Tag: ಶಾಲಾ ಕಾಲೇಜು

  • ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಸರ್ಕಾರ ಬ್ರೇಕ್

    ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಸರ್ಕಾರ ಬ್ರೇಕ್

    ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಾಲಾ-ಕಾಲೇಜುಗಳಲ್ಲಿ (Residential School and Colleges) ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡದಂತೆ ಆದೇಶ ಹೊರಡಿಸಲಾಗಿದೆ.

    ಸರ್ಕಾರದ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನ ಇನ್ನು ಮುಂದೆ ವಸತಿ ಶಾಲಾ-ಕಾಲೇಜುಗಳಲ್ಲಿ ಆಚರಣೆ ಮಾಡದಂತೆ ಸುತ್ತೋಲೆ ಹೊರಡಿಸಿದೆ.

    ಯುಗಾದಿ, ರಂಜಾನ್, ಕ್ರಿಸ್ಮಸ್, ಸಂಕ್ರಾಂತಿ, ಈದ್ ಮಿಲಾದ್ ಸೇರಿ ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು. ಕೇವಲ ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಮತ್ತು ಆಯ್ದ ಮಹಾ ಪುರುಷರು ಜಯಂತಿ ಸೇರಿ 10 ಆಚರಣೆಗಳನ್ನ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಭರತ್ ಶೆಟ್ಟಿ ವಿರುದ್ಧ ಕೇಸ್ – ಇನ್ಸ್‌ಪೆಕ್ಟರ್‌ ಫೋನ್‌ಕಾಲ್ ಡಿಟೇಲ್ಸ್ ಚೆಕ್ ಮಾಡಿ: ಸದನದಲ್ಲಿ ಅಶೋಕ್ ಆಗ್ರಹ

    ಆದೇಶದ ಪ್ರಕಾರ, ಗಣರಾಜ್ಯೋತ್ಸವ ಸ್ವಾತಂತ್ರ್ಯ ದಿನಾಚರಣೆ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ, ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸರ ಜಯಂತಿ, ಬಸವ ಜಯಂತಿ, ಸಂವಿಧಾನ ದಿನಾಚರಣೆ ಹಾಗೂ ಯೋಗ ದಿನಾಚರಣೆ ಮಾತ್ರ ಆಚರಣೆ ಮಾಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಒಂದು ವೇಳೆ ನಿಯಮ ಮೀರಿ ಧಾರ್ಮಿಕ ಹಬ್ಬಗಳು‌ ಆಚರಣೆ ಮಾಡಿದರೆ ಶಾಲಾ-ಕಾಲೇಜುಗಳ ಮುಖ್ಯಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳೋದಾಗಿ ಆದೇಶದಲ್ಲಿ ತಿಳಿಸಲಾಗಿದೆ.

  • ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಸೋಮವಾರ ಶಾಲಾ, ಕಾಲೇಜುಗಳಿಗೆ ರಜೆ

    ಮಳೆ ಅಬ್ಬರ – ಈ ಜಿಲ್ಲೆಗಳಲ್ಲಿ ಸೋಮವಾರ ಶಾಲಾ, ಕಾಲೇಜುಗಳಿಗೆ ರಜೆ

    ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರಿನ ಅಬ್ಬರ ಜೋರಾಗಿದೆ. ಮಳೆಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

    ಹಾಸನ
    ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಐದು ತಾಲ್ಲೂಕುಗಳ ಪ್ರಾಥಮಿಕ ಮತ್ತು ಪ್ರೌಡಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಆದೇಶ ಹೊರಡಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗ ಸೇರಿ ವಿವಿಧೆಡೆ ವರುಣ ಅಬ್ಬರಿಸುತ್ತಿದ್ದು, ನಾಳೆ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಹಾಸನ ತಾಲ್ಲೂಕಿನ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ನೀಡಲಾಗಿದ್ದು, ಕಾಲೇಜುಗಳಿಗೆ ರಜೆ ನೀಡಿಲ್ಲ.

    ಶಿವಮೊಗ್ಗ
    ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ ಎರಡು‌ ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚನೆ ಮೇರೆಗೆ ಡಿಡಿಪಿಐ ಪರಮೇಶ್ವರಪ್ಪ ರಜೆ ಘೋಷಿಸಿ ಆದೇಶಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು, ಭಾನುವಾರ ಇಡೀ ದಿನ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

    ಧಾರವಾಡ
    ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆ ರಜೆ ಘೋಷಿಸಿದ್ದಾರೆ. ಶಾಲಾ‌ ಮಕ್ಕಳ ಹಿತರಕ್ಷಣೆ ಉದ್ದೇಶದಿಂದ ರಜೆ ಘೋಷಿಸಿದ್ದು, ಈ ಬಗ್ಗೆ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಲಾಗಿದೆ ನೀಡಲಾಗಿದೆ.

    ಹಾವೇರಿ
    ಹಾವೇರಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ. ಪದವಿ ಮತ್ತು ಐಟಿಐ ಕಾಲೇಜುಗಳು ಎಂದಿನಂತೆ ನಡೆಯಲಿವೆ.

