Tag: ಶಾರುಖ್ ಖಾನ್

  • ಸಮಂತಾ ಜೊತೆ ಶಾರುಖ್ ಖಾನ್ ರೊಮ್ಯಾನ್ಸ್

    ಸಮಂತಾ ಜೊತೆ ಶಾರುಖ್ ಖಾನ್ ರೊಮ್ಯಾನ್ಸ್

    ಠಾಣ್, ಜವಾನ್ ಸಕ್ಸಸ್ ಬಳಿಕ ಬಾಲಿವುಡ್‌ನಲ್ಲಿ (Bollywood) ಕಿಂಗ್ ಖಾನ್ ಶಾರುಖ್‌ಗೆ (Sharukh Khan) ಬೇಡಿಕೆ ಹೆಚ್ಚಾಗಿದೆ. ಇದೀಗ ನಯನತಾರಾ ಬಳಿಕ ಸಮಂತಾ ಜೊತೆ ಶಾರುಖ್ ಖಾನ್ ರೊಮ್ಯಾನ್ಸ್ ಮಾಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಲಾಯರ್ ಆಗಿ ಶಿವಣ್ಣ ಖಡಕ್ ಎಂಟ್ರಿ- ಮೇಕಿಂಗ್ ವಿಡಿಯೋ ಚಿಂದಿ ಎಂದ ಫ್ಯಾನ್ಸ್

    ‘ಡಂಕಿ’ ನಂತರ ಮತ್ತೊಮ್ಮೆ ಖ್ಯಾತ ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಜೊತೆ ಶಾರುಖ್ ಕೈಜೋಡಿಸಿದ್ದಾರೆ. ಈ ಸಿನಿಮಾದಲ್ಲೂ ಸೌತ್ ನಟಿಯನ್ನೇ ನಾಯಕಿಯನ್ನಾಗಿ ಮಾಡಲು ಚಿತ್ರತಂಡ ನಿರ್ಧರಿಸಿದೆ.

    ನಯನತಾರಾ ಜೊತೆ ‘ಜವಾನ್’ ಸಿನಿಮಾ ಕ್ಲಿಕ್ ಆದಂತೆ ಹೊಸ ಸಿನಿಮಾ ಕೂಡ ಗೆಲ್ಲಲಿ ಎಂದು ಸಮಂತಾರನ್ನು ರಾಜ್‌ಕುಮಾರ್ ಹಿರಾನಿ ಟೀಮ್ ಸಂಪರ್ಕಿಸಿದೆ. ಸಮಂತಾ (Samantha) ಕೂಡ ಕಥೆ ಕೇಳಿದ್ದಾರಂತೆ. ಆದರೆ ಎರಡು ಕಡೆ ಒಪ್ಪಿಗೆ ಆಯ್ತಾ? ಎಂಬುದರ ಬಗ್ಗೆ ಖಾತ್ರಿಯಾಗಿಲ್ಲ. ಚಿತ್ರತಂಡ ಅಧಿಕೃತವಾಗಿ ಹೇಳುವವರೆಗೂ ಕಾಯಬೇಕಿದೆ.

    ಬಾಲಿವುಡ್ ಸ್ಟಾರ್‌ಗೆ ಸಮಂತಾ ನಾಯಕಿಯಾಗ್ತಾರೆ ಎಂಬ ಸುದ್ದಿ ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ‘ಖುಷಿ’ (Kushi) ಸಿನಿಮಾದ ಬಳಿಕ ಯಾವುದೇ ಘೋಷಣೆ ಕೂಡ ಆಗಿಲ್ಲ. ಹಾಗಾಗಿ ನಟಿಯ ಕಡೆಯಿಂದ ಗುಡ್ ನ್ಯೂಸ್ ಸಿಗಲಿ ಎಂದು ಫ್ಯಾನ್ಸ್ ಕಾಯ್ತಿದ್ದಾರೆ.

  • ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಬಾಲಿವುಡ್ ಸ್ಟಾರ್ಸ್

    ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಬಾಲಿವುಡ್ ಸ್ಟಾರ್ಸ್

    ರೇಂದ್ರ ಮೋದಿ (Narendra Modi) ಪ್ರಮಾಣವಚನ ಕಾರ್ಯಕ್ರಮದಲ್ಲಿ ಬಾಲಿವುಡ್ ಸ್ಟಾರ್‌ಗಳ ದಂಡೇ ಭಾಗಿಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ವೇಳೆ, ಅಕ್ಷಯ್ ಕುಮಾರ್ (Akshay Kumar), ರಜನಿಕಾಂತ್, ಶಾರುಖ್ ಖಾನ್ (Sharukh Khan) ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

    ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಬಾಲಿವುಡ್ ಸ್ಟಾರ್‌ಗಳಾದ ಶಾರುಖ್ ಖಾನ್, ಅಕ್ಷಯ್ ಕುಮಾರ್, ಕಂಗನಾ ರಣಾವತ್, ಅನುಪಮ್ ಖೇರ್, ವಿಕ್ರಾಂತ್, ಬಾಲಿವುಡ್‌ ನಿರ್ಮಾಪಕ ರಾಜ್‌ಕುಮಾರ್ ಹಿರಾನಿ, ರಜನಿಕಾಂತ್, ಪವನ್ ಕಲ್ಯಾಣ್ ಸೇರಿದಂತೆ ಹಲವರು ಸಾಕ್ಷಿಯಾಗಿದ್ದಾರೆ.‌ ಇದನ್ನೂ ಓದಿ: ಚಂದನ್‌ಗೆ ನಿವೇದಿತಾ ಜೀವನಾಂಶ ಕೇಳಿದ್ರಾ? ಕೊನೆಗೂ ಹೊರಬಿತ್ತು ಅಸಲಿ ಸಂಗತಿ


    ಅದಷ್ಟೇ ಅಲ್ಲ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ಸೋಷಿಯಲ್ ಮೀಡಿಯಾದಲ್ಲಿ ನರೇಂದ್ರ ಮೋದಿ 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದ್ದಕ್ಕೆ ಶುಭಕೋರಿದ್ದಾರೆ. ಸಂತಸ ವ್ಯಕ್ತಪಡಿಸಿದ್ದಾರೆ.

  • ಶಾರುಖ್ ಫ್ಯಾನ್ಸ್ ಕಂಡರೆ ಭಯ: ಸ್ಫೋಟಕ ಹೇಳಿಕೆ ನೀಡಿದ ಬಾಲಿವುಡ್ ನಿರ್ದೇಶಕ

    ಶಾರುಖ್ ಫ್ಯಾನ್ಸ್ ಕಂಡರೆ ಭಯ: ಸ್ಫೋಟಕ ಹೇಳಿಕೆ ನೀಡಿದ ಬಾಲಿವುಡ್ ನಿರ್ದೇಶಕ

    ಬಾಲಿವುಡ್‌ನ ‘ಪಠಾಣ್’ (Paathan) ಸ್ಟಾರ್ ಶಾರುಖ್ ಖಾನ್ (Sharukh Khan) ಜೊತೆ ಕೆಲಸ ಮಾಡಲು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಆದರೆ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಇದೀಗ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಶಾರುಖ್ ಜೊತೆ ಸಿನಿಮಾ ಮಾಡಲ್ಲ, ಅವರ ಫ್ಯಾನ್ಸ್ ಕಂಡರೆ ಭಯ ಎಂದು ನಿರ್ದೇಶಕ ಅನುರಾಗ್ ಮಾತನಾಡಿದ್ದಾರೆ.

    ಶಾರುಖ್ ನಟಿಸಿರುವ ‘ಚಕ್ ದೇ ಇಂಡಿಯಾ’ ಚಿತ್ರ ಸೇರಿದಂತೆ ಹಲವು ಚಿತ್ರಗಳು ನನಗೆ ಇಷ್ಟ. ಇಂದು ಸಕ್ಸಸ್‌ಫುಲ್ ನಟನಾಗಿರುವ ಶಾರುಖ್ ಜೊತೆ ಕೆಲಸ ಮಾಡುವುದು ಕಷ್ಟ. ಒಬ್ಬ ನಿರ್ದೇಶಕನಾಗಿ ಶಾರುಖ್ ಅಂದರೆ ಇಷ್ಟ. ಆದರೆ ಅವರ ಅಭಿಮಾನಿಗಳನ್ನು ಕಂಡರೆ ಭಯ ಇದೆ ಎಂದಿದ್ದಾರೆ ಅನುರಾಗ್. ಇದನ್ನೂ ಓದಿ:ಬಿಟೌನ್ ಟಾಕ್: ನಟಿ ಮಲೈಕಾ ಅರೋರಾ- ಅರ್ಜುನ್‍ ಕಪೂರ್ ಬ್ರೇಕಪ್

    ದೊಡ್ಡ ಸ್ಟಾರ್‌ಗಳ ಜೊತೆ ಕೆಲಸ ಮಾಡುವಾಗ ಮುನ್ನಚರಿಕೆ ವಹಿಸಬೇಕು. ಒಂದು ವೇಳೆ, ಆ ಸಿನಿಮಾ ಸೋತರೆ ಅವರ ಅಭಿಮಾನಿಗಳಿಂದ ಬೈಗಳ ಎದುರಿಸಬೇಕಾಗುತ್ತದೆ. ಫ್ಯಾನ್ಸ್ ಕೂಡ ನೆಚ್ಚಿನ ನಟರ ಕಡೆಯಿಂದ ಒಂದೇ ರೀತಿಯ ಪಾತ್ರಗಳನ್ನು ಬಯಸುತ್ತಾರೆ. ಜೊತೆಗೆ ನಟರು ಕೂಡ ವಿಭಿನ್ನ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಆದರೆ ಅವರು ಹೊಸ ಕಥೆ ಪ್ರಯೋಗ ಮಾಡಲು ಹೆದರುತ್ತಾರೆ ಎಂದು ಅನುರಾಗ್‌ ಮಾತನಾಡಿದ್ದಾರೆ. ಇಂದು ಸ್ಟಾರ್ ಹೀರೋ ಜೊತೆ ಕೆಲಸ ಮಾಡುವುದು ದುಬಾರಿ ಆಗಬಹುದು. ಆದರೆ ಶಾರುಖ್ ಅಥವಾ ಬೇರೆ ಸ್ಟಾರ್ ಜೊತೆ ಸಿನಿಮಾ ಮಾಡುವ ಸಾಮಾರ್ಥ್ಯ ನನಗಿಲ್ಲ ಎಂದು ಓಪನ್ ಆಗಿ ಅನುರಾಗ್ ಕಶ್ಯಪ್ ಮಾತನಾಡಿದ್ದಾರೆ.

