Tag: ಶಾರ್ದುಲ್ ಠಾಕೂರ್

  • ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಉತ್ತಮ ಆಯ್ಕೆ: ಎಂಎಸ್‌ಕೆ ಪ್ರಸಾದ್

    ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಉತ್ತಮ ಆಯ್ಕೆ: ಎಂಎಸ್‌ಕೆ ಪ್ರಸಾದ್

    ನವದೆಹಲಿ: ದಕ್ಷಿಣ ಆಫ್ರಿಕಾದ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ವಿರಾಟ್‌ಕೊಹ್ಲಿ ನಾಯಕತ್ವದ ಭಾರತ ತಂಡ ಕಠೀಣ ಅಭ್ಯಾಸ ನಡೆಸುತ್ತಿದೆ. ಡಿಸೆಂಬರ್ 26 ರಿಂದ ಸೆಂಚೂರಿಯನ್‌ನಲ್ಲಿ ಆರಂಭವಾಗಲಿರುವ ಮೊದಲನೆ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಈಗಾಗಲೇ ಸಿದ್ಧತೆ ನಡೆಸುತ್ತಿದೆ.

    ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ಮೊದಲನೇ ಟೆಸ್ಟ್ ಪಂದ್ಯಕ್ಕೆ ಹಲವು ಮಾಜಿ ಕ್ರಿಕೆಟಿಗರು ಭಾರತ ತಂಡದ ಪ್ಲೇಯಿಂಗ್ ಇಲೆವೆನ್ ಬಗ್ಗೆ ತಮ್ಮದೇ ಆದ ಸಲಹೆಗಳನ್ನು ನೀಡಿದ್ದಾರೆ.

    ಹರಿಣಗಳ ವಿರುದ್ಧ ಆಡಲಿರುವ ಮೊದಲನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಐವರು ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯಲಿದೆ, ಟೀಮ್ ಮ್ಯಾನೇಜ್‌ಮೆಂಟ್ 5ನೇ ಬೌಲಿಂಗ್ ಆಯ್ಕೆಗೆ ಆಲ್‌ರೌಂಡರ್ ಶಾರ್ದುಲ್ ಠಾಕೂರ್ ಅವರನ್ನು ಪರಿಗಣಿಸಿದರೆ ಒಳ್ಳೆಯದು. ಆ ಮೂಲಕ ಅವರನ್ನು ನೀವು 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿಸಬಹುದು ಎಂದು ಮಾಜಿ ಆಯ್ಕೆ ಸಮಿತಿ ಸದಸ್ಯ ಎಂಎಸ್‌ಕೆ ಪ್ರಸಾದ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ 2022 – ಯಾರು ಯಾವ ತಂಡಕ್ಕೆ ನಾಯಕ? – ಇಲ್ಲಿದೆ ಪೂರ್ಣ ವಿವರ

    ಇಂಗ್ಲೆAಡ್ ವಿರುದ್ಧದ ಕಳೆದ ಟೆಸ್ಟ್ ಸರಣಿಯಲ್ಲಿ ಶಾರ್ದುಲ್ ಠಾಕೂರ್ ಒಳ್ಳೆಯ ಪ್ರದರ್ಶನ ನೀಡಿದ್ದರು ಹಾಗೂ ದಿ ಓವಲ್‌ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್ನಲ್ಲಿಅರ್ಧಶತಕ ಸಿಡಿಸಿದ್ದರು. ಇದರ ಜೊತೆಗೆ ಬೌಲಿಂಗ್‌ನಲ್ಲೂ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಆದ್ದರಿಂದ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ಟೆಸ್ಟ್ ಪಂದ್ಯಕ್ಕೆ ಠಾಕೂರ್ ಅನ್ನು ಅಯ್ಕೆ ಮಾಡುವುದು ಉತ್ತಮ ಎಂದರು.

    ಆರ್ ಅಶ್ವಿನ್ ಅವರೊಂದಿಗೆ ಶಾರ್ದುಲ್ ಅವರನ್ನು 7ನೇ ಕ್ರಮಾಂಕದಲ್ಲಿ ಆಡಿಸಬಹುದು. ಜಸ್‌ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಆರ್.ಆಶ್ವಿನ್ ಹಾಗೂ ಮೊಹಮ್ಮದ್ ಸಿರಾಜ್ ಸೇರಿ ನಾಲ್ವರು ಬೌಲರ್‌ಗಳು ಈಗಾಗಲೇ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ. ಇದನ್ನೂ ಓದಿ: ಮಿಸಸ್ ಇಂಡಿಯಾ ಅರ್ಥ್ ಗೆದ್ದ ಬೆಂಗಳೂರಿನ ವೈದ್ಯೆ

