Tag: ಶಾನ್ವಿ ಶ್ರೀವಾಸ್ತವ

  • ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆ ಕದ್ದ ಶಾನ್ವಿ

    ಹಾಟ್ ಆಗಿ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆ ಕದ್ದ ಶಾನ್ವಿ

    ನ್ನಡದ ‘ಮಾಸ್ಟರ್‌ಪೀಸ್’ ನಟಿ ಶಾನ್ವಿ ಶ್ರೀವಾಸ್ತವ (Shanvi Srivastava) ಬಹುಭಾಷಾ ನಟಿಯಾಗಿ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮಾಲ್ಡೀವ್ಸ್‌ ತೆಗೆದ ಹಾಟ್ ಫೋಟೋವೊಂದನ್ನು ನಟಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಹೊಸ ಸಿನಿಮಾ ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಮ್ಸ್- ಪೋಸ್ಟರ್ ರಿವೀಲ್

    ಸಿನಿಮಾಗೆ ಬ್ರೇಕ್ ಕೊಟ್ಟು ಮಾಲ್ಡೀವ್ಸ್‌ಗೆ (Maldives) ಶಾನ್ವಿ ತೆರಳಿದ್ದಾರೆ. ಕಡಲ ತೀರದಲ್ಲಿ ಹಾಟ್ ಆಗಿ ಪೋಸ್ಟ್ ನೀಡಿದ್ದಾರೆ. ವಿವಿಧ ಭಂಗಿಯಲ್ಲಿ ನಿಂತಿರುವ ಸುಂದರ ಫೋಟೋವನ್ನು ನಟಿ ಹಂಚಿಕೊಂಡಿದ್ದಾರೆ. ನಟಿಯ ಬೋಲ್ಡ್ ಅವತಾರಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ಇನ್ನೂ ‘ಚಂದ್ರಲೇಖ’ ಸಿನಿಮಾ ಮೂಲಕ ಶಾನ್ವಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಚಿರಂಜೀವಿ ಸರ್ಜಾಗೆ ನಾಯಕಿಯಾಗಿ ನಟಿಸಿದರು. ಈ ಚಿತ್ರವನ್ನು ಓಂ ಪ್ರಕಾಶ್ ರಾವ್ ನಿರ್ದೇಶನ ಮಾಡಿದರು.

    ಆ ನಂತರ ಯಶ್ ಜೊತೆ ‘ಮಾಸ್ಟರ್‌ಪೀಸ್’ ಸಿನಿಮಾದಲ್ಲಿ ಶಾನ್ವಿ ನಟಿಸಿದರು. ಭಲೇ ಜೋಡಿ, ಸುಂದರಾಂಗ ಜಾಣ, ಮಫ್ತಿ, ಗೀತಾ, ತಾರಕ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದ ಜೊತೆ ತೆಲುಗು, ತಮಿಳು, ಮಲಯಾಳಂನಲ್ಲೂ ಶಾನ್ವಿ ಗುರುತಿಸಿಕೊಂಡಿದ್ದಾರೆ.

    ಪ್ರಸ್ತುತ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಸಿನಿಮಾದಲ್ಲಿ ನಿರೂಪ್ ಭಂಡಾರಿ, ಪೃಥ್ವಿ ಅಂಬರ್ ಜೊತೆ ಶಾನ್ವಿ ನಟಿಸಿದ್ದಾರೆ. ತ್ರಿಶೂಲಂ ಎಂಬ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ.

  • ‌’ಅಮೆರಿಕಾ ಅಮೆರಿಕಾ’ 2ಗಾಗಿ ಯುಸ್‌ಗೆ ಹಾರಿದ ಶಾನ್ವಿ & ಟೀಮ್

    ‌’ಅಮೆರಿಕಾ ಅಮೆರಿಕಾ’ 2ಗಾಗಿ ಯುಸ್‌ಗೆ ಹಾರಿದ ಶಾನ್ವಿ & ಟೀಮ್

    ‘ಅಮೆರಿಕಾ ಅಮೆರಿಕಾ’ ಖ್ಯಾತಿಯ ನಾಗತಿಹಳ್ಳಿ ಚಂದ್ರಶೇಖರ್ (Nagathihalli Chandrashekar) ಹೊಸ ಸಿನಿಮಾದ ಶೂಟಿಂಗ್‌ಗಾಗಿ ಟೀಮ್ ಜೊತೆ ಯುಸ್‌ಗೆ (US) ಹಾರಿದ್ದಾರೆ. ಟ್ರಯಾಂಗಲ್ ಲವ್ ಸ್ಟೋರಿ ಚಿತ್ರದಲ್ಲಿ ನಿರೂಪ್ ಭಂಡಾರಿ (Nirup Bhandari), ಶಾನ್ವಿ ಶ್ರೀವಾಸ್ತವ್, ಪೃಥ್ವಿ ಅಂಬರ್ ಪ್ರಮುಖ ಪಾತ್ರಕ್ಕೆ ಜೀವತುಂಬುತ್ತಿದ್ದಾರೆ. ಸದ್ಯ ಚಿತ್ರೀಕರಣದ ಫೋಟೋ ವೈರಲ್ ಆಗುತ್ತಿವೆ.