    ಅಂದಹಾಗೆ, ಅನುರಾಗ್ ಕಶ್ಯಪ್ ನಟ ಕಮ್ ನಿರ್ದೇಶಕ, ನಿರ್ಮಾಪಕನಾಗಿ ಬಾಲಿವುಡ್‌ನಲ್ಲಿ ಗುರುತಿಸಿಕೊಂಡವರು. ನಟನೆಯ ಜೊತೆ ಡೈರೆಕ್ಟರ್ ಆಗಿ ಕೂಡ ಸೈ ಎನಿಸಿಕೊಂಡಿದ್ದಾರೆ.

  • ಅಂಬಾನಿ ಮನೆ ಮಗನ ಪ್ರಿ ವೆಡ್ಡಿಂಗ್‌ನಲ್ಲಿ ಸೆಲೆಬ್ರಿಟಿಗಳ ದಂಡು

    ಅಂಬಾನಿ ಮನೆ ಮಗನ ಪ್ರಿ ವೆಡ್ಡಿಂಗ್‌ನಲ್ಲಿ ಸೆಲೆಬ್ರಿಟಿಗಳ ದಂಡು

    ವಿಶ್ವದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾಗಿರುವ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಪ್ರಿ ವೆಡ್ಡಿಂಗ್ ಪಾರ್ಟಿ (Pre- Wedding) ಅದ್ಧೂರಿಯಾಗಿ ಜರುಗಿದೆ. ಇಟಲಿಯಲ್ಲಿ ನಡೆದ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳ ದಂಡೇ ಹರಿದು ಬಂದಿದೆ.

    ಅಂಬಾನಿ ಮಗನ ಮನೆ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ (Shah rukh Khan) ಮತ್ತು ರಣ್‌ಬೀರ್ ಕಪೂರ್ (Ranbir Kapoor) ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಜಾನ್ವಿ ಕಪೂರ್, ಆಲಿಯಾ ಭಟ್‌, ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಜೋಡಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇದನ್ನೂ ಓದಿ:ಇಳಯರಾಜ ಬಯೋಪಿಕ್ ಹೊಸ ಪೋಸ್ಟರ್ ರಿಲೀಸ್ ಮಾಡಿದ ಧನುಷ್

    ಇನ್ನೂ ಶಾರುಖ್ ಪುತ್ರಿ ಸುಹಾನಾ ಖಾನ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಸುಹಾನಾ ಜೊತೆ ಶನಾಯಾ ಕಪೂರ್, ಅನನ್ಯಾ ಪಾಂಡೆ ಕೂಡ ಮಸ್ತ್ ಆಗಿ ಫೋಟೋಗೆ ಪೋಸ್ ನೀಡಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟ ‘ಅರಸು’ ನಟಿ- ತೆಲುಗಿಗೆ ಮೀರಾ ಜಾಸ್ಮಿನ್ ಕಮ್‌‌ ಬ್ಯಾಕ್

    ಅಂದಹಾಗೆ, ಅನಂತ್ ಮತ್ತು ರಾಧಿಕಾ ಮದುವೆ ಜುಲೈ 12ರಂದು ನಡೆಯಲಿದೆ. ಜುಲೈ 12ರಿಂದ ಜುಲೈ 14ರವರೆಗೆ ಮದುವೆ ಕಾರ್ಯಕ್ರಮಗಳು ಜರುಗಲಿದೆ.

    ನಗರದ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಹಿಂದೂ ವೈದಿಕ ಸಂಪ್ರದಾಯದಂತೆ ವಿವಾಹ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ.

  • ಗೌತಮ್‌ ಗಂಭೀರ್‌ಗೆ ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದೇಕೆ ಶಾರುಖ್‌?

    ಗೌತಮ್‌ ಗಂಭೀರ್‌ಗೆ ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದೇಕೆ ಶಾರುಖ್‌?

