Tag: ಶಾಪಿಂಗ್

  • ಬೆಂಗ್ಳೂರಿನಲ್ಲಿ ಮಿತಿಮೀರಿದ ಡೂಪ್ಲಿಕೇಟ್ ದುನಿಯಾ

    ಬೆಂಗ್ಳೂರಿನಲ್ಲಿ ಮಿತಿಮೀರಿದ ಡೂಪ್ಲಿಕೇಟ್ ದುನಿಯಾ

    – ಪೇಸ್ಟ್‌ನಿಂದ ಬಟ್ಟೆವರೆಗೆ ಎಲ್ಲವೂ ನಕಲಿ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೂಪ್ಲಿಕೇಟ್ ದುನಿಯಾ ಭರ್ಜರಿ ಸದ್ದು ಮಾಡುತ್ತಿದ್ದು, ಬ್ರ್ಯಾಂಡೆಂಡ್ ಕಂಪನಿಗಳ ಹೆಸರಲ್ಲಿ ದೋಖಾ ನಡೆಯುತ್ತಿದೆ.

    ಬೆಳಗ್ಗೆ ಎದ್ದ ತಕ್ಷಣ ಬಳಿಸುವ ಟೂತ್‍ಪೇಸ್ಟ್‌ನಿಂದ ಹಿಡಿದು, ರಾತ್ರಿ ಮಲಗುವಾಗ ಬಳಸುವ ಗುಡ್‍ನೈಟ್ ಕಾಯಿಲ್ ವರೆಗೂ ಎಲ್ಲಾ ವಸ್ತುಗಳು ಬ್ರ್ಯಾಂಡೆಂಡ್ ಆಗಿರಬೇಕು ಅಂತ ಬಯಸುತ್ತೇವೆ. ಅಷ್ಟೇ ಯಾಕೆ ಏನೇ ಖರೀದಿಸುವ ಮುನ್ನ ಬ್ರ್ಯಾಂಡ್ ಯಾವುದು ಎಂದು ನೋಡುತ್ತೇವೆ. ಇದನ್ನೇ ಟಾರ್ಗೆಟ್ ಮಾಡಿಕೊಂಡು ಬ್ರ್ಯಾಂಡ್  ನಕಲಿ ಮಾಡುತ್ತಿರುವ ಮಾರ್ಕೆಟ್ ವೀರರ ಜಾಲ ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆಯ ವೇಳೆ ಬಯಲಾಗಿದೆ.

    ಚೀಪ್‍ರೇಟ್, ಹಾಫ್‍ರೇಟ್ ಎಂದು ಕೂಗುವ ಅನೇಕ ವ್ಯಾಪಾರಿಗಳ ಬಳಿ ಸ್ಟ್ಯಾಂಡರ್ಡ್ ಬ್ರ್ಯಾಂಡೆಡ್ ವಸ್ತುಗಳು ಕಾಣುತ್ತವೆ. ಆದರೆ ಕಡಿಮೆ ಬೆಲೆಗೆ ಸಿಗುತ್ತವೆ ಅಂತ ಖರೀದಿಸಿದರೆ ಭಾರೀ ದೋಖಾಗೆ ಗುರಿಯಾಗಬೇಕಾಗುತ್ತದೆ ಏಕೆಂದರೆ ಬೆಂಗಳೂರಿನ ಅನೇಕ ಮಾರ್ಕೆಟ್‍ಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ದೊಡ್ಡ ದೊಡ್ಡ ಬ್ರ್ಯಾಂಡ್‍ಗಳ ನಕಲಿ ವಸ್ತುಗಳು ಮಾರಾಟವಾಗುತ್ತಿವೆ.

    ಬೆಂಗಳೂರಿಗರ ನೆಚ್ಚಿನ ಶಾಪಿಂಗ್ ಸ್ಪಾಟ್ ಅಂದರೆ ಚಿಕ್ಕಪೇಟೆ. ಇಲ್ಲಿ ನಡೆಯುವ ಸಂಡೆ ಬಜಾರ್ ನಲ್ಲಿ ಗುಂಡು ಪಿನ್ನಿನಿಂದ ಹಿಡಿದು ಲಿಫ್ಟ್ ಬಿಡಿಭಾಗಗಳವರೆಗೂ ಎಲ್ಲಾ ವಸ್ತುಗಳು ಸಿಗುತ್ತದೆ. ಅದರಲ್ಲೂ ದೊಡ್ಡ ದೊಡ್ಡ ಬ್ರ್ಯಾಂಡ್ ವಸ್ತುಗಳೇ ಸಿಗುತ್ತದೆ. ಅವುಗಳನ್ನು ನೀವೇನಾದರೂ ಖರೀದಿಸಿದರೆ ಮೋಸ ಹೋಗುವುದಂತೂ ಗ್ಯಾರಂಟಿ. ಏಕೆಂದರೆ ಇವೆಲ್ಲ ಅಸಲಿ ಬ್ರ್ಯಾಂಡ್‍ಗಳ ವಸ್ತುಗಳಲ್ಲ. ಇಷ್ಟು ಕಡಿಮೆ ದರದಲ್ಲಿ ಅಸಲಿ ಉತ್ಪನ್ನ ಸಿಗುವುದಿಲ್ಲ. ಕಡಿಮೆ ದರಕ್ಕೆ ಸಿಗುವ ವಸ್ತುಗಳು ಸೆಕೆಂಡ್ ಕಾಪಿ, ಒರಿಜಿನಲ್ ಅಲ್ಲ ಎಂದು ಸ್ವತಃ ವ್ಯಾಪಾರಿಗಳೇ ಒಪ್ಪಿಕೊಳ್ಳುತ್ತಾರೆ. ಬ್ರ್ಯಾಂಡ್ ಕ್ರೇಜ್ ಇರುವ ಗ್ರಾಹಕರಿಗೆ ವ್ಯಾಪಾರಿಗಳು ಚೆನ್ನಾಗಿ ಟೋಪಿ ಹಾಕುತ್ತಿದ್ದಾರೆ.

    ಎಸ್.ಪಿ.ರೋಡ್, ಕೆ.ಆರ್.ಮಾರ್ಕೆಟ್ ನಲ್ಲಿಯೂ ರಾಶಿ ರಾಶಿ ಎಲೆಕ್ಟ್ರಿಕ್ ವಸ್ತುಗಳನ್ನು ಕಾಣುತ್ತೇವೆ. ಪ್ರತಿಷ್ಠಿತ ಕಂಪನಿಗಳ ಹೆಸರು ಹೊಂದಿರುವ ಮೊಬೈಲ್ ಚಾರ್ಜರ್, ಇಯರ್ ಫೋನ್, ಸ್ಪೀಕರ್, ಹೆಡ್ ಫೋನ್‍ಗಳನ್ನು ಇಲ್ಲಿ ಸಿಗುತ್ತವೆ. ಸಾಮಾಜಿನ್ಯವಾಗಿ ಕಡಿಮೆ ದರಕ್ಕೆ ಸಿಗುವ ಈ ಎಲ್ಲ ವಸ್ತುಗಳು ನಕಲಿಯಾಗಿವೆ.