    ‘ಮಾಸ್ಟರ್ ಪೀಸ್’ ಸುಂದರಿ ಶಾನ್ವಿ (Shanvi Srivastav) ಲೀಡ್ ರೋಲ್‌ನಲ್ಲಿ ನಟಿಸುತ್ತಿರೋ ಚಿತ್ರಕ್ಕೆ ನಾಗತಿಹಳ್ಳಿ ಚಂದ್ರಶೇಖರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿಭಿನ್ನ ಪ್ರೇಮ ಕಥೆಯೊಂದಿಗೆ ಬರುತ್ತಿದ್ದಾರೆ. ಯುಸ್‌ನ ಸುಂದರ ತಾಣಗಳಲ್ಲಿ ಶಾನ್ವಿ ಮತ್ತು ನಟ ಪೃಥ್ವಿ ಅಂಬರ್ ಜೊತೆ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದನ್ನೂ ಓದಿ:’ಅಮೆರಿಕಾ ಅಮೆರಿಕಾ’ 2ಗಾಗಿ ಯುಸ್‌ಗೆ ಹಾರಿದ ಶಾನ್ವಿ & ಟೀಮ್

    ಮೂಲಗಳ ಪ್ರಕಾರ, ಸೂಪರ್ ಹಿಟ್ ಚಿತ್ರ ‘ಅಮೆರಿಕಾ ಅಮೆರಿಕಾ’ (America America 2) ಚಿತ್ರದ ಪಾರ್ಟ್ 2 ಎಂದು ಹೇಳಲಾಗುತ್ತಿದೆ. ಅಮೆರಿಕಾ ಅಮೆರಿಕಾದಂತಹ ಸಿನಿಮಾ ಕೊಟ್ಟ ನಾಗತಿಹಳ್ಳಿ ಮೇಷ್ಟ್ರು ಮತ್ತೊಂದು ಸಿನಿಮಾ ಮಾಡ್ತಿದ್ದಾರೆ. ಇದು ಒಂದು ರೀತಿಯ ಅಮೆರಿಕಾ ಅಮೆರಿಕಾ ಚಿತ್ರಕ್ಕೆ ಟ್ರಿಬ್ಯೂಟ್ ಥರವೇ ಇದೆ. ಹೆಸರಿಡದ ಈ ಚಿತ್ರದಲ್ಲೂ ತ್ರಿಕೋನ ಪ್ರೇಮ ಕಥೆಯನ್ನೇ ಹೆಣೆದಿದ್ದಾರಂತೆ.  ಪಾರ್ಟ್‌ 2 ಬಗ್ಗೆ  ಬಗ್ಗೆ ಚಿತ್ರತಂಡದ ಕಡೆಯಿಂದ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

    ಮೊದಲ ಬಾರಿಗೆ ಶಾನ್ವಿ, ಪೃಥ್ವಿ, ನಿರೂಪ್ ಭಂಡಾರಿ ಜೊತೆಯಾಗುತ್ತಿರೋದರಿಂದ ಸಿನಿಮಾ ಬಗೆಗಿನ ನಿರೀಕ್ಷೆ ಹೆಚ್ಚಾಗಿದೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಂಡ ರಿವೀಲ್ ಮಾಡುವವರೆಗೂ ಕಾಯಬೇಕಿದೆ.

    ‘ಅಮೆರಿಕಾ ಅಮೆರಿಕಾ’ ಸಿನಿಮಾ ತೆರೆಕಂಡು 26 ವರ್ಷಗಳಾಗಿದೆ. ರಮೇಶ್ ಅರವಿಂದ್, ಹೇಮಾ, ಅಕ್ಷಯ್ ಆನಂದ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. 1997ರಲ್ಲಿ ಈ ಚಿತ್ರವನ್ನ ಫ್ಯಾನ್ಸ್ ಮೆಚ್ಚಿಕೊಂಡಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಕಿನಿ ಫೋಟೋ ಕೇಳ್ಬೇಡಿ ಎಂದು ಮನವಿ ಮಾಡಿದ ನಟಿ ಶಾನ್ವಿ

    ಬಿಕಿನಿ ಫೋಟೋ ಕೇಳ್ಬೇಡಿ ಎಂದು ಮನವಿ ಮಾಡಿದ ನಟಿ ಶಾನ್ವಿ

    ‘ಚಂದ್ರಲೇಖ’, ‘ಮಾಸ್ಟರ್ ಪೀಸ್’ (Master Piece Film) ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಮಿಂಚಿದ ಹಾಟ್ ಬೆಡಗಿ ಶಾನ್ವಿ ಶ್ರೀವಾಸ್ತವ (Shanvi Srivastava) ಇದೀಗ ವಿದೇಶಕ್ಕೆ ಹಾರಿದ್ದಾರೆ. ಬಿಕಿನಿ ಧರಿಸಿ ಮತ್ತೆ ಹಾಟ್ ಅವತಾರ ತಾಳಿದ್ದಾರೆ.