    ಮುಂಬೈ: ಭಾರತ ಪುರುಷರ ಕ್ರಿಕೆಟ್‌ ತಂಡಕ್ಕೆ ಗೌತಮ್‌ ಗಂಭೀರ್‌ ಮುಂದಿನ ಮುಖ್ಯಕೋಚ್‌ (Team India Head Coach) ಆಗುವ ಬಗ್ಗೆ ಮಾತುಕತೆ ನಡೆಯುತ್ತಿರುವಾಗಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕೆಕೆಆರ್‌ ತಂಡದ ಸಹ ಮಾಲೀಕರೂ ಆಗಿರುವ ನಟ ಶಾರುಖ್‌ ಖಾನ್‌ (Shah Rukh Khan), ಬ್ಲ್ಯಾಂಕ್‌ ಚೆಕ್‌ ಆಫರ್‌ ಕೊಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

    17ನೇ ಐಪಿಎಲ್‌ ಆವೃತ್ತಿಯ ಚಾಂಪಿಯನ್‌ ಆಗಿರುವ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಮೆಂಟರ್‌ ಆಗಿಯೇ ಮುಂದಿನ 10 ವರ್ಷಗಳ ಕಾಲ ಮುಂದುವರಿಯಲು ಶಾರುಖ್‌, ಗೌತಮ್‌ ಗಂಭೀರ್‌(Gautam Gambhir) ಅವರಿಗೆ ಬ್ಲ್ಯಾಂಕ್‌ ಚೆಕ್‌ (Blank Cheque) ಆಫರ್‌ ನೀಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಂದು ಕ್ಯಾಪ್ಟನ್, ಇಂದು ಮೆಂಟರ್‌ ಆಗಿ ಟ್ರೋಫಿ‌ ಗೆದ್ದುಕೊಟ್ಟ ಗಂಭೀರ್‌; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್‌ ಷಾ

    ಸದ್ಯ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಮುಖ್ಯಕೋಚ್‌ ಹುದ್ದೆಗೆ ಆಸಕ್ತಿ ತೋರಿದ್ದಾರೆ. ಆದ್ರೆ ಈವರೆಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಗಂಭೀರ್‌ ಅರ್ಜಿ ಸಲ್ಲಿಸಿದರೆ 100% ಅವರು ಹುದ್ದೆಗೆ ಆಯ್ಕೆಯಾಗುತ್ತಾರೆ. ಗಂಭೀರ್‌ ಮುಂದಿನ ಮುಖ್ಯಕೋಚ್‌ ಹುದ್ದೆಗೆ ಆಸಕ್ತಿ ಹೊಂದಿರುವುದರಿಂದ ಅವರು ಕೆಕೆಆರ್‌ ತಂಡವನ್ನು ತೊರೆಯುವ ಬಗ್ಗೆ ಎಸ್‌ಆರ್‌ಕೆ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: IPL 2024: ದಣಿವರಿಯದೇ ದುಡಿದ ಕ್ರೀಡಾ ಸಿಬ್ಬಂದಿಗೆ ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿದ ಜಯ್‌ ಶಾ

    ಕೋಚ್‌ ಹುದ್ದೆಗೆ ಆಸಿಸ್‌ ಆಟಗಾರರನ್ನ ಸಂಪರ್ಕಿಲ್ಲ:
    ಇತ್ತೀಚೆಗೆ ಟೀಂ ಇಂಡಿಯಾದ ಮುಖ್ಯಕೋಚ್‌ ಹುದ್ದೆ ಆಫರ್‌ ತಿರಸ್ಕರಿಸಿರುವುದಾಗಿ ಆಸೀಸ್‌ ಕ್ರಿಕೆಟ್‌ ದಿಗ್ಗಜ ರಿಕಿ ಪಾಂಟಿಂಗ್‌ ಅವರು ಹೇಳಿದ ಬಳಿಕ, ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಇದಕ್ಕೆ ಸ್ಪಷ್ಟನೆ ನೀಡಿದ್ದರು. ಟೀಂ ಇಂಡಿಯಾದ ಕೋಚ್‌ ಹುದ್ದೆಗೆ ನಾನು ಯಾವುದೇ ಆಸ್ಟ್ರೇಲಿಯಾ ಆಟಗಾರರನ್ನು ಸಂಪರ್ಕಿಸಿಲ್ಲ. ನಮ್ಮ ರಾಷ್ಟ್ರೀಯ ತಂಡಕ್ಕೆ ಸರಿಯಾದ ತರಬೇತುದಾರನನ್ನು ಹುಡುಕುವುದು ಒಂದು ನಿಖರವಾದ ಮತ್ತು ಸಂಪೂರ್ಣ ಪ್ರಕ್ರಿಯೆಯಾಗಿದೆ. ಭಾರತೀಯ ಕ್ರಿಕೆಟ್ ರಚನೆಯ ಬಗ್ಗೆ ಆಳವಾದ ತಿಳುವಳಿಕೆ ಹೊಂದಿರುವ ಮತ್ತು ಶ್ರೇಯಾಂಕಗಳ ಮೂಲಕ ಏರಿದ ವ್ಯಕ್ತಿಗಳನ್ನು ಆಯ್ಕೆ ಮಾಡಲು ನಾವು ಗಮನಹರಿಸಿದ್ದೇವೆ. ಟೀಂ ಇಂಡಿಯಾವನ್ನು ಮುಂದಿನ ಹಂತಕ್ಕೆ ಏರಿಸಲು ನಮ್ಮ ದೇಶೀಯ ಕ್ರಿಕೆಟ್ ಚೌಕಟ್ಟಿನ ಬಗ್ಗೆ ನಮ್ಮ ಕೋಚ್ ಆಳವಾದ ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ ಎಂದು ಹೇಳಿದ್ದರು.

