Tag: ಶಾಕುಂತಲಂ

  • ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕುಟುಕಿದ ನಿರ್ಮಾಪಕನಿಗೆ ಸಮಂತಾ ತಿರುಗೇಟು

    ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕುಟುಕಿದ ನಿರ್ಮಾಪಕನಿಗೆ ಸಮಂತಾ ತಿರುಗೇಟು

    ಪ್ರತಿಭಾನ್ವಿತ ನಟಿ ಸಮಂತಾ (Samantha) ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಬೆಳೆದಿದ್ದಾರೆ. ಚಿತ್ರರಂಗದಲ್ಲಿ ಗಾಢ್ ಫಾದರ್ ಇಲ್ಲದೇ ತನ್ನ ಪ್ರತಿಭೆಯಿಂದ ಅಪಾರ ಅಭಿಮಾನಿಗಳ ಮನಗೆದ್ದಿರುವ ನಟಿಗೆ ಕೆಲ ದಿನಗಳ ಹಿಂದೆ ನಿರ್ಮಾಪಕ ಚಿಟ್ಟಿಬಾಬು (Chittibabu)  ಕೆಟ್ಟದಾಗಿ ಕಾಮೆಂಟ್ ಮಾಡಿದ್ದರು. ಸಮಂತಾ ಮುಖ ಕಿತ್ತು ಹೋಗಿದೆ. ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕಾಮೆಂಟ್ ಮಾಡಿದ್ದರು. ಇದೀಗ ಸಮಂತಾ ತಮ್ಮದೇ ಸ್ಟೈಲಿನಲ್ಲಿ ನಿರ್ಮಾಪಕನಿಗೆ ತಿರುಗೇಟು ನೀಡಿದ್ದಾರೆ. ಅಷ್ಟಕ್ಕೂ ನಿರ್ಮಾಪಕ ಹೇಳಿದ್ದೇನು?

    ಸಮಂತಾಗೆ (Samantha) ಇದೀಗ ನಾಯಕಿಯಾಗಿ ನಟಿಸಲು ಆಫರ್ ಬರುತ್ತಿಲ್ಲ. ಅದಕ್ಕೆ ಅವರು ಲೇಡಿ ಓರಿಯೆಂಟೆಡ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆಕೆಯ ಮುಖ ಅಜ್ಜಿ ಮುಖದಂತೆ ಆಗಿದೆ. ಟಾಪ್ ಹೀರೋಯಿನ್ ಪಟ್ಟದಿಂದ ಸಮಂತಾ ಕೆಳಗೆ ಬಿದ್ದು ಬಹಳ ಸಮಯವಾಗಿದೆ. ಅದಕ್ಕೆ ‘ಪುಷ್ಪ’ (Pushpa) ಸಿನಿಮಾದಲ್ಲಿ ಊ ಅಂಟಾವ ಹಾಡಿನಲ್ಲಿ ಅರೆಬೆತ್ತಲೆಯಾಗಿ ಕುಣಿದಿದ್ದಾಳೆ. ಹಣ ಮಾಡಲು, ಚಿತ್ರರಂಗದಲ್ಲಿ ನಿಲ್ಲಲು ಹೀಗೆ ಮಾಡ್ತಿದ್ದಾಳೆ ಎಂದಿದ್ದಾರೆ ಚಿಟ್ಟಿಬಾಬು. ಆಕೆಯ ವೃತ್ತಿ ಬದುಕು ಮುಗಿದಿದೆ. ಒಂದು ಸಮಯದಲ್ಲಿ ಒಳ್ಳೆಯ ಸ್ಟಾರ್ ಪಟ್ಟ ಅನುಭವಿಸಿದ್ದಾಳೆ. ಈಗ ಪ್ರತಿ ಸಿನಿಮಾಕ್ಕೂ ಏನೋ ಒಂದು ಡ್ರಾಮಾ ಮಾಡಿಕೊಂಡು, ನಾನು ಸತ್ತುಹೋಗುತ್ತೇನೆ ಎಂದು ಅದು ಇದು ಹೇಳಿ ಡ್ರಾಮಾ ಮಾಡಿಕೊಂಡು ಸಿನಿಮಾ ಗೆಲ್ಲಿಸಿಕೊಳ್ಳಲು ನೋಡುತ್ತಿದ್ದಾಳೆ. ಆದರೆ ಅದೆಲ್ಲ ವರ್ಕೌಟ್ ಆಗುವುದಿಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ನೋಡುತ್ತಾರೆ ಇಲ್ಲವಾದರೆ ಇಲ್ಲ. ‘ಶಾಕುಂತಲಂʼ (Shakuntalam) ಸಿನಿಮಾದ ಕತೆಯೂ ಅಷ್ಟೆ. ಆದರೆ ನನಗಿರುವ ಪ್ರಶ್ನೆ ಎಂದರೆ, ಎಲ್ಲಾ ಚಾರ್ಮ್ ಕಳೆದುಕೊಂಡಿರುವ ನಟಿ ಶಾಕುಂತಲೆ ಅಂತಹ ಅಂದಗಾತಿಯ ಪಾತ್ರಕ್ಕೆ ಹೇಗೆ ಸೂಟ್ ಆಗುತ್ತಾಳೆ ಎಂದು ಚಿಟ್ಟಿಬಾಬು ಪ್ರಶ್ನೆ ಮಾಡಿದ್ದರು. ಇದನ್ನೂ ಓದಿ:ರಾಡ್ ನಿಂದ ಹೊಡೆದು ಪವನ್ ಕಲ್ಯಾಣ್ ಅಭಿಮಾನಿ ಕೊಂದ ಪ್ರಭಾಸ್ ಫ್ಯಾನ್

    ಆದರೀಗ ಸಮಂತಾ, ಆ ನಿರ್ಮಾಪಕನಿಗೆ ಸರಿಯಾಗಿ ತಿರುಗೇಟು ನೀಡಿದ್ದಾರೆ. ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಒಂದು ಸ್ಕ್ರೀನ್ ಶಾಟ್ ಹಂಚಿಕೊಳ್ಳುವ ಮೂಲಕ ಅವರು ವ್ಯಂಗ್ಯ ಮಾಡಿದ್ದಾರೆ. ನೇರವಾಗಿ ಚಿಟ್ಟಿಬಾಬು ಹೆಸರನ್ನು ಸಮಂತಾ ಪ್ರಸ್ತಾಪ ಮಾಡದಿದ್ದರೂ ಕೂಡ ನೆಟ್ಟಿಗರಿಗೆ ಅರ್ಥವಾಗಿದೆ. ಚಿಟ್ಟಿಬಾಬು ಅವರ ಕಿವಿಯಲ್ಲಿ ಸಿಕ್ಕಾಪಟ್ಟೆ ಕೂದಲು ಇದೆ. ಅದರ ರಹಸ್ಯವನ್ನು ಬಹಿರಂಗಪಡಿಸುವ ಮೂಲಕ ಸಮಂತಾ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಗೂಗಲ್ ಮಾಡಿದ್ದು ಅದರ ಸ್ಕ್ರಿನ್ ಶಾಟ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