    ಶಿವಾಜಿ ನಗರದಲ್ಲಿ 32 ಜಿಬಿ ಪೆನ್ ಡ್ರೈವ್ ಕೇವಲ ನೂರು ರೂಪಾಯಿಗೆ, 2-3 ಸಾವಿರ ರೂ.ಗೆ ಎಲ್‍ಇಡಿ ಟಿವಿಗಳು, ಸ್ಪೀಕರ್, ಹೋಮ್ ಥೇಂಟರ್ ಗಳು ಸಿಗುತ್ತವೆ. ಮೆಜೆಸ್ಟಿಕ್‍ಗೆ ಪ್ರತಿನಿತ್ಯ ಸಾವಿರಾರು ಜನ ಬರುತ್ತಾರೆ. ಇಲ್ಲಿನ ಅಂಡರ್ ಪಾಸ್‍ನಲ್ಲಿ ಮೊಬೈಲ್‍ಗೆ ಸಂಬಂಧಿಸಿದ ಎಲ್ಲಾ ವಸ್ತುಗಳು ಮಾರಾಟವಾಗುತ್ತವೆ. ಇವುಗಳಲ್ಲಿ ಹೆಚ್ಚಿನ ವಸ್ತುಗಳು ನಕಲಿ ವಸ್ತುಗಳೇ ಆಗಿದೆ ಎನ್ನಲಾಗಿದೆ.

    ಈ ನಕಲಿ ವಸ್ತುಗಳ ಮಾರಾಟ ಜಾಲ ಅವ್ಯಾಹತವಾಗಿ ಸಾಗಿದ್ದು, ಎಲ್ಲಾ ರೀತಿಯ ಮೊಬೈಲ್‍ಗೆ ಸಂಬಂಧಿಸಿದ ವಸ್ತುಗಳು, ವಾಚ್, ಗೃಹೋಪಯೋಗಿ ವಸ್ತುಗಳು ಮಾರಾಟವಾಗುತ್ತಿವೆ. ಇವುಗಳು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಅನೇಕ ಕಾಯಿಲೆಗಳಿಗೆ ದಾರಿ ಮಾಡಿಕೊಡುತ್ತಿವೆ ಎಂದು ವೈದ್ಯರು ಹೇಳುತ್ತಾರೆ.

    ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿರುವ ವೈದ್ಯರು ಆಂಜನಪ್ಪ, ನಕಲಿ ಬ್ರ್ಯಾಂಡ್ ವಸ್ತುಗಳ ಬಳಕೆಯಿಂದ ಆರೋಗ್ಯದ ಮೇ ದುಷ್ಪರಿಣಾಮ ಬೀರುತ್ತದೆ. ಸ್ಮಾರ್ಟ್ ಫೋನ್‍ಗಳ ನಕಲಿ ಚಾರ್ಜರ್ ಗಳು ಸ್ಫೋಟವಾಗುವ ಸಾಧ್ಯತೆ ಹೆಚ್ಚು. ಹೀಗೆ ಸ್ಫೋಟವಾದಾಗ ಕಣ್ಣು ಸೇರಿದಂತೆ ದೇಹದ ಇತರೆ ಭಾಗಗಳಿಗೆ ಗಾಯವಾಗುತ್ತದೆ. ನಕಲಿ ಇಯರ್ ಫೋನ್, ಹೆಡ್ ಫೋನ್ ಹಾಕುವುದರಿಂದ ಕಿವಿಯಲ್ಲಿ ರಕ್ತ ಸೋರಬಹುದು ಎಂದು ತಿಳಿಸಿದ್ದಾರೆ.

  • ಬಳ್ಳಾರಿಯಲ್ಲಿ ಡಿಕೆಶಿ ಶಾಪಿಂಗ್ – ಸೆಲ್ಫಿಗೆ ಮುಗಿಬಿದ್ದ ಜನ

    ಬಳ್ಳಾರಿಯಲ್ಲಿ ಡಿಕೆಶಿ ಶಾಪಿಂಗ್ – ಸೆಲ್ಫಿಗೆ ಮುಗಿಬಿದ್ದ ಜನ

    ಬಳ್ಳಾರಿ: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು ಸಚಿವ ಡಿ.ಕೆ.ಶಿವಕುಮಾರ್ ಬಿಡುವು ಮಾಡಿಕೊಂಡು ಬಿಸಿಲ ನಾಡಿನಲ್ಲಿ ಕೂಲ್ ಕೂಲ್ ಆಗಿ ಶಾಪಿಂಗ್ ಮಾಡಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ನಾಮಪತ್ರ ಸಲ್ಲಿಕೆ ನಂತರ ಶಾಸಕರು ಪಕ್ಷದ ಮುಖಂಡರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಶಾಪಿಂಗ್ ನಡೆಸಿದ ಡಿಕೆಶಿ ನಗರದ ವಿವಿಧ ಬಟ್ಟೆ ಮಳಿಗೆಗಳಿಗೆ ತೆರಳಿ ಉಡುಪುಗಳನ್ನು ಖರೀದಿಸಿದರು.

    ತಮ್ಮ ಮಳಿಗೆಗೆ ಆಗಮಿಸಿದ ಸಚಿವರ ಜೊತೆ ಅಲ್ಲಿಯ ಸಿಬ್ಬಂದಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿ ಪಟ್ಟರು. ಮಳಿಗೆಯಲ್ಲಿದ್ದ ಇತರೆ ಗ್ರಾಹಕರು ಸಚಿವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು. ಕಳೆದ ಬಳ್ಳಾರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಚಿವರು ದಿಢೀರ್ ಎಂದು ಮಳಿಗೆ ತೆರಳಿ ತಮಗೆ ಬೇಕಾದ ಜೀನ್ಸ್ ಪ್ಯಾಂಟ್ ಖರೀದಿಸಿದ್ದರು.

    ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ್ದ ಡಿಕೆ ಶಿವಕುಮಾರ್, ಮಂಗಳವಾರದ ಶುಭ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ದೇಶದಲ್ಲಿ ಬದಲಾವಣೆ ಆಗಬೇಕು. ಎಲ್ಲ ವರ್ಗದವರಿಗೂ ರಕ್ಷಣೆ ಸಿಗಬೇಕು. ಈ ಪ್ರಜಾಪ್ರಭುತ್ವದ ಹಬ್ಬದಲ್ಲಿ ಮತದಾರರು ಜವಾಬ್ದಾರಿಯಿಂದ ಮತ ನೀಡಬೇಕು. ಬಳ್ಳಾರಿಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಆಗಬೇಕಿದೆ. ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ನಾನು ಉಪಚುನಾವಣೆಯಲ್ಲೇ ಉಗ್ರಪ್ಪರ ಪರವಾಗಿ ನಾನು ಐದೂವರೆ ವರ್ಷಗಳಿಗೆ ಮತ ನೀಡುವಂತೆ ಮನವಿ ಮಾಡಿದ್ದೇನೆ. ನಮಗೆ ಚುನಾವಣೆಯಲ್ಲಿ ಹಣದ ಅವಶ್ಯಕತೆ ಇಲ್ಲ. ನಮಗೆ ಜನರ ಆರ್ಶಿವಾದ ಬೇಕು. ಬಿಜೆಪಿಯವರು ಬೇಕಾದಷ್ಟು ಹಣ ಹಂಚಿಕೆ ಮಾಡಲಿ ಎಂದು ಹೇಳಿದರು.

