Tag: ಶಾರುಖ್ ಖಾನ್

  • ‘ಪಠಾಣ್’ ದೇಶಭಕ್ತಿ ಸಾರುವ ಸಿನಿಮಾ : ನಟ ಶಾರುಖ್ ಖಾನ್

    ‘ಪಠಾಣ್’ ದೇಶಭಕ್ತಿ ಸಾರುವ ಸಿನಿಮಾ : ನಟ ಶಾರುಖ್ ಖಾನ್

    ನಿನ್ನೆಯಷ್ಟೇ ಪಠಾಣ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಸಿನಿಮಾದ ಹಲವು ಅಂಶಗಳನ್ನು ಈ ಟ್ರೈಲರ್ ನಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಉಗ್ರವಾದಿಗಳು ಮತ್ತು ಭಾರತದ ರಕ್ಷಣೆ ಹೊತ್ತ ‘ರಾ’ ಏಜೆಂಟ್ ನಡುವಿನ ಕಥಾಹಂದರ ಇದಾಗಿದ್ದು, ದೇಶದ ಅಪ್ಪಟ ಪ್ರೇಮಿಯೊಬ್ಬ ಭಯೋತ್ಪಾದಕರನ್ನು ಹೇಗೆ ಹಿಮ್ಮೆಟ್ಟಿಸುತ್ತಾನೆ ಎನ್ನುವ ಸಾರವನ್ನು ಈ ಸಿನಿಮಾ ಹೊಂದಿದೆ. ಹೀಗಾಗಿಯೇ ಇದೊಂದು ಅಪ್ಪಟ ದೇಶಭಕ್ತಿ ಸಾರುವ ಸಿನಿಮಾ ಎಂದಿದ್ದಾರೆ ಶಾರುಖ್ ಖಾನ್.

    ಅನೇಕ ಅಚ್ಚರಿ ಸಂಗತಿಗಳೊಂದಿಗೆ ಈ ಟ್ರೈಲರ್ ಗಮನ ಸೆಳೆಯುತ್ತಿದ್ದು, ಕೆಲವು ಪಾತ್ರಗಳ ಹಿನ್ನೆಲೆಯನ್ನೂ ಟ್ರೈಲರ್ ನಲ್ಲಿ ರಿವಿಲ್ ಮಾಡುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು.  ಈ ಸಿನಿಮಾದಲ್ಲಿ ಖ್ಯಾತ ಬಾಲಿವುಡ್ ನಟ ಜಾನ್ ಅಬ್ರಾಹಂ ಉಗ್ರ ಸಂಘಟನೆಯ ಮುಖ್ಯಸ್ಥನಾಗಿ ಕಾಣಸಿಕೊಂಡಿದ್ದರೆ, ಶಾರುಖ್ ರಾ ಏಜೆಂಟ್ ಪಾತ್ರವನ್ನು ಮಾಡಿದ್ದಾರೆ.

    ಔಟ್ ಫುಟ್ ಎಕ್ಸ್ ಎನ್ನುವ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಜಾನ್ ಅಬ್ರಾಹಂ, ಈ ಸಂಘಟನೆಯ ಮೂಲಕ ಭಾರತದ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಾರೆ. ಈ ದಾಳಿಯನ್ನು ಭಾರತ ರಾ ಏಜೆಂಟ್ ಆಗಿರುವ ಶಾರುಖ್ ಖಾನ್ ಹೇಗೆ ತಡೆಯುತ್ತಾರೆ ಎನ್ನುವುದೇ ಪಠಾಣ್ ಸಿನಿಮಾದ ಕಥಾ ಹಂದರ. ಟ್ರೈಲರ್ ನಲ್ಲಿ ಶಾರುಖ್ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಅನೇಕ ಸಾಹಸಮಯ ದೃಶ್ಯಗಳಲ್ಲಿ ಅವರು ವಯಸ್ಸಿಗೂ ಮೀರಿದ ಆ್ಯಕ್ಷನ್ ಮಾಡಿದ್ದಾರೆ. ಇಡೀ ಟ್ರೈಲರ್ ಆ್ಯಕ್ಷನ್ ದೃಶ್ಯಗಳಿಂದಲೇ ತುಂಬಿದೆ.

    ನಾನಾ ಕಾರಣಗಳಿಂದಾಗಿ ವಿವಾದಕ್ಕೆ ಕಾರಣವಾಗಿರುವ ಈ ಸಿನಿಮಾ, ದೇಶಪ್ರೇಮವನ್ನು ಸಾರಲಿದೆ ಎಂದು ಈ ಹಿಂದೆಯೇ ಶಾರುಖ್ ಹೇಳಿದ್ದರು. ಸಿನಿಮಾ ನೋಡಿದ ನಂತರ ಮಾತನಾಡಿ ಎಂದೂ ಅವರು ವಿರೋಧಿಗಳಿಗೆ ಪ್ರತಿಕ್ರಿಯಿಸಿದ್ದರು. ಕಥಾ ಹಂದರ ಮತ್ತು ಶಾರುಖ್ ಮಾಡಿರುವ ಪಾತ್ರವನ್ನು ಗಮನಿಸಿದರೆ, ಉಗ್ರರಿಂದ ಭಾರತವನ್ನು ತಪ್ಪಿಸುವಂತಹ ಕಥಾಹಂದರ ಇರು ಹೊಂದಿದೆ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ.

    ಪಠಾಣ್ ಸಿನಿಮಾದ ಹಾಡಿನಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಈ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಅಭಿಯಾನ ಶುರುವಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಚಿತ್ರವನ್ನು ನಿಷೇಧಿಸಬೇಕು ಎಂದು ಹೋರಾಟಗಳು ನಡೆದಿವೆ. ಈ ಸಂದರ್ಭದಲ್ಲಿ ಟ್ರೈಲರ್ ಬಿಡುಗಡೆ ಆಗಿದ್ದು, ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾದ ಕಥೆಯಿಂದಾಗಿ ಚಿತ್ರವನ್ನು ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರಾ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಸಿನಿಮಾದಲ್ಲಿ ಉಗ್ರನಾಗಿ ಕಾಣಿಸಿಕೊಂಡ ಬಾಲಿವುಡ್ ನಟ ಜಾನ್ ಅಬ್ರಾಹಂ

    ‘ಪಠಾಣ್’ ಸಿನಿಮಾದಲ್ಲಿ ಉಗ್ರನಾಗಿ ಕಾಣಿಸಿಕೊಂಡ ಬಾಲಿವುಡ್ ನಟ ಜಾನ್ ಅಬ್ರಾಹಂ

    ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅನೇಕ ಅಚ್ಚರಿ ಸಂಗತಿಗಳೊಂದಿಗೆ ಈ ಟ್ರೈಲರ್ ಗಮನ ಸೆಳೆಯುತ್ತಿದೆ. ಅಲ್ಲದೇ, ಕೆಲವು ಪಾತ್ರಗಳ ಹಿನ್ನೆಲೆಯನ್ನೂ ಅದು ರಿವಿಲ್ ಮಾಡಿದೆ. ಈ ಸಿನಿಮಾದಲ್ಲಿ ಖ್ಯಾತ ಬಾಲಿವುಡ್ ನಟ ಜಾನ್ ಅಬ್ರಾಹಂ ಉಗ್ರ ಸಂಘಟನೆಯ ಮುಖ್ಯಸ್ಥನಾಗಿ ಕಾಣಸಿಕೊಂಡಿದ್ದರೆ, ಶಾರುಖ್ ರಾ ಏಜೆಂಟ್ ಪಾತ್ರವನ್ನು ಮಾಡಿದ್ದಾರೆ.