    ಕನ್ನಡ, ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಛಾಪೂ ಮೂಡಿಸುತ್ತಿರುವ ನಟಿ ಶಾನ್ವಿ ಶ್ರೀವಾಸ್ತವ ಅವರು ಕನ್ನಡದ ಬ್ಯಾಂಗ್, ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದನ್ನೂ ಓದಿ:ಮತ್ತೆ ಕಿರುತೆರೆಯತ್ತ ದೀಪಿಕಾ ದಾಸ್

    ಶಾನ್ವಿ ಬೇಸಿಗೆ ರಜೆ ಎಂಜಾಯ್ ಮಾಡ್ತಿದ್ದಾರೆ. ವಿದೇಶದಲ್ಲಿರುವ ಮಾಸ್ಟರ್ ಪೀಸ್ ಬೆಡಗಿ ಸದ್ಯ ಬಿಕಿನಿ ಫೋಟೋವೊಂದನ್ನ ಶೇರ್ ಮಾಡಿದ್ದಾರೆ. ಬ್ಯಾಕ್ ಸೈಡ್ ಫೋಟೋ ಶೇರ್ ಮಾಡಿ, ಬಿಕಿನಿ (Bikini) ಹಾಕಿದ್ದೀನಿ ಅಂತಾ ಬಿಕಿನಿ ಫೋಟೋ ಕೇಳ್ಬೇಡಿ ಎಂದು ಡೈಲಾಗ್ ಹೊಡೆದಿದ್ದಾರೆ.

     

    View this post on Instagram

     

    A post shared by Shanvi Srivastava (@shanvisri)

    ಸದ್ಯ ಶಾನ್ವಿ ಬಿಕಿನಿ ಲುಕ್‌ನಲ್ಲಿರುವ ಫೋಟೋ ನೋಡಿಯೇ ಬೋಲ್ಡ್ ಆಗಿರುವ ಪಡ್ಡೆಹುಡುಗರು, ಮತ್ತಷ್ಟು ಬಿಕಿನಿ ಫೋಟೋ ಶೇರ್ ಮಾಡಿ ಎಂದು ಮನವಿ ಮಾಡ್ತಿದ್ದಾರೆ.

  • ಹಾರರ್ ಥ್ರಿಲ್ ನೀಡಲು ದಿನೇಶ್ ಬಾಬು 50ನೇ ಚಿತ್ರ ‘ಕಸ್ತೂರಿ ಮಹಲ್’ ರೆಡಿ

    ಹಾರರ್ ಥ್ರಿಲ್ ನೀಡಲು ದಿನೇಶ್ ಬಾಬು 50ನೇ ಚಿತ್ರ ‘ಕಸ್ತೂರಿ ಮಹಲ್’ ರೆಡಿ

    ಸ್ತೂರಿ ಮಹಲ್, ಹೆಸರಾಂತ ಹಾಗೂ ಹಿರಿಯ ನಿರ್ದೇಶಕ ದಿನೇಶ್ ಬಾಬು ಸಿನಿಮಾ. ಇದು ಈ ಚಿತ್ರದ ಹೆಗ್ಗಳಿಕೆ ಕೂಡ. ಒಂದಕ್ಕಿಂತ ಒಂದು ಸೂಪರ್ ಹಿಟ್ ಸಿನಿಮಾ ಕೊಟ್ಟ ದಿನೇಶ್ ಬಾಬು ಅವರ 50ನೇ ಸಿನಿಮಾ ಎನ್ನುವುದು ಇನ್ನೊಂದು ಇಂಟ್ರಸ್ಟಿಂಗ್ ವಿಚಾರ. ಸದ್ಯ ಹಾಡು, ಟ್ರೇಲರ್‌ಗಳ ಮೂಲಕ ಕನ್ನಡ ಸಿನಿರಸಿಕರ ಮನಗೆದ್ದಿರುವ ಈ ಚಿತ್ರ ಇದೇ ಶುಕ್ರವಾರ ಅಂದರೆ ಮೇ 13ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ.