    ನವೆಂಬರ್‌ 2021 ರಿಂದ ದ್ರಾವಿಡ್‌ (Rahul Dravid) ಕೋಚ್‌ ಹುದ್ದೆಯನ್ನು ಅಲಂಕರಿಸಿದ್ದು ಪ್ರಸಕ್ತ ವರ್ಷದ ಜೂನ್‌ನಲ್ಲಿ ಅವಧಿ ಅಂತ್ಯವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಕ್ತಾಯವಾಗಲಿದೆ. ಇದನ್ನೂ ಓದಿ: T20 World Cup: ಚುಟುಕು ಕ್ರಿಕೆಟ್ ಯುಗದ ಆರಂಭ – ಚೊಚ್ಚಲ ಆವೃತ್ತಿಯಲ್ಲೇ ಭಾರತ ಚಾಂಪಿಯನ್!

  • Photos Gallery: ಚಾಂಪಿಯನ್ಸ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸಂಭ್ರಮಿಸಿದ ಕ್ಷಣ ಹೀಗಿತ್ತು…

    Photos Gallery: ಚಾಂಪಿಯನ್ಸ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸಂಭ್ರಮಿಸಿದ ಕ್ಷಣ ಹೀಗಿತ್ತು…

    17ನೇ ಆವೃತ್ತಿಯ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕೋಲ್ಕತ್ತಾ ನೈಟ್ ರೈರ‍್ಸ್ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. 2012 ಮತ್ತು 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡ 10 ವರ್ಷಗಳ ಬಳಿಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಂಣದಲ್ಲಿ ಸೂಪರ್ ಸಂಡೇ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ಗೆದ್ದ ಬಳಿಕ ಇಡೀ ಕ್ರೀಡಾಂಗಣದ ತುಂಬ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಕ್ರೀಡಾಳುಗಳು ಕುಣಿದು ಕುಪ್ಪಳಿಸಿದರು. ಟ್ರೋಫಿ ಎತ್ತಿ ಮುದ್ದಾಡಿದರು, ಒಬ್ಬರನ್ನೊಬ್ಬರು ಅಪ್ಪಿಕೊಂಡು ಭಾವುಕರಾದರು. ಈ ಸಂಭ್ರಮದ ಪ್ರತಿಯೊಂದು ಕ್ಷಣವೂ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ. ಅವುಗಳನ್ನು ಕಣ್ತುಂಬಿಕೊಳ್ಳಲು ಮುಂದೆ ನೋಡಿ…

  • ಅಂದು ಕ್ಯಾಪ್ಟನ್, ಇಂದು ಮೆಂಟರ್‌ ಆಗಿ ಟ್ರೋಫಿ‌ ಗೆದ್ದುಕೊಟ್ಟ ಗಂಭೀರ್‌; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್‌ ಷಾ

    ಅಂದು ಕ್ಯಾಪ್ಟನ್, ಇಂದು ಮೆಂಟರ್‌ ಆಗಿ ಟ್ರೋಫಿ‌ ಗೆದ್ದುಕೊಟ್ಟ ಗಂಭೀರ್‌; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್‌ ಷಾ

    ಚೆನ್ನೈ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ನೂತನ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಆದ್ರೆ ಕೆಕೆಆರ್‌ ಗೆಲುವಿನ ಹಿಂದೆ ಟೂರ್ನಿಯುದ್ಧಕ್ಕೂ ಕೋಚ್‌ ಗೌತಮ್‌ ಗಂಭೀರ್‌ (Gautam Gambhir) ಅವರ ಪಾತ್ರ ಅಷ್ಟೇ ಪ್ರಮುಖವಾಗಿದೆ.

    ಹೌದು. ಮೊದಲಿನಿಂದಲೂ ಕೆಕೆಆರ್‌ ತಂಡದೊಂದಿಗೆ (KKR Team) ಅವಿನಾಭಾವ ಸಂಬಂಧ ಹೊಂದಿರುವ ಗೌತಮ್‌ ಗಂಭೀರ್‌ 2022, 2023ರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು. 2024ರಲ್ಲಿ ಮತ್ತೆ ತವರು ತಂಡಕ್ಕೆ ಮೆಂಟರ್‌ ಆಗಿ ಮರಳಿದ ಗಂಭೀರ್‌ ಟ್ರೋಫಿ ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಕೆಕೆಆರ್‌ ತಂಡದ ನಾಯಕನಾಗಿ ಮತ್ತು ಕೋಚ್‌ ಆಗಿ ಕೆಕೆಆರ್‌ ತಂಡಕ್ಕೆ ಮೂರು ಟ್ರೋಫಿ ಗೆದ್ದುಕೊಟ್ಟಿರುವುದು ಮತ್ತೊಂದು ವಿಶೇಷ.

