Tag: ಶಾಕುಂತಲಂ ಸಿನಿಮಾ

  • ‘ಶಾಕುಂತಲಂ’ ಸಿನಿಮಾ ಸೋಲೊಪ್ಪಿಕೊಂಡ ನಿರ್ಮಾಪಕ ದಿಲ್ ರಾಜು

    ‘ಶಾಕುಂತಲಂ’ ಸಿನಿಮಾ ಸೋಲೊಪ್ಪಿಕೊಂಡ ನಿರ್ಮಾಪಕ ದಿಲ್ ರಾಜು

    ಸೌತ್ ಬ್ಯೂಟಿ ಸಮಂತಾ (Samantha) ನಟನೆಯ ‘ಶಾಕುಂತಲ’ (Shakuntalam) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಲೆಕ್ಷನ್ ಮಾಡೋದ್ರಲ್ಲಿ ಸೋತಿತ್ತು. ಮೊದಲ ವಾರವೇ ಚಿತ್ರಮಂದಿರಲ್ಲಿ ಸಮಂತಾ ಸಿನಿಮಾ ಮಕಾಡೆ ಮಲಗಿತ್ತು. ಇದೀಗ ‘ಶಾಕುಂತಲಂ’ ಸಿನಿಮಾ ಮಾಡಿ ದೊಡ್ಡ ಹೊಡೆತ ತಿಂದೆ ಎಂದು ನಿರ್ಮಾಪಕ ದಿಲ್ ರಾಜು (Producer Dil Raju) ಪ್ರತಿಕ್ರಿಯೆ ನೀಡಿದ್ದಾರೆ.

    ‘ಪುಷ್ಪ’ (Pushpa)  ಚಿತ್ರದ ಸಾಂಗ್ ಸಮಂತಾ ಸೊಂಟ ಬಳುಕಿಸಿ ಗೆದ್ದು ಬೀಗಿದ್ದರು. ಬಳಿಕ ಯಶೋದ (Yashoda) ಚಿತ್ರದಲ್ಲಿ ಸ್ಯಾಮ್ ನಟನೆಯಿಂದ ಸಕ್ಸಸ್ ಕಂಡಿತ್ತು. ಸಹಜವಾಗಿ ‘ಶಾಕುಂತಲಂ’ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆಯಿತ್ತು. ಆದರೆ ಈ ಸಿನಿಮಾ ಎಲ್ಲಾ ಲೆಕ್ಕಾಚಾರ ತಲೆ ಕೆಳಗಾಗುವಂತೆ ಮಾಡಿತ್ತು. ಚಿತ್ರಮಂದಿರಲ್ಲಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ವಿಫಲವಾಗಿತ್ತು.‌ ಇದನ್ನೂ ಓದಿ:ಮೊದಲ ಬಾರಿಗೆ ಬೇಬಿ ಬಂಪ್ ಫೋಟೋ ರಿವೀಲ್ ಮಾಡಿದ ನಟಿ ಇಲಿಯಾನಾ

    ಇದೀಗ ಸಂದರ್ಶನವೊಂದರಲ್ಲಿ ನಿರ್ಮಾಪಕ ದಿಲ್ ರಾಜು ‘ಶಾಕುಂತಲಂ’ ಸಿನಿಮಾ ಸೋಲಿನ ಬಗ್ಗೆ ಮೌನ ಮುರಿದಿದ್ದಾರೆ. ನಾನು 50ಕ್ಕೂ ಅಧಿಕ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದೇನೆ. ನಾಲ್ಕರಿಂದ ಐದು ಸಿನಿಮಾಗಳು ಮಾತ್ರ ನನಗೆ ಆರ್ಥಿಕವಾಗಿ ಹೊರೆಯಾಗಿವೆ. ನನ್ನ 25 ವರ್ಷಗಳ ಕೆರಿಯರ್‌ನಲ್ಲಿ ‘ಶಾಕುಂತಲಂ’ ಸಿನಿಮಾ ದೊಡ್ಡ ಹೊಡೆತ ನೀಡಿತು ಎಂದಿದ್ದಾರೆ. ಯಶಸ್ಸು ಸಿಕ್ಕಿಲ್ಲ ಅಂದರೆ ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ಜನರಿಗೆ ಸಿನಿಮಾ ಇಷ್ಟ ಆದರೆ ಅದನ್ನು ಸೆಲೆಬ್ರೇಟ್ ಮಾಡುತ್ತಾರೆ. ಒಂದೊಮ್ಮೆ ಅವರು ಸೆಲಬ್ರೆಟ್ ಮಾಡಿಲ್ಲ ಎಂದರೆ ನನ್ನ ಜಡ್ಜ್‌ಮೆಂಟ್ ತಪ್ಪಾಗಿದೆ ಎಂದರ್ಥ ಎಂದು ದಿಲ್ ರಾಜು ಹೇಳಿದ್ದಾರೆ.