    ಔಟ್ ಫುಟ್ ಎಕ್ಸ್ ಎನ್ನುವ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಜಾನ್ ಅಬ್ರಾಹಂ, ಈ ಸಂಘಟನೆಯ ಮೂಲಕ ಭಾರತದ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಾರೆ. ಈ ದಾಳಿಯನ್ನು ಭಾರತ ರಾ ಏಜೆಂಟ್ ಆಗಿರುವ ಶಾರುಖ್ ಖಾನ್ ಹೇಗೆ ತಡೆಯುತ್ತಾರೆ ಎನ್ನುವುದೇ ಪಠಾಣ್ ಸಿನಿಮಾದ ಕಥಾ ಹಂದರ. ಟ್ರೈಲರ್ ನಲ್ಲಿ ಶಾರುಖ್ ಸಖತ್ತಾಗಿ ಕಾಣಿಸಿಕೊಂಡಿದ್ದಾರೆ. ಅನೇಕ ಸಾಹಸಮಯ ದೃಶ್ಯಗಳಲ್ಲಿ ಅವರು ವಯಸ್ಸಿಗೂ ಮೀರಿದ ಆ್ಯಕ್ಷನ್ ಮಾಡಿದ್ದಾರೆ. ಇಡೀ ಟ್ರೈಲರ್ ಆ್ಯಕ್ಷನ್ ದೃಶ್ಯಗಳಿಂದಲೇ ತುಂಬಿದೆ. ಇದನ್ನೂ ಓದಿ:ಎಷ್ಟೇ ಕಷ್ಟ ಬಂದರೂ ಸಿನಿಮಾ ಮೇಲಿನ ಪ್ರೀತಿ ಕಳೆದುಕೊಂಡಿಲ್ಲ: ಗಳಗಳನೇ ಅತ್ತ ಸಮಂತಾ

    ನಾನಾ ಕಾರಣಗಳಿಂದಾಗಿ ವಿವಾದಕ್ಕೆ ಕಾರಣವಾಗಿರುವ ಈ ಸಿನಿಮಾ, ದೇಶಪ್ರೇಮವನ್ನು ಸಾರಲಿದೆ ಎಂದು ಈ ಹಿಂದೆಯೇ ಶಾರುಖ್ ಹೇಳಿದ್ದರು. ಸಿನಿಮಾ ನೋಡಿದ ನಂತರ ಮಾತನಾಡಿ ಎಂದೂ ಅವರು ವಿರೋಧಿಗಳಿಗೆ ಪ್ರತಿಕ್ರಿಯಿಸಿದ್ದರು. ಕಥಾ ಹಂದರ ಮತ್ತು ಶಾರುಖ್ ಮಾಡಿರುವ ಪಾತ್ರವನ್ನು ಗಮನಿಸಿದರೆ, ಉಗ್ರರಿಂದ ಭಾರತವನ್ನು ತಪ್ಪಿಸುವಂತಹ ಕಥಾಹಂದರ ಇರು ಹೊಂದಿದೆ ಎಂದು ಮೇಲ್ನೋಟಕ್ಕೆ ತಿಳಿಯುತ್ತದೆ.

    ಪಠಾಣ್ ಸಿನಿಮಾದ ಹಾಡಿನಲ್ಲಿ ಹಿಂದೂಗಳ ಭಾವನೆ ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಈ ಸಿನಿಮಾವನ್ನು ಬಾಯ್ಕಾಟ್ ಮಾಡಿ ಎನ್ನುವ ಅಭಿಯಾನ ಶುರುವಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಚಿತ್ರವನ್ನು ನಿಷೇಧಿಸಬೇಕು ಎಂದು ಹೋರಾಟಗಳು ನಡೆದಿವೆ. ಈ ಸಂದರ್ಭದಲ್ಲಿ ಟ್ರೈಲರ್ ಬಿಡುಗಡೆ ಆಗಿದ್ದು, ಅದ್ಭುತ ರೆಸ್ಪಾನ್ಸ್ ಸಿಗುತ್ತಿದೆ. ಸಿನಿಮಾದ ಕಥೆಯಿಂದಾಗಿ ಚಿತ್ರವನ್ನು ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರಾ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನೋರಾ ಫತೇಹಿ ಜೊತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ಪಾಕಿಸ್ತಾನ ನಟಿಯ ಜೊತೆ ಆರ್ಯನ್ ಖಾನ್ ಪಾರ್ಟಿ

    ನೋರಾ ಫತೇಹಿ ಜೊತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ಪಾಕಿಸ್ತಾನ ನಟಿಯ ಜೊತೆ ಆರ್ಯನ್ ಖಾನ್ ಪಾರ್ಟಿ

    ಬಾಲಿವುಡ್ (Bollywood) ಬಾದಶಾ ಶಾರುಖ್ ಖಾನ್ (Sharukh Khan) ಪುತ್ರ ಆರ್ಯನ್ ಖಾನ್, ಡ್ರಗ್ಸ್ ಕೇಸ್ ನಂತರ ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ನಟಿ ನೋರಾ ಫತೇಹಿ ಜೊತೆಗಿನ ಡೇಟಿಂಗ್ ವಿಷ್ಯವಾಗಿ ಆರ್ಯನ್ ಸುದ್ದಿಯಲ್ಲಿದ್ದರು. ಈಗ ಪಾಕಿಸ್ತಾನ ನಟಿ ಜೊತೆಗಿನ ಫೋಟೋ ವಿಚಾರವಾಗಿ ಆರ್ಯನ್ ಖಾನ್ (Aryan Khan) ಸುದ್ದಿಯಲ್ಲಿದ್ದಾರೆ.

    2023 ಈ ಹೊಸ ವರ್ಷವನ್ನ ಅದ್ದೂರಿಯಾಗಿ ಸ್ವಾಗತಿಸಲು ಆರ್ಯನ್ ಖಾನ್ ಹಾಗೂ ಅವರ ಸಹೋದರಿ ಸುಹಾನಾ ಖಾನ್ (Suhana Khan) ದುಬೈಗೆ ತೆರಳಿದ್ದರು. ಈ ಪಾರ್ಟಿಯಲ್ಲಿ ನೋರಾ ಕೂಡ ಇದ್ದರು. ಹಾಗಾಗಿ ನೋರಾ ಜೊತೆಗಿನ ಡೇಟಿಂಗ್ ವಿಷ್ಯವಾಗಿ ಆರ್ಯನ್ ಸುದ್ದಿಯಲ್ಲಿದ್ದರು. ಇದೇ ಪಾರ್ಟಿಯಲ್ಲಿ ಪಾಕಿಸ್ತಾನದ ನಟಿ ಸಾದಿಯಾ ಖಾನ್ (Sadia Khan) ಕೂಡ ಭಾಗಿ ಆಗಿದ್ದರು. ಪಾರ್ಟಿಯಲ್ಲಿ ತೆಗೆದ ಆರ್ಯನ್ ಜೊತೆಗಿನ ಫೋಟೋವನ್ನ ಸಾದಿಯಾ ಹಂಚಿಕೊಂಡಿದ್ದಾರೆ.