    ಉಡುಪಿ
    ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಅಪಾಯದ ಮಟ್ಟ ಮೀರಿ ನದಿ ನೀರು ಹರಿಯುತ್ತಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

    ದಾವಣಗೆರೆ
    ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಚನ್ನಗಿರಿ, ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನಾದ್ಯಂತ ಶಾಲೆಗಳಿಗೆ ನಾಳೆ ರಜೆ ಇದೆ. ಅಯಾ ತಾಲ್ಲೂಕು ಅಡಳಿತ ಹಾಗೂ ಶಿಕ್ಷಣ ಇಲಾಖೆಯಿಂದ ಅದೇಶ ಹೊರಡಿಸಲಾಗಿದೆ.

    ಚಿಕ್ಕಮಗಳೂರು
    ಜಿಲ್ಲೆಯ ಕೊಪ್ಪ ತಾಲ್ಲೂಕಿನ‌ ಶಾಲಾ‌-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ತಹಶೀಲ್ದಾರ್‌ ಆದೇಶಿಸಿದ್ದಾರೆ.

    ಬೆಳಗಾವಿ
    ವ್ಯಾಪಕ ಮಳೆಯಾಗುತ್ತಿರುವ ಕಾರಣ ಬೆಳಗಾವಿಯ ಖಾನಾಪುರ, ಬೆಳಗಾವಿ, ಕಿತ್ತೂರ ತಾಲ್ಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.

    ಉತ್ತರ ಕನ್ನಡ
    ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಶಾಲಾ-ಕಾಲೇಜುಗಳಿಗೆ (ಅಂಗನವಾಡಿಯಿಂದ ದ್ವಿತೀಯ ಪಿಯು ವರೆಗೆ) ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಹೊನ್ನಾವರ ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಆದೇಶಿಸದ್ದಾರೆ. ಹೊನ್ನಾವರ ವ್ಯಾಪ್ತಿಯ ಗುಂಡಬಾಳ ನದಿ, ಭಾಸ್ಕೇರಿ ಹೊಳೆ ಉಕ್ಕಿ ಹರಿಯುತ್ತಿರುವ ಪರಿಣಾಮ ಹಲವು ಗ್ರಾಮಗಳಿಗೆ ಎದುರಾಗಿರುವ ಪ್ರವಾಹ ಆತಂಕ ಸೃಷ್ಟಿಯಾಗಿದೆ. ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಹಿನ್ನಲೆಯಲ್ಲಿ ರಾತ್ರಿ ಮತ್ತೆ ನದಿ, ಹೊಳೆ ಹರಿವು ಹೆಚ್ಚುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

    ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.

    ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿಗೆ ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಉಳಿದೆಡೆ ತಹಶೀಲ್ದಾರ್ ಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿದ್ದಾರೆ.

    ಮಳೆ ಪರಿಸ್ಥಿತಿ ನೋಡಿಕೊಂಡು ಆಯಾ ತಾಲೂಕು ತಹಶೀಲ್ದಾರ್ ಗಳು ರಜೆ ಘೋಷಿಸುವಂತೆ ಸೂಚನೆ ನೀಡಿದ್ದಾರೆ. ಸದ್ಯ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

    ಸೋಮವಾರ ಸಂಜೆ ವೇಳೆಗೆ ಸುಮಾರು ಎರಡು ಗಂಟೆಗಳ ಕಾಲ ಸುರಿದ ಭಾರೀ ಮಳೆ (Heavy Rain In Dakshina Kannada) ಜನ ಜೀವನವನ್ನೇ ಅಸ್ತವ್ಯಸ್ತವನ್ನಾಗಿಸಿತ್ತು. ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ನಗರದ ಹೆಬ್ಬಾಗಿಲು ಎಂದೆನಿಸಿಕೊಂಡಿರುವ ಪಂಪ್‍ವೆಲ್ ಸರ್ಕಲ್‍ನಲ್ಲಿ ಪಕ್ಕದ ಚರಂಡಿ ತುಂಬಿ ರಸ್ತೆ ಜಲಾವೃತವಾಗಿತ್ತು. ಸುಮಾರು ಅರ್ಧ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಿದ್ದವು.

    ಪಂಪ್‍ವೆಲ್ ಸರ್ಕಲ್‍ನಲ್ಲಿ (Pumpwell Circle) ರಾಷ್ಟ್ರೀಯ ಹೆದ್ದಾರಿಗೆ ಫ್ಲೈಓವರ್ ಆದಾಗಿನಿಂದ ಈ ಸಮಸ್ಯೆ ಇದೆ. ಫ್ಲೈಓವರ್‍ನ ಅಡಿ ಭಾಗದಲ್ಲಿ ನಗರಕ್ಕೆ ಹೋಗೋ ವಾಹನಗಳಿಗೆ ರಸ್ತೆಯಿದ್ದು ಅಲ್ಲೇ ಸಮೀಪದಲ್ಲಿ ಚರಂಡಿ ಇದೆ. ಈ ಚರಂಡಿಯ ಒಂದು ಭಾಗ ಎತ್ತರವಿದ್ದು ಇನ್ನೊಂದು ಭಾಗ ಕೆಳಗಿದೆ. ಹೀಗಾಗಿ ನೀರು ಹರಿದು ಹೋಗಬೇಕಿದ್ದ ಭಾಗದಲ್ಲಿ ಎತ್ತರ ಇರೋದ್ರಿಂದ ನೀರು ರಸ್ತೆಗೆ ನುಗ್ಗಿ ಬರುತ್ತದೆ. ಕಳೆದ ಐದಾರು ವರ್ಷದಿಂದ ಈ ಸಮಸ್ಯೆ ಇದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕೂತಿದ್ದಾರೆ. ಹೀಗಾಗಿ ಈ ಸಮಸ್ಯೆ ಪ್ರತೀ ವರ್ಷದ ಮೊದಲ ಮಳೆಗೆ ಇದ್ದೇ ಇರುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಮಾಡಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದ್ರೂ ಪ್ರಯೋಜನ ಆಗಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊರೊನಾ ಭೀತಿಗೆ ಶಿಕ್ಷಣ ಇಲಾಖೆ ಅಲರ್ಟ್- ಶಾಲಾ-ಕಾಲೇಜುಗಳಲ್ಲಿ ಕೆಲ ನಿಯಮ ಜಾರಿಗೆ ಚಿಂತನೆ

