Tag: ಶಾಲಾ ಫೀ

  • ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

    ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

    ಹೈದರಾಬಾದ್: ಶಾಲೆಯ ಫೀಸ್ ಕಟ್ಟಲು ಪೋಷಕರು ಲೇಟ್ ಮಾಡಿದ ಕಾರಣ ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗಡೆ ಕೂರಿಸಿರುವ ಅಮಾನವೀಯ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಸಿರಿಲಿಂಗಮ್‍ಪಲ್ಲಿಯ ಎಂಎನ್‍ಆರ್ ಎಂಬ ಖಾಸಗಿ ಶಾಲೆಯಲ್ಲಿ ನಡೆದಿದೆ.

    ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರು ಮತ್ತು ಓರ್ವ ವಿದ್ಯಾರ್ಥಿಯನ್ನು ಶಾಲೆಯ ಕಾರಿಡಾರ್ ನಲ್ಲಿ ಯೇ ಕೂರಿಸಿದ್ದಾರೆ. ಮಕ್ಕಳು 7 ಮತ್ತು 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಬರೋಬ್ಬರಿ ಮೂರು ಗಂಟೆಗಳ ಕಾಲ ಹೊರಗಡೆ ಕುಳಿತಿದ್ದಾರೆ. ಈ ಮಕ್ಕಳು ಶಾಲೆಯ ಫೀಸ್ ತಡವಾಗಿ ಕಟ್ಟಿದ್ದು, ಇದಕ್ಕೆ ಫೈನ್ ಹಾಕಲಾಗಿತ್ತು. ಆದ್ರೆ ಫೈನ್ ಹಣ ಕಟ್ಟಿಲ್ಲವೆಂದು ಈ ರೀತಿ ಶೀಕ್ಷೆ ನೀಡಿದ್ದಾರೆ ಎಂದು ವರದಿಯಾಗಿದೆ.

    ಮಕ್ಕಳನ್ನ ಈ ರೀತಿ ತರಗತಿಯಿಂದ ಹೊರಗೆ ಕೂರಿಸಿದ್ದು ಮಾನಸಿಕ ಅವಮಾನ ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆ ಎಂದು ಮಕ್ಕಳ ಹಕ್ಕುಗಳ ಸಂಘದವರಾದ ಅಚ್ಯುತ್ ರಾವ್ ತಿಳಿಸಿದ್ದಾರೆ.

    ಈ ಕುರಿತು ರಂಗಾರೆಡ್ಡಿ ಜಿಲ್ಲೆಯ ಶಿಕ್ಷಣಾಧಿಕಾರಿಗಳಿಗೆ ವಿಷಯ ತಿಳಿಸಲಾಗಿದೆ. ಎಂಎನ್‍ಆರ್ ಶಾಲೆ ಮಕ್ಕಳ ಹಕ್ಕುಗಳನ್ನ ಉಲ್ಲಂಘನೆ ಮಾಡಿದೆ. ಈ ಕುರಿತು ಶಿಕ್ಷಣ ಇಲಾಖೆ ಶಾಲಾ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಒತ್ತಾಯಿಸಿದ್ದೇವೆ ಎಂದು ಅಚ್ಯುತ್ ರಾವ್ ಹೇಳಿದ್ದಾರೆ.

  • ಮನೆ ಯಜಮಾನನ ಸಾವು: ಅರ್ಧಕ್ಕೆ ನಿಂತ ಮಕ್ಕಳ ಶಿಕ್ಷಣ

    ಮನೆ ಯಜಮಾನನ ಸಾವು: ಅರ್ಧಕ್ಕೆ ನಿಂತ ಮಕ್ಕಳ ಶಿಕ್ಷಣ

    ರಾಯಚೂರು: ಎಲ್ಲವೂ ಸರಿಯಾಗಿದೆ ಅಂದುಕೊಳ್ಳುವಾಗಲೇ ವಿಧಿ ಜೀವನದ ಚಕ್ರವನ್ನೇ ಅದಲು ಬದಲು ಮಾಡಿಬಿಡುತ್ತದೆ. ಮನೆ ಯಜಮಾನನ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿರುವ ಕುಟುಂಬದ ಬೆನ್ನೆಲುಬು ಮುರಿದು ಬಿದ್ದಾಗ ಜೀವನದ ಶೈಲಿಯೇ ಬದಲಾಗುತ್ತದೆ. ರಾಯಚೂರಿನ ಕುಟುಂಬವೊಂದರ ಯಜಮಾನ ಹೃದಯಘಾತದಿಂದ ಸಾವನ್ನಪ್ಪಿದ್ದು ಮಕ್ಕಳ ಶಾಲೆಯ ಶುಲ್ಕ ತುಂಬಲಾಗದೇ ಶಿಕ್ಷಣ ಅರ್ಧಕ್ಕೆ ನಿಲ್ಲುವ ಸ್ಥಿತಿಗೆ ಬಂದಿದೆ.