    ಸಾದಿಯಾ ಅವರು ಇತ್ತೀಚೆಗೆ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಆರ್ಯನ್ ಖಾನ್ ಜತೆಗಿನ ಫೋಟೋ ಹಂಚಿಕೊಂಡಿದ್ದರು. ಈ ಫೋಟೋಗೆ ಹೊಸವರ್ಷದ ಸಂದರ್ಭದಲ್ಲಿ ತೆಗೆದ ಫೋಟೋ ಎಂದು ಅಡಿಬರಹ ನೀಡಿದ್ದಾರೆ. ಈ ಪಾರ್ಟಿಯಲ್ಲಿ ಬಾಲಿವುಡ್‌ನ ಹಲವರು ಭಾಗಿ ಆಗಿದ್ದರು. ಕರಣ್ ಜೋಹರ್, ನೋರಾ ಮೊದಲಾದವರು ಇದ್ದರು. ನಟಿ ಸಾದಿಯಾ ಅವರು ಹಲವು ಟಿವಿ ಶೋಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರಿಗೆ ಈಗ 35 ವರ್ಷ ವಯಸ್ಸು. ಅವರು 2019ರ ಸೀರಿಯಲ್ ಒಂದರಲ್ಲಿ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಅವರು ಯಾವುದೇ ಧಾರಾವಾಹಿಗಳಲ್ಲಿ ನಟಿಸಿಲ್ಲ. ಇದನ್ನೂ ಓದಿ: ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿಗೆ ಶೂಟಿಂಗ್‌ ವೇಳೆ ಅಪಘಾತ: ಆಸ್ಪತ್ರೆಗೆ ದಾಖಲು

    ಆರ್ಯನ್ ಖಾನ್ ಅವರು ನಿರ್ದೇಶನಕ್ಕೆ ಇಳಿಯುತ್ತಿದ್ದಾರೆ. ಶಾರುಖ್ ಖಾನ್ ಒಡೆತನದ `ರೆಡ್ ಚಿಲ್ಲೀಸ್’ ನಿರ್ಮಾಣ ಸಂಸ್ಥೆಯ ಅಡಿ ವೆಬ್ ಸಿರೀಸ್‌ಗೆ ನಿರ್ದೇಶನ ಮಾಡುವ ಮೂಲಕ ಬಣ್ಣದ ಲೋಕಕ್ಕೆ ಲಗ್ಗೆ ಇಡ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಿಗ್ ಬಿ ಮೊಮ್ಮಗನ ಜೊತೆ ಶಾರುಖ್ ಖಾನ್ ಪುತ್ರಿ ಡೇಟಿಂಗ್

    ಬಿಗ್ ಬಿ ಮೊಮ್ಮಗನ ಜೊತೆ ಶಾರುಖ್ ಖಾನ್ ಪುತ್ರಿ ಡೇಟಿಂಗ್

    ಬಾಲಿವುಡ್ (Bollywood)  ಅಂಗಳದ ಬಿಗ್ ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಮೊಮ್ಮಗ ಅಗಸ್ತ್ಯ ನಂದಾ (Agastya Nanda) ಜೊತೆ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ (Suhana Khan) ಡೇಟಿಂಗ್ ಮಾಡ್ತಿದ್ದಾರೆ. ಕಳೆದ ಕೆಲ ಸಮಯದಿಂದ ಈ ಸುದ್ದಿ, ಅನೇಕರ ಚರ್ಚೆಗೆ ಗ್ರಾಸವಾಗಿದೆ.

    ಶಾರುಖ್ ಖಾನ್ (Sharukh Khan) ಅವರ ಪುತ್ರಿ ಸುಹಾನಾ ಜೊತೆ ಅಮಿತಾಭ್ ಅವರ ಮೊಮ್ಮಗ ಅಗಸ್ತ್ಯಗೆ ಲವ್ ಆಗಿದೆಯಂತೆ. ಇಬ್ಬರೂ ಡೇಟಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿ ಬಿಟೌನ್ ಅಂಗಳದಲ್ಲಿ ಭಾರಿ ಸುದ್ದಿ ಮಾಡ್ತಿದೆ.

    ಇತ್ತೀಚೆಗಷ್ಟೇ ರಣ್‌ಬೀರ್ ಕಪೂರ್ ಅವರ ನ್ಯೂ ಇಯರ್ ಪಾರ್ಟಿಯಲ್ಲಿ ಅಗಸ್ತ್ಯ ನಂದಾ ಸುಹಾನಾ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ವೇಳೆ ಸುಹಾನಾರನ್ನು ತನ್ನ ಇಡೀ ಕುಟುಂಬಕ್ಕೆ ಅಗಸ್ತ್ಯ ಪರಿಚಯಿಸಿದ್ದರು. ಇದನ್ನೂ ಓದಿ: ಅನಾರೋಗ್ಯದ ನಂತರ ಫಸ್ಟ್ ಟೈಮ್ ಕ್ಯಾಮೆರಾ ಕಣ್ಣಿಗೆ ಸೆರೆಯಾದ ಸಮಂತಾ

    ಇನ್ನೂ `ದಿ ಆರ್ಚೀಸ್’ ಚಿತ್ರದ ಸೆಟ್‌ನಲ್ಲಿ ಸಿನಿಮಾ ಜರ್ನಿ ಜೊತೆ ಲವ್ ಶುರುವಾಗಿದೆ. ಚಿತ್ರೀಕರಣದ ವೇಳೆ ಅಗಸ್ತ್ಯ ಮತ್ತು ಸುಹಾನಾ ನಡುವೆ ಪ್ರೇಮಾಂಕುರವಾಗಿದೆ. ಮಗನ ಪ್ರೀತಿಗೆ ಅಮಿತಾಭ್ ಮಗಳು ಶ್ವೇತಾ ಬಚ್ಚನ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರಂತೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಿಪ್ಪಿ ಹುಟ್ಟು ಹಬ್ಬಕ್ಕೆ ‘ಪಠಾಣ್’ ಸಿನಿಮಾದ ವಿಶೇಷ ಪೋಸ್ಟರ್ ರಿಲೀಸ್

    ಡಿಪ್ಪಿ ಹುಟ್ಟು ಹಬ್ಬಕ್ಕೆ ‘ಪಠಾಣ್’ ಸಿನಿಮಾದ ವಿಶೇಷ ಪೋಸ್ಟರ್ ರಿಲೀಸ್

    ಬಾಲಿವುಡ್  ಖ್ಯಾತ ನಟಿ ದೀಪಿಕಾ ಪಡುಕೋಣೆ ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತಡೇಗಾಗಿಯೇ ಪಠಾಣ್ ಸಿನಿಮಾ ಟೀಮ್ ವಿಶೇಷ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಈ ಪೋಸ್ಟರ್ ನಲ್ಲಿ ದೀಪಿಕಾ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಶಾರುಖ್ ಖಾನ್ ಪೋಸ್ಟರ್ ಅನ್ನು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ರಿಲೀಸ್ ಮಾಡಿ, ಶುಭ ಹಾರೈಸಿದ್ದಾರೆ. ಅವರ ನಟನೆಗೆ ಹಾಡಿ ಹೊಗಳಿದ್ದಾರೆ. ಹುಟ್ಟ ಹಬ್ಬಕ್ಕೆ ಶುಭ ಹಾರೈಸಿದ್ದಾರೆ.