    ಕೊರೊನಾ ಭೀತಿಗೆ ಶಿಕ್ಷಣ ಇಲಾಖೆ ಅಲರ್ಟ್- ಶಾಲಾ-ಕಾಲೇಜುಗಳಲ್ಲಿ ಕೆಲ ನಿಯಮ ಜಾರಿಗೆ ಚಿಂತನೆ

    ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಕೊರೊನಾ (Corona Virus) ನಿಯಂತ್ರಣಕ್ಕೆ ತಜ್ಞರ ಸಲಹೆಯ ಬೆನ್ನಲ್ಲೇ ಶಿಕ್ಷಣ ಇಲಾಖೆ (Education Department) ಯೂ ಅಲರ್ಟ್ ಆಗಿದೆ. ಶಾಲಾ-ಕಾಲೇಜುಗಳ ಕೊರೊನಾ ಕಂಟ್ರೋಲ್ ಗೆ ನಿಯಮ ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿಯೊಂದು ಲಭಿಸಿದೆ.

    1, 2 ಮತ್ತು 3 ನೇ ಅಲೆಯ ವೇಳೆ ತೆಗೆದುಕೊಂಡಿದ್ದ ಮುಂಜಾಗ್ರತಾ ಕ್ರಮಗಳನ್ನೇ ಮತ್ತೆ ಜಾರಿ ಮಾಡಲು ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಕೊರೊನಾ ಮಾರ್ಗಸೂಚಿ ಪಾಲನೆ ಮಾನಿಟರ್ ಮಾಡಲು ಬಿಇಓ, ಡಿಡಿಪಿಐ, ಡಿಡಿಪಿಯುಗಳಿಗೆ ಜವಾಬ್ದಾರಿ ವಹಿಸಲಾಗುತ್ತದೆ. ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿ ಕೊರೊನಾ ನಿಯಮ ಪಾಲನೆ ಆಗಬೇಕು ಅಂತ ಸೂಚನೆ ನೀಡಲಾಗುತ್ತೆ.

    ಶಿಕ್ಷಣ ಇಲಾಖೆ ಮಾರ್ಗಸೂಚಿ ಏನು?: ಶಾಲಾ-ಕಾಲೇಜುಗಳ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಲು ಕ್ರಮವಹಿಸಬೇಕು. ಅಲ್ಲದೆ ಕಡ್ಡಾಯವಾಗಿ ಸ್ಯಾನಿಟೈಸರ್ (Sanitizer) ಬಳಕೆ ಕೂಡ ಮಾಡಬೇಕು. ಶಾಲಾ-ಕಾಲೇಜುಗಳ ಆವರಣಕ್ಕೆ ಸಾರ್ವಜನಿಕರು, ಪೋಷಕರಿಗೆ ನಿಷೇಧ ಹಾಕಬೇಕು. ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿರಬೇಕು. ಜೊತೆಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು.

    ಅಡುಗೆ ಸಿಬ್ಬಂದಿ, ಸಹಾಯಕರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿರಬೇಕು. ಜೊತೆಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು. ಬಿಸಿಯೂಟ ಮಾಡುವಾಗ ಅಡುಗೆ ಸಿಬ್ಬಂದಿ ಶುಚಿತ್ವ ಕಾಪಾಡಲು ಕ್ರಮವಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಬರೋವಾಗ, ಹೋಗುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು. ಇದನ್ನೂ ಓದಿ: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪಾಸಿಟಿವ್ ಬಂದ್ರೆ ಕ್ವಾರಂಟೈನ್‌

    ಪ್ರಾರ್ಥನೆ, ಊಟದ ಸಮಯ, ತರಗತಿ ಒಳಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು. ಆರೋಗ್ಯ ವ್ಯತ್ಯಾಸ ಇರೋ ವಿದ್ಯಾರ್ಥಿಗಳು, ಶಿಕ್ಷಕರ ವರ್ಗಗಳಿಗೆ ಶಾಲಾ-ಕಾಲೇಜುಗಳಿಗೆ ಬರಲು ಅವಕಾಶ ಕೊಡಬಾರದು. ಶಾಲಾ-ಕಾಲೇಜುಗಳ ಸೋಂಕು ಕಂಡು ಬಂದರೆ ತರಗತಿಯ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಬೇಕು.