    ತೆಲುಗು, ತಮಿಳು, ಮಲಯಾಳಂ, ಕನ್ನಡ ಸಿನಿಮಾಗಳನ್ನು ನಿರ್ದೇಶಿಸಿ ಸೂಪರ್ ಹಿಟ್ ನೀಡಿರುವ ನಿರ್ದೇಶಕ ದಿನೇಶ್ ಬಾಬು ಕನ್ನಡ ಚಿತ್ರ ಪ್ರೇಮಿಗಳಿಗೆ ಬಲು ಅಚ್ಚು ಮೆಚ್ಚು. ಪುನೀತ್ ರಾಜ್ ಕುಮಾರ್ ಅಭಿನಯದ ಅಭಿ, ರಮೇಶ್ ಅರವಿಂದ್ ಅಭಿನಯದ ಅಮೃತ ವರ್ಷಿಣಿ ಸೇರಿದಂತೆ ಇನ್ನೂ ಹಲವು ಸಿನಿಮಾಗಳು ಇದಕ್ಕೆ ಕಾರಣ. ಸದ್ಯ ತಮ್ಮ ಸಿನಿ ಜರ್ನಿಯ 50ನೇ ಸಿನಿಮಾ ಕಸ್ತೂರಿ ಮಹಲ್‍ಗೆ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿ ರಂಜಿಸಲು ರೆಡಿಯಾಗಿದ್ದಾರೆ. ಇದನ್ನೂ ಓದಿ : ಬೆಂಗಳೂರು ರಸ್ತೆಯ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡ ಖ್ಯಾತ ಗಾಯಕ ಅಜಯ್ ವಾರಿಯರ್

    ಕಸ್ತೂರಿ ಮಹಲ್ ಹಾರರ್ ಜಾನರ್ ಸಿನಿಮಾ. ಅವನೇ ಶ್ರೀಮನ್ನಾರಾಯಣ ಖ್ಯಾತಿಯ ನಟಿ ಶಾನ್ವಿ ಶ್ರೀವಾಸ್ತವ ಚಿತ್ರದ ನಾಯಕಿ. ಈಗಾಗಲೇ ಟ್ರೇಲರ್‌ನಲ್ಲಿ ಶಾನ್ವಿ ಅವತಾರ ನೋಡಿ ಥ್ರಿಲ್ ಆಗಿರುವ ಮಂದಿ ಸಿನಿಮಾ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಸ್ಕಂದ ಅಶೋಕ್, ಬಿಗ್ ಬಾಸ್ ಖ್ಯಾತಿಯ ಶ್ರುತಿ ಪ್ರಕಾಶ್, ರಂಗಾಯಣ ರಘು, ವತ್ಸಲಾ ಮೋಹನ್, ನೀನಾಸಂ ಅಶ್ವಥ್, ಕಾಶಿಮಾ, ಕೆಂಪೇಗೌಡ ಒಳಗೊಂಡ ತಾರಾಬಳಗ ಚಿತ್ರದಲ್ಲಿದೆ.

    ಪಿಕೆಹೆಚ್ ದಾಸ್ ಕ್ಯಾಮೆರಾ ನಿರ್ದೇಶನ, ರಮೇಶ್ ಕೃಷ್ಣ ಸಂಗೀತ ಚಿತ್ರಕ್ಕಿದೆ. ಶ್ರೀ ಭವಾನಿ ಆರ್ಟ್ಸ್ ಬ್ಯಾನರ್ ನಡಿ ರವೀಶ್ ಆರ್.ಸಿ. ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸಾಕಷ್ಟು ಕ್ಯೂರಿಯಾಸಿಟಿ ಬಿಲ್ಡ್ ಮಾಡುತ್ತಿರುವ ಕಸ್ತೂರಿ ಮಹಲ್ ಮೇ 13ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  ಇದನ್ನೂ ಓದಿ : ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶ

  • ಕಸ್ತೂರಿ ಮಹಲ್‍ನಿಂದ ಡಿಂಪಲ್ ಕ್ವೀನ್ ಔಟ್, ಶಾನ್ವಿ ಇನ್

    ಕಸ್ತೂರಿ ಮಹಲ್‍ನಿಂದ ಡಿಂಪಲ್ ಕ್ವೀನ್ ಔಟ್, ಶಾನ್ವಿ ಇನ್

    ಬೆಂಗಳೂರು: ಚಿತ್ರದ ಟೈಟಲ್ ಕುರಿತು ಸದ್ದು ಮಾಡಿದ್ದ ಸಿನಿಮಾದಿಂದ ಡಿಂಪಲ್ ಕ್ವೀನ್ ರಚಿತಾ ರಾಮ್ ಹೊರ ನಡೆದಿದ್ದು, ಅವರ ಜಾಗಕ್ಕೆ ಶಾನ್ವಿಯವರನ್ನು ನಿರ್ದೇಶಕ ದಿನೇಶ್ ಬಾಬು ಆಯ್ಕೆ ಮಾಡಿದ್ದಾರೆ.