    ನಿನ್ನೆಯಷ್ಟೇ ಪಠಾಣ್ ಸಿನಿಮಾಗೆ ಸೆನ್ಸಾರ್ ಮಂಡಳಿಯು ಕೊನೆಗೂ ಪ್ರಮಾಣ ಪತ್ರವನ್ನು ಕೊಟ್ಟಿದ್ದು, ಕೆಲವು ಚಿತ್ರಿಕೆಗಳಿಗೆ ಕತ್ತರಿ ಪ್ರಯೋಗ ಮಾಡಿದೆ. ದೀಪಿಕಾ ಪಡುಕೋಣೆಯು ಕುಣಿದ ‘ಬೇಷರಂ ರಂಗ್’ ಹಾಡಿನ ಅಶ್ಲೀಲ ಭಂಗಿಗಳನ್ನು ತಗೆದು ಹಾಕುವಂತೆ ಸೂಚಿಸಿದೆ. ಈ ಹಾಡಿನಲ್ಲಿ ಅಶ್ಲೀಲವಾಗಿ, ಒಳ ಉಡುಪುಗಳು ಕಾಣುವಂತೆ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡುವಂತಹ ಎಲ್ಲ ಸಂಗತಿಗಳನ್ನೂ ಕಟ್ ಮಾಡಿಸಿದೆ. ಇಷ್ಟೆಲ್ಲ ಮುಗಿದ ನಂತರವೇ ಈ ಚಿತ್ರಕ್ಕೆ ಯು/ ಎ ಸರ್ಟಿಫಿಕೇಟ್ ಪ್ರಮಾಣಪತ್ರವನ್ನು ನೀಡಿದೆ.

    ಅಲ್ಲದೇ, ಸಿನಿಮಾದ ಡೈಲಾಗ್ ಮೇಲೂ ಸೆನ್ಸಾರ್ ಮಂಡಳಿಯು ಅಧಿಕಾರ ಚಲಾಯಿಸಿದ್ದು, ಕೆಲವು ಪದಗಳನ್ನು ಮಾರ್ಪಾಡು ಮಾಡುವಂತೆ ಸೂಚಿಸಿದೆ. ಬಾಲಿವುಡ್ ಮಾಧ್ಯಮಗಳು ವರದಿ ಮಾಡಿದಂತೆ. ‘ಲಂಗ್ಡೆ ಲುಲ್ಲೆ’ ಪದದ ಬದಲು ‘ಟೂಟೆ ಪೂಟೆ’ ಎಂದು ಬದಲಾಯಿಸಲು, 13 ಕಡೆ ‘ಪಿಎಂಓ’ ಪದವನ್ನು ತಗೆದು ಹಾಕುವಂತೆ ಸೂಚಿಸಿದೆ. ‘ಮಿಸಸ್ ಭಾರತ್ ಮಾತಾ’ ಎನ್ನುವ ಮಾತಿನ ಬದಲಾಗಿ ‘ಹಮಾರಿ ಭಾರತ್ ಮಾತಾ’ ಎಂದು ಡಬ್ ಮಾಡುವಂತೆ ಸೂಚಿಸಿದೆ. ಹೀಗೆ ಸಾಕಷ್ಟು ಪದಗಳನ್ನು ಬದಲಿಸಿ, ಬೇರೆ ಪದವನ್ನು ಬಳಸುವಂತೆ ಸೆನ್ಸಾರ್ ಮಂಡಳಿಯು ಸೂಚಿಸಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಯಶ್ ಹೊಸ ಸಿನಿಮಾದ ಬಜೆಟ್ ಬರೋಬ್ಬರಿ 400 ಕೋಟಿ: ಜ.8ಕ್ಕೆ ಘೋಷಣೆ

    ಸೆನ್ಸಾರ್ ಮಂಡಳಿಯು ಏನೇ ಸೂಚಿಸಿದ್ದರು, ಚಿತ್ರತಂಡ ಚಿತ್ರಿಕೆಗಳನ್ನು ಕಟ್ ಮಾಡಿದ್ದರೂ, ಪ್ರತಿಭಟನೆ ಮಾತ್ರ ನಿಂತಿಲ್ಲ. ಇವತ್ತು ಗುಜರಾತ್ ನ ಅಹ್ಮದಾಬಾದ್ ನ ಮಾಲ್ ಒಂದರಲ್ಲಿ ಪಠಾಣ್ ಸಿನಿಮಾದ ಪೋಸ್ಟರ್ ಅಂಟಿಸಲಾಗಿತ್ತು. ಈ ಪೋಸ್ಟರ್ ಅನ್ನು ತಗೆದು ಹಾಕುವಂತೆ ಭಜರಂಗ ದಳದ ಕಾರ್ಯಕರ್ತರು ಥಿಯೇಟರ್ ಮಾಲೀಕರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಪುರಸ್ಕರಿಸದೇ ಹೋದಾಗ, ಚಿತ್ರಮಂದಿರದ ಮೇಲೆ ದಾಳಿ ಮಾಡಿದ ಭಜರಂಗ ದಳದ ಕಾರ್ಯಕರ್ತರು ಅದನ್ನು ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಘಟನೆಯ ಕುರಿತಾಗಿ ಮಾತನಾಡಿರುವ ಥಿಯೇಟರ್ ಮಾಲೀಕರು, ಕೇವಲ ಪೋಸ್ಟರ್ ಮಾತ್ರ ಹರಿದು ಹಾಕದೇ, ಈ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದಿದ್ದಾರೆ. ಪೋಸ್ಟರ್ ಹರಿದು ಹಾಕಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಭಜರಂಗ ದಳದ ಸದಸ್ಯರು, ಯಾವುದೇ ಸಿನಿಮಾ ಮಂದಿರದಲ್ಲೂ ಈ ಸಿನಿಮಾ ಪ್ರದರ್ಶನ ಮಾಡಬಾರದು, ಮಾಡಿದರೆ ದಾಳಿ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಚಿತ್ರಕ್ಕೆ ಕೊನೆಗೂ ಸೆನ್ಸಾರ್: 10 ಕಡೆ ಕತ್ತರಿ, ದೀಪಿಕಾಗೆ ಮೈತುಂಬಾ ಬಟ್ಟೆ, U/A ಸರ್ಟಿಫಿಕೇಟ್

    ‘ಪಠಾಣ್’ ಚಿತ್ರಕ್ಕೆ ಕೊನೆಗೂ ಸೆನ್ಸಾರ್: 10 ಕಡೆ ಕತ್ತರಿ, ದೀಪಿಕಾಗೆ ಮೈತುಂಬಾ ಬಟ್ಟೆ, U/A ಸರ್ಟಿಫಿಕೇಟ್