    ಆರೋಗ್ಯ ವ್ಯತ್ಯಾಸ ಇರೋ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿಸಬೇಕು. ಶಾಲಾ-ಕಾಲೇಜುಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಶಾಲೆ ಆವರಣ, ಕೊಠಡಿಗಳಲ್ಲಿ ಶುಚಿತ್ವ ಕಾಪಾಡಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ (Vaccine) ಹಾಕಿಸಲು ಶಾಲಾ ಹಂತದಲ್ಲಿ ಕ್ರಮವಹಿಸಬೇಕು.

    Live Tv
    [brid partner=56869869 player=32851 video=960834 autoplay=true]

  • ತಮಿಳುನಾಡಿನಲ್ಲಿ ವರುಣನ ಅಬ್ಬರ – ಶಾಲಾ ಕಾಲೇಜುಗಳಿಗೆ ರಜೆ

    ತಮಿಳುನಾಡಿನಲ್ಲಿ ವರುಣನ ಅಬ್ಬರ – ಶಾಲಾ ಕಾಲೇಜುಗಳಿಗೆ ರಜೆ

    ಚೆನ್ನೈ: ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಸಾಕಷ್ಟು ಹಾನಿಯುಂಟಾಗುತ್ತಿದೆ. ಈ ಹಿನ್ನೆಲೆ ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳು ತಮಿಳುನಾಡು (Tamil Nadu) ಮತ್ತು ಪುದುಚೇರಿಯ (Puducherry) ಹಲವಾರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.

    ಶುಕ್ರವಾರ ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಕಲ್ಲಕುರಿಚಿ, ಸೇಲಂ, ವೆಲ್ಲೂರು, ತಿರುಪತ್ತೂರು, ರಾಣಿಪೇಟ್, ತಿರುವಣ್ಣಾಮಲೈ ಮತ್ತು ಪುದುಚೇರಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (Indian Metrological Department) ರೆಡ್ ಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಬೆಂಗ್ಳೂರಿಗೆ ಮೋದಿ ಆಗಮನ – BMTC, KSRTC ಬಸ್ ಸಂಚಾರ 2 ಗಂಟೆ ಸ್ಥಗಿತ

    weather

    ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವಾರೂರ್, ನಾಗಪಟ್ಟಿಣಂ, ತಂಜಾವೂರು, ವಿಲ್ಲುಪುರಂ ಮತ್ತು ಅರಿಯಲೂರು ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಭಯಂಕರವಾಗಿ ಆಡಿದ್ರೂ ಭಾರತ ಸೋಲೋದಕ್ಕೆ ಅರ್ಹವಾಗಿತ್ತು- ಅಖ್ತರ್ ಟೀಕೆ

    ರಾಣಿಪ್ಪೆಟ್ಟೈ ತಿರುವಣ್ಣಾಮಲೈ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್‍ಪಟ್ಟು, ವಿಲ್ಲುಪುರಂ, ಕಲ್ಲಕ್ಕುರಿಚಿ, ಕಡಲೂರು, ಅರಿಯಲೂರ್, ಪೆರಂಬಲೂರ್, ತಂಜಾವೂರು, ಮೈಲಾಡು, ತಿರುವರುರೈ, ತಿರುವರುರೈ, ರಾಣಿಪ್ಪೆಟ್ಟೈ ತಿರುವಣ್ಣಾಮಲೈನಲ್ಲಿ ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಮಾಪನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಶಾಲಾ-ಕಾಲೇಜುಗಳಲ್ಲಿ ಇನ್ಮುಂದೆ 10 ನಿಮಿಷ ಧ್ಯಾನ: ಬಿ.ಸಿ. ನಾಗೇಶ್ ಪತ್ರ

    ಶಾಲಾ-ಕಾಲೇಜುಗಳಲ್ಲಿ ಇನ್ಮುಂದೆ 10 ನಿಮಿಷ ಧ್ಯಾನ: ಬಿ.ಸಿ. ನಾಗೇಶ್ ಪತ್ರ

    ಬೆಂಗಳೂರು: ಶಾಲಾ-ಕಾಲೇಜು (School-College) ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿ, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ (Meditation) ಮೊರೆ ಹೋಗಿದೆ. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

    ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (B.C. Nagesh), ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು. ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.

    ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದವರು ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಬಿ.ಸಿ. ನಾಗೇಶ್ ಅವರಿಗೆ ಪತ್ರ ಬರೆದಿದ್ದರು. ಮಕ್ಕಳ ಏಕಾಗ್ರತೆ, ಆರೋಗ್ಯ ವೃದ್ಧಿ, ಒತ್ತಡ ನಿವಾರಣೆ ದೃಷ್ಟಿಯಿಂದ ಸಚಿವರು ಧ್ಯಾನ ಮಾಡಿಸುವ ಮನವಿಗೆ ಸ್ಪಂದನೆ ನೀಡಿದ್ದಾರೆ.  ಇದನ್ನೂ ಓದಿ: ಮಾಜಿ ಸಂಸದರಾದ ಮುದ್ದಹನುಮೇಗೌಡ, ನಟ ಶಶಿಕುಮಾರ್‌ ಬಿಜೆಪಿ ಸೇರ್ಪಡೆ