    2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ತಮ್ಮ ನಾಯಕತ್ವದಲ್ಲಿ ಕೆಕೆಆರ್‌ ತಂಡವನ್ನು ಚಾಂಪಿಯನ್‌ ಆಗಿ ಮಾಡಿದ್ದರು. ಇದೀಗ 10 ವರ್ಷಗಳ ಬಳಿಕ ಕೋಚ್‌ ಆಗಿ ತಂಡವನ್ನು ಮುನ್ನಡೆಸಿದ ಗಂಭೀರ್‌ ತಂಡವನ್ನು ಚಾಂಪಿಯನ್‌ ಆಗಿ ಮಾಡಿದ್ದಾರೆ. ಇದನ್ನೂ ಓದಿ: ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಹಣೆಗೆ ಮುತ್ತಿಟ್ಟ ಶಾರುಖ್‌:
    ಕೆಕೆಆರ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಫ್ರಾಂಚೈಸಿ ಮಾಲೀಕರೂ ಆದ ನಟ ಶಾರುಖ್ ಖಾನ್, ಕೆಕೆಆರ್‌ ತಂಡದ ಮೆಂಟರ್‌ ಗೌತಮ್‌ ಗಂಭೀರ್‌ ಅವರ ಹಣೆಗೆ ಮುತ್ತಿಟ್ಟು ಅಭಿನಂದನೆ ಸಲ್ಲಿಸಿದ್ದಾರೆ. ಕೆಕೆಆರ್‌ ತಂಡ ಗೆಲುವು ಸಾಧಿಸುತ್ತಿದ್ದಂತೆ ಮೈದಾನಕ್ಕೆ ಧುಮುಕಿದ ಬಾದ್‌ ಶಾ, ಅಭಿಮಾನಿಗಳೊಂದಿಗೆ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಬಳಿಕ ತಂಡದ ಪ್ರತಿಯೊಬ್ಬ ಆಟಗಾರರಿಗೂ ಪ್ರೀತಿಯ ಅಪ್ಪುಗೆ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮತ್ತೆ ತವರಿಗೆ ಮರಳಿ ಚಾಂಪಿಯನ್‌ ಕಿರೀಟ ಗೆದ್ದುಕೊಟ್ಟ ಗೌತಮ್‌ ಗಂಭೀರ್‌ ಅವರ ಗಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡಿದ್ದಾರೆ.

    ಐಪಿಎಲ್‌ನಲ್ಲಿ ಗೌತಮ್‌ ಗಂಭೀರ್‌ ಸಾಧನೆ:
    ಐಪಿಎಲ್‌ನಲ್ಲಿ ಗೌತಮ್‌ ಗಂಭೀರ್‌ ಅವರು ತಮ್ಮದೇ ವಿಶೇಷ ಸಾಧನೆ ಮಾಡಿದ್ದಾರೆ. ತಂಡವೊಂದರ ನಾಯಕನಾಗಿ 2 ಬಾರಿ ಹಾಗೂ ತಂಡವೊಂದರ ಕೋಚ್‌ ಆಗಿ 1 ಬಾರಿ ಐಪಿಎಲ್‌ ಟ್ರೋಫಿ ಗೆದ್ದುಕೊಟ್ಟಿದ್ದಾರೆ. ನಾಯಕನಾಗಿ 3 ಬಾರಿ ಪ್ಲೇ ಆಫ್‌ ವರೆಗೆ ತಂಡವನ್ನು ಮುನ್ನಡೆಸಿದ್ದರೆ, ಕೋಚ್‌ ಆಗಿಯೂ ಮೂರು ಬಾರಿ ತಂಡವೊಂದನ್ನು ಮುನ್ನಡೆಸಿದ ಕೀರ್ತಿ ಇವರ ಹೆಸರಿಗಿದೆ.

    2022ರ ಆವೃತ್ತಿಯಲ್ಲಿ ಐಪಿಎಲ್‌ ಪ್ರವೇಶಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಗೌತಮ್‌ ಗಂಭೀರ್‌ ಅವರ ನೇತೃತ್ವದಲ್ಲಿ ಮೊದಲ ಎರಡೂ ಆವೃತ್ತಿಗಳಲ್ಲಿ ಪ್ಲೇ ಆಫ್‌ ಪ್ರವೇಶಿಸಿತ್ತು. ಇದನ್ನೂ ಓದಿ:  IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌! 

  • ಶಾರುಖ್ ಖಾನ್‌ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಶಾರುಖ್ ಖಾನ್‌ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಬಾಲಿವುಡ್ (Bollywood) ನಟ ಶಾರುಖ್ ಖಾನ್ (Sharukh Khan) ಆರೋಗ್ಯದಲ್ಲಿ ಏರುಪೇರಾಗಿದೆ. ಐಪಿಎಲ್‌ನ ಮೊದಲ ಪ್ಲೈ ಆಫ್ ಪಂದ್ಯದ ನಂತರ ಹೀಟ್ ಸ್ಟ್ರೋಕ್ ಒಳಗಾಗಿದ್ದು, ಶಾರುಖ್ ಖಾನ್‌ರನ್ನು ಅಹಮದಾಬಾದ್‌ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಇದನ್ನೂ ಓದಿ:ದುಬಾರಿ ಕಾರು ಖರೀದಿಸಿದ ತೆಲುಗು ನಟ ನಾಗಚೈತನ್ಯ