    ಬಾಲಿವುಡ್ ಸೆನ್ಸಾರ್ (Censor) ಮಂಡಳಿಯು ಕೊನೆಗೂ ‘ಪಠಾಣ್’ (Pathan) ಸಿನಿಮಾಗೆ ಸೆನ್ಸಾರ್ ಮಾಡಿದೆ. ಕೆಲವು ಚಿತ್ರಿಕೆಗಳಿಗೆ ಕತ್ತರಿ ಪ್ರಯೋಗ ಮಾಡಿದ್ದು, ನಟಿ ದೀಪಿಕಾ ಪಡುಕೋಣೆ (Deepika Padukone) ಕುಣಿದ ‘ಬೇಷರಂ ರಂಗ್’ ಹಾಡಿನ ಅಶ್ಲೀಲ ಭಂಗಿಗಳನ್ನು ತಗೆದು ಹಾಕುವಂತೆ ಸೂಚಿಸಿದೆ. ಈ ಹಾಡಿನಲ್ಲಿ ಅಶ್ಲೀಲವಾಗಿ, ಒಳ ಉಡುಪುಗಳು ಕಾಣುವಂತೆ ಮತ್ತು ಕೇಸರಿ ಬಣ್ಣಕ್ಕೆ ಅವಮಾನ ಮಾಡುವಂತಹ ಎಲ್ಲ ಸಂಗತಿಗಳನ್ನೂ ಕಟ್ ಮಾಡಿಸಿದೆ. ಇಷ್ಟೆಲ್ಲ ಮುಗಿದ ನಂತರವೇ ಈ ಚಿತ್ರಕ್ಕೆ ಯು/ ಎ ಪ್ರಮಾಣಪತ್ರವನ್ನು ನೀಡಿದೆ.

    ಅಲ್ಲದೇ, ಸಿನಿಮಾದ ಡೈಲಾಗ್ ಮೇಲೂ ಸೆನ್ಸಾರ್ ಮಂಡಳಿಯು ಅಧಿಕಾರ ಚಲಾಯಿಸಿದ್ದು, ಕೆಲವು ಪದಗಳನ್ನು ಮಾರ್ಪಾಡು ಮಾಡುವಂತೆ ಸೂಚಿಸಿದೆ. ಬಾಲಿವುಡ್ ಮಾಧ್ಯಮಗಳು ವರದಿ ಮಾಡಿದಂತೆ. ‘ಲಂಗ್ಡೆ ಲುಲ್ಲೆ’ ಪದದ ಬದಲು ‘ಟೂಟೆ ಪೂಟೆ’ ಎಂದು ಬದಲಾಯಿಸಲು, 13 ಕಡೆ ‘ಪಿಎಂಓ’ ಪದವನ್ನು ತಗೆದು ಹಾಕುವಂತೆ ಸೂಚಿಸಿದೆ. ‘ಮಿಸಸ್ ಭಾರತ್ ಮಾತಾ’ ಎನ್ನುವ ಮಾತಿನ ಬದಲಾಗಿ ‘ಹಮಾರಿ ಭಾರತ್ ಮಾತಾ’ ಎಂದು ಡಬ್ ಮಾಡುವಂತೆ ಸೂಚಿಸಿದೆ. ಹೀಗೆ ಸಾಕಷ್ಟು ಪದಗಳನ್ನು ಬದಲಿಸಿ, ಬೇರೆ ಪದವನ್ನು ಬಳಸುವಂತೆ ಸೆನ್ಸಾರ್ ಮಂಡಳಿಯು ಸೂಚಿಸಿತ್ತು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಸೆನ್ಸಾರ್ ಮಂಡಳಿಯು ಏನೇ ಸೂಚಿಸಿದ್ದರು, ಚಿತ್ರತಂಡ ಚಿತ್ರಿಕೆಗಳನ್ನು ಕಟ್ ಮಾಡಿದ್ದರೂ, ಪ್ರತಿಭಟನೆ ಮಾತ್ರ ನಿಂತಿಲ್ಲ. ಇವತ್ತು ಗುಜರಾತ್ ನ ಅಹ್ಮದಾಬಾದ್ ನ ಮಾಲ್ ಒಂದರಲ್ಲಿ ಪಠಾಣ್ ಸಿನಿಮಾದ ಪೋಸ್ಟರ್ ಅಂಟಿಸಲಾಗಿತ್ತು. ಈ ಪೋಸ್ಟರ್ ಅನ್ನು ತಗೆದು ಹಾಕುವಂತೆ ಭಜರಂಗ ದಳದ ಕಾರ್ಯಕರ್ತರು ಥಿಯೇಟರ್ ಮಾಲೀಕರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಪುರಸ್ಕರಿಸದೇ ಹೋದಾಗ, ಚಿತ್ರಮಂದಿರದ ಮೇಲೆ ದಾಳಿ ಮಾಡಿದ ಭಜರಂಗ ದಳದ ಕಾರ್ಯಕರ್ತರು ಅದನ್ನು ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಘಟನೆಯ ಕುರಿತಾಗಿ ಮಾತನಾಡಿರುವ ಥಿಯೇಟರ್ ಮಾಲೀಕರು, ಕೇವಲ ಪೋಸ್ಟರ್ ಮಾತ್ರ ಹರಿದು ಹಾಕದೇ, ಈ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದಿದ್ದಾರೆ. ಪೋಸ್ಟರ್ ಹರಿದು ಹಾಕಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಭಜರಂಗ ದಳದ ಸದಸ್ಯರು, ಯಾವುದೇ ಸಿನಿಮಾ ಮಂದಿರದಲ್ಲೂ ಈ ಸಿನಿಮಾ ಪ್ರದರ್ಶನ ಮಾಡಬಾರದು, ಮಾಡಿದರೆ ದಾಳಿ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತನಗಿಂತ ಐದು ವರ್ಷ ದೊಡ್ಡವಳ ಜೊತೆ ಶಾರುಖ್ ಮಗನ ಡೇಟಿಂಗ್

    ತನಗಿಂತ ಐದು ವರ್ಷ ದೊಡ್ಡವಳ ಜೊತೆ ಶಾರುಖ್ ಮಗನ ಡೇಟಿಂಗ್

    ಬಿಟೌನ್ ನಲ್ಲಿ ಒಂದು ಕಡೆ ಶಾರುಖ್ ನಟನೆಯ ಪಠಾಣ್ ಸಿನಿಮಾದ ಸದ್ದಾಗುತ್ತಿದ್ದರೆ, ಮತ್ತೊಂದು ಕಡೆ ಶಾರುಖ್ ಪುತ್ರನ ಡೇಟಿಂಗ್ ವಿಚಾರ ಬಾಲಿವುಡ್ ನಲ್ಲಿ ಗಿರಿಕಿ ಹೊಡೆಯುತ್ತಿದೆ. ಅಪ್ಪ ಪಠಾಣ್ ಸಿನಿಮಾದ ವಿವಾದದಲ್ಲಿ ತಲೆಬಿಸಿ ಮಾಡಿಕೊಂಡಿದ್ದರೆ, ಮಗ ಕೂಲ್ ಕೂಲ್ ಆಗಿ ನಟಿ ನೋರಾ ಫತೇಹಿ ಜೊತೆ ಡೇಟಿಂಗ್ ನಡೆಸಿದ್ದಾನೆ. ಅದು ತನಗಿಂತ ಐದು ವರ್ಷ ದೊಡ್ಡವಳಿರುವ ಹುಡುಗಿಯ ಜೊತೆ ಎನ್ನುವುದು ಚರ್ಚೆಗೆ ಕಾರಣವಾಗಿದೆ. ಈ ಜೋಡಿಯ ಹಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಸುದ್ದಿಗಳನ್ನು ಬಿತ್ತರಿಸುತ್ತಿವೆ.