  • ಶಾಪಿಂಗ್‍ಗೆ ಕರ್ಕೊಂಡು ಹೋಗಿಲ್ಲವೆಂದು ಗೆಳೆಯನಿಗೇ ಚಾಕು ಇರಿದ!

    ಶಾಪಿಂಗ್‍ಗೆ ಕರ್ಕೊಂಡು ಹೋಗಿಲ್ಲವೆಂದು ಗೆಳೆಯನಿಗೇ ಚಾಕು ಇರಿದ!

    ನವದೆಹಲಿ: ಶಾಪಿಂಗ್‍ಗೆ ಕರೆದುಕೊಂಡು ಹೋಗಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿ ತನ್ನ ಗೆಳೆಯನನ್ನೇ ಕೊಲೆಗೈದಿರುವ ಘಟನೆ ದೆಹಲಿಯ ವಾಯುವ್ಯ ಭಾಗದ ಜಹಂಗೀರ್ ಪುರಿಯಲ್ಲಿ ಗುರುವಾರ ನಡೆದಿದೆ.

    18 ವರ್ಷದ ದೀಪಕ್ ಮೃತ ದುರ್ದೈವಿ. ಆರೋಪಿಯನ್ನು 19 ವರ್ಷದ ಯೋಗೇಶ್ ಎಂದು ಗುರುತಿಸಲಾಗಿದೆ. ದೀಪಕ್ ಹಾಗೂ ಯೋಗೇಶ್ ಇಬ್ಬರು ಸ್ನೇಹಿತರು. ದೀಪಕ್ ಬುಧವಾರದಂದು ತನ್ನ ಕುಟುಂಬದೊಡನೆ ಸಮಯ ಕಳೆಯಲು ನಿರ್ಧರಿಸಿದ್ದ. ಹೀಗಾಗಿ ಯೋಗೇಶ್‍ನನ್ನು ತನ್ನ ಜೊತೆ ಬೈಕ್ ನಲ್ಲಿ ಶಾಪಿಂಗ್ ಕರೆದೊಯ್ಯಲು ನಿರಾಕರಿಸಿದ್ದ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು. ಇದರಿಂದ ಕೋಪಗೊಂಡ ಯೋಗೇಶ್ ದೀಪಕ್‍ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸ್ ಕಂಟ್ರೋಲ್ ರೂಂನಿಂದ ನಮಗೆ ರಾತ್ರಿ 12.15 ಗಂಟೆ ಸುಮಾರಿಗೆ ವಿಷಯ ತಿಳಿಯಿತು. ದೀಪಕ್‍ನನ್ನು ಬಾಬು ಜಗ್‍ಜೀವನ್ ರಾಮ್ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಿದ್ದಾಗ ಆತ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂತು. ನಂತರ ಪ್ರಾಥಮಿಕ ತನಿಖೆಯಿಂದ ದೀಪಕ್‍ನ ಸ್ನೇಹಿತ ಯೋಗೇಶ್ ಆತನನ್ನು ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಮಾಹಿತಿ ದೊರಕಿತು. ತಕ್ಷಣ ಆರೋಪಿಯನ್ನು ಭಿಲಾಸ್ವಾ ಡೈರಿ ಬಳಿ ಇರುವ ಆತನ ಸಂಬಂಧಿಕರ ಮನೆಯಿಂದ ಬಂಧಿಸಲಾಯ್ತು ಎಂದು ವಾಯುವ್ಯ ವಲಯದ ಪೊಲೀಸ್ ಉಪ ಆಯುಕ್ತರಾದ ಅಸ್ಲಾಂ ಖಾನ್ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸ್ಪೆಷಲ್ ಮಂಗಳಸೂತ್ರ ಖರೀದಿಸಿದ ದೀಪಿಕಾ

    ಸ್ಪೆಷಲ್ ಮಂಗಳಸೂತ್ರ ಖರೀದಿಸಿದ ದೀಪಿಕಾ

    ಮುಂಬೈ: ನವೆಂಬರ್ 14 ಮತ್ತು 15ರಂದು ಬಾಲಿವುಡ್ ತಾರೆ, ದೀಪಿಕಾ ಪಡುಕೋಣೆ ಮತ್ತು ನಟ ರಣ್‍ವೀರ್ ಸಿಂಗ್ ಮದುವೆ ನಡೆಯಲಿದೆ. ಈಗಾಗಲೇ ಬೆಂಗಳೂರು ತಲುಪಿರುವ ದೀಪಿಕಾ ಮದುವೆ ಶಾಸ್ತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರಿಗೆ ಬರುವ ಮುನ್ನವೇ ದೀಪಿಕಾ ಚಿನ್ನಾಭರಣ ಖರೀದಿಸಿದ್ದು, 20 ಲಕ್ಷ ರೂ. ಬೆಲೆ ಬಾಳುವ ಮಂಗಳಸೂತ್ರ ಖರೀದಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

    ಮಂಗಳ ಸೂತ್ರದ ಜೊತೆಗೆ ಎರಡು ನೆಕ್ಲೇಸ್ ಮತ್ತು ಭಾವಿ ಪತಿಗಾಗಿ 200 ಗ್ರಾಂ.ನ ಚಿನ್ನದ ಚೈನ್ ಸಹ ಖರೀದಿ ಮಾಡಿದ್ದಾರೆ. ಮಂಗಳ ಸೂತ್ರದಲ್ಲಿ ಸ್ಪೆಷಲ್ ಡೈಮೆಂಡ್ ಸಹ ಹಾಕಲಾಗಿದೆಯಂತೆ. ಮುಂಬೈನ ಪ್ರಸಿದ್ಧ ಚಿನ್ನಾಭರಣ ಮಳಿಗೆಯಲ್ಲಿ ದೀಪಿಕಾ 1 ಕೋಟಿ ರೂ. ಶಾಪಿಂಗ್ ಮಾಡಿದ್ದಾರಂತೆ. ದೀಪಿಕಾ ಚಿನ್ನದ ಮಳಿಗೆಗೆ ಬರುವ ಮುನ್ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದೀಪಿಕಾರಿಗಾಗಿಯೇ ಮಳಿಗೆಯನ್ನು ಅರ್ಧ ಗಂಟೆ ಬಂದ್ ಮಾಡಲಾಗಿತ್ತು.