    ಬಿ.ಸಿ. ನಾಗೇಶ್ ಅವರು ಪತ್ರದ ಮೇಲೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದು, ಶೀಘ್ರವೇ ಶಾಲಾ-ಕಾಲೇಜುಗಳಲ್ಲಿ ಧ್ಯಾನದ ಮಾಡುವ ಆದೇಶ ಅಧಿಕೃತವಾಗಲಿದೆ. ಇದನ್ನೂ ಓದಿ: ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ

    Live Tv
    [brid partner=56869869 player=32851 video=960834 autoplay=true]

  • ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ

    ರಾಮನಗರದಲ್ಲಿ ಕಂಡು ಕೇಳರಿಯದ ಮಳೆ – ಶಾಲಾ, ಕಾಲೇಜುಗಳಿಗೆ ರಜೆ

    ರಾಮನಗರ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ರಾಮನಗರ ಹಾಗೂ ಚನ್ನಪಟ್ಟಣ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಒಂದೇ ದಿನ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ರಜೆ ಘೋಷಿಸಿದ್ದಾರೆ. ಇಂದು ನಡೆಯ ಬೇಕಿದ್ದ ತರಗತಿಯನ್ನ ಶನಿವಾರ ಪೂರ್ಣ ದಿನ ನಡೆಸುವುದಾಗಿ ತಿಳಿಸಿದ್ದಾರೆ.

    ರಾಮನಗರ ಜಿಲ್ಲೆಯಾದ್ಯಂತ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಾಮನಗರ ರೈಲ್ವೆ ನಿಲ್ದಾಣ ಸಂಪೂರ್ಣ ಜಲಾವೃತವಾಗಿದ್ದು, ರೈಲ್ವೆ ಪ್ಲಾಟ್ ಫಾಂ ತುಂಬಾ ಮಳೆ ನೀರು ತುಂಬಿ ಹರಿಯುತ್ತಿದೆ. ರೈಲು ಬರಲು ಹಳಿ ಕಾಣದಂತೆ ನೀರು ತುಂಬಿರುವ ಹಿನ್ನೆಲೆ ಪ್ರತಿನಿತ್ಯ ಬೆಂಗಳೂರು ಮೈಸೂರಿಗೆ ಓಡಾಡುವ ನೂರಾರು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಅಪ್ಪು ಅಗಲಿ ಹತ್ತು ತಿಂಗಳು: ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಿದ ಕುಟುಂಬ

    ಭಾರೀ ಮಳೆಯಿಂದಾಗಿ ರಾಮನಗರದಲ್ಲಿರುವ ಆರ್ಕೇಶ್ವರ ಕಾಲೋನಿ ಸಂಪೂರ್ಣ ಜಲಾವೃತವಾಗಿದ್ದು, ಕಾಲೋನಿಯಲ್ಲಿರುವ ಮುಕ್ಕಾಲು ಭಾಗ ಮಳೆಯಿಂದ ಮುಳುಗಡೆಯಾಗಿದೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು, ಬೈಕ್, ಕಾರು ಸಂಪೂರ್ಣ ಜಲಾವೃತವಾಗಿದೆ. ಇದರಿಂದಾಗಿ ಅಲ್ಲಿನ ಜನರಲ್ಲಿ ಆತಂಕ ಮೂಡಿದೆ. ವರುಣನ ಆರ್ಭಟಕ್ಕೆ ಕನಕಪುರ ರಸ್ತೆಯಲ್ಲಿನ ಗೌಡಯನದೊಡ್ಡಿ ಬಳಿ ಇರುವ ಅರ್ಕಾವತಿ ನದಿಯಲ್ಲಿ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ಹಸುವೊಂದು ಕೊಚ್ಚಿ ಹೋಗಿದೆ.

    ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ರಾಮಕೃಷ್ಣ ಆಸ್ಪತ್ರೆಯ ನೆಲಮಹಡಿ ಸಂಪೂರ್ಣ ಜಲಾವೃತವಾಗಿದ್ದು, ಹೊರರೋಗಿಗಳ ವಿಭಾಗ ಸಂಪೂರ್ಣ ಮುಳುಗಡೆಯಾಗಿದೆ. ಹೀಗಾಗಿ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ ವೈದ್ಯಕೀಯ ಉಪಕರಣಗಳು ಸಂಪೂರ್ಣ ಹಾನಿಯಾಗಿದ್ದು, ಸದ್ಯ ಆಸ್ಪತ್ರೆಯ ಸಿಬ್ಬಂದಿ ವೈದ್ಯಕೀಯ ಸಲಕರಣೆಗಳನ್ನ ನೀರಿನಿಂದ ಹೊರತೆಗೆಯುತ್ತಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧ: ಅರ್ಜಿದಾರರ ವಿರುದ್ಧ ಸುಪ್ರೀಂಕೋರ್ಟ್ ಗರಂ – ರಾಜ್ಯ ಸರ್ಕಾರ, ಅರ್ಜಿದಾರರಿಗೆ ನೋಟಿಸ್

    ಮತ್ತೊಂದೆಡೆ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ ನಡಸುತ್ತಿದ್ದು, ಕೆಲ ವಾಹನಗಳು ನೀರಿನಲ್ಲಿ ಮುಳುಗಡೆಯಾಗಿದೆ. ಅಲ್ಲದೇ ರಾಮನಗರ ಸಮೀಪದ ಸಂಗಬಸವನ ದೊಡ್ಡಿ ಬಳಿ ವಾಹನ ಮುಳುಗಡೆಯಾಗಿರುವ ಹಿನ್ನೆಲೆ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಂ ಸಮಸ್ಯೆ ಎದುರಾಗಿದೆ.