    ಕೆಲ ತಿಂಗಳ ಹಿಂದೆಯಷ್ಟೇ ಡ್ರಗ್ಸ್ ಪ್ರಕರಣದಲ್ಲಿ ಖುಲಾಸೆಗೊಂಡಿರುವ ಶಾರುಖ್ ಖಾನ್ ಪುತ್ರ ಆರ್ಯನ್, ಇದೀಗ ಡೇಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಕೇವಲ 25ರ ವಯಸ್ಸಿನ ಈ ಹುಡುಗ 30ರ ಹರೆಯದ ನೋರಾ ಫತೇಹಿ ಜೊತೆ ಸುತ್ತುತ್ತಿರುವುದು ಗುಟ್ಟಾಗಿಯೇನೂ ಉಳಿದಿಲ್ಲ. ಅನೇಕ ಪಾರ್ಟಿಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ಡೇಟಿಂಗ್ ವಿಚಾರವನ್ನು ಬಹಿರಂಗಗೊಳಿಸಿದೆ ಈ ಜೋಡಿ. ಕೆಲವರು ಕೇವಲ ಇದು ಫ್ರೆಂಡ್ ಶಿಪ್ ಎಂದು ಹೇಳುತ್ತಿದ್ದರೆ, ಇನ್ನೂ ಹಲವರು ಫ್ರೆಂಡ್ ಶಿಪ್ ಮೀರಿದ ಸ್ನೇಹವಿದು ಎಂದು ಕಾಮೆಂಟ್ ಮಾಡುತ್ತಿದ್ದಾರೆ.

    ನನಗೆ ನಟನಾಗಲು ಇಷ್ಟವಿಲ್ಲ. ತಂದೆಯಂತೆ ನಾನು ನಟನಾಗಲಾರೆ. ನಟನೆ ಅಂದರೆ ನನಗೆ ಅಷ್ಟಕಷ್ಟೆ ಎಂದು ಅನೇಕ ಬಾರಿ ಹೇಳಿರುವ ಆರ್ಯನ್, ತಾನು ಪ್ರೀತಿಸುತ್ತಿರುವುದು ನಟಿಯನ್ನು ಅನ್ನುವುದು ವಿಶೇಷ. ಆದರೆ, ಈ ಕುರಿತು ಇಬ್ಬರೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದೇ ಇದ್ದರೂ, ಬಿಟೌನ್ ನಲ್ಲಿ ಮಾತ್ರ ಈ ಸುದ್ದಿ ಭಾರೀ ಮಹತ್ವ ಪಡೆದುಕೊಂಡಿದೆ. ಇಬ್ಬರ ಮಧ್ಯೆ ಏನೋ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

    ಸದ್ಯ ಆರ್ಯನ್ ಖಾನ್ ಭರ್ಜರಿಯಾಗಿಯೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಿರ್ದೇಶಕನಾಗಿ ಅವರು ಚಿತ್ರರಂಗಕ್ಕೆ ಪ್ರವೇಶ ಮಾಡಲಿದ್ದಾರೆ. ಈಗಾಗಲೇ ಸ್ಕ್ರಿಪ್ಟ್ ಕೂಡ ರೆಡಿ ಮಾಡಿಕೊಂಡಿದ್ದಾರೆ. ನಿರ್ದೇಶನಕ್ಕೆ ಬೇಕಿರುವ ಅಗತ್ಯ ತರಬೇತಿಯನ್ನೂ ಅವರು ಪಡೆದುಕೊಂಡಿದ್ದಾರೆ. ಶೀಘ್ರದಲ್ಲೇ ತಮ್ಮ ಸಿನಿಮಾದ ಮಾಹಿತಿಯನ್ನು ಅವರು ಹಂಚಿಕೊಳ್ಳಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪಠಾಣ್’ ಪೋಸ್ಟರ್ ಅಂಟಿಸಿದ್ದ ಚಿತ್ರಮಂದಿರ ಮೇಲೆ ಭಜರಂಗದಳ ದಾಳಿ

    ‘ಪಠಾಣ್’ ಪೋಸ್ಟರ್ ಅಂಟಿಸಿದ್ದ ಚಿತ್ರಮಂದಿರ ಮೇಲೆ ಭಜರಂಗದಳ ದಾಳಿ

    ಬಾಲಿವುಡ್ ನಟ ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದ ವಿವಾದ ಮತ್ತೊಂದು ರೂಪ ಪಡೆದುಕೊಳ್ಳುತ್ತಿದೆ. ಈಗಾಗಲೇ ಚಿತ್ರವನ್ನು ಬಾಯ್ಕಾಟ್ ಮಾಡಬೇಕು ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಸಲಾಗಿತ್ತು. ಕೆಲ ಕಡೆ ಪ್ರತಿಭಟನೆಗಳು ನಡೆದವು. ಸೆನ್ಸಾರ್ ಮಂಡಳಿ ಕೂಡ ಕೆಲ ಭಾಗಗಳನ್ನು ಕತ್ತರಿಸಬೇಕು ಎಂದು ಸಲಹೆ ನೀಡಿತ್ತು. ಈಗ ದಾಳಿಯಂತಹ ಪ್ರಕರಣಗಳು ನಡೆಯುತ್ತಿವೆ.

    ಗುಜರಾತ್ ನ ಅಹ್ಮದಾಬಾದ್ ನ ಮಾಲ್ ಒಂದರಲ್ಲಿ ಪಠಾಣ್ ಸಿನಿಮಾದ ಪೋಸ್ಟರ್ ಅಂಟಿಸಲಾಗಿತ್ತು. ಈ ಪೋಸ್ಟರ್ ಅನ್ನು ತಗೆದು ಹಾಕುವಂತೆ ಭಜರಂಗ ದಳದ ಕಾರ್ಯಕರ್ತರು ಥಿಯೇಟರ್ ಮಾಲೀಕರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಪುರಸ್ಕರಿಸದೇ ಹೋದಾಗ, ಚಿತ್ರಮಂದಿರದ ಮೇಲೆ ದಾಳಿ ಮಾಡಿದ ಭಜರಂಗ ದಳದ ಕಾರ್ಯಕರ್ತರು ಅದನ್ನು ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಮಿಲ್ಕಿ ಬ್ಯೂಟಿ ತಮನ್ನಾ – ವಿಜಯ್ ವರ್ಮಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ?