    ಇನ್ನೂ ‘ಶಾಕುಂತಲಂ’ ಸಿನಿಮಾದ ಸೋಲಿನ ನಂತರ ನಟಿ ಸಮಂತಾ ಬಾಲಿವುಡ್ ‘ಸಿಟಾಡೆಲ್ʼ ವೆಬ್ ಸೀರಿಸ್‌ನತ್ತ ಮುಖ ಮಾಡಿದ್ದಾರೆ. ವರುಣ್ ಧವನ್‌ಗೆ ನಾಯಕಿಯಾಗಿ ಸ್ಯಾಮ್ ನಟಿಸುತ್ತಿದ್ದಾರೆ.

  • ವರುಣ್ ಧವನ್ ಜೊತೆ ಇಂಗ್ಲೆಂಡ್‌ಗೆ ಹಾರಿದ ಸಮಂತಾ

    ವರುಣ್ ಧವನ್ ಜೊತೆ ಇಂಗ್ಲೆಂಡ್‌ಗೆ ಹಾರಿದ ಸಮಂತಾ

    ಮಂತಾ (Samantha) ನಟನೆಯ ‘ಶಾಕುಂತಲಂ’ (Shakuntalam) ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ವರುಣ್ ಧವನ್ ಜೊತೆ ಸಮಂತಾ ವಿದೇಶಕ್ಕೆ ಹಾರಿದ್ದಾರೆ. ತಮ್ಮ ಮುಂದಿನ ಪ್ರಾಜೆಕ್ಟ್ ಕಡೆ ಗಮನ ನೀಡ್ತಿದ್ದಾರೆ.

    ಮೊದಲ ಬಾರಿಗೆ ಪೌರಾಣಿಕ ಪಾತ್ರದಲ್ಲಿ ಕಾಣಿಸಿಕೊಂಡ ಸಮಂತಾ ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮಾಲಿವುಡ್ (Mollywood)  ದೇವ್ ಮೋಹನ್ ಜೊತೆ ಸ್ಯಾಮ್ ಶಾಕುಂತಲೆಯಾಗಿ ಮಿಂಚಿದ್ದಾರೆ. ಅಲ್ಲು ಅರ್ಜುನ್ ಪುತ್ರಿ ಅರ್ಹಾ ಕೂಡ ಈ ಸಿನಿಮಾದ ಭಾಗವಾಗಿದ್ದರು. ಆದರೆ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ‘ಶಾಕುಂತಲಂ’ ಸಿನಿಮಾ ರಿಲೀಸ್ ಬಳಿಕ ಸಮಂತಾ ಹಿಂದಿಯ ಸಿಟಾಡೆಲ್ ಸೀರಿಸ್ ಶೂಟಿಂಗ್‌ಗೆ ಹಾಜರಾಗಿದ್ದಾರೆ. ‘ಸಿಟಾಡೆಲ್’ ಸಿನಿಮಾ ತಂಡದ ಜೊತೆಗಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಸಮಂತಾ (Samantha) ಹಂಚಿಕೊಂಡಿದ್ದಾರೆ. ಬಾಲಿವುಡ್ ನಟ ವರುಣ್ ಧವನ್ (Varun Dhawan) ಜೊತೆ ನಟಿ ಸಮಂತಾ ‘ಸಿಟಾಡೆಲ್’  (Citadel) ಹಿಂದಿ ಸೀರಿಸ್ ಮಾಡ್ತಿದ್ದಾರೆ. ಅನಾರೋಗ್ಯದಿಂದ ಕೆಲ ಕಾಲ ಬ್ರೇಕ್ ತೆಗೆದುಕೊಂಡಿದ್ದ ಸ್ಯಾಮ್ ಇದೀಗ ಶೂಟಿಂಗ್‌ಗೆ ಹಾಜರಾಗಿದ್ದಾರೆ. ಇದನ್ನೂ ಓದಿ:ನಟನೆಗೆ ಸಂಜನಾ ಗಲ್ರಾನಿ ಕಂಬ್ಯಾಕ್ – ಮಾಲಿವುಡ್‌ನತ್ತ ನಟಿ