    ಸಮಂತಾ ಶೇರ್ ಮಾಡಿರುವ ಪೋಸ್ಟ್‌ನಲ್ಲಿ ‘ಮನುಷ್ಯರ ಕಿವಿ ಮೇಲೆ ಕೂದಲು ಯಾಕೆ ಬೆಳೆಯುತ್ತದೆ’ ಎಂದು ಸಮಂತಾ ಗೂಗಲ್‌ನಲ್ಲಿ ಸರ್ಚ್ ಮಾಡಿದ್ದಾರೆ. ಅದಕ್ಕೆ ಗೂಗಲ್ ತೋರಿಸಿದ ಉತ್ತರವನ್ನು ಸ್ಕ್ರೀನ್ ಶಾಟ್ ತೆಗೆದುಕೊಂಡು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಲೈಂಗಿಕ ಆಸಕ್ತಿಗೆ ಹೆಚ್ಚಿಸುವ ಟೆಸ್ಟಾಸ್ಟಿರಾನ್ ಹಾರ್ಮೋನ್ ಜಾಸ್ತಿ ಇರುವ ಪುರುಷರ ಕಿವಿಯಲ್ಲಿ ಕೂದಲು ಬೆಳೆಯುತ್ತದೆ’ ಎಂಬ ಮಾಹಿತಿ ಈ ಸ್ಕ್ರಿನ್ ಶಾಟ್‌ನಲ್ಲಿದೆ. ಇದು ನಿರ್ಮಾಪಕ ಚಿಟ್ಟಿಬಾಬು ಕುರಿತಾಗಿಯೇ ಸಮಂತಾ ಹೇಳಿದ್ದು, ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಸಮಂತಾ ಅವರ ಈ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳು ಅವರ ಪರ ನಿಂತಿದ್ದಾರೆ.

  • ನಟಿ ಸಮಂತಾ ಭಗವದ್ಗೀತೆ ಪಾಠ ಮಾಡಿದ್ದು ಯಾರಿಗೆ?

    ನಟಿ ಸಮಂತಾ ಭಗವದ್ಗೀತೆ ಪಾಠ ಮಾಡಿದ್ದು ಯಾರಿಗೆ?

    ಶಾಕುಂತಲಂ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಮುಗ್ಗರಿಸುತ್ತಿದ್ದಂತೆ ಸಮಂತಾ ಮೇಲೆ ಹಲವರು ಮುಗಿಬಿದ್ದಿದ್ದಾರೆ. ನೆಗೆಟಿವ್ ಕಾಮೆಂಟ್ ಗಳನ್ನು ಮಾಡುವ ಮೂಲಕ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಸಮಂತಾ ನಟಿಸಿದರೆ ಆ ಸಿನಿಮಾಗಳು ಸೋಲುತ್ತವೆ ಎಂದು ಪ್ರಚಾರ ಮಾಡುತ್ತಿದ್ದಾರೆ. ಈ ಎಲ್ಲದಕ್ಕೂ ಉತ್ತರ ಎನ್ನುವಂತೆ ಸಮಂತಾ ಭಗವದ್ಗೀತೆಯ (BhagavadGita) ಸಾಲುಗಳನ್ನು ಹಾಕಿದ್ದಾರೆ.

    ಕಾರಿನಲ್ಲಿ ಕುಳಿತಿರುವ ಸುಂದರವಾದ ಫೋಟೋವೊಂದನ್ನು ಶೇರ್ ಮಾಡಿರುವ ಸಮಂತಾ, ‘ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ. ಮಾ ಕರ್ಮಫಲಹೇತುರ್ಭೂರ್ಮಾತೇ ಸಂಗೋಸ್ತ್ವ ಕರ್ಮಣಿ’ ಎಂದು ಬರೆಯುವ ಮೂಲಕ ಟೀಕೆ ಮಾಡುವವರಿಗೆ ಉತ್ತರ ನೀಡಿದ್ದಾರೆ. ಅದರಲ್ಲೂ ಈ ಪೋಸ್ಟ್ ಹಾಕಿದ್ದು, ತೆಲುಗಿನ ನಿರ್ಮಾಪಕ ಚಿಟ್ಟಿಬಾಬುಗೆ ಎಂದು ಹೇಳಲಾಗುತ್ತಿದೆ. ಶಾಕುಂತಲಂ ಸಿನಿಮಾ ನೋಡಿದ್ದ ಚಿಟ್ಟಿಬಾಬು, ‘ಸಮಂತಾ ಅಧ್ಯಾಯ ಮುಗೀತು’ ಎಂದು ಟೀಕಿಸಿದ್ದರು.  ಇದನ್ನೂ ಓದಿ: ಮ್ಯಾಕ್ಸಿ, ಡುಪ್ಲೆಸಿಸ್‌ ಸ್ಫೋಟಕ ಫಿಫ್ಟಿ – ಹೋರಾಡಿ ಕೊನೆಗೆ ಸೋತ ಆರ್‌ಸಿಬಿ

    ಸಮಂತಾ (Samantha) ನಟನೆಯ ‘ಶಾಕುಂತಲಂ’ (Shakunthalam) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಕಮಾಲ್ ಮಾಡಲಿಲ್ಲ. ಐವತ್ತು ಕೋಟಿ ವೆಚ್ಚದಲ್ಲಿ ತಯಾರಾದ ಈ  ಸಿನಿಮಾ  ನಿರ್ಮಾಪಕರಿಗೆ ಹಣ ತಂದುಕೊಡಲಿಲ್ಲ. ಹಾಗಾಗಿ ಮತ್ತೆ ಸಮಂತಾ ವಿರುದ್ಧ ಟ್ರೋಲ್ ಹಾವಳಿ ಹೆಚ್ಚಾಗಿದೆ. ಸಮಂತಾ ವಿರುದ್ಧ ನೆಗೆಟಿವ್ ಕಾಮೆಂಟ್ ಕೂಡ ಬರೆಯುತ್ತಿದ್ದಾರೆ. ಇದೆಲ್ಲದನ್ನೂ ತಲೆ ಕೆಡಿಸಿಕೊಳ್ಳದೇ ಸಮಂತಾ ಮುಂದಿನ ಪ್ರಾಜೆಕ್ಟ್ ಬಗ್ಗೆ ಗಮನ ಕೊಟ್ಟಿದ್ದಾರೆ.