    ಘಟನೆಯ ಕುರಿತಾಗಿ ಮಾತನಾಡಿರುವ ಥಿಯೇಟರ್ ಮಾಲೀಕರು, ಕೇವಲ ಪೋಸ್ಟರ್ ಮಾತ್ರ ಹರಿದು ಹಾಕದೇ, ಈ ಸಿನಿಮಾವನ್ನು ಪ್ರದರ್ಶನ ಮಾಡಬಾರದು ಎಂದು ಬೆದರಿಕೆ ಕೂಡ ಹಾಕಿದ್ದಾರೆ ಎಂದಿದ್ದಾರೆ. ಪೋಸ್ಟರ್ ಹರಿದು ಹಾಕಿ, ಜೈ ಶ್ರೀರಾಮ್ ಎಂದು ಘೋಷಣೆ ಕೂಗುವ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿರುವ ಭಜರಂಗ ದಳದ ಸದಸ್ಯರು, ಯಾವುದೇ ಸಿನಿಮಾ ಮಂದಿರದಲ್ಲೂ ಈ ಸಿನಿಮಾ ಪ್ರದರ್ಶನ ಮಾಡಬಾರದು, ಮಾಡಿದರೆ ದಾಳಿ ಮಾಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

    ಇದೇ ಜನವರಿ 25ರಂದು ವಿಶ್ವದಾದ್ಯಂತ ಪಠಾಣ್ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಜನವರಿ 10ರಂದು ಚಿತ್ರದ ಟ್ರೈಲರ್ ಕೂಡ ಬಿಡುಗಡೆ ಆಗುತ್ತಿದ್ದು, ಶಾರುಖ್ ಅಂಡ್ ಟೀಮ್ ಚಿತ್ರದ ಭರ್ಜರಿ ಪ್ರಚಾರ ನಡೆಸಿದೆ. ನಿನ್ನೆಯಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಶಾರುಖ್ ಅಭಿಮಾನಿಗಳ ಜೊತೆ ಸಂವಾದ ಕೂಡ ಮಾಡಿದ್ದಾರೆ. ವಿವಾದಗಳ ಹೊರತಾಗಿಯೂ ಸಿನಿಮಾ ನೋಡುವಂತೆ ಅವರು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಠಾಣ್ ಡಿಸಾಸ್ಟರ್, ನಿವೃತ್ತಿ ತಗೊಳ್ಳಿ ಅಂದವರಿಗೆ ಶಾರುಖ್ ಕೊಟ್ಟ ಉತ್ತರ ‘ಕೂಲ್ ಕೂಲ್’

    ಪಠಾಣ್ ಡಿಸಾಸ್ಟರ್, ನಿವೃತ್ತಿ ತಗೊಳ್ಳಿ ಅಂದವರಿಗೆ ಶಾರುಖ್ ಕೊಟ್ಟ ಉತ್ತರ ‘ಕೂಲ್ ಕೂಲ್’

    ಹಿಂದಿಯ ಪಠಾಣ್ ಸಿನಿಮಾ ಬಿಡುಗಡೆ ಹೊತ್ತಿನಲ್ಲಿ ನಟ ಶಾರುಖ್ ಖಾನ್ ತಮ್ಮ ಅಭಿಮಾನಿಗಳ ಜೊತೆ ಸೋಷಿಯಲ್ ಮೀಡಿಯಾದಲ್ಲಿ ‘ಆಸ್ಕ್ ಮಿ ಎನಿಥಿಂಗ್’ ಆಯೋಜನೆ ಮಾಡಿದ್ದರು. ಇಲ್ಲಿ ಯಾರು ಬೇಕಾದರೂ ಪ್ರಶ್ನೆಗಳನ್ನು ಮಾಡಬಹುದು ಎಂದು ಹೇಳಿದ್ದರು. ಈ ಹೊತ್ತಿನಲ್ಲಿ ರೌಡಿ ಹೆಸರಿನ ಅಕೌಂಟ್ ನಿಂದ ಒಬ್ಬರು ಪ್ರಶ್ನೆ ಮಾಡಿ, ‘ನಿಮ್ಮ ಪಠಾಣ್ ಸಿನಿಮಾ ಈಗಾಗಲೇ ಡಿಸಾಸ್ಟರ್ ಆಗಿದ್ದು, ನೀವು ನಿವೃತ್ತಿ ತಗೆದುಕೊಳ್ಳಿ’ ಎಂದು ಪ್ರಶ್ನೆ ಮಾಡಿದರು. ಈ ಪ್ರಶ್ನೆಗೆ ಶಾರುಖ್ ಅಷ್ಟೇ ಕೂಲ್ ಆಗಿ ಉತ್ತರಿಸಿದ್ದಾರೆ.

    ಸಾವಿರಾರು ಪ್ರಶ್ನೆಗಳ ಮಧ್ಯೆ ರೌಡಿ ಹೆಸರಿನ ಅಕೌಂಟ್ ನಿಂದ ಬಂದ ಪ್ರಶ್ನೆಗಳನ್ನು ಎತ್ತಿಕೊಂಡ ಶಾರುಖ್ ಖಾನ್, ‘ದೊಡ್ಡವರ ಜೊತೆ ಹಾಗೆಲ್ಲ ಮಾತನಾಡಬಾರದು’ ಎಂದಷ್ಟೇ ಉತ್ತರಿಸಿದರು. ಈ ಉತ್ತರ ನಂತರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯಿತು. ಈ ಪ್ರಶ್ನೋತ್ತರದ ಟ್ವಿಟ್ ಅನ್ನು ಸ್ಕ್ರಿನ್ ಶಾಟ್ ತಗೆದು ಹಲವಾರು ಜನರು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವಕಾಶ ಸಿಕ್ಕಿದೆ ಎಂದು ಏನೇ ಬೇಕಾದರೂ ಪ್ರಶ್ನೆಗಳನ್ನು ಕೇಳುವುದಲ್ಲ ಎಂದು ಹಲವರು ಸಲಹೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

    ಪಠಾಣ್ ಸಿನಿಮಾ ನಾನಾ ಕಾರಣಗಳಿಂದ ವಿವಾದಕ್ಕೀಡಾಗಿದೆ. ಆದರೂ, ನಿಗದಿತ ಸಮಯದಲ್ಲಿ ಎಲ್ಲವೂ ಆಗಲಿದೆ ಎಂದು ಶಾರುಖ್ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಸೆನ್ಸಾರ್ ಸಮಸ್ಯೆಯಿಂದಾಗಿ ಚಿತ್ರದ ಟ್ರೈಲರ್ ಹಾಗೂ ಸಿನಿಮಾದ ರಿಲೀಸ್ ದಿನಾಂಕದಲ್ಲಿ ವ್ಯತ್ಯಾಸ ಆಗಬಹುದು ಎಂದು ಹೇಳಲಾಗಿತ್ತು. ಆದರೆ, ಮೊದಲೇ ಫಿಕ್ಸ್ ಮಾಡಿಕೊಂಡಂತೆ ಜನವರಿ 10 ರಂದು ಟ್ರೈಲರ್ ಮತ್ತು ಜನವರಿ 25 ರಂದು ವಿಶ್ವದಾದ್ಯಂತ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ನಿರ್ಮಾಣ ಸಂಸ್ಥೆಯೇ ಘೋಷಿಸಿದೆ.