  • ಊರುಗೋಲು ಹಿಡ್ಕೊಂಡು ಹೋಟೆಲಿಗೆ ಬಂದು ಟೀಂ ಇಂಡಿಯಾಗೆ ಶುಭಾಶಯ ಹೇಳಿದ ಶಾರ್ದೂಲ್

    ಊರುಗೋಲು ಹಿಡ್ಕೊಂಡು ಹೋಟೆಲಿಗೆ ಬಂದು ಟೀಂ ಇಂಡಿಯಾಗೆ ಶುಭಾಶಯ ಹೇಳಿದ ಶಾರ್ದೂಲ್

    ನವದೆಹಲಿ: ಕಾಲಿಗೆ ಗಾಯವಾಗಿ ಲಂಡನ್‍ನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುತ್ತಿರುವ ಬೌಲರ್ ಶಾರ್ದೂಲ್ ಠಾಕೂರ್ ಕಾಲಿಗೆ ಬ್ಯಾಂಡೇಜ್ ಹಾಕಿಕೊಂಡು ಹೋಗಿ ಟೀಂ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.

    ಐಪಿಎಲ್ 12 ಅವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಅಡಿದ ಶಾರ್ದೂಲ್ ಠಾಕೂರ್ ಅವರು ಬೌಲಿಂಗ್ ಮಾಡುವ ಸಮಯದಲ್ಲಿ ಬಲಗಾಲಿಗೆ ಪೆಟ್ಟು ಬಿದ್ದಿತ್ತು. ಇದಕ್ಕೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಲಂಡನ್‍ನ ಕಾರ್ಡಿಫ್ ಹೋಗಿದ್ದರು.

    ಈ ನಡುವೆ ಊರುಗೋಲು ಸಹಾಯದಿಂದಲೇ ಭಾರತ ತಂಡದ ಆಟಗಾರರು ಇರುವ ಹೋಟೆಲಿಗೆ ತೆರಳಿದ ಶಾರ್ದೂಲ್ ಠಾಕೂರ್ ಟೀಂ ಇಂಡಿಯಾದ ಎಲ್ಲಾ ಆಟಗಾರರನ್ನು ಭೇಟಿಯಾಗಿ ವಿಶ್ವಕಪ್ ಗೆದ್ದು ತರುವಂತೆ ಶುಭಾಶಯ ತಿಳಿಸಿ ಬಂದಿದ್ದಾರೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್ ಧೋನಿ ಅವರನ್ನು ಭೇಟಿಯಾಗಿ ಕೆಲ ಸಮಯ ಸಮಲೋಚನೆ ನಡೆಸಿದರು. ಈ ಸಮಯದಲ್ಲಿ ಭಾರತದ ಉಪನಾಯಕ ರೋಹಿತ್ ಶರ್ಮಾ ಅವರು ಶಾರ್ದೂಲ್ ಠಾಕೂರ್ ಅವರ ಅರೋಗ್ಯದ ಬಗ್ಗೆ ವಿಚಾರಿಸಿ ಲಂಡನ್‍ನಿನಲ್ಲೇ ಚಿಕಿತ್ಸೆ ಪಡೆಯುವಂತೆ ಸಲಹೆ ನೀಡಿದ್ದಾರೆ.

    https://www.instagram.com/p/Bx7E1xoA6BL/?utm_source=ig_embed

    ಗಾಯದ ಸಮಸ್ಯೆ ನಡುವೆಯೂ ನಮ್ಮನ್ನು ನೋಡಲು ಬಂದ ಶಾರ್ದುಲ್ ಠಾಕೂರ್ ಅವರು ಬೇಗ ಗುಣವಾಗಲಿ ಎಂದು ಟೀಂ ಇಂಡಿಯಾ ಆಟಗಾರರು ದೇವರಲ್ಲಿ ಕೇಳಿಕೊಂಡಿದ್ದಾರೆ.

    2019ರ ವಿಶ್ವಕಪ್ ಟೂರ್ನಿ ಮೇ 30ಕ್ಕೆ ಅರಂಭವಾಗಲಿದ್ದು, ಆಡಿದ ಮೊದಲ ಅಭ್ಯಾಸ ಪಂದ್ಯದಲ್ಲೇ ನ್ಯೂಜಿಲ್ಯಾಂಡ್ ವಿರುದ್ಧ ಸೋಲು ಕಂಡ ಭಾರತ ಮುಂದಿನ ಅಭ್ಯಾಸ ಪಂದ್ಯವನ್ನು ಮೇ 28ಕ್ಕೆ ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಜೂನ್ 6 ರಂದು ಲೀಗ್ ಹಂತದ ಮೊದಲ ಪಂದ್ಯವನ್ನು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.