    ಸಮಂತಾ ಕನಸಿನ ಪ್ರಾಜೆಕ್ಟ್ ಸಿಟಾಡೆಲ್ (Citadel) ವೆಬ್ ಸೀರಿಸ್ (Web Series) ಶೂಟಿಂಗ್ ಇನ್ನೇನು ಶುರುವಾಗಲಿದೆ. ಈ ವೆಬ್ ಸರಣಿಯ ಚಿತ್ರೀಕರಣಕ್ಕೆ ವಿದೇಶದಲ್ಲಿ ನಡೆಯಲಿದೆ. ಹಾಗಾಗಿ ಅವರು ವಿಮಾನ ಏರಿದ್ದಾರೆ. ತಾವು ವಿದೇಶ ಪ್ರಯಾಣವನ್ನು ಮಾಡುತ್ತಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಸಿಟಾಡೆಲ್ ರಾಜ್ ಮತ್ತು ಡಿಕೆ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವೆಬ್ ಸಿರೀಸ್. ವರುಣ್ ಧವನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸರಣಿಯಲ್ಲಿ ಸಮಂತಾ ವಿಶೇಷ ಪಾತ್ರವನ್ನು ಮಾಡಲಿದ್ದಾರೆ. ಈ ಪಾತ್ರಕ್ಕಾಗಿ ಅವರು ತಯಾರಿಯನ್ನೂ ಮಾಡಿಕೊಂಡಿದ್ದಾರೆ. ಭಾರೀ ಬಜೆಟ್ ನಲ್ಲಿ ಈ ವೆಬ್ ಸಿರೀಸ್ ಮೂಡಿ ಬರಲಿದೆ. ಈ ನಡುವೆ ಮತ್ತೊಂದು ಹೊಸ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದರು. ಅದರ ಮಾಹಿತಿಯನ್ನು ಸದ್ಯದಲ್ಲೇ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಸಿಟಾಡೆಲ್ ಶೂಟಿಂಗ್ ಗಾಗಿ ವಿಮಾನ ಏರಿದ ಸಮಂತಾ

    ಸಿಟಾಡೆಲ್ ಶೂಟಿಂಗ್ ಗಾಗಿ ವಿಮಾನ ಏರಿದ ಸಮಂತಾ

    ಮಂತಾ (Samantha) ನಟನೆಯ ‘ಶಾಕುಂತಲಂ’ (Shakunthalam) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಕಮಾಲ್ ಮಾಡಲಿಲ್ಲ. ಐವತ್ತು ಕೋಟಿ ವೆಚ್ಚದಲ್ಲಿ ತಯಾರಾದ ಈ  ಸಿನಿಮಾ  ನಿರ್ಮಾಪಕರಿಗೆ ಹಣ ತಂದುಕೊಡಲಿಲ್ಲ. ಹಾಗಾಗಿ ಮತ್ತೆ ಸಮಂತಾ ವಿರುದ್ಧ ಟ್ರೋಲ್ ಹಾವಳಿ ಹೆಚ್ಚಾಗಿದೆ. ಸಮಂತಾ ವಿರುದ್ಧ ನೆಗೆಟಿವ್ ಕಾಮೆಂಟ್ ಕೂಡ ಬರೆಯುತ್ತಿದ್ದಾರೆ. ಇದೆಲ್ಲದನ್ನೂ ತಲೆ ಕೆಡಿಸಿಕೊಳ್ಳದೇ ಸಮಂತಾ ಮುಂದಿನ ಪ್ರಾಜೆಕ್ಟ್ ಬಗ್ಗೆ ಗಮನ ಕೊಟ್ಟಿದ್ದಾರೆ.

    ಸಮಂತಾ ಕನಸಿನ ಪ್ರಾಜೆಕ್ಟ್ ಸಿಟಾಡೆಲ್ (Citadel) ವೆಬ್ ಸೀರಿಸ್ (Web Series) ಶೂಟಿಂಗ್ ಇನ್ನೇನು ಶುರುವಾಗಲಿದೆ. ಈ ವೆಬ್ ಸರಣಿಯ ಚಿತ್ರೀಕರಣಕ್ಕೆ ವಿದೇಶದಲ್ಲಿ ನಡೆಯಲಿದೆ. ಹಾಗಾಗಿ ಅವರು ವಿಮಾನ ಏರಿದ್ದಾರೆ. ತಾವು ವಿದೇಶ ಪ್ರಯಾಣವನ್ನು ಮಾಡುತ್ತಿರುವ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ತೆಲುಗು ಸಿನಿಮಾ ರಂಗದಲ್ಲೇ ಇನ್ನೂ ಹತ್ತು ವರ್ಷ ಪ್ರಶಾಂತ್ ನೀಲ್ ಲಾಕ್?

    ಸಿಟಾಡೆಲ್ ರಾಜ್ ಮತ್ತು ಡಿಕೆ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವೆಬ್ ಸಿರೀಸ್. ವರುಣ್ ಧವನ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸರಣಿಯಲ್ಲಿ ಸಮಂತಾ ವಿಶೇಷ ಪಾತ್ರವನ್ನು ಮಾಡಲಿದ್ದಾರೆ. ಈ ಪಾತ್ರಕ್ಕಾಗಿ ಅವರು ತಯಾರಿಯನ್ನೂ ಮಾಡಿಕೊಂಡಿದ್ದಾರೆ. ಭಾರೀ ಬಜೆಟ್ ನಲ್ಲಿ ಈ ವೆಬ್ ಸಿರೀಸ್ ಮೂಡಿ ಬರಲಿದೆ. ಈ ನಡುವೆ ಮತ್ತೊಂದು ಹೊಸ ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದರು. ಅದರ ಮಾಹಿತಿಯನ್ನು ಸದ್ಯದಲ್ಲೇ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಸಮಂತಾ ಫ್ಲಾಪ್‌ ಕ್ವೀನ್‌, ಆಕೆಗೆ ಮಾರ್ಕೆಟ್‌ ಇಲ್ಲ- ವಿಮರ್ಶಕನ ವಿವಾದಾತ್ಮಕ ಟ್ವೀಟ್‌