    ಪಠಾಣ್ ನಟ ಶಾರುಖ್ ಖಾನ್ ಅವರು ಆಸ್ಪತ್ರೆಗೆ ದಾಖಲಾಗಿರುವುದನ್ನು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ. ಆದರೆ ಯಾವ ಕಾರಣಕ್ಕಾಗಿ ಅವರು ಅಡ್ಮಿಟ್ ಆಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ಡಿಹೈಡ್ರೇಷನ್ ಮತ್ತು ಹೀಟ್ ಸ್ಟ್ರೋಕ್ ಕಾರಣದಿಂದ ಶಾರುಖ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

    ಗುಜರಾತ್‌ನಲ್ಲಿ ಈಗ ಬಿಸಿಗಾಳಿ ಬೀಸುತ್ತಿದೆ. ಕಾರಣಕ್ಕಾಗಿ ಅವರು ಆರೋಗ್ಯ ಸಮಸ್ಯೆಗೆ ಒಳಗಾಗಿದ್ದರು. ಸದ್ಯ ಚಿಕಿತ್ಸೆ ಪಡೆದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಶಾರುಖ್ ಕುಟುಂಬ ಅಧಿಕೃತ ಮಾಹಿತಿ ನೀಡುವವರೆಗೂ ಕಾಯಬೇಕಿದೆ.


    ನಟ ಶಾರುಖ್ ಖಾನ್ ಒಡೆತನದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಐಪಿಲ್ 2024ರಲ್ಲಿ ಫೈನಲ್ ತಲುಪಿದೆ. ಮೇ 21ರಂದು ಸನ್ ರೈಸರ್ಸ್ ಹೈದರಾಬಾದ್ ತಂಡದ ಎದುರು ಕೋಲ್ಕತ್ತ ನೈಟ್ ರೈಡರ್ಸ್ ತಂಡ ಫೈನಲ್ ತಲುಪಿದೆ.

  • ಶಾರುಖ್ ಖಾನ್ ಪುತ್ರಿ ಸುಹಾನಾ ಹುಟ್ಟುಹಬ್ಬಕ್ಕೆ ಬಿಟೌನ್ ಸ್ಟಾರ್ಸ್‌ಗಳ ವಿಶ್

    ಶಾರುಖ್ ಖಾನ್ ಪುತ್ರಿ ಸುಹಾನಾ ಹುಟ್ಟುಹಬ್ಬಕ್ಕೆ ಬಿಟೌನ್ ಸ್ಟಾರ್ಸ್‌ಗಳ ವಿಶ್

    ಠಾಣ್’ ಸೂಪರ್ ಸ್ಟಾರ್ ಶಾರುಖ್ ಖಾನ್ (Sharukh Khan)  ಪುತ್ರಿ ಸುಹಾನಾ ಖಾನ್ (Suhana Khan) ಇಂದು (ಮೇ 22) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸುಹಾನಾ 24ನೇ ವರ್ಷದ ಹುಟ್ಟುಹಬ್ಬಕ್ಕೆ ಬಾಲಿವುಡ್ ನಟ-ನಟಿಯರು ಸ್ಪೆಷಲ್ ಆಗಿ ವಿಶ್ ಮಾಡಿದ್ದಾರೆ.

    ಸದ್ಯ ಬರ್ತ್‌ಡೇ ಖುಷಿಯಲ್ಲಿರುವ ನಟಿಗೆ ಅನನ್ಯಾ ಪಾಂಡೆ, ಬಿಗ್ ಬಿ ಮೊಮ್ಮಗಳು ನಂದಾ, ಸಾರಾ ಸೇರಿದಂತೆ ಅನೇಕರು ಪ್ರೀತಿಯಿಂದ ಶುಭಕೋರಿದ್ದಾರೆ.‌ ಇದನ್ನೂ ಓದಿ:ಶ್ರೀವಲ್ಲಿ ಫ್ಯಾನ್ಸ್‌ಗೆ ಸಿಹಿಸುದ್ದಿ- ‘ಪುಷ್ಪ 2’ ಅಪ್‌ಡೇಟ್ ಹಂಚಿಕೊಂಡ ರಶ್ಮಿಕಾ ಮಂದಣ್ಣ

    ಅದಷ್ಟೇ ಅಲ್ಲ, ಮೇ 21ರಂದು ಶಾರುಖ್ ಒಡೆತನದ ಕೋಲ್ಕತ್ತಾ ನೈಟ ರೈಡರ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದೆ. ಈ ಮೂಲಕ ಫೈನಲ್ ತಲುಪಿದೆ. ಈ ಮ್ಯಾಚ್ ನೋಡಲು ತಂದೆ ಜೊತೆ ಸುಹಾನಾ ಖಾನ್ ಕೂಡ ಇದ್ದರು. ಈ ಮೂಲಕ ಸುಹಾನಾ ಬರ್ತ್‌ಡೇ ಕೆಕೆಆರ್ ಗೆಲುವಿನ ಉಡುಗೊರೆ ಸಿಕ್ಕಂತೆ ಆಗಿದೆ.