    ಧಾರಾಕಾರ ಮಳೆಗೆ ರಾಷ್ಟ್ರೀಯ ದಶಪಥ ಹೆದ್ದಾರಿಯಲ್ಲಿ ನೀರು ತುಂಬಿದ್ದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಸಂಕಷ್ಟಕ್ಕೆ ಸಿಲುಕಿದ ಪ್ರಯಾಣಿಕರ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗುತ್ತಿಲ್ಲ, ಸಹಾಯವಾಣಿಯನ್ನೂ ತೆರೆದಿಲ್ಲ ಎಂದು ಕಿಡಿಕಾರಿದ್ದಾರೆ. ಸದ್ಯ ಜೆಸಿಬಿ ಮೂಲಕ ರಸ್ತೆ ಸರಿಪಡಿಸಿ ಸಂಚಾರಕ್ಕೆ ಪೊಲೀಸರು ಅವಕಾಶ ಮಾಡಿದ್ದಾರೆ.

    ರಾಮನಗರ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಜನರು ತತ್ತರಿಸಿ ಹೋಗಿದ್ದಾರೆ. ಚನ್ನಪ್ಪಟ್ಟಣದ ರೇಷ್ಮೆ ಮಾರುಕಟ್ಟೆಯ ಮುಂಭಾಗದ ಬೆಂ-ಮೈ ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಚನ್ನಪಟ್ಟಣದ ತಟ್ಟಿಗೆರೆ ಬಡಾವಣೆಗೆ ನೀರು ನುಗ್ಗಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡದ ಕಾರಣ ಇಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ಶಾಲಾ-ಕಾಲೇಜು ಓಪನ್

    ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ಶಾಲಾ-ಕಾಲೇಜು ಓಪನ್

    ಶಿವಮೊಗ್ಗ: ಉದ್ವಿಗ್ನಗೊಂಡಿರುವ ಶಿವಮೊಗ್ಗದಲ್ಲಿ ಇಂದು ಸಹ ನಿಷೇಧಾಜ್ಞೆ ಮುಂದುವರಿದಿದೆ. ಇಂದಿನಿಂದ ಶಾಲಾ-ಕಾಲೇಜುಗಳು ಮತ್ತೆ ಆರಂಭಗೊಂಡಿವೆ.

    ಘಟನೆ ನಡೆದಾಗಿನಿಂದ ಶಿವಮೊಗ್ಗದಲ್ಲೇ ಇರುವ ಎಡಿಜಿಪಿ ಅಲೋಕ್ ಕುಮಾರ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. 40 ವರ್ಷದೊಳಗಿನ ಜನರ ಮೇಲೆ ಪೊಲೀಸ್ ಕಣ್ಗಾವಲು ಇಡಲಾಗಿದೆ. ನಗರದಲ್ಲಿ 10 ಕೆಎಸ್‍ಆರ್‍ಪಿ ತುಕಡಿ, 10 ಡಿಎಆರ್, 1 ಆರ್‍ಎಎಫ್, 3 ಅಡಿಷನಲ್ ಎಸ್‍ಪಿ, 10 ಡಿವೈಎಸ್ಪಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ.

    ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದೆ. ಈ ಮಧ್ಯೆ ಭದ್ರಾವತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಇದನ್ನೂ ಓದಿ: ದಲಿತ ಬಾಲಕನ ಸಾವಿನಿಂದ ಹೆಚ್ಚಿದ ಕಾವು – ಕಾಂಗ್ರೆಸ್‌ನ 12 ಕೌನ್ಸಿಲರ್‌ಗಳು ದಿಢೀರ್ ರಾಜೀನಾಮೆ

    Live Tv
    [brid partner=56869869 player=32851 video=960834 autoplay=true]

  • ಮುಂದುವರಿದ ಮಳೆ- ಕೊಡಗಿನಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ

    ಮುಂದುವರಿದ ಮಳೆ- ಕೊಡಗಿನಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಆಬ್ಬರ ಮುಂದುವರಿದಿದ್ದು ಜಿಲ್ಲೆಯ ಹಲವೆಡೆ ಗುಡ್ಡ ಕುಸಿದು ಅವಾಂತರ ಸೃಷ್ಟಿಯಾಗಿದೆ. ಇಂದು ಮುಂಜಾನೆ ಮದೆನಾಡು ಸಮೀಪದ ಕರ್ತೋಜಿ ಬಳಿ ಗುಡ್ಡಕುಸಿತಾಗಿದ್ದು ಕೆಲ ಕಾಲ ರಸ್ತೆ ಸಂಪರ್ಕ ಕಡಿತಗೊಂಡಿತ್ತು.

    ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಕೆಳಭಾದ ರಿಟೈನಿಂಗ್ ವಾಲ್ ಮಳೆಯ ಹೊಡೆತಕ್ಕೆ ಸ್ವಲ್ಪ ಪ್ರಮಾಣದಲ್ಲಿ ಉಬ್ಬಿದ ರಿಟೈನ್ ವಾಲ್, ಮದೆನಾಡು ಸಮೀಪದ ಕರ್ತೋಜಿ ಬಳಿಯ ಉಬ್ಬಿದ ರಸ್ತೆ ಹಾಗೂ ಗುಡ್ಡ ಕುಸಿದ ಪ್ರದೇಶಗಳಿಗೆ ಹಾಗೂ ಚಾಮುಂಡೇಶ್ವರಿ ನಗರದ ಅಪಾಯಕಾರಿ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಚಾಮುಂಡೇಶ್ವರಿ ನಗರಕ್ಕೆ ಭೇಟಿ ನೀಡಿದ ಶಾಸಕರು ಅಪಾಕಾರಿ ಮನೆಗಳನ್ನ ಸ್ಥಾಳಂತರಿಸುವಂತೆ ಹಾಗೂ ಯಾವುದೇ ಹೊಸ ಮನೆಗಳ ನಿರ್ಮಾಣಕ್ಕೆ ಅನುಮತಿ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ರು. ಅಪಾಯಾಕಾರಿ ಮನೆಗಳಲ್ಲಿ ವಾಸವಿರುವ ಮನೆ ಮಂದಿ ಎಲ್ಲ ಬೇರೆಗೆ ಸ್ಥಳಾಂತರಿಸುವಂತೆ ಶಾಸಕರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕಾಳಿ ಕೈಲಿ ಸಿಗರೇಟು ವಿವಾದ : ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್ ತಡೆ

    ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ನಾಳೆ ಮುಂಜಾನೆ 8.30 ರವರಗೆ ಆರೆಂಜ್ ಅಲರ್ಟ್ ಮುಂದುವರಿದಿದೆ. ನಾಳೆಯೂ ಕೂಡ ಅಂಗನಾವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ರಜೆ ಘೋಷಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಪ್ರಕರಣ ಹೆಚ್ಚಳ- ಅಪಾರ್ಟ್‍ಮೆಂಟ್, ಶಾಲಾ-ಕಾಲೇಜುಗಳಿಗೆ ಮಾರ್ಗಸೂಚಿ ಬಿಡುಗಡೆ

    ಕೊರೊನಾ ಪ್ರಕರಣ ಹೆಚ್ಚಳ- ಅಪಾರ್ಟ್‍ಮೆಂಟ್, ಶಾಲಾ-ಕಾಲೇಜುಗಳಿಗೆ ಮಾರ್ಗಸೂಚಿ ಬಿಡುಗಡೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಕೇಸ್‍ಗಳ ಹೆಚ್ಚಳ ಬೆನ್ನಲ್ಲೇ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ರಿಲೀಸ್ ಮಾಡಿದೆ. ಅಪಾರ್ಟ್‍ಮೆಂಟ್, ಶಾಲಾ-ಕಾಲೇಜುಗಳಲ್ಲಿ ಕೊರೊನಾ ಕೇಸ್‍ಗಳು ದಾಖಲಾದ್ರೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಿದೆ.

    ಅಪಾರ್ಟ್‍ಮೆಂಟ್‍ಗಳಿಗೆ ಮಾರ್ಗಸೂಚಿ: 3- ರಿಂದ 5 ಪ್ರಕರಣ ದಾಖಲಾದಲ್ಲಿ ಸಣ್ಣ ಕ್ಲಸ್ಟರ್ ಎಂದು ಪರಿಗಣಿಸಬೇಕು. 15ಕ್ಕಿಂತ ಹೆಚ್ಚು ಪ್ರಕರಣ ದಾಖಲಾದಲ್ಲಿ ಎಲ್ಲರಿಗೂ ರ್‍ಯಾಪಿಡ್ ಟೆಸ್ಟ್ ಕಡ್ಡಾಯವಾಗಿ ಮಾಡಬೇಕು. ಸೋಂಕಿನ ಲಕ್ಷಣ ಇಲ್ಲದಿದ್ದಕ್ಕೆ ಕೊರೊನಾ ಟೆಸ್ಟ್ ಅಗತ್ಯವಿಲ್ಲ. ಮನೆ ಕೆಲಸದವರು 60 ವರ್ಷಕ್ಕಿಂತ ಕೆಳಗಿನವರಾಗಿರಬೇಕು. ಮನೆಕೆಲಸಗಾರರು, ಸಿಬ್ಬಂದಿಗೆ N 95 ಮಾಸ್ಕ್ ಕಡ್ಡಾಯ. ಕೊರೊನಾ ಪತ್ತೆಯಾದಲ್ಲಿ ಪಾರ್ಕ್, ಸ್ವಿಮ್ಮಿಂಗ್‍ಪೂಲ್, ಕ್ಲಬ್‍ಹೌಸ್‍ಗಳು ಕ್ಲೋಸ್ ಮಾಡಬೇಕು. ಸೋಂಕು ಕಂಡು ಬಂದ ಫ್ಲೋರ್, ಅಪಾರ್ಟ್‍ಮೆಂಟ್ ಸೀಲ್‍ಡೌನ್ ಮಾಡಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸೋಂಕು ಬಂದ್ರೆ ಕಡ್ಡಾಯ ರಜೆ ಹಾಕಬೇಕು. ಈ ಎಲ್ಲಾ ಮಾರ್ಗಸೂಚಿಗಳು ಖಾಸಗಿ ಕಚೇರಿಗಳಿಗೂ ಅನ್ವಯವಾಗಲಿದೆ. ಇದನ್ನೂ ಓದಿ: ಅಗ್ಗದ ಹೋಟೆಲ್ ರೂಂ, ಆಸ್ಪತ್ರೆ ಸೇವೆ ಇನ್ನಷ್ಟು ದುಬಾರಿ