    ಬೆಂಗಳೂರಿನ ನಿವಾಸದಲ್ಲಿ ಮದುವೆ ಶಾಸ್ತ್ರಗಳಲ್ಲಿ ಭಾಗಿಯಾಗಿದ್ದ ದೀಪಿಕಾರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಈ ಮೊದಲು ದೀಪಿಕಾ ಮತ್ತು ರಣ್‍ವೀರ್ ಇಟಲಿಯಲ್ಲಿ ಮದುವೆ ಆಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದ್ರೆ ಎಲ್ಲ ಕುಟುಂಬಸ್ಥರನ್ನು ಇಟಲಿಗೆ ಕರೆದುಕೊಂಡು ಹೋಗಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಯೇ ನಿಶ್ಚಯಿಸಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ಮದುವೆ ಸ್ಥಳದ ಬಗ್ಗೆ ಎರಡು ಕುಟುಂಬಗಳು ಅಧಿಕೃತವಾಗಿ ಹೇಳಿಕೊಂಡಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಭೆಯಲ್ಲಿ ಯುವತಿಯ ಇಮೇಜ್ ನೋಡುವುದರಲ್ಲಿ ಅಧಿಕಾರಿ ಬ್ಯೂಸಿ

    ಸಭೆಯಲ್ಲಿ ಯುವತಿಯ ಇಮೇಜ್ ನೋಡುವುದರಲ್ಲಿ ಅಧಿಕಾರಿ ಬ್ಯೂಸಿ

    ಧಾರವಾಡ: ಕೆಡಿಪಿ ಸಭೆಯಲ್ಲಿ ಸಮಸ್ಯೆಗಳ ಕುರಿತು ಅಧಿಕಾರಿಗಳ ಜೊತೆ ಜನಪ್ರತಿನಿಧಿಗಳು ಚರ್ಚೆ ನಡೆಯೊದು ಸಾಮಾನ್ಯ. ಆದರೆ ಪಂಚಾಯತ್ ಸಭೆಯಲ್ಲಿ ಅಧಿಕಾರಿಯೊಬ್ಬರು ಯುವತಿಯ ಫೋಟೋ ನೋಡುವುದರಲ್ಲಿ ಬ್ಯುಸಿಯಾಗಿದ್ದಿದ್ದು ಕಂಡು ಬಂದಿದೆ.

    ಧಾರವಾಡದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಗಂಭೀರವಾಗಿ ಇರೋದೇ ಇಲ್ಲ. ಬುಧವಾರ ಸಭಾ ಭವನದಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಅಧಿಕಾರಿಯೊಬ್ಬರು ಮೊಬೈಲ್ ನಲ್ಲಿ ಯುವತಿಯ ಇಮೇಜ್ ನೋಡುತ್ತಾ ಕುಳಿತಿದ್ದ ಘಟನೆ ನಡೆದಿದೆ.

    ಮತ್ತೊಬ್ಬ ಮಹಿಳಾ ಅಧಿಕಾರಿ ಮೊಬೈಲ್ ನಲ್ಲಿ ಶಾಪಿಂಗ್ ಮಾಡುತ್ತಾ ಕುಳಿತ್ತಿದ್ದರು. ಕೆಆರ್ ಡಿಸಿಎಲ್‍ನ ಎಇಇ ಲಕ್ಷ್ಮಣ್ ನಾಯಕ ಅವರೇ ಯುವತಿಯ ಫೋಟೊ ನೋಡುತ್ತಾ ಕೂತಿದ್ದ ಅಧಿಕಾರಿ. ಇನ್ನು ಆನ್‍ಲೈನ್‍ನಲ್ಲಿ ಶಾಪಿಂಗ್ ಮಾಡುತ್ತಾ ಇದ್ದ ಮಹಿಳಾ ಅಧಿಕಾರಿ ಯುವಜನ ಸೇವಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂದು ತಿಳಿದು ಬಂದಿದೆ.

  • ಹುಬ್ಬಳ್ಳಿ ಜವಳಿ ಮಾರ್ಕೆಟ್‍ನಲ್ಲಿ ಜಿಟಿಡಿ ಶಾಪಿಂಗ್

    ಹುಬ್ಬಳ್ಳಿ ಜವಳಿ ಮಾರ್ಕೆಟ್‍ನಲ್ಲಿ ಜಿಟಿಡಿ ಶಾಪಿಂಗ್

    ಹುಬ್ಬಳ್ಳಿ: ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ವಾಣಿಜ್ಯ ನಗರಿ ಹುಬ್ಬಳ್ಳಿಯ ಜವಳಿ ಮಾರ್ಕೆಟ್ ನಲ್ಲಿ ಶಾಪಿಂಗ್ ಮಾಡುವ ಮೂಲಕ ಜನರ ಅಚ್ಚರಿಗೆ ಕಾರಣರಾಗಿದ್ದಾರೆ.

    ಹೌದು. ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಸಚಿವರು, ನೇರವಾಗಿ ಜವಳಿ ಮಾರ್ಕೆಟ್ ಗೆ ಭೇಟಿ ನೀಡಿದ್ದಾರೆ. ಈ ವೇಳೆ ಜವಳಿ ಮಾರ್ಕೆಟ್ ಸಾಲಿನಲ್ಲಿ ಒಂದು ಬಟ್ಟೆ ಅಂಗಡಿಗೆ ತೆರಳಿ ಪಂಚೆಗಳನ್ನು ಖರೀದಿ ಮಾಡಿದ್ದಾರೆ.

    ನಾಳೆ ಬೆಳಗಾವಿ ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹೋಗಲು ಹುಬ್ಬಳ್ಳಿಗೆ ಆಗಮಿಸಿದ್ದ ಸಚಿವರು ಹಾಗೆ ಏಕಾಏಕಿ ಮಾರ್ಕೆಟ್ ಹೋಗೆ ಪಂಚೆ ಖರೀದಿ ಮಾಡಿದ್ದಾರೆ. ಇನ್ನು ಜನರು ನೂತನ ಸಚಿವರನ್ನು ಮಾರ್ಕೆಟ್ ನಲ್ಲಿ ಕಂಡು ಖುಷಿ ಪಟ್ಟು ಮಾತನಾಡಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ಉನ್ನತ ಶಿಕ್ಷಣ ಖಾತೆ ಬೇಡ ದೇವೇಗೌಡರು ನಿರಾಕರಿಸಿದ್ದರು. ಆದರೆ ಸಿಎಂ ಕುಮಾರಸ್ವಾಮಿ ಅವರು ಜಿಟಿ ದೇವೇಗೌಡ ಅವರ ಮನವೊಲಿಸಲು ಯಶಸ್ವಿಯಾಗಿದ್ದರು. ಬಳಿಕ ಜೂನ್ 23 ರಂದು ಸಚಿವ ಸ್ಥಾನ ಒಪ್ಪಿಕೊಂಡ ಜಿಟಿಡಿ ವಿಧಾನಸೌದಲ್ಲಿ ತಮ್ಮ ಕಚೇರಿಯಲ್ಲಿ ಪೂಜೆ ಮಾಡಿ ಬಳಿಕ ಕಾರ್ಯಾರಂಭ ಮಾಡಿದ್ದರು.

  • ಈಗ ಅಧಿಕೃತ: ಕೊನೆಗೂ ನಿಗದಿಯಾಯ್ತು ರಣ್‍ವೀರ್-ದೀಪಿಕಾ ಮದುವೆ!