    ಸುಹಾನಾ ಈ ವರ್ಷ ಬೆಳ್ಳಿತೆರೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಅದಕ್ಕಾಗಿ ತಯಾರಿ ಕೂಡ ಮಾಡಿಕೊಂಡಿದ್ದಾರೆ. ಕಿಂಗ್ ಸಿನಿಮಾದಲ್ಲಿ ತಂದೆಯೇ ಜೊತೆ ಸುಹಾನಾ ಪರಿಚಿತರಾಗುತ್ತಿದ್ದಾರೆ. 100 ಕೋಟಿ ರೂ. ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ.

  • ಮತ್ತೆ ಶಾರುಖ್ ಖಾನ್ ಜೊತೆ ಕೈಜೋಡಿಸಿದ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ ರವಿಚಂದರ್

    ಮತ್ತೆ ಶಾರುಖ್ ಖಾನ್ ಜೊತೆ ಕೈಜೋಡಿಸಿದ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ ರವಿಚಂದರ್

    ಬಾಲಿವುಡ್ ನಟ ಶಾರುಖ್ ಖಾನ್ (Sharukh Khan) ‘ಪಠಾಣ್’ ಮತ್ತು ‘ಜವಾನ್’ ಸಿನಿಮಾದ ಸಕ್ಸಸ್ ನಂತರ ಇದೀಗ ‘ಕಿಂಗ್’ (King Film) ಚಿತ್ರದ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಕಿಂಗ್ ಸಿನಿಮಾಗಾಗಿ ಶಾರುಖ್ ಖಾನ್ ಜೊತೆ ‘ಜವಾನ್’ ಖ್ಯಾತಿಯ ಅನಿರುದ್ಧ ರವಿಚಂದರ್ (Anirudh Ravichander) ಕೈಜೋಡಿಸಿದ್ದಾರೆ.

    ಸದ್ಯ ಸಂಗೀತ ಕ್ಷೇತ್ರದಲ್ಲಿ ಗಾಯನ ಮತ್ತು ಸಂಗೀತ ನಿರ್ದೇಶನದ ಮೂಲಕ ಮೋಡಿ ಮಾಡಿರುವ ಅನಿರುದ್ಧ ರವಿಚಂದರ್‌ಗೆ ಬೇಡಿಕೆ ಹೆಚ್ಚಾಗಿದೆ. ಅದರಲ್ಲೂ ‘ಜವಾನ್’ ಮತ್ತು ಜೈಲರ್ ಸಿನಿಮಾದ ಹಾಡುಗಳು ಸೂಪರ್ ಹಿಟ್ ಆದ್ಮೇಲೆ ಅನಿರುದ್ಧ ಸಂಭಾವನೆ ಕೂಡ ಹೆಚ್ಚಾಗಿದೆ. ಇದನ್ನೂ ಓದಿ:ಕೈಗೆ ಬ್ಯಾಂಡೇಜ್ ಸುತ್ತಿಕೊಂಡೇ ಕಾನ್ಸ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ಐಶ್ವರ್ಯಾ ರೈ

    ಶಾರುಖ್ ಖಾನ್ ಕೆರಿಯರ್‌ನಲ್ಲಿ ‘ಜವಾನ್’ (Jawan)  ಸಿನಿಮಾ ಸೂಪರ್ ಸಕ್ಸಸ್ ತಂದುಕೊಟ್ಟಿತ್ತು. ಆ ಯಶಸ್ಸಿನಲ್ಲಿ ಅನಿರುದ್ಧ ರವಿಚಂದರ್ ಪ್ರತಿಭೆ ಕೂಡ ಕ್ಲಿಕ್ ಆಗಿತ್ತು. ಜವಾನ್ ಚಿತ್ರಕ್ಕೆ ಕೊಟ್ಟಿರುವ ಹಿಟ್ ಹಾಡುಗಳಿಂದ ಸಿನಿಮಾ ಸಕ್ಸಸ್ ಆಗಲು ಕಾರಣವಾಗಿತ್ತು. ಹಾಗಾಗಿ ಶಾರುಖ್ ಮುಂದಿನ ಸಿನಿಮಾಗೂ ಅನಿರುದ್ಧ ರವಿಚಂದರ್ ಕೆಲಸ ಮಾಡಲು ಆಫರ್ ಸಿಕ್ಕಿದೆ.

    ಪುತ್ರಿ ಸುಹಾನಾ ಖಾನ್‌ರನ್ನು ಲಾಂಚ್ ಮಾಡುತ್ತಿರುವ ‘ಕಿಂಗ್’ ಸಿನಿಮಾಗೂ ಅನಿರುದ್ಧ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ. ಶಾರುಖ್ ಖಾನ್ ನಟನೆಯ ಜೊತೆ ನಿರ್ಮಾಣ ಕೂಡ ಮಾಡುತ್ತಿದ್ದಾರೆ. ಸದ್ಯ ಸಿನಿಮಾದ ಅಪ್‌ಡೇಟ್ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.