     

    View this post on Instagram

     

    A post shared by VarunDhawan (@varundvn)

    ‘ಸಿಟಾಡೆಲ್’ ಶೂಟಿಂಗ್‌ಗಾಗಿ ಇಡೀ ತಂಡ ಇಂಗ್ಲೆಡ್‌ನಲ್ಲಿ (England) ಬೀಡು ಬಿಟ್ಟಿದೆ. ಈಗಾಗಲೇ ಸಮಂತಾರ ಫಸ್ಟ್ ಲುಕ್ ರಿವೀಲ್ ಮಾಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದರು.

  • ಸಮಂತಾ ಮುಖ ಕಿತ್ತು ಹೋಗಿದೆ, ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕುಟುಕಿದ ನಿರ್ಮಾಪಕ

    ಸಮಂತಾ ಮುಖ ಕಿತ್ತು ಹೋಗಿದೆ, ದುಡ್ಡಿಗಾಗಿ ಅರೆಬೆತ್ತಲೆ ಕುಣಿಯುತ್ತಾಳೆ ಎಂದು ಕುಟುಕಿದ ನಿರ್ಮಾಪಕ

    ಸ್ಟಾರ್ ನಟಿ ಸಮಂತಾ ಅವರು ಚಿತ್ರರಂಗದಲ್ಲಿ ಯಾರ ಸಹಾಯವಿಲ್ಲದೇ ತನ್ನ ಶ್ರಮದಿಂದ ನೆಲೆಗಿಟ್ಟಿಸಿಕೊಂಡ ಪ್ರತಿಭಾನ್ವಿತ ನಟಿ. ಸದ್ಯ ‘ಶಾಕುಂತಲಂ’ ಚಿತ್ರದ ನಟನೆಗಾಗಿ ಸ್ಯಾಮ್ ಗಮನ ಸೆಳೆಯುತ್ತಿದ್ದಾರೆ. ಚಿತ್ರಕ್ಕೆ ಬರುತ್ತಿರುವ ಕಾಮೆಂಟ್ಸ್‌ನಿಂದಾಗಿ ಖುಷಿಯಲ್ಲಿರುವ ಸಮಂತಾ ಬಗ್ಗೆ ನಿರ್ಮಾಪಕನೊಬ್ಬ ಕಟುವಾಗಿ ಮಾತನಾಡಿದ್ದಾರೆ. ಸಮಂತಾಳದ್ದು ಅಜ್ಜಿ ಮುಖ, ಅವಳ ವೃತ್ತಿ ಜೀವನ ಮುಗಿದಿದೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

    ಅನಾರೋಗ್ಯದ ವಿರುದ್ಧ ನಟಿ ಹೋರಾಡುತ್ತಿದ್ದಾರೆ. ಸಿನಿಮಾಗಳಿಗೆ ಪ್ರಾಮುಖ್ಯತೆ ನೀಡ್ತಿದ್ದಾರೆ. ಈ ನಡುವೆ ತೆಲುಗಿನ ನಿರ್ಮಾಪಕ ಚಿಟ್ಟಿಬಾಬು ಸಮಂತಾ ವಿರುದ್ಧ ಮಾತನಾಡಿದ್ದಾರೆ. ‘ಶಾಕುಂತಲಂ’ ಸಿನಿಮಾ ಬಗ್ಗೆ ನಿರ್ಮಾಪಕ ಪ್ರತಿಕ್ರಿಯೆ ನೀಡಿದ್ದಾರೆ. ಶಾಕುಂತಲೆ ಅಪ್ರತಿಮ ಸೌಂದರ್ಯವತಿ, ಆದರೆ ಸಮಂತಾಗೆ ಆ ಪಾತ್ರ ಸೂಟ್‌ ಆಗಲ್ಲ. ಸಮಂತಾ ಮುಖ ಕಿತ್ತುಹೋಗಿದೆ. ಅದಕ್ಕಾಗಿ ಜನರನ್ನು ಸೆಳೆಯಲು ನಾನು ಸತ್ತುಹೋಗುತ್ತೇನೆ ಅದೂ ಇದು ಎಂದು ಹೈ ಡ್ರಾಮಾ ಮಾಡ್ತಿದ್ದಾರೆ. ಈ ಹಿಂದೆ ಯಾವುದೋ ಸಿನಿಮಾಕ್ಕೆ ಬೆಡ್ ಮೇಲೆ ಮಲಗಿ ಡಬ್ಬಿಂಗ್ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದಳು. ಇದೆಲ್ಲಾ ಅವರ ಪ್ರಚಾರ ಗಿಮಿಕ್. ಹಿಂದೆ ಹಲವು ಕಲಾವಿದರು ತೀವ್ರ ಜ್ವರದ ನಡುವೆಯೂ ಸಿನಿಮಾಗಳಲ್ಲಿ ನಟಿಸಿದ್ದಾರೆ ಎಂದು ಚಿಟ್ಟಿಬಾಬು ಕಿಡಿಕಾರಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!