    ಈಗ ಅಧಿಕೃತ: ಕೊನೆಗೂ ನಿಗದಿಯಾಯ್ತು ರಣ್‍ವೀರ್-ದೀಪಿಕಾ ಮದುವೆ!

    ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಮದುವೆಯಾಗುತ್ತಿದ್ದಾರೆ ಎಂಬ ಗಾಳಿಸುದ್ದಿ ಈಗ ಅಧಿಕೃತವಾಗಿದೆ. ಇನ್ನೂ 3-4 ತಿಂಗಳಲ್ಲಿ ದೀಪಿಕಾ ಹಾಗೂ ರಣ್‍ವೀರ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ವರದಿಗಳ ಪ್ರಕಾರ ದೀಪಿಕಾ ಹಾಗೂ ರಣ್‍ವೀರ್ 3-4 ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದಕ್ಕಾಗಿ ದೀಪಿಕಾ ಅವರ ಪೋಷಕರು ಮುಂಬೈನಲ್ಲಿರುವ ರಣ್‍ವೀರ್ ಮನೆಗೆ ಭೇಟಿ ನೀಡಿ ಮದುವೆ ದಿನಾಂಕವನ್ನು ನಿಗದಿಪಡಿಸಿದ್ದಾರೆ. ಈ ಇಬ್ಬರು  ವರ್ಲಿಯ ಹೋಟೆಲ್‍ನಲ್ಲಿ ಕಾಣಿಸಿಕೊಂಡಿದ್ದರು.

    ವಿರಾಟ್ ಹಾಗೂ ಅನುಷ್ಕಾ ಮದುವೆಯಂತೆ ದೀಪಿಕಾ ಹಾಗೂ ರಣ್‍ವೀರ್ ಕೂಡ ಡೆಸ್ಟೀನೇಶನ್ ವೆಡ್ಡಿಂಗ್ ಮಾಡಿಕೊಳ್ಳಲಿದ್ದಾರೆ. ಮುಂಬೈ ಹಾಗೂ ದೆಹಲಿಯಲ್ಲಿ ರಣ್‍ವೀರ್ ಸಂಬಂಧಿಕರು ಇರುವುದರಿಂದ ಈ ಮದುವೆ ಮುಂಬೈಯಲ್ಲೇ ನಡೆಯಬೇಕು ಎಂದು ರಣ್‍ವೀರ್ ಕುಟುಂಬದವರು ತಿಳಿಸಿದ್ದಾರೆ.

    ದಕ್ಷಿಣ ಭಾರತದ ಸಂಪ್ರದಾಯದಂತೆ ರಣ್‍ವೀರ್ ಹಾಗೂ ದೀಪಿಕಾ ಮದುವೆ ನಡೆಯಲಿದ್ದು, ಈಗಾಗಲೇ ದೀಪಿಕಾ ರಣ್‍ವೀರ್ ಕುಟುಂಬದವರ ಜೊತೆ ಮದುವೆಯ ಶಾಪಿಂಗ್ ಮಾಡುತ್ತಿದ್ದಾರೆ. ದೀಪಿಕಾ ಈಗ ಲಂಡನಲ್ಲಿದ್ದು, ರಣ್‍ವೀರ್ ಕುಟುಂಬದ ಜೊತೆ ಚಿನ್ನಾಭರಣ ಖರೀದಿ ಮಾಡುತ್ತಿದ್ದಾರೆ. ಗಲ್ಲಿ ಬಾಯ್ ಚಿತ್ರದ ಚಿತ್ರೀಕರಣದಿಂದಾಗಿ ರಣ್‍ವೀರ್ ತಮ್ಮ ಕುಟುಂಬದ ಜೊತೆ ಶಾಪಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ.

    ದೀಪಿಕಾ ಈಗ ವಿಶಾಲ್ ಭಾರದ್ವಾಜ್ ನಿರ್ದೇಶಿಸುತ್ತಿರುವ ಚಿತ್ರದಲ್ಲಿ ಇರ್ಫಾನ್ ಖಾನ್ ಜೊತೆ ನಟಿಸುತ್ತಿದ್ದು, ರಣ್‍ವೀರ್ ಝೋಯಾ ಅಖ್ತರ್ ನಿರ್ದೇಶಿಸುತ್ತಿರುವ ಗಲ್ಲಿ ಬಾಯ್ ಚಿತ್ರದಲ್ಲಿ ಅಲಿಯಾ ಭಟ್ ಜೊತೆ ನಟಿಸುತ್ತಿದ್ದಾರೆ.

  • ಮಂತ್ರಿಮಾಲ್‍ನಲ್ಲಿ ಮಹಿಳೆ ತಲೆ ಮೇಲೆ ಬಿತ್ತು ಬೃಹತ್ ಬೋರ್ಡ್ – ರಕ್ತ ಸೋರುತ್ತಿದ್ರೂ ಆಸ್ಪತ್ರೆಗೆ ಸೇರಿಸದ ಸಿಬ್ಬಂದಿ

    ಮಂತ್ರಿಮಾಲ್‍ನಲ್ಲಿ ಮಹಿಳೆ ತಲೆ ಮೇಲೆ ಬಿತ್ತು ಬೃಹತ್ ಬೋರ್ಡ್ – ರಕ್ತ ಸೋರುತ್ತಿದ್ರೂ ಆಸ್ಪತ್ರೆಗೆ ಸೇರಿಸದ ಸಿಬ್ಬಂದಿ

    ಬೆಂಗಳೂರು: ಮಂತ್ರಿಮಾಲ್‍ನಲ್ಲಿ ಮತ್ತೆ ಎಡವಟ್ಟಾಗಿದೆ. ಶಾಪಿಂಗ್‍ಗೆ ಹೋಗಿದ್ದ ಮಹಿಳೆ ಮೇಲೆ ಬೃಹತ್ ಬೋರ್ಡ್ ಬಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ.

    ಯಲಹಂಕದ ಗುಣಶೀಲ ಎಂಬವರು ಮಾಲ್‍ಗೆ ಹೋಗಿದ್ದಾಗ ಬಟ್ಟೆಗಳ ಆಫರ್ ಪ್ರದರ್ಶನದ ಬೃಹತ್ ಬೋರ್ಡ್ ಅವರ ತಲೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಗುಣಶೀಲ ಅವರ ತಲೆಗೆ ಗಾಯವಾಗಿದ್ದು, ಏಳು ಸ್ಟಿಚ್ ಹಾಕಲಾಗಿದೆ.

     

    ಘಟನೆ ನಡೆದು ರಕ್ತ ಸೋರುತ್ತಿದ್ದರೂ ಮಂತ್ರಿ ಮಾಲ್‍ನವರು ಪ್ರಥಮ ಚಿಕಿತ್ಸೆ ಮಾಡಿ ಬಿಟ್ಟಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗದೇ ಅಮಾನವೀಯತೆ ಮೆರೆದಿದ್ದಾರೆ. ತಮ್ಮ ಕಡೆಯಿಂದ ತಪ್ಪಾಗಿದ್ರೂ ಮುಚ್ಚಿಕೊಳ್ಳುವ ಯತ್ನ ನಡೆಸಿದ್ದಾರೆ.

     

    ನಂತರ ಗುಣಶೀಲ ಅವರ ಪತಿ ಸ್ಥಳಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಗುಣಶೀಲ ಅವರ ತಲೆಯ ಮುಂಭಾಗಕ್ಕೆ ಏಟು ಬಿದ್ದಿದ್ದು ಎರಡು ದಿನ ಬಿಟ್ಟು ಎಂಆರ್‍ಐ ಮಾಡಿಸೋದಕ್ಕೆ ವೈದ್ಯರು ಸೂಚಿಸಿದ್ದಾರೆ ಅಂತ ತಿಳಿದುಬಂದಿದೆ.

  • ಬಟ್ಟೆ ಶಾಪಿಂಗ್ ಮಾಡೋವಾಗ ಈ 6 ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ

    ಬಟ್ಟೆ ಶಾಪಿಂಗ್ ಮಾಡೋವಾಗ ಈ 6 ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ

    ಶಾಪಿಂಗ್‍ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್‍ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ. ಸೋ…. ಮುಂದಿನ ಸಲ ಶಾಪಿಂಗ್ ಹೋದಾಗ ಈ 6 ಮಿಸ್ಟೇಕ್ಸ್ ಖಂಡಿತ ಮಾಡ್ಬೇಡಿ.

    1. ಗಡಿಬಿಡಿಯಲ್ಲಿ ಶಾಪಿಂಗ್ ಖಂಡಿತ ಮಾಡ್ಬೇಡಿ
    ಅಯ್ಯೋ ಟೈಂ ಇಲ್ಲ.. ಬೇಗ ಹೋಗ್ಬೇಕು ಅಂದುಕೊಂಡು ಎಂದೂ ಶಾಪಿಂಗ್ ಮಾಡ್ಬೇಡಿ. ಇಂತ ಸಂದರ್ಭದಲ್ಲಿ ಬೇರೆ ಬೇರೆ ರೀತಿಯ ಡಿಸೈನ್‍ಗಳನ್ನ ನೋಡದೆ ಮೊದಲು ಅಂಗಡಿಗೆ ಹೋದಾಗ ಯಾವುದು ಕಣ್ಣಿಗೆ ಚೆನ್ನಾಗಿ ಕಾಣುತ್ತೋ ಅದನ್ನೇ ಕೊಂಡುಕೊಳ್ತೀವಿ. ಆದ್ರೆ ಇನ್ನೂ ಸ್ವಲ್ಪ ಸಮಯ ಹುಡುಕಿದ್ರೆ ಅದಕ್ಕಿಂತ ಚೆಂದದ ಡಿಸೈನ್‍ವುಳ್ಳ ಬಟ್ಟೆ ಸಿಗಬಹುದು. ಅಥವಾ ಒಳ್ಳೇ ಆಫರ್ ಕೂಡ ಲಭ್ಯವಾಗಿ ಖರ್ಚು ಕೂಡ ಕಡಿಮೆಯಾಗಬಹುದು.

    2. ಟ್ರಯಲ್ ಮಾಡದೆ ಪರ್ಚೇಸ್ ಮಾಡ್ಬೇಡಿ
    ಕಣ್ಣಿಗೆ ಚೆಂದವಾಗಿ ಕಂಡ ಬಟ್ಟೆಯನ್ನ ಧರಿಸಿ ನೋಡಿದಾಗ ಅದು ನಿಮಗೆ ಸೂಟ್ ಆಗದಿರಬಹುದು. ಅಥವಾ ಫಿಟಿಂಗ್‍ನಲ್ಲಿ ವ್ಯತ್ಯಾಸವಿರುವ ಸಾಧ್ಯತೆಯೂ ಇರುತ್ತದೆ. ಹೀಗಾಗಿ ಯಾವಾಗ್ಲೂ ಟ್ರಯಲ್ ನೋಡಿಯೇ ಬಟ್ಟೆ ಖರೀದಿ ಮಾಡಿ. ಅದರಲ್ಲೂ ವಿವಿಧ ಬ್ರ್ಯಾಂಡ್‍ಗಳ ಜೀನ್ಸ್ ಮತ್ತು ಟಾಪ್‍ಗಳ ಸೈಜ್‍ನಲ್ಲಿ ವ್ಯತ್ಯಾಸವಿರುತ್ತದೆ. ಒಂದು ಬ್ರ್ಯಾಂಡಿನ ಸ್ಮಾಲ್ ಸೈಜಿನ ಟಾಪ್ ಮತ್ತೊಂದು ಬ್ರ್ಯಾಂಡ್‍ನಲ್ಲಿ ಮೀಡಿಯಮ್ ಸೈಜ್‍ನಷ್ಟು ಇರುತ್ತದೆ. ಹೀಗಾಗಿ ಟ್ರಯಲ್ ನೋಡುವುದು ಉತ್ತಮ.

    3. ಒಂದೇ ಡಿಸೈನ್‍ನಲ್ಲಿ ಬೇರೆ ಬೇರೆ ಬಣ್ಣದ ಬಟ್ಟೆ ತಗೋಬೇಡಿ
    ಒಂದು ಟೀ ಶರ್ಟ್/ಟಾಪ್/ಪ್ಯಾಂಟ್ ಇಷ್ಟವಾದ್ರೆ ಅದೇ ಡಿಸೈನ್‍ನಲ್ಲಿ ಮೂರ್ನಾಲ್ಕು ವಿವಿಧ ಬಣ್ಣದ ಟೀ-ಶರ್ಟ್/ಟಾಪ್ ತೆಗೆದುಕೊಳ್ಳೋದನ್ನ ಮಾಡ್ಬೇಡಿ. ಸಾಕಷ್ಟು ವೆರೈಟಿಯ ಡಿಸೈನ್‍ಗಳು ಇರುವಾಗ ಒಂದೇ ಡಿಸೈನ್‍ಗೆ ಅಂಟಿಕೊಳ್ಳೋದು ಯಾಕೆ?

    4. ನಿಮಗೆ ಫಿಟ್ ಆಗದ ಬಟ್ಟೆಯನ್ನ ಅಲ್ಲೇ ಬಿಡಿ
    ಅಯ್ಯೋ ಈ ಟಾಪ್ ಎಷ್ಟೊಂದು ಚೆನ್ನಾಗಿದೆ… ಆದ್ರೆ ನನಗೆ ಸ್ವಲ್ಪ ಟೈಟ್ ಆಗ್ತಿದೆ… ಪರ್ವಾಗಿಲ್ಲ, ಮುಂದೆ ಸಣ್ಣ ಆಗ್ತೀನಿ…. ಎಂತೆಲ್ಲಾ ಅಂದುಕೊಂಡು ನಿಮಗೆ ಫಿಟ್ ಆಗದಿರುವ ಬಟ್ಟೆಯನ್ನ ಖರೀದಿಸಬೇಡಿ. ತುಂಬಾ ಇಷ್ಟವಾದ ಬಟ್ಟೆ ಸ್ವಲ್ಪ ಇದ್ದು, ನಿಮ್ಮ ಸೈಜ್ ನಲ್ಲಿ ಲಭ್ಯವಿಲ್ಲದಿದ್ರೆ ಅದನ್ನ ಟೈಲರ್ ಬಳಿ ಕೊಟ್ಟು ಫಿಟ್ ಮಾಡಿಸಿಕೊಳ್ಳಬಹುದು. ಆದ್ರೆ ಹಾಗಂತ ಯಾವಾಗ್ಲೂ ನಿಮ್ಮ ಸೈಜ್‍ಗೆ ಹೊಂದದ ಬಟ್ಟೆಯನ್ನ ಖರೀದಿಸಬೇಡಿ. ಹಾಗೇ ನೀವು ಪದೇ ಪದೇ ಧರಿಸದ ಬಟ್ಟೆಗೆ, ನಿಮ್ಮ ಸ್ಟೈಲ್‍ಗೆ ಹೊಂದದ ಬಟ್ಟೆಗೆ ದುಡ್ಡು ಸುರೀಬೇಡಿ. ನೀವು ಸಾಮಾನ್ಯವಾಗಿ ಜೀನ್ಸ್ ಧರಿಸಲ್ಲವಾದ್ರೆ ಸುಮ್ಮನೆ ಅದನ್ನ ಖರೀದಿಸಿ ಯಾಕೆ ಮೂಲೆಗಿಡ್ತೀರ? ಯಾವಾಗ್ಲೋ ಟ್ರಿಪ್ ಹೋದಾಗ ಇದನ್ನ ಹಾಕೋಬಹುದು ಅಂತ ಖರೀದಿ ಮಾಡಿದ್ರೆ ತಿಂಗಳಾನುಗಟ್ಟಲೆ ಕಬೋರ್ಡ್‍ನಲ್ಲೇ ಇರುತ್ತೆ.

    5. ಸೇಲ್ ಇದ್ದಾಗ ಶಾಪಿಂಗ್ ಹೋಗಿ
    ಹೊಸ ಡಿಸೈನ್‍ನ ಬಟ್ಟೆಗಳ ಬೆಲೆ ತುಂಬಾ ದುಬಾರಿ ಎನಿಸಿದ್ರೆ ಸ್ವಲ್ಪ ಕಾಯಿರಿ. ಸ್ವಲ್ಪ ಸಮಯದ ನಂತರ ಡಿಸ್ಕೌಂಟ್ ಸೇಲ್ ಹಾಕಿದಾಗ ಅದೇ ಬಟ್ಟೆ ಕಡಿಮೆ ಬೆಲೆ/ ಅರ್ಧ ಬೆಲೆಗೂ ಸಿಗಬಹುದು. ಹಾಗಂತ ಎಲ್ಲಾ ಬಟ್ಟೆಗಳು ಸೇಲ್‍ನಲ್ಲಿ ಬರುತ್ತವೆ ಅಂದ್ಕೋಬೇಡಿ. ಇಂತದ್ದೊಂದು ಜಾಕೇಟ್ ಖರೀದಿಸಬೇಕು ಅಂದ್ಕೊಂಡು ಅದು ತುಂಬಾ ದಿನಗಳ ನಂತರ ಸಿಕ್ಕರೆ ಅದನ್ನ ಆಗಲೇ ಖರೀದಿಸಿದ್ರೆ ಉತ್ತಮ. ಸಾಮಾನ್ಯವಾಗಿ ಸಿಗೋ ಉಡುಪುಗಳಾದ್ರೆ ಸೇಲ್ ಹಾಕಿದಾಗಲೇ ಖರೀದಿ ಮಾಡಿ.

    6. ಫ್ರೆಂಡ್‍ಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೇ ಇರಬೇಡಿ
    ನಿಮ್ಮ ಸ್ಟೈಲ್ ಅಥವಾ ಟೇಸ್ಟ್ ನಿಮ್ಮ ಸ್ನೇಹಿತರಿಗೆ ಇಷ್ಟವಾಗದಿರಬಹುದು. ಅಥವಾ ನೀವು ಆರಿಸಿದ ಬಟ್ಟೆ ಚೆನ್ನಾಗಿಲ್ಲ ಅಂತಲೂ ಅವರು ಹೇಳಿಬಿಡಬಹುದು. ಆದ್ರೆ ಆ ಬಟ್ಟೆಯನ್ನ ಯಾವ ರೀತಿ ಸ್ಟೈಲ್ ಮಾಡಬೇಕು , ಯಾವುದರೊಂದಿಗೆ ಮ್ಯಾಚ್ ಮಾಡಿ ಹಾಕೋಬೇಕು ಅನ್ನೋದು ಅವರಿಗಿಂತ ಚೆನ್ನಾಗಿ ನಿಮಗೆ ಗೊತ್ತಿರುತ್ತದೆ. ಹೀಗಾಗಿ ಗೆಳೆಯ/ ಗೆಳತಿಗೆ ಇಷ್ಟವಾಗ್ಲಿಲ್ಲ ಅಂತ ನೀವು ಇಷ್ಟಪಟ್ಟಿದ್ದನ್ನ ಖರೀದಿಸದೆ ಇದ್ರೆ ನಿಮಗೇ ಲಾಸ್. ಸ್ನೇಹಿತರಿಗಿಂತ ನಿಮ್ಮ ಟೇಸ್ಟ್ ಭಿನ್ನವಾಗಿದ್ರೆ ಒಬ್ಬರೇ ಶಾಪಿಂಗ್ ಮಾಡಲು ಹೋಗಿ.

    ಈ ಮಿಸ್ಟೇಕ್ಸ್ ಗಳನ್ನ ಮಾಡದಿದ್ರೆ ನೀವು ಬಟ್ಟೆ ಖರೀದಿಯಲ್ಲಿ ಖಂಡಿತವಾಗ್ಲೂ ಭೇಷ್ ಎನಿಸಿಕೊಳ್ಳಬಹುದು.

  • 225 ಮೊಬೈಲ್ ಬುಕ್ಕಿಂಗ್, 166 ಬಾರಿ ರಿಫಂಡ್: 52 ಲಕ್ಷ ವಂಚಿಸಿದ್ದ ಕಳ್ಳ ಒಂದು ತಪ್ಪಿನಿಂದ ಸಿಕ್ಕಿಬಿದ್ದ!

    225 ಮೊಬೈಲ್ ಬುಕ್ಕಿಂಗ್, 166 ಬಾರಿ ರಿಫಂಡ್: 52 ಲಕ್ಷ ವಂಚಿಸಿದ್ದ ಕಳ್ಳ ಒಂದು ತಪ್ಪಿನಿಂದ ಸಿಕ್ಕಿಬಿದ್ದ!

    ನವದೆಹಲಿ: ಆನ್‍ಲೈನ್ ನಲ್ಲಿ ಮೊಬೈಲ್ ಬುಕ್ ಮಾಡಿ, ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ಮಂಗಳವಾರ ದೆಹಲಿಯ ಪೊಲೀಸರು ಬಂಧಿಸಿದ್ದಾರೆ.

    21 ವರ್ಷದ ಶಿವಂ ಚೋಪ್ರಾ ಬಂಧಿತ ಆರೋಪಿ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, 166 ಬಾರಿ ಕಂಪನಿಗಳಿಂದ ಮರಳಿ ಹಣ ಪಡೆದಿದ್ದಾನೆ. ಇನ್ನೂ ಆನ್‍ಲೈನ್ ನಲ್ಲಿ ಬುಕ್ ಮಾಡಿಕೊಂಡಿರುವ ಎಲ್ಲ ಮೊಬೈಲ್ ಗಳನ್ನು ಬೇರೆಯವರಿಗೆ ಮಾರಾಟ ಮಾಡಿದ್ದಾನೆ.

    ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ ಸದ್ಯ ನಿರುದ್ಯೋಗಿಯಾಗಿದ್ದು, ಈ ಹಿಂದೆ ಹೋಟೆಲ್ ಗಳಲ್ಲಿ ಕೆಲವು ದಿನ ಕೆಲಸ ಮಾಡಿಕೊಂಡಿದ್ದ. ಕಳೆದ ವಾರ ಆನ್‍ಲೈನ್ ಚೀಟಿಂಗ್ ಸಂಬಂಧಿಸಿದಂತೆ ಶಿವಂ ಬಗ್ಗೆ ಇ-ಕಾಮರ್ಸ್ ಕಂಪನಿಯೊಂದು ತನ್ನ ಆಂತರಿಕ ತನಿಖೆಯ ಅನ್ವಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

    141 ಸಿಮ್ ಕಾರ್ಡ್ ಹೊಂದಿದ್ದ: ಶಿವಂ ತನಗೆ ಪರಿಚಯವಿರುವ ಮೊಬೈಲ್ ಅಂಗಡಿ ಮಾಲೀಕ ಸಚಿನ್ ಜೈನ್ ಎಂಬಾತನಿಂದ 141 ಸಿಮ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದ. ಈ ನಂಬರ್ ಗಳಿಂದ 50ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಕ್ರಿಯೇಟ್ ಮಾಡಿಕೊಂಡಿದ್ದನು. ಆದರೆ ಯಾವುದೇ ಸಿಮ್ ಗಳಿಗೆ ತನ್ನ ಅಧಿಕೃತ ದಾಖಲೆಗಳನ್ನು ನೀಡಿ, ಖರೀದಿಸಿಲ್ಲ. ಎಲ್ಲ ಸಿಮ್ ಗಳಿಗೂ ಸಚಿನ್ ನಕಲಿ ದಾಖಲೆಗಳನ್ನು ನೀಡಿದ್ದ. ನಕಲಿ ಸಿಮ್ ನಂಬರ್ ಮತ್ತು ಮೇಲ್ ಐಡಿಗಳಿಂದ ಆನ್‍ಲೈನ್ ಶಾಪಿಂಗ್ ಅಕೌಂಟ್ ಓಪನ್ ಮಾಡಿ, ಅವುಗಳ ಮೂಲಕವೇ ಶಿವಂ ವ್ಯವಹಾರ ಮಾಡುತ್ತಿದ್ದನು ಎಂದು ಡಿಸಿಪಿ ಮಿಲಿಂದ್ ದುಂಬೆರೆ ಹೇಳಿದ್ದಾರೆ.

    ಅಡ್ರೆಸ್ ಹೇಳುತ್ತಿರಲಿಲ್ಲ: ಆನ್‍ಲೈನ್ ನಲ್ಲಿ ಮೊಬೈಲ್ ಗಳನ್ನು ಬುಕ್ ಮಾಡಿದ ಶಿವಂ, ಡೆಲಿವರಿ ಅಡ್ರೆಸ್ ಸರಿಯಾಗಿ ಹೇಳುತ್ತಿರಲಿಲ್ಲ. ಡೆಲಿವರಿ ಬಾಯ್ ಗಳು ಕರೆ ಮಾಡಿದಾಗ ಪ್ರತಿಬಾರಿಯೂ ಬೇರೆ ಬೇರೆ ಸ್ಥಳಗಳಲ್ಲಿ ಮೊಬೈಲ್ ಗಳನ್ನು ಪಡೆದುಕೊಳ್ಳುತ್ತಿದ್ದನು.

    ಮೊಬೈಲ್ ಬಂದ ಕೂಡಲೇ ಕಂಪನಿಗೆ ಕರೆ ಮಾಡಿ ಖಾಲಿ ಡಬ್ಬ ಮಾತ್ರ ಬಂದಿದೆ ಎಂದು ಹೇಳುತ್ತಿದ್ದನು. ಗ್ರಾಹಕರ ಹಿತಾಸಕ್ತಿಗಾಗಿ ಕಂಪನಿ ಶಿವಂನಿಗೆ ಮೊಬೈಲ್ ಗೆ ನೀಡಿದ ಹಣದೊಂದಿಗೆ ಗಿಫ್ಟ್ ವೋಚರ್ ಸಹ ನೀಡುತ್ತಿದ್ದರು. ಶುಭಂ ಎಂಬ ಹೆಸರಿನ ಮೂಲಕ ಆನ್‍ಲೈನ್ ವ್ಯವಹಾರ ನಡೆಸುತ್ತಿದ್ದನು.

    ಕೆಲವು ತಪ್ಪು ಮಾಡಿದ್ದ: ಶಿವಂ ತನ್ನ ವ್ಯವಹಾರದಲ್ಲಿ ಕೆಲವು ತಪ್ಪಗಳನ್ನು ಮಾಡಿದ್ದ, ಪ್ರತಿಬಾರಿಯೂ ಶಾಪಿಂಗ್ ಮಾಡುವಾಗ ಶುಭಂ ಎಂಬ ಹೆಸರನ್ನು ಹೇಳುತ್ತಿದ್ದನು. ಮೊಬೈಲ್‍ಗಳು ಪ್ರತಿಬಾರಿಯೂ ದೆಹಲಿಯ ತ್ರಿನಗರದಿಂದಲೇ ಬುಕ್ ಮಾಡಲಾಗುತ್ತಿತ್ತು ಹಾಗೂ ಮೂವರು ಡೆಲಿವರಿ ಬಾಯ್ ಗಳು ಈತನನ್ನು ಗುರುತಿಸಿದ್ದರು. ಇದರಿಂದ ಅನುಮಾನಗೊಂಡ ಕಂಪನಿ ಈ ಸಂಬಂಧ ವಾಯುವ್ಯ ದೆಹಲಿಯ ಶಾಲಿಮಾರ್ ಭಾಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

    ದೂರು ದಾಖಲಾದ ಬಳಿಕ ಪೊಲೀಸರು ಆರೋಪಿ ಶಿವಂ ಚೋಪ್ರಾನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಹಲವು ಬ್ಯಾಂಕ್ ಖಾತೆಗಳನ್ನು ಹೊಂದಿದ್ದ ಎನ್ನುವುದು ಪ್ರಾಥಮಿಕ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.