    ಆರಂಭದಲ್ಲಿ ದಿನೇಶ್ ಬಾಬು ಅವರು ಈ ಚಿತ್ರದ ಹೆಸರನ್ನು ಕಸ್ತೂರಿ ನಿವಾಸ ಎಂದು ಘೋಷಿಸಿದ್ದರು. ಆದರೆ ಡಾ.ರಾಜ್‍ಕುಮಾರ್ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಕಸ್ತೂರಿ ಮಹಲ್ ಎಂದು ಬದಲಾಯಿಸಿದ್ದಾರೆ. ಅಲ್ಲದೆ ಚಿತ್ರಕ್ಕೆ ರಚಿತಾ ರಾಮ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಸಿನಿಮಾದಿಂದ ಅವರು ಹೊರ ನಡೆದಿದ್ದು, ಅವನೇ ಶ್ರೀಮನ್ನಾರಾಯಣ ಖ್ಯಾತಿಯ ಶಾನ್ವಿ ಶ್ರೀವಾಸ್ತವ ನಟಿಸುತ್ತಿದ್ದಾರೆ. ಸ್ಕಂದ ಅಶೋಕ್ ಅವರು ಮುಖ್ಯಭೂಮಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ರಚಿತಾ ರಾಮ್ ಅವರು ಚಿತ್ರದಿಂದ ಹೊರ ನಡೆದ ಕುರಿತು ಪ್ರತಿಕ್ರಿಯಿಸಿರುವ ನಿರ್ದೇಶಕ ದಿನೇಶ್ ಬಾಬು, ರಚಿತಾ ರಾಮ್ ಅವರು ಚಿತ್ರದಿಂದ ಹೊರ ನಡೆದಿರುವ ಕುರಿತು ನಿರ್ದಿಷ್ಟ ಕಾರಣ ತಿಳಿದಿಲ್ಲ. ಆದರೆ ಶಾನ್ವಿ ಅವರು ತಂಡ ಸೇರಿರುವುದಕ್ಕೆ ಸಂತೋಷವಾಗಿದೆ. ಅಕ್ಟೋಬರ್ ವೇಳೆಗೆ ಕೊಟ್ಟಿಗೆಹಾರದಲ್ಲಿ ಶೂಟಿಂಗ್ ಆರಂಭವಾಗಲಿದೆ ಎಂದು ಮಾಹಿತಿ ನಿಡಿದರು. ಇನ್ನೂ ವಿಶೇಷವೆಂಬಂತೆ ಕಸ್ತೂರಿ ಮಹಲ್ ದಿನೇಶ್ ಬಾಬು ಅವರ 50ನೇ ಸಿನಿಮಾ ಆಗಿದೆ. ಹೀಗಾಗಿ ನಿರೀಕ್ಷೆ ಹೆಚ್ಚಿಸಿದೆ.

    ಅವನೇ ಶ್ರೀಮನ್ನಾರಾಯಣ ಸಕ್ಸಸ್ ಬಳಿಕ ಲಾಕ್‍ಡೌನ್ ದಿನಗಳನ್ನು ಎಂಜಾಯ್ ಮಾಡಿದ್ದ ನಟಿ ಶಾನ್ವಿ ಶ್ರೀವಾಸ್ತವ, ಇದೀಗ ಶೂಟಿಂಗ್ ಆರಂಭವಾಗುತ್ತಿದ್ದಂತೆ ತಮ್ಮ ಹೊಸ ಚಿತ್ರದ ಕುರಿತು ಘೋಷಿಸಿದ್ದಾರೆ. ಈ ಬಾರಿ ಅವರು ಹಾರರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

    ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾದಲ್ಲಿ ಲಕ್ಷ್ಮೀ ಅವತಾರ ತಾಳಿದ್ದ ಶಾನ್ವಿ, ತಮ್ಮ ವಿಶಿಷ್ಟ ನಟನೆ ಮೂಲಕವೇ ಪ್ರೇಕ್ಷಕರನ್ನು ಸೆಳೆದಿದ್ದರು. ಇದೀಗ ಹಾರರ್ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದು, ತಮ್ಮ ಹೊಸ ಸಿನಿಮಾ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅವರ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಶುಭ ಕೋರುತ್ತಿದ್ದು, ಹೆಚ್ಚು ಜನ ಲೈಕ್ ಮಾಡಿದ್ದಾರೆ.

    ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿರುವ ಶಾನ್ವಿ, ನನ್ನ ಮುಂದಿನ ಕನ್ನಡ ಚಿತ್ರ ಪ್ರಖ್ಯಾತ ನಿರ್ದೇಶಕರಾದ ದಿನೇಶ್ ಬಾಬು ಸರ್ ಅವರ ಕಸ್ತೂರಿಮಹಲ್ ಎಂದು ನಿಮ್ಮೆಲ್ಲರಿಗೂ ತಿಳಿಸಲು ನನಗೆ ಸಂತೋಷವಾಗುತ್ತದೆ. ನನ್ನ ಕನ್ನಡದ ಮೊದಲ ಚಿತ್ರದ ನಂತರ ಮತ್ತೊಮ್ಮೆ ಹಾರರ್ ಚಿತ್ರ ಮಾಡುತ್ತಿದ್ದು, ಇನ್ನೂ ಅನೇಕ ಒಳ್ಳೆಯ ಅವಕಾಶದ ನಿರೀಕ್ಷೆಯಲ್ಲಿದ್ದೇನೆ. ನಿಮ್ಮೆಲ್ಲರ ಬೆಂಬಲ, ಪ್ರೋತ್ಸಾಹಕ್ಕೆ ಚಿರಋಣಿ ಎಂದು ಬರೆದುಕೊಂಡಿದ್ದಾರೆ.