    12 ನೇ ತರಗತಿಯವರೆಗೆ ಈ ರೂಲ್ಸ್ ಫಾಲೋ ಮಾಡಬೇಕು: ಕೋವಿಡ್ 19 ಲಕ್ಷಣ ಹೊಂದಿರುವವರು ಶಾಲೆಗೆ ಹಾಜರಾಗದಂತೆ ಸೂಚಿಸುವುದು. ಕೋವಿಡ್ ಲಕ್ಷಣ ಇದ್ದರೆ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ಮಾಡಿಸಬೇಕು ಮತ್ತು ಪಾಸಿಟಿವ್ ಬಂದ್ರೆ ಐಸೋಲೇಟ್ ಮಾಡಬೇಕು. ರ್‍ಯಾಪಿಡ್ ಆಂಟಿಜನ್ ನಲ್ಲಿ ನೆಗೆಟಿವ್ ಇದ್ದರೆ ಆರ್‌ ಟಿಪಿಸಿಆರ್ ಟೆಸ್ಟ್ ಮಾಡಿಸಿ ರಿಸಲ್ಟ್ ಬರುವವರೆಗೂ ಐಸೋಲೇಟ್ ನಲ್ಲಿ ಇಡಬೇಕು. ಕ್ಲಸ್ಟರ್ ಮತ್ತು ಸಾಂಕ್ರಾಮಿಕ ರೋಗಗಳು ವರದಿಯಾದಲ್ಲಿ ರೋಗ ಲಕ್ಷಣ ಇರುವವರಿಗೆ ರ್‍ಯಾಪಿಡ್ ಆಂಟಿಜನ್ ಟೆಸ್ಟ್ ಮಾಡಿಸಬೇಕು. ಪಾಸಿಟಿವ್ ಆದರೆ ವ್ಯಕ್ತಿಯ ಲಕ್ಷಣಗಳನ್ನು ಆಧರಿಸಿ ಐಸೋಲೇಟ್ ಮಾಡಬೇಕು. ಅಲ್ಲದೆ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್ ಸೂಚಿಸಬೇಕು.

    corona

    ರ್‍ಯಾಪಿಡ್ ಆಂಟಿಜನ್ ಟೆಸ್ಟ್ ಪಾಸಿಟಿವ್ ಪ್ರಕರಣಗಳಿಂದ ಹೆಚ್ಚುವರಿಯಾಗಿ ಆರ್ಟಿಪಿಸಿಆರ್ ಕಲೆಕ್ಟ್ ಮಾಡಬೇಕು. ಆರ್ ಟಿಪಿಸಿಆರ್ ಪಾಸಿಟಿವ್ ಫಲಿತಾಂಶದಲ್ಲಿ ಸಿಟಿ ವ್ಯಾಲ್ಯೂ 25 ಇದ್ದರೆ ಜೆನೆಮಿಕ್ ಸೀಕ್ವೆನ್ಸ್‌ಗೆ ಕಳಿಸಬೇಕು. ಪಾಸಿಟಿವ್ ಪ್ರಕರಣ ಪತ್ತೆಯಾದ ಶಾಲೆಗಳ ಕೊಠಡಿಗಳನ್ನ 1% ಸೋಡಿಯಂ ಹೈಪೋಕ್ಲೋರೈಡ್ ದ್ರಾವಣದಿಂದ ಸ್ವಚ್ಫಗೊಳಿಸಬೇಕು ಮತ್ತು ಮರುದಿನದಿಂದ ಕೊಠಡಿಗಳನ್ನ ಪುನರ್ ಬಳಕೆ ಮಾಡಬಹುದು. ಕೊವಿಡ್ ರೂಲ್ಸ್ ಮಾಸ್ಕ್, ಸಾಮಾಜಿಕ ಅಂತರ, ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು ಮತ್ತು ಜ್ವರ, ಶೀತ, ನೆಗಡಿ ಇದ್ದರೆ ವೈದ್ಯಕೀಯ ತಪಾಸಣೆ ಮಾಡಬೇಕು. ಎಲ್ಲಾ ಕೊವಿಡ್ ರೂಲ್ಸ್ ಪಾಲನೆ ಮಾಡಿಕೊಂಡು ಮುನ್ನೆಚ್ಚರಿಕೆ ವಹಿಸಬೇಕು ಶಾಲೆ ಮುಚ್ಚುವಂತಿಲ್ಲ.

    Live Tv