ. ಶಸ್ತ್ರಾಸ್ತ್ರಗಳು ಕೂಡ ಸಿಗುತ್ತವೆ ಎಂದು ಗಂಭೀರ ಆರೋಪ ಮಾಡಿದರು.

    ಬೆಳಗಾವಿಯಲ್ಲಿರುವ ಪೊಲೀಸ್ ಡಿಪಾರ್ಟ್‍ಮೆಂಟ್ ಇನ್ನೂ ಅಷ್ಟೊಂದು ಕಾರ್ಯರೂಪಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಸರಿಯಾಗಿ ದಾರಿಗೆ ತರುವಂತಹ ಪೊಲೀಸ್ ಇಲಾಖೆ ಮಾಡಬೇಕಾಗುತ್ತದೆ. ಬೆಳಗಾವಿಯಲ್ಲಿಯೂ ಸ್ಫೋಟಕ ಪರಿಸ್ಥಿತಿ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದ ಸಂವಿಧಾನ ಪಾಲನೆ ಮಾಡದವರಿಗೆ ಭಾರತದಲ್ಲಿ ಇರಲು ಹಕ್ಕಿಲ್ಲ: ಅಭಯ್ ಪಾಟೀಲ್

    ಬೆಳಗಾವಿಯ ಕೆಲವು ಏರಿಯಾಗಳಲ್ಲಿ ಪೊಲೀಸರೂ ಹೋಗುವುದಿಲ್ಲ. ಅಂತಹ ವಾತಾವರಣ ಇದೆ. ಇವರೇ, ಅವರೇ ಹೋಗಬೇಕು ಎಂದೇನಿಲ್ಲ. ಎಲ್ಲೆಡೆ ಹುಡುಕಾಡಬೇಕು ಎಂದು ಪೊಲೀಸ್ ಇಲಾಖೆಗೆ ವಿನಂತಿ ಮಾಡುತ್ತೇನೆ. ಬೆಳಗಾವಿಯಲ್ಲಿ ಅದೆಷ್ಟೋ ತಲ್ವಾರ್‍ಗಳು ಅವೈದ್ಯಕೀಯವಾಗಿ ಬಂದಿವೆ. ಯಾವುದಾದರೂ ಗಲಾಟೆ ನಡೆದರೆ ಯಾರ ಕೈಯಲ್ಲಿ ತಲ್ವಾರ್ ಇರುತ್ತದೆ? ಅದು ಪೊಲೀಸರಿಗೆ ಗೊತ್ತಿಲ್ವಾ ಎಂದು ಅಭಯ್ ಪಾಟೀಲ್ ಆಕ್ರೋಶ ಹೊರಹಾಕಿದರು.

    ನನ್ನ ವೈಯಕ್ತಿಕ ಅಭಿಪ್ರಾಯ ಪ್ರಕಾರ ಶೇ.60 ರಿಂದ 70ರಷ್ಟು ಕಂಟ್ರೋಲ್ ಇದೆ. ನಾನು ಪ್ರಶ್ನೆ ಎತ್ತಿದ ಮೇಲೆ ಸಂಬಂಧ ಪಟ್ಟ ಅಧಿಕಾರಿಗಳು ಗಂಭೀರವಾಗಿ ತಗೆದುಕೊಂಡಿದ್ದರು. ಮಟ್ಕಾ ಆಡುವವರು, ಜೂಜುಕೋರರು, ಗಾಂಜಾ ಮಾರುವವರು ಬೆಳಗಾವಿ ಬಿಟ್ಟು ಹೋಗಿದ್ದಾರೆ. ಇನ್ನೂ ಕೆಲವರು ಉಳಿದಿದ್ದಾರೆ. ಅವರ ಮೇಲೆ ಕ್ರಮ ಆಗಬೇಕು ಎಂದರು. ಇದನ್ನೂ ಓದಿ: ದೇಶದ ವೈವಿಧ್ಯತೆಯನ್ನು ಗುರುತಿಸುವುದು ಸಂಘ ಪರಿವಾರದ ಅಜೆಂಡಾವಲ್ಲ : ಪಿಣರಾಯಿ