    ಸಮಂತಾಗೆ ನಾಯಕಿಯಾಗಿ ನಟಿಸಲು ಆಫರ್ ಬರುತ್ತಿಲ್ಲ. ಅದಕ್ಕೆ ಅವರು ಲೇಡಿ ಓರಿಯೆಂಟೆಡ್ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಆಕೆಯ ಮುಖ ಅಜ್ಜಿ ಮುಖದಂತೆ ಆಗಿದೆ. ಟಾಪ್ ಹೀರೋಯಿನ್ ಪಟ್ಟದಿಂದ ಸಮಂತಾ ಕೆಳಗೆ ಬಿದ್ದು ಬಹಳ ಸಮಯವಾಗಿದೆ. ಅದಕ್ಕೆ ‘ಪುಷ್ಪ’ ಸಿನಿಮಾದಲ್ಲಿ ಊ ಅಂಟಾವ ಹಾಡಿನಲ್ಲಿ ಅರೆಬೆತ್ತಲೆಯಾಗಿ ಕುಣಿದಿದ್ದಾಳೆ. ಹಣ ಮಾಡಲು, ಚಿತ್ರರಂಗದಲ್ಲಿ ನಿಲ್ಲಲು ಹೀಗೆ ಮಾಡ್ತಿದ್ದಾಳೆ ಎಂದಿದ್ದಾರೆ ಚಿಟ್ಟಿಬಾಬು. ಆಕೆಯ ವೃತ್ತಿ ಬದುಕು ಮುಗಿದಿದೆ. ಒಂದು ಸಮಯದಲ್ಲಿ ಒಳ್ಳೆಯ ಸ್ಟಾರ್ ಪಟ್ಟ ಅನುಭವಿಸಿದ್ದಾಳೆ. ಈಗ ಪ್ರತಿ ಸಿನಿಮಾಕ್ಕೂ ಏನೋ ಒಂದು ಡ್ರಾಮಾ ಮಾಡಿಕೊಂಡು, ನಾನು ಸತ್ತುಹೋಗುತ್ತೇನೆ ಎಂದು ಅದು ಇದು ಹೇಳಿ ಡ್ರಾಮಾ ಮಾಡಿಕೊಂಡು ಸಿನಿಮಾ ಗೆಲ್ಲಿಸಿಕೊಳ್ಳಲು ನೋಡುತ್ತಿದ್ದಾಳೆ. ಆದರೆ ಅದೆಲ್ಲ ವರ್ಕೌಟ್ ಆಗುವುದಿಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ನೋಡುತ್ತಾರೆ ಇಲ್ಲವಾದರೆ ಇಲ್ಲ. ‘ಶಾಕುಂತಲಂ’ ಸಿನಿಮಾದ ಕತೆಯೂ ಅಷ್ಟೆ. ಆದರೆ ನನಗಿರುವ ಪ್ರಶ್ನೆ ಎಂದರೆ, ಎಲ್ಲಾ ಚಾರ್ಮ್ ಕಳೆದುಕೊಂಡಿರುವ ನಟಿ ಶಾಕುಂತಲಂ ಅಂತಹ ಅಂದಗಾತಿಯ ಪಾತ್ರಕ್ಕೆ ಹೇಗೆ ಸೂಟ್ ಆಗುತ್ತಾಳೆ ಎಂಬುದಷ್ಟೆ ಎಂದಿದ್ದಾರೆ ಚಿಟ್ಟಿಬಾಬು.