    ಸಮಂತಾ ಫ್ಲಾಪ್‌ ಕ್ವೀನ್‌, ಆಕೆಗೆ ಮಾರ್ಕೆಟ್‌ ಇಲ್ಲ- ವಿಮರ್ಶಕನ ವಿವಾದಾತ್ಮಕ ಟ್ವೀಟ್‌

    ಕ್ಷಿಣ ಭಾರತದ ಸ್ಟಾರ್ ನಟಿ ಸಮಂತಾ ‘ಶಾಕುಂತಲಂ’ (Shakuntalam) ಸಿನಿಮಾ ಏ.14ರಂದು ರಿಲೀಸ್ ಆಗಿದೆ. ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಮಂತಾ (Samantha) ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಕಲೆಕ್ಷನ್ ಏನು ಮಾಡಿಲ್ಲ. ಸದಾ ಒಂದಲ್ಲಾ ಒಂದು ವಿವಾದದ ಮೂಲಕ ಸದ್ದು ಮಾಡುವ ವಿಮರ್ಶಕ ಉಮೈರ್ ಸಂಧು ಇದೀಗ ಸಮಂತಾ ಸಿನಿಮಾ ಬಗ್ಗೆ ಕಿಡಿಕಾರಿದ್ದಾರೆ. ಸಮಂತಾ ‘ಫ್ಲಾಪ್ ಕ್ವೀನ್’ ಎಂದು ಟ್ವೀಟ್ ಮಾಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ. ಇದನ್ನೂ ಓದಿ:ಸೂರ್ಯನಿಗೆ ನಾಯಕಿಯಾದ ಬಾಲಿವುಡ್ ನಟಿ ದಿಶಾ ಪಟಾನಿ

    ‘ಪುಷ್ಪ’ (Pushpa) ಬ್ಯೂಟಿ ಸಮಂತಾ, ‘ಯಶೋದ’ (Yashoda) ಸೂಪರ್ ಸಕ್ಸಸ್ ನಂತರ ‘ಶಾಕುಂತಲಂ’ (Shakuntalam) ಚಿತ್ರದ ಮೂಲಕ ಶಾಕುಂತಲೆಯಾಗಿ ಬಂದರು. ಆದರೆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ವಿಷ್ಯದಲ್ಲಿ ಸೋತಿದೆ. ಸೆಲೆಬ್ರಿಟಿಗಳ ಪರ್ಸನಲ್ ಲೈಫ್ ಬಗ್ಗೆ ಕಾಮೆಂಟ್ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಈಗ ಸಮಂತಾ ವಿರುದ್ಧವು ಟ್ವೀಟ್ ಮಾಡಿದ್ದು, ಫ್ಲಾಪ್ ಕ್ವೀನ್ ಎಂದು ಬರೆದುಕೊಂಡಿದ್ದಾರೆ.

    ಸಮಂತಾ, ಕೆರಿಯರ್- ಕ್ರೇಜ್ ಮುಗಿದ ಅಧ್ಯಾಯ. ಇವರ ಸೋಲೋ ಹಾಗೂ ಅತೀ ದೊಡ್ಡ ರಿಲೀಸ್ ‘ಶಾಕುಂತಲ’ ಮೊದಲ ದಿನ ವಿಶ್ವದಾದ್ಯಂತ ದುರಂತ ಕಂಡಿದೆ. ಸಮಂತಾ ಒಬ್ಬರು ಫ್ಲಾಪ್ ಕ್ವೀನ್. ನಿರ್ಮಾಪಕರಿಗೆ ಸಿಕ್ಕಾಪಟ್ಟೆ ಹಣ ನಷ್ಟ ಆಗಿದೆ. ಮೊದಲ ದಿನದ ಕಲೆಕ್ಷನ್ ನಾಚಿಕೆಗೇಡು ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ಇದೇ ಟ್ವೀಟ್ ಈಗ ವೈರಲ್ ಆಗಿದೆ. ಇದರ ಹಿಂದೇನೆ ಇನ್ನೊಂದು ಟ್ವೀಟ್ ಮಾಡಿದ್ದಾರೆ.

    ಮೊದಲ ಟ್ವೀಟ್ ಸಿನಿಮಾ ರಿಲೀಸ್ ಆದ ದಿನ ಮಾಡಿದ್ದರು. ಏಪ್ರಿಲ್ 16ರಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ. ‘ಶಾಕುಂತಲಂʼ ಸಿನಿಮಾದ ಸೋಲಿನ ಬಳಿಕ ಸಮಂತಾ ಖಿನ್ನತೆಗೆ ಜಾರಿದ್ದಾರೆ. ನಿನ್ನೆಯಿಂದ ಸಮಂತಾ ತನ್ನ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ. ಅವರ ಬ್ರ‍್ಯಾಂಡ್ ಹಾಗೂ ಮಾರ್ಕೆಟ್ ಬೆಲೆ ಒಂದು ದಿನದಲ್ಲೇ ಕಡಿಮೆಯಾಗಿದೆ ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದಾರೆ. ಉಮೈರ್ ಸಂಧು ಟ್ವೀಟ್‌ಗೆ ಸಮಂತಾ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ನೆಚ್ಚಿನ ನಟಿ ಸಮಂತಾ ಬಗ್ಗೆ ಉಮೈರ್‌ ಸಂಧು (Umair Sandhu) ಟ್ವೀಟ್‌ ಮಾಡಿದ ರೀತಿಗೆ ಅಭಿಮಾನಿಗಳು ಕಿಡಿಕಾರಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಮರ್ಶಕನಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ.

  • ವಿಜಯ್ ದೇವರಕೊಂಡ ಟ್ವೀಟ್ ಗೆ ‘ಥ್ಯಾಂಕ್ಯೂ ಮೈ ಹೀರೋ’ ಎಂದ ಸಮಂತಾ

    ವಿಜಯ್ ದೇವರಕೊಂಡ ಟ್ವೀಟ್ ಗೆ ‘ಥ್ಯಾಂಕ್ಯೂ ಮೈ ಹೀರೋ’ ಎಂದ ಸಮಂತಾ

    ಖ್ಯಾತ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ನಟನೆಯ ‘ಶಾಕುಂತಲಂ’ (Shakunthalam) ಸಿನಿಮಾ ಇಂದು ಬಿಡುಗಡೆ ಆಗಿದೆ. ರಿಲೀಸ್ ಗೂ ಮುನ್ನಾ ದಿನ ನಟ ವಿಜಯ್ ದೇವರಕೊಂಡ ಸಿನಿಮಾಗೆ ಶುಭಾಶಯ ಕೋರಿ ಟ್ವೀಟ್ ವೊಂದನ್ನು ಮಾಡಿದ್ದಾರೆ. ಆ ಟ್ವೀಟ್ ನಲ್ಲಿ ಸಮಂತಾರನ್ನು ಹಾಡಿಹೊಗಳಿದ್ದಾರೆ. ವಿಜಯ್ ದೇವರಕೊಂಡ (Vijay Devarakonda) ಆಡಿದ ಮಾತುಗಳು ಸಮಂತಾ ಅಭಿಮಾನಿಗಳಲ್ಲಿ ಧನ್ಯತಾ ಭಾವ ಮೂಡಿಸಿವೆ.