    ಕನ್ನಡದಲ್ಲಿ ಚಂದ್ರಲೇಖ ಬಳಿಕ ಅವರು ನಟಿಸುತ್ತಿರುವ ಎರಡನೇ ಹಾರರ್ ಚಿತ್ರ ಇದಾಗಿದೆ. ಅಲ್ಲದೆ ಇನ್ನೂ ಹೆಚ್ಚಿನ ಅವಕಾಶಗಳ ನಿರೀಕ್ಷೆಯಲ್ಲಿರುವುದಾಗಿ ಸಹ ಅವರು ಹೇಳಿಕೊಂಡಿದ್ದಾರೆ. ಹೊಸ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ತಮ್ಮ ಸಿನಿ ಜರ್ನಿಯನ್ನು ಮುಂದುವರಿಸಿದ್ದಾರೆ.

  • ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ಶಾನ್ವಿ ನಾಯಕಿ!

    ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ಶಾನ್ವಿ ನಾಯಕಿ!

    ಗೋಲ್ಡನ್ ಸ್ಟಾರ್ ಗಣೇಶ್ ಗೀತಾ ಎಂಬ ಚಿತ್ರದಲ್ಲಿ ನಟಿಸುತ್ತಿರೋ ವಿಚಾರ ಗೊತ್ತೇ ಇದೆ. ಈ ಚಿತ್ರಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ. ಇದೇ ಸಮಯದಲ್ಲಿ ಬಾಕಿ ಉಳಿದಿದ್ದ ಮೂರನೇ ನಾಯಕಿಯ ಆಯ್ಕೆಯೂ ನಡೆದಿದೆ. ಶಾನ್ವಿ ಶ್ರೀವಾಸ್ತವ ಈ ಚಿತ್ರಕ್ಕೆ ಹೊಸತಾಗಿ ಎಂಟ್ರಿ ಕೊಟ್ಟಿದ್ದಾರೆ.

    ಗೀತಾ ಚಿತ್ರದಲ್ಲಿ ಮೂವರು ನಾಯಕಿಯರು ನಟಿಸಲಿದ್ದಾರೆ. ಈಗಾಗಲೇ ಮಲೆಯಾಳಿ ಚೆಲುವೆಯರಾದ ಪ್ರಯಾಗಾ ಮಾರ್ಟಿನ್ ಮತ್ತು ಪಾರ್ವತಿ ಅರುಣ್ ನಾಯಕಿಯರಾಗಿ ನಿಕ್ಕಿಯಾಗಿದ್ದರು. ಮೂರನೇ ನಾಯಕಿಗಾಗಿ ವ್ಯಾಪಕವಾಗಿ ಹುಡುಕಾಟ ಆರಂಭವಾಗಿತ್ತು. ಇದೀಗ ಆ ಪಾತ್ರಕ್ಕೆ ಶಾನ್ವಿ ಆಗಮನವಾಗಿದೆ.

    ಈ ಚಿತ್ರಕ್ಕೆ ಈ ಹಿಂದೆ ಮುಗುಳು ನಗೆ ಚಿತ್ರ ನಿರ್ಮಾಣ ಮಾಡಿದ್ದ ಸೈಯದ್ ಸಲಾಮ್ ಅವರೇ ಹಣ ಹೂಡಿದ್ದಾರೆ. ವಿಜಯ್ ನಾಗೇಂದ್ರ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಶಾನ್ವಿ ಶ್ರೀವಾಸ್ತವ ಮುಂದಿನ ಶೆಡ್ಯೂಲ್ ಹೊತ್ತಿಗೆಲ್ಲ ಚಿತ್ರತಂಡ ಸೇರಿಕೊಳ್ಳಲಿದ್ದಾರಂತೆ. ಮುಂದಿನ ಹಂತದ ಚಿತ್ರೀಕರಣ ಕೋಲ್ಕತ್ತಾದಲ್ಲಿ ನಡೆಯಲಿದೆ. ಅಲ್ಲಿಂದ ಕಾಶ್ಮೀರದಲ್ಲಿಯೂ ಚಿತ್ರೀಕರಣ ನಡೆಸಲು ಚಿತ್ರತಂಡ ತೀರ್ಮಾನಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅಖಿಲ್‍ಗೆ ಜೊತೆಯಾದಳು ಅಂದಗಾತಿ ಶಾನ್ವಿ!