    ನಿರ್ಮಾಪಕ ಚಿಟ್ಟಿಬಾಬು ಮಾತುಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ವಿರೋಧ ವ್ಯಕ್ತವಾಗಿದೆ. ಹಿರಿಯ ನಿರ್ಮಾಪಕನಾಗಿ ನಟಿಯ ಬಗ್ಗೆ ಇಷ್ಟು ಕೀಳಾಗಿ ಮಾತನಾಡಿರುವುದು ಸರಿಯಲ್ಲ ಎಂದಿದ್ದಾರೆ. ಚಿಟ್ಟಿಬಾಬು ಇಷ್ಟೆಲ್ಲಾ ಮಾತನಾಡಿದ್ರು ಕೂಡ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ಸ್ಯಾಮ್ ಈಸ್ ಬ್ಯಾಕ್, ಹೊಸ ಫೋಟೋಶೂಟ್‌ನಲ್ಲಿ ಸಮಂತಾ ಮಿಂಚಿಂಗ್

    ಸ್ಯಾಮ್ ಈಸ್ ಬ್ಯಾಕ್, ಹೊಸ ಫೋಟೋಶೂಟ್‌ನಲ್ಲಿ ಸಮಂತಾ ಮಿಂಚಿಂಗ್

    ಸೌತ್ ಬ್ಯೂಟಿ ಕ್ವೀನ್ ಸಮಂತಾ (Samantha) ಇದೀಗ ಪಡ್ಡೆಹುಡುಗರ ನಿದ್ದೆಕಡಿಸುವ ಅವತಾರದಲ್ಲಿ ಹಾಟ್ ಫೋಟೋಶೂಟ್ ಮಾಡಿಸಿದ್ದಾರೆ. `ಶಾಕುಂತಲಂ’ (Shakuntalam) ಸಿನಿಮಾ ಪ್ರಚಾರ ಕಾರ್ಯದ ಮಧ್ಯೆ ಸ್ಯಾಮ್ ನಯಾ ಲುಕ್ ಈಗ ಸದ್ದು ಮಾಡ್ತಿದೆ.

    ಮೈಯೋಸಿಟಿಸ್ ಕಾಯಿಲೆ ಬಳಲುತ್ತಿರುವ ನಟಿ ಸಮಂತಾಗೆ ಬ್ಯೂಟಿ ಮಾಸಿದೆ ಎಂದೆಲ್ಲಾ ಇತ್ತೀಚಿಗೆ ಕಿಡಿಗೇಡಿಗಳು ಕಾಮೆಂಟ್ ಮಾಡಿದ್ದರು. ನೆಗೆಟಿವ್ ಮಾತನಾಡುವವರಿಗೆ ಸಮಂತಾ ತನ್ನ ಹೊಸ ಫೋಟೋಶೂಟ್‌ನಿಂದ (Photoshoot) ತಿರುಗೇಟು ನೀಡಿದ್ದಾರೆ. ಮೊದಲಿನಂತೆ ಸೂಪರ್ ಕೂಲ್ ಆಗಿ ಕ್ಯಾಮೆರಾ ಕಣ್ಣಿಗೆ ಸಮಂತಾ ಪೋಸ್ ನೀಡಿದ್ದಾರೆ.

    ಮಾಡ್ರನ್ ಡ್ರೆಸ್‌ನಲ್ಲಿ ಸಮಂತಾ ಚೆಂದದೊಂದು ಫೋಟೋಶೂಟ್ ಮಾಡಿಸಿದ್ದಾರೆ. ಮಸ್ತ್ ಆಗಿ ಕ್ಯಾಮೆರಾಗೆ ಕಣ್ಣಿಗೆ ಪೋಸ್ ನೀಡಿದ್ದಾರೆ. ಬ್ಲ್ಯಾಕ್ ಆ್ಯಂಡ್ ವೈಟ್ ಶೇಡ್‌ನಲ್ಲಿರುವ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by Samantha (@samantharuthprabhuoffl)

    ಇನ್ನೂ ಸಮಂತಾ (Samantha) `ಯಶೋದ’ (Yashoda) ಸಕ್ಸಸ್ ನಂತರ `ಶಾಕುಂತಲಂ’ ಸಿನಿಮಾ ಮೂಲಕ ಬರುತ್ತಿದ್ದಾರೆ. ಏಪ್ರಿಲ್ 14ಕ್ಕೆ ಸಿನಿಮಾ ತೆರೆಗೆ ಅಪ್ಪಳಿಸುತ್ತಿದೆ.