    ರಾಯಚೂರು ತಾಲೂಕಿನ ಪಲವಲದೊಡ್ಡಿ ಮೂಲದ ಶಿವರಾಜ್ ಎಲ್‍ಐಸಿ ಏಜೆಂಟ್ ಆಗಿದ್ದರು. ರಾಯಚೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದರೂ ಜೀವನಕ್ಕೆ ಏನೂ ಕಮ್ಮಿಯಿಲ್ಲದಂತೆ ಬದುಕುತ್ತಿದ್ದರು. ಪತ್ನಿ ಸ್ವಪ್ನಾ, ಮಕ್ಕಳಾದ ಸುದೀಪ್, ಶ್ರೀಲಕ್ಷ್ಮಿಯನ್ನ ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಎಂಟು ತಿಂಗಳ ಹಿಂದೆ ಹೃದಯಾಘಾತದಿಂದಾಗಿ ಶಿವರಾಜ್ ಮೃತಪಟ್ಟಿದ್ದರು.

    ಸಂಪೂರ್ಣವಾಗಿ ಶಿವರಾಜ್ ದುಡಿಮೆಯನ್ನೇ ಅವಲಂಬಿಸಿದ್ದ ಕುಟುಂಬ ಈಗ ಯಜಮಾನನಿಲ್ಲದೆ ದಿಕ್ಕು ಕಾಣದಾಗಿದೆ. ಜೊತೆಗೆ ನಾನಾ ಕಾರಣಗಳಿಗೆ ಶಿವರಾಜ್ ಮಾಡಿದ್ದ ಲಕ್ಷಾಂತರ ರೂಪಾಯಿ ಸಾಲವನ್ನ ತೀರಿಸಲು ಸಾಧ್ಯವೇ ಇಲ್ಲದ ಸ್ಥಿತಿಯಲ್ಲಿ ಕುಟುಂಬವಿದೆ. ಹೆಚ್ಚು ದಿನ ತವರು ಮನೆಯಲ್ಲೂ ಇರಲೂ ಆಗದೆ, ಸಂಬಂಧಿಕರ ಮನೆಯಲ್ಲಿರಲು ಆಗದೇ ಸ್ವಪ್ನಾ ಮಕ್ಕಳನ್ನ ಕಟ್ಟಿಕೊಂಡು ಪರದಾಡುತ್ತಿದ್ದಾರೆ.

    ಎಸ್‍ಎಸ್‍ಎಲ್‍ಸಿ ವರೆಗೆ ಮಾತ್ರ ಓದಿರುವ ಸ್ವಪ್ನಾ ಜೀವನೋಪಾಯಕ್ಕೆ ಟೈಲರಿಂಗ್ ಕಲಿಯುತ್ತಿದ್ದಾರೆ. ಮನೆ ಬಾಡಿಗೆ ಕಟ್ಟಲು ಆಗದೇ ಸದ್ಯ ರಾಯಚೂರಿನ ಡ್ಯಾಡಿ ಕಾಲೋನಿಯಲ್ಲಿ ಸಂಬಂಧಿಕರೊಬ್ಬರ ಮನೆಯಲ್ಲಿದ್ದಾರೆ. ಆದ್ರೆ ನಗರದ ಕರ್ನಾಟಕ ವೆಲ್‍ಫೇರ್ ಟ್ರಸ್ಟ್ ಶಾಲೆಯಲ್ಲಿ ಸಿಬಿಎಸ್‍ಸಿ ಪಠ್ಯಕ್ರಮದಲ್ಲಿ ಓದುತ್ತಿರುವ ಮಕ್ಕಳ ಓದು ಹಣವಿಲ್ಲದೆ ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಆರನೇ ತರಗತಿ ಪಾಸ್ ಆಗಿರುವ ಶ್ರೀಲಕ್ಷ್ಮೀ, 8 ನೇ ತರಗತಿ ಪಾಸಾಗಿರುವ ಸುದೀಪ್ ಇಬ್ಬರೂ ಆಟ-ಪಾಠಗಳೆರಡರಲ್ಲೂ ಮುಂದಿದ್ದಾರೆ. ಆದ್ರೆ ಪ್ರತಿಯೊಬ್ಬರಿಗೂ ವರ್ಷಕ್ಕೆ 20 ಸಾವಿರ ರೂಪಾಯಿ ಶಾಲಾ ಶುಲ್ಕವಿದೆ. ಹೀಗಾಗಿ ಇಬ್ಬರಿಗೂ ವರ್ಷಕ್ಕೆ 40 ಸಾವಿರ ರೂಪಾಯಿ ಸಹಾಯ ಬೇಕಿದೆ.

    ಓದಿನಲ್ಲಿ ಜಾಣರಾಗಿರುವ ಸುದೀಪ್ ಹಾಗೂ ಶ್ರೀಲಕ್ಷ್ಮೀ ಕಷ್ಟಕ್ಕೆ ಸ್ಪಂದಿಸಲು ರಾಯಚೂರಿನ ಬಸವ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವೈದ್ಯ ಡಾ.ಬಸನಗೌಡ ಪಿ. ಪಾಟೀಲ್ ಮುಂದೆ ಬಂದಿದ್ದಾರೆ. ಒಟ್ನಲ್ಲಿ ವೈದ್ಯೆಯಾಗಬೇಕು ಅನ್ನೋ ಶ್ರೀಲಕ್ಷ್ಮೀ ಆಸೆ, ತಾಯಿ ತಂಗಿಯನ್ನ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋ ಸುದೀಪ್ ಆಶಯಕ್ಕೆ ಸಹಾಯದ ಅಗತ್ಯತೆಯಿದೆ.

    https://www.youtube.com/watch?v=VEfq2r8Di04