    ಅಖಿಲ್‍ಗೆ ಜೊತೆಯಾದಳು ಅಂದಗಾತಿ ಶಾನ್ವಿ!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಸ್ಟಾರ್ ನಟರಿಗೆಲ್ಲ ಸಾಥಿಯಾಗಿ ನಟಿಸುತ್ತಲೇ ಕನ್ನಡದಲ್ಲಿ ಚಾಲ್ತಿಯಲ್ಲಿರುವಾಕೆ ಶಾನ್ವಿ ಶ್ರೀವಾಸ್ತವ. ಇತ್ತೀಚೆಗಷ್ಟೇ ಉಪೇಂದ್ರ ಮತ್ತು ರವಿಚಂದ್ರನ್ ಒಟ್ಟಾಗಿ ನಟಿಸುತ್ತಿರೋ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದ ಶಾನ್ವಿ ಇದೀಗ ಮತ್ತೊಂದು ಚಿತ್ರವನ್ನೂ ಒಪ್ಪಿಕೊಂಡಿದ್ದಾಳೆ!

    ಪಾರ್ವತಮ್ಮ ರಾಜ್ ಕುಮಾರ್ ಅವರ ಸೋದರಳಿಯ ಸೂರಜ್ ಚೊಚ್ಚಲ ಚಿತ್ರ ಅಖಿಲ್‍ಗೆ ಶಾನ್ವಿ ಶ್ರೀವಾಸ್ತವ ನಾಯಕಿಯಾಗಿದ್ದಾಳೆ. ಸೂರಜ್ ಮೊದಲ ಸಲ ನಾಯಕನಾಗಿ ಎಂಟ್ರಿ ಕೊಡುತ್ತಿರೋ ಈ ಚಿತ್ರಕ್ಕೆ ನಾಯಕಿ ಯಾರಾಗುತ್ತಾರೆಂಬ ಕುತೂಹಲ ಇದ್ದೇ ಇತ್ತು. ಈ ರೇಸಿನಲ್ಲಿ ಹಲವು ನಾಯಕಿಯರ ಹೆಸರುಗಳೂ ತೇಲಿ ಹೋಗಿದ್ದವು. ಆದರೀಗ ಶಾನ್ವಿ ಶ್ರೀವಾಸ್ತವ ಅದಕ್ಕೆ ನಿಕ್ಕಿಯಾಗಿದ್ದಾಳೆ.

    ಕನ್ನಡ ಚಿತ್ರರಂಗಕ್ಕೆ ಬಂದು ಕೆಲವೇ ವರ್ಷಗಳಲ್ಲಿ ಶಾನ್ವಿ ವೆರೈಟಿ ವೆರೈಟಿ ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಹತ್ತಿರಾಗಿದ್ದಾಳೆ. ಎಂಥಾದ್ದೇ ಪಾತ್ರವನ್ನಾದರೂ ಲೀಲಾಜಾಲವಾಗಿ ನಿರ್ವಹಿಸುವ ಕಲೆಗಾರಿಕೆ ಇರುವ ಈಕೆ ಅಖಿಲ್ ಚಿತ್ರದಲ್ಲಿಯೂ ಡಿಫರೆಂಟಾದೊಂದು ಪಾತ್ರದಲ್ಲಿ ನಟಿಸಲಿದ್ದಾಳಂತೆ. ಶಾನ್ವಿಯನ್ನು ಈವರೆಗೂ ಕೂಡಾ ಇಂಥಾ ಪಾತ್ರದಲ್ಲಿ ನೋಡಿರಲು ಸಾಧ್ಯವೇ ಇಲ್ಲ ಅಂತ ಚಿತ್ರ ತಂಡವೇ ಭರವಸೆ ಹೊಂದಿದೆ.

    ಹೀರೋ ಆಗಿ ಎಂಟ್ರಿ ಕೊಡಲು ವರ್ಷಾಂತರಗಳಿಂದ ತಯಾರಿ ನಡೆಸಿಕೊಂಡೇ ಸೂರಜ್ ಅಖಿಲ್ ಮೂಲಕ ಅದನ್ನು ಸಾಕಾರಗೊಳಿಸಿಕೊಂಡಿದ್ದಾರೆ. ನಟನೆ, ಡ್ಯಾನ್ಸ್, ಫೈಟಿಂಗ್ ಸೇರಿದಂತೆ ಎಲ್ಲವನ್ನೂ ಶಾಸ್ತ್ರೋಕ್ತವಾಗಿ ಮುಗಿಸಿಕೊಂಡಿರುವ ಸೂರಜ್ ಮಾಸ್ ಪಾತ್ರದ ಮೂಲಕ ಪ್ರೇಕ್ಷಕರನ್ನು ತಲುಪಲು ತಯಾರಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಹೊಯ್ಸಳರಿಗೆ ಜೊತೆಯಾದ ಶಾನ್ವಿ ಶ್ರೀವಾಸ್ತವ!