    ಸಮಂತಾ ಅವರ ಸಿನಿಮಾ ಬಗೆಗಿನ ಪ್ರೀತಿಯನ್ನು ಮನಮುಟ್ಟುವಂತೆ ಬರೆದಿರುವ ದೇವರಕೊಂಡ, ‘ನಿನೊಬ್ಬ ನಿಜವಾದ ಹೋರಾಟಗಾರ್ತಿ’ ಎಂದು ಕರೆದಿರುವುದು ಸಮಂತಾ ಮೇಲಿನ ಅಭಿಮಾನವನ್ನು ಮತ್ತಷ್ಟು ಹೆಚ್ಚಿಸಿದೆ. ‘ಪ್ರತಿ ಶಾಟ್ ಇದ್ದಾಗಲೂ ಇದೇ ನನ್ನ ಕೊನೆಯ ಸಿನಿಮಾ ಎನ್ನುವಂತೆ ನಟಿಸುತ್ತೀರಿ’ ಎಂದು ಆಡಿದ ಮಾತು ಸಮಂತಾರ ವೃತ್ತಿಬದ್ಧತೆಗೆ ಸಾಕ್ಷಿಯಾಗಿದೆ. ಇದನ್ನೂ ಓದಿ:ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ಸುದ್ದಿಗೆ ಪೂಜಾ ಹೆಗ್ಡೆ ಸ್ಪಷ್ಟನೆ

    ‘ನೀವು ಯಾವಾಗಲೂ ಪ್ರೀತಿಯಿಂದ ತುಂಬಿರುತ್ತೀರಿ. ನೀವು ಅಂದುಕೊಂಡಿದ್ದನ್ನೇ ಮಾಡುತ್ತೀರಿ. ಸದಾ ಬೇರೆಯವರನ್ನು ಹುರಿದುಂಬಿಸುತ್ತೀರಿ. ಸದಾ ಉತ್ತಮವಾದದನ್ನೇ ಕೊಡುವ ನಿಮ್ಮ ಗುಣಕ್ಕೆ ಎಲ್ಲರೂ ಮನಸೋಲುತ್ತಾರೆ. ನಿಮ್ಮ ಶಾಕುಂತಲಂ ಸಿನಿಮಾ ಗೆಲ್ಲಲಿ’ ಎಂದು ಹಾರೈಸಿದ್ದಾರೆ ವಿಜಯ್ ದೇವರಕೊಂಡ.

    ಅಷ್ಟೊಂದು ಪ್ರೀತಿ ತುಂಬಿದ ಮಾತುಗಳಿಗೆ ಫಿದಾ ಆಗಿರುವ ಸಮಂತಾ, ಭಾವನಾತ್ಮಕವಾಗಿಯೇ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಿಮ್ಮ ಮಾತುಗಳಿಗೆ ಪ್ರತಿಕ್ರಿಯಿಸೋಕೆ ಪದಗಳೇ ಇಲ್ಲ. ಈ ವೇಳೆಯಲ್ಲಿ ಇದು ಅಗತ್ಯವಿತ್ತು. ಧನ್ಯವಾದಗಳು ಮೈ ಹೀರೋ’ ಎಂದು ಅವರು ರೀ ಟ್ವೀಟ್ ಮಾಡಿದ್ದಾರೆ. ಅಭಿಮಾನಿಗಳು ಕೂಡ ಸಮಂತಾಗೆ ಶುಭಾಶಯದ ಮಳೆಯನ್ನೇ ಸುರಿಸಿದ್ದಾರೆ.

  • ದುಬಾರಿ ಸೀರೆಯುಟ್ಟು `ಶಾಕುಂತಲಂ’ ಪ್ರಚಾರದಲ್ಲಿ ಭಾಗಿಯಾದ ಸಮಂತಾ

    ದುಬಾರಿ ಸೀರೆಯುಟ್ಟು `ಶಾಕುಂತಲಂ’ ಪ್ರಚಾರದಲ್ಲಿ ಭಾಗಿಯಾದ ಸಮಂತಾ

    ಸೌತ್ ನಟಿ ಸಮಂತಾ (Samantha) ಮಹಿಳಾ ಪ್ರಧಾನ ಪಾತ್ರಗಳನ್ನ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ. ಎಂತಹದ್ದೇ ಪಾತ್ರ ಕೊಟ್ಟರು ಅದ್ಭುತವಾಗಿ ನಟಿಸುವ ನಟಿ ಸ್ಯಾಮ್ ಸದ್ಯ `ಶಾಕುಂತಲಂ’ ಚಿತ್ರ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಪ್ರಮೋಷನ್‌ಗೆ ದುಬಾರಿ ಸೀರೆಯುಟ್ಟು ಮಿಂಚಿದ್ದಾರೆ.

    `ಯಶೋದ’ (Yashoda) ಸಿನಿಮಾದ ಸೂಪರ್ ಸಕ್ಸಸ್ ನಂತರ ಶಾಕುಂತಲೆಯಾಗಿ ಸಮಂತಾ ಕಾಣಿಸಿಕೊಂಡಿದ್ದಾರೆ. ಚಿತ್ರದ ಪೋಸ್ಟರ್ ಲುಕ್, ಟ್ರೈಲರ್‌ನಿಂದ ಅಪಾರ ನಿರೀಕ್ಷೆ ಹುಟ್ಟು ಹಾಕಿದೆ. ಏಪ್ರಿಲ್ 14ಕ್ಕೆ ತೆರೆಗೆ ಅಬ್ಬರಿಸುತ್ತಿರುವ `ಶಾಕುಂತಲಂ’ ಸಿನಿಮಾದ ಪ್ರಚಾರದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದಾರೆ.

     

    View this post on Instagram

     

    A post shared by Samantha (@samantharuthprabhuoffl)

    ಸಿನಿಮಾ ಪ್ರಚಾರಕ್ಕೆ ಸಮಂತಾ ಧರಿಸಿದ ದುಬಾರಿ ಬೆಲೆ ಸೀರೆ ಇದೀಗ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಸೀರೆ ಅಸಲಿ ಬೆಲೆ ಕೇಳಿ ಫ್ಯಾನ್ಸ್ ದಂಗಾಗಿದ್ದಾರೆ.‌ ಬಿಳಿ ಬಣ್ಣದ ಸೀರೆಯಲ್ಲಿ ಸಮಂತಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಈ ತೆಳುವಾದ ಸೀರೆಯ ಮೇಲೆ ಹೂವುಗಳ ಪ್ರಿಂಟ್ ಕಾಣಬಹುದಾಗಿದೆ. 92,000 ರೂಪಾಯಿ ದುಬಾರಿ ಮೊತ್ತದ ಸೀರೆಯನ್ನು ನಟಿ ಧರಿಸಿದ್ದಾರೆ.

  • ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ನಟಿ ಸಮಂತಾ

    ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ನಟಿ ಸಮಂತಾ

    ಕ್ಷಿಣ ಭಾರತದ ನಟಿ ಸಮಂತಾ (Actress Samantha) ಅನಾರೋಗ್ಯದಿಂದ ಕೊಂಚ ಚೇತರಿಸಿಕೊಂಡಿದ್ದಾರೆ. ಮತ್ತೆ ಸಿನಿಮಾಗಳಲ್ಲಿ ನಟಿಸುವತ್ತ ಬ್ಯುಸಿಯಾಗಿದ್ದಾರೆ. ಸದ್ಯ ಬಾಲಿವುಡ್‌ನಿಂದ ಬಂಪರ್ ಆಫರ್ ಬರುತ್ತಿರುವ ಬೆನ್ನಲ್ಲೇ ಸಮಂತಾ ಮುಂಬೈನಲ್ಲಿ 3 ಬೆಡ್‌ರೂಮ್ ಮನೆ ಖರೀದಿಸಿದ್ದಾರೆ. ಇದನ್ನೂ ಓದಿ: ಅಕ್ಷಯ್ ಕುಮಾರ್ ಜೊತೆಗಿನ ನಿಶ್ಚಿತಾರ್ಥ ಮುರಿದ ಬಗ್ಗೆ ಅಸಲಿ ಕಾರಣ ತಿಳಿಸಿದ `ಕೆಜಿಎಫ್ 2′ ನಟಿ

    ಸಮಂತಾ ಬಾಳಲ್ಲಿ ಇತ್ತೀಚಿಗೆ ಸಾಕಷ್ಟು ಸಂಕಷ್ಟಗಳನ್ನ ಎದುರಿಸುತ್ತಲೇ ಬಂದಿದ್ದಾರೆ. ಯಾವುದಕ್ಕೂ ಕುಗ್ಗದೇ ಸ್ಟ್ರಾಂಗ್ ಆಗಿ ನಟಿ ಕಮ್ ಬ್ಯಾಕ್ ಆಗಿದ್ದಾರೆ. ಸೌತ್ ಸಿನಿಮಾಗಳ ಜೊತೆ ಹಿಂದಿ ಸಿನಿಮಾಗಳಲ್ಲೂ ನಟಿಸಲು ಸಮಂತಾಗೆ ಬುಲಾವ್ ಬರುತ್ತಿದೆ.

    ಸದ್ಯ ಬಾಲಿವುಡ್‌ನ (Bollywood) ವರುಣ್‌ ಧವನ್‌ ಜೊತೆಗಿನ ʻಸಿಟಾಡೆಲ್ʼ (Citadel) ವೆಬ್ ಸರಣಿಯಲ್ಲಿ ಸಮಂತಾ ಕಾಣಿಸಿಕೊಳ್ತಿದ್ದಾರೆ. ಹಿಂದಿ ಸಿನಿಮಾಗಳಿಗೆ ನಟಿಸಲು ಬೇಡಿಕೆ ಹೆಚ್ಚಾಗಿರುವ ಕಾರಣ ವಾಸಿಸಲು ಸ್ವಂತ ಮನೆ ಖರೀದಿಸಿದ್ದಾರೆ. 3 ಬೆಡ್‌ರೂಮ್ ಇರುವ ಐಷಾರಾಮಿ ಮನೆಯನ್ನ ನಟಿ ಖರೀದಿಸಿದ್ದಾರೆ. 15 ಕೋಟಿ ರೂಪಾಯಿ ಬೆಲೆ ಬಾಳುವ ಮನೆಯನ್ನ ಕೊಂಡುಕೊಂಡಿದ್ದಾರೆ. ಈ ಬಗ್ಗೆ ಹಿಂದಿ ಮಾಧ್ಯಮಗಳಲ್ಲಿ ವರದಿ ಆಗಿದೆ.

    ಸಮಂತಾ ನಟನೆಯ `ಶಾಕುಂತಲಂ’ ಸಿನಿಮಾ ಫೆ.17ರಂದು ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಇನ್ನೂ 10 ದಿನ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ. ಈ ಬಗ್ಗೆ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಬ್ಬಬ್ಬಾ ಎನಿಸುವಷ್ಟಿದೆ ಸಮಂತಾ ಧರಿಸಿದ್ದ ಈ ಸೀರೆಯ ಬೆಲೆ?

    ಅಬ್ಬಬ್ಬಾ ಎನಿಸುವಷ್ಟಿದೆ ಸಮಂತಾ ಧರಿಸಿದ್ದ ಈ ಸೀರೆಯ ಬೆಲೆ?

    ಟಾಲಿವುಡ್ (Tollywood) ಬ್ಯೂಟಿ ಸಮಂತಾ (Samantha) ಸದ್ಯ ಶಾಕುಂತಲೆಯಾಗಿ ಮಿಂಚೋಕೆ ರೆಡಿಯಾಗಿದ್ದಾರೆ. ಇತ್ತೀಚೆಗೆ ʻಶಾಕುಂತಲಂʼ ಟ್ರೈಲರ್ ಲಾಂಚ್‌ಗೆ ಸಿಂಪಲ್ ಆಗಿ ನಟಿ ಸಮಂತಾ ಎಂಟ್ರಿ ಕೊಟ್ಟಿದ್ದರು. ಸ್ಯಾಮ್‌ ಧರಿಸಿದ್ದ ಸಿಂಪಲ್‌ ಸೀರೆ ಈಗ ನೆಟ್ಟಿಗರ ತಲೆ ಕೆಡಿಸಿದೆ. ಆ ಸೀರೆಯ ಅಸಲಿ ಬೆಲೆ ಕೇಳಿದ್ರೆ ನೀವು ಶಾಕ್ ಆಗ್ತೀರಾ.

    ಇತ್ತೀಚೆಗೆ ತೆರೆಕಂಡ `ಯಶೋದ’ (Yashoda Film) ಸಿನಿಮಾ ಭರ್ಜರಿ ಸಕ್ಸಸ್ ಕಂಡಿತ್ತು. ಅದರಲ್ಲೂ ಸಮಂತಾ ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಅನಾರೋಗ್ಯದ ಮಧ್ಯೆ ಶಾಕುಂತಲೆ ಗೆಲ್ಲಲು ಸಮಂತಾ ಹೊರಟಿದ್ದಾರೆ. ಮೊನ್ನೆಯಷ್ಟೇ ಚಿತ್ರದ ಟ್ರೈಲರ್ ಲಾಂಚ್‌ನಲ್ಲಿ ಸಿಂಪಲ್ ಎಂಟ್ರಿ ಕೊಟ್ಟು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಬೆನ್ನಲ್ಲೇ ಇವೆಂಟ್‌ನಲ್ಲಿ ನಟಿ ಧರಿಸಿದ್ದ ಸೀರೆಯ ಬಗ್ಗೆ ಅಚ್ಚರಿಯ ಮಾಹಿತಿಯೊಂದು ಸಿಕ್ಕಿದೆ.

     

    View this post on Instagram

     

    A post shared by Samantha (@samantharuthprabhuoffl)

    ತೋಳಿಲ್ಲದ ಸ್ಲೀವ್‌ಲೆಸ್ ಬ್ಲೋಸ್‌ಗೆ ಡಿಸೈನರ್ ವರ್ಕ್ ಇಲ್ಲದ ಸೀರೆ ಬಿಳಿ ಬಣ್ಣದ ಸೀರೆಯನ್ನ ಸಮಂತಾ ಉಟ್ಟಿದ್ದರು. ಕಣ್ಣಿಗೆ ತುಸು ದೊಡ್ಡದಾದ ಗ್ಲಾಸ್ ಧರಿಸಿ, ಸರಳವಾಗಿ ಮತ್ತು ಸುಂದರವಾಗಿ ಸಮಂತಾ ಕಾಣಿಸಿಕೊಂಡರು. ಇದನ್ನೂ ಓದಿ: ಶ್ರೀಜಾ 3ನೇ ಮದುವೆ ವದಂತಿ ನಡುವೆ ದುಬಾರಿ ಬಂಗಲೆಯನ್ನ ಮಗಳಿಗೆ ಉಡುಗೊರೆ ನೀಡಿದ ಮೆಗಾಸ್ಟಾರ್

     

    View this post on Instagram

     

    A post shared by Samantha (@samantharuthprabhuoffl)

    ಈ ಸರಳವಾದ ಸೀರೆಗೆ ನಟಿ ಸಮಂತಾ 50,000 ರೂ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಸೀರೆ ಡಿಸೈನ್ ಮಾಡಿರುವುದು ದೇವನಗರಿಯಲ್ಲಿ. ಸೀರೆಯ ಜೊತೆ ಕನ್ನಡಕ, ಪಾದರಕ್ಷೆ ಎಲ್ಲಾ ಸೇರಿದರೆ ಬರೋಬ್ಬರಿ 70,000 ರೂ ಮೌಲ್ಯವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಿವೋರ್ಸ್ ನಂತರ ಆಧ್ಯಾತ್ಮದತ್ತ ಹೊರಳಿದ್ರಾ ನಟಿ ಸಮಂತಾ

    ಡಿವೋರ್ಸ್ ನಂತರ ಆಧ್ಯಾತ್ಮದತ್ತ ಹೊರಳಿದ್ರಾ ನಟಿ ಸಮಂತಾ

    `ಪುಷ್ಪ’ (Pushpa) ಬ್ಯೂಟಿ ಸಮಂತಾ (Samantha) ಈಗ ಶಾಕುಂತಲೆ ಆಗಿ ಅಬ್ಬರಿಸಲು ರೆಡಿಯಾಗಿದ್ದಾರೆ. ಮಯೋಸೈಟಿಸ್ ಕಾಯಿಲೆ ಜೊತೆ ಹೊರಾಡುತ್ತಲೇ ಸಿನಿಮಾ ಪ್ರಚಾರ ಕಾರ್ಯದಲ್ಲಿ ನಟಿ ಸಮಂತಾ ಭಾಗಿಯಾಗುತ್ತಿದ್ದಾರೆ. ತಾವು ಹೋದಲೆಲ್ಲ ಕಡೆ ಸಮಂತಾ ಜಪಮಾಲೆ (Japa Mala) ಹಿಡಿದು ಎಂಟ್ರಿ ಕೊಡ್ತಿದ್ದಾರೆ. ನಟಿಯ ಈ ನಡೆ ನೋಡಿ ಡಿವೋರ್ಸ್ ನಂತರ ಆಧ್ಯಾತ್ಮದತ್ತ ವಾಲಿದ್ರಾ ಅಂತಾ ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

    ಇತ್ತೀಚೆಗಷ್ಟೇ ಸಮಂತಾ ನಟನೆಯ `ಶಾಕುಂತಲಂ’ (Shakuntalam) ಚಿತ್ರದ ಟ್ರೈಲರ್ ರಿಲೀಸ್ ಆಯ್ತು. ಟ್ರೈಲರ್ ಝಲಕ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಿರುವಾಗ ಈ ಚಿತ್ರದ ಇವೆಂಟ್‌ನಲ್ಲಿ ಸಮಂತಾ ಕೈಯಲ್ಲಿದ್ದ ಜಪಮಾಲೆ ಎಲ್ಲರ ಗಮನ ಸೆಳೆದಿತ್ತು. ಸಮಂತಾ ಮೈಕ್ ಹಿಡಿದು ವೇದಿಕೆಯಲ್ಲಿ ಮಾತನಾಡುವಾಗ ಕೂಡ ಮತ್ತೊಂದು ಕೈಯಲ್ಲಿ ಜಪಮಾಲೆ ಹಿಡಿದುಕೊಂಡಿದ್ದರು. ಹಾಗಾಗಿ ಸಹಜವಾಗಿಯೇ ಯಾಕೀ ಜಪಮಾಲೆ? ಸಮಂತಾ (Samantha) ಆಧ್ಯಾತ್ಮದತ್ತ ವಾಲುತ್ತಿದ್ದಾರಾ? ಡಿವೋರ್ಸ್ (Divorce) ಬಳಿಕ ಮಯೋಸೈಟಿಸ್ ಚಿಕಿತ್ಸೆಯ ಭಾಗವಾಗಿ ಈ ರೀತಿ ಮಾಲೆ ಹಿಡಿದುಕೊಂಡಿದ್ದಾರಾ? ಹೀಗೆ ಹಲವು ಪ್ರಶ್ನೆಗಳು ಅಭಿಮಾನಿಗಳನ್ನು ಕಾಡುತ್ತಿದೆ. ಇದನ್ನೂ ಓದಿ:ಎಷ್ಟೇ ಕಷ್ಟ ಬಂದರೂ ಸಿನಿಮಾ ಮೇಲಿನ ಪ್ರೀತಿ ಕಳೆದುಕೊಂಡಿಲ್ಲ: ಗಳಗಳನೇ ಅತ್ತ ಸಮಂತಾ

    ಸಾಕಷ್ಟು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಮಂತಾ ಉತ್ತಮ ಆರೋಗ್ಯ, ಶಾಂತಿಗಾಗಿ ಪ್ರತಿ ದಿನ 10,0008 ಶ್ಲೋಕಗಳ ಜಪ ಮಾಡುತ್ತಿದ್ದಾರಂತೆ. ಇನ್ನೂ ಸ್ಯಾಮ್ ಕೆಲವು ವರ್ಷಗಳ ಹಿಂದೆಯೇ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದರು. ಇತ್ತೀಚೆಗೆ ಮಂತ್ರಗಳನ್ನು ಪಠಣ ಮಾಡುತ್ತಿದ್ದಾರೆ. ಹಾಗಾಗಿ ಹೋದಲ್ಲಿ ಬಂದಲ್ಲಿ ಅದನ್ನು ಕೊಂಡೊಯ್ಯುತ್ತಿದ್ದಾರೆ. ಅಪರೂಪದ ಕಾಯಿಲೆಯ ಬಗ್ಗೆ ತಿಳಿಯುತ್ತಿದ್ದಂತೆ ಸಮಂತಾ ಕುಗ್ಗಿ ಹೋಗಿದ್ದರು. ಆದರೆ ಅಷ್ಟೇ ಬಲವಾದ ಆತ್ಮವಿಶ್ವಾಸದೊಂದಿಗೆ ತನ್ನ ಸಮಸ್ಯೆಯನ್ನು ಎದುರಿಸಲು ಹೋರಾಡುತ್ತಿದ್ದಾರೆ.

    ಇನ್ನೂ ಈ ಕಾರ್ಯಕ್ರಮದಲ್ಲಿ ನಟಿ ಮಾತನಾಡುವಾಗ, ಎಷ್ಟೇ ಕಷ್ಟ ಬಂದರೂ ಸಿನಿಮಾ ಮೇಲಿನ ಪ್ರೀತಿ ಕಳೆದುಕೊಂಡಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಈಗ ಸಮಂತಾ ನಡೆ ಮತ್ತು ನುಡಿಗೆ ಅಭಿಮಾನಿಗಳಿಗೆ ಹಲವು ಪ್ರಶ್ನೆಗಳು ಕಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎಷ್ಟೇ ಕಷ್ಟ ಬಂದರೂ ಸಿನಿಮಾ ಮೇಲಿನ ಪ್ರೀತಿ ಕಳೆದುಕೊಂಡಿಲ್ಲ: ಗಳಗಳನೇ ಅತ್ತ ಸಮಂತಾ

    ಎಷ್ಟೇ ಕಷ್ಟ ಬಂದರೂ ಸಿನಿಮಾ ಮೇಲಿನ ಪ್ರೀತಿ ಕಳೆದುಕೊಂಡಿಲ್ಲ: ಗಳಗಳನೇ ಅತ್ತ ಸಮಂತಾ

    ಟಾಲಿವುಡ್ (Tollywood) ಬ್ಯೂಟಿ ಸಮಂತಾ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೀಗ ಸೂಕ್ತ ಚಿಕಿತ್ಸೆಯ ಬಳಿಕ ಭಾರತಕ್ಕೆ ಸಮಂತಾ ವಾಪಸಾಗಿದ್ದಾರೆ. ಮತ್ತೆ ಸಿನಿಮಾ ಕಾರ್ಯಗಳಲ್ಲಿ ಆಕ್ಟೀವ್ ಆಗಿದ್ದಾರೆ. ಈ ವೇಳೆ `ಶಾಕುಂತಲಂ’ (Shaakuntalam) ಟ್ರೈಲರ್ ಲಾಂಚ್ ನಟಿ ಕಣ್ಣೀರಿಟ್ಟಿದ್ದಾರೆ. ಸಿನಿಮಾ ಮೇಲಿನ ಪ್ರೀತಿ ಇಲ್ಲಿಯವೆರೆಗೂ ತಂದು ನಿಲ್ಲಿಸಿದೆ ಎಂದು ಸಮಂತಾ (Samantha) ಭಾವುಕರಾಗಿದ್ದಾರೆ.

    ಸಮಂತಾ (Samantha) ನಟನೆಯ ʻಶಾಕುಂತಲಂʼ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಭರ್ಜರಿ ವಿವ್ಸ್ ಕೂಡ ಪಡೆದಿದೆ. ಟ್ರೈಲರ್‌ನಲ್ಲಿ ಸಮಂತಾ ನಟನೆ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ಈ ಟ್ರೈಲರ್  ಲಾಂಚ್ ಇವೆಂಟ್‌ನಲ್ಲಿ ಸಮಂತಾ ಕೂಡ ಭಾಗಿಯಾಗಿದ್ದು, ವೇದಿಕೆಯಲ್ಲಿ ಸಮಂತಾ ಗಳಗಳನೇ ಅತ್ತಿದ್ದಾರೆ.

    ಸಮಂತಾ ಮಾತನಾಡಿ, ಈ ಕ್ಷಣಕ್ಕಾಗಿ ನಾನು ಬಹಳ ದಿನಗಳಿಂದ ಕಾಯುತ್ತಿದ್ದ. ನಿರೀಕ್ಷೆಯಂತೆ ಚಿತ್ರ ಬಿಡುಗಡೆಯಾಗಲಿ ಎಂಬುದು ಎಲ್ಲರ ಆಶಯ. ಆದರೆ ಕೆಲವೊಮ್ಮೆ ಕೆಲವು ಮ್ಯಾಜಿಕ್ ನಡೆಯುತ್ತದೆ. `ಶಾಕುಂತಲಂ’ ವಿಷಯದಲ್ಲೂ ಅದೇ ಆಯಿತು. ಎಷ್ಟೇ ಕಷ್ಟಗಳು ಬಂದರೂ ಸಿನಿಮಾ ಮೇಲಿನ ಪ್ರೀತಿಯನ್ನು ಕಳೆದುಕೊಂಡಿಲ್ಲ. ಸಿನಿಮಾ ನನ್ನನ್ನು ಪ್ರೀತಿಸುತ್ತಿದೆ ಎಂದು ಸಮಂತಾ ಹೇಳಿದರು. ಇದನ್ನೂ ಓದಿ: ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ ಚಂದನ್ ಶೆಟ್ಟಿ -ನಿವೇದಿತಾ

    ಇನ್ನೂ ಗುಣಶೇಖರ್‌ ನಿರ್ದೇಶನದ ಈ ಸಿನಿಮಾ ಇದೇ ಫೆ.17ರಂದು ತೆರೆಗೆ ಅಪ್ಪಳಿಸುತ್ತಿದೆ. ಬಹುಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k