  • ಪೆದ್ದಮ್ಮ ತಲ್ಲಿ ದೇವಿಗೆ ಸೀರೆ, ಗಾಜಿನ ಬಳೆ ಅರ್ಪಣೆ ಮಾಡಿದ ಸಮಂತಾ

    ಪೆದ್ದಮ್ಮ ತಲ್ಲಿ ದೇವಿಗೆ ಸೀರೆ, ಗಾಜಿನ ಬಳೆ ಅರ್ಪಣೆ ಮಾಡಿದ ಸಮಂತಾ

    ಮಂತಾ (Samantha) ನಟನೆಯ `ಶಾಕುಂತಲಂ’ (Shakuntalam) ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಚಿತ್ರದ ಪ್ರಚಾರ ಕಾರ್ಯ ಶುರುವಾಗುವ ಮುನ್ನವ ಸ್ಯಾಮ್ ದೇವಿ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ವೀಡಿಯೋವೊಂದನ್ನ  ಸಾಮಾಜಿಕ ಜಾಲತಾಣದಲ್ಲಿ ನಟಿ ಶೇರ್‌ ಮಾಡಿದ್ದಾರೆ.

    ಸಮಂತಾ ಮೈಯೋಸಿಟೀಸ್ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ಸೂಕ್ತ ಚಿಕಿತ್ಸೆ ಕೂಡ ಪಡೆದುಕೊಳ್ತಿದ್ದಾರೆ. ಅನಾರೋಗ್ಯದ ಸಮಸ್ಯೆ ಮತ್ತು ವೈಯಕ್ತಿಕ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸದಾ ಪೂಜೆ, ಧ್ಯಾನ, ದೇವರ ಸನ್ನಿಧಿ ಎಂದು ದೇವರ ಮೊರೆ ಹೋಗುತ್ತಿದ್ದಾರೆ. ಇದನ್ನೂ ಓದಿ: ಹೊಸ ಫೋಟೋಶೂಟ್‌ ಹಂಚಿಕೊಂಡ ದೀಪಿಕಾ ದಾಸ್‌

    `ಯಶೋದ’ (Yashoda) ಚಿತ್ರದ ಸೂಪರ್ ಸಕ್ಸಸ್ ನಂತರ ನಟಿ ಸಮಂತಾ `ಶಾಕುಂತಲಂ’ ಚಿತ್ರದ ಮೂಲಕ ಬರುತ್ತಿದ್ದಾರೆ. ಈ ಸಿನಿಮಾ ಏಪ್ರಿಲ್ 14ಕ್ಕೆ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಈ ಬೆನ್ನಲ್ಲೇ ಚಿತ್ರತಂಡದ ಜೊತೆ ಹೈದರಾಬಾದ್‌ನ ಪ್ರಸಿದ್ಧ ದೇವಸ್ಥಾನ ಪೆದ್ದಮ್ಮ ತಲ್ಲಿ ದೇವಿಗೆ ಸೀರೆ ಜೊತೆ ಗಾಜಿನ ಬಳೆಯನ್ನ ಅರ್ಪಣೆ ಮಾಡಿ ಆಶೀರ್ವಾದ ಪಡೆದು ಬಂದಿದ್ದಾರೆ.

     

    View this post on Instagram

     

    A post shared by Samantha (@samantharuthprabhuoffl)

    ನಟಿ ಸಮಂತಾ ಬಿಳಿ ಬಣ್ಣದ ಚೂಡಿದಾರ್ ಧರಿಸಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸಹ ನಟ ದೇವ್ ಮೋಹನ್ ಕೂಡ ಬಿಳಿ ಬಣ್ಣದ ಬಟ್ಟೆ ಧರಿಸಿದ್ದಾರೆ.