    ಹೊಯ್ಸಳರಿಗೆ ಜೊತೆಯಾದ ಶಾನ್ವಿ ಶ್ರೀವಾಸ್ತವ!

    ಬೆಂಗಳೂರು: ಕನ್ನಡದಲ್ಲಿ ಮತ್ತೊಮ್ಮೆ ಮಲ್ಟಿ ಸ್ಟಾರ್ ಚಿತ್ರಗಳ ಜಮಾನ ಮರುಕಳಿಸಿದೆ. ಈ ಹಿಂದೆ ಉಪೇಂದ್ರ ಮುಕುಂದ ಮುರಾರಿ ಚಿತ್ರದ ಮೂಲಕ ಕಿಚ್ಚ ಸುದೀಪ್ ಅವರಿಗೆ ಜೊತೆಯಾಗಿ ನಟಿಸಿದ್ದರು. ಇದೀಗ ಅದೇ ಉಪೇಂದ್ರ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಜೊತೆ ನಟಿಸುತ್ತಿದ್ದಾರೆ. ಓಂಪ್ರಕಾಶ್ ರಾವ್ ನಿರ್ದೇಶನ ಮಾಡಲಿರೋ ಈ ಚಿತ್ರಕ್ಕೆ ‘ಹೊಯ್ಸಳ’ ಎಂಬ ಹೆಸರಿಡಲಾಗಿದೆ.

    ಹೊಸಾ ವಿಚಾರವೆಂದರೆ, ಇದೀಗ ಈ ಹೊಯ್ಸಳರಿಗೆ ನಾಯಕಿಯರು ಸಿಕ್ಕಿದ್ದಾರೆ. ಮಾಸ್ಟರ್ ಪೀಸ್ ಖ್ಯಾತಿಯ ನಟಿ ಶಾನ್ವಿ ಶ್ರೀವಾಸ್ತವ ಮತ್ತು ಮಂಗಳೂರು ಮೂಲದ ಮಾಡೆಲಿಂಗ್ ಬೆಡಗಿ ನಮಿತಾ ರತ್ನಾಕರ್ ಈ ಚಿತ್ರಕ್ಕೆ ನಾಯಕಿಯರಾಗಿ ಸೆಲೆಕ್ಟಾಗಿದ್ದಾರೆ.

    ರವಿಚಂದ್ರನ್ ಮತ್ತು ಉಪ್ಪಿ ಕಾಂಬಿನೇಷನ್ನಿನ ಮೂಲಕ ಒಂದು ಗ್ಯಾಪಿನ ನಂತರ ಓಂಪ್ರಕಾಶ್ ರಾವ್ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಒಂದಷ್ಟು ಕಾಲದಿಂದ ಈ ಚಿತ್ರಕ್ಕೆ ನಾಯಕಿಯರ ಹುಡುಕಾಟದಲ್ಲಿದ್ದ ಓಂಪ್ರಕಾಶ್ ರಾವ್ ಕಡೆಗೂ ಆ ಆಯ್ಕೆ ನಡೆಸಿ ಈ ವಿಚಾರವನ್ನು ಬಿಟ್ಟುಕೊಟ್ಟಿದ್ದಾರೆ. ಆದರೆ ಶಾನ್ವಿ ಮತ್ತು ನಮಿತಾ ಯಾರಿಗೆ ಜೋಡಿಯಾಗಿ ನಟಿಸಲಿದ್ದಾರೆಂಬುದನ್ನು ಮಾತ್ರ ಸಸ್ಪೆನ್ಸ್ ಆಗಿಡಲಾಗಿದೆ!

    ಹೊಯ್ಸಳ ಚಿತ್ರಕ್ಕೆ ನಾಯಕಿಯರ ಆಯ್ಕೆಯ ಮೂಲಕ ತಾರಾಗಣದ ಆಯ್ಕೆ ಕಾರ್ಯವೆಲ್ಲವೂ ಸಮಾಪ್ತಿಗೊಂಡಿದೆ. ಇನ್ನೊಂದಷ್ಟು ದಿನಗಳಲ್ಲಿ ಈ ಬಗೆಗಿನ ಮಾಹಿತಿಯನ್ನು ಓಂಪ್ರಕಾಶ್ ಕೊಡಲಿದ್ದಾರಂತೆ. ಇದೇ ಆಗಸ್ಟ್ ತಿಂಗಳಲ್ಲಿ ಫೋಟೋ ಶೂಟ್ ಮುಗಿಸಿಕೊಂಡು, 20ನೇ ತಾರೀಕಿನಿಂದ ಚಿತ್ರೀಕರಣಕ್ಕೆ ಚಾಲನೆ ನೀಡಲು ಓಂಪ್ರಕಾಶ್ ರಾವ್ ನಿರ್ಧರಿಸಿದ್ದಾರಂತೆ.