    ಈ ನಡುವೆ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಸಿನಿಮಾದ ಅಶ್ಲೀಲ ಕಂಟೆಂಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಕ್ಕಳ ಹಿತದೃಷ್ಟಿಯಿಂದ ಅವುಗಳನ್ನು ಸೋಷಿಯಲ್ ಮೀಡಿಯಾದಿಂದ ತೆಗೆದು ಹಾಕುವಂತೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದೆ.

    ಕಲ್ಯಾಣ ಸಮಿತಿಯು ಡಿಜಿಪಿಗೆ ಬರೆದ ಪತ್ರದಲ್ಲಿ, ‘ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಗೀತೆಯಲ್ಲಿ ಅಶ್ಲೀಲ ಅನಿಸುವಂತಹ ಕಂಟೆಂಟ್ ಇದೆ. ಇದು ಬಾಲಾಪರಾಧಿ ಕಾಯಿದೆ ಪ್ರಕಾರ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ ಕೂಡಲೇ ಅವುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆಸಬೇಕು’ ಎಂದು ಬರೆಯಲಾಗಿದೆ. ಆ ಪತ್ರಕ್ಕೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಶ್ರೀವಾಸ್ತವ ಮತ್ತು ಹಲವರು ಸಹಿ ಮಾಡಿದ್ದಾರೆ.

    ಈಗಾಗಲೇ ಸೆನ್ಸಾರ್ ಮಂಡಳಿ ಕೂಡ ಕೆಲ ದೃಶ್ಯಗಳನ್ನು ತೋರಿಸಲು ಸಾಧ್ಯವೇ ಇಲ್ಲ ಎಂದೂ, ಅವುಗಳನ್ನು ಸಿನಿಮಾದಿಂದ ತೆಗೆದು ಹಾಕಬೇಕು ಎಂದೂ ನಿರ್ದೇಶನ ನೀಡಿದೆ. ಇನ್ನೂ ಹಲವರು ಈ ಚಿತ್ರಕ್ಕೆ ಪಠಾಣ್ ಎಂದು ಹೆಸರಿಡಲು ಬಿಡುವುದಿಲ್ಲ ಎಂದು ಪ್ರತಿಭಟಿಸುತ್ತಿದ್ದಾರೆ. ಬೇಷರಂ ರಂಗ್ ಕೂಡ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಿದೆ ಎನ್ನುವ ಆರೋಪವಿದೆ. ಈ ಎಲ್ಲ ಸಂಕಟಗಳ ಮಧ್ಯೆಯೂ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡುವ ಸಂಭ್ರಮದಲ್ಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಗದಿತ ದಿನದಂದೇ ರಿಲೀಸ್ ಆಗಲಿದೆ ‘ಪಠಾಣ್’  ಟ್ರೈಲರ್, ಸಿನಿಮಾ

    ನಿಗದಿತ ದಿನದಂದೇ ರಿಲೀಸ್ ಆಗಲಿದೆ ‘ಪಠಾಣ್’ ಟ್ರೈಲರ್, ಸಿನಿಮಾ

    ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾದ ಟ್ರೈಲರ್ ಹಾಗೂ ಸಿನಿಮಾ ಅಂದುಕೊಂಡ ದಿನದಂದೇ ರಿಲೀಸ್ ಆಗಲಿವೆ. ಸೆನ್ಸಾರ್ ಸಮಸ್ಯೆಯಿಂದಾಗಿ ಚಿತ್ರದ ಟ್ರೈಲರ್ (Trailer) ಹಾಗೂ ಸಿನಿಮಾದ ರಿಲೀಸ್ ದಿನಾಂಕದಲ್ಲಿ ವ್ಯತ್ಯಾಸ ಆಗಬಹುದು ಎಂದು ಹೇಳಲಾಗಿತ್ತು. ಆದರೆ, ಮೊದಲೇ ಫಿಕ್ಸ್ ಮಾಡಿಕೊಂಡಂತೆ ಜನವರಿ 10 ರಂದು ಟ್ರೈಲರ್ ಮತ್ತು ಜನವರಿ 25 ರಂದು ವಿಶ್ವದಾದ್ಯಂತ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ನಿರ್ಮಾಣ ಸಂಸ್ಥೆಯೇ ಘೋಷಿಸಿದೆ.

    ಈ ನಡುವೆ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಸಿನಿಮಾದ ಅಶ್ಲೀಲ ಕಂಟೆಂಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಕ್ಕಳ ಹಿತದೃಷ್ಟಿಯಿಂದ ಅವುಗಳನ್ನು ಸೋಷಿಯಲ್ ಮೀಡಿಯಾದಿಂದ ತೆಗೆದು ಹಾಕುವಂತೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದೆ. ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ಕಲ್ಯಾಣ ಸಮಿತಿಯು ಡಿಜಿಪಿಗೆ ಬರೆದ ಪತ್ರದಲ್ಲಿ, ‘ಪಠಾಣ್ ಸಿನಿಮಾದ ‘ಬೇಷರಂ ರಂಗ್’ ಗೀತೆಯಲ್ಲಿ ಅಶ್ಲೀಲ ಅನಿಸುವಂತಹ ಕಂಟೆಂಟ್ ಇದೆ. ಇದು ಬಾಲಾಪರಾಧಿ ಕಾಯಿದೆ ಪ್ರಕಾರ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಹಾಗಾಗಿ ಕೂಡಲೇ ಅವುಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆಸಬೇಕು’ ಎಂದು ಬರೆಯಲಾಗಿದೆ. ಆ ಪತ್ರಕ್ಕೆ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಶ್ರೀವಾಸ್ತವ ಮತ್ತು ಹಲವರು ಸಹಿ ಮಾಡಿದ್ದಾರೆ.

    ಈಗಾಗಲೇ ಸೆನ್ಸಾರ್ ಮಂಡಳಿ ಕೂಡ ಕೆಲ ದೃಶ್ಯಗಳನ್ನು ತೋರಿಸಲು ಸಾಧ್ಯವೇ ಇಲ್ಲ ಎಂದೂ, ಅವುಗಳನ್ನು ಸಿನಿಮಾದಿಂದ ತೆಗೆದು ಹಾಕಬೇಕು ಎಂದೂ ನಿರ್ದೇಶನ ನೀಡಿದೆ. ಇನ್ನೂ ಹಲವರು ಈ ಚಿತ್ರಕ್ಕೆ ಪಠಾಣ್ ಎಂದು ಹೆಸರಿಡಲು ಬಿಡುವುದಿಲ್ಲ ಎಂದು ಪ್ರತಿಭಟಿಸುತ್ತಿದ್ದಾರೆ. ಬೇಷರಂ ರಂಗ್ ಕೂಡ ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಿದೆ ಎನ್ನುವ ಆರೋಪವಿದೆ. ಈ ಎಲ್ಲ ಸಂಕಟಗಳ ಮಧ್ಯೆಯೂ ಚಿತ್ರದ ಟ್ರೈಲರ್ ಅನ್ನು ರಿಲೀಸ್ ಮಾಡುವ ಸಂಭ್ರಮದಲ್ಲಿದೆ ಚಿತ್ರತಂಡ.

    Live Tv
    [brid partner=56869869 player=32851 video=960834